ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Karnataka cabinet: ಹಾವೇರಿ ಜಿಲ್ಲೆಯ ಕೈ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ; ಸಂಪುಟ ಸೇರಲು ನಾನಾ ಕಸರತ್ತು

ಹಾವೇರಿ ಜಿಲ್ಲೆಯ ಕೈ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ

Haveri Congress: ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಘೋಷಿಸಿಕೊಂಡಿದ್ದ ಕಾಂಗ್ರೆಸ್ ಶಾಸಕರ ನಡುವೆಯೇ ಈಗ ಸಚಿವ ಸ್ಥಾನಕ್ಕಾಗಿ ಜಟಾಪಟಿ ಶುರುವಾಗಿದೆ. ಈ ಬಾರಿ ನಮ್ಮ ಜಿಲ್ಲೆಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಶಾಸಕರು ಹೈ ಕಮಾಂಡ್‌ಗೆ ದುಂಬಾಲು ಬಿದ್ದಿದ್ದಾರೆ.

ಮೇಲ್ನೋಟಕ್ಕೆ ಪುಸ್ತಕ ಮಾರಾಟ; ಹಿಂಬಾಗಿಲಲ್ಲಿ ಅಕ್ರಮ ಶಸ್ತ್ರಾಸ್ತ್ರ ತಯಾರಿ: ಬೆಳಗಾವಿ, ಉತ್ತರ ಕನ್ನಡದ 13 ಶಂಕಿತರ ಬಂಧನ

ಅಕ್ರಮ ಶಸ್ತ್ರಾಸ್ತ್ರ ತಯಾರಿ: 13 ಮಂದಿಯ ಬಂಧನ

ಅಕ್ರಮ ಶಸ್ತ್ರಾಸ್ತ್ರ ತಯಾರಿಸುತ್ತಿದ್ದ ಆರೋಪದಲ್ಲಿ ಕರ್ನಾಟಕ ಪೊಲೀಸರು ಪುಸ್ತಕ ಮಾರಾಟಗಾರನೊಬ್ಬ ಸೇರಿದಂತೆ ಒಟ್ಟು 13 ಶಂಕಿತರನ್ನು ಬಂಧಿಸಿದ್ದಾರೆ. ಈ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಂದೂಕು ಸರಬರಾಜು ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಇವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ವಿದ್ಯಾರ್ಥಿನಿಗೆ  ಫೋರ್ಬ್ಸ್ 30ರ ಪಟ್ಟಿಯಲ್ಲಿ ಸ್ಥಾನ

ಫೋರ್ಬ್ಸ್ 30ರಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ

30 ವರ್ಷದೊಳಗಿನ ಏಷ್ಯಾ ಫೋರ್ಬ್ಸ್ 30ರ 2025 ಪಟ್ಟಿಯಲ್ಲಿ ಬೆಂಗಳೂರಿನ ವಿದ್ಯಾರ್ಥಿನಿಯೊಬ್ಬಳು ಸ್ಥಾನ ಪಡೆದಿದ್ದಾಳೆ. ಸಾಮಾಜಿಕ ಪರಿಣಾಮ ವಿಭಾಗದಲ್ಲಿ ಈ ಸಾಧನೆ ಮಾಡಿರುವುದು 17 ವರ್ಷದ ದಿವಾ ಉತ್ಕರ್ಷ. ಇವರು ಬಸವೇಶ್ವರ ನಗರದ ನ್ಯಾಷನಲ್ ಅಕಾಡೆಮಿ ಫಾರ್ ಲರ್ನಿಂಗ್‌ನಲ್ಲಿ ದ್ವಿತೀಯ ಪಿಯುಸಿ ಮುಗಿಸಿ ಅಮೆರಿಕದಲ್ಲಿ ಕೈಗಾರಿಕಾ ಎಂಜಿನಿಯರಿಂಗ್ ಅಧ್ಯಯನ ಮಾಡುವ ಯೋಜನೆ ಮಾಡಿಕೊಂಡಿದ್ದಾರೆ. ಇವರು ಮಾಡಿರುವ ಸಾಧನೆ ವಿವರ ಇಲ್ಲಿದೆ.

ಮದುವೆಯಾಗುವುದಾಗಿ ನಂಬಿಸಿ  ಮಹಿಳೆಗೆ ಆನ್‌ಲೈನ್ ನಲ್ಲಿ 23 ಲಕ್ಷ ರೂ  ವಂಚನೆ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಆನ್‌ಲೈನ್‌ನಲ್ಲಿ ಲಕ್ಷ ರೂ ವಂಚನೆ

ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ, ತಮಗೆ ಆನ್ ಲೈನ್‌ನಲ್ಲಿ 23 ಲಕ್ಷ ವಂಚನೆ ಮಾಡಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಮಹಿಳೆ ವೈವಾಹಿಕ ವೇದಿಕೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿದ್ದರು. ಇದರಿಂದ ಸ್ಕಾಟ್ಲೆಂಡ್ ನಲ್ಲಿ ಕೆಲಸ ಮಾಡುತ್ತಿರುವ ಡಾ. ವಿಹಾನ್ ಮಿಶ್ರಾ ಹೆಸರಿನ ವ್ಯಕ್ತಿ ಸಂಪರ್ಕಿಸಿದ್ದಾರೆ.

Dharmasthala: ಸರಕಾರಗಳಿಗೇ ಮಾದರಿಯಾದ ಧರ್ಮಸ್ಥಳದ ವಿಕಾಸ ಪಥ

ಸರಕಾರಗಳಿಗೇ ಮಾದರಿಯಾದ ಧರ್ಮಸ್ಥಳದ ವಿಕಾಸ ಪಥ

ಧರ್ಮಸ್ಥಳದ ಧರ್ಮಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ದೂರದೃಷ್ಟಿಯ ಫಲವಾಗಿ ಮೂಡಿ ಬಂದ ಗ್ರಾಮೀಣಾಭಿ ವೃದ್ಧಿ ಯೋಜನೆ, ರುಡ್ಸೆಟ್ ಮತ್ತು ಸಿರಿ’ ಗ್ರಾಮೋದ್ಯೋಗ ಸಂಸ್ಥೆಗಳು ಇಂದು ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶದ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ದಿಕ್ಸೂಚಿಯಾಗಿವೆ.

ಡಿಕೆ ಶಿವಕುಮಾರ್ ಸಂಪುಟ ಸೇರಲು ಕೈ ನಾಯಕರ ಕಸರತ್ತು; ಸಚಿವ ಸ್ಥಾನ ಯಾರಿಗೆ?

ಡಿಕೆ ಶಿವಕುಮಾರ್ ಸಂಪುಟ ಸೇರಲು ಕೈ ನಾಯಕರ ಕಸರತ್ತು

ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸಂಪುಟ ಸೇರಲು ಆಕಾಂಕ್ಷಿ ಶಾಸಕರ ಭರ್ಜರಿ ಲಾಬಿ ಮತ್ತು ಕಸರತ್ತು ಶುರುವಾಗಿದೆ. ಸದ್ಯ ಹಲವರು ದೆಹಲಿಗೆ ತೆರಳಿದ್ದು, ಹೈಕಮಾಂಡ್‌ ಮನವೊಲಿಸಲು ಕಸರತ್ತು ನಡೆಸಲಾಗುತ್ತಿದೆ. ಇನ್ನು ಮೂವರನ್ನು ಉಪಮುಖ್ಯಮಂತ್ರಿ ಮಾಡುವಂತೆ ಹೈಕಮಾಂಡ್​ ಮುಂದೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಮಹಾನಗರಗಳ ಪೈಕಿ ಆತ್ಮಹತ್ಯೆ ದರದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ!

ಮಹಾನಗರಗಳ ಪೈಕಿ ಆತ್ಮಹತ್ಯೆ ದರದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದೇಶದ ನಗರಗಳಲ್ಲಿ ಆತ್ಮಹತ್ಯೆ ದರಗಳ ಕುರಿತಾದ ಡೇಟಾ, ಬೆಂಗಳೂರನ್ನು ಕಳವಳಕಾರಿ ಸ್ಥಾನದಲ್ಲಿರಿಸಿದೆ. ಮಹಾನಗರಗಳಲ್ಲಿ ಬೆಂಗಳೂರು ಆತ್ಮಹತ್ಯೆಗಳ ಸಂಖ್ಯೆಯಲ್ಲಿ ದೆಹಲಿಯ ನಂತರ ಎರಡನೇ ಸ್ಥಾನದಲ್ಲಿದೆ. NCRB ಡೇಟಾ ಹೇಳುವ ಪ್ರಕಾರ, 84.99 ಲಕ್ಷ ಜನಸಂಖ್ಯೆಯೊಂದಿಗೆ ಬೆಂಗಳೂರಿನಲ್ಲಿ 2403 ಆತ್ಮಹತ್ಯೆಗಳನ್ನು ತೋರಿಸುತ್ತದೆ. ಇದು ನಗರದ ಆತ್ಮಹತ್ಯೆ ದರವನ್ನು 28.3 ಎಂದು ಉಲ್ಲೇಖಿಸುತ್ತದೆ.

Railway Minister V.Somanna: ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ರೈಲ್ವೆ ಸಚಿವ ವಿ.ಸೋಮಣ್ಣ

ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ

ಕೇಂದ್ರ ಸರ್ಕಾರ ಮಹತ್ವದ ಲಸಿಕೆ ಅಭಿಯಾನ ಇಂದು ಆರಂಭಿಸಿದೆ. ಆದರೆ ಈ ವ್ಯಾಕ್ಸಿನ್ ಬಗ್ಗೆ ಯಾರಿಗೂ ಮಾಹಿತಿಯಾಗಲಿ, ಪ್ರಚಾರವಾಗಲಿ ಮಾಡಿಲ್ಲ. 16900 ವ್ಯಾಕ್ಸಿನ್ ಜಿಲ್ಲೆಗೆ ಬಂದಿ ದ್ದರೂ ಹೆಣ್ಣು ಮಕ್ಕಳ ಆರೋಗ್ಯ ಬಗ್ಗೆ ಇಲಾಖೆಯು ನಿರಾಸಕ್ತಿ ತೋರಿರುವುದು ಬೇಸರ ತಂದಿದೆ.

MLA S.R.Srinivas: ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನಕ್ಕೆ ಕಾಡು ಗೊಲ್ಲರ ಆಗ್ರಹ

ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನಕ್ಕೆ ಕಾಡು ಗೊಲ್ಲರ ಆಗ್ರಹ

ಕಾಂಗ್ರೆಸ್ ಆಡಳಿತ ತರುವಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರ ಶ್ರಮ ವಿದೆ. ಸಮಸ್ತ ಕಾಡುಗೊಲ್ಲರ ಪರವಾಗಿ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಸಾಮಾಜಿಕ ಶೈಕ್ಷಣಿಕವಾಗಿ ಹಿಂದುಳಿದ ಬುಡಕಟ್ಟು ಸಂಸ್ಕೃತಿಯ ಕಾಡುಗೊಲ್ಲರನ್ನು ಮುಖ್ಯವಾಹಿನಿಗೆ ತರಲು ಮುಖ್ಯಮಂತ್ರಿಗಳು ಗುಬ್ಬಿಯ ಶ್ರೀನಿವಾಸ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳ ಬೇಕು. ಎಲ್ಲಾ ಓಬಿಸಿ ವರ್ಗಗಳನ್ನು ಕೈ ಹಿಡಿದ ವಾಸಣ್ಣ ನಮ್ಮ ಸಮಾಜಕ್ಕೆ ಆಧಾರವಾಗಲಿದ್ದಾರೆ

Chikkaballapur News: ಪೋಶೆಟ್ಟಿಹಳ್ಳಿಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಜಿಲ್ಲಾಧಿಕಾರಿ ಜಿ.ಪ್ರಭು ಅವರಿಂದ ಚಾಲನೆ

ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ

ಜಿಲ್ಲೆಯಲ್ಲಿನ 1850 ಶಾಲೆಗಳಿಂದ 1.60 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇವರೆಲ್ಲ ರಿಗೂ ಗುಣಮಟ್ಟದ ಶಿಕ್ಷಣ ಸಿಗುತ್ತಿರುವ ಬಗ್ಗೆ ಖಾತ್ರಿ ಮಾಡಿಕೊಂಡರೆ ಮಾತ್ರ ಶಿಕ್ಷಕರ ಜವಾ ಬ್ದಾರಿ ಈಡೇರಿದೆ ಎಂದರ್ಥ. ಗುಣಮಟ್ಟದ ಶಿಕ್ಷಣ ದೊರಕದ ಹೊರತು ಮಕ್ಕಳು ಸಶಕ್ತರಾಗುವು ದಿಲ್ಲ

World No Tobacco Day: ವಿಶ್ವ ತಂಬಾಕು ರಹಿತ ದಿನಕ್ಕೆ ನ್ಯಾ.ಟಿ.ಪಿ.ರಾಮಲಿಂಗೇಗೌಡ ಚಾಲನೆ

ವಿಶ್ವ ತಂಬಾಕು ರಹಿತ ದಿನಕ್ಕೆ ನ್ಯಾ.ಟಿ.ಪಿ.ರಾಮಲಿಂಗೇಗೌಡ ಚಾಲನೆ

ಹದಿಹರೆಯದ ವಯಸ್ಸಿನಲ್ಲಿ ದುಶ್ಚಟಗಳ ಪ್ರಭಾವಕ್ಕೆ ಬಲಿಯಾಗುವ ಸಾಧ್ಯತೆ ಹೆಚ್ಚಿದ್ದು, ಈ ವಯಸ್ಸಿನಲ್ಲಿ ಅತಿಹೆಚ್ಚು ಜಾಗರೂಕರಾಗಿರಬೇಕು. ಎಷ್ಟೇ ಕಠಿಣ ಕಾನೂನುಗಳಿದ್ದರು, ವಿಶ್ವ ದಾದ್ಯಂತ ಸರಿಸುಮಾರು 80 ದಶ ಲಕ್ಷ ಜನ ತಂಬಾಕು ಸೇವನೆಯಿಂದ ಸಾವನ್ನಪ್ಪುತ್ತಿದ್ದಾರೆ ಆದ್ದರಿಂದ ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು

Chikkaballapur News: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2026 ; ಕರಪತ್ರ ಬಿಡುಗಡೆ

12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2026 ; ಕರಪತ್ರ ಬಿಡುಗಡೆ

ಜೂ.21 ರಂದು 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ(12th International Yoga Day)ಯನ್ನು“ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಆಚರಿಸ ಲಾಗುತ್ತಿದೆ. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಕೇಂದ್ರದಲ್ಲಿ ಮತ್ತು ಜಿಲ್ಲೆಯ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಏಪ್ರಿಲ್ 21ರಂದು ಯೋಗ ಕಾರ್ಯಕ್ರಮ ನಡೆಯಲಿದೆ.

Shidlaghatta News: ಶ್ರೀರಾಮ ಶೋಭಾಯಾತ್ರೆ ಧಾರ್ಮಿಕ ಜಾಗೃತಿ ಮತ್ತು ಸಾಂಸ್ಕೃತಿಕ ಮೌಲ್ಯಗಳ ಪ್ರತೀಕ: ವೆಂಕಟೇಶ್

ಪ್ರಚಾರ ವಾಹನಕ್ಕೆ ಚಾಲನೆ; ಶೋಭಾಯಾತ್ರೆಗೆ ಭರ್ಜರಿ ಸಿದ್ಧತೆ

ಶ್ರೀರಾಮನ ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಹಾಗೂ ಯುವ ಪೀಳಿಗೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಜೂ.7ರಂದು ಶ್ರೀರಾಮ ಶೋಭಾಯಾತ್ರೆಯನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ಶ್ರೀರಾಮ ಶೋಭಾಯಾತ್ರೆ ಆಚರಣೆ ಸಮಿತಿ ಅಧ್ಯಕ್ಷ ವೆಂಕಟೇಶ್ ತಿಳಿಸಿದರು.

Karnataka Weather: ಯೆಲ್ಲೋ ಅಲರ್ಟ್‌; ರಾಜ್ಯಾದ್ಯಂತ ಮುಂದಿನ 4 ದಿನ ಭರ್ಜರಿ ಮಳೆ ಸಾಧ್ಯತೆ!

ಯೆಲ್ಲೋ ಅಲರ್ಟ್‌; ರಾಜ್ಯಾದ್ಯಂತ ಮುಂದಿನ 4 ದಿನ ಭರ್ಜರಿ ಮಳೆ ಸಾಧ್ಯತೆ!

Karnataka Weather: ಯೆಲ್ಲೋ ಅಲರ್ಟ್‌ ಹಿನ್ನೆಲೆಯಲ್ಲಿ ಜೂನ್‌ 2ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಜೂ.5ರಂದು ಫಲಾನುಭವಿಗಳ ಬೃಹತ್ ಸಮಾವೇಶ

ಜೂ.5ರಂದು ಫಲಾನುಭವಿಗಳ ಬೃಹತ್ ಸಮಾವೇಶ

ಸುಮಾರು ಇಪ್ಪತ್ತು ಕೋಟಿ ರೂಪಾಯಿಗಳ ಮೌಲ್ಯದ ಕೃಷಿ ಸಲಕರಣೆಗಳು, ರೈತರಿಗೆ ಪಂಪು ಮೋಟಾರುಗಳು, ಅಂಗವಿಕಲರಿಗೆ ತ್ರಿಚಕ್ರ ವಾಹನಗಳು, ಹನಿ ನೀರಾವರಿಯ ಸಲಕರಣೆಗಳು, ಸಾರಥಿ ಯೋಜನೆಯಡಿಯಲ್ಲಿ ಆಯ್ಕೆ ಯಾದ ಫಲಾನುಭವಿಗಳಿಗೆ ಕಾರುಗಳು, ಕಾರ್ಮಿಕ ಇಲಾಖೆಯಡಿಯಲ್ಲಿ ವಿವಿಧ ಕುಶಲ ಕರ್ಮಿಗಳಿಗೆ ಸಲಕರಣೆಗಳು, ಹೆಣ್ಣು ಮಕ್ಕಳು ಸ್ವಾವಲಂಬಿಗಳಾಗಿ ಬದುಕಲು ಹೊಲಿಗೆ ಯಂತ್ರಗಳನ್ನು ನೀಡಲಾಗುವುದು

Chikkaballapur News: ಅಪರಾಧ ತಡೆಗೆ ಜಾಗೃತಿಯೊಂದೇ ಪರಿಣಾಮಕಾರಿ ಮಾರ್ಗವಾಗಿದೆ : ಎಸ್ಪಿ ಕುಶಾಲ್ ಚೌಕ್ಸೆ ಅಭಿಮತ

ಅಪರಾಧ ತಡೆಗೆ ಜಾಗೃತಿಯೊಂದೇ ಪರಿಣಾಮಕಾರಿ ಮಾರ್ಗವಾಗಿದೆ

ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಹಳ್ಳಿ ಮಕ್ಕಳ ಸಂಘ, ಜಿಲ್ಲಾ ಪೊಲೀಸ್ ಇಲಾಖೆ,  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಅಪರಾಧ ತಡೆ ಹಾಗೂ ಜನಜಾಗೃತಿ ಅಭಿಯಾನ-2026 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

CPM: ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ತಾವು ರೈತರಪರ ಸರ್ಕಾರ, ರೈತರನ್ನು ಉದ್ದಾರ ಮಾಡುತ್ತೇವೆ ಎಂಬೆಲ್ಲಾ ಸುಳ್ಳು ಹೇಳಿಕೆ ಗಳನ್ನು ನೀಡಿ ಅಧಿಕಾರಕ್ಕೆ ಬಂದ ಎನ್.ಡಿ.ಎ ನೇತೃತ್ವದ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ ದೇಶದ ಜನರನ್ನು ಬಡತನದ ಸಂಕಷ್ಟಕ್ಕೆ ದೂಡುತ್ತಿದೆ. ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ಡೀಸೆಲ್ ದರ ಏರಿಕೆ ಆಗುತ್ತಲೇ ಇದೆ.

MLA SN Subbareddy: ಸುಬ್ಬಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಸುಬ್ಬಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಕ್ಷೇತ್ರದ ಇತಿಹಾಸದಲ್ಲೇ ಒಂದು ಬಾರಿ ಗೆದ್ದ ಶಾಸಕರು ಮತ್ತೆ ಗೆದ್ದಿರುವುದಿಲ್ಲ. ಅದನ್ನು ಸುಳ್ಳು ಮಾಡಿದಂತಹ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ( MLA SN Subba reddy)ಯವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಬೀಚಗಾನಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ ಕೆ.ನರೇಂದ್ರ ಒತ್ತಾಯಿಸಿದ್ದಾರೆ.

Lokayukta Raid: ಬೆಂಗಳೂರಿನಲ್ಲಿ 5 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಸರ್ಕಾರಿ ವಕೀಲೆ!

5 ಸಾವಿರ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಸರ್ಕಾರಿ ವಕೀಲೆ!

ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿ ವಿರುದ್ಧ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸಂತ್ರಸ್ತೆ ಬಳಿ ವಕೀಲೆ ಲಂಚ ಕೇಳಿದ್ದರು. ಅದರಂತೆ ಲಂಚ ಪಡೆಯುತ್ತಿದ್ದಾಗ ವಕೀಲೆ ಸಿಕ್ಕಿಬಿದ್ದಿದ್ದಾರೆ.

ಜಮೀರ್ ಅಹ್ಮದ್‌ಗೆ ಡಿಸಿಎಂ ಸ್ಥಾನ ನೀಡಿ; ಮುಸ್ಲಿಂ ಮುಖಂಡರ ಆಗ್ರಹ

ಜಮೀರ್ ಅಹ್ಮದ್ ಖಾನ್‌ಗೆ ಡಿಸಿಎಂ ಸ್ಥಾನ ನೀಡಿ; ಮುಸ್ಲಿಂ ಮುಖಂಡರ ಆಗ್ರಹ

Vijayanagara News: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪಸಂಖ್ಯಾತರ ನಾಯಕ ಜಮೀರ್ ಅಹ್ಮದ್ ಖಾನ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮುಸ್ಲಿಂ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ಹೊಸಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕೀಲ ಕೊತ್ವಾಲ್ ಮಹಮ್ಮದ್ ಸೇರಿದಂತೆ ಇತರೆ ಮುಖಂಡರು, ಜಮೀರ್ ಅಹ್ಮದ್ ಖಾನ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Bhima river Tragedy: ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿದ ತಂದೆ; ವಿಡಿಯೊ ಮಾಡುತ್ತಾ ಅಸಹಾಯಕನಾಗಿ ನಿಂತ ಮಗ!

ಕಣ್ಣೆದುರೇ ನದಿಯಲ್ಲಿ ಮುಳುಗಿದ ತಂದೆ; ವಿಡಿಯೊ ಮಾಡಿದ ಮಗ!

Kalaburagi News: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಎಮ್ಮೆಯನ್ನು ವಾಪಸ್ ಕರೆತರಲು ಭೀಮಾ ನದಿಗೆ ಇಳಿದ ವೇಳೆ ಈಜಲು ಬಾರದ ಕಾರಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಗ ದಡದಲ್ಲೇ ನಿಂತಿದ್ದರೂ ರಕ್ಷಿಸಲು ಸಾಧ್ಯವಾಗಿಲ್ಲ.

BJP Karnataka: ಬಿಜೆಪಿಯಲ್ಲಿ ಅಶೋಕ್‌ ಸ್ಥಾನಕ್ಕೆ ಸದ್ಯಕ್ಕಿಲ್ಲ ಕುತ್ತು; ಒಬಿಸಿ ಮತ ಸೆಳೆಯಲು ಪಿ.ಸಿ. ಮೋಹನ್‌ಗೆ ಕೇಂದ್ರ ಸಚಿವ ಸ್ಥಾನ?

ಅಶೋಕ್‌ ಸ್ಥಾನಕ್ಕಿಲ್ಲ ಕುತ್ತು; ಪಿ.ಸಿ. ಮೋಹನ್‌ಗೆ ಕೇಂದ್ರ ಸಚಿವ ಸ್ಥಾನ?

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಬೆನ್ನಲ್ಲೇ ಬಿಜೆಪಿಯೂ ಕೆಲ ಆಯಕಟ್ಟಿನ ಹುದ್ದೆಗಳಲ್ಲಿ ಬದಲಾವಣೆ ಮಾಡಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಜಿಬಿಎ ಚುನಾವಣೆ ಹಾಗೂ ನಗರ ಪ್ರದೇಶಗಳಲ್ಲಿ ಪಕ್ಷದ ಸಂಘಟನೆಯನ್ನು ಗಮನದಲ್ಲಿಸಿರಿಕೊಂಡು ಸದ್ಯ ಯಥಾಸ್ಥಿತಿ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

RCB Victory Celebration: ನ್ಯೂಯಾರ್ಕ್‌ನ ಆಲ್ಬನಿಯಲ್ಲಿ ಕನ್ನಡಿಗರಿಂದ ಆರ್‌ಸಿಬಿ ವಿಜಯೋತ್ಸವ ಸಂಭ್ರಮ

ನ್ಯೂಯಾರ್ಕ್‌ನ ಆಲ್ಬನಿಯಲ್ಲಿ ಕನ್ನಡಿಗರಿಂದ ಆರ್‌ಸಿಬಿ ವಿಜಯೋತ್ಸವ ಸಂಭ್ರಮ

ಎರಡನೇ ಬಾರಿ ಆರ್‌ಸಿಬಿ ತಂಡ ಐಪಿಎಲ್‌ ಚಾಂಪಿಯನ್‌ ಆದ ಹಿನ್ನೆಲೆಯಲ್ಲಿ ಅಮೆರಿಕದ ನ್ಯೂಯಾರ್ಕ್ ರಾಜ್ಯದ ಆಲ್ಬನಿಯ ಹಿಂದೂ ಕಲ್ಚರಲ್ ಸೆಂಟರ್‌ನಲ್ಲಿ ಭಾನುವಾರ ಅದ್ಧೂರಿಯಾಗಿ ವಿಜಯೋತ್ಸವ ನಡೆಯಿತು. ಕನ್ನಡಿಗರು ವಿದೇಶದಲ್ಲಿದ್ದರೂ ತಮ್ಮ ನೆಚ್ಚಿನ ತಂಡದ ಗೆಲುವನ್ನು ತವರಿನ ಹಬ್ಬದಂತೆ ಆಚರಿಸಿಕೊಂಡಿದ್ದಾರೆ.

ʼʼಪತ್ನಿ ಗರ್ಭಿಣಿ, ವಿಐಪಿಗಾಗಿ ಸಂಚಾರ ನಿರ್ಬಂಧಿಸೋದು ಎಷ್ಟು ಸರಿ?ʼʼ ಬೆಂಗಳೂರಿನಲ್ಲಿ ರಸ್ತೆ ಮಧ್ಯೆ ಕೂತು ರಾಜ್ಯಪಾಲರ ಬೆಂಗಾವಲು ವಾಹನ ತಡೆದ ವ್ಯಕ್ತಿ

ರಾಜ್ಯಪಾಲರ ಬೆಂಗಾವಲು ವಾಹನ ತಡೆದ ವ್ಯಕ್ತಿ

Bengaluru Traffic: ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ಗೆ ಕುಖ್ಯಾತಿ ಪಡೆದಿದೆ. ಟ್ರಾಫಿಕ್‌ನಲ್ಲಿ ಸಿಲುಕಿದ ವ್ಯಕ್ತಿಯೊಬ್ಬರು ವಿಶಿಷ್ಟ ರೀತಿಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಾಂಧಿ ಶೈಲಿಯ ಪ್ರತಿಭಟನೆಯ ಮೂಲಕ ಗಮನ ಸೆಳೆದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವಿಡಿಯೊ ಬೆಂಗಾವಲು ಪಡೆ ಅಂತಿಮವಾಗಿ ಜನದಟ್ಟಣೆಯ ರಸ್ತೆಯನ್ನು ಹಾದು ಹೋಗುವುದನ್ನು ತೋರಿಸುತ್ತಿದೆ.

Loading...