Dr yathindra Siddaramaiah: ʼಡಾ.ಯತೀಂದ್ರʼಗೆ ಒಲಿದು ಬಂದ ʼಮಂತ್ರಿʼಭಾಗ್ಯ
ಸಿಎಂ ಹುದ್ದೆಯಿಂದ ನಿರ್ಗಮಿಸುವ ಮುನ್ನ ಭವಿಷ್ಯದ ರಾಜಕೀಯ ಲೆಕ್ಕಾಚಾರಗಳನ್ನು ಹಾಕಿಕೊಂಡೇ ಉರುಳಿಸಿದ ಪಗಡೆ ಆಟದಲ್ಲಿ ಯಶ ಕಂಡಿರುವ ಸಿದ್ದರಾಮಯ್ಯ, ಮೈಸೂರಿನಲ್ಲಿ ತಮ್ಮ ಮಗನಿಗೆ ರಾಜಕೀಯದ ಭದ್ರ ನೆಲೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾತ್ರವಲ್ಲ, ಜಿಲ್ಲಾ ಉಸ್ತುವಾರಿ ಪಟ್ಟದ ಸನಿಹಕ್ಕೆ ತಂದು ಕೂರಿಸಿದ್ದಾರೆ.