ಒಳನಾಡಿನಲ್ಲಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ
Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 °C ಮತ್ತು 19°C ಇರುವ ಸಾಧ್ಯತೆ ಇದೆ.
Pralhad Joshi: ₹ ಚಿಹ್ನೆ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮಾಡಿದ್ದಲ್ಲವೇ? ಪಿ. ಚಿದಂಬರಂ ವಿತ್ತ ಸಚಿವರಾಗಿದ್ದರು. ಎ.ರಾಜಾ, ದಯಾನಿಧಿ ಮಾರನ್ ಸೇರಿದಂತೆ ಅನೇಕರು ಮಂತ್ರಿಗಳಾಗಿದ್ದರು. ಅದೂ ಈ ಚಿಹ್ನೆ ಡಿಸೈನ್ ಮಾಡಿದವರೂ ತಮಿಳುನಾಡಿನವರೇ. ಈ ಅಭಿಮಾನವೂ ಇಲ್ಲದಾಯಿತೇ ಇವರಿಗೆ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.
Bengaluru News: ರಮಣ ಮಹರ್ಷಿ ಸೆಂಟರ್ ಫಾರ್ ಲರ್ನಿಂಗ್ ಮತ್ತು ರಮಣಶ್ರೀ ಪ್ರತಿಷ್ಠಾನ ವತಿಯಿಂದ ಮಣಿ ಷಡಕ್ಷರಿ ಅವರ ಸ್ಮರಣಾರ್ಥ ಭಗವಾನ್ ರಮಣ ಮಹರ್ಷಿಗಳನ್ನು ಕುರಿತ ವಿಶೇಷ ಉಪನ್ಯಾಸಗಳು ಮತ್ತು ಸಂಗೀತ ಕಾರ್ಯಕ್ರಮವು ಮಾ.16 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರು ನಗರದ ಮೇಕ್ರಿ ಸರ್ಕಲ್ನಲ್ಲಿರುವ ರಮಣ ಮಹರ್ಷಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.
Pralhad Joshi: ಗೋಲ್ಡ್ ಸ್ಮಗ್ಲಿಂಗ್ ಆರೋಪಿ ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರೂ ಕೇಳಿ ಬರುತ್ತಿದೆ ಎನ್ನಲಾಗುತ್ತಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Book Release: ಡಿವಿಜಿ ಬಳಗ ಪ್ರತಿಷ್ಠಾನದಿಂದ ಡಿವಿಜಿ ಕುರಿತಾಗಿ ಕಾಮಿಕ್ಸ್ ಶೈಲಿಯಲ್ಲಿ ವಿನ್ಯಾಸಗೊಂಡಿರುವ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಮೂಡಿಬಂದಿರುವ ಎರಡು ILLUSTRATIVE ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು (ʼಎಲ್ಲರೊಳಗೊಂದಾಗುʼ ಮಕ್ಕಳಿಗಾಗಿ ಡಿವಿಜಿ, ʼBe one with the universe’ DVG for children) ಮಾ.16 ರಂದು ಭಾನುವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರು ನಗರದ ಅಂಬೇಡ್ಕರ್ ವೀಧಿಯಲ್ಲಿರುವ ಮಿಥಿಕ್ ಸೊಸೈಟಿಯಲ್ಲಿ ಏರ್ಪಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.
Dinesh Gundu Rao: ಲಸಿಕಾ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ HPV ಲಸಿಕೆ ನೀಡುವುದನ್ನು ಒಂದು ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ಜಾರಿಗೊಳಿಸುವಂತೆ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಈ ವರ್ಷದಿಂದ ಯೋಜನೆಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಎರಡೂ ಗ್ರಾಮಗಳ ಜನತೆಯಲ್ಲಿ ಕಾಣಿಸಿಕೊಂಡಿರುವ ಅನಾರೋಗ್ಯ ಸಮಸ್ಯೆಗೆ ಗ್ರಾಮ ಪಂಚಾ ಯಿತಿ ಸರಬರಾಜು ಮಾಡುತ್ತಿರುವ ನೀರೇ ಮೂಲವಾಗಿದೆ ಎಂಬ ಆರೋಪ ಗ್ರಾಮಸ್ಥರಿಂದ ಬಂದಿದೆ.ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಸ್ಯೆ ಕಾಣಿಸಿಕೊಂಡಿರುವ ಗ್ರಾಮಗಳಲ್ಲಿ ಆರೋಗ್ಯ ತಪಾಸಣೆಯೊಂದಿಗೆ ಮನೆ ಮನೆ ಸರ್ವೆ ನಡೆಸಿದ್ದಾರೆ.
ಬೆಂಕಿ ಹತ್ತಿದ ತಕ್ಷಣ ಜನರು ಜೀವ ಕೈಯಲ್ಲಿಟ್ಟುಕೊಂಡು ಮಕ್ಕಳು ಮರಿಗಳನ್ನು ಎತ್ತಿ ಕೊಂಡು ಕೈಗೆ ಸಿಕ್ಕ ಸಾಮಾನುಗಳನ್ನು ಹಿಡಿದುಕೊಂಡು ಗುಡಿಸಲು ಗಳಿಂದ ಹೊರಗೆ ಓಡಿಬಂದರು. ಆಕಸ್ಮಿಕವಾಗಿ ಒಂದು ಗುಡಿಸಲಿಗೆ ತಗುಲಿದ ಬೆಂಕಿ ಕ್ಷಣಾರ್ಧದಲ್ಲಿ ಉಳಿದ ವಕ್ಕೂ ವ್ಯಾಪಿಸಿತು. ಗಾಳಿ ರಭಸವಾಗಿ ಬೀಸುತ್ತಿದ್ದ ಕಾರಣ ರಾತ್ರಿ ೮ ಗಂಟೆಯವರೆಗೂ ಬೆಂಕಿ ಹೊತ್ತಿ ಉರಿಯುತ್ತಿತ್ತು
Dhruti P Simha: ಸಮೀರಾ ಸಿಂಹ. ಪಿ ಮತ್ತು ಸುಕೃತಾ ರಾವ್ ಅವರ ಪುತ್ರಿ ಧೃತಿ ಪಿ. ಸಿಂಹ, 6ನೇ ವಯಸ್ಸಿನಲ್ಲಿ ವಿದುಷಿ ಅಂಜಲಿ ಕೆ.ಆರ್ ಅವರ ಮಾರ್ಗದರ್ಶನದಲ್ಲಿ ಭರತನಾಟ್ಯ ಪ್ರಯಾಣ ಆರಂಭಿಸಿದರು. ಇವರ ಭರತನಾಟ್ಯ ರಂಗಪ್ರವೇಶ ʼನಾಟ್ಯ ನಿವೇದನಂʼ ಕಾರ್ಯಕ್ರಮ ಮಾ.16ರಂದು ನಗರದ ಜೆ.ಸಿ.ರಸ್ತೆಯ ಎಡಿಎ ರಂಗಮಂದಿರದಲ್ಲಿ ನಡೆಯಲಿದೆ.
Ranya Rao case: ನಟಿ ರನ್ಯಾ ರಾವ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾನೂನು ಬಾಹಿರವಾಗಿ ಶಿಷ್ಟಾಚಾರ ಸೌಲಭ್ಯ ಸಿಕ್ಕ ವಿಚಾರ ಬಹಿರಂಗವಾಗಿ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ವಿರುದ್ಧ ತನಿಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖಾ ತಂಡವನ್ನು ಸರ್ಕಾರ ರಚಿಸಿತ್ತು. ಇದೀಗ ಡಿಜಿಪಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.
ಕೋರ್ಟಿನ ನಿರ್ದೇಶನದಂತೆ ಸಿಬ್ಬಂದಿ ಸ್ಥಿರಾಸ್ತಿ ಚರಾಸ್ತಿ, ಮಾರುಕಟ್ಟೆ ಸರಹದ್ದು ಎಲ್ಲವೂ ಸೇರಿ ಶೇ.53ರಷ್ಟು ಕೋಲಾರಕ್ಕೆ ಮತ್ತು ಶೇ 47ರಷ್ಟು ಚಿಕ್ಕಬಳ್ಳಾಪುರಕ್ಕೆ ಎಂಬ ಐಕ್ಯಮತದಲ್ಲಿ 53/ 47ರ ಅನುಪಾತದಲ್ಲಿ ವಿಭಜನೆ ಆಗಿದ್ದು ಮಾ.1, 2025ರಿಂದಲೇ ಸ್ವತಂತ್ರವಾಗಿ ಚಿಮುಲ್ ಆರ್ಥಿಕ ವಹಿವಾಟು ನಡೆಸುತ್ತಿದೆ ಎಂದರು.
Karnataka Weather: ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಶುಕ್ರವಾರ ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 40.4 ಡಿ.ಸೆ ದಾಖಲಾಗಿದೆ. ಇನ್ನು ಚಾಮರಾಜನಗರದಲ್ಲಿ ಅತೀ ಕಡಿಮೆ ಉಷ್ಣಾಂಶ 15.6 ಡಿ.ಸೆ. ದಾಖಲಾಗಿದೆ. ಇನ್ನು ಮಾ.18 ಮತ್ತು 19ರಂದು ಉತ್ತರ ಒಳನಾಡಿನ ಗುಲ್ಬರ್ಗಾ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಸಿ ಗಾಳಿ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಮ್ಮ ತಂದೆ ತಾಯಿ ಶಾಲೆಯ ಮುಖ ನೋಡಿದವರಲ್ಲ. ಅವರಿವರ ಮನೆಯಲ್ಲಿ ಜೀತ ಗಾರಿಕೆ ಕೆಲಸ ಮಾಡಿಕೊಂಡು, ನಂತರದಲ್ಲಿ ಕೂಲಿ ನಾಲಿ ಮಾಡಿದರೂ ನಾನು ನನ್ನ ತಂಗಿ ತಮ್ಮ ಮೂರು ಮಕ್ಕಳನ್ನು ಉನ್ನತ ಶಿಕ್ಷಣದವರೆಗೆ ಓದಿಸಿ ಉದ್ಯೋಗ ಪಡೆಯುವಂತೆ ಮಾಡಿದ್ದಾರೆ. ಇವರ ಋಣವನ್ನು ತೀರಿಸುವ ಸಣ್ಣ ಪ್ರಯತ್ನವೇ ಈ ಪ್ರತಿಭಾ ಪುರಸ್ಕಾರ
ಬೆಂಗಳೂರಿನ ತಳಮಟ್ಟದಲ್ಲಿ ನಾಗರಿಕರ ಜವಾಬ್ದಾರಿಯನ್ನು ಯಶಸ್ವಿಯಾಗಿ ಮುನ್ನಡೆ ಸುವ ಮತ್ತು ದಕ್ಷ ಆಡಳಿತದ ಮೂಲಕ ಸಮಾಜದಲ್ಲಿ ಬದಲಾವಣೆ ಸೃಷ್ಟಿಸುವ ನಾಯಕರನ್ನು ರೂಪಿ ಸುವುದೇ ಈ ತರಬೇತಿಯ ಮೂಲ ಉದ್ದೇಶ. ಕಳೆದ ಒಂಬತ್ತು ವರ್ಷಗಳಲ್ಲಿ, 400ಕ್ಕೂ ಹೆಚ್ಚು ನಾಗರಿಕರಿಗೆ ತರಬೇತಿ ನೀಡಲಾಗಿದ್ದು 10ನೇ ಆವೃತ್ತಿಗೆ ಅರ್ಜಿ ಆಹ್ವಾನಿಸಲಾಗಿದೆ
Lakshmi Hebbalkar: ದೇಶದಲ್ಲಿ ಕಾಂಗ್ರೆಸ್ಗೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್ಗೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಶನಿವಾರ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿಅವರು ಮಾತನಾಡಿದರು.
DK Shivakumar: ಮೇ 20ರಂದು ಸರ್ಕಾರದ ಎರಡು ವರ್ಷಗಳ ಸಂಭ್ರಮಾಚರಣೆ ನಡೆಯಲಿದ್ದು, ರಾಜ್ಯದೆಲ್ಲೆಡೆ ಇದನ್ನು ಹಬ್ಬದಂತೆ ಕೊಂಡಾಡಬೇಕು. ಎಲ್ಲ ಗ್ರಾಮಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಮನೆ ಮುಂದೆ ರಂಗೋಲಿ ಸ್ಪರ್ಧೆ ನಡೆಸಬೇಕು. ಅತ್ಯುತ್ತಮವಾಗಿ ರಂಗೋಲಿ ಹಾಕಿದವರಿಗೆ ಬಹುಮಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
BS Avinash: ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳ ಜತೆಗೆ ‘ಗುರುದೇವ್ ಹೊಯ್ಸಳ’ ಚಿತ್ರದಲ್ಲೂ ತಮ್ಮ ಅಭಿನಯದ ಮೂಲಕ ಗಮನ ಸೆಳೆದಿರುವ ಅವಿನಾಶ್, ಒಬ್ಬ ಒಳ್ಳೆಯ ಪೋಷಕ ನಟನಾಗಿ ಗುರುತಿಸಿಕೊಳ್ಳುವಾಸೆ ಇದೆ. ಒಳ್ಳೆಯ ಪಾತ್ರಗಳಿಗಾಗಿ ಎದುರು ನೋಡುತ್ತಿದ್ದೇನೆ ಎನ್ನುತ್ತಾರೆ ಅವಿನಾಶ್. ಈ ಕುರಿತ ವಿವರ ಇಲ್ಲಿದೆ.
Belagavi Accident: ಬೆಳಗಾವಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿದ್ದರಿಂದ ವ್ಯಾಗನರ್ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಕಾರಿನೊಳಗೆ ಸಿಲುಕಿದ್ದ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ.