ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Hospet News: 'ನಾನು ಕರ್ನಾಟಕ ಆರಿಸಿಕೊಂಡಿಲ್ಲ, ಕನ್ನಡಾಂಬೆಯೇ ನನ್ನನ್ನು ಆರಿಸಿಕೊಂಡಿದ್ದಾರೆ': ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದನೆ

ನಾನು ಕರ್ನಾಟಕ ಆರಿಸಿಕೊಂಡಿಲ್ಲ, ಕನ್ನಡಾಂಬೆಯೇ ನನ್ನನ್ನು ಆರಿಸಿಕೊಂಡಿದ್ದಾರೆ

ನಾನು ಭಗವಾನ್ ಸತ್ಯ ಸಾಯಿ ಬಾಬಾರವರ ಶಿಷ್ಯ. ಅವರ ಶಿಕ್ಷಣ ಸಂಸ್ಥೆಗಳಲ್ಲಿ ಓದಿ ಸೇವಾ ಚಟುವಟಿಕೆಗಳಿಗಾಗಿ ಅವರ ಮಾರ್ಗದರ್ಶನದ ನಿರೀಕ್ಷೆಯಲ್ಲಿದ್ದೆ. ಅವರ ಮಹಾಸಮಾಧಿಯ ನಂತರ ನನಗೆ ಆಧ್ಯಾತ್ಮಿಕ ಅನುಭವವಾಯಿತು. ಅದರಂತೆ ಅವರ ಸೂಚನೆಯಂತೆ ಕರ್ನಾಟಕದಲ್ಲಿ ಸೇವಾ ಚಟುವಟಿಕೆ ಆರಂಭಿಸಿದೆವು

ಅನ್ವೇಷಣಾ 2026ರಲ್ಲಿ 61 ಯುವ ಸಂಶೋಧಕರು 20 ಸ್ವತಂತ್ರ ಸಂಶೋಧನಾ ಯೋಜನೆಗಳ ಪ್ರದರ್ಶನ

ಅನ್ವೇಷಣಾ 2026ರಲ್ಲಿ ಸಂಶೋಧನಾ ಯೋಜನೆಗಳ ಪ್ರದರ್ಶನ

ಪ್ರಯೋಗದ ವಿದ್ಯಾರ್ಥಿ ಸಂಶೋಧನಾ ಕಾರ್ಯಕ್ರಮದ ಎರಡು ದಿನಗಳ ಸಮಾರೋಪವು ಕುತೂಹಲ, ವೈಜ್ಞಾನಿಕ ಅನ್ವೇಷಣೆ ಮತ್ತು ಮುಂದಿನ ಪೀಳಿಗೆಯ ಸಂಶೋಧಕರನ್ನು ಸಂಭ್ರಮಿಸಿತು. ಅನ್ವೇಷಣಾ 2026ರಲ್ಲಿ ಪ್ರಸ್ತುತಪಡಿಸಲಾದ 20 ಸಂಶೋಧನಾ ಯೋಜನೆಗಳಲ್ಲಿ ನಾಲ್ಕು ಯೋಜನೆಗಳು ಅತ್ಯುತ್ತಮ ಪ್ರದರ್ಶನ ನೀಡಿದ ಯೋಜನೆಗಳಾಗಿ ಹೊರಹೊಮ್ಮಿದವು.

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಇಂಡಿಯಾ ಸ್ಟಾರ್ಟ್‌ ಅಪ್ ಸಪ್ತಾಹ 2026

ಅದ್ದೂರಿಯಾಗಿ ನಡೆದ ಇಂಡಿಯಾ ಸ್ಟಾರ್ಟ್‌ ಅಪ್ ಸಪ್ತಾಹ 2026

ಕೌಶಲ್ಯಾಭಿವೃದ್ಧಿ, ನೆಟ್‌ ವರ್ಕಿಂಗ್ ಮತ್ತು ಅನ್ವೇಷಣೆ ಎಂಬ ಆಶಯದೊಂದಿಗೆ ನಡೆದ ಈ ಕಾರ್ಯ ಕ್ರಮವು, ಕೇವಲ ಸಾಂಪ್ರದಾಯಿಕ ಉಪನ್ಯಾಸಗಳಿಗೆ ಸೀಮಿತವಾಗಿರದೆ ಸ್ಟಾರ್ಟ್‌ ಅಪ್ ಸಂಸ್ಥಾಪಕರು ಎದುರಿಸುತ್ತಿರುವ ಬಂಡವಾಳ ಹೂಡಿಕೆ, ಗ್ರಾಹಕರ ಸಂಪಾದನೆ, ನಾಯಕತ್ವ ನಿರ್ವಹಣೆ ಮತ್ತು ಜಾಗತಿಕ ವಿಸ್ತರಣೆಯಂತಹ ನೈಜ ಸವಾಲುಗಳ ಪರಿಹಾರದ ಕುರಿತು ಪ್ರಮುಖವಾಗಿ ಗಮನಹರಿಸಿತು.

ಬಂಧಿತ ಸರ್ಕಾರಿ ಅಧಿಕಾರಿ ಜೈಲಿನಲ್ಲಿರಬೇಕಾದ ಬದಲು ಗೆಳತಿಯೊಂದಿಗೆ ಆಸ್ಪತ್ರೆಯಲ್ಲಿ ಪತ್ತೆ: ನ್ಯಾಯಾಧೀಶರು ಗರಂ

ಬಂಧಿತ ಅಧಿಕಾರಿ ಗೆಳತಿಯೊಂದಿಗೆ ಆಸ್ಪತ್ರೆಯಲ್ಲಿ ಕಳ್ಳಾಟ

Government officer in hospital: ಕರ್ನಾಟಕ ಲೋಕಾಯುಕ್ತರಿಂದ ಬಂಧನಕ್ಕೊಳಗಾಗಿದ್ದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಮಂಡ್ಯ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ವಿಐಪಿ ಸೌಲಭ್ಯ ನೀಡಲಾಗುತ್ತಿರುವುದು ಪತ್ತೆಯಾಗಿದೆ. ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ. ಚಂದ್ರಶೇಖರ್ ಹಠಾತ್ ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ನೀವೂ ಬೆಂಗಳೂರಿನಲ್ಲಿ ಸಂಚಾರಿ ಪೊಲೀಸ್ ಆಗಬೇಕೆ? ಪರೀಕ್ಷೆ ಇಲ್ಲ, ಸಂದರ್ಶನ ಇಲ್ಲ, ಜಸ್ಟ್‌ ಹೆಸರು ನೋಂದಾಯಿಸಿದರೆ ಸಾಕು; ಏನಿದು ಹೊಸ ಅಭಿಯಾನ?

ಸಂಚಾರಿ ಪೊಲೀಸ್ ಆಗಬೇಕೆ? ಇನ್ಯಾಕೆ ತಡ ಈಗಲೇ ನೋಂದಾಯಿಸಿ!

Bengaluru Police Launch Cop for the Day: ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರು ತಮ್ಮ ಕಾಪ್ ಫಾರ್ ದಿ ಡೇ (ಒಂದು ದಿನದ ಪೊಲೀಸ್) ಉಪಕ್ರಮವನ್ನು ಮರಳಿ ತಂದಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಎಕ್ಸ್‌ನಲ್ಲಿ ಈ ಉಪಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಗರದ ಸಂಚಾರವನ್ನು ನಿರ್ವಹಿಸುವಲ್ಲಿ ಎದುರಾಗುವ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಇದು ನೆರವಾಗುತ್ತದೆ.

ರಾಜ್ಯ ಸರ್ಕಾರದ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಬರೆದ ಪತ್ರದಲ್ಲಿ ಏನಿದೆ?

ಪಾರ್ಕಿಂಗ್ ಶುಲ್ಕ ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ

CM DKS Proposes Parking Fee: ತಮ್ಮದೇ ಸರ್ಕಾರದ ಪ್ರಸ್ತಾವಿತ ಪಾರ್ಕಿಂಗ್ ನೀತಿಯ ಬಗ್ಗೆ, ವಿಶೇಷವಾಗಿ ವಾರ್ಷಿಕ ರಸ್ತೆಬದಿಯ ಪಾರ್ಕಿಂಗ್ ಶುಲ್ಕವನ್ನು ವಿಧಿಸುವ ಯೋಜನೆಯ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಸ್ತಾವಿತ ವಾರ್ಷಿಕ ಶುಲ್ಕದಿಂದ ಮಧ್ಯಮ ವರ್ಗ ಮತ್ತು ಸಾಮಾನ್ಯ ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಅಕ್ಕಿಯನ್ನು ಎಥೆನಾಲ್‌ ಉತ್ಪಾದಕರಿಗೆ ಶೇಕಡಾ 40ರಷ್ಟು ಕಡಿಮೆ ದರದಲ್ಲಿ ಮಾರಾಟ ಮಾಡುತಿದ್ಯಾ ಕೇಂದ್ರ? ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದೇಕೆ?

ಭಾರತದ ಎಥನಾಲ್‌ ಗಣಿತವೇ ಸರಿಯಾಗಿ ಹೊಂದಿಕೆಯಾಗುತ್ತಿಲ್ಲ: ಪ್ರಿಯಾಂಕ್‌ ಖರ್ಗೆ

Priyank Kharge: ಆಹಾರ ಭದ್ರತೆಗಾಗಿ ಮೀಸಲಿಟ್ಟಿರುವ ಧಾನ್ಯವನ್ನು ಎಥನಾಲ್‌ ಉತ್ಪಾದನೆಗೆ ಬಳಸುವ ನೀತಿಯ ಆರ್ಥಿಕ, ಸಾಮಾಜಿಕ ಮತ್ತು ಸಾರ್ವಜನಿಕ ಹಿತಾಸಕ್ತಿಯ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಪಾರದರ್ಶಕವಾಗಿ ಲೆಕ್ಕ ನೀಡಬೇಕು ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದ್ದಾರೆ.

Yuva Samvada; ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

Tumkur News: ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ವಿವಿ ಕಲಾ ಕಾಲೇಜು, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ್ರೆಸ್ ಕ್ಲಬ್ ವತಿಯಿಂದ ಜಿಲ್ಲಾಧಿಕಾರಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮವನ್ನು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸಿ, ಮಾತನಾಡಿದರು.

ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರ ಕಣ್ಣೋರೆಸಲು ಧಾವಿಸಿದ ಕೇಂದ್ರ ಸರ್ಕಾರ; 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಪೂರೈಕೆ

5 ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿ ಪೂರೈಕೆ: ಪ್ರಲ್ಹಾದ್‌ ಜೋಶಿ

Pralhad Joshi: ಮಾರುಕಟ್ಟೆಯಲ್ಲಿ ಈರುಳ್ಳಿ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ನಿರಂತರವಾಗಿ ಸಮಯೋಚಿತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಈ ಬಾರಿಯ ಗಣೇಶ ಚತುರ್ಥಿಗೆ ಪಿಓಪಿ ಗಣಪತಿ ಮೂರ್ತಿಗಳ ಬದಲು ಪರಿಸರ ಸ್ನೇಹಿ ಮಣ್ಣಿನ ಮೂರ್ತಿ ಪ್ರತಿಷ್ಠಾಪಿಸಿ

ಮಣ್ಣಿನ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗೆ ಜಾಗೃತಿ ಮೂಡಲಿ

Ganesha Chaturthi 2026: ಈ ಬಾರಿಯ ಗಣೇಶ ಚತುರ್ಥಿಯಂದು ಮಣ್ಣಿನ ಗಣಪತಿಗೆ ಆದ್ಯತೆ ನೀಡುವ ಸಂಕಲ್ಪವನ್ನು ಸಾರ್ವಜನಿಕರು ಮಾಡಬೇಕಾಗಿದೆ. ಸರ್ಕಾರವೂ ಪಿಓಪಿ ಗಣಪತಿ ಮೂರ್ತಿಗಳ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಉತ್ತೇಜನ ನೀಡಬೇಕಾಗಿದೆ.

‘'ಮದುವೆ ಎಂದರೆ ಪತ್ನಿಯ ಮೇಲಿನ ಅಧಿಕಾರವಲ್ಲʼ’: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

‘'ಮದುವೆ ಎಂದರೆ ಪತ್ನಿಯ ಮೇಲಿನ ಅಧಿಕಾರವಲ್ಲʼ’: ಕರ್ನಾಟಕ ಹೈಕೋರ್ಟ್

Karnataka High Court: ದಾಂಪತ್ಯ ಜೀವನದಲ್ಲಿ ಮಹಿಳೆಯ ಸ್ವಾತಂತ್ರ್ಯ, ಹಕ್ಕುಗಳು ಹಾಗೂ ಘನತೆಯನ್ನು ಎತ್ತಿಹಿಡಿಯುವ ಅತ್ಯಂತ ಪ್ರಮುಖ ತೀರ್ಪೊಂದನ್ನು ಕರ್ನಾಟಕ ಹೈಕೋರ್ಟ್ ನೀಡಿದೆ. ಮದುವೆಯ ನಂತರವೂ ಪತ್ನಿಯು ತನ್ನ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ವಾತಂತ್ರ‍್ಯವನ್ನು ಹೊಂದಿರುತ್ತಾಳೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಹತ್ತಿರದಿಂದ ಶೂಟ್, ಮುರಿದ ಪಕ್ಕೆಲುಬು...ಹನೂರು ಶೂಟೌಟ್‌ ವೇಳೆ ಹತರಾದ ತಮಿಳುನಾಡು ಬೇಟೆಗಾರರ ಮರಣೋತ್ತರ ಪರಿಕ್ಷೆಯ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೇಟೆಗಾರರ ಹತ್ಯೆ ಪ್ರಕರಣ: ಶವಪರೀಕ್ಷೆ ವರದಿ ಹೇಳುವುದೇನು?

hanuru shootout: ಚಾಮರಾಜನಗರ ಜಿಲ್ಲೆಯಲ್ಲಿ ಆಗಸ್ಟ್ 15ರಂದು ನಡೆದಿರುವ ತಮಿಳುನಾಡಿನ ಬೇಟೆಗಾರರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಶವ ಪರೀಕ್ಷೆ ವರದಿ ಬಹಿರಂಗವಾಗಿದೆ. ಇದರಲ್ಲಿ ಹತ್ತಿರದಿಂದ ಶೂಟ್ ಮಾಡಿದ್ದು, ಪಕ್ಕೆಲುಬು ಮುರಿದಿರುವುದು ದೃಢಪಟ್ಟಿದೆ. ಈ ಕುರಿತು ರಾಜ್ಯ ಸರ್ಕಾರವು ವಿಷಯಗಳನ್ನು ಮುಚ್ಚಿಟ್ಟಿದೆ ಎಂಬುದಾಗಿ ಬಿಜೆಪಿ ಆರೋಪಿಸಿದೆ.

Onam Saree Fashion 2026: ಓಣಂ ಸೀರೆ ಸೆಲೆಕ್ಷನ್‌ಗೆ ಇಲ್ಲಿದೆ ಸಿಂಪಲ್ ಐಡಿಯಾ

ಓಣಂ ಸೀರೆ ಸೆಲೆಕ್ಷನ್‌ಗೆ ಇಲ್ಲಿದೆ ಸಿಂಪಲ್ ಐಡಿಯಾ

Onam Saree Fashion 2026: ಓಣಂ ಹಬ್ಬದಂದು ಸೀರೆ ಉಡುವಿರಾದಲ್ಲಿ ಯಾವ ರೀತಿಯ ಸೀರೆಗಳನ್ನು ಸೆಲೆಕ್ಟ್ ಮಾಡಬೇಕು? ಹೇಗಿರಬೇಕು? ಈ ಕುರಿತಂತೆ ಸೀರೆ ಎಕ್ಸ್‌ಪರ್ಟ್ಸ್ ಒಂದಿಷ್ಟು ಐಡಿಯಾ ನೀಡಿದ್ದಾರೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ವಾಹನ ಸವಾರರ ಗಮನಕ್ಕೆ: ಈದ್ ಮಿಲಾದ್ ಆಚರಣೆ ಪ್ರಯುಕ್ತ ನಾಳೆ ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ; ಪರ್ಯಾಯ ಮಾರ್ಗದ ವಿವರ ಇಲ್ಲಿದೆ

ನಾಳೆ ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

Eid-e-Milad Celebrations: ದೇಶಾದ್ಯಂತ ಬುಧವಾರ (ಅಗಸ್ಟ್‌ 26) ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಆಚರಿಸಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಭಾಗಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಟ್ರಾಫಿಕ್‌ ಪೊಲೀಸರು ಸೂಚಿಸಿದ್ದಾರೆ.

ಕಾವೇರಿ ವಿವಾದ; ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ

ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಕಾವೇರಿ ನೀರು ವಿವಾದದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ನಿತ್ಯ 9,000 ಕ್ಯುಸೆಕ್ ಕಾವೇರಿ ನದಿ ನೀರು ಹರಿಸುವಂತೆ 'ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮಂಗಳವಾರ (ಆ.25ರಂದು) ಆದೇಶಿಸಿದೆ.

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ; ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ CID ನೋಟೀಸ್‌!

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ; ಸಿಐಡಿಯಿಂದ ತನಿಖೆ ಚುರುಕು

KPSC Veterinary Officer recruitment scam: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ ಅಧಿಕಾರಿಗಳು ತನಿಖೆಯನ್ನು ಚುರುಕು ಮಾಡಿದ್ದಾರೆ. ಇದೀಗ ಎಲ್ಲಾ 329 ಅಭ್ಯರ್ಥಿಗಳಿಗೆ ಏಕಾಏಕಿ ನೋಟಿಸ್ ಜಾರಿ ಮಾಡಿ ಶಾಕ್‌ ನೀಡಿದ್ದಾರೆ.

SIR: ಎಸ್‌ಐಆರ್‌ ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 9.44 ಲಕ್ಷ ಮತದಾರರು

ಎಸ್‌ಐಆರ್‌ ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 9.44 ಲಕ್ಷ ಮತದಾರರು

ಜಿಲ್ಲೆಯ ಐದು ಕ್ಷೇತ್ರಗಳ ವ್ಯಾಪ್ತಿಯ 10,69,504 ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸ ಲಾಗಿತ್ತು. ಈ ಪೈಕಿ ಆಗಸ್ಟ್‌ 17ರವರೆಗೆ 9,44,623 ಮತದಾರರ ಮಾಹಿತಿಯನ್ನು ಸ್ವೀಕರಿಸಿ ಗಣಕೀಕರಣ ಮಾಡಲಾಗಿದೆ. ಗೌರಿಬಿದನೂರು ಕ್ಷೇತ್ರದಲ್ಲಿ 1,89,197, ಬಾಗೇಪಲ್ಲಿಯಲ್ಲಿ 1,83,728, ಚಿಕ್ಕಬಳ್ಳಾಪುರದಲ್ಲಿ 1,91,567, ಶಿಡ್ಲಘಟ್ಟದಲ್ಲಿ 1,84,975 ಹಾಗೂ ಚಿಂತಾಮಣಿಯಲ್ಲಿ 1,95,156 ಮತದಾರರ ಮಾಹಿತಿ ಪರಿಷ್ಕರಿಸಲಾಗಿದೆ

Chikkaballapur News: ಎಸ್‌ಐಆರ್‌ ಕಾರ್ಯ ಪಾರದರ್ಶಕವಾಗಿರಲಿ; ಅರ್ಹರ ಹೆಸರು ಸೇರ್ಪಡೆ, ಅನರ್ಹರ ಪರಿಶೀಲನೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ಜಿ.ಪ್ರಭು

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪಕ್ಕೆ ಅವಕಾಶವಿಲ್ಲ

ಎಸ್‌ಐಆರ್‌-2026ರ ವೇಳಾಪಟ್ಟಿ ಹಾಗೂ ಪರಿಷ್ಕರಣೆ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಮಾಹಿತಿ ನೀಡಿದರು. ಸ್ವೀಕೃತ ಗಣತಿದಾರರ ನಮೂನೆಗಳ ಗಣಕೀಕರಣದ ಪ್ರಗತಿ ಪರಿಶೀಲಿಸುವ ಜತೆಗೆ ಗೈರು ಹಾಜರು, ಸ್ಥಳಾಂತರಗೊಂಡವರು, ಮೃತರು, ದ್ವಿಪ್ರತಿ ಸೇರಿದಂತೆ ವಿವಿಧ ಪ್ರಕರಣಗಳನ್ನು ನಿಯಮಾನುಸಾರ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಹನೂರು ಎನ್‌ಕೌಂಟರ್‌ ಕೇಸ್‌; ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ, ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?

ಹನೂರು ಶೂಟ್‌ಔಟ್‌ ಕೇಸ್‌; ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

IAS​ ಅಧಿಕಾರಿ ಫೌಜಿಯಾ ವಿರುದ್ಧ ಅವಹೇಳನ ಹೇಳಿಕೆ ಪ್ರಕರಣ: ಬಿಜೆಪಿ MLC ಎನ್. ರವಿಕುಮಾರ್‌ಗೆ  ಜಾಮೀನು ರಹಿತ ಬಂಧನ ವಾರಂಟ್

ಬಿಜೆಪಿ MLC ಎನ್. ರವಿಕುಮಾರ್‌ಗೆ ಜಾಮೀನು ರಹಿತ ಬಂಧನ ವಾರಂಟ್!

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ವಿಷಕಾರಿ ದತ್ತೂರಿ ಹಣ್ಣು ಮಾರಾಟ; ಕರ್ನಾಟಕದಲ್ಲಿ ಅಮೆಜಾನ್, ಇನ್‌ಸ್ಟಾಮಾರ್ಟ್, ಬಿಗ್‌ಬಾಸ್ಕೆಟ್‌ನ ಪರವಾನಗಿ ರದ್ದು

ರಾಜ್ಯದಲ್ಲಿ ಅಮೆಜಾನ್,ಇನ್‌ಸ್ಟಾಮಾರ್ಟ್,ಬಿಗ್‌ಬಾಸ್ಕೆಟ್‌ನ ಪರವಾನಗಿ ರದ್ದು

Datura: ವಿಷಕಾರಿ ದತ್ತೂರಿ ಹಣ್ಣು ಮತ್ತು ಬೀಜಗಳನ್ನು ಮಾನವ ಬಳಕೆಗಾಗಿ ಖಾದ್ಯ ಉತ್ಪನ್ನಗಳಾಗಿ ಪಟ್ಟಿ ಮಾಡಿರುವುದು ಕಂಡುಬಂದ ನಂತರ ಕರ್ನಾಟಕದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಅಮೆಜಾನ್, ಇನ್‌ಸ್ಟಾಮಾರ್ಟ್ ಮತ್ತು ಬಿಗ್‌ಬಾಸ್ಕೆಟ್‌ನ ಆಹಾರ ಪರವಾನಗಿಗಳನ್ನು ಅಮಾನತುಗೊಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದೇ ಈದ್ ಮಿಲಾದ್ ಸಾರ್ವತ್ರಿಕ ರಜೆ;  ಉಳಿದ ಕಡೆಗಳಲ್ಲಿ ಬುಧವಾರ

ಕರಾವಳಿ ಜಿಲ್ಲೆಗಳಲ್ಲಿ ಇಂದೇ ಈದ್ ಮಿಲಾದ್ ಸಾರ್ವತ್ರಿಕ ರಜೆ

ರಾಜ್ಯ ಸರ್ಕಾರವು ಈದ್‌ ಮಿಲಾದ್‌ ಸಾರ್ವತ್ರಿಕ ರಜೆ ದಿನಾಂಕದಲ್ಲಿ ಬದಲಾವಣೆ ಮಾಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಮಂಗಳವಾರ (ಆಗಸ್ಟ್‌ 25 ಕ್ಕೆ) ರಜೆ ಘೋಷಣೆ ಮಾಡಲಾಗಿದೆ. ಉಳಿದ ಕಡೆಗಳಲ್ಲಿ ಬುಧವಾರ ರಜೆ ಇರಲಿದೆ. ಈ ಮೊದಲು ಸರ್ಕಾರಿ ರಜೆಯು ಆಗಸ್ಟ್‌ 26ಕ್ಕೆ ನಿಗದಿಯಾಗಿತ್ತು.

ನೀರು ಬಿಡಿ: ಮತ್ತೊಮ್ಮೆ ಸಿಡಬ್ಲ್ಯೂಆರ್‌ಸಿ ಆರ್ಡರ್

ನೀರು ಬಿಡಿ: ಮತ್ತೊಮ್ಮೆ ಸಿಡಬ್ಲ್ಯೂಆರ್‌ಸಿ ಆರ್ಡರ್

ಆಗಸ್ಟ್ 25 ರ ಬೆಳಗ್ಗೆ 8 ಗಂಟೆಯಿಂದ ಮುಂದಿನ 15 ದಿನಗಳ ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಒಟ್ಟು 11.66 ಟಿಎಂಸಿ ನೀರು ಹರಿಯುವಂತೆ ನೋಡಿಕೊಳ್ಳಬೇಕು ಎಂದು ಸಿಡಬ್ಲ್ಯೂಆರ್‌ಸಿ ಸೂಚಿಸಿದೆ. ಈಗಾಗಲೇ ಕೆಆರ್‌ಎಸ್, ಕಬಿನಿ ಸೇರಿದಂತೆ ರಾಜ್ಯದ ಹಲವು ಜಲಾಶಯಗಳಿಂದ 30 ಟಿಎಂಸಿಗೂ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ.

ಎಸ್‌ʼಐಆರ್‌: ಈಗ ನೋಟೀಸ್‌ ಸರದಿ

ಎಸ್‌ʼಐಆರ್‌: ಈಗ ನೋಟೀಸ್‌ ಸರದಿ

ಚುನಾವಣಾ ಆಯೋಗದ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 5.54 ಕೋಟಿ ಮತದಾರರಿಗೆ ಎನ್ಯುಮರೇಷನ್ ಫಾರ್ಮ್ ವಿತರಿಸಲಾಗಿತ್ತು. ಈ ಪೈಕಿ 4.46 ಕೋಟಿ ಮತದಾರರ ಹೆಸರುಗಳು ಕರಡು ಪಟ್ಟಿಯಲ್ಲಿ ಕಾಣಿಸಿಕೊಂಡಿವೆ. ಉಳಿದಂತೆ 43.81 ಲಕ್ಷ ಮತದಾರರಿಗೆ ನೋಟಿಸ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ

Loading...