ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Election Result 2026

2026 ಚುನಾವಣೆ ಫಲಿತಾಂಶ; ಸಮೀಕ್ಷೆ ಹೇಳಿದೆ ಕಾಂಗ್ರೆಸ್ ಭವಿಷ್ಯ

4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್ ಭವಿಷ್ಯವೇನು?

ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿಯ ವಿಧಾನ ಸಭಾ ಚುನಾವಣಾ ಫಲಿತಾಂಶ ಸೋಮವಾರ ಘೋಷಣೆಯಾಗಲಿದೆ. ಈ ಬಾರಿ ಎಲ್ಲಾ ರಾಜ್ಯಗಳಲ್ಲೂ ಬಿಜೆಪಿ ನೇರ ಪ್ರತಿಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರೆ, ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ರಾಜ್ಯವಾರು ಕಾಂಗ್ರೆಸ್ ಸ್ಥಿತಿ ಹೇಗಿದೆ? ಎಲ್ಲಿ ಗೆಲ್ಲುವ ಭರವಸೆ ಇದೆ ? ಅಂತಿಮ ಕ್ಷಣದ ಸಮೀಕ್ಷೆ ಹೇಳುವುದೇನು? ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ತಮಿಳುನಾಡು ಚುನಾವಣೆ: 62 ಮತ ಎಣಿಕೆ ಕೇಂದ್ರಗಳ ಭದ್ರತೆಗೆ ಲಕ್ಷಕ್ಕೂ ಹೆಚ್ಚು ಸಿಬ್ಬಂದಿ

ತಮಿಳುನಾಡು ಮತ ಎಣಿಕೆ ಭದ್ರತೆಗೆ ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಕಾವಲು

ತಮಿಳುನಾಡು ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ 62 ಎಣಿಕೆ ಕೇಂದ್ರಗಳಲ್ಲಿ ನಡೆಯಲಿದೆ. ಚುನಾವಣಾ ಭದ್ರತಾ ಕರ್ತವ್ಯಗಳಿಗಾಗಿ ಸುಮಾರು 1,00,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇದರಲ್ಲಿ ಚೆನ್ನೈನಲ್ಲಿ ಸುಮಾರು 20,000 ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

Karnataka Bypoll Results: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ; ಯಾರಿಗೆ ಒಲಿಯಲಿದೆ ಗೆಲುವು?

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ

ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಉಪಚುನಾವಣೆಯ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಡಿದೆ. ಬೈ ಎಲೆಕ್ಷನ್‌ನಲ್ಲಿ ಯಾರಿಗೆ ಗೆಲುವು ಒಲಿಯಲಿದೆ ಎಂಬ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಮೂಡಿದೆ.

ಕೇರಳಂನಲ್ಲಿ ದೇಶದ ಕೊನೆಯ ಎಡರಂಗ ಸರ್ಕಾರವೂ ಪತನ? ನಾಳೆ ಹೊರ ಬೀಳಲಿದೆ ಫಲಿತಾಂಶ

ದೇಶದ ಕೊನೆಯ ಎಡರಂಗ ಸರ್ಕಾರ ಕೇರಳಂನಲ್ಲಿ ನಾಳೆ ಪತನವಾಗುತ್ತ?

Keralam Assembly Elections: ಬಹುನಿರೀಕ್ಷಿತ ಪಂಚ ವಿಧಾನಸಭೆ ಚುನಾವಣೆಗಳಫಲಿತಾಂಶ ಮೇ 4ರಂದು ಘೋಷಭೆಯಾಗಲಿದ್ದು, ಕೇರಳಂನಲ್ಲಿ ಯಾರು ಸರ್ಕಾರ ರಚಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. 2 ಅವಧಿಯಲ್ಲಿ ಅಧಿಕಾರದಲ್ಲಿರುವ ಎಲ್‌ಡಿಎಫ್‌ ಸೋತು ಯುಡಿಎಫ್‌ ಸರ್ಕಾರ ರಚಿಸಲಿದೆ ಎನುವ ಲೆಕ್ಕಾಚಾರ ನಡೆಯುತ್ತಿದೆ. ಜತೆಗೆ ಬಿಜೆಪಿ 3ನೇ ಶಕ್ತಿಯಾಗಿ ಹೊರಹೊಮ್ಮಲಿದೆ.

ಪಶ್ಚಿಮ ಬಂಗಾಳ ಚುನಾವಣೆ: ಟಿಎಂಸಿಗೆ ಅಧಿಕಾರ ಉಳಿಸಿಕೊಳ್ಳುವ ಚಿಂತೆ; ಬಿಜೆಪಿಗೆ ಐತಿಹಾಸಿಕ ಗೆಲುವಿನ ನಿರೀಕ್ಷೆ

ಚುನಾವಣೆ ಫಲಿತಾಂಶಕ್ಕಾಗಿ ಕಾತರವಾಗಿದೆ ಪಶ್ಚಿಮ ಬಂಗಾಳ

ವಿಧಾನ ಸಭಾ ಚುನಾವಣಾ ಫಲಿತಾಂಶಕ್ಕಾಗಿ ಪಶ್ಚಿಮ ಬಂಗಾಳವು ಕಾತರದಿಂದ ಕಾಯುತ್ತಿದೆ. ಒಂದೆಡೆ ತೃಣಮೂಲ ಕಾಂಗ್ರೆಸ್ ಗೆ ಅಧಿಕಾರ ಉಳಿಸಿಕೊಳ್ಳುವ ಚಿಂತೆಯಾಗಿದ್ದರೆ, ಇನ್ನೊಂದೆಡೆ ಬಿಜೆಪಿಗೆ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಿಂದಾಗಿ ಹೆಚ್ಚಿನ ಮತದಾರರಿಗೆ ಮತದಾನ ಮಾಡಲಾಗದೇ ಇರುವುದು ಟಿಎಂಸಿಗೆ ಆತಂಕ ಉಂಟು ಮಾಡಿದ್ದರೆ, ಭಾರಿ ಪ್ರಮಾಣದಲ್ಲಿ ಮತದಾನವಾಗಿರುವುದು ಬಿಜೆಪಿಗೆ ಗೆಲುವಿನ ಭರವಸೆಯನ್ನು ಕೊಟ್ಟಿದೆ.

ಪಂಚ ರಾಜ್ಯಗಳ ಆಡಳಿತ ಯಾರ ಕೈಗೆ? ನಾಳೆ ಭವಿಷ್ಯ ನಿರ್ಧಾರ

ನಾಳೆ ಐದು ರಾಜ್ಯಗಳಲ್ಲಿ ಮತ ಎಣಿಕೆ

ಪಂಚ ರಾಜ್ಯಗಳ ಆಡಳಿತ ಅಧಿಕಾರ ಯಾರ ಕೈಗೆ ಎಂಬುದು ಸೋಮವಾರ ನಿರ್ಧಾರವಾಗಲಿದೆ. ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿಯ ವಿಧಾನ ಸಭಾ ಚುನಾವಣಾ ಫಲಿತಾಂಶ ನಾಳೆ ಘೋಷಣೆಯಾಗಲಿದೆ. ಮತ ಎಣಿಕೆ ಯಾವಾಗ ಆರಂಭವಾಗುತ್ತದೆ, ಫಲಿತಾಂಶ ಎಲ್ಲಿ ವೀಕ್ಷಣೆ ಮಾಡಬೇಕು ಎಂಬುದರ ಕುರಿತು ಸಂಪೂರ್ಣ ವಿವರ.