ಕರ್ನಾಟಕದಿಂದ 9000 ಕ್ಯೂಸೆಕ್ ಕಾವೇರಿ ನೀರು ಹರಿಸಲು CWRC ಶಿಫಾರಸು
ಸಿಡಬ್ಲ್ಯುಆರ್ಸಿ ನಿರ್ದೇಶನದ ಪ್ರಕಾರ, ಆಗಸ್ಟ್ 25ರ ಬೆಳಗ್ಗೆ 8 ಗಂಟೆಯಿಂದಲೇ ಈ ಆದೇಶ ಜಾರಿಗೆ ಬರಲಿದ್ದು, ಅಂತಾರಾಜ್ಯ ಗಡಿ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ ಪ್ರತಿದಿನ 9,000 ಕ್ಯೂಸೆಕ್ ನೀರಿನ ಹರಿವನ್ನು ಕಾಯ್ದುಕೊಳ್ಳಬೇಕಿದೆ. ಮುಂದಿನ 15 ದಿನಗಳ ಅವಧಿಯಲ್ಲಿ ಒಟ್ಟು 11.66 ಟಿಎಂಸಿ ನೀರು ಬಿಳಿಗುಂಡ್ಲುವಿಗೆ ಹರಿದುಬರುವಂತೆ ನೋಡಿಕೊಳ್ಳುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.