ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Bengaluru Kidnap Case: ಕೋರಮಂಗಲ ಕಾಲ್‌ ಸೆಂಟರ್‌ ಉದ್ಯೋಗಿಗಳ ಕಿಡ್ನ್ಯಾಪ್‌ ಕೇಸ್‌; ಪೊಲೀಸ್‌ ಪೇದೆ ಸೇರಿ 8 ಮಂದಿ ಅರೆಸ್ಟ್‌

ಕಾಲ್‌ ಸೆಂಟರ್‌ ಉದ್ಯೋಗಿಗಳ ಕಿಡ್ನ್ಯಾಪ್‌ ಪ್ರಕರಣ; 8 ಮಂದಿ ಅರೆಸ್ಟ್‌

ಕೋರಮಂಗಲದಲ್ಲಿರುವ ಕಾಲ್‌ಸೆಂಟರ್‌ವೊಂದರಿಂದ ನಾಲ್ವರು ಉದ್ಯೋಗಿಗಳನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಶುಕ್ರವಾರ ಮಧ್ಯರಾತ್ರಿ ಕಾಲ್‌ಸೆಂಟರ್ ಬಳಿ ಹೋಗಿದ್ದ ಆರೋಪಿಗಳು, ನಾಲ್ವರನ್ನು ಕರೆದು ನಾವು ಪೊಲೀಸರು ಎಂದು ಬೆದರಿಸಿ, ಅಪಹರಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ 8 ಆರೋಪಿಗಳನ್ನು ಬಂಧಿಸಲಾಗಿದೆ.

Bengaluru Robbery Case: 7.11 ಕೋಟಿ ದರೋಡೆಗೆ ಅಸಲಿ ಕಾರಣ ಬಹಿರಂಗ; ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಖದೀಮರು!

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ದರೋಡೆಗೆ ಅಸಲಿ ಕಾರಣ ಬಹಿರಂಗ!

Bengaluru News: ನವೆಂಬರ್ 19ರಂದು ಬೆಂಗಳೂರಿನಲ್ಲಿ ನಡೆದಿದ್ದ ನಗದು ವಾಹನ ದರೋಡೆ ಪ್ರಕರಣವನ್ನು ಕೇವಲ 60 ಗಂಟೆಗಳಲ್ಲೇ ಭೇದಿಸಿ, ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಹೈದರಾಬಾದ್‌ನ ಲಾಡ್ಜ್‌ನಲ್ಲಿ ಮತ್ತೆ ಮೂವರನ್ನು ಶನಿವಾರ ಅರೆಸ್ಟ್‌ ಮಾಡಲಾಗಿತ್ತು.

MAHE: ʼಎಐ ಯುಗದಲ್ಲಿ ಮರುಅನ್ವೇಷಣೆʼ: ಮಾಹೆಯ 33ನೇ ಘಟಿಕೋತ್ಸವದಲ್ಲಿ ಕಿವಿಮಾತು

ಮಾಹೆಯ 33ನೇ ಘಟಿಕೋತ್ಸವದಲ್ಲಿ ಕಿವಿಮಾತು

ಎರಡನೇ ದಿನದ ಘಟಿಕೋತ್ಸವದಲ್ಲಿ, 48 ಪಿಎಚ್‌ಡಿ ಪದವೀಧರರು ಸೇರಿ ಒಟ್ಟು 1,651 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ಮೂರು ವಿದ್ಯಾರ್ಥಿಗಳು ಪ್ರತಿಷ್ಠಿತ ಡಾ. ಟಿ.ಎಂ.ಎ. ಪೈ ಚಿನ್ನದ ಪದಕವನ್ನು ಮುಡಿ ಗೇರಿಸಿ ಕೊಂಡರು.

Cm Siddaramaiah: ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ತಲೆ ಬಾಗಲೇ ಬೇಕು; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿದ್ದೇನು?

ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿದ್ದೇನು?

Mallikharjun Kharge: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಭಾರೀ ಕಸರತ್ತು ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

Karnataka Weather: ಇಂದಿನ ಹವಾಮಾನ; ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ

ಇಂದಿನ ಹವಾಮಾನ; ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

ಮಾಹೆಯ 33ನೇ ಘಟಿಕೋತ್ಸವ: ʼಎಐ ಕಾಲಮಾನದಲ್ಲೂ ಮೇಲಗೈಯಾಗಲಿ ಮನುಷ್ಯನ ನಿರ್ಧಾರʼ

ʼಎಐ ಕಾಲಮಾನದಲ್ಲೂ ಮೇಲಗೈಯಾಗಲಿ ಮನುಷ್ಯನ ನಿರ್ಧಾರʼ

ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಸಮಿತಿ-2025ರಲ್ಲಿ (ಎನ್‌ಐಆರ್‌ಎಫ್‌) ವಿಶ್ವವಿದ್ಯಾಲಯ ಗಳ ವಿಭಾಗದಲ್ಲಿ 3ನೇ ಸ್ಥಾನ ಗಳಿಸುವ ಮೂಲಕ ಮಾಹೆಯು ಭಾರತೀಯ ಉನ್ನತ ಶಿಕ್ಷಣದಲ್ಲಿ ತನ್ನ ನಾಯಕತ್ವವನ್ನು ಪುನರುಚ್ಚರಿಸಿದೆ. ಘಟಿಕೋತ್ಸವದ ಮೊದಲ ದಿನದಂದು 64 ಪಿಎಚ್‌ಡಿ ಪದವೀಧರರು ಸೇರಿ ಒಟ್ಟು 1,648 ವಿದ್ಯಾರ್ಥಿಗಳಿಗೆ ಪದವಿ ನೀಡಲಾಯಿತು.

Senior Citizens' Day: ಬೆಂಗಳೂರಲ್ಲಿ ನ.23ಕ್ಕೆ ಹಿರಿಯರ ಹಬ್ಬ 2025; ಹಿರಿಯ ನಾಗರಿಕರ ಚೈತನ್ಯ, ಶಕ್ತಿ & ಜ್ಞಾನದ ಸಂಭ್ರಮಕ್ಕೆ ವೇದಿಕೆ ಸಜ್ಜು!

ಬೆಂಗಳೂರಲ್ಲಿ ನ.23ಕ್ಕೆ ಹಿರಿಯರ ಹಬ್ಬ 2025

ಈ ಹಬ್ಬದ ಪ್ರಮುಖ ವಿಶೇಷತೆ ಎಂದರೆ, ಇಲ್ಲಿ ಹಿರಿಯರೇ ಪ್ರದರ್ಶಕರಾಗಿ, ಮಳಿಗೆಗಳ ಮಾಲೀಕ ರಾಗಿ, ಸ್ವಯಂಸೇವಕರಾಗಿ ಮತ್ತು ಆಯೋಜಕರಾಗಿ ಕಾರ್ಯಕ್ರಮದ ನೇತೃತ್ವವನ್ನು ವಹಿಸು ತ್ತಾರೆ. ಈ ಮೂಲಕ ವಯಸ್ಸಾಗ್ತಿದೆ ಎಂಬುದು ಸೃಜನಶೀಲತೆ, ಎಲ್ಲರೊಂದಿಗೆ ಬೆರೆಯುವುದು ಮತ್ತು ಹೊಸ ಉದ್ದೇಶವನ್ನು ಕಂಡುಕೊಳ್ಳುವ ಹಂತ ಎಂಬುದು ಮತ್ತೊಮ್ಮೆ ಸಾಬೀತಾಗಲಿದೆ.

SSAHE 14th Convocation: ಸಿದ್ಧಾರ್ಥ ಸಂಸ್ಥೆಯಲ್ಲಿ ಶೇ.60 ಹೆಣ್ಣು ಮಕ್ಕಳು ಶಿಕ್ಷಣ ಪಡೆಯುತ್ತಿರುವುದು ಹೆಮ್ಮೆಯ ಸಂಗತಿ: ಜೈರಾಮ್ ರಮೇಶ್

ಸಾಹೇಯಲ್ಲಿ ಶೇ.60ರಷ್ಟು ವಿದ್ಯಾರ್ಥಿನಿಯರು; ಜೈರಾಮ್ ರಮೇಶ್ ಮೆಚ್ಚುಗೆ

Jairam Ramesh: ತುಮಕೂರಿನ ಅಗಳಕೋಟೆಯ ಶಿಕ್ಷಣ ಭೀಷ್ಮ ಡಾ.ಎಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಸಾಹೇ) ಸಂಸ್ಥೆಯ 14ನೇ ಘಟಿಕೋತ್ಸವ ಶನಿವಾರ ನಡೆಯಿತು. ಒಟ್ಟು 1086 ಮಂದಿಗೆ ಪದವಿ, 14 ಮಂದಿಗೆ ಪಿಎಚ್.ಡಿ ಪದವಿ, ವೈದ್ಯಕೀಯದಲ್ಲಿ 03, ದಂತ ವೈದ್ಯಕೀಯದಲಿ 02, ಮತ್ತು ಎಂಜಿನಿಯರಿಂಗ್‌ನಲ್ಲಿ 8 ಮಂದಿ ಸೇರಿದಂತೆ ಒಟ್ಟು 15 ಮಂದಿಗೆ ಚಿನ್ನದ ಪದಕ ಮತ್ತು ಪದವಿಗಳನ್ನು ಪ್ರದಾನ ಮಾಡಲಾಗಿದೆ.

ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ: ಡಿ.ಕೆ. ಶಿವಕುಮಾರ್

ಭೂಸ್ವಾಧೀನ ಕೋರ್ಟ್: ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ

D.K. Shivakumar: ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಜಲ ಸಂಪನ್ಮೂಲ, ಬಿಡಿಎ ಭೂಸ್ವಾಧೀನ ಪ್ರಕರಣಗಳ ಕುರಿತು ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸೌಧದಲ್ಲಿ ಶನಿವಾರ ಸಭೆ ನಡೆಸಿದರು. ಈ ವೇಳೆ ವಿವಿಧ ವಿಚಾರಗಳ ಬಗ್ಗೆ ಮಾತನಾಡಿದರು.

Gauribidanur News: ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದು ರೈತರ ಹಿತ ಕಾಪಾಡಬೇಕು: ಎಂ .ಆರ್. ಲಕ್ಷ್ಮೀನಾರಾಯಣ್ ಆಗ್ರಹ

ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದು ರೈತರ ಹಿತ ಕಾಪಾಡಬೇಕು

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಸಮನ್ವಯ ಕೊರತೆಯಿಂದಾಗಿ, ಮೆಕ್ಕೆಜೋಳ ಬೆಳೆ ಬೆಳೆದ ರೈತರು ಬೀದಿಗೆ ಬಿದ್ದಿದಾರೆ, ಈ ಕೂಡಲೆ ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿ ಕೇಂದ್ರ ಗಳನ್ನು ತೆರೆದು ರೈತರ ಹಿತ ಕಾಪಾಡಬೇಕು, ವಿಳಂಬ ಮಾಡಿದರೆ ರೈತರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

Koratagere News: ಪತ್ರಕರ್ತರ ಸಮಸ್ಯೆಗಳನ್ನು ಸರ್ಕಾರ ಆಲಿಸಲಿ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಪತ್ರಕರ್ತರ ಸಮಸ್ಯೆಗಳನ್ನು ಸರ್ಕಾರ ಆಲಿಸಲಿ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಸಸ್ಯ ಸಂಜೀವಿನಿ ಕ್ಷೇತ್ರ ಸಿದ್ದರಬೆಟ್ಟದ ಮಠದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಪತ್ರಕರ್ತರಿಗೆ ಗೌರವಿಸಿ ಸನ್ಮಾನಿಸಲಾಯಿತು.

Veteran actor Balakrishna: ಹಿಂದೂ ಧರ್ಮರಕ್ಷಣೆ ಪ್ರತಿಯೊಬ್ಬರ ಹೊಣೆ: ನಟ ಬಾಲಕೃಷ್ಣ

ಹಿಂದೂ ಧರ್ಮರಕ್ಷಣೆ ಪ್ರತಿಯೊಬ್ಬರ ಹೊಣೆ: ನಟ ಬಾಲಕೃಷ್ಣ

ಬಾಲಕೃಷ್ಣ ಅವರು ಅವರ ತಂದೆ ಎನ್ .ಟಿ . ರಾಮರಾವ್, ವರನಟ ಪದ್ಮಭೂಷಣ ಡಾ ರಾಜ ಕುಮಾರ್ , ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಮರಣೆ ಮಾಡಿದ ಬಾಲಕೃಷ್ಣ ನಾನು ಲೆಜೆಂಡಾದರೆ, ಶಿವರಾಜ್ ಕುಮಾರ್ ಲೀಡರ್ ಎಂದು ಸಂಬೋಧಿಸಿ ನಟನೆ  ರಾಜ್ ಕುಟುಂಬಕ್ಕೆ ಕರಗತವಾಗಿದೆ ಎಂದು ಅಖಂಡ-2 ಶಿವನ ಆಧಾರಿತ ಚಿತ್ರವಾಗಿದ್ದು ಚಿಂತಾ ಮಣಿ ಕ್ಷೇತ್ರದಲ್ಲಿ ಕೈಲಾಸ ಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಭಗವಂತನ ದರ್ಶನ ಪಡೆಯಲಿದ್ದೇನೆ.

Chikkaballapur News: ಹಿರಿಯ ನಾಗರಿಕರಿಗೆ ಆರೋಗ್ಯಕರ ಜೀವನಶೈಲಿಗೆ ಆಯುರ್ ವೇದ ಉತ್ತಮ: ಡಾ.ಎಸ್.ಮಂಜುಳ ಸಲಹೆ

ಹಿರಿಯ ನಾಗರಿಕರಿಗೆ ಆರೋಗ್ಯಕರ ಜೀವನಶೈಲಿಗೆ ಆಯುರ್ ವೇದ ಉತ್ತಮ

ನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ ಸರ್ಕಾರಿ ನಿವೃತ್ತನೌಕರರ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಮಾಹೆಗೊಮ್ಮೆ ಆರೋಗ್ಯ ಸಲಹೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಇಂದಿನ ದಿನಗಳಲ್ಲಿ ಬಿಪಿ, ಸಕ್ಕರೆ ಕಾಯಿಲೆ ಜೊತೆಗೆ ಇನ್ನಿತರ ಆರೋಗ್ಯ ಸಮಸ್ಯೆಗಳು ಸಣ್ಣ ವಯಸ್ಸಿಗೆ ಕಂಡು ಬರುತ್ತಿರುವುದರಿಂದ, ಪ್ರತಿಯೊಬ್ಬರೂ ಕೆಲವೊಂದು ಆರೋಗ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು.

HD Deve Gowda: ಎನ್‌ಡಿಎ ಜತೆ ಯಾವುದೇ ಕಾರಣಕ್ಕೂ ಮೈತ್ರಿ ಕಡಿದುಕೊಳ್ಳಲ್ಲ: ಎಚ್.ಡಿ. ದೇವೇಗೌಡ

ಎನ್‌ಡಿಎ ಜತೆ ಯಾವುದೇ ಕಾರಣಕ್ಕೂ ಮೈತ್ರಿ ಕಡಿದುಕೊಳ್ಳಲ್ಲ: ಎಚ್.ಡಿ. ದೇವೇಗೌಡ

JDS Karnataka: ಜೆಡಿಎಸ್ ಪಕ್ಷದಲ್ಲೇ ಇದ್ದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರನ್ನು ನಾನು ಸಿಎಂ ಮಾಡಲು ತಯಾರಿದ್ದೆ. ಆದರೆ ಸೋನಿಯಾ ಗಾಂಧಿ ಅವರು ಧರ್ಮಸಿಂಗ್ ಅವರನ್ನು ಸಿಎಂ ಮಾಡಲು ಪಟ್ಟು ಹಿಡಿದರು. ಈ ಬಗ್ಗೆ ಸಿದ್ದರಾಮಯ್ಯ ಬೇಕಿದ್ದರೆ ಸೋನಿಯಾ ಗಾಂಧಿ ಅವರನ್ನು ಕೇಳಲಿ ಎಂದು ಹೇಳಿದ್ದಾರೆ.

SFI Protest: ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಉಣ ಬಡಿಸುತ್ತಿರುವ ಮುಖ್ಯಶಿಕ್ಷಕನ ವಿರುದ್ದ ಕಾನೂನು ಕ್ರಮ

ಅಕ್ಷರ ದಾಸೋಹ ಆಹಾರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳ ಆಹಾರ ಪದಾರ್ಥ ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಕಳಪೆ ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ಉಣಬಡಿಸುತ್ತಿರುವ ಮುಖ್ಯ ಶಿಕ್ಷಕನ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಎಸ್‌ಎಫ್‌ ಐ ಮುಖಂಡ ಸೋಮಶೇಖರ್ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದರು.

Sadhguru Shri Madhusudan Sai: ಒಂದು ಜಗತ್ತು ಒಂದು ಕುಟುಂಬ ಸಾಕಾರಗೊಳಿಸಲು ಮಾಧ್ಯಮದ ಸಹಕಾರ ಅಗತ್ಯ : ಸದ್ಗುರು ಶ್ರೀ ಮಧುಸೂದನ ಸಾಯಿ

ಒಂದು ಜಗತ್ತು ಒಂದು ಕುಟುಂಬ ಸಾಕಾರಗೊಳಿಸಲು ಮಾಧ್ಯಮದ ಸಹಕಾರ ಅಗತ್ಯ

ಸಮಾಜದ ಪರವಾಗಿ ನಿಂತವರು, ಸಾಮಾಜಿಕ ಕಳಕಳಿ ಇರುವವರನ್ನು ಗುರುತಿಸಿ ಬೆಂಬಲಿಸಲು 'ವಾಯ್ಸ್ ಆಫ್ ದಿ ಪೀಪಲ್ಸ್ ಅವಾರ್ಡ್' ಸ್ಥಾಪಿಸಲಾಗಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮವು ರೂಪುಗೊಂಡಿದೆ. ಟಿಆರ್‌ಪಿ ಮತ್ತು ಇತರೆ ವಿಚಾರಗಳಿಂದ ಚಾನೆಲ್‌ಗಳು ಹಾಗೂ ಇತರೆ ಮಾಧ್ಯಮಗಳ ಮೇಲೆ ಒತ್ತಡ ಹೇರುತ್ತಿರುವ ಈ ಕಾಲದಲ್ಲಿ ಜನರು ಏನು ಬಯಸುತ್ತಾರೆ ಎಂಬುದನ್ನು ತಿಳಿಯುವುದು ಮುಖ್ಯವಾಗಿದೆ.

Basavaraj Bommai: ರಾಜಕೀಯ ರೊಟ್ಟಿ ಸುಟ್ಟುಕೊಳ್ಳಲು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದಾರೆ: ಬಸವರಾಜ ಬೊಮ್ಮಾಯಿ

ರಾಜಕೀಯ ರೊಟ್ಟಿ ಸುಟ್ಟುಕೊಳ್ಳಲು ಗ್ಯಾರಂಟಿ ಯೋಜನೆ ಜಾರಿ: ಬೊಮ್ಮಾಯಿ

congress guarantees: ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಪ್ರಾಮಾಣಿಕವಾಗಿ ಜನರಿಗೆ ಅನುಕೂಲ ಮಾಡಲು ಅಲ್ಲ. ಆಡಳಿತ ಪಕ್ಷದ ಶಾಸಕರೇ ಯಾವುದೇ ರೀತಿಯ ಅಭಿವೃದ್ಧಿ ಆಗಿಲ್ಲ ಅಂತ ಹೇಳುತ್ತಿದ್ದಾರೆ. ಇವರು ಬಂದ ಮೇಲೆ ಸುಮಾರು ಮೂರುವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಅವರ ಅವಧಿ ಮುಗಿಯುವಷ್ಟರಲ್ಲಿ ಆರು ಲಕ್ಷ ಕೋಟಿ ಸಾಲವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

HD Kumaraswamy: ಶೀಘ್ರವೇ ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆ; ಸಿಎಂ ಬದಲಾವಣೆ ಸುಳಿವು ಕೊಟ್ರಾ ಕುಮಾರಸ್ವಾಮಿ?

ಶೀಘ್ರವೇ ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆ: ಕುಮಾರಸ್ವಾಮಿ

Karnataka CM Race: ಆಡಳಿತ ಪಕ್ಷ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಪರೋಕ್ಷವಾಗಿ ಬೊಟ್ಟು ಮಾಡಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ದಿನಕ್ಕೊಂದು, ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

ಈಕ್ಯೂಬ್‌ ಸ್ಯಾಪ್‌ ಚಾಂಪಿಯನ್ಸ್ ಪ್ರಶಸ್ತಿ 2025ರ ಸಂಭ್ರಮ

ಈಕ್ಯೂಬ್‌ ಸ್ಯಾಪ್‌ ಚಾಂಪಿಯನ್ಸ್ ಪ್ರಶಸ್ತಿ 2025ರ ಸಂಭ್ರಮ

EFIL ಶೈಕ್ಷಣಿಕ ಸೇವೆಗಳು ಮತ್ತು EQUBE ನ ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಜೆ. ಎಂ. ಸಂಪತ್ ಮಾತನಾಡಿ, “ಈ ಯುವ ಮನಸ್ಸುಗಳು ಸಹಾನುಭೂತಿ ಮತ್ತು ಸಾಮಾಜಿಕ ಅರಿವು ಕಲಿಸಬೇಕಾದ ವಿಷಯಗಳಲ್ಲ, ಬದಲಾಗಿ ಬದುಕಬೇಕಾದ ಮೌಲ್ಯಗಳು ಎಂಬುದನ್ನು ನಮಗೆ ನೆನಪಿಸುತ್ತವೆ.

Pralhad Joshi: ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಸಿಎಂ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ: ಪ್ರಲ್ಹಾದ್‌ ಜೋಶಿ ಕಿಡಿ

ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಸಿಎಂ ಸುಳ್ಳು ಹೇಳುತ್ತಿದ್ದಾರೆ: ಜೋಶಿ

Maize import: ಮೆಕ್ಕೆಜೋಳ ಖರೀದಿ, ಎಥೆನಾಲ್ ಉತ್ಪಾದನೆ ಮತ್ತು ಬೆಂಬಲ ಬೆಲೆ ನೀಡುವಲ್ಲಿ ರಾಜ್ಯ ಸರ್ಕಾರ ತಾನು ತತ್ ಕ್ಷಣ ಕೈಗೊಳ್ಳಬೇಕಾದ ಕಾರ್ಯ ಮರೆತು ಕೇಂದ್ರದತ್ತ ಬೊಟ್ಟು ತೋರುತ್ತಿದೆ. ಅಲ್ಲದೇ, ಸಿಎಂ ಮೆಕ್ಕೆಜೋಳ ಆಮದು ಬಗ್ಗೆ ಹಸಿ ಹಸಿ ಸುಳ್ಳುಗಳ ರೈಲು ಬಿಡುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

JDS silver jubilee celebration: ಜೆಡಿಎಸ್‌ ರಜತ ಮಹೋತ್ಸವ; ಪಕ್ಷದ ಚಿನ್ಹೆಯುಳ್ಳ ಬೆಳ್ಳಿ ನಾಣ್ಯ ಲೋಕಾರ್ಪಣೆ ಮಾಡಿದ ಎಚ್‌.ಡಿ.ದೇವೇಗೌಡ

ಜೆಡಿಎಸ್‌ ರಜತ ಮಹೋತ್ಸವ; ಪಕ್ಷದ ಚಿನ್ಹೆಯುಳ್ಳ ಬೆಳ್ಳಿ ನಾಣ್ಯ ಲೋಕಾರ್ಪಣೆ

HD Deve Gowda: ಜೆಡಿಎಸ್ ಪಕ್ಷದ 25 ವರ್ಷಗಳ ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಬೆಳ್ಳಿ ನಾಣ್ಯ ಮತ್ತು ವಾಟ್ಸ್‌ಆ್ಯಪ್‌ ಲೈನ್ ನಂಬರ್ ಅನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಲೋಕಾರ್ಪಣೆ ಮಾಡಿದರು.

DK Shivakumar: ಗಾಳ ಹಾಕಿ ಮೀನು ಹಿಡಿಯುವುದು ಹೇಗೆಂದು ನನಗೆ ಗೊತ್ತು: ಡಿ.ಕೆ. ಶಿವಕುಮಾರ್

ಗಾಳ ಹಾಕಿ ಮೀನು ಹಿಡಿಯುವುದು ಹೇಗೆಂದು ಗೊತ್ತು: ಡಿ.ಕೆ. ಶಿವಕುಮಾರ್

World Fisheries Day: ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

KV Prabhakar: ಬದುಕು ನೀಡುವ ಸಂಕಟ, ನೋವಿಗೆ ದೈವದ ನುಡಿಗಳು ಮದ್ದಾಗುತ್ತವೆ: ಕೆ.ವಿ. ಪ್ರಭಾಕರ್

ಬದುಕು ನೀಡುವ ಸಂಕಟ, ನೋವಿಗೆ ದೈವದ ನುಡಿಗಳು ಮದ್ದಾಗುತ್ತವೆ: ಕೆವಿಪಿ

ʼನಾನಿದ್ದೇನೆ ಚಿಂತೆ ಬಿಡುʼ ಎಂದು ದೈವವಾಡುವ ಮಾತು ಎಂಥ ಪರಿಸ್ಥಿತಿಯಲ್ಲಿದ್ದವರನ್ನೂ ಧೈರ್ಯಸ್ಥರನ್ನಾಗಿ ಮಾಡುತ್ತದೆ. ಹಿರಿಯರಿಲ್ಲದ, ಸಾಂತ್ವನಕ್ಕೆ ಹೆಗಲೇ ಇಲ್ಲದವರಿಗೂ ದೈವ ತಾನಿದ್ದೇನೆ ಎಂದು ಭರವಸೆ ಕೊಡುವುದು, ಅಸಹಾಯಕರ ಪರವಾಗಿ ನಿಲ್ಲುವುದರ ಹಿಂದೆಯೂ ಸಮಾನತೆ ಹಾಗೂ ಅಂತಃಕರಣದ ಆಶಯವೇ ಅಡಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದ್ದಾರೆ.

Karnataka Weather: ಮುಂದಿನ 3 ದಿನ ಬೆಂಗಳೂರು, ಕೋಲಾರ ಸೇರಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಮುಂದಿನ 3 ದಿನ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Loading...