ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್‌ ಪತ್ತೆ; ಕೇರಳ ಮೂಲದ ಇಬ್ಬರ ಬಂಧನ

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್‌ ಪತ್ತೆ

Drugs seized in Bengaluru: ಬೆಂಗಳೂರು ಹೊರವಲಯದ ಬಾಗಲೂರಿನ ಪ್ರೆಸ್ಟೀಜ್‌ ಫೈನ್‌ ಬೇಕರಿ ಪಾರ್ಕ್‌ನ ಫ್ಲ್ಯಾಟ್‌ವೊಂದರಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್‌ ಅನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದು, ಕೇರಳ ಮೂಲದ ಇಬ್ಬರನ್ನು ಬಂಧಿಸಿದ್ದಾರೆ.

ವಿದ್ಯುತ್‌ ಸಂಬಂಧಿತ ದೂರುಗಳಿಗೆ 1912 ಅಥವಾ ವಾಟ್ಸ್‌ಆ್ಯಪ್‌ ಸಹಾಯವಾಣಿ ಬಳಸಿ: ಬೆಸ್ಕಾಂ

ವಿದ್ಯುತ್‌ ಸಂಬಂಧಿತ ದೂರುಗಳಿಗೆ ಬೆಸ್ಕಾಂ ವಾಟ್ಸ್‌ಆ್ಯಪ್‌ ಸಹಾಯವಾಣಿ ಬಳಸಿ

Bescom Helpline: ವಿದ್ಯುತ್‌ ಪೂರೈಕೆ ಸೇರಿದಂತೆ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಸ್ಕಾಂ ತಿಳಿಸಿದೆ.

DK Shivakumar: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಮಾರ್ಚ್ 10ರಂದು ಡಿಸಿಎಂ ಡಿಕೆ ಶಿವಕುಮಾರ್‌ ಡಿನ್ನರ್ ಪಾರ್ಟಿ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಮಾ‌ರ್ಚ್ 10ರಂದು ಡಿಸಿಎಂ ಡಿನ್ನರ್ ಪಾರ್ಟಿ

ಸಿಎಂ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಹ್ವಾನ ನೀಡಿದ್ದಾರೆ. ಈ ಡಿನ್ನರ್ ಪಾರ್ಟಿ ಆಯೋಜನೆ ಮೂಲಕ ಶಾಸಕರಲ್ಲಿ ವಿಶ್ವಾಸ ಹಚ್ಚಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್‌ ನಾಯಕರು ಕೂಡ ಈ ಪಾರ್ಟಿಗೆ ಬರುವ ಸಾಧ್ಯತೆ ಇದೆ.

ಮಲ್ಲಿಕಾರ್ಜುನ ಮುತ್ಯಾ ಪ್ರಕರಣಕ್ಕೆ ಸಂಬಂಧಿಸಿದ ಪೋಟೊ, ವಿಡಿಯೊ ಹಂಚಿಕೊಂಡ್ರೆ ಕಾನೂನು ಕ್ರಮ: ಎಸ್‌ಪಿ ಪೃಥ್ವಿಕ್ ಶಂಕರ್

ಮಲ್ಲಿಕಾರ್ಜುನ ಮುತ್ಯಾ ಪೋಟೊ, ವಿಡಿಯೊ ಹಂಚಿಕೊಂಡ್ರೆ ಕಾನೂನು ಕ್ರಮ

ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿ, ತನಿಖೆ ನಡೆಯುತ್ತಿದೆ. ಹೀಗಾಗಿ ಸಾರ್ವಜನಿಕರು ಈ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಪೋಟೊ ಅಥವಾ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಯಾದಗಿರಿ ಎಸ್‌ಪಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.

Murder Case: ನಿಧಾನವಾಗಿ ಓಡಿಸು ಎಂದು ತಿಳಿಹೇಳಿದವನ ಮೇಲೆ ಕಾರು ಓಡಿಸಿ ಹತ್ಯೆ

ನಿಧಾನವಾಗಿ ಓಡಿಸು ಎಂದು ತಿಳಿಹೇಳಿದವನ ಮೇಲೆ ಕಾರು ಓಡಿಸಿ ಹತ್ಯೆ

KA-01-ಎಂಎಫ್-2883 ನಂಬರ್‌ನ ಕಾರು ಓಡಿಸುತ್ತಿದ್ದ ವ್ಯಕ್ತಿಯೇ ಕೊಲೆಗಾರ. ಆತ ಅತಿ ವೇಗವಾಗಿ ಬಂದಿದ್ದಾನೆ. ಇದನ್ನು ಕಂಡ ಯುವಕರ ತಂಡ, ಕಾರು ಚಾಲಕನಿಗೆ ನಿಧಾನವಾಗಿ ಹೋಗು ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಕಾರು ಚಾಲಕ ಸ್ಬಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.

ಉಚಿತ ನಾರಾಯಣ ಕೃತಕ ಕಾಲು ಮತ್ತು ಕ್ಯಾಲಿಪರ್ ಅಳವಡಿಕೆ ಶಿಬಿರದಲ್ಲಿ 558 ವಿಕಲಚೇತನರಿಗೆ ನೆರವಾದ ನಾರಾಯಣ ಸೇವಾ ಸಂಸ್ಥಾನ

558 ವಿಕಲಚೇತನರಿಗೆ ನೆರವಾದ ನಾರಾಯಣ ಸೇವಾ ಸಂಸ್ಥಾನ

ಶಿಬಿರದಲ್ಲಿ 558 ವಿಕಲಚೇತನರು ಭಾಗವಹಿಸಿದ್ದು, ಸುಮಾರು 602 ಕೃತಕ ಕಾಲುಗಳು ಮತ್ತು ಕ್ಯಾಲಿಪರ್ ಗಳನ್ನು ಉಚಿತವಾಗಿ ಅಳವಡಿಸಲಾಯಿತು. ಇದರಲ್ಲಿ ಮೇಲ್ಭಾಗದ ಅಂಗಗಳು, ಕೆಳಭಾಗದ ಅಂಗಗಳು, ಬಹು ಅಂಗಗಳು ಮತ್ತು ಕ್ಯಾಲಿಪರ್ ಗಳನ್ನು ಒದಗಿಸ ಲಾಗಿದ್ದು, ಎಲ್ಲಾ ವಯೋಮಾನದ ಫಲಾನುಭವಿಗಳಿಗೆ, ವಿಶೇಷವಾಗಿ ಯುವಪೀಳಿಗೆಯ ಮಂದಿಗೆ ಗುಣಮಟ್ಟದ ಜೀವನ ಸಾಗಿಸಲು ಮತ್ತು ಸ್ವತಂತ್ರ ಜೀವನದತ್ತ ಆತ್ಮವಿಶ್ವಾಸದ ಹೆಜ್ಜೆ ಇಡಲು ಸಹಾಯ ಮಾಡಿತು

ಫೋನ್‌ ಕದ್ದಾಲಿಕೆ ಆರೋಪ: ನಾನು- ಡಿಕೆಶಿ ಹಾಲು ಜೇನಿನಂತೆ, ಹುಳಿ ಹಿಂಡುವ ಪ್ರಯತ್ನ ನಡೆಯದು: ಸಿಎಂ ಸಿದ್ದರಾಮಯ್ಯ

ನಾನು- ಡಿಕೆಶಿ ಹಾಲು ಜೇನಿನಂತೆ, ಹುಳಿ ಹಿಂಡುವ ಪ್ರಯತ್ನ ನಡೆಯದು: ಸಿಎಂ

ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ ಎನ್ನುವುದು ಇಬ್ಬರಿಗೂ ತಿಳಿದಿರಲಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

Gold Rate Today 3rd March 2026: ಯುದ್ಧದ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ; ಇಂದು ಅಗ್ಗವಾಗಿದ್ದೆಷ್ಟು?

ಮತ್ತೆ ಗ್ರಾಹಕರ ನಿದ್ದೆಗೆಡಿಸಿದ ಬಂಗಾರ

Gold Silver Rate Today: ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 45 ರುಪಾಯಿ ಇಳಿಕೆಯಾಗಿ 15,585 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 49 ಕಡಿಮೆಯಾಗಲಿದ್ದು, 17,002 ರುಪಾಯಿ ಇದೆ.

Petrol Price hike: ಗಲ್ಫ್‌ ಯುದ್ಧದ ನಡುವೆ ರಾಜ್ಯ ಬಜೆಟ್‌ನಲ್ಲೂ ಪೆಟ್ರೋಲ್‌ ಬೆಲೆ ಏರಿಕೆ ಚಿಂತನೆ!

ಗಲ್ಫ್‌ ಸಮರ ನಡುವೆ ರಾಜ್ಯ ಬಜೆಟ್‌ನಲ್ಲೂ ಪೆಟ್ರೋಲ್‌ ಬೆಲೆ ಏರಿಕೆ ಚಿಂತನೆ!

ಹಣಕಾಸು ಇಲಾಖೆ ಅಧಿಕಾರಿಗಳ ಜತೆಗೆ ಕಳೆದ ಕೆಲ ದಿನಗಳಿಂದ ಪ್ರತ್ಯೇಕ ಚರ್ಚೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಈ ಪ್ರಸ್ತಾಪವೊಂದು ಈಗಾಗಲೇ ಸಲ್ಲಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 1 ರೂ. ಹೆಚ್ಚುವರಿ ಮಾರಾಟ ತೆರಿಗೆ ವಿಧಿಸುವುದರಿಂದ ತಕ್ಕಮಟ್ಟಿಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ವೇಗ ನೀಡಬಹುದೆಂದು ಚರ್ಚಿಸಲಾಗುತ್ತಿದೆ.

Fire Accident: ಬೆಂಗಳೂರಿನ ಮನೆಯೊಳಗೆ ಅಗ್ನಿ ದುರಂತ, ಮಹಿಳೆ ದುರ್ಮರಣ, ಮೂವರ ರಕ್ಷಣೆ

ಬೆಂಗಳೂರಿನ ಮನೆಯೊಳಗೆ ಅಗ್ನಿ ದುರಂತ, ಮಹಿಳೆ ದುರ್ಮರಣ, ಮೂವರ ರಕ್ಷಣೆ

ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಮೂವರನ್ನು ರಕ್ಷಿಸಿದ್ದಾರೆ. ಸುಟ್ಟಗಾಯಗಳಿಂದ ಮಹಿಳೆ ಮೃತಪಟ್ಟಿದ್ದಾರೆ. ಉಳಿದ ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ತನಿಖೆ ಮುಂದುವರಿದಿದೆ.

ದುಬೈನಿಂದ ಎರಡನೇ ವಿಮಾನ ಬೆಂಗಳೂರಿಗೆ; ಎಂಎಲ್‌ಸಿ ಭೋಜೇಗೌಡ, ಪಿವಿ ಸಿಂಧು ಸೇರಿ 490 ಪ್ರಯಾಣಿಕರು ಸುರಕ್ಷಿತವಾಗಿ ವಾಪಸ್

ದುಬೈನಿಂದ ಎರಡನೇ ವಿಮಾನ ಬೆಂಗಳೂರಿಗೆ; 490 ಪ್ರಯಾಣಿಕರು ವಾಪಸ್

ಮೊದಲ ವಿಮಾನದಲ್ಲಿ 213 ಪ್ರಯಾಣಿಕರು ಆಗಮಿಸಿದ್ದರು. ಇದೀಗ ಎರಡನೇ ವಿಮಾನದಲ್ಲಿ ದಾಖಲೆ ಸಂಖ್ಯೆಯ 490 ಜನರು ಮರಳಿದ್ದು, ವಿಮಾನ ನಿಲ್ದಾಣದಲ್ಲಿ ಭಾವನಾತ್ಮಕ ಕ್ಷಣಗಳು ಕಂಡುಬಂದವು. ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಅಧಿಕಾರಿಗಳು ಬರಮಾಡಿಕೊಂಡಿದ್ದು, ಅಗತ್ಯ ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಟ್ರಾಫಿಕ್ ಕಿರಿಕಿರಿ ನಡುವೆ ಮನ ತಣಿಸುವ ಸೌಂದರ್ಯದ ಗಣಿ: ಹೂ ರಾಶಿಗೆ ಮನಸೋತ ಬೆಂಗಳೂರಿಗರು

ಸಿಲಿಕಾನ್ ಸಿಟಿಯಲ್ಲಿ ಕಣ್ಮನ ಸೆಳೆವ ದೃಶ್ಯ: ರಸ್ತೆ ಮಧ್ಯೆ ಅರಳಿದ ಹೂ

Viral News: ಬೆಂಗಳೂರಿನ ಸೌಂದರ್ಯ ಬಗ್ಗೆ ಯುವತಿಯೊಬ್ಬರು ಪೋಸ್ಟ್ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ನಗರದಾದ್ಯಂತ ಮೋಡ ವಾತಾವರಣ, ಲಘುವಾದ ಸೂರ್ಯನ ಬಿಸಿಲು ಮತ್ತು ರಸ್ತೆಯ ಪಕ್ಕದಲ್ಲಿ ಅರಳಿ ನಿಂತಿರುವ ಗುಲಾಬಿ ಬಣ್ಣದ ಹೂವುಗಳು ನಿಜವಾಗಿಯೂ ಸ್ವರ್ಗ ಎಂದು ಅವರು ಬರೆದುಕೊಂಡಿದ್ದಾರೆ.‌

Murder Case: ಇಬ್ಬರು ಗಂಡಂದಿರನ್ನು ಬಿಟ್ಟು ಮೂರನೆಯ ಪ್ರಿಯಕರನಿಂದ ಹತ್ಯೆಯಾದ ಮಹಿಳೆ

ಇಬ್ಬರು ಗಂಡಂದಿರನ್ನು ಬಿಟ್ಟು ಪ್ರಿಯಕರನಿಂದ ಹತ್ಯೆಯಾದ ಮಹಿಳೆ

ತಂದೆ-ತಾಯಿಗೆ ಒಬ್ಬಳೇ ಹೆಣ್ಣು ಮಗಳಾದ ತೇಜಸ್ವಿನಿ 20ನೇ ವಯಸ್ಸಿನಲ್ಲೇ ಓಡಿ ಹೋಗಿ ಲವ್ ಮ್ಯಾರೇಜ್ ಆಗಿದ್ದಳು. ಒಂದು ಮಗು ಆದ ಬಳಿಕ ಕುಟುಂಬ ಕಲಹ ಉಂಟಾಗಿ ಆತನನ್ನು ದೂರ ಮಾಡಿ ಮತ್ತೊಬ್ಬನ ಜೊತೆ ಓಡಿ ಹೋಗಿ ಮದ್ವೆಯಾಗಿದ್ದಳು. ಆತನಿಂದಲೂ ಒಂದು ಮಗುವಾದ ಬಳಿಕ ಆತನಿಂದಲೂ ದೂರವಾಗಿ ಮಕ್ಕಳೊಂದಿಗೆ ಪ್ರತ್ಯೇಕ ವಾಸವಾಗಿದ್ದಳು. ಇದೇ ಸಂದರ್ಭದಲ್ಲಿ ಸಂದೀಪ್ ಎನ್ನುವ ಯುವಕನೊಂದಿಗೆ ಲಿವಿಂಗ್ ರಿಲೇಶನ್ ಶಿಪ್​​ನಲ್ಲಿದ್ದಳು.

Shidlaghatta News: ಶಿಡ್ಲಘಟ್ಟದಲ್ಲಿ ಪೂಜಮ್ಮ ದೇವಿಯ ಹಸಿಕರಗ ಮಹೋತ್ಸವ ಅದ್ದೂರಿ

ತಮಟೆ ತಾಳಕ್ಕೆ ಹೆಜ್ಜೆ ಹಾಕಿದ ಹಸಿಕರಗ – ಭಕ್ತರ ಸಂಭ್ರಮ

ಮೆರವಣಿಗೆಯ ವೇಳೆ ತಮಟೆ ತಾಳಕ್ಕೆ ಕರಗದ ಪೂಜಾರಿ ಶಿವರಾಜ್ ಅವರು ಹೆಜ್ಜೆ ಹಾಕಿ ಸಾಂಪ್ರದಾ ಯಿಕ ನೃತ್ಯ ಪ್ರದರ್ಶಿಸಿದರು. ಡೊಳ್ಳು, ತಾಳ, ನಾದಸ್ವರಗಳ ಘೋಷದಲ್ಲಿ ಅವರ ಚುರುಕು ನೃತ್ಯ ಭಕ್ತರ ಮನ ಗೆದ್ದಿತು. ಊರಿನ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯನ್ನು ಸಾರ್ವಜನಿಕರು ಹೂವಿನ ಸುರಿಮಳೆಯ ಮೂಲಕ ಭಕ್ತಿಯಿಂದ ಸ್ವಾಗತಿಸಿದರು

Chikkaballapur News: ಹೋಳಿ ಯುಗಾದಿ ರಂಜಾನ್ ಹಬ್ಬಗಳು ಭಾವೈಕ್ಯತೆಯಿಂದ ಆಚರಿಸಿ: ಡಿವೈಎಸ್‌ಪಿ ಮುರಳೀಧರ್

ಹೋಳಿ ಯುಗಾದಿ ರಂಜಾನ್ ಹಬ್ಬಗಳು ಭಾವೈಕ್ಯತೆಯಿಂದ ಆಚರಿಸಿ

ಸಾಮಾಜಿಕ ತಾಣಗಳಲ್ಲಿ ಒಂದು ಮೆಸೇಜ್‌ನ್ನು ಪ್ರಚಾರ ಮಾಡುವ ಮುನ್ನ 10 ಬಾರಿ ಯೋಚಿಸ ಬೇಕು. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವವರ ಪಟ್ಟಿಯನ್ನು ತಯಾರಿಸಲಾಗುವುದು. ಯಾವಾಗಲದರೂ ಏನಾದರೂ ಘಟನೆಗಳ ನಡೆದರೆ ಪಟ್ಟಿಯಲ್ಲಿರುವವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು

ರಾಜ್ಯ ಬಜೆಟ್‌ನಲ್ಲಿ ಹೆಚ್.ಎನ್ ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ಅನುದಾನ ಮಿಸಲಿಡಿ ಇಲ್ಲವೆ ಹೋರಾಟ ಎದುರಿಸಿ:  ಸಂದೀಪ್ ಬಿ ರೆಡ್ಡಿ ಎಚ್ಚರಿಕೆ

ಹೆಚ್.ಎನ್ ವ್ಯಾಲಿ ಶುದ್ಧೀಕರಣಕ್ಕೆ ಅನುದಾನ, ಇಲ್ಲವೇ ಹೋರಾಟ

ಜಿಲ್ಲೆಯ ಶ್ರಮಜೀವಿ ರೈತರ ಮುಗ್ಧತೆ ಬಳಸಿಕೊಂಡು ಅಧಿಕಾರಕ್ಕೆ ಬಂದ ಈಗಿನ ಸರಕಾರವೇ ಮುಂದೆ ನಿಂತು ಅಂತರ್ಜಲ ವೃದ್ದಿಯ ಹೆಸರಿನಲ್ಲಿ ನನ್ನ ಜನಕ್ಕೆ ವಿಷ ಕುಡಿಸುತ್ತಿದ್ದಾರೆ. ಆ ಮೂಲಕ ಜಿಲ್ಲೆಯು ಡಯಾಲಿಸಿಸ್ ರೋಗಿಗಳ ರಾಜಧಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಆತಂಕ ಪಡುವ ಸಂಗತಿಯಾಗಿದೆ.

ಇರಾನ್‌-ಇಸ್ರೇಲ್‌ ಸಂಘರ್ಷ: ಆತಂಕದ ಮಧ್ಯೆ ಅಬುಧಾಬಿಯಿಂದ ಬೆಂಗಳೂರಿಗೆ ಬಂದಿಳಿದ ವಿಮಾನ; 230 ಕನ್ನಡಿಗರು ವಾಪಸ್‌

ಅಬುಧಾಬಿಯಿಂದ ಬೆಂಗಳೂರಿಗೆ ಬಂತು ಮೊದಲ ವಿಮಾನ

Middle East Crisis: ಯುದ್ಧಭೂಮಿಯಿಂದ ಕನ್ನಡಿಗರನ್ನು ಒಳಗೊಂಡ ಮೊದಲ ಬ್ಯಾಚ್‌ನ ವಿಮಾನ ಸೋಮವಾರ ರಾತ್ರಿ (ಮಾರ್ಚ್‌ 2) ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಸದ್ಯ ತಾಯ್ನಾಡಿಗೆ ಬಂದಿದ್ದು ಸಂತಸ ತಂದಿದೆ ಎಂದು ಪ್ರಯಾಣಿಕರು ಪ್ರತಿಕ್ರಿಯಿಸಿದ್ದಾರೆ.

Chikkaballapur News: ಒಳಮೀಸಲಾತಿಯಂತೆ ನೇಮಕಾತಿ ನಡೆಯದಿದ್ದರೆ ವಿಧಾನ ಸೌಧ ಮುತ್ತಿಗೆ ಖಚಿತ : ಮಾದಾರ ಮಹಾಸಭಾದ ಜಿಲ್ಲಾಧ್ಯಕ್ಷ ಪಟ್ರೇನಹಳ್ಳಿ ಕೃಷ್ಣ  ಎಚ್ಚರಿಕೆ.

ಒಳಮೀಸಲಾತಿಯಂತೆ ನೇಮಕಾತಿ ನಡೆಯದಿದ್ದರೆ ವಿಧಾನ ಸೌಧ ಮುತ್ತಿಗೆ ಖಚಿತ

ಪ್ರಸ್ತುತ ನೇಮಕಾತಿ ನಡೆಯುವ 56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಶೇ.21ರಂತಾಗಲಿ, ಅಥವಾ ಶೇ 18 ರಂತಾಗಲಿ ಹೇಗಾದರೂ ಆಗಲಿ ಒಳಮೀಸಲಾತಿಯಂತೆಯೇ ನಡೆಯಬೇಕು. ಆ ಮೂಲಕ 35 ವರ್ಷ ಗಳ ಹೋರಾಟಕ್ಕೆ ನ್ಯಾಯ ನೀಡಬೇಕು. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಕ್ರಮ ತೆಗೆದುಕೊಳ್ಳಬೇಕು. ಒತ್ತಡಕ್ಕೆ ಮಣಿದಲ್ಲಿ ಮುಂದಿನ ದಿನಗಳಲ್ಲಿ ಮಾದಿಗ ಸಮುದಾಯದ ಪ್ರತಿರೋದ ಎದುರಿಸಬೇಕಾಗುತ್ತದೆ.

Chikkaballapur News: ಸಾಮಾಜಿಕ ಪರಿಣಾಮಗಳನ್ನು ಅಧ್ಯಯನ ಮಾಡುವ ಜವಾಬ್ದಾರಿ ಸಮಾಜ ಶಾಸ್ತ್ರಜ್ಞರ ಮೇಲಿದೆ: ಪ್ರಾಂಶುಪಾಲೆ ಡಾ.ಮಂಜುಳ ಅಭಿಮತ

ಸಾಮಾಜಿಕ ಪರಿಣಾಮಗಳ ಅಧ್ಯಯನ ಸಮಾಜಶಾಸ್ತ್ರಜ್ಞರ ಜವಾಬ್ದಾರಿ

ತಂತ್ರಜ್ಞಾನ ಮಾನವನ ಜೀವನವನ್ನು ಸುಲಭಗೊಳಿಸಿದರೂ, ಅದರ ಸಾಮಾಜಿಕ ಪರಿಣಾಮಗಳನ್ನು ಅಧ್ಯಯನ ಮಾಡುವ ಜವಾಬ್ದಾರಿ ಸಮಾಜ ಶಾಸ್ತ್ರಜ್ಞರ ಮೇಲಿದೆ. ಕೃತಕ ಬುದ್ಧಿಮತ್ತೆಯ ಬಳಕೆ ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಕ್ಷೇತ್ರಗಳಲ್ಲಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ, ಸಾಮಾಜಿಕ ಅಸಮಾ ನತೆ, ಉದ್ಯೋಗ ನಷ್ಟ, ಡೇಟಾ ಗೌಪ್ಯತೆ ಮತ್ತು ನೈತಿಕ ಮೌಲ್ಯಗಳಂತಹ ಪ್ರಶ್ನೆಗಳು ಉದ್ಭವಿಸುತ್ತಿವೆ

Chikkaballapur News: “ವಿಶ್ವದ ಸಮಸ್ಯೆಗಳಿಗೆ ಭಾರತೀಯ ಸಂಸ್ಕೃತಿ ಆಚಾರ–ವಿಚಾರಗಳೇ ಏಕೈಕ ಪರಿಹಾರ” :  ಸಂತೋಷ್ ಕುಮಾರ್ ಕಾರ್ಲೇಟಿ

“ವಿಶ್ವದ ಸಮಸ್ಯೆಗಳಿಗೆ ಭಾರತೀಯ ಸಂಸ್ಕೃತಿ ಆಚಾರ–ವಿಚಾರಗಳೇ ಏಕೈಕ ಪರಿಹಾರ”

ಹಿಂದೂ ಧರ್ಮಕ್ಕೆ ನಿರ್ದಿಷ್ಟ ಜನನ ಅಥವಾ ಅಂತ್ಯದ ದಿನಾಂಕವಿಲ್ಲದೆ, ಸತ್ಯಯುಗ, ತ್ರೇತಾಯುಗ, ದ್ವಾಪರಯುಗ ಹಾಗೂ ಕಲಿಯುಗಗಳ ಮೂಲಕ ಕಾಲಮಾನವನ್ನು ಖಗೋಳಶಾಸ್ತ್ರದ ಆಧಾರದ ಮೇಲೆ ವಿವರಿಸಲಾಗಿದೆ. ಲೋಹಶಾಸ್ತ್ರ, ಶಿಲ್ಪಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ವಸ್ತ್ರ ತಯಾರಿಕಾ ಕಲೆಗಳಲ್ಲಿ ಭಾರತೀಯರ ಸಾಧನೆಗಳನ್ನು ಅವರು ಸ್ಮರಿಸಿದರು.

ಗ್ರೇಟರ್ ಬೆಂಗಳೂರು ವ್ಯಾಪ್ತಿಯ ರಸ್ತೆ ಬದಿ, ವಿಭಜಕಗಳ ಗಿಡಗಳ ಸೂಕ್ತ ನಿರ್ವಹಣೆಗೆ ಆದೇಶ

ಬೆಂಗಳೂರಿನ ರಸ್ತೆ ಬದಿ, ವಿಭಜಕಗಳ ಗಿಡಗಳ ಸೂಕ್ತ ನಿರ್ವಹಣೆಗೆ ಆದೇಶ

DK Shivakumar: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲ ರಸ್ತೆಬದಿ ಹಾಗೂ ರಸ್ತೆ ವಿಭಜಕಗಳಲ್ಲಿನ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಬೇಕು, ಒಣಗಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು. ಈ ಪ್ರಕ್ರಿಯೆಯನ್ನು ನಿರಂತರ ಪರಿಶೀಲಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಗಿಡಗಳನ್ನು ಸೂಕ್ತ ನಿರ್ವಹಣೆಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Bengaluru News: ಪ್ರಿಯಕರನ ಕೈಕಾಲು ಕಟ್ಟಿ ಭೀಕರವಾಗಿ ಹತೈಗೈದ ಕಿರುತೆರೆ ನಟಿ

ಪ್ರಿಯಕರನನ್ನು ಭೀಕರವಾಗಿ ಹತೈಗೈದ ಕಿರುತೆರೆ ನಟಿ

Crime News: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ಬಾಗಲಗುಂಟೆಯ ವಿಜಯಲಕ್ಷ್ಮೀ ಬಡಾವಣೆಯ ಮನೆಯೊಂದರಲ್ಲಿ ಪ್ರಿಯಕರನನ್ನು ಕಿರುತೆರೆ ನಟಿ ಊರ್ವಶಿ ಕೊಲೆ ಮಾಡಿದ್ದಾಳೆ. ಕೆಲವು ದಿನಗಲ ಹಿಂದೆ ಮೃತದೇಹ ಪತ್ತೆಯಾಗಿತ್ತು. ಇದೀಗ ಕೊಲೆಯ ರಹಸ್ಯ ಬಯಲಾಗಿದ್ದು, ಮೃತನನ್ನು ಮೋಹನ ಕೃಷ್ಣ ಎಂದು ಗುರುತಿಸಲಾಗಿದೆ.

ಹಿಂದುಳಿದ, ದಲಿತ ಸಮುದಾಯಗಳ 24 ಮಠಗಳಿಗೆ ಯಲಹಂಕ ಕ್ಷೇತ್ರದಲ್ಲಿ ಭೂಮಿ

ಶಾಸಕ ಎಸ್.ಆರ್. ವಿಶ್ವನಾಥ್‌ಗೆ ಶ್ರೀಗಳ ಕೃಪಾಶೀರ್ವಾದ

SR Vishwanath: ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದಲ್ಲಿ 24 ಹಿಂದುಳಿದ ಹಾಗೂ ದಲಿತ ಸಮುದಾಯಗಳ ಮಠಗಳಿಗೆ ಭೂಮಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭೂಮಿ ಪಡೆದ 24 ಮಠಾಧೀಶರು ಸೋಮವಾರ ಬೆಳಗ್ಗೆ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಮನೆಗೆ ಆಗಮಿಸಿ ಆಶೀರ್ವದಿಸಿದ್ದಾರೆ.

ಇರಾನ್‌-ಇಸ್ರೇಲ್‌ ಸಂಘರ್ಷ; ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಕನ್ನಡಿಗರ ರಕ್ಷಣೆಗಾಗಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

Middle East Crisis: ಇರಾನ್‌ ಮೇಲೆ ಇಸ್ರೇಲ್‌-ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಬಳಿಕ ಮಧ್ಯಪ್ರಾಚ್ಯ ಸಂಘರ್ಷಭರಿತವಾಗಿದೆ. ಇದರಿಂದ ಸೌದಿ ಅರೇಬಿಯಾ, ಯುಎಇ ಸೇರಿದಂತೆ ಹಲವು ದೇಶಗಳಲ್ಲಿ ಕನ್ನಡಿಗರು ಸೇರಿ ಭಾರತೀಯರು ಸಿಲುಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆ ತರುವಂತೆ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

Loading...