ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Election Result 2026

ನಂದಿಗ್ರಾಮದಿಂದ ನಬನ್ನದವರೆಗೆ: ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಲು ಕಾರಣವಾದ ಪ್ರಮುಖ ಹಂತಗಳು

ಸುವೇಂದು ಅಧಿಕಾರಿಯ ರಾಜಕೀಯ ಪಯಣ ಹೇಗಿತ್ತು?

ನಂದಿಗ್ರಾಮ ಚಳುವಳಿಯಿಂದ ಆರಂಭವಾದ ಸುವೇಂದು ಅಧಿಕಾರಿ ಅವರ ರಾಜಕೀಯ ಪಯಣ, ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆ, ಮಮತಾ ಬ್ಯಾನರ್ಜಿ ವಿರುದ್ಧದ ಐತಿಹಾಸಿಕ ಗೆಲುವು ಮತ್ತು 2026ರ ಭರ್ಜರಿ ಚುನಾವಣಾ ವಿಜಯದ ಮೂಲಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪದವಿವರೆಗೆ ತಲುಪಿದೆ.

West Bengal CM: ಅಮಿತ್‌ ಶಾ ಆಯ್ಕೆಯ ನಾಯಕ ಸುವೇಂದು ಅಧಿಕಾರಿ

ಅಮಿತ್‌ ಶಾ ಆಯ್ಕೆಯ ನಾಯಕ ಸುವೇಂದು ಅಧಿಕಾರಿ

Suvendu Adhikari: ಪಶ್ಚಿಮ ಬಂಗಾಳದಲ್ಲಿ ಸ್ಥಿರ ಮತ್ತು ದಕ್ಷ ಆಡಳಿತ ನೀಡುವ, ಬಾಂಗ್ಲಾದೇಶದ ಅಕ್ರಮ ನುಸುಳುಕೋರರನ್ನು ನಿಗ್ರಹಿಸುವ ಮೂಲಕ ದೇಶದ ಆಂತರಿಕ ಭದ್ರತೆಗೆ ಪುಷ್ಟಿ ನೀಡಬೇಕಾದ ಮಹತ್ವದ ಜವಾಬ್ದಾರಿಯು ಸುವೇಂದು ಅಧಿಕಾರಿ ಅವರ ಮೇಲಿದೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರಗಳನ್ನು ತಹಬದಿಗೆ ತರಬೇಕಾದ, ಕಾನೂನು ಸುವ್ಯವಸ್ಥೆ ಕಾಪಾಡುವ, ಮತ್ತು ಆರ್ಥಿಕ ಅಭಿವೃದ್ಧಿ, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಆಶ್ವಾಸನೆಗಳನ್ನು ಜಾರಿಗೊಳಿಸುವ ಹೊಣೆಗಾರಿಕೆ ಅವರ ಮೇಲಿದೆ.

ಇನ್ನೂ ಬಗೆ ಹರಿಯದ ಕೇರಳಂ ಸಿಎಂ ಆಯ್ಕೆ ಕಗ್ಗಂಟು: ಕಾಂಗ್ರೆಸ್‌ ಮನೆಯೊಂದು ಮೂರು ಭಾಗವಾಗುತ್ತ?

ಕೇರಳಂ ಕಾಂಗ್ರೆಸ್‌ನಲ್ಲಿ ಮುಂದುವರಿದ ನಾಯಕತ್ವ ಗೊಂದಲ

ಕೇರಳಂ ವಿಧಾನಸಭಾ ಚುನಾವಣೆಯಲ್ಲಿ 102 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಸರ್ಕಾರ ರಚನೆಗೆ ಸಜ್ಜಾಗಿದೆ. ಆದರೆ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ಇನ್ನೂ ಅಂತಿಮವಾಗದೇ ರಾಜಕೀಯ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾವುದೇ ಒಮ್ಮತದ ನಿರ್ಧಾರ ಕೈಗೊಳ್ಳಲಾಗದ ಹಿನ್ನೆಲೆ, ಸಿಎಂ ಆಯ್ಕೆ ಹೊಣೆಯನ್ನು ಎಐಸಿಸಿ ಹೈಕಮಾಂಡ್‌ಗೆ ವಹಿಸಲಾಗಿದೆ. ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಕೆ.ಸಿ. ವೇಣುಗೋಪಾಲ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಮೈತ್ರಿ ಪಕ್ಷ ಮುಸ್ಲಿಂ ಲೀಗ್‌ ಸತೀಶನ್ ಅವರಿಗೆ ಬೆಂಬಲ ಸೂಚಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕೇರಳಂ ಮುಖ್ಯಮಂತ್ರಿ ಪಟ್ಟ ಯಾರಿಗೆ? ರೇಸ್‌ನಲ್ಲಿ ಕೆ.ಸಿ. ವೇಣುಗೋಪಾಲ್, ಸತೀಶನ್‌; ಮುಂದಿನ ವಾರ ಪ್ರಮಾಣ ವಚನ?

ಕೇರಳಂ ಮುಖ್ಯಮಂತ್ರಿ ಪಟ್ಟ ಯಾರಿಗೆ?

ಕೇರಳಂನ ಮುಂದಿನ ಮುಖ್ಯಮಂತ್ರಿ ಹುದ್ದೆಗೆ ರೇಸ್‌ನಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ. ವೀಕ್ಷಕರಾದ ಅಜಯ್ ಮಾಕೆನ್ ಮತ್ತು ಮುಕುಲ್ ವಾಸ್ನಿಕ್ ತಮ್ಮ ವರದಿಯನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ ನಂತರ ಈ ವಿಚಾರ ತಿಳಿದುಬಂದಿದೆ.

“ವಿಜಯ್ ಜತೆ ಸೇರಿಕೊಂಡಿರುವುದು ಅನೈತಿಕತೆ”: ಟಿವಿಕೆ ಜತೆಗಿನ ಮೈತ್ರಿ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ವಾಗ್ದಾಳಿ

ಟಿವಿಕೆ ಜತೆಗಿನ ಮೈತ್ರಿ ಬಗ್ಗೆ ಮಣಿಶಂಕರ್ ಅಯ್ಯರ್ ವಾಗ್ದಾಳಿ

TVK-Congress alliance: ನಾವು ಸಂಪೂರ್ಣವಾಗಿ ಅತಂತ್ರ ಸ್ಥಿತಿಯಲ್ಲಿದ್ದೇವೆ. ನಾವು ವಿಜಯ್ ಅವರೊಂದಿಗೆ ಕೈಜೋಡಿಸುವ ಮೂಲಕ ಕೇವಲ ಅನೈತಿಕತೆಯನ್ನಷ್ಟೇ ಮಾಡಿಲ್ಲ, ಬದಲಾಗಿ ಅವರಿಗೆ ಬಹುಮತ ಸಿಗುವಂತೆ ನೋಡಿಕೊಳ್ಳದ ರಾಜಕೀಯ ಮೂರ್ಖತನವನ್ನೂ ಮಾಡಿದ್ದೇವೆ. ಹಾಗಾಗಿ, ಈಗ ಅಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಣಿಶಂಕರ್ ಅಯ್ಯರ್ ಟೀಕಿಸಿದ್ದಾರೆ.

ವಿಜಯ್‌ಗಾಗಿ ‘ಕೈ’ ಕೊಟ್ಟ ಪಕ್ಷದ ವಿರುದ್ಧ ಅಸಮಾಧಾನ; ಲೋಕಸಭೆಯಲ್ಲಿ ಕಾಂಗ್ರೆಸ್ ಜತೆ ಕುಳಿತುಕೊಳ್ಳುವುದಿಲ್ಲ ಎಂದ ಡಿಎಂಕೆ

ಲೋಕಸಭೆಯಲ್ಲಿ ಕಾಂಗ್ರೆಸ್ ಜತೆ ಕುಳಿತುಕೊಳ್ಳುವುದಿಲ್ಲ ಎಂದ ಡಿಎಂಕೆ

DMK vs Congress: ಕಾಂಗ್ರೆಸ್ ಜತೆಗಿನ ಡಿಎಂಕೆ ಮೈತ್ರಿಯನ್ನು ಅಧಿಕೃತವಾಗಿ ಕೊನೆಗೊಳಿಸುತ್ತ ಡಿಎಂಕೆಯ ಕನಿಮೋಳಿ ಲೋಕಸಭಾ ಸ್ಪೀಕರ್‌ಗೆ ಬರೆದಿರುವ ಪತ್ರ ಗಮನ ಸೆಳೆದಿದೆ. ಪಕ್ಷದ ಸದಸ್ಯರು ತಮ್ಮ ಹಿಂದಿನ ಮಿತ್ರ ಪಕ್ಷ ಕಾಂಗ್ರೆಸ್‌ ಪಕ್ಕದಲ್ಲಿ ಕುಳಿತುಕೊಳ್ಳಲು ಬಯಸುವುದಿಲ್ಲ, ಆಸನ ವ್ಯವಸ್ಥೆ ಬದಲಾಯಿಸಿಬೇಕೆಂದು ಮನವಿ ಮಾಡಿದ್ದಾರೆ.

ಮಮತಾ ಬ್ಯಾನರ್ಜಿ ಉತ್ತರಾಧಿಕಾರಿಯಾಗಿ ಮುಖ್ಯಮಂತ್ರಿ ಹುದ್ದೆಗೆ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹುದ್ದೆಗೆ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ಸುವೇಂದು ಅಧಿಕಾರಿಯವರನ್ನು ಆಯ್ಕೆ ಮಾಡಲಾಗಿದೆ. ಇವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ ಮಾಡಲಾಗುತ್ತದೆ ಎನ್ನಲಾಗುತ್ತಿದ್ದರೂ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಾವುದೇ ಘೋಷಣೆಯನ್ನು ಮಾಡಲಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶುಕ್ರವಾರ ಅಧಿಕಾರಿ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಬಂಗಾಳದ ಹೌರಾದಲ್ಲಿ ಚುನಾವಣೋತ್ತರ ಹಿಂಸಾಚಾರ: ಟಿಎಂಸಿಯಿಂದ ಬಾಂಬ್ ದಾಳಿ

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಹಿಂಸಾಚಾರ ತೀವ್ರಗೊಂಡಿದೆ. ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಬಾಂಬ್ ದಾಳಿ, ಲೂಟಿ ಮತ್ತು ಧಾರ್ಮಿಕ ಘೋಷಣೆಗಳ ವಿಡಿಯೊ ವೈರಲ್ ಆಗಿದೆ. ಈ ದಾಳಿಯ ಹಿಂದೆ ಟಿಎಂಸಿ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದ್ದು, ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಘಟನೆಯ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದರೆ, ರಾಜ್ಯದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಟಿಎಂಸಿ ಭದ್ರ ಕೋಟೆಯಲ್ಲೇ ಮಮತಾ ಬ್ಯಾನರ್ಜಿ ಮಣಿಸಿದ ಬಿಜೆಪಿಯ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ

ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ

Suvendu Adhikari: ಸತತ 15 ವರ್ಷಗಳ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆಡಳಿತಕ್ಕೆ ಬ್ರೇಕ್‌ ಹಾಕಿ ಇದೇ ಮೊದಲ ಬಾರಿ ಪಶ್ಚಿಮ ಬಂಗಾಳದಲಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಟಿಎಂಸಿಯ ಭದ್ರಕೋಟೆ ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಸುವೇಂದು ಅಧಿಕಾರಿಗೆ ಇದೀಗ ಬಿಜೆಪಿ ಮುಖ್ಯಮಂತ್ರಿ ಪಟ್ಟ ನೀಡಿದೆ.

ಕೊನೆಗೂ ತಮಿಳುನಾಡಿನಲ್ಲಿ ಅಸ್ತಿತ್ವಕ್ಕೆ ಬರಲಿದೆ ಟಿವಿಕೆ ಸರ್ಕಾರ; ವಿಜಯ್‌ಗೆ ಕಾಂಗ್ರೆಸ್‌ ಜತೆಗೆ ಎಡಪಕ್ಷ, ವಿಸಿಕೆ ಬೆಂಬಲ

ವಿಜಯ್‌ಗೆ ಕಾಂಗ್ರೆಸ್‌ ಜತೆಗೆ ಎಡಪಕ್ಷ, ವಿಸಿಕೆ ಬೆಂಬಲ

TVK: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಟಿವಿಕೆಗೆ ಅಗತ್ಯವಾದ ಮ್ಯಾಜಿಕ್‌ ನಂಬರ್‌ 118 ಲಭಿಸಿದ್ದು, ವಿಜಯ್‌ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾದಂತಾಗಿದೆ. ಕಾಂಗ್ರೆಸ್‌ ಬೆನ್ನಲ್ಲೇ ಎಡಪಕ್ಷಗಳು ಮತ್ತು ವಿಸಿಕೆ ಶಾಸಕರು ಟಿವಿಕೆಗೆ ಬೆಂಬಲ ಸೂಚಿಸಿದ್ದು, ಸದ್ಯದಲ್ಲೇ ವಿಜಯ್‌ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ಸುವೇಂದು ಅಧಿಕಾರಿ ಆಪ್ತರ ನಿಗೂಢ ಸಾವುಗಳ ಸರಣಿ: ಹಳೆಯ ಘಟನೆಗಳ ಮೆಲುಕು

ಸುವೇಂದು ಅಧಿಕಾರಿ ಆಪ್ತರ ಸರಣಿ ಸಾವುಗಳು ಮತ್ತೆ ಸುದ್ದಿಯಲ್ಲಿ

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆಯಾದ ಬಳಿಕ, ಕಳೆದ ಕೆಲವು ವರ್ಷಗಳಲ್ಲಿ ಅವರ ಸುತ್ತಮುತ್ತ ನಡೆದ ನಿಗೂಢ ಸಾವುಗಳು ಮತ್ತೆ ಚರ್ಚೆಗೆ ಬಂದಿವೆ. 2013ರಲ್ಲಿ ಪ್ರದೀಪ್ ಝಾ, 2018ರಲ್ಲಿ ಅಂಗರಕ್ಷಕ ಶುಭಬ್ರತ ಚಕ್ರವರ್ತಿ ಮತ್ತು ಇದೀಗ 2026ರಲ್ಲಿ ಚಂದ್ರನಾಥ್ ರಥ್ ಸಾವಿನ ಘಟನೆಗಳು ರಾಜಕೀಯ ವಲಯದಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿವೆ. ಚುನಾವಣೋತ್ತರ ಹಿಂಸಾಚಾರದ ನಡುವೆ ಈ ಘಟನೆ ಬಂಗಾಳ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ರಾಜೀನಾಮೆಗೆ ನಿರಾಕರಿಸಿದ ಮಮತಾ ಬ್ಯಾನರ್ಜಿಗೆ ರಾಜ್ಯಪಾಲರಿಂದ ಚೆಕ್‌ಮೆಟ್‌; ಪಶ್ಚಿಮ ಬಂಗಾಳದ ವಿಧಾನಸಭೆ ವಿಸರ್ಜನೆ

ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ ಆರ್‌.ಎನ್‌. ರವಿ

Mamata Banerjee: ಸೋತರೂ ರಾಜೀನಾಮೆ ನೀಡಲ್ಲ ಎಂದು ಹೈಡ್ರಾಮ ನಡೆಸುತ್ತಿದ್ದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆಘಾತ ಎದುರಾಗಿದೆ. ರಾಜ್ಯಪಾಲ ಆರ್‌.ಎನ್‌. ರವಿ ಪಶ್ಚಿಮ ಬಂಗಾಳ ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಟಿಎಂಸಿಯ 15 ವರ್ಷಗಳ ಆಡಳಿತ ಅಧಿಕೃತವಾಗಿ ಅಂತ್ಯಗೊಂಡಿದೆ.

ಸುವೇಂದು ಅಧಿಕಾರಿ ಆಪ್ತ ಚಂದ್ರನಾಥ ರಥ್‌ ಹತ್ಯೆಗೆ ಮುನ್ನ ಆಗಿದ್ದೇನು? ಕಾರ್‌ ಚೇಸ್‌ ಮಾಡಿದ ಬೈಕ್‌ ಸಿಸಿ ಕ್ಯಾಮರಾದಲ್ಲಿ ಸೆರೆ

ಚಂದ್ರನಾಥ ರಥ್‌ ಹತ್ಯೆಗೆ ಮುನ್ನ ಆಗಿದ್ದೇನು? ವಿಡಿಯೊ ವೈರಲ್‌

Chandranath Rath: ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ ರಥ್‌ ಅವರ ಹತ್ಯೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ರಥ್‌ ಅವರ ಕಾರನ್ನು ಇಬ್ಬರು ಬೈಕ್‌ನಲ್ಲಿ ಹಿಂಬಾಲಿಸುತ್ತಿರುವ ಸಿಸಿಟಿವಿ ದೃಶ್ಯ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ಸೋಲುಣಿಸಿದ ಸುವೇಂದು ಅಧಿಕಾರಿಗೆ ಸಿಎಂ ಪಟ್ಟ? ಮೇ 8ರಂದು ಅಂತಿಮ ನಿರ್ಧಾರ

ಬಂಗಾಳದ ಮುಂದಿನ ಮುಖ್ಯಮಂತ್ರಿ ಸುವೇಂದು ಅಧಿಕಾರಿ?

Adhikari likely to be the next CM: ಬಿಜೆಪಿಯ ಜೈಂಟ್-ಸ್ಲೇಯರ್ ಎಂದೇ ಕರೆಯಲ್ಪಡುವ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ. ಅವರು ತಮ್ಮ ಮಾಜಿ ಮಾರ್ಗದರ್ಶಕಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ್ದು, ಅವರಿಗೆ ಸಿಎಂ ಪಟ್ಟ ಒಲಿಯುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ.

ಮಮತಾ ಬ್ಯಾನರ್ಜಿಯ ಚುನಾವಣಾ ಅಕ್ರಮದ ಆರೋಪ ತಳ್ಳಿ ಹಾಕಿದ ಬಂಗಾಳ ಚುನಾವಣಾಧಿಕಾರಿ

ಮಮತಾ ಆರೋಪಗಳಿಗೆ ಸಿಇಒ ತಿರುಗೇಟು

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶಗಳ ಬಗ್ಗೆ ಮಮತಾ ಬ್ಯಾನರ್ಜಿ ಮಾಡಿರುವ ಅಕ್ರಮದ ಆರೋಪಗಳನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ. ಯಾವುದೇ ಪುರಾವೆಗಳು ಅಥವಾ ಅಧಿಕೃತ ದೂರುಗಳು ಇಲ್ಲದೆ ಇಂತಹ ಆರೋಪಗಳನ್ನು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಇವಿಎಂ ದುರುಪಯೋಗ, ದೈಹಿಕ ಹಲ್ಲೆ ಆರೋಪಗಳನ್ನೂ ಸಿಸಿಟಿವಿ ದೃಶ್ಯಾವಳಿ ಆಧರಿಸಿ ನಿರಾಕರಿಸಿದರು.

ಪಶ್ಚಿಮ ಬಂಗಾಳದಲ್ಲಿ ಹೀನಾಯ ಸೋಲಿನ ಬೆನ್ನಲ್ಲೇ ಟಿಎಂಸಿಯಿಂದ ಗೂಂಡಾಗಿರಿ; ಹಿಂಸಾಚಾರದಲ್ಲಿ ಮೂವರ ಸಾವು: ಕಠಿಣ ಕ್ರಮಕ್ಕೆ ಚುನಾವಣಾ ಆಯೋಗ ಆದೇಶ

ಚುನಾವಣೆ ಬಳಿಕ ಹಿಂಸಾಚಾರ: ಕಠಿಣ ಕ್ರಮಕ್ಕೆ ಆದೇಶ

ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆ ಬಳಿಕ ಉಂಟಾಗಿರುವ ಗಲಭೆಯಲ್ಲಿ ಮೂವರು ಸಾವನ್ನಪ್ಪಿದ್ದು, ಇದಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮಕ್ಕೆ ಚುನಾವಣಾ ಆಯೋಗವು ನಿರ್ದೇಶನ ನೀಡಿದೆ. ವಿಧಾನ ಸಭಾ ಚುನಾವಣಾ ಫಲಿತಾಂಶ ಸೋಮವಾರ ಹೊರಬಿದ್ದ ಮೇಲೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಎರಡನೇ ದಿನವು ಮುಂದುವರಿದಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಣೆ; ಪಶ್ಚಿಮ ಬಂಗಾಳದಲ್ಲಿ ಮುಂದೇನಾಗಲಿದೆ? ಕುತೂಹಲ ಕೆರಳಿಸಿದ ಬಿಜೆಪಿ ನಡೆ

ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಣೆ; ಮುಂದೇನು?

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತಿರುವ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಇದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದ್ದು, ಮುಂದೆ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಏನೆಲ್ಲಾ ನಡೆಯಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಪಕ್ಷದ ಕಚೇರಿ ಮೇಲೆ ಬುಲ್ಡೋಜರ್ ದಾಳಿ: ಬಿಜೆಪಿ ವಿರುದ್ಧ ಟಿಎಂಸಿ ಆರೋಪ

ಟಿಎಂಸಿ ಕಚೇರಿ ಮೇಲೆ ಬಿಜೆಪಿ ದಾಳಿ: ವೈರಲ್ ವಿಡಿಯೋ

ಪಶ್ಚಿಮ ಬಂಗಾಳದ ಚುನಾವಣೆ ಬಳಿಕ ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್ ಹಲವಾರು ಆರೋಪಗಳನ್ನು ಮಾಡಿದ್ದು, ಇದೀಗ ಪಕ್ಷದ ಕಚೇರಿ ಮೇಲೆ ಬಿಜೆಪಿ ಯು ಬುಲ್ಡೋಜರ್ ನಿಂದ ದಾಳಿ ನಡೆಸಿದೆ. ಇದಕ್ಕಾಗಿ ಕೇಂದ್ರದಿಂದಲೇ ಆದೇಶ ಬಂದಿದೆ ಎಂದು ಹೇಳಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮುಖ್ಯಮಂತ್ರಿ ಹುದ್ದೆಗಾಗಿ ಕೇರಳದಲ್ಲಿ ಶುರುವಾಯಿತು ಪೋಸ್ಟರ್ ಯುದ್ಧ

ಕೇರಳದಲ್ಲಿ ಈಗ ಸಿಎಂ ಹುದ್ದೆಗೆ ಬಿಗ್ ಫೈಟ್

ಇತ್ತೀಚೆಗೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಯುಡಿಎಫ್ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕರ ನಡುವೆ ಮುಖ್ಯಮಂತ್ರಿ ಹುದ್ದೆಗಾಗಿ ಜಗಳ ಶುರುವಾಗಿದೆ. ಮೂವರು ನಾಯಕರು ಸಿಎಂ ಹುದ್ದೆಯ ರೇಸಿನಲ್ಲಿದ್ದು, ಅವರವರ ಬೆಂಬಲಿಗರು ಪ್ರತಿಸ್ಪರ್ಧಿ ನಾಯಕನ ವಿರುದ್ಧ ಪೋಸ್ಟರ್ ಯುದ್ಧ ಪ್ರಾರಂಭಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಹಿಂದಿದೆ 15 ವರ್ಷಗಳ ಪರಿಶ್ರಮ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ?

ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಇದರ ಹಿಂದೆ ಒಂದೆರಡು ವರ್ಷಗಳ ಶ್ರಮವಲ್ಲ ಬರೋಬ್ಬರಿ 15 ವರ್ಷಗಳ ಪರಿಶ್ರಮವಿದೆ. 2011ರಿಂದ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಮತದಾರರ ಮೇಲೆ ಪರಿಣಾಮ ಬೀರಲು ಪ್ರಯತ್ನಿಸುತ್ತಿದ್ದು, ಅಂತಿಮವಾಗಿ ಮತದಾರ ಈಗ ಬಿಜೆಪಿ ಕೈ ಹಿಡಿದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು: ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿನಂದನೆ

ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆ

ವಿಧಾನ ಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿನಂದಿಸಿದ್ದಾರೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆದ್ದಿದೆ. ಇದೊಂದು ಐತಿಹಾಸಿಕ ವಿಜಯ ಎಂದು ಟ್ರಂಪ್ ಹೇಳಿದ್ದಾರೆ.

ಅಕ್ರಮ ನುಸುಳುವಿಕೆಗೆ ತಡೆ, ಬಾಂಗ್ಲಾ ಗಡಿಯಲ್ಲಿ ಬೇಲಿ ನಿರ್ಮಾಣ, ಸಿಎಎ ಜಾರಿ: ಬಿಜೆಪಿಯ ಆಡಳಿತದಲ್ಲಿ ಬದಲಾಗಲಿದೆ ಪಶ್ಚಿಮ ಬಂಗಾಳದ ಚಿತ್ರಣ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರಾಬಲ್ಯ: ಗಡಿ ಭದ್ರತೆ, ಸಿಎಎ ಜಾರಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ, ರಾಜ್ಯದ ಆಂತರಿಕ ಭದ್ರತೆ ಮತ್ತು ಗಡಿ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. 2,200 ಕಿ.ಮೀ. ಗಡಿಯಲ್ಲಿ ಬೇಲಿ ನಿರ್ಮಾಣಕ್ಕೆ ವೇಗ ನೀಡಲಾಗುತ್ತಿದ್ದು, ನುಸುಳುವಿಕೆ, ನಕಲಿ ನೋಟು ದಂಧೆ ಮತ್ತು ಅಕ್ರಮ ಚಟುವಟಿಕೆಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

"ನ್ಯಾಯಕ್ಕಾಗಿ ರಾಜಕೀಯ ಆರಿಸಿಕೊಂಡೆ": ಮೊದಲ ಬಾರಿ ಶಾಸಕಿಯಾದ ಬಗ್ಗೆ ಆರ್‌ಜಿ ಕರ್ ಸಂತ್ರಸ್ತೆಯ ತಾಯಿ ಪ್ರತಿಕ್ರಿಯೆ

ಮಗಳಿಗಾಗಿ ಹೋರಾಡಿದ ತಾಯಿ ಈಗ ಜನ ನಾಯಕಿ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ದಾರುಣ ಘಟನೆಯಲ್ಲಿ ಮಗಳನ್ನು ಕಳೆದುಕೊಂಡ ತಾಯಿ ರತ್ನ ದೇವನಾಥ್, ನ್ಯಾಯಕ್ಕಾಗಿ ರಾಜಕೀಯಕ್ಕೆ ಪ್ರವೇಶಿಸಿ ಪಶ್ಚಿಮ ಬಂಗಾಳದ ಪಾಣಿಹಾಟಿ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ದಶಕಗಳಿಂದ ತೃಣಮೂಲದ ಬಲವಾಗಿದ್ದ ಈ ಕ್ಷೇತ್ರದಲ್ಲಿ ಅವರ ಗೆಲುವು ಮಹಿಳೆಯರ ಧ್ವನಿಗೂ, ನ್ಯಾಯದ ಹೋರಾಟಕ್ಕೂ ದೊಡ್ಡ ಸಂದೇಶ ಎನಿಸಿಕೊಂಡಿದೆ. ತಮ್ಮ ಮಗಳ ಸಾವಿಗೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿರುವ ಅವರು, ಈ ಜಯವನ್ನು ರಾಜ್ಯದ ಮಹಿಳೆಯರಿಗೆ ಅರ್ಪಿಸಿದ್ದಾರೆ.

ನಾನು ಸೋತಿಲ್ಲ, ರಾಜೀನಾಮೆ ನೀಡೋದಿಲ್ಲ: ಹೀನಾಯವಾಗಿ ಸೋತ ಮಮತಾ ಬ್ಯಾನರ್ಜಿಯಿಂದ ಹೊಸ ವರಸೆ

ರಾಜೀನಾಮೆ ನೀಡೋದಿಲ್ಲ ಎಂದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ನಾನು ಸೋತಿಲ್ಲ, ರಾಜೀನಾಮೆ ನೀಡೋದಿಲ್ಲ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಅವರು ರಾಜೀನಾಮೆ ನೀಡಬೇಕು ಎನ್ನುವ ಕೂಗು ಜೋರಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಅವರು ನನ್ನ ರಾಜೀನಾಮೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Loading...