ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಕೆಪಿಎಸ್‌ಸಿ: ಇಬ್ಬರ ಸಿಐಡಿ ತನಿಖೆ ಅಂತ್ಯ, ವಶಕ್ಕೆ ನೀಡಲು ಕೋರ್ಟ್‌ಗೆ ಇಡಿ ಅರ್ಜಿ

ಸಿಐಡಿ ಮುಗೀತು, ಇನ್ನು ಜ್ಞಾನೇಂದ್ರ, ಕನ್ನಾಳೆಗೆ ಇಡಿ ಬಿಸಿ

ಜಾಮೀನು ಅರ್ಜಿಯ ವಿಚಾರಣೆಯೂ ಗುರುವಾರ ನಡೆಯಲಿದೆ. ಶಾಂತ ಹೊಸಮನಿ ಮನೆಗಳಲ್ಲಿ ಸಿಐಡಿ ಶೋಧ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಮತ್ತೊಬ್ಬ ಆರೋಪಿ ಶಾಂತ ಹೊಸಮನಿ ಅವರ ನಗರದ ಹೊಸಕೆರೆಹಳ್ಳಿ ಹಾಗೂ ನಾಗರಬಾವಿಯಲ್ಲಿರುವ ನಿವಾಸಗಳ ಮೇಲೆ ಸಿಐಡಿ ಅಧಿಕಾರಿಗಳು ಬುಧವಾರ ಶೋಧ ನಡೆಸಿದರು. ದಾಳಿ ಸಂದರ್ಭದಲ್ಲಿ ಶಾಂತ ಹೊಸಮನಿ ಮನೆಯಲ್ಲಿ ಇರಲಿಲ್ಲ.

ಬಡವರಿಗೆ ಡಿಕೆಶಿ‌ ಸರಕಾರದಿಂದ 15 ಲಕ್ಷ ಉಚಿತ ನಿವೇಶನ ಹಂಚಿಕೆ

ಬಡವರಿಗೆ ಡಿಕೆಶಿ‌ ಸರಕಾರದಿಂದ 15 ಲಕ್ಷ ಉಚಿತ ನಿವೇಶನ ಹಂಚಿಕೆ

ಸರಕಾರಕ್ಕೆ ಗುರುವಾರ 100 ದಿನಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯ ನಂತರ ಡಿಸಿಎಂ ಪರಮೇಶ್ವರ್ ಈ ಮಾಹಿತಿಯನ್ನು ಹಂಚಿಕೊಂಡರು. ಒಂದು ಕಾಲಕ್ಕೆ ವಿದ್ಯಾರ್ಥಿ ಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ವಿದ್ಯಾರ್ಥಿ ಸಂಘದ ಚುನಾವಣೆಯನ್ನು 3 ದಶಕಗಳ ನಂತರ ನಡೆಸಲು ರಾಜ್ಯ ಸರಕಾರ ಅನುಮೋದನೆ ನೀಡಿದೆ.

Padayatra: ಇಂದು ಬಳ್ಳಾರಿಯಲ್ಲಿ ಸಮಾರೋಪ ಯಾತ್ರೆ

ಇಂದು ಬಳ್ಳಾರಿಯಲ್ಲಿ ಸಮಾರೋಪ ಯಾತ್ರೆ

ರಾಯಚೂರಿನ ಲಿಂಗಸೂಗೂರಿನಿಂದ ಆರಂಭವಾದ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜನರ ಸಮಸ್ಯೆಗಳನ್ನು ಆಲಿಸುತ್ತಾ ಸರಕಾರದ ವಿರುದ್ಧ ಹೋರಾಟ ರೂಪಿಸಿದ್ದಾರೆ. ಗುರುವಾರದ ಸಮಾರೋಪ ದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಸಂಸದರು, ಶಾಸಕರು ಹಾಗೂ 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸ ಲಿದ್ದಾರೆ.

3 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಸರ್ಕಾರದಿಂದಲೇ ಉಳುಮೆ; ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆಗೆ ಸಚಿವ ಸಂಪುಟ ಅಸ್ತು

3 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿದ್ದರೆ ಸರ್ಕಾರದಿಂದಲೇ ಉಳುಮೆ

Karnataka Cabinet Meeting: ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆಯಡಿ ಸರ್ಕಾರದ ವತಿಯಿಂದಲೇ ಟ್ರ್ಯಾಕ್ಟರ್‌ಗಳನ್ನು ಬಾಡಿಗೆಗೆ ಪಡೆದು ರೈತರ ಜಮೀನುಗಳಲ್ಲಿ ಉಚಿತವಾಗಿ ಉಳುಮೆ ಮಾಡಿಕೊಡಲಾಗುತ್ತದೆ. 3 ಎಕರೆ ಕಡಿಮೆ ಕೃಷಿ ಭೂಮಿ ಹೊಂದಿರುವ ಬಡ ರೈತರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ.

ಫ್ರಾನ್ಸ್‌ನಲ್ಲಿ ಸಚಿವ ಎಂ.ಬಿ. ಪಾಟೀಲ್‌; ಲಿಸಿ ಏರೋಸ್ಪೇಸ್, ಆರ್ಕೆಮಾ ಕಂಪನಿಗಳ ಜತೆ ಮಹತ್ವದ ಮಾತುಕತೆ

ಫ್ರಾನ್ಸ್‌ನಲ್ಲಿ ಪ್ರಮುಖ ಕಂಪನಿಗಳ ಜತೆ ಸಚಿವ ಎಂ.ಬಿ. ಪಾಟೀಲ್‌ ಮಾತುಕತೆ

MB Patil: ಫ್ರಾನ್ಸ್ ಪ್ರವಾಸದಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ್ ‌ಅವರು ಮೂರನೇ ದಿನವಾದ ಬುಧವಾರ ಲಿಸಿ ಏರೋಸ್ಪೇಸ್, ಆಬರ್ಟ್ ಅಂಡ್ ಡುವಲ್‌ ಮತ್ತು ಆರ್ಕೆಮಾ ಕಂಪನಿಗಳ ಜತೆ ಮಹತ್ತ್ವದ ಮಾತುಕತೆ ನಡೆಸಿದ್ದಾರೆ.

Drone Testing Facility: ಚಿಕ್ಕಬಳ್ಳಾಪುರದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ: ಪ್ರಿಯಾಂಕ್ ಖರ್ಗೆ

ಚಿಕ್ಕಬಳ್ಳಾಪುರದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಸಂಪುಟ ಅನುಮೋದನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಜೀಡರಹಳ್ಳಿ ಗ್ರಾಮದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸುಮಾರು 19.26 ಎಕರೆ ಸರ್ಕಾರಿ ಜಮೀನಿನಲ್ಲಿ ಸ್ಥಾಪನೆಯಾಗಲಿರುವ ಈ ಕೇಂದ್ರಕ್ಕೆ ರಾಜ್ಯ ಸರ್ಕಾರವು ಒಟ್ಟು ₹42.83 ಕೋಟಿ ನೆರವು ನೀಡಲಿದೆ.

ಜಗತ್ತಿನ ವಿವಿಧ ದೇಶಗಳ ತಜ್ಞರನ್ನು ಒಂದೇ ವೇದಿಕೆಗೆ ತರಲಿರುವ ಎಸ್‌.ಡಿ.ಎಂ ಆಯುರ್ವೇದ ಕಾಲೇಜಿನ ಆರನೇ ಅಂತರರಾಷ್ಟ್ರೀಯ ಸಮ್ಮೇಳನ

ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌.ಡಿ.ಎಂ) ಆಯುರ್ವೇದ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ, ಉಡುಪಿ ಕ್ಷಮತ್ವಂ-2026 ರಲ್ಲಿ ಆಟೋಇಮ್ಯೂನ್ ಕಾಯಿಲೆಗಳ ಕುರಿತ ಆಯುರ್ವೇದದ ಆರನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು 2026ರ ಸೆ.30 ಮತ್ತು ಅಕ್ಟೋಬರ್ 1 ರವರೆಗೆ, ಉಡುಪಿಯ ಭಾವಪ್ರಕಾಶ ಸಭಾಂಗಣದಲ್ಲಿ ಆಯೋಜಿಸಿದೆ.

Chikkaballapur News: ಎಚ್‌.ಎನ್‌.ವ್ಯಾಲಿ ನೀರು ಅಕ್ರಮ ಬಳಕೆದಾರರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ಜಿ.ಪ್ರಭು

ಎಚ್‌.ಎನ್‌.ವ್ಯಾಲಿ ನೀರು ಅಕ್ರಮ ಬಳಕೆದಾರರ ವಿರುದ್ಧ ಕಾನೂನು ಕ್ರಮ

ಎಚ್‌.ಎನ್‌. ವ್ಯಾಲಿ ನೀರನ್ನು ಕೃಷಿ ಸೇರಿದಂತೆ ಇತರ ನೇರ ಬಳಕೆಗೆ ಪಡೆಯುವುದನ್ನು ನಿಷೇಧಿಸ ಲಾಗಿದ್ದು, ಅಕ್ರಮವಾಗಿ ನೀರು ಪಡೆಯುವುದನ್ನು ತಡೆಯಲು ಕಂದಾಯ, ಪೊಲೀಸ್, ಸಣ್ಣ ನೀರಾವರಿ ಹಾಗೂ ಬೆಸ್ಕಾಂ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಜಿಲ್ಲಾ ಮತ್ತು ತಾಲೂಕು ಮಟ್ಟದ ಕಾರ್ಯ ಪಡೆಗಳನ್ನು ರಚಿಸಲಾಗಿದೆ.

Bengaluru to Belagavi Train: ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಿಹಿ ಸುದ್ದಿ; ಬೆಂಗಳೂರು- ಬೆಳಗಾವಿ ನಡುವೆ ವಿಶೇಷ ರೈಲುಗಳ ಸಂಚಾರ

ಗಣೇಶ ಹಬ್ಬದ ಹಿನ್ನೆಲೆ ಬೆಂಗಳೂರು- ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲು ನೈರುತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲುಗಳ ವೇಳಾಪಟ್ಟಿ ಇಲ್ಲಿದೆ.

Gauribidanur News: ಅಭಿವೃದ್ಧಿಗಿಂತ ಶಾಸಕರಿಗೆ ಪ್ರಚಾರವೇ ಮುಖ್ಯ: ಮಂಜುನಾಥ್ ಆರೋಪ

ಅಭಿವೃದ್ಧಿಗಿಂತ ಶಾಸಕರಿಗೆ ಪ್ರಚಾರವೇ ಮುಖ್ಯ

ಶಾಸಕರ ಬೆಂಬಲಿಗರು ವಿವಿಧ ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳಂತೆ ಕಾರ್ಯನಿರ್ವಹಿಸು ತ್ತಿದ್ದಾರೆ ಎಂಬ ದೂರುಗಳ ಬಗ್ಗೆಯೂ ತನಿಖೆ ಅಗತ್ಯವಿದೆ. ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾದ ಅನುದಾನ, ವಿವಿಧ ಕಾಮಗಾರಿಗಳಿಗೆ ಖರ್ಚಾದ ಮೊತ್ತದ ಸಂಪೂರ್ಣ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು

Chinthamani News: ನೀರಿನ ಅಭಾವ, ಯುಜಿಡಿ ಸಮಸ್ಯೆ: ಉಗ್ರ ಹೋರಾಟದ ಎಚ್ಚರಿಕೆ

ನೀರಿನ ಅಭಾವ, ಯುಜಿಡಿ ಸಮಸ್ಯೆ: ಉಗ್ರ ಹೋರಾಟದ ಎಚ್ಚರಿಕೆ

ನಗರದಲ್ಲಿರುವ ಬೋರ್‌ವೆಲ್‌ಗಳ ಸಂಖ್ಯೆ, ಕಾರ್ಯ ನಿರ್ವಹಿಸುತ್ತಿರುವ ಹಾಗೂ ನಿಷ್ಕ್ರಿಯವಾಗಿರುವ ಬೋರ್‌ವೆಲ್‌ಗಳ ಕುರಿತು ಅಧಿಕಾರಿಗಳ ಬಳಿ ಸಮರ್ಪಕ ಮಾಹಿತಿ ಇಲ್ಲ. ನೀರಿನ ಪ್ರಮಾಣ ತಿಳಿಯಲು ನೀರಿನ ಹರಿವಿನ ಮಾಪಕ ಅಳವಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು

Tumkur News: ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಕ್ರಮ: ಹಿರೇಹಳ್ಳಿ ಕೆರೆ ಒತ್ತುವರಿ ತೆರವು ಆರಂಭ

ತುಮಕೂರಿನ ಹಿರೇಹಳ್ಳಿ ಕೆರೆ ಒತ್ತುವರಿ ತೆರವು ಆರಂಭ

Tumkur News: ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರ ಕಟ್ಟುನಿಟ್ಟಿನ ಸೂಚನೆ ಹಾಗೂ ಇತ್ತೀಚಿನ ಸ್ಥಳ ಪರಿಶೀಲನೆಯ ಬೆನ್ನಲ್ಲೇ, ತೆರವು ಕಾರ್ಯಾಚರಣೆ ತೀವ್ರಗೊಂಡಿದೆ.

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ: ರಾಘವೇಶ್ವರ ಭಾರತೀ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ

Sri Raghaveshwara Bharathi Swamiji: ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ. ಬಹಳಷ್ಟು ಚರ್ಚೆಗಳು ನಡೆದು, ವಿಮರ್ಶೆಗಳ ನಂತರ ಸಿದ್ಧವಾಗುವುದಕ್ಕೆ ಸಿದ್ಧಾಂತ ಎಂದು ಹೆಸರು. ಸಿದ್ಧಾಂತ ಎಂಬುದು ಸಾರ್ವಕಾಲಿಕ ಸತ್ಯ. ಆಧುನಿಕ ಚಿಂತನೆಗಳಂತೆ ಅದು ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವುದಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಬೆಂಗಳೂರಿನ ರಸ್ತೆಬದಿಯ ಅಂಗಡಿಯಿಂದ ಮಧ್ಯರಾತ್ರಿ ಗಣೇಶ ವಿಗ್ರಹ ಕಳವು: ಸಿಸಿಟಿವಿ ದೃಶ್ಯ ವೈರಲ್

ಬೆಂಗಳೂರಿನಲ್ಲಿ ಅಘಾತಕಾರಿ ಘಟನೆ: ರಸ್ತೆಬದಿ ಮಳಿಗೆಯಿಂದ ಗಣೇಶ ಮೂರ್ತಿ ಕಳವು

Viral News: ರಸ್ತೆಬದಿಯ ಮಳಿಗೆಯಿಂದಲೇ ಗಣೇಶ ಮೂರ್ತಿಯನ್ನು ತಡರಾತ್ರಿ ಕಳ್ಳತನ ಮಾಡಿರುವ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನ ದಾಸರಹಳ್ಳಿ ಪ್ರದೇಶದ ರಸ್ತೆ ಬದಿಯ ಅಂಗಡಿಯಲ್ಲಿ ಮಾರಾಟಕ್ಕೆ ಇಡಲಾಗಿದ್ದ ಗಣೇಶ ವಿಗ್ರಹವನ್ನು ಕಳ್ಳತನ ಮಾಡಲಾಗಿದ್ದು ಈ ಸಂಪೂರ್ಣ ಕೃತ್ಯ ಹತ್ತಿರದ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ.

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ; ನಾಳೆ ವಿಧಾನಸೌಧದಲ್ಲಿ ʼಶತಕದ ಪಥ, ಪ್ರಗತಿಯ ರಥʼ ವಿಶೇಷ ಕಾರ್ಯಕ್ರಮ

ಡಿಕೆಶಿ ಸರ್ಕಾರಕ್ಕೆ 100 ದಿನ; ನಾಳೆ ʼಶತಕದ ಪಥ, ಪ್ರಗತಿಯ ರಥʼ ಕಾರ್ಯಕ್ರಮ

DK Shivakumar's government: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ 'ದೃಢ ಕರ್ನಾಟಕದ ಸಂಕಲ್ಪ - ಶತಕದ ಪಥ, ಪ್ರಗತಿಯ ರಥ' ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ.

Cabinet Meeting: ಕರ್ನಾಟಕದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಂಪುಟ ಒಪ್ಪಿಗೆ

Student Union Elections: ರಾಜ್ಯದ ಕಾಲೇಜು ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಮತ್ತು ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಿಷೇಧಿಸಿತ್ತು. ಇದೀಗ ಕಾಲೇಜುಗಳಲ್ಲಿ ಮತ್ತೆ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಲು ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.

Saree Shopping Ideas 2026: ಗೌರಿ ಹಬ್ಬಕ್ಕೆ ಟ್ರೆಂಡಿಯಾಗಿರುವ ಸೀರೆ ಶಾಪಿಂಗ್‌ಗೆ ಇಲ್ಲಿವೆ 5 ಸಿಂಪಲ್ ಐಡಿಯಾ

ಗೌರಿ ಹಬ್ಬಕ್ಕೆ ಟ್ರೆಂಡಿಯಾಗಿರುವ ಸೀರೆ ಶಾಪಿಂಗ್‌ಗೆ 5 ಸಿಂಪಲ್ ಐಡಿಯಾ

ಗೌರಿ ಹಬ್ಬದ ಸೀರೆ ಶಾಪಿಂಗ್ ಈಗಾಗಲೇ ಎಲ್ಲೆಡೆ ಭರದಿಂದ ಸಾಗಿದೆ. ಹಬ್ಬ ಸಮೀಪಿಸುತ್ತಿದ್ದಂತೆ ಬಗೆಬಗೆಯ ಸೀರೆ ಖರೀದಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗೌರಿ ಹಬ್ಬದ ಸೆಲೆಬ್ರೆಷನ್‌ಗೆ ಟ್ರೆಂಡಿಯಾಗಿರುವ ಸೀರೆ ಖರೀದಿಗೆ ತೆರಳುವಾಗ ಒಂದಿಷ್ಟು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಿ ಎನ್ನುತ್ತಾರೆ ಸೀರೆ ಎಕ್ಸ್‌ಪರ್ಟ್ಸ್. ಈ ಕುರಿತಂತೆ ಒಂದಿಷ್ಟು ಟಿಪ್ಸ್ ನೀಡಿದ್ದಾರೆ.

ಬ್ಯಾಂಕ್‌ ಉದ್ಯೋಗಾಂಕ್ಷಿಗಳ ಗಮನಕ್ಕೆ: ಬ್ಯಾಂಕ್‌ ಆಫ್‌ ಬರೋಡದ 2,482 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಹೊಸ ವೇಳಾಪಟ್ಟಿ ಇಲ್ಲಿದೆ

ಬ್ಯಾಂಕ್‌ ಆಫ್‌ ಬರೋಡದ 2,482 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

BOB Recruitment 2026: ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,482 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದಬ್ಯಾಂಕ್‌ ಆಫ್‌ ಬರೋಡ ಇದೀಗ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ಹಿಂದೆ ಅಪ್ಲೈ ಮಾಡಲು ಸೆಪ್ಟೆಂಬರ್‌ 7 ಕೊನೆಯ ದಿನಾಂಕ ಎನ್ನಲಾಗಿತ್ತು. ಇದೀಗ ಸೆಪ್ಟೆಂಬರ್‌ 17ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು 8 ತಿಂಗಳ ಬಳಿಕ ಪತ್ತೆ; ಒಬ್ಬಾಕೆ ಈಗ ಗರ್ಭಿಣಿ!

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರು ಪತ್ತೆ; ಒಬ್ಬಾಕೆ ಈಗ ಗರ್ಭಿಣಿ!

Bengaluru Girls Missing Case: ಇತ್ತೀಚೆಗೆ ಒಬ್ಬ ಯುವತಿ ಹೊಸ ಸಿಮ್ ಕಾರ್ಡ್‌ ಖರೀದಿಸಲು ತನ್ನ ಆಧಾರ್ ಕಾರ್ಡ್ ಬಳಸಿದ್ದಳು. ಈ ವೇಳೆ ಆಧಾರ್ ಸಂಖ್ಯೆಯ ಬಳಕೆಯ ಕುರಿತು ಸರ್ವಿಸ್ ಪ್ರೊವೈಡರ್‌ನಿಂದ ಸಿಐಡಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಆ ಮಾಹಿತಿಯ ಆಧಾರದ ಮೇಲೆ ಯುವತಿಯರನ್ನು ಪತ್ತೆ ಹಚ್ಚಿದ್ದಾರೆ.

ರಾಜ್ಯದಲ್ಲಿ ತಗ್ಗಿದ ಮಳೆ ಪ್ರಭಾವ; ಜಿಲ್ಲೆಗಳ ಹವಾಮಾನ ವರದಿ ಹೇಗಿದೆ?

ರಾಜ್ಯದಲ್ಲಿ ತಗ್ಗಿದ ಮಳೆ ಪ್ರಭಾವ; ಜಿಲ್ಲೆಗಳ ಹವಾಮಾನ ವರದಿ ಹೇಗಿದೆ?

Karnataka Weather: ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಇಂದು (ಸೆಪ್ಟೆಂಬರ್ 10) ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ ಕರಾವಳಿಯಲ್ಲಿ ಮಳೆ ಪ್ರಮಾಣ ತಗ್ಗಲಿದೆ.

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಂದು ಪತಿಯೂ ಆತ್ಮಹತ್ಯೆ!

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಪತ್ನಿಯ ಕೊಂದು ಪತಿಯೂ ಆತ್ಮಹತ್ಯೆ!

Bengaluru News: ಬೆಂಗಳೂರಿನ ಎಚ್‌ಎಎಲ್‌ ವಿಭೂತಿಪುರದಲ್ಲಿ ಘಟನೆ ನಡೆದಿದೆ. ಪತ್ನಿ ಯಾವಾಗಲೂ ರೀಲ್ಸ್ ನೋಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಅದೇ ವಿಚಾರಕ್ಕೆ ನಿನ್ನೆ ತಡರಾತ್ರಿ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿಯನ್ನು ಪತಿ ಕೊಂದಿದ್ದಾನೆ. ಬಳಿಕ ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Tiptur News: ತಿಪಟೂರಿನಲ್ಲಿ ಬ್ಯಾಟರಿಗಳು ಸ್ಫೋಟ; ಹೊತ್ತಿ ಉರಿದ ವಾಹನಗಳು

ತಿಪಟೂರಿನಲ್ಲಿ ಬ್ಯಾಟರಿಗಳು ಸ್ಫೋಟ; ಹೊತ್ತಿ ಉರಿದ ವಾಹನಗಳು

Tiptur News: ಸರಕು ಸಾಗಣೆ ವಾಹನವೊಂದರಲ್ಲಿ ಸಾಗಿಸುತ್ತಿದ್ದ ಬ್ಯಾಟರಿಗಳು ಸ್ಫೋಟಗೊಂಡು ದ್ವಿಚಕ್ರ ವಾಹನ ಸೇರಿದಂತೆ ಬ್ಯಾಟರಿಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ವಾಹನವೊಂದು ಹೊತ್ತಿ ಉರಿದ ಘಟನೆ ಹುಳಿಯಾರು ರಸ್ತೆಯ ಗೆದ್ದಲಹಳ್ಳಿಯ ಗೊಲ್ಲರಹಟ್ಟಿ ಗೇಟ್ ಬಳಿ ಜರುಗಿದೆ.

ಯುವ ಬಾಕ್ಸರ್ ಪ್ರಕುಲ್ ಸಾಯಿಗೆ ಐಸಿಎಸ್‍ಇ ಪ್ರಾದೇಶಿಕ ಕ್ರೀಡಾಕೂಟದಲ್ಲಿ ಚಿನ್ನ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಯುವ ಬಾಕ್ಸರ್ ಪ್ರಕುಲ್ ಸಾಯಿಗೆ ಐಸಿಎಸ್‍ಇ ಕ್ರೀಡಾಕೂಟದಲ್ಲಿ ಚಿನ್ನ

Tumkur News: ತುಮಕೂರು ನಗರದ ಬಿಷಪ್ ಸಾರ್ಜೆಂಟ್ ಶಾಲೆಯ ವಿದ್ಯಾರ್ಥಿ ಹಾಗೂ ತುಮಕೂರು ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ಉದಯೋನ್ಮುಖ ಬಾಕ್ಸರ್ ಪ್ರಕುಲ್ ಸಾಯಿ ಎಂ., ಇದೇ ಸೆಪ್ಟೆಂಬರ್ 3 ಮತ್ತು 4 ರಂದು ನಡೆದ ಯು-17 ಐಸಿಎಸ್‍ಇ ಪ್ರಾದೇಶಿಕ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಭಾರತ ರತ್ನ ಪುರಸ್ಕೃತ ವಿಜ್ಞಾನಿ ಪ್ರೊ.ಸಿ.ಎನ್.ಆರ್. ರಾವ್‌ಗೆ  SIR ಶಾಕ್‌; ಹೆಸರಿನಲ್ಲಿರುವ ಹೆಚ್ಚುವರಿ ʼFʼ ಅಕ್ಷರದ ಬಗ್ಗೆ ನೋಟಿಸ್‌

ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ SIR ನೋಟಿಸ್

Prof CNR Rao: ಭಾರತ ರತ್ನ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ SIR ನೋಟಿಸ್ ನೀಡಲಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವೇಳೆ ಅವರ ಹೆಸರು ಪಟ್ಟಿಯಲ್ಲಿರುವ ಹೆಸರಿಗೆ ಹೊಂದಾಣಿಕೆಯಾಗದೇ ಇರುವುದರಿಂದ ನೋಟಿಸ್ ಜಾರಿ ಗೊಳಿಸಲಾಗಿದೆ ಎನ್ನಲಾಗಿದೆ. ಅವರ ಹೆಸರಿನಲ್ಲಿ ಹೆಚ್ಚುವರಿ ಎಫ್ ಇರುವುದರಿಂದ ನೋಟಿಸ್ ನೀಡಲಾಗಿದೆ.

Loading...