ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಛಲವಾದಿ ನಾರಾಯಣಸ್ವಾಮಿಯನ್ನು ನಾಯಿಗೆ ಹೋಲಿಸಿದ ಶಾಸಕ ಅಶೋಕ್ ರೈ; ದೂರು ದಾಖಲು

ಛಲವಾದಿ ನಾರಾಯಣಸ್ವಾಮಿಯನ್ನು ನಾಯಿಗೆ ಹೋಲಿಸಿದ ಶಾಸಕ ಅಶೋಕ್ ರೈ

ಪುತ್ತೂರು ಶಾಸಕ ಅಶೋಕ್‌ ಕುಮಾ‌ರ್ ರೈ ಅವರು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿರುವ ಛಲವಾದಿ ಟಿ. ನಾರಾಯಣಸ್ವಾಮಿಯವರನ್ನು ನಿಂದಿಸಿದ್ದಾರೆ. ಛಲವಾದಿ ಸಮುದಾಯವನ್ನು ನಿಂದಿಸಿ, ಸಮುದಾಯಗಳ ನಡುವೆ ದ್ವೇಷ ಭಾವನೆ ಬರುವ ರೀತಿ ಮಾತನಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಬಿಜೆಪಿ ಎಸ್‌ಸಿ ಮೋರ್ಚಾ ಆಗ್ರಹಿಸಿದೆ.

ರೈತರ ಹಿತಕ್ಕೆ ಅಮೇರಿಕ ಒಪ್ಪಂದ ಮಾಡಿರುವುದು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ರೈತರ ಹಿತಕ್ಕೆ ಅಮೇರಿಕ ಒಪ್ಪಂದ ಮಾಡಿರುವುದು

ರೈತ ಪರ ಕೆಲಸಗಳನ್ನು ಎಂದೂ ಮಾಡಿಲ್ಲ. ವಿಷಯವಂತೂ ಮೊದಲೇ ತಿಳಿಯಲ್ಲ, ಯಾರೋ ಹೇಳುತ್ತಾರೆ ರಾಹುಲ್ ಗಾಂಧಿ ಅವರು ಮಾತನಾಡುತ್ತಾರೆ ಅಷ್ಟೇ ಎಂದು ವ್ಯಂಗ್ಯವಾಡಿದ ಅವರು ಕೇಂದ್ರ ಸರ್ಕಾರದಿಂದ ಬರುವ ಅನುದಾನಗಳನ್ನು ರೈತರ ಪರವಾಗಿ ನಿಂತು ಸರಿಯಾಗಿ ಉಪಯೋಗ ಮಾಡಿಕೊಳ್ಳದ ರಾಜ್ಯದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವ ನೈತಿಕತೆ ಉಳಿಸಿ ಕೊಂಡಿಲ್ಲ

Chikkaballapur News: ಶ್ರದ್ಧಾಭಕ್ತಿಯಿಂದ ನಡೆದ ಶ್ರೀಭೋಗನಂದೀಶ್ವರ, ಗಿರಿಜಾಂಬ ಸಹಿತ ಗಣಪತಿ ದೇವರ ಐತಿಹಾಸಿಕ ಜೋಡಿ ಬ್ರಹ್ಮರಥೋತ್ಸವ

ಹರನಾಮಸ್ಮರಣೆಯ ನಡುವೆ ದೇವಾಲಯ ಪ್ರದಕ್ಷಿಣೆ

ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇವಾಲಯದ ಆವರಣದಲ್ಲಿ ಸರ್ವಾ ಲಂಕೃತ ಜೋಡಿ ರಥಗಳಲ್ಲಿ ವಿರಾಜಮಾನವಾಗಿದ್ದ ಶ್ರೀಭೋಗನಂದೀಶ್ವರಸ್ವಾಮಿ, ಗಿರಿಜಾಂಬ ಸಹಿತ ಗಣಪತಿ ಮೂರ್ತಿಗಳಿದ್ದ ಬ್ರಹ್ಮರಥೋತ್ಸವಕ್ಕೆ ಸೋಮವಾರ ಮಧ್ಯಾಹ್ನ 12.30ರ ಶುಭ ಮಹೂರ್ತದಲ್ಲಿ ಪೂಜೆ ಸಲ್ಲಿಸಿ ಈಡುಗಾಯಿ ಒಡೆಯುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ನೂತನ ಜಿಲ್ಲಾಧಿಕಾರಿ ಜಿ.ಪ್ರಭು ಚಾಲನೆ ನೀಡಿದರು.

Chikkaballapur News: ಫೆ.18 ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ

ಫೆ.18 ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ

ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಹಿಂದು ಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ನೆರವೇರಿಸಲಿದ್ದಾರೆ.

ಪುತ್ತೂರು ಕಾಲೇಜು ಸ್ಥಳಾಂತರ ವಿಚಾರಕ್ಕೆ ಶಾಸಕನಿಗೇ ಲೇಡಿ ಪ್ರಿನ್ಸಿಪಾಲ್‌ ಕ್ಲಾಸ್‌; ತಬ್ಬಿಬ್ಬಾದ ಅಶೋಕ್ ರೈ!

ಪುತ್ತೂರು ಕಾಲೇಜು ಪ್ರಾಂಶುಪಾಲೆಯಿಂದ ಶಾಸಕ ಅಶೋಕ್ ರೈಗೆ ಕ್ಲಾಸ್!

Puttur News: ಪುತ್ತೂರಿನಲ್ಲಿ ಸರ್ಕಾರಿ ಮಹಿಳಾ ಪದವಿ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನಾ ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಆಗಮಿಸಿ, ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಶಾಸಕರಿಗೇ ಪ್ರಾಂಶುಪಾಲೆ ವೇದಶ್ರೀ ನಿತ್ಯಾ ಕ್ಲಾಸ್‌ ತೆಗೆದುಕೊಂಡಿದ್ದಾರೆ.

Dr.M.C.Sudhakar: ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಚಾಲನೆ

ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಚಾಲನೆ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಲಾಭ ತಂದುಕೊಡುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಬೆಂಬಲ ಬೆಲೆ ಯೋಜನೆಯಡಿ ವಿವಿಧ ಬೆಳೆಗಳಿಗೆ ಸರ್ಕಾರ ನಿಗದಿಪಡಿಸಿರುವ ದರವು ಮಾರುಕಟ್ಟೆ ದರಕ್ಕಿಂತ ಹೆಚ್ಚಾಗಿದೆ. ಆದ್ದರಿಂದ ಜಿಲ್ಲೆಯ ರೈತರು ಸಹ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಮೆಕ್ಕೆಜೋಳ ಮಾರಾಟ ಮಾಡಲು ಆಸಕ್ತಿ ತೋರಿದ್ದಾರೆ.

Make in India: ದೇಶೀಯವಾಗಿ ವಿಶ್ವ ದರ್ಜೆಯ ಮೌಲ್ಯವರ್ಧಿತ ಉಕ್ಕು ಲಭ್ಯ: 'ಮೇಕ್ ಇನ್ ಇಂಡಿಯಾ' ದೃಷ್ಟಿಕೋನಕ್ಕೆ ಕೊಡುಗೆ

ದೇಶೀಯವಾಗಿ ವಿಶ್ವ ದರ್ಜೆಯ ಮೌಲ್ಯವರ್ಧಿತ ಉಕ್ಕು ಲಭ್ಯ

ವಿಶ್ವ ದರ್ಜೆಯ ಮೌಲ್ಯವರ್ಧಿತ ಉಕ್ಕುಗಳನ್ನು ದೇಶೀಯವಾಗಿ ಲಭ್ಯವಾಗುವಂತೆ ಮಾಡುವ ಮೂಲಕ, ನಾವು 'ಮೇಕ್ ಇನ್ ಇಂಡಿಯಾ' ದೃಷ್ಟಿಕೋನಕ್ಕೆ ಕೊಡುಗೆ ನೀಡುತ್ತಿದ್ದೇವೆ, ಅದೇ ಸಮಯದಲ್ಲಿ ನಮ್ಮ ಗ್ರಾಹಕರು ವಿಶ್ವಾಸದಿಂದ ವಿಭಿನ್ನ ಉತ್ಪನ್ನಗಳನ್ನು ನಿರ್ಮಿಸಲು ಮತ್ತು ದೇಶೀಯವಾಗಿ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕ ಪ್ರಯೋಜನವನ್ನು ಪಡೆಯಲು ಅನುವು ಮಾಡಿಕೊಡುತ್ತೇವೆ.

ನಿಗೂಢವಾಗಿ ಮೃತಪಟ್ಟ ಕರ್ನಾಟಕದ ವಿದ್ಯಾರ್ಥಿ ಸಾಕೇತ್‌ ಶ್ರೀನಿವಾಸಯ್ಯ  ಪಾಲಕರು ಶೀಘ್ರದಲ್ಲೇ ಅಮೆರಿಕಕ್ಕೆ; ತನಿಖೆ ಏನಾಯ್ತು?

ಶೀಘ್ರದಲ್ಲೇ ಅಮೆರಿಕಕ್ಕೆ ತೆರಳಲಿದ್ದಾರೆ ಸಾಕೇತ್‌ ಪಾಲಕರು

Saketh Sreenivasaiah: ಅಮೆರಿಕದ ಕ್ಯಾಲಿಫೋರ್ನಿಯಕ್ಕೆ ಉನ್ನತ ಶಿಕ್ಷಣಕ್ಕೆ ತೆರಳಿದ ತುಮಕೂರಿನ 22 ವರ್ಷದ ಸಾಕೇತ್‌ ಶ್ರೀನಿವಾಸಯ್ಯ ಅವರ ಸಾವನ್ನು ಇನ್ನೂ ಪಾಲಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತನಿಖೆಯನ್ನು ಗಮನಿಸಲು ಅವರು ಅಮೆರಿಕಕ್ಕೆ ತೆರಳಲು ನಿರ್ಧಿಸಿದ್ದಾರೆ.

Attendance Management: ಸರ್ಕಾರಿ ಶಾಲೆ ಶಿಕ್ಷಕರು, ಉಪನ್ಯಾಸಕರಿಗೆ ಕರ್ತವ್ಯ KAAMS ಹಾಜರಾತಿ ಆ್ಯಪ್ ಕಡ್ಡಾಯ

ಸರ್ಕಾರಿ ಶಾಲೆ ಶಿಕ್ಷಕರು, ಉಪನ್ಯಾಸಕರಿಗೆ KAAMS ಹಾಜರಾತಿ ಆ್ಯಪ್ ಕಡ್ಡಾಯ

ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರು, ಮುಖ್ಯ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು, ಪ್ರಾಂಶುಪಾಲರು ಸೇರಿ ಇತರ ಸಿಬ್ಬಂದಿ, ಅಧಿಕಾರಿಗಳ ಹಾಜರಾತಿಯನ್ನು ಕರ್ತವ್ಯದ ಸ್ಥಳದಲ್ಲಿ ಕಡ್ಡಾಯವಾಗಿ ಗುರುತಿಸಲು ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ -ಕರ್ತವ್ಯ ಮೊಬೈಲ್ ಅಪ್ಲಿಕೇಷನ್ ಅನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆ.

Chikkaballapur News: ಅರೂರು ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಜಿ.ವಿ.ಜಗದೀಶ್, ಉಪಾಧ್ಯಕ್ಷರಾಗಿ ಆದಿನಾರಾಯಣಪ್ಪ (ಕೊಂಡಪ್ಪ) ಅವಿರೋಧ ಆಯ್ಕೆ

ಅರೂರು ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಜಿ.ವಿ.ಜಗದೀಶ್ ಅವಿರೋಧ ಆಯ್ಕೆ

ಅರೂರು ವ್ಯವಸಾಯೋತ್ಪನ್ನ ಸಹಕಾರ ಸಂಘಕ್ಕೆ ಐವತ್ತು ವರ್ಷಗಳ ಇತಿಹಾಸವಿದ್ದು, ಹಿರಿಯರು ಸಂಘವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬಂದಿದ್ದಾರೆ. ಸಂಘ ಯಾವತ್ತೂ ಡಿಫಾಲ್ಟ್ ಆಗಿಲ್ಲ.ಹಿರಿಯರ ಮಾರ್ಗದರ್ಶನದಲ್ಲಿ ಸಂಘಕ್ಕೆ ಮತ್ತಷ್ಟು ಒಳ್ಳೆಯ ಹೆಸರು ತರುವ ಉದ್ದೇಶ ಹೊಂದಿದ್ದೇವೆ. ರಾಜ್ಯದ ಟಾಪ್ ಟೆನ್ ಸಹಕಾರ ಸಂಘಗಳ ಪಟ್ಟಿಯಲ್ಲಿ ನಮ್ಮ ಸಂಘ ಇರಬೇಕು ಎಂಬ ಗುರಿ ಹೊಂದಿದ್ದೇವೆ.

MLA SN Subbareddy: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದ ರಾಜ್ಯ ಹೈಕೋರ್ಟ್

2023ರ ಚುನಾವಣೆ ಅಫಿಡವಿಟ್‌ನಲ್ಲಿ ಆಸ್ತಿ ಮಾಹಿತಿ ಸಂಬಂಧ ತಪ್ಪಿಗೆ ತೀರ್ಪು

2023ರ ಚುನಾವಣೆಯಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಅವರು ಸುಬ್ಬಾ ರೆಡ್ಡಿ ವಿರುದ್ದ ಸಲ್ಲಿಸಿದ್ದ ತಕರಾರು ಅರ್ಜಿ ಸಲ್ಲಿಸಿ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ಹೈಕೋರ್ಟ್ ಸೋಮವಾರ ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠವು ತೀರ್ಪು ಪ್ರಕಟಿಸಲಾಗಿದೆ.

Bidar News: ಬೀದರ್‌ನ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಬೀದರ್‌ನ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಕೈಕಾಲು ತೊಳೆದುಕೊಳ್ಳಲು ಕಾರಂಜಾ ಡ್ಯಾಂನ ಕಾಲುವೆಯಲ್ಲಿ ಕಾಲುವೆಗೆ ಯುವಕ ಇಳಿದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ತಂದೆ ತೆರಳಿದ್ದು, ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಭೀಮ - ಶಕ್ತಿ , ಸ್ಥಿರತೆ ಮತ್ತು ಆಧ್ಯಾತ್ಮಿಕ ಸಾಮರಸ್ಯದ ದೈವಿಕ ಅಭಿವ್ಯಕ್ತಿಯಾಗಿ "ಶಿವಾಯ್" ಅನಾವರಣ

ಆಧ್ಯಾತ್ಮಿಕ ಸಾಮರಸ್ಯದ ದೈವಿಕ ಅಭಿವ್ಯಕ್ತಿಯಾಗಿ "ಶಿವಾಯ್" ಅನಾವರಣ

ಆಭರಣದ ಕಲ್ಪನೆಗಷ್ಟೇ ಸೀಮಿತವಾಗದ ಶಿವಾಯ್, ಕಾಲಾತೀತವಾದ ಭಾರತದ ಆಧ್ಯಾತ್ಮಿಕ ತತ್ತ್ವಶಾಸ್ತ್ರದಲ್ಲಿ ಬೇರೂರಿರುವ ಸಾಂಸ್ಕೃತಿಕ ಅಭಿವ್ಯಕ್ತಿಯಾಗಿರುವ ಈ ಸಂಗ್ರಹವು, ಶಿವ ಮತ್ತು ಶಕ್ತಿಯ ಪವಿತ್ರ ಸಮನ್ವಯತೆಯನ್ನು ಪ್ರತಿಬಿಂಬಿಸುತ್ತದೆ - ಶಿವಾಯ್ ಸಂಗ್ರಹದಲ್ಲಿ, ಸೃಷ್ಟಿ, ಲಯ, ಶಕ್ತಿ, ಸ್ಥಿರತೆ, ತಪಸ್ಸು ಮತ್ತು ಅನುಗ್ರಹವನ್ನು ಪ್ರತಿನಿಧಿಸುವ ವಿಶ್ವ ಶಕ್ತಿಗಳು ಒಂದು ಗೂಡಿ ಸಂಪೂರ್ಣತೆಯನ್ನು ಸಾಕಾರಗೊಳಿಸುತ್ತಿವೆ.

ಕಾಶ್ಮೀರ ಕಣಿವೆ-ವೈಷ್ಣೋದೇವಿ ಬೇಸಿಗೆ ವಿಶೇಷ ಪ್ರವಾಸಿ ರೈಲು ಘೋಷಣೆ; ಟಿಕೆಟ್‌ ಬುಕಿಂಗ್ ಹೇಗೆ?

ಕಾಶ್ಮೀರ ಕಣಿವೆ-ವೈಷ್ಣೋದೇವಿ ಬೇಸಿಗೆ ವಿಶೇಷ ಪ್ರವಾಸಿ ರೈಲು ಘೋಷಣೆ

Kashmir-Vaishno Devi Special Train: ಕಾಶ್ಮೀರ ಕಣಿವೆ ಮತ್ತು ವೈಷ್ಣೋ ದೇವಿ ರಜಾ ವಿಶೇಷಕ್ಕೆ ಬೇಸಿಗೆ ವಿಶೇಷ ರೈಲನ್ನು ಘೋಷಿಸಿದ್ದು, 13 ದಿನಗಳ ಎಲ್ಲವನ್ನೂ ಒಳಗೊಂಡ ಪ್ಯಾಕೇಜ್ ಪ್ರವಾಸವು ಏಪ್ರಿಲ್ 11 ರಂದು ಪ್ರಾರಂಭವಾಗುತ್ತದೆ ಮತ್ತು ಬುಕಿಂಗ್‌ ಆರಂಭವಾಗಿದೆ.

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಯುವಕನ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಮೂವರಿಗೆ ಗಲ್ಲು ಶಿಕ್ಷೆ

2025ರ ಮಾರ್ಚ್‌ನಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪುರ ಬಳಿ ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಆಕೆಯ ಜತೆಗಿದ್ದ ವಿದೇಶಿ ಯುವಕನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ.

Crime at Gubbi: ಬೈಕ್ ನಿಲ್ಲಿಸಿದ್ದಕ್ಕೆ ಆರು ಜನರ ತಲೆಗೆ ಗಂಭೀರ ಪೆಟ್ಟು..!! : ಕ್ಷುಲ್ಲಕ ಕಾರಣಕ್ಕೆ ರಕ್ತದ ಕೋಡಿ

ಬೈಕ್ ನಿಲ್ಲಿಸಿದ್ದಕ್ಕೆ ಆರು ಜನರ ತಲೆಗೆ ಗಂಭೀರ ಪೆಟ್ಟು..!!

ಸಂಜೆ ವೇಳೆ ದಿಲೀಪ್ ತನ್ನ ಬೈಕ್ ನಲ್ಲಿ ಗುಬ್ಬಿಯಿಂದ ಬಂದು ಮನೆ ಮುಂದೆ ನಿಲ್ಲಿಸಿದ್ದ ವಿಚಾರಕ್ಕೆ ಏಕಾಏಕಿ ಅಶ್ಲೀಲ ಪದಗಳಿಂದ ಬೈಗುಳ ಆರಂಭಿಸಿ ಸ್ಥಳದಲ್ಲಿದ್ದ ದೊಣ್ಣೆ, ಗಳಗಳು, ಗುದ್ದಲಿ ಹಿಡಿದು ಅಟ್ಟ್ಯಾಕ್ ಮಾಡಿದ್ದರು. ಬೈಕ್ ತೆಗೆಯುವಷ್ಟರಲ್ಲಿ ಜಗಳ ತೆಗೆದು ಮಾರಣಾಂ ತಿಕವಾಗಿ ಹೊಡೆದಿದ್ದಾರೆ.

Bagepalli MLA SN Subba Reddy: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆಯಾಗಿದ್ದರು. ಆದರೆ, ಚುನಾವಣೆ ವೇಳೆ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಮುಚ್ಚಿಟ್ಟು, ಸುಳ್ಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್‌ ಕಾಂಗ್ರೆಸ್‌ ಶಾಸಕನ ಆಯ್ಕೆ ಅಸಿಂಧುಗೊಳಿಸಿದೆ.

ವಿಕಸಿತ ಭಾರತದತ್ತ ದೇಶದ ಪಯಣಕ್ಕೆ ಶಕ್ತಿ ತುಂಬುವ ವಿದ್ಯಾರ್ಥಿವೇತನ

ವಿಕಸಿತ ಭಾರತದತ್ತ ದೇಶದ ಪಯಣಕ್ಕೆ ಶಕ್ತಿ ತುಂಬುವ ವಿದ್ಯಾರ್ಥಿವೇತನ

ಭಾರತದ ಒಟ್ಟು ದಾಖಲಾತಿ ಅನುಪಾತ (GER), ಅಂದರೆ ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಯುವ ಜನಸಂಖ್ಯೆಯ ಶೇಕಡಾವಾರು ಪ್ರಮಾಣ, ಪ್ರಸ್ತುತ 29.5% ರಷ್ಟಿದೆ. ಒಂದು ದಶಕದ ಹಿಂದೆ ಇದು 23% ಇತ್ತು. ಈಗ ಪ್ರಗತಿ ಕಂಡಿದ್ದರೂ ಸಹ, ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರಲ್ಲಿ ನಿಗದಿಪಡಿಸಿದಂತೆ 2035ರ ವೇಳೆಗೆ 50% ಗುರಿಯನ್ನು ತಲುಪಲು ಇದನ್ನು ವೇಗವಾಗಿ ಹೆಚ್ಚಿಸಬೇಕಾದ ಅಗತ್ಯವಿದೆ

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ; ಭಯದಿಂದ ಹೊರಗೆ ಓಡಿ ಬಂದ ಜನ

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

Bomb threat: ಹಾವೇರಿ ಕೋರ್ಟ್‌ ಮಾತ್ರವಲ್ಲದೆ ರಾಜ್ಯದ ಹಲವು ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಹೀಗಾಗಿ ನ್ಯಾಯಾಲಯಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಮಂಡ್ಯ, ಕೊಡಗು, ದಾವಣಗೆರೆ, ಧಾರವಾಡ ನ್ಯಾಯಾಲಯಕ್ಕೂ ಬಾಂಬ್‌ ಬೆದರಿಕೆ ಬಂದಿದೆ.

MLA Shivaram Hebbar: ಆಡಳಿತ ಮಂಡಳಿಗೆ ಅವಿರೋಧ ಆಯ್ಕೆಯು ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ: ಶಿವರಾಮ ಹೆಬ್ಬಾರ್

ಅವಿರೋಧ ಆಯ್ಕೆಯು ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ

ಪಕ್ಷಭೇದ ಮರೆತು ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಹೊಸ ವೇಗ ನೀಡುವ ಮೂಲಕ ಬ್ಯಾಂಕನ್ನು ಪ್ರಗತಿಯತ್ತ ಮುನ್ನಡೆಸುವುದಾಗಿ ಭರವಸೆ ನೀಡಿದರು. ಮಾರ್ಚ್ ಅಂತ್ಯ ಸಮೀಪಿಸುತ್ತಿದ್ದು, ಕೈಲಿಯಲ್ಲಿ ಕೇವಲ 45 ದಿನಗಳ ಕಾಲಾವಕಾಶವಿದೆ. ಈ ಅಲ್ಪ ಅವಧಿಯಲ್ಲಿ ಬ್ಯಾಂಕಿನ ಅಭಿವೃದ್ಧಿಯ ಮುನ್ನೋಟವನ್ನು ಜನರ ಮುಂದಿಡುವುದು ಮತ್ತು ಠೇವಣಿದಾರರಲ್ಲಿ ವಿಶ್ವಾಸ ಮೂಡಿಸಿ ಸಾಲಗಾರರಿಗೆ ನ್ಯಾಯ ಒದಗಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ

ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಅನಾವರಣಗೊಳಿಸಿದ ಮಯ್ಯ ಆಸ್ಪತ್ರೆ

ವೈದ್ಯಕೀಯ ಸೌಲಭ್ಯಗಳನ್ನು ಅನಾವರಣಗೊಳಿಸಿದ ಮಯ್ಯ ಆಸ್ಪತ್ರೆ

ದಶಕಗಳಿಂದ ಮಯ್ಯ ಆಸ್ಪತ್ರೆ ಬೆಂಗಳೂರಿನ ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾಗಿದೆ. ಹೊಸ ತಂತ್ರಜ್ಞಾನ ವ್ಯವಸ್ಥೆಗಳ ಪರಿಚಯವು ಸಮುದಾಯಕ್ಕೆ ಉತ್ತಮ, ಸುಲಭ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ನೀಡುವ ಅವರ ಬದ್ಧತೆಯನ್ನು ಪ್ರತಿಬಿಂಬಿ ಸುತ್ತದೆ. ಬೆಳೆದುಬರುತ್ತಿರುವ ನಗರದ ಅಗತ್ಯಗಳಿಗೆ ತಕ್ಕಂತೆ ತಂತ್ರಜ್ಞಾನವನ್ನು ನವೀಕರಿಸು ವುದರ ಜೊತೆಗೆ ಮಾನವೀಯ ಸೇವೆಯನ್ನು ಉಳಿಸುವುದು ಅತ್ಯಂತ ಮುಖ್ಯ

‌Vande Mataram: ಎಲ್ಲ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲಾರದು: ಬಿಕೆ ಹರಿಪ್ರಸಾದ್

ವಂದೇ ಮಾತರಂ ರಾಷ್ಟ್ರಗೀತೆ ಆಗಲಾರದು: ಬಿಕೆ ಹರಿಪ್ರಸಾದ್

ದೇವರ ಹೆಸರು ಕೂಡ ವಂದೇ ಮಾತರಂನಲ್ಲಿದೆ. ಎಲ್ಲ ಧರ್ಮದವರೂ ಈ ದೇಶದಲ್ಲಿ ಇರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೆಟ್ಟ ಭಾವನೆಗಳನ್ನು ಕೆರಳಿಸಲು, ಕೋಮು ಭಾವನೆ ಕೆರಳಿಸಲು ಇದನ್ನು ತಂದಿದ್ದಾರೆ. ಇದೂ ಕೂಡ ಚುನಾವಣಾ ಗಿಮಿಕ್ ಎಂದು ಬಿಕೆ ಹರಿಪ್ರಸಾದ್‌ ಅವರು ಕಿಡಿಕಾರಿದ್ದಾರೆ.

Bomb threat: ಧಾರವಾಡ ಹೈಕೋರ್ಟ್‌ ಪೀಠ, ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

ಧಾರವಾಡ ಹೈಕೋರ್ಟ್‌ ಪೀಠ, ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

ಬಾಂಬ್ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿರುವ ಮಾಹಿತಿಯನ್ನು ಸಿಬ್ಬಂದಿಗಳು ಪೊಲೀಸರಿಗೆ ತಕ್ಷಣ ತಿಳಿಸಿದ್ದು, ಹೈಕೋರ್ಟ್ ಪೀಠದಿಂದ ವಕೀಲರು ಮತ್ತು ಸಿಬ್ಬಂದಿಗಳು ತಕ್ಷಣ ಹೊರಗಡೆ ಬಂದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೋಲಿಸರು ದೌಡಾಯಿಸಿದ್ದಾರೆ. ಒಂದು ತಿಂಗಳ ಹಿಂದೆ ಇದೇ ರೀತಿ ಸ್ಪೋಟಿಸುವುದಾಗಿ ಈ ಮೇಲ್ ಸಂದೇಶ ಬಂದಿತ್ತು.

Road Accident: ಮತ್ತೊಂದು ಭೀಕರ ಅಪಘಾತ, ಬೈಕ್‌ಗೆ ಕಾರು ಡಿಕ್ಕಿ, ಬಿದ್ದ ಮಗುವಿನ ತಲೆಯ ಮೇಲೆ ಹರಿದ ಕಾರು

ಬೈಕ್‌ಗೆ ಕಾರು ಡಿಕ್ಕಿ, ಬಿದ್ದ ಮಗುವಿನ ತಲೆಯ ಮೇಲೆ ಹರಿದ ಕಾರು

ದೇವರ ದರ್ಶನ ಮುಗಿಸಿ ಬೈಕ್​​ನಲ್ಲಿ ವಾಪಸ್​ ಬರುವಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದ ಎರಡು ವರ್ಷದ ಕಂದಮ್ಮನ ತಲೆ ಮೇಲೆಯೇ ಕಾರು ಹರಿದ ಪರಿಣಾಮ ಎರಡು ವರ್ಷದ ತ್ರಿಶೂಲ್ ಸಾವನ್ನಪ್ಪಿದ್ದಾನೆ. ನಿನ್ನೆ ಮಹಾಶಿವರಾತ್ರಿ ದಿನ ಸಂಜೆ 5.30ಕ್ಕೆ ಈ ಭೀಕರ ಅಪಘಾತ ಸಂಭವಿಸಿದೆ.

Loading...