ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Nandini milk price hike: ನಂದಿನಿ ಹಾಲಿನ ದರ ಹೆಚ್ಚಳ; ನಾಳೆಯಿಂದಲೇ ಪರಿಷ್ಕೃತ ದರ ಜಾರಿ!

ನಂದಿನಿ ಹಾಲಿನ ದರ ಹೆಚ್ಚಳ; ನಾಳೆಯಿಂದಲೇ ಪರಿಷ್ಕೃತ ದರ ಜಾರಿ!

Nandini milk price hike: ಈ ಹಿಂದೆ ಲೀಟ‌ರ್ ಪೊಟ್ಟಣದಲ್ಲಿ 50 ಮಿ.ಲೀ. ಹೆಚ್ಚುವರಿ ಹಾಲು ನೀಡಿ 2 ರೂ. ಏರಿಕೆ ಮಾಡಲಾಗಿತ್ತು, ಈಗ ಅದನ್ನು ಕೆಎಂಎಫ್‌ ಹಿಂಪಡೆಯಲಿದೆ. ಮಂಗಳವಾರದಿಂದ ಲೀಟರ್‌ ಹಾಲಿನ ಮೇಲೆ 4 ರೂ. ಏರಿಕೆಯಾಗಲಿದ್ದು, ಮೊಸರಿನ ದರವೂ 4 ರೂ. ಏರಿಕೆಯಾಗಲಿದೆ.

MLA Pradeep Eshwar: ಧಾರ್ಮಿಕ ಸಾಮರಸ್ಯವೇ ಬಹುತ್ವ ಭಾರತದ ಹೆಗ್ಗಳಿಕೆ: ಶಾಸಕ ಪ್ರದೀಪ್ ಈಶ್ವರ್ ಅಯ್ಯರ್

ರೇಣು ಮಾಕಲಹಳ್ಳಿ ಈದ್ಗಾ ಮೈದಾನಕ್ಕೆ ಶಾಸಕ ಪ್ರದೀಪ ಈಶ್ವರ ಭೇಟಿ

2024 ನವೆಂಬರ್ 27ರಂದು ಕಮ್ಮಗುಟ್ಟಹಳ್ಳಿ ಪಂಚಾಯಿತಿಯ ರೇಣು ಮಾಕಲಹಳ್ಳಿ ಗ್ರಾಮದಲ್ಲಿ ನಡೆದ ನಮ್ಮೂರಿಗೆ ನಮ್ಮ ಶಾಸಕ ಕಾರ್ಯಕ್ರಮದಲ್ಲಿ  ಸಮುದಾಯದ ಮುಖಂಡರು ಮಸೀದಿಗೆ ರಸ್ತೆ ಬೇಕು ಎಂದು ಮಾಡಿದ್ದ ಮನವಿಗೆ ಓಗೊಟ್ಟು ರಂಜಾನ್ ಹಬ್ಬದ ದಿನವೇ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿ ದ್ದೇನೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದರು.

Chikkaballapur News: ಶಾಂತಿಯನ್ನು ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿ, ಎಲ್ಲರ ಜೀವನದಲ್ಲಿ ಸುಖ ಶಾಂತಿ ನೆಲೆಸಲಿ

ಸಂಬಂಧಿಕರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳಬೇಕು

ಈದ್ಗಾ ಮೈದಾನಕ್ಕೆ ಮಾಜಿ ಶಾಸಕರಾದ ಕೆ.ಪಿ ಬಚ್ಚೆಗೌಡ ಆಗಮಿಸಿ ರಂಜಾನ್ ಹಬ್ಬದ ಶುಭ ಕೋರಿದರು ಕಳೆದ 30 ವರ್ಷಗಳಿಂದ ಸತತವಾಗಿ ಈದ್ಗಾ ಮೈದಾನಲ್ಲಿ ಬಂದು ಪ್ರೀತಿ ಹಂಚಿಕೊಳ್ಳುತ್ತಿದ್ದು ಎಲ್ಲರೂ ಪ್ರೀತಿ ಸೌಹಾರ್ದತೆ ಬದುಕು ಬಾಳುವ ಮೊಲಕ ಶಾಂತಿ ಸಂದೇಶ ಸಾರೂಣ ಎಂದರು.

KAS Officers Transfer: 13 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

13 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

KAS Officers Transfer: ಐಎಎಸ್‌ ಅಧಿಕಾರಿಗಳಾದ ಸೈಯಿದಾ ಆಯಿಷಾ, ಅನ್ನಪೂರ್ಣ ಕೆ, ಶಬೀರ್ ಬಾಷಾ ಗಂಟಿ, ಕ್ಯಾಪ್ಟನ್ ಶ್ರೀನಿವಾಸಗೌಡ, ಮಮತ ಹೊಸಗೌಡರ್ ಸೇರಿ 13 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೊಂಡ 13 ಕೆಎಎಸ್ ಅಧಿಕಾರಿಗಳ ಪಟ್ಟಿ ಇಲ್ಲಿದೆ.

Celebrities Ugadi Fashion: ಟ್ರೆಡಿಷನಲ್‌ವೇರ್‌ನಲ್ಲಿ ಯುಗಾದಿ ಹಬ್ಬ ಆಚರಿಸಿದ ಸೆಲೆಬ್ರೆಟಿಗಳಿವರು

ಟ್ರೆಡಿಷನಲ್‌ವೇರ್‌ನಲ್ಲಿ ಯುಗಾದಿ ಹಬ್ಬ ಆಚರಿಸಿದ ಸೆಲೆಬ್ರೆಟಿಗಳಿವರು

Celebrities Ugadi Fashion: ವೈವಿಧ್ಯಮಯ ಎಥ್ನಿಕ್‌ವೇರ್‌ ಹಾಗೂ ಟ್ರೆಡಿಷನಲ್‌ವೇರ್‌ಗಳಲ್ಲಿ ಕಾಣಿಸಿಕೊಂಡ ಸೆಲೆಬ್ರೆಟಿಗಳು ಯುಗಾದಿ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಿದರು. ಯಾರ‍್ಯಾರು ಹೇಗೆಲ್ಲಾ ಕಾಣಿಸಿಕೊಂಡರು? ಯಾವ ಬಗೆಯ ಔಟ್‌ಫಿಟ್‌ಗಳನ್ನು ಧರಿಸಿದ್ದರು? ಎಂಬುದರ ಕುರಿತಂತೆ ಫ್ಯಾಷನ್‌ ವಿಮರ್ಶಕರು ತಿಳಿಸಿದ್ದಾರೆ. ಈ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ.

Basanagouda Patil Yatnal: ವಿಜಯೇಂದ್ರನ ಚಮಚಾಗಳಿದ್ರೆ ಗೆಟ್ ಔಟ್; ಮಾಧ್ಯಮಗಳ ಬಗ್ಗೆ ಯತ್ನಾಳ್‌ ಸಿಡಿಮಿಡಿ

ವಿಜಯೇಂದ್ರನ ಚಮಚಾಗಳಿದ್ರೆ ಗೆಟ್ ಔಟ್; ಮಾಧ್ಯಮಗಳ ಬಗ್ಗೆ ಯತ್ನಾಳ್‌ ಸಿಡಿಮಿಡಿ

Basanagouda Patil Yatnal: ಯತ್ನಾಳ್‌ ಕಾಂಗ್ರೆಸ್‌ ಸೇರ್ತಾರಾ ಅಥವಾ ಹೊಸ ಪಕ್ಷ ಕಟ್ಟುತ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಕಾಂಗ್ರೆಸ್ ಪಕ್ಷಕ್ಕೆ ಈ ಜನ್ಮದಲ್ಲೂ ಹೋಗಲ್ಲ, ಮುಂದಿನ ಜನ್ಮದಲ್ಲೂ ಹೋಗಲ್ಲ. ಅದು ಮುಸ್ಲಿಮರ ಪಕ್ಷ. ವಿಜಯೇಂದ್ರನ ಟೀಂ ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ. ಇಂಥ ಪ್ರಶ್ನೆಗಳನ್ನು ಕೇಳುವ ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್ ಔಟ್ ಎಂದು ಪತ್ರಕರ್ತರ ವಿರುದ್ಧ ಯತ್ನಾಳ್‌ ಕಿಡಿಕಾರಿದ್ದಾರೆ.

BY Vijayendra: ಬೆಲೆ ಏರಿಕೆ; ರಾಜ್ಯ ಸರ್ಕಾರದ ವಿರುದ್ಧ ಏ.2ರಿಂದ ಬಿಜೆಪಿ ಅಹೋರಾತ್ರಿ ಧರಣಿ, ಏ.7ರಿಂದ ಜನಾಕ್ರೋಶ ಯಾತ್ರೆ: ವಿಜಯೇಂದ್ರ

ಬೆಲೆ ಏರಿಕೆ ವಿರುದ್ಧ ಏ.2ರಿಂದ ಬಿಜೆಪಿ ಅಹೋರಾತ್ರಿ ಧರಣಿ: ವಿಜಯೇಂದ್ರ

BY Vijayendra: ಬೆಲೆ ಏರಿಕೆಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka Weather: ಉತ್ತರ ಕರ್ನಾಟಕದಲ್ಲಿ ಮುಂದಿನ 2 ದಿನ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಆರೆಂಜ್‌ ಅಲರ್ಟ್‌ ಘೋಷಣೆ

ಉತ್ತರ ಕರ್ನಾಟಕದಲ್ಲಿ ಮುಂದಿನ 2 ದಿನ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

Karnataka Weather: ರಾಜ್ಯದ ಕಲಬುರಗಿಯಲ್ಲಿ ಭಾನುವಾರ ಅತೀ ಹೆಚ್ಚು ಉಷ್ಣಾಂಶ 40.6 ಡಿ.ಸೆ. ದಾಖಲಾಗಿದೆ. ಇನ್ನು ಚಾಮರಾಜನಗರದಲ್ಲಿ ಅತೀ ಕಡಿಮೆ ಉಷ್ಣಾಂಶ 14.7 ಡಿ.ಸೆ. ವರದಿಯಾಗಿದೆ. ಮುಂದಿನ 2 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ, ನಂತರ 3-4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಲಿದೆ. ಕರ್ನಾಟಕದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ.

Guerrilla War Movie: ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ ‘ಗೆರಿಲ್ಲಾ WAR’ ಪೋಸ್ಟರ್‌ ಬಿಡುಗಡೆ

ಓಂಪ್ರಕಾಶ್ ರಾವ್ ನಿರ್ದೇಶನದ ‘ಗೆರಿಲ್ಲಾ WAR’ ಚಿತ್ರದ ಪೋಸ್ಟರ್‌ ಬಿಡುಗಡೆ

Guerrilla War Movie: ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ ‘ಗೆರಿಲ್ಲಾ WAR’ ಚಿತ್ರಕ್ಕೆ ‘ಮಂಡ್ಯ ಸ್ಟಾರ್’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ‘ಮಂಡ್ಯ ಸ್ಟಾರ್’ ಲೋಕಿ ಎಂದೇ ಪ್ರಸಿದ್ಧರಾಗಿರುವ ಲೋಕೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ಯುಗಾದಿ ಹಬ್ಬದ ದಿನದಂದು ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಿರ್ದೇಶಕರು ತಮ್ಮ ನಿರ್ದೇಶನದ 50ನೇ ಚಿತ್ರದ ಘೋಷಣೆ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Gadag News: ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್‌ ಆಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್‌ ಆಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು

Gadag News: ಮನೆ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುವಾಗ ಗುಂಡು ಹಾರಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

KCL Season 1: ಸ್ಯಾಂಡಲ್‌ವುಡ್ ಕಲಾವಿದರು, ತಂತ್ರಜ್ಞರ ಸಮಾಗಮದಲ್ಲಿ ಏ.28ರಿಂದ ದುಬೈನ‌ ಶಾರ್ಜಾ ಮೈದಾನದಲ್ಲಿ ʼಕೆಸಿಎಲ್‌ʼ ಕ್ರಿಕೆಟ್ ಪಂದ್ಯಾವಳಿ ಆಯೋಜನೆ

ಏ.28ರಿಂದ ʼಕೆಸಿಎಲ್‌ʼ ಸೀಸನ್ 1 ಕ್ರಿಕೆಟ್ ಪಂದ್ಯಾವಳಿ ಆಯೋಜನೆ

KCL Season 1: ದುಬೈನಲ್ಲಿರುವ ಅನಿವಾಸಿ ಕನ್ನಡಿಗರು ಒಂದುಗೂಡಿ ಕರ್ನಾಟಕ ಸೆಲೆಬ್ರಿಟಿ ಲೀಗ್ (KCL) ಸೀಸನ್ 1 ಆಯೋಜಿಸುತ್ತಿದ್ದಾರೆ‌. ಏಪ್ರಿಲ್ 28 ರಿಂದ ಮೇ 3 ರವರೆಗೂ ದುಬೈನ‌ ಶಾರ್ಜಾ ಮೈದಾನದಲ್ಲಿ ಪಂದ್ಯಗಳು ನಡೆಯಲಿದ್ದು, ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ತಂತ್ರಜ್ಞರು ಮಾತ್ರ ಭಾಗವಹಿಸಲಿದ್ದಾರೆ. ಅವರಿಗಾಗಿಯೇ ಈ ಟೂರ್ನಿ ಆಯೋಜಿಸಲಾಗಿದೆ. ದುಬೈನಲ್ಲಿರುವ ಸುಮಾರು ಹತ್ತು ಸಾವಿರ ಕನ್ನಡಿಗರನ್ನು ಒಂದುಗೂಡಿಸುವುದೇ ʼಕೆಸಿಎಲ್ʼ ನ ಉದ್ದೇಶ ಎಂದು ಅನಿವಾಸಿ ಕನ್ನಡಿಗ ಮಯೂರ್ ಮಾಸ್ಟರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bank Holidays: ಏಪ್ರಿಲ್‌ ತಿಂಗಳಲ್ಲಿ ಬ್ಯಾಂಕ್‌ಗಳಿಗೆ ಭರ್ಜರಿ ರಜೆ, ಗ್ರಾಹಕರು ಗಮನಿಸಿ

ಏಪ್ರಿಲ್‌ ತಿಂಗಳಲ್ಲಿ ಬ್ಯಾಂಕ್‌ಗಳಿಗೆ ಭರ್ಜರಿ ರಜೆ, ಗ್ರಾಹಕರು ಗಮನಿಸಿ

ಏಪ್ರಿಲ್‌ ತಿಂಗಳಲ್ಲಿ ಬ್ಯಾಂಕ್‌ಗಳಿಗೆ ಸಾಕಷ್ಟು ಸಂಖ್ಯೆಯಲ್ಲಿ ರಜಾ ದಿನಗಳಿವೆ. ರಾಜ್ಯ ಸರ್ಕಾರ ಘೋಷಿಸಿರುವ ರಜೆಗಳು ಹಾಗೂ ಆರ್‌ಬಿಐ ಹಾಲಿಡೇ ಕ್ಯಾಲೆಂಡರ್ ಪ್ರಕಾರ ನೋಡುವುದಾದರೆ ಈ ಏಪ್ರಿಲ್ ತಿಂಗಳಲ್ಲಿ ಗರಿಷ್ಠ ರಜೆ ಇದೆ. ಬ್ಯಾಂಕ್‌ಗಳಿಗೆ ಯಾವಾಗ, ಯಾವ ಕಾರಣಕ್ಕೆ ರಜೆ ಎಂಬ ಪಟ್ಟಿ ಇಲ್ಲಿದೆ ನೋಡಿ.

MLC Rajendra: ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸಂಚು; ಸುಪಾರಿ ಕುರಿತ ಸ್ಫೋಟಕ ಆಡಿಯೊ ವೈರಲ್‌!

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸಂಚು; ಸುಪಾರಿ ಕುರಿತ ಸ್ಫೋಟಕ ಆಡಿಯೊ ವೈರಲ್‌

MLC Rajendra: ರಾಜೇಂದ್ರ ಹತ್ಯೆಗೆ ಸುಪಾರಿ ಬಗ್ಗೆ ವೈರಲ್‌ ಆಗಿರುವ ಆಡಿಯೊದಲ್ಲಿ ಮಹಿಳೆ ಮಾತನಾಡಿದ್ದಾಳೆ. ಡಿಸೆಂಬರ್‌ನಲ್ಲಿ ಪುಷ್ಪ ಹಾಗೂ ರಾಕಿ ಎನ್ನುವವರ ನಡುವೆ ನಡೆದ ಸಂಭಾಷಣೆಯ ಈ ಆಡಿಯೊದಲ್ಲಿದೆ. ಈ ಆಡಿಯೊದಿಂದಲೇ ಕೊಲೆ ಸುಪಾರಿಯ ವಿಚಾರ ರಾಜೇಂದ್ರಗೆ ತಿಳಿದಿತ್ತು.

ನಾಮ ಹಾಕಿದ ಮಾತ್ರಕ್ಕೆ ಹಿಂದು ಆಗಲ್ಲ: ಯತ್ನಾಳ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿ

ನಾಮ ಹಾಕಿದ ಮಾತ್ರಕ್ಕೆ ಹಿಂದು ಆಗಲ್ಲ: ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿ

kalladka Prabhakar Bhat: ವಿಜಯಪುರ ಶಾಸಕ ಹಾಗೂ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್‌ ಅವರು ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕ ಇವೆಂಟ್ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ (KEMA) ಗೆ ಹೊಸ ಕಾರ್ಯಕಾರಿ ಸಮಿತಿ ಆಯ್ಕೆ

ಕೆ.ಇ.ಎಂ.ಎ 4ನೇ ಕಾರ್ಯಕಾರಿ ಸಮಿತಿ ಚುನಾವಣೆ ಯಶಸ್ವಿ

2019ರಲ್ಲಿ ಮಿಸ್ಟರ್ ಸಂಜೀವ್ ಕಪೂರ್ ಮತ್ತು ಅರ್ವಿಂದ್ ಜ್ಯೋತ್ ಸಾಭನೇ ಅವರ ನೇತೃತ್ವದಲ್ಲಿ ಸ್ಥಾಪಿತವಾದ KEMA, ಇಂದು 150ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಪ್ರಮುಖ ವೃತ್ತಿಪರ ಸಂಘ ಟನೆಯಾಗಿ ಬೆಳೆದಿದೆ. ತರಬೇತಿ, ನೆಟ್‌ವರ್ಕಿಂಗ್ ಮತ್ತು ಸರ್ಕಾರಿ ವಲಯದೊಂದಿಗೆ ಸಮಾ ಲೋಚನೆ ನಡೆಸುವಲ್ಲಿ KEMA ಪ್ರಮುಖ ಪಾತ್ರವಹಿಸುತ್ತಿದೆ

Sirsi News: ಮಂಗನ ದಾಳಿ: ಕಾರ್ಮಿಕನ ಕಾಲಿಗೆ ಕಚ್ಚಿ ಗಂಭೀರ ಗಾಯ

ಮಂಗನ ದಾಳಿ: ಕಾರ್ಮಿಕನ ಕಾಲಿಗೆ ಕಚ್ಚಿ ಗಂಭೀರ ಗಾಯ

ಇಎಸ್ಐ ಆಸ್ಪತ್ರೆಯ ಆವರಣದಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ‌ ಕಾರ್ಮಿಕ ತನ್ನ, ಕೆಲಸ ಮುಗಿಸಿ ಮನೆಗೆ ವಾಪಸ್ ಆಗಬೇಕು ಎನ್ನುವ ವೇಳೆ‌ ಕಾರ್ಮಿಕನಾದ‌ ಅಂಬೇವಾಡಿಯ ನವಗ್ರಾಮದ ನಿವಾಸಿ ಪ್ರವೀಣ್ ವೆಂಕಟೇಶ ವಾಸಂದರ ಎಂಬುವವರ ಮೇಲೆ‌‌ ಮಂಗ ದಾಳಿ‌ ನಡೆಸಿದ‌ ಮಂಗ ಆತನ ಕಾಲಿಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ.

Self Harming: ಸಾಲದ ಸುಳಿ; ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ- ಮಗ ಆತ್ಮಹತ್ಯೆ

ಸಾಲದ ಸುಳಿ; ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ- ಮಗ ಆತ್ಮಹತ್ಯೆ

ಮೃತ ಯುವಕ ಪುಡ್​​ ಡೆಲಿವೆರಿ ಕೆಲಸ ಮಾಡುತ್ತಿದ್ದರು. ಮಾರಸಂದ್ರದ ಫೈವ್​​ ಸ್ಟಾರ್, ಸ್ವಿಗ್ಗಿ ಸೇರಿದಂತೆ ಹಲವು ಕಂಪನಿಗಳ ಡೆಲಿವರ್​ ಬಾಯ್​ ಆಗಿ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ನಂದಿ ಮೋರಿ ಬಳಿ ರಕ್ಷಿತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೂವರೆ ತಿಂಗಳ ಹಿಂದೆ ಮೃತ ಯುವಕನ ತಾಯಿ ಕೊನಘಟ್ಟ ಗ್ರಾಮದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

Niagara Falls: ಬೆಂಗಳೂರಿನಲ್ಲೂ ಭೋರ್ಗರೆಯುತ್ತಿದೆ ನಯಾಗರಾ ಜಲಪಾತ!

ಬೆಂಗಳೂರಿನಲ್ಲೂ ಭೋರ್ಗರೆಯುತ್ತಿದೆ ನಯಾಗರಾ ಜಲಪಾತ!

ಎರಡು ತಿಂಗಳ ಅವಧಿಯ ಮಹೋತ್ಸವ ಈಗ ನೋಡುಗರ ಕಣ್ಮನ ಸೆಳೆಯುತ್ತಿದೆ. ಬೆರಗುಗೊಳಿಸುವ ಈ ಜಲಪಾತ ಬಿನ್ನಿ ಮಿಲ್‌ನಲ್ಲಿ ನಡೆಯುತ್ತಿರುವ ಫ್ಯಾಮಿಲಿ ಫೇರ್‌ನಲ್ಲಿದೆ. ಇಲ್ಲಿ ಇತರ ಆಕರ್ಷಣೆಗಳೂ ಇವೆ. ಮಾರ್ಚ್ 28 ರಿಂದ ಪ್ರಾರಂಭವಾಗಿರುವ ಕಾರ್ನೀವಲ್ ಜೂನ್ 1 ರವರೆಗೆ ನಡೆಯಲಿದೆ.

Gold Price Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಹೀಗಿದೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ತಲಾ 1ರೂ. ಇಳಿಕೆ ಆಗಿದೆ. 8,359 ರೂ. ಮತ್ತು 9,119 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 66,872 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 83,590 ರೂ. ಮತ್ತು 100 ಗ್ರಾಂಗೆ 8,35,900 ರೂ. ನೀಡಬೇಕಾಗುತ್ತದೆ.

ಬಸವನಗುಡಿಯ ಆಚಾರ್ಯ ಪಾಠಶಾಲಾ ಟ್ರಸ್ಟ್ ಕಚೇರಿಯಲ್ಲಿ ಮನೆ ಯಂಗಳದಲ್ಲಿ ಪ್ರಶಸ್ತಿ ವಿತರಣೆ ಕಾರ್ಯಕ್ರಮ

ಅಖಂಡ ಭಾರತ ಖಾದಿ ಮಹಾ ಸಂಘಟನೆಯಿಂದ ಮೂವರು ಸಾಧಕರಿಗೆ ಪ್ರಶಸ್ತಿ ಪ್ರದಾನ

ಅಖಂಡ ಭಾರತ ಖಾದಿ ಮಹಾ ಸಂಘಟನೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಬಸವನಗುಡಿಯ ಆಚಾರ್ಯ ಪಾಠಶಾಲಾ ಟ್ರಸ್ಟ್ ಕಚೇರಿಯಲ್ಲಿ ಮನೆ ಯಂಗಳದಲ್ಲಿ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಿತು. ಮೂರು ಪ್ರಮುಖ ಸಾಧಕರನ್ನು ಗುರುತಿಸಿ ಗೌರವಿಸಲಾ ಯಿತು. "ವಿಶ್ವಗುರು ಬಸವೇಶ್ವರ ಪ್ರಶಸ್ತಿಯನ್ನು" ಆಚಾರ್ಯ ಪಾಠಶಾಲಾ ಕಾಲೇಜು ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಬಹು ಸಮಾಜ ಮುಖಿ ಚಿಂತಕರಾಗಿರುವಂತಹ ಡಾ. ವಿಷ್ಣು ಭಾರತ್ ಅಲಂಪಲ್ಲಿ ರವರಿಗೆ ಪ್ರಧಾನ ಮಾಡಿ ಗೌರವಿಸಲಾಯಿತು

Bangalore Traffic Advisory: ಇಂದು ರಂಜಾನ್‌ ಪ್ರಯುಕ್ತ ಸಂಚಾರ ಬದಲಾವಣೆ; ಚಾಮರಾಜಪೇಟೆ, ಮೈಸೂರು ರಸ್ತೆಗಳಲ್ಲಿ ಸಂಚರಿಸುವವರು ಗಮನಿಸಿ

ಇಂದು ರಂಜಾನ್‌ ಪ್ರಯುಕ್ತ ಸಂಚಾರ ಬದಲಾವಣೆ; ಬೆಂಗಳೂರಿಗರು ಗಮನಿಸಿ

ಮಾರ್ಚ್‌ 31ರಂದು ರಂಜಾನ್ ಹಬ್ಬದ ಪ್ರಯುಕ್ತ ಹಲವೆಡೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿರುವುದರಿಂದ ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಸಂಚಾರ ವ್ಯವಸ್ಥೆ ಬದಲಿಸಲಾಗುತ್ತಿದೆ. ಹಲವೆಡೆ ಪರ್ಯಾಯ ರಸ್ತೆ ವ್ಯವಸ್ಥೆ ಸೂಚಿಸಿ ಟ್ರಾಫಿಕ್‌ ಪೊಲೀಸರು ಪ್ರಕಟಣೆ ನೀಡಿದ್ದಾರೆ.

Murder Case: ಯುಗಾದಿಯ ಎಣ್ಣೆಪಾರ್ಟಿಯಲ್ಲಿ ಕುಖ್ಯಾತ ರೌಡಿಶೀಟರ್ ಕೊಚ್ಚಿ ಕೊಲೆ​​

ಯುಗಾದಿಯ ಎಣ್ಣೆಪಾರ್ಟಿಯಲ್ಲಿ ಕುಖ್ಯಾತ ರೌಡಿಶೀಟರ್ ಕೊಚ್ಚಿ ಕೊಲೆ​​

ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಹೆಬ್ಬಗೋಡಿ ಸೇರಿದಂತೆ ಹಲವೆಡೆ ಅಬ್ಬರಿಸುತ್ತ ಓಡಾಡುತ್ತಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಿದ್ದರು. ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್​​ಗೆ ಶಿಫ್ಟ್ ಆಗಿದ್ದ.

Assault Case: ಜೀವನಾಂಶ ಕೇಳಿದ ಮೊದಲ ಹೆಂಡತಿಗೆ ಮಚ್ಚಿನಿಂದ ಕೊಚ್ಚಿದ ರಾಕ್ಷಸ

ಜೀವನಾಂಶ ಕೇಳಿದ ಮೊದಲ ಹೆಂಡತಿಗೆ ಮಚ್ಚಿನಿಂದ ಕೊಚ್ಚಿದ ರಾಕ್ಷಸ

ತಿಮ್ಮಪ್ಪ ಯಾದವ್ ಹಾಗೂ ಪತ್ನಿ ಪದ್ಮಾವತಿಗೆ ನಾಲ್ಕು ಜನ ಮುದ್ದಾದ ಮಕ್ಕಳಿದ್ದಾರೆ. ಮೊದಮೊದಲು ಮಟ್ಕಾ ದಂಧೆ ನಡೆಸುತ್ತಿದ್ದ ತಿಮ್ಮಪ್ಪ ಬಳಿಕ ಪತ್ನಿಗೆ ನಿತ್ಯ ಟಾರ್ಚರ್ ಶುರು ಮಾಡಿದ್ದ. ಎರಡನೇ ಮದುವೆ ಆಗಲು ಹೊರಟಿದ್ದ. ಹೀಗಾಗಿ ಪತ್ನಿ ಪದ್ಮಾವತಿ ಕೋರ್ಟ್​ ಮೊರೆ ಹೋಗಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು.

Basanagouda Patil Yatnal: ಹಿಂದೂಗಳಿಗಾಗಿ ಹೊಸ ಪಕ್ಷ ರಚಿಸುವ ಚಿಂತನೆ: ಯತ್ನಾಳ್‌ ಬಾಂಬ್

ಹಿಂದೂಗಳಿಗಾಗಿ ಹೊಸ ಪಕ್ಷ ರಚಿಸುವ ಚಿಂತನೆ: ಯತ್ನಾಳ್‌ ಬಾಂಬ್

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪವಿದೆ, ಹಗರಣ ಮಾಡಿದ ಕುಟುಂಬ ಅದು. ಹಗರಣ ಮಾಡಿದ ಕುಟುಂಬವನ್ನು ಮುಂದುವರೆಸಿದರೆ . ರಾಜ್ಯದ ಜನರು ಒಂದು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇವತ್ತಿನಿಂದಲೇ ಜನ ಜಾಗೃತಿ ಶುರು ಮಾಡುತ್ತೇವೆ ಎಂದು ಹೈಕಮಾಂಡ್​​ಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿರು.