ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Vinay kulkarni: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ; ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಆದೇಶ

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ

Yogesh Gowda murder case: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನವನ್ನು ರದ್ದುಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Pravasi Prapancha: ಹಿತವಾದ ಮನಸಿಗೆ ಹದವಾದ ಕಾಫಿ; ನೆನಪಲ್ಲುಳಿಯುವ ಮಾತಾಸ್‌ ಘಮ

ನೆನಪಲ್ಲುಳಿಯುವ ಮಾತಾಸ್‌ ಕಾಫಿ ಘಮ

Mathas Coffee: ಮಾತಾಸ್‌ ಕಾಫಿ ಎಂದರೆ ಕರ್ನಾಟಕದ ಜನರಿಗೆ ಎಮೋಷನ್‌ ಆಗಿಬಿಟ್ಟಿದೆ. ಮಾತಾಸ್‌ ಅವರು ಬರಿ ಕಾಫಿ ಪುಡಿ ಮಾರಾಟ ಮಾಡುವುದಕ್ಕಷ್ಟೇ ಸೀಮಿತವಾಗಿಲ್ಲ. ಇವರು ಕಾಫಿ ಸಂಸ್ಕೃತಿಯನ್ನು ಪ್ರತಿಯೊಬ್ಬರ ಜೀವನದ ಭಾಗವಾಗಿಸಲು ಶ್ರಮಿಸುತ್ತಿದ್ದಾರೆ. ನೀವು ಹೊಟೇಲ್‌ಗೆ ಹೋದಾಗ ಅಲ್ಲಿ ಬರುವ ಆ ನೊರೆ ಭರಿತ ಫಿಲ್ಟರ್ ಕಾಫಿಯ ಹಿಂದಿರೋ ಶ್ರಮವೇ ಇವರ ಬ್ರ್ಯಾಂಡ್ ಮೇಲೆ ಜನರಿಟ್ಟಿರುವ ನಂಬಿಕೆ.

Lokadhwani Awards: ʼಲೋಕಧ್ವನಿ’ ಹೆಮ್ಮೆಯ ಸಾಧಕ ಪ್ರಶಸ್ತಿ ಪುರಸ್ಕೃತ ರವೀಂದ್ರ ನಾಯ್ಕ, ಸುರೇಶ್ಚಂದ್ರ ಹೆಗಡೆಗೆ ಶಿರಸಿಯಲ್ಲಿ ಸನ್ಮಾನ

ಲೋಕಧ್ವನಿಯಿಂದ ರವೀಂದ್ರ ನಾಯ್ಕ, ಸುರೇಶ್ಚಂದ್ರ ಹೆಗಡೆಗೆ ಸನ್ಮಾನ

ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ, ಕೆಎಂಎಫ್ ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಅವರಿಗೆ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ಲೋಕಧ್ವನಿ ಹೆಮ್ಮೆಯ ಸಾಧಕರು ಪ್ರಶಸ್ತಿ ಪತ್ರ ಹಾಗೂ ಫಲಕ ನೀಡಿ ಗೌರವಿಸಿದರು. ಶಿರಸಿಯ ಸುಪ್ರಿಯಾ ಇಂಟರ್ ನ್ಯಾಷನಲ್ ಹೊಟೇಲ್‌ನಲ್ಲಿ ಸನ್ಮಾನ ಕಾರ್ಯಕ್ರಮ ನೆರವೇರಿತು.

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ವರ್ಗಾವಣೆ: ಮಹಮ್ಮದ್ ಇಕ್ರಾಮುಲ್ಲಾ ಶರೀಫ್ ನೂತನ ಡಿಸಿ

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ವರ್ಗಾವಣೆ

Kalaburagi News: ರಾಜ್ಯ ಸರ್ಕಾರವು ಶನಿವಾರ ಕಲಬುರಗಿ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಫೌಜಿಯಾ ತರನ್ನುಮ್ ಬಿ. ಅವರನ್ನು ವರ್ಗಾಯಿಸಿ, ಅವರ ಸ್ಥಾನಕ್ಕೆ ಮಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರನ್ನು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

Job Recruitment: ಮಂಜೂರಾತಿ ನೀಡಿರುವ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಮಂಜೂರಾತಿ ನೀಡಿರುವ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಿ: ಸಿಎಂ

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಅಪರ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳೊಂದಿಗೆ ವಿವಿಧ ಇಲಾಖೆಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಿಎಂ ಸಿದ್ದರಾಮಯ್ಯ ಅವರು ಶನಿವಾರ ನಡೆಸಿದರು. ಈ ವೇಳೆ ಖಾಲಿ ಹುದ್ದೆಗಳ ಭರ್ತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Tumkur News: ಪ್ರಿಯಕರನ ಜತೆ ಹೆಂಡತಿ ಪರಾರಿಯಾಗಿದ್ದಕ್ಕೆ ಇಬ್ಬರು ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

ಪ್ರಿಯಕರನ ಜತೆ ಹೆಂಡತಿ ಪರಾರಿ; ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

ಪತ್ನಿ ಪರಪುರುಷನ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ಒಂದು ವಾರದ ಹಿಂದೆ ಪತ್ನಿಯು ಗಂಡ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಓಡಿಹೋಗಿದ್ದಳು. ಇದರಿಂದ ಮನನೊಂದ ಪತಿ ಮಕ್ಕಳನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

BS Yediyurappa: ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಬಿ.ಎಲ್‌.ಸಂತೋಷ್‌ ಭೇಟಿ; 50 ವರ್ಷಗಳ ಯಶಸ್ವಿ ರಾಜಕೀಯ ಜೀವನಕ್ಕೆ ವಿಶ್‌

ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಬಿ.ಎಲ್‌.ಸಂತೋಷ್‌ ಭೇಟಿ

BSY’s 50-year political life: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿರುವ ಬಿ.ಎಲ್‌.ಸಂತೋಷ್‌ ಅವರು, ರಾಷ್ಟ್ರ ಹಾಗೂ ರಾಜ್ಯದ ರಾಜಕೀಯದ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ. ಇನ್ನು 50 ವರ್ಷಗಳ ಯಶಸ್ವಿ ರಾಜಕೀಯ ಪಯಣ ಪೂರೈಸಿದ ಹಿನ್ನೆಲೆಯಲ್ಲಿ ಬಿಎಸ್‌ವೈ ಅವರಿಗೆ ಶುಭಾಶಯ ಸಲ್ಲಿಸಿದ್ದಾರೆ.

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಬಲಿ; ಕುಟುಂಬಸ್ಥರ ವಿರುದ್ಧ ದೂರು ದಾಖಲು

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಬಲಿ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿ ಈ ಘಟನೆ ನಡೆದಿದೆ. ಮೃತಳನ್ನು ವಂದನಾ ಎಂದು ಗುರುತಿಸಲಾಗಿದ್ದು, ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬಾತನ ಜೊತೆ ವಂದನಾ ವಿವಾಹವಾಗಿದ್ದರು.

ಇಂದಿನಿಂದ ನಾಲ್ಕು ದಿನ ಪೀಣ್ಯ  ಫ್ಲೈಓವರ್ ಬಂದ್‌ ; ಬದಲಿ ಮಾರ್ಗ ಏನು?

ಇಂದಿನ ನಾಲ್ಕು ದಿನ ಪೀಣ್ಯ ಫ್ಲೈಓವರ್ ಬಂದ್‌

ಇಂದಿನಿಂದ ನಾಲ್ಕು ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್‌ ಆಗಲಿದೆ. ಮೇ 5ರ ಬೆಳಗ್ಗೆ 5ರಿಂದ ಮೇ 8ರ ಬೆಳಗ್ಗೆ 11ರವರೆಗೆ ಪ್ಲೈಓವರ್​​ ಕ್ಲೋಸ್​​ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಹೀಗಾಗಿ ಫ್ಲೈಓವರ್​ನ 2 ಬದಿಯಲ್ಲಿ ವಾಹನ ಸಂಚಾರಗಳಿಗೆ ನಿರ್ಬಂಧ ವಿಧಿಸಲಾಗಿದ್ದು ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಕೆ ಮಾಡುವಂತೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ತಿಳಿಸಿದ್ದಾರೆ.

ನವಿಲುಗಳ ಸಾವಿನ ಬೆನ್ನಲ್ಲೇ ಈಗ 30 ಕೋಳಿಗಳ ಸಾವು; ತುಮಕೂರಿನಲ್ಲಿ ಹಕ್ಕಿ ಜ್ವರದ ಭೀತಿ

ತುಮಕೂರಿನಲ್ಲಿ ನವಿಲುಗಳ ಸಾವಿನ ಬೆನ್ನಲ್ಲೇ ಈಗ 30 ಕೋಳಿಗಳ ಸಾವು

ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚಾಗಿದೆ. ಇತ್ತೀಚೆಗೆ 44 ನವಿಲುಗಳು ಸಾವನ್ನಪ್ಪಿದ್ದು, ಹಕ್ಕಿಜ್ವರ H5N1 ಸೋಂಕು ದೃಢಪಟ್ಟಿದೆ. ಏಪ್ರಿಲ್ 16 ರಂದು ಘಟನೆ ಮೊದಲಿಗೆ ವರದಿಯಾಗಿತ್ತು. ತದನಂತರ ಒಂದು ವಾರದ ಅವಧಿಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 44 ನವಿಲುಗಳು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದವು.

ಬಿರುಗಾಳಿ–ಆಲಿಕಲ್ಲು ಮಳೆ ಅಬ್ಬರ; ತೋಟಗಾರಿಕೆ ಬೆಳೆಗಳಿಗೆ ಭಾರೀ ಹಾನಿ

ಬಿರುಗಾಳಿ–ಆಲಿಕಲ್ಲು ಮಳೆ ಅಬ್ಬರ; ತೋಟಗಾರಿಕೆ ಬೆಳೆಗಳಿಗೆ ಭಾರೀ ಹಾನಿ

ಕೆ.ಮತ್ತುಕದಹಳ್ಳಿ, ಕನ್ನಮಂಗಲ, ಚಿಂತಡಿಪಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿ ಕಂಡುಬಂದಿದ್ದು, ಮಾವು, ದ್ರಾಕ್ಷಿ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ನೆಲಕಚ್ಚಿವೆ. ಆಲಿಕಲ್ಲು ಮಳೆಯ ಅಬ್ಬರಕ್ಕೆ ಹಣ್ಣುಗಳು ಕೊಯ್ಯುವ ಹಂತದಲ್ಲಿದ್ದ ಬೆಳೆಗಳು ಹಾನಿಗೊಳಗಾಗಿ ರೈತರು ಆರ್ಥಿಕ ನಷ್ಟಕ್ಕೆ ಗುರಿಯಾಗಿದ್ದಾರೆ.

ಜಿಲ್ಲಾಡಳಿತದಿಂದ ಭಗವಾನ್ ಬುದ್ಧ ಜಯಂತಿ ಆಚರಣೆ, ಬುದ್ಧನ ತತ್ತ್ವಗಳನ್ನು ಅಳವಡಿಸಿಕೊಳ್ಳಲು ಜಿಲ್ಲಾಧಿಕಾರಿ ಜಿ ಪ್ರಭು ಕರೆ

ಬುದ್ಧನ ತತ್ತ್ವಗಳನ್ನು ಅಳವಡಿಸಿಕೊಳ್ಳಲು ಜಿಲ್ಲಾಧಿಕಾರಿ ಜಿ ಪ್ರಭು ಕರೆ

ಮಹಾತ್ಮ ಬುದ್ಧರ ತತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿ ಬೇಕಾಗಿದೆ “ಬುದ್ಧ ಜಯಂತಿ ಕೇವಲ ಆಚರಣೆಯ ದಿನವಲ್ಲ, ಇದು ಮಾನವೀಯತೆ, ಶಾಂತಿ, ಕರುಣೆ, ಸಹಬಾಳ್ವೆ, ಪ್ರೀತಿ, ವಾತ್ಸಲ್ಯ ಮತ್ತು ಸಹನೆಗೆ ಮಾರ್ಗದರ್ಶನ ನೀಡುವ ದಿನವಾಗಿದೆ. ಬುದ್ಧರು ನೀಡಿದ ಅಹಿಂಸೆ ಮತ್ತು ಸಮಾನತೆಯ ಸಂದೇಶಗಳು ಇಂದಿನ  ಸಮಾಜಕ್ಕೆ  ಅತ್ಯಂತ ಪ್ರಸ್ತುತವಾಗಿವೆ,” ಎಂದು ತಿಳಿಸಿದರು.

ಇಂದು ಶೃಂಗೇರಿ ಕ್ಷೇತ್ರದ ಅಂಚೆ ಮತಪತ್ರಗಳ ಮರು ಎಣಿಕೆ

ಇಂದು ಶೃಂಗೇರಿ ಕ್ಷೇತ್ರದ ಅಂಚೆ ಮತಪತ್ರಗಳ ಮರು ಎಣಿಕೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆ ಅಂಚೆ ಮತಪತ್ರಗಳ ಮತ ಎಣಿಕೆ ಮೇ 2ರ ಶನಿವಾರ ಬೆಳಗ್ಗೆ 9ಕ್ಕೆ ಆರಂಭಗೊಳ್ಳಲಿದೆ. ಮತ ಎಣಿಕಾ ಕೇಂದ್ರದ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಆದೇಶಿಸಿದ್ದಾರೆ.

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ; ಮತ್ತೆ ಏರಿಕೆಯಾಗಲಿದೆ ಹೋಟೆಲ್‌ ತಿಂಡಿ- ತಿನಿಸು

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ; ಏರಿಕೆಯಾಗಲಿದೆ ಹೋಟೆಲ್‌ ತಿಂಡಿ

ಮಧ್ಯ ಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಗ್ಯಾಸ್‌ ಸಿಲಿಂಡರ್‌ ಸಮಸ್ಯೆಯಿಂದ ಜನ ಹೈರಾಣಾಗಿದ್ದರು. ಇದರ ನಡುವೆಯೇ ಜನಸಾಮಾನ್ಯರಿಗೆ ಮತ್ತೊಂದು ಹೊರೆ ಎನ್ನುವಂತೆ ಮೇ 1ರಿಂದ ವಾಣಿಜ್ಯ ಅನಿಲ (LPG) ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಹೊಟೆಲ್‌ನ ತಿಂಡಿ ತಿನಿಸುಗಳ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.

ಮೇ ತಿಂಗಳಿನಿಂದ ಗೃಹ ಬಳಕೆ ವಿದ್ಯುತ್‌ ದರ ಏರಿಕೆ; ಯೂನಿಟ್ ಗೆ 91 ಪೈಸೆ ಹೆಚ್ಚಳ

ಮೇ ತಿಂಗಳಿನಿಂದ ಗೃಹ ಬಳಕೆ ವಿದ್ಯುತ್‌ ದರ ಏರಿಕೆ

Electricity Bill Hike: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಗೃಹ ಬಳಕೆಯ ವಿದ್ಯುತ್‌ ದರ ಪರಿಷ್ಕರಿಸಿದ್ದು, ಬೆಸ್ಕಾಂ ಮತ್ತು ಸೆಸ್ಕ್‌ ವ್ಯಾಪ್ತಿಯಲ್ಲಿ ವಿದ್ಯುತ್‌ ದರ ಹೆಚ್ಚಿಸಲಾಗಿದೆ. ಉಳಿದಂತೆ ಜೆಸ್ಕಾಂ, ಹೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ದರ ಇಳಿಕೆಯಾಗಿದೆ.

ತಮಿಳುನಾಡು ಅರುಣಾಚಲೇಶ್ವರ ದೇವಾಲಯದ ಮಾದರಿ ಅಭಿವೃದ್ದಿಯೆ ಗಿರಿಪ್ರದಕ್ಷಿಣೆ ಉದ್ದೇಶ

ತಿಂಗಳಿಗೆ ಭಕ್ತರ ಪಾಲ್ಗೊಳ್ಳುವಿಕೆ ಹೆಚ್ಚುತ್ತೆ ಎಂಬುದು ನನ್ನ ನಂಬಿಕೆ

ಇಲ್ಲಿಂದ ನೂರಾರು ಕಿ ಮಿ ದೂರದ ಅರುಣಾಚಲ ದೇವಾಲಯಕ್ಕೆ ಹೋಗಿ ಅಲ್ಲಿನ ದೇವಾಲಯ ಸುತ್ತುವ ಕನಸು ಕೆಲವು ಭಕ್ತರಿಗೆ ಇಡೇರದೆ ಇರಬಹುದು ಅಂತವರೆಲ್ಲರಿಗೂ ನಂದಿ ಗ್ರಾಮದ ಭೋಗನಂದೀಶ್ವರ ದೇವಾಲಯದಲ್ಲಿನ‌ ಅರುಣಾಚಲ ದೇವರ ದರ್ಶನ ಪಡೆದು ಗಿರಿಪ್ರದಕ್ಷಿಣೆ ಮಾಡುವುದರಿಂದ ದೇವರಿಗೆ ಇನ್ನಷ್ಟು ಮೆಚ್ಚುಗೆಯಾಗುತ್ತದೆಂಬ ಉದ್ದೇಶದಿಂದ ನಂದಿಗಿರಿ ಪ್ರದಕ್ಷಿಣೆ ಪ್ರಾರಂಭ ಮಾಡಲಾಗಿದೆ

Gauribidanur News: 4 ಕೋಟಿ ವೆಚ್ಚದ ವಿದ್ಯುತ್ ಚಿತಾಗಾರಕ್ಕೆ ಭೂಮಿ ಪೂಜೆ

4 ಕೋಟಿ ವೆಚ್ಚದ ವಿದ್ಯುತ್ ಚಿತಾಗಾರಕ್ಕೆ ಭೂಮಿ ಪೂಜೆ

ನಗರದ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಂತ್ಯಕ್ರಿಯೆಗೆ ಪೂರಕವಾದ ಆಧುನಿಕ ವ್ಯವಸ್ಥೆ ಯ ಅಗತ್ಯವಿತ್ತು. ಈ ನಿಟ್ಟಿನಲ್ಲಿ ಜನರು ವಿದ್ಯುತ್ ಚಿತಾಗಾರಕ್ಕಾಗಿ ಬಹಳ ವರ್ಷಗಳಿಂದ ಮನವಿ ಮಾಡುತ್ತಿದ್ದರು. ಜನರ ಈ ಬೇಡಿಕೆಯನ್ನು ಸಂಬಂಧಪಟ್ಟ ಸಚಿವರಾದ ರಹೀಂ ಖಾನ್ ಅವರಲ್ಲಿ ವಿಶೇಷ ಮನವಿ ಮಾಡ ಲಾಗಿತ್ತು.

Belagavi News: ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ 9 ಜನರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿಯಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ

Belagavi News: ಬೆಳಗಾವಿ ತಾಲೂಕಿನ ಕೊಂಡುಸಕೊಪ್ಪ ಗ್ರಾಮದಲ್ಲಿ ವೈಯಕ್ತಿಕ ಕಾರಣ ಹಾಗೂ ದೇವಸ್ಥಾನದ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬವೊಂದನ್ನು ಸಾಮಾಜಿಕವಾಗಿ ಬಹಿಷ್ಕಾರ ಹಾಕಿದ ಘಟನೆಗೆ ಸಂಬಂಧಿಸಿದಂತೆ 9 ಜನರ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಿಎಲ್‌ಡಿ ಬ್ಯಾಂಕ್ ಚುನಾವಣೆ: ಕೋರ್ಟ್‌ ಮೆಟ್ಟಿಲೇರಿ ನಿರ್ದೇಶಕ ಸ್ಥಾನ ಗೆದ್ದ ಪ್ರಭಾವತಮ್ಮ

ಕೋರ್ಟ್‌ ಮೆಟ್ಟಿಲೇರಿ ನಿರ್ದೇಶಕ ಸ್ಥಾನ ಗೆದ್ದ ಪ್ರಭಾವತಮ್ಮ

2025 ರಲ್ಲಿ ನಡೆದ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಯಲ್ಲಿ ಬೀಚಗಾನಹಳ್ಳಿ ಮಹಿಳಾ ಮೀಸಲು ಕ್ಷೇತ್ರದಿಂದ ಸರಸ್ವತಮ್ಮ ಎಂಬುವವರು 24 ಮತಗಳನ್ನು ಪಡೆದು ಜಯ ಗಳಿಸಿದ್ದರು. ಅವರ ಪ್ರತಿಸ್ಪರ್ಧಿ ಪ್ರಭಾವತಮ್ಮ 14 ಮತಗಳನ್ನು ಪಡೆದು ಸೋತಿದ್ದರು. ಮತದಾನ ಮಾಡಲು ಅರ್ಹತೆ ಇಲ್ಲದವರಿಂದ ಮತ ಹಾಕಿಸಿಕೊಂಡು ಸರಸ್ವತಮ್ಮ ಜಯಗಳಿಸಿದ್ದಾರೆ ಎಂದು ಆರೋಪಿಸಿ ಪ್ರಭಾವತಮ್ಮ ಜಿಲ್ಲಾ ಉಪನಿಬಂಧಕರ ನ್ಯಾಯಾಲಯದ ಮೊರೆ ಹೋಗಿದ್ದರು.

ತಾತನಾದ ಸಂಭ್ರಮದಲ್ಲಿದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಂಸದ ತೇಜಸ್ವಿ ಸೂರ್ಯ ಅಭಿನಂದನೆ

ʼತಾತʼ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಂಸದ ತೇಜಸ್ವಿ ಸೂರ್ಯ ಅಭಿನಂದನೆ

D.K. Shivakumar: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯಾ ಹೆಗ್ಡೆ ಶುಕ್ರವಾರ (ಮೇ 1) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ನಾಯಕ, ಸಂಸದ ತೇಜಸ್ವಿ ಸೂರ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಡಬಲ್ ಡೆಕ್ಕರ್, ಪಾರ್ಕಿಂಗ್ ಕಟ್ಟಡ, ಮೇಲ್ಸೇತುವೆ, ಅಂಡರ್ ಪಾಸ್ ʼಬ್ರ್ಯಾಂಡ್‌ ಬೆಂಗಳೂರುʼ ನಿರ್ಮಿಸಲು ಸಹಕಾರಿ: ಡಿ.ಕೆ. ಶಿವಕುಮಾರ್‌

ಬೆಂಗಳೂರು ನಗರದಲ್ಲಿ ಸುಮಾರು 44 ಕಿ.ಮೀ. ಉದ್ದದ ಡಬಲ್ ಡೆಕ್ಕರ್: ಡಿಕೆಶಿ

DK Shivakumar: ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ ಮೆಟ್ರೋ ಮಾರ್ಗದ ಕಂಬಗಳಿಗೆ ಡೈನಾಮಿಕ್ ಲೈಟಿಂಗ್ ವ್ಯವಸ್ಥೆ, ಕೆ.ಆರ್. ಮಾರುಕಟ್ಟೆಯಲ್ಲಿ ನೆಲಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆ, ಬನಶಂಕರಿ ಬಸ್ ನಿಲ್ದಾಣದ ಜಂಕ್ಷನ್‌ನಲ್ಲಿ ಸ್ಕೈವಾಕ್ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಿದರು.

ದೊಡ್ಡಬಳ್ಳಾಪುರ ಜನತೆಯ ಬಹುದಿನಗಳ ಕನಸು ನನಸು; ಮೇ 3ರಂದು ಇಎಸ್ಐಸಿ ಆಸ್ಪತ್ರೆಗೆ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ ಚಾಲನೆ

ಮೇ 3ರಂದು ದೊಡ್ಡಬಳ್ಳಾಪುರ ಇಎಸ್ಐಸಿ ಆಸ್ಪತ್ರೆ ಉದ್ಘಾಟನೆ

Dr. Mansukh Mandaviya: ದೊಡ್ಡಬಳ್ಳಾಪುರದಲ್ಲಿ ಸುಸಜ್ಜಿತ 100 ಹಾಸಿಗೆಗಳ ಆಸ್ಪತ್ರೆ ಸಿದ್ದವಾಗಿದ್ದು, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ ಮೇ 3ರಂದು ಉದ್ಘಾಟಿಸಲಿದ್ದಾರೆ. ಜತೆಗೆ ಅದೇ ದಿನ ಬಳ್ಳಾರಿಯಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆಗೆ ವರ್ಚುವಲ್‌ ಆಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಮೇ.3ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಮೇ.3ರಂದು ನೀಟ್ ಪರೀಕ್ಷೆ

ಭಾನುವಾರ ನಡೆಯಲಿರುವ ನೀಟ್ ಪರೀಕ್ಷೆಯು ಮಧ್ಯಾಹ್ನ 2ಗಂಟೆಗೆ ಆರಂಭವಾಗಲಿದೆ. ಆದರೆ ಎಲ್ಲಾ ವಿದ್ಯಾರ್ಥಿಗಳು ಬೆಳಿಗ್ಗೆ 11 ಗಂಟೆಗೆ ಆಯಾ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ತಪಾಸಣೆಗೆ ಒಳಪಟ್ಟು ತಮ್ಮ ಕೊಠಡಿಗಳಿಗೆ ತೆರಳಬಹುದಾಗಿರುತ್ತದೆ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

Vishwavani Impact: ಅನರ್ಹ ಮತದಾರರಿದ್ದಾರೆ ಎಂಬ ಕೂಗಿನ ಸದ್ಧಡಗಿಸಿದ ಜವಾಬ್ದಾರಿ ಸ್ಥಾನದಲ್ಲಿರುವ ಶಿಕ್ಷಕರು

ಶಾಂತವಾಗಿ ನಡೆದ ಶಿಕ್ಷಕರ ಸಂಘದ ಚುನಾವಣೆ : 583 ಮತಗಳಿಗೆ 469 ಮತ ಚಲಾವಣೆ

ಬೆಳಿಗ್ಗೆ 8.30ಕ್ಕೆ ಪ್ರಾರಂಭವಾದ ಮತದಾನ ಮಂದಗತಿಯಲ್ಲಿ ನಡೆದರೂ ಮಧ್ಯಾಹ್ನದ 4.30ರ ವೇಳೆಗೆ 469 ಮಂದಿ ಮತಚಲಾಯಿಸುವ ಮೂಲಕ ಶೇ.80ರಷ್ಟು ಮತದಾನ ವಾಗುವಂತೆ ನೋಡಿಕೊಂಡರು. ಅನರ್ಹರನ್ನು ಹೊರತುಪಡಿಸಿ ಲೆಕ್ಕಾಚಾರ ಮಾಡಿದರೆ 498 ಮತದಾರರ ಪೈಕಿ 469 ಮಂದಿ ಮತ ಚಲಾಯಿಸಿದ್ದು ಶೇ.94.17ರಷ್ಟು ರಷ್ಟು ಮತದಾನವಾಗಿದೆ

Loading...