ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

"ವಿಶ್ವ ಭೂಮಿ ದಿನ" "ನಮ್ಮ ಶಕ್ತಿ - ನಮ್ಮ ಗ್ರಹ "

"ವಿಶ್ವ ಭೂಮಿ ದಿನ" "ನಮ್ಮ ಶಕ್ತಿ - ನಮ್ಮ ಗ್ರಹ "

"ವಿಶ್ವಭೂಮಿ ದಿನಾಚರಣೆ" ಅಂಗವಾಗಿ "ನಮ್ಮ ಶಕ್ತಿ - ನಮ್ಮ ಗ್ರಹ", ಎಂಬ ವಿಷಯ ಆಧಾರಿತ, ಭೂಮಿ ಸಂರಕ್ಷಣೆ ಅಭಿಯಾನ ಜನಜಾಗೃತಿ ಕಾರ್ಯಕ್ರಮವನ್ನು ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬಾಲ ಭವನ ಸೊಸೈಟಿ ಕಬ್ಬನ್ ಪಾರ್ಕ್ ಬೆಂಗಳೂರು, ರವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದರು.

Education Icon of the Year-2026: ಡಾ.ವಿಷ್ಣು ಭರತ್ ಅಲ್ಲಂಪಲ್ಲಿ ಅವರಿಗೆ “ಎಜುಕೇಶನ್ ಐಕಾನ್ ಆಪ್ ದಿ ಇಯರ್-2026” ಪ್ರಶಸ್ತಿ ಪ್ರದಾನ

ಡಾ.ವಿಷ್ಣು ಭರತ್ ಅಲ್ಲಂಪಲ್ಲಿ ಅವರಿಗೆ ಪ್ರಶಸ್ತಿ

ಕಲಿಕೆ ಜೀವನಪರ್ಯಂತ ನಡೆಯುವ ಪ್ರಕ್ರಿಯೆ. ಶಾಲಾ ಶಿಕ್ಷಣ ನಮಗೆ ಅಡಿಪಾಯ ಹಾಕಿಕೊಟ್ಟರೆ, ಅನುಭವಗಳು ನಮಗೆ ಜೀವನದ ಪಾಠಗಳನ್ನು ಕಲಿಸುತ್ತವೆ. ಶಿಕ್ಷಣ ಬಡತನವನ್ನು ಹೋಗಲಾಡಿಸಿ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ. ಇದು ನಾವು ಬೆಳೆಯುವ ಜೊತೆಗೆ ಇತರರನ್ನು ಬೆಳೆಸುವ ಶಕ್ತಿಯನ್ನು ನೀಡುತ್ತದೆ. ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ಎಲ್ಲರಿಗೂ ಶಿಕ್ಷಣ ತಲುಪು ವಂತೆ ಮಾಡಿದೆ. ಆದರೆ ತಂತ್ರಜ್ಞಾನದ ಜೊತೆಗೆ ಮಾನವೀಯ ಸಂಬಂಧಗಳು ಮತ್ತು ಸಂಸ್ಕಾರಗಳೂ ಅಷ್ಟೇ ಮುಖ್ಯ

ಲೋಕೋಪಯೋಗಿ ಇಲಾಖೆಯ ಕಟ್ಟಡ ವಿಭಾಗದ ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಲೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಎಸ್. ಸಂಗಮೇಶ್ ಒತ್ತಾಯ

ಕಟ್ಟಡ ವಿಭಾಗದ ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಲೋಪ: ಕ್ರಮಕ್ಕೆ ಒತ್ತಾಯ

ಅತಿ ಮುಖ್ಯವಾಗಿ, ಕಡಿಮೆ ದರದ ಟೆಂಡರ್‌ಗಳನ್ನು ಸ್ವೀಕರಿಸುವುದರಿಂದ ಸರ್ಕಾರಕ್ಕೆ ತಾತ್ಕಾಲಿಕ ವಾಗಿ ಹಣಕಾಸಿನ ಲಾಭ ಕಂಡುಬರುವ ಸಾಧ್ಯತೆ ಇದೆ. ಆದರೆ ಅಸಾಮಾನ್ಯವಾಗಿ ಕಡಿಮೆ ದರವನ್ನು ನಮೂ ದಿಸುವ ಗುತ್ತಿಗೆದಾರರಿಗೆ ಟೆಂಡರ್ ನೀಡಿದಲ್ಲಿ ಕಾಮಗಾರಿಗಳ ಗುಣಮಟ್ಟ ಕುಸಿತವಾಗುವ ಸಾಧ್ಯತೆ ಅತ್ಯಂತ ಹೆಚ್ಚು.

Girl Death: ಬಾಲಕಿಗೆ ಮೃತ್ಯುವಾದ ಜೋಕಾಲಿ, ಆಟವಾಡುವ ವೇಳೆ ಕುಣಿಕೆ ಬಿದ್ದು ಸಾವು

ಬಾಲಕಿಗೆ ಮೃತ್ಯುವಾದ ಜೋಕಾಲಿ, ಆಟವಾಡುವ ವೇಳೆ ಕುಣಿಕೆ ಬಿದ್ದು ಸಾವು

ಕೋಣೆಯ ಒಳಗೆ ಬಾಲಕಿ ಜೋಕಾಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಪಂಚೆಯ ಕುಣಿಕೆ ಬಾಲಕಿಯ ಕುತ್ತಿಗೆಗೆ ಬಿಗಿದುಕೊಂಡಿದೆ. ಬಾಗಿಲು ಒಳಗಿನಿಂದ ಲಾಕ್ ಆಗಿದ್ದರಿಂದ ಬಾಲಕಿಯ ಕಿರುಚಾಟ ಯಾರಿಗೂ ಕೇಳಿಸಲಿಲ್ಲ. ಉಸಿರಾಟಕ್ಕೆ ತೀವ್ರ ಅಡಚಣೆ ಉಂಟಾಗಿ ಆಕೆ ಅಲ್ಲೇ ಪ್ರಾಣ ಬಿಟ್ಟಿದ್ದಾಳೆ.

ಪ್ರೊ.ಎನ್.ಅನಂತಾಚಾರ್ ಅವರ ಅಂಚೆ ಲಕೋಟೆ ಬಿಡುಗಡೆ

ಪ್ರೊ.ಎನ್.ಅನಂತಾಚಾರ್ ಅವರ ಅಂಚೆ ಲಕೋಟೆ ಬಿಡುಗಡೆ

ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಪ್ರೊ. ಎನ್. ಅನಂತಾಚಾರ್ ಅವರ ದೂರದೃಷ್ಟಿಯ ಕೊಡುಗೆಗಳಿಗೆ ಅರ್ಪಿಸಿದ ಗೌರವ ಇದಾಗಿದೆ. ಅವರ ಪರಂಪರೆಯು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ. ಈ ವಿಶೇಷ ಲಕೋಟೆಯ ಬಿಡುಗಡೆ ಯು ಅವರ ಶಾಶ್ವತ ಪ್ರಭಾವ ಮತ್ತು ಕಳೆದ ಒಂಬತ್ತು ದಶಕಗಳಲ್ಲಿ ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆಯ ಗಮನಾರ್ಹ ಪ್ರಯಾಣದ ಸ್ಮರಣೆಯಾಗಿದೆ

ನಾವಿ ಯುಪಿಐ ‘ಹರ್ರಿಪುರ’ ಚಿತ್ರ: ಆಟೋ ಬ್ರೇಕ್‌ಡೌನ್ ಕ್ಷಣಗಳಲ್ಲಿ ಪಿಟ್ ಸ್ಟಾಪ್

ನಾವಿ ಯುಪಿಐ ‘ಹರ್ರಿಪುರ’ : ಆಟೋ ಬ್ರೇಕ್‌ಡೌನ್ ಕ್ಷಣಗಳಲ್ಲಿ ಪಿಟ್ ಸ್ಟಾಪ್

ಈ ಚಿತ್ರವು ಬಾಲ್ಟಿಯ ಅವರ “123” ಗೀತೆಗೆ ಹೊಂದಿಕೊಂಡಿದ್ದು, ಆಟೋ ರಿಕ್ಷಾ ಪ್ರಯಾಣದ ಮಧ್ಯೆ ಬ್ರೇಕ್‌ಡೌನ್ ಆಗುವುದರಿಂದ ಆರಂಭವಾಗುತ್ತದೆ. ಆದರೆ ಕೆಲವೇ ಕ್ಷಣಗಳಲ್ಲಿ ಪರಿಸ್ಥಿತಿ ಬದಲಾಗುತ್ತದೆ. ದುರಸ್ತಿ ಪ್ರಕ್ರಿಯೆ ಫಾರ್ಮುಲಾ ಒನ್ ಪಿಟ್ ಸ್ಟಾಪ್ ಶೈಲಿಯಲ್ಲಿ ನಡೆಯುತ್ತಿದ್ದು, ಟೈರ್ ಕ್ಷಣಾರ್ಧದಲ್ಲಿ ಬದಲಾಯಿಸಲಾಗುತ್ತದೆ. ವಾಹನ ತಕ್ಷಣವೇ ಮತ್ತೆ ರಸ್ತೆಗೆ ಮರಳುತ್ತದೆ ಮತ್ತು ಪ್ರಯಾಣವೂ ಅದೇ ವೇಗದಲ್ಲಿ ಮುಂದುವರಿಯುತ್ತದೆ.

ಅಕ್ರಮ ಗುಜರಿ ಅಂಗಡಿ ಹಾವಳಿ ಕ್ರಮಕ್ಕೆ ಆಗ್ರಹ

ಅಕ್ರಮ ಗುಜರಿ ಅಂಗಡಿ ಹಾವಳಿ ಕ್ರಮಕ್ಕೆ ಆಗ್ರಹ

ಗುಜರಿ ಅಂಗಡಿಯಲ್ಲಿ ಹಳೆಯ ಪ್ಲಾಸ್ಟಿಕ್ ಹಾಗೂ ವೈರ್‌ಗಳನ್ನು ಸುಡುವುದರಿಂದ ಬರುವ ವಿಷಕಾರಿ ಹೊಗೆಯಿಂದಾಗಿ ಸುತ್ತಮುತ್ತಲಿನ ನಿವಾಸಿಗಳು, ಅದರಲ್ಲೂ ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಉಸಿರಾಟದ ತೊಂದರೆ ಹಾಗೂ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಅಂಗಡಿಯಲ್ಲಿ ವರ್ಷಗಟ್ಟಲೆ ಗುಜರಿ ಸಾಮಾನುಗಳನ್ನು ರಾಶಿ ಹಾಕಲಾಗಿದೆ. ಇದರಲ್ಲಿ ಅನೇಕ ವಿಷಕಾರಿ ಹಾವುಗಳು ವಾಸವಿದ್ದು, ಹಗಲು-ರಾತ್ರಿ ಎನ್ನದೆ ಪಕ್ಕದ ಮನೆಗಳಿಗೆ ನುಗ್ಗುತ್ತಿವೆ. ಇದರಿಂದಾಗಿ ಜನರು ಆತಂಕದಲ್ಲಿ ಬದುಕು ವಂತಾಗಿದೆ.

Karantara Suliyalli Book Release: ʼಕಾರಂತರ ಸುಳಿಯಲ್ಲಿʼ ಕೃತಿ ಸಾಸ್ತಾನದಲ್ಲಿ ಏ.25ರಂದು ಅನಾವರಣ

ʼಕಾರಂತರ ಸುಳಿಯಲ್ಲಿʼ ಕೃತಿ ಸಾಸ್ತಾನದಲ್ಲಿ ಏ.25ರಂದು ಅನಾವರಣ

ಏಪ್ರಿಲ್‌ 25ರಂದು ಸಂಜೆ 4.30 ಗಂಟೆಗೆ ಸಾಸ್ತಾನದ ಕೋಸ್ಟಲ್‌ ಪ್ಯಾರಡೈಸ್‌ನಲ್ಲಿ ಶಿವರಾಮ ಕಾರಂತರ ಕುರಿತ 'ಕಾರಂತರ ಸುಳಿಯಲ್ಲಿ’ ಪುಸ್ತಕ ಅನಾವರಣಗೊಳ್ಳಲಿದೆ. ಕೃತಿಯನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆ ಮಾಡುವರು.

CET Exam: ಸಿಇಟಿ ಪರೀಕ್ಷೆಯಲ್ಲಿ ಮತ್ತೆ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ!

ಸಿಇಟಿ ಪರೀಕ್ಷೆಯಲ್ಲಿ ಮತ್ತೆ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ!

ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಜಗ್ಗಾಟ ಸದ್ದು ಮಾಡ್ತಿದೆ. ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಸಿಬ್ಬಂದಿಯೇ ಬಲವಂತವಾಗಿ ತೆಗೆಸಿದ್ದು, ಬಳಿಕ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Karnataka Weather: ಬಿಸಿಲಿನ ಬೇಗೆ ತಣಿಸಲು ಬರಲಿದೆ ಮಳೆ, ಹಲವೆಡೆ ಯೆಲ್ಲೋ ಅಲರ್ಟ್

ಬಿಸಿಲಿನ ಬೇಗೆ ತಣಿಸಲು ಬರಲಿದೆ ಮಳೆ, ಹಲವೆಡೆ ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮುಂದಿನ 7 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರ ಮಳೆಯಾಗಲಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಮಾತ್ರವಲ್ಲದೆ, ಪ್ರತಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.

Cyber alert: ಆ್ಯಂಡ್ರಾಯ್ಡ್‌ ಬಳಕೆದಾರರೇ ಎಚ್ಚರ! ಯಾಮಾರಿದರೆ ನಿಮ್ಮ ಬ್ಯಾಂಕ್‌ ಖಾತೆ ಖಾಲಿಯಾದೀತು!

ಆ್ಯಂಡ್ರಾಯ್ಡ್‌ ಬಳಕೆದಾರರೇ, ನಕಲಿ ಬ್ಯಾಂಕಿಂಗ್ ಆ್ಯಪ್‌ಗಳ ಬಗ್ಗೆ ಎಚ್ಚರ!

ಹೊಸ ಬಗೆಯ ಅಪಾಯಕಾರಿ ಸಾಫ್ಟ್‌ವೇರ್‌ಗಳು (ಮಾಲ್‌ವೇರ್) ಬಂದಿದ್ದು, ‌ಇವು ಸಾಮಾನ್ಯ ಆ್ಯಪ್‌ಗಳ ಮುಖವಾಡ ಧರಿಸಿ ನಿಮ್ಮ ಫೋನ್‌ಗೆ ಪ್ರವೇಶಿಸುತ್ತದೆ. ಇದು ಬ್ಯಾಂಕಿಂಗ್ ಆ್ಯಪ್‌ಗಳು ಅಥವಾ ಕಸ್ಟಮರ್ ಸರ್ವಿಸ್ ಟೂಲ್‌ಗಳಂತೆ ಕಾಣಿಸಿಕೊಳ್ಳುತ್ತದೆ. ಒಮ್ಮೆ ಇನ್‌ಸ್ಟಾಲ್ ಆದರೆ, ನಿಮ್ಮ ಫೋನ್‌ನ ಸಂಪೂರ್ಣ ನಿಯಂತ್ರಣವನ್ನು ಸೈಬರ್ ಕಳ್ಳರ ಕೈಗೆ ನೀಡುತ್ತದೆ.

Dinesh Gundu Rao: ಗುಡ್ ನ್ಯೂಸ್, ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ

ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಶಸ್ತ್ರಚಿಕಿತ್ಸೆ

2023-24ರಲ್ಲಿ ಕೇವಲ 633 ಇದ್ದ ಶಸ್ತ್ರಚಿಕಿತ್ಸೆಗಳ ಸಂಖ್ಯೆ, 2025-26ರ ಆರ್ಥಿಕ ವರ್ಷದಲ್ಲಿ 1,119ಕ್ಕೆ ಏರಿಕೆಯಾಗಿದೆ. ಸರ್ಕಾರಿ ಆಸ್ಪತ್ರೆಗಳ ಪಾಲು ಶೇ. 35 ರಿಂದ ಶೇ. 99ಕ್ಕೆ ಏರಿದೆ. ಪರಿಣಿತ ಮೂಳೆ ಶಸ್ತ್ರಚಿಕಿತ್ಸಕರನ್ನು ನಿಯೋಜಿಸಲಾಗಿದೆ ಮತ್ತು ಅಲ್ಲಿನ ವೈದ್ಯರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

D Sudhakar: ಸಚಿವ ಡಿ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ, ಶ್ವಾಸಕೋಶ ಕಸಿ ಚಿಕಿತ್ಸೆಗೆ ಸಿದ್ಧತೆ

ಸಚಿವ ಡಿ ಸುಧಾಕರ್‌ ಆರೋಗ್ಯ ಗಂಭೀರ, ಶ್ವಾಸಕೋಶ ಕಸಿ ಚಿಕಿತ್ಸೆಗೆ ಸಿದ್ಧತೆ

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಮೊಣಕಾಲಿನ ಆಪರೇಶನ್‌ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಹಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ ಸುಧಾಕರ್ ಸದ್ಯ ಶಾವ್ಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಮೊಣಕಾಲ ಶಸ್ತ್ರಚಿಕಿತ್ಸೆ ಬಳಿಕ ಶ್ವಾಸಕೋಶದ ಸೋಂಕು ಉಲ್ಬಣಿಸಿತ್ತು.

Prisoner Escape: ಬಳ್ಳಾರಿ ಜೈಲಿನಿಂದ ವಿಚಾರಣಾಧೀನ ಕೈದಿ ಪರಾರಿ

ಬಳ್ಳಾರಿ ಜೈಲಿನಿಂದ ವಿಚಾರಣಾಧೀನ ಕೈದಿ ಪರಾರಿ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಮೂಲದ ಆರೋಪಿ ಅಣ್ಣಪ್ಪ ಎಂಬಾತ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಬಳ್ಳಾರಿ ಜೈಲು ಪಾಲಾಗಿದ್ದ. ನಿನ್ನೆ ಮಧ್ಯಾಹ್ನ ಜೈಲಿನೊಳಗಿದ್ದ ಮರದ ಮೇಲಿಂದ ಬಿದ್ದು ಗಾಯ ಮಾಡಿಕೊಂಡಿದ್ದ, ಈ ಹಿನ್ನೆಲೆ ಪೊಲೀಸರು ಗಾಯಗೊಂಡಿದ್ದ ಆರೋಪಿಯನ್ನು ಕೂಡಲೇ ಬಿಮ್ಸ್​ ಆಸ್ಪತ್ರೆಗೆ ಕರೆತಂದಿದ್ದರು.

ಒಡೆದ ಮನೆಯಂತಾದ ಕಾಂಗ್ರೆಸ್ : ಸಂಚಲನಕ್ಕೆ ಕಾರಣವಾದ ಕೆಪಿಸಿಸಿ ನೋಟೀಸು

ಶಿಸ್ತುಕ್ರಮಕ್ಕೆ ಆಗ್ರಹಿಸಿ ಪತ್ರ ಬರೆದ ಬ್ಲಾಕ್ ಕಾಂಗ್ರೆಸ್

ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ನಡೆಯ ವಿರುದ್ದ ಬಹಿರಂಗವಾಗಿ ಟೀಕೆ ಟಿಪ್ಪಣಿ ಮಾಡಿದ್ದ ಚಿಮುಲ್ ನಿರ್ದೇಶಕರಾದ ಭರಣಿ ವೆಂಕಟೇಶ್, ಕಾಕಲಚಿಂತೆ ರಾಜಣ್ಣ, ಮಿಲ್ಟನ್ ವೆಂಕಟೇಶ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಕಾರಣ ಕೇಳಿ ನೀಡಿರುವ ನೋಟೋಸು ಭಾರೀ ಸಂಚಲವನ್ನು ಉಂಟು ಮಾಡಿದೆ.

ಬಸವಕಲ್ಯಾಣದಲ್ಲಿ ಬಸವೇಶ್ವರರ ರಥೋತ್ಸವದ ವೇಳೆ ಘೋರ ದುರಂತ; ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಬಸವಕಲ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

Bidar News: ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಬಸವೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ವೇಳೆ ಭೀಕರ ಅವಘಡ ಸಂಭವಿಸಿದೆ. ರಥ ಎಳೆಯುವ ವೇಳೆ ಆಯಾ ತಪ್ಪಿ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ ಧನರಾಜ ಚಾಕೂರೆ (65) ಮೃತಪಟ್ಟಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ: ಪಲ್ಸ್ ಆಪ್ ಮೂಲಕ ಪ್ರಯಾಣಿಕರಿಗೆ ತಂಪು ಪಾನೀಯ ವಿತರಣೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ

ವಿಮಾನ ನಿಲ್ದಾಣದ ಎರಡೂ ಟರ್ಮಿನಲ್‌ಗಳ ಮೂಲಕ ಪ್ರಯಾಣಿಸುವವರು, ಬೆಂಗಳೂರು ವಿಮಾನ ನಿಲ್ದಾಣದ ಅಧಿಕೃತ ಆಲ್- ಇನ್- ಒನ್ ಡಿಜಿಟಲ್ ಪ್ಲಾಟ್‌ ಫಾರ್ಮ್ ಆದ 'ಪಲ್ಸ್' ಆಪ್ ಅನ್ನು ಸೇರಿದರೆ, ಅವರಿಗೆ ಉಚಿತವಾಗಿ ತಂಪಾದ ಕೋಕಾ-ಕೋಲಾ ನೀಡಲಾಗುತ್ತದೆ. ಇದನ್ನು ಇದಕ್ಕಾಗಿಯೇ ಮೀಸ ಲಾದ 'ಕೋಕ್ ಜೋನ್' ನಲ್ಲಿ ಪಡೆದುಕೊಳ್ಳಬಹುದು.

ʼʼನಿಮ್ಮ ದುರಾಡಳಿತಕ್ಕೆ ವಿದ್ಯಾರ್ಥಿಗಳನ್ನೇಕೆ ಎಳೆದು ತರುತ್ತೀರಿ?ʼʼ ಕಲಬುರಗಿ ಮಕ್ಕಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ ಎಂದ  ಪ್ರಿಯಾಂಕ್‌ ಖರ್ಗೆಗೆ ನೆಟ್ಟಿಗರಿಂದ ಕ್ಲಾಸ್‌

ಮಕ್ಕಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ ಎಂದ ಪ್ರಿಯಾಂಕ್‌ಗೆ ಕ್ಲಾಸ್‌

Priyank Kharge: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ಟ್ರೋಲ್‌ ಮಾಡಿದ ಬಿಜೆಪಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ತಿರುಗೇಟು ನೀಡಲು ಮುಂದಾಗಿದ್ದರು. ಆದರೆ ಇದೀಗ ಅವರಿಗೆ ನೆಟ್ಟಿಗರು ಕ್ಲಾಸ್‌ ತೆಗೆದುಕೊಂಡಿದ್ದಾರೆ. ʼʼನಿಮ್ಮ ವೈಫಲ್ಯಕ್ಕೆ ವಿದ್ಯಾರ್ಥಿಗಳನ್ನು ಎಳೆದು ತರಬೇಡಿʼʼ ಎಂದಿದ್ದಾರೆ.

ಅಮೆಜಾನ್ ಇಂಡಿಯಾದಿಂದ ರೂ. 2800 ಕೋಟಿ ಮೀರಿ ಹೂಡಿಕೆ: ಅಸೋಸಿಯೇಟ್ ಸುರಕ್ಷತೆ ಮತ್ತು ಸ್ವಾಸ್ಥ್ಯದ ಸುಧಾರಣೆ ಮತ್ತು ತನ್ನ ಅಖಿಲ-ಭಾರತ ಕಾರ್ಯಾಚರಣೆಗಳ ಜಾಲದ ಸದೃಢತೆ

ಅಮೆಜಾನ್ ಇಂಡಿಯಾದಿಂದ ರೂ. 2800 ಕೋಟಿ ಮೀರಿ ಹೂಡಿಕೆ

2013ರಲ್ಲಿ ಅಮೆಜಾನ್.ಇನ್ ಪ್ರಾರಂಭವಾದ ದಿನದಿಂದಲೂ ನಾವು ಭಾರತದ ಅತ್ಯಂತ ಸುರಕ್ಷಿತ, ವೇಗದ ಮತ್ತು ಅತ್ಯಂತ ವಿಶ್ವಾಸಾರ್ಹ ಕಾರ್ಯಾಚರಣೆಗಳ ಜಾಲವನ್ನು ನಿರ್ಮಿಸಿದ್ದು ದೇಶದ ಪ್ರತಿ ಸೇವೆ ಒದಗಿಸಬಲ್ಲ ಪಿನ್ ಕೋಡ್ ಗಳಲ್ಲಿ ಗ್ರಾಹಕರಿಗೆ ಸೇವೆ ಒದಗಿಸುತ್ತಿದೆ. ಈ ಜಾಲದ ಕೇಂದ್ರದಲ್ಲಿ ನಮ್ಮ ಜನರಿದ್ದಾರೆ ಮತ್ತು ನಾವು ಸುರಕ್ಷತೆ, ಆರೋಗ್ಯ ಮತ್ತು ಹಣಕಾಸು ಸ್ವಾಸ್ಥ್ಯದ ಮಾನದಂಡ ವಿಸ್ತರಿಸಲು ಬದ್ಧರಾಗಿದ್ದೇವೆ

'ಪ್ರಿವೆಂಟಿವ್ ಜೆನೊಮಿಕ್ಸ್ ಕ್ಲಿನಿಕ್' ಪ್ರಾರಂಭಿಸಿದ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು; ನಿಖರ ವೈದ್ಯಕೀಯ ಪದ್ಧತಿಯಲ್ಲಿ ಹೊಸ ಅಧ್ಯಾಯ ಆರಂಭ

'ಪ್ರಿವೆಂಟಿವ್ ಜೆನೊಮಿಕ್ಸ್ ಕ್ಲಿನಿಕ್' ಪ್ರಾರಂಭಿಸಿದ ಫೋರ್ಟಿಸ್ ಆಸ್ಪತ್ರೆ

ಪ್ರಿವೆಂಟಿವ್ ಜೆನೊಮಿಕ್ಸ್ ಕ್ಲಿನಿಕ್ (ತಡೆಗಟ್ಟುವ ತಳಿವಿಜ್ಞಾನ ಚಿಕಿತ್ಸಾಲಯ) ಸುಧಾರಿತ ಆನುವಂಶಿಕ ಪರೀಕ್ಷೆ, ತಜ್ಞರ ಸಮಾಲೋಚನೆ ಮತ್ತು ವೈಯಕ್ತಿಕ ಚಿಕಿತ್ಸಾ ಯೋಜನೆಗಳನ್ನು ನೀಡುವ ಗುರಿಯನ್ನು ಹೊಂದಿದೆ. ಇದು ವ್ಯಕ್ತಿಗಳು ತಮ್ಮ ಆನುವಂಶಿಕ ಗುಣಲಕ್ಷಣಗಳ ಆಧಾರದ ಮೇಲೆ ಆರೋಗ್ಯ ರಕ್ಷಣೆಯ ಕುರಿತು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.

Self Harming: ಶೇರ್ ಮಾರ್ಕೇಟ್ ನಲ್ಲಿ ನಷ್ಟ: ಯುವಕ ನೇಣಿಗೆ ಶರಣು

ಶೇರ್ ಮಾರ್ಕೇಟ್ ನಲ್ಲಿ ನಷ್ಟ: ಯುವಕ ನೇಣಿಗೆ ಶರಣು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದಲ್ಲಿ ಯುವಕನೋರ್ವ ಶೇರ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡ ಆಘಾತದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿದ್ಧಾಪುರದ ಹರ್ಷವರ್ಧನ್ (22)ನೇಣಿಗೆ ಶರಣಾದ ಯುವಕ. ಸಿದ್ದಾಪುರದ ಮನೆಯಲ್ಲೇ ಫ್ಯಾನಿಗೆ ನೇಣು ಹಾಕಿಕೊಂಡ ಯುವಕ ಮೊಬೈಲ್ ಮೂಲಕ ಸ್ಟಾಕ್ ಎಕ್ಸ್‌ಚೇಂಜ್ ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

SSLC Result: ಎಸ್‌ಡಿಎಂ ಶಾಲೆಯ ವಿದ್ಯಾರ್ಥಿನಿಯರ ಎಸ್‌ಎಸ್‌ಎಲ್‌ಸಿ ಶ್ರೇಷ್ಠ ಸಾಧನೆ

ಎಸ್‌ಡಿಎಂ ಶಾಲೆಯ ವಿದ್ಯಾರ್ಥಿನಿಯರ ಎಸ್‌ಎಸ್‌ಎಲ್‌ಸಿ ಶ್ರೇಷ್ಠ ಸಾಧನೆ

ವಿದ್ಯಾರ್ಥಿನಿ ಜಿ ಮಾಧುರ್ಯ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 620 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಕೇವಲ ಶೈಕ್ಷಣಿಕ ಕ್ಷೇತ್ರದಲ್ಲೇ ಅಲ್ಲದೆ ಸಾಂಸ್ಕೃ ತಿಕ ಕ್ಷೇತ್ರದಲ್ಲಿಯೂ ಪ್ರತಿಭಾವಂತಳಾಗಿದ್ದು, ಉತ್ತಮ *ನೃತ್ಯಗಾತಿಯಾಗಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಅಕ್ಷರ ಜೋಡಣೆ, ಪ್ರಬಂಧ ರಚನೆ, ಕಥೆ ಹಾಗೂ ಕವನ ರಚನೆಯಲ್ಲಿ ವಿಶಿಷ್ಟ ಸಾಮರ್ಥ್ಯ ತೋರಿದ್ದಾರೆ.

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಗೋವಿಂದ ಕಾರಜೋಳ

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಕಾರಜೋಳ

Govind Karjol: ಮೇ 9ರಂದು ಚಿತ್ರದುರ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್‌ 26ರ ಬೆಳಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

2,000 ರುಪಾಯಿಗೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ; ಮಹಿಳೆಯರಿಗೆ ಎಚ್‌.ಡಿ. ಕುಮಾರಸ್ವಾಮಿ ಕಿವಿಮಾತು

2,000 ರುಪಾಯಿಗೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದ ಎಚ್‌ಡಿಕೆ

HD Kumaraswamy: ಕಾಂಗ್ರೆಸ್ ಸರ್ಕಾರ ಸಾಲ ಮಾಡಿ ನಿಮ್ಮ ತಲೆಯ ಮೇಲೆ ಹೊರೆ ಹೊರೆಸಿ 2,000 ರುಪಾಯಿ ಗ್ಯಾರಂಟಿ ಕೊಡುತ್ತಿದೆ. ದಿನ ಬೆಳಗ್ಗೆ ಬೆಲೆ ಏರಿಕೆ ಮಾಡಿ ತೆರಿಗೆ ಏರಿಸಿದರೆ 2,000 ರುಪಾಯಿ ಏನು ಬಂತು? ನಾನಾದರೆ 5,000 ರುಪಾಯಿ ಕೊಡುತ್ತಿದ್ದೆ. ನಿಮಗೆ ಗ್ಯಾರಂಟಿ ಬೇಕಾದರೆ ನಾನೇ 5,000 ರುಪಾಯಿ ಕೊಡುತ್ತೇನೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Loading...