ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

10 ಕಿ.ಮೀ. ಗೆ 700 ರೂ.; ಬೆಂಗಳೂರು ಕ್ಯಾಬ್ ಗಳಿಂದ ಹಗಲು ದರೋಡೆ ಎಂದ ಮಹಿಳೆ

ಬೆಂಗಳೂರಿನ ಕ್ಯಾಬ್ ದರ ಕೇಳಿ ಮಹಿಳೆ ಶಾಕ್

10 ಕಿ.ಮೀ. ಗಿಂತಲೂ ಕಡಿಮೆ ದೂರ ಪ್ರಯಾಣಿಸಲು ಮಹಿಳೆಯೊಬ್ಬರು ಕ್ಯಾಬ್ ಗೆ 700 ರೂ. ಪಾವತಿ ಮಾಡಿದ್ದಾರೆ. ಬಳಿಕ ಇದನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದು, ಇದರಿಂದ ಅನೇಕರು ಶಾಕ್ ಗೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಬ್ ದರ ಈಗ ಚರ್ಚೆಯನ್ನು ಉಂಟು ಮಾಡಿದೆ. ಅನೇಕರು ಇದು ಹಗಲು ದರೋಡೆಯಾಗಿದೆ ಎಂದು ಆರೋಪಿಸಿದ್ದಾರೆ.

ಶಸ್ತ್ರಚಿಕಿತ್ಸೆ ಸಾಧ್ಯವಿಲ್ಲ ಎಂದು ಹೇಳಲಾಗಿದ್ದ ವೃದ್ಧರಿಗೆ ಬೆಂಗಳೂರಿನಲ್ಲಿ ಯಶಸ್ವಿ ಶ್ವಾಸಕೋಶದ ಕ್ಯಾನ್ಸರ್ ರೊಬೊಟಿಕ್ ಚಿಕಿತ್ಸೆ

ವೃದ್ಧರಿಗೆ ಯಶಸ್ವಿ ಶ್ವಾಸಕೋಶದ ಕ್ಯಾನ್ಸರ್ ರೊಬೊಟಿಕ್ ಚಿಕಿತ್ಸೆ

ನಾಲ್ವರು ಮಕ್ಕಳ ತಂದೆಯಾಗಿರುವ ರೋಗಿಯು ಶ್ವಾಸಕೋಶದ ಕ್ಯಾನ್ಸರ್ ಪತ್ತೆಯಾದಾಗ ಸತತ ಉಸಿರಾಟದ ತೊಂದರೆ ಮತ್ತು ಕುಸಿಯುತ್ತಿರುವ ಆರೋಗ್ಯದಿಂದ ಸಂಕಷ್ಟ ಅನುಭವಿಸುತ್ತಿದ್ದರು. ಆದಾಗ್ಯೂ, ಅವರ ಗಂಭೀರ ಕ್ರಾನಿಕ್ ಅಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ), ದುರ್ಬಲ ಶ್ಚಾಸಕೋಶದ ರಿಸರ್ವ್ ಮತ್ತು ಮಧುಮೇಹವು ಸಾಂಪ್ರದಾಯಿಕ ತೆರೆದ ಎದೆಯ ಶಸ್ತ್ರಚಿಕಿತ್ಸೆಯನ್ನು ಅತ್ಯಂತ ಕಠಿಣವಾಗಿಸಿತ್ತು

ಮಧುಗಿರಿ ತಾಪಂನಲ್ಲಿ 4.24 ಕೋಟಿ ಗುಳುಂ; ಮೂವರು ಇಒಗಳ ಸಸ್ಪೆಂಡ್

ಮಧುಗಿರಿ ತಾಪಂನಲ್ಲಿ 4.24 ಕೋಟಿ ಗುಳುಂ; ಮೂವರು ಇಒಗಳ ಸಸ್ಪೆಂಡ್

ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ನೌಕರರ ಗಳಿಕೆ ರಜೆ ನಗದೀಕರಣ ಮಂಜೂರಾತಿಯಲ್ಲಿ ಅಕ್ರಮ ಎಸಗಿ, ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿ ಮೂವರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

illegal mining case: ಅಕ್ರಮ ಅದಿರು ಸಾಗಾಟ; ಎರಡು ಪ್ರಮುಖ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಖುಲಾಸೆ

ಅಕ್ರಮ ಅದಿರು ಸಾಗಾಟ; ಎರಡು ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಖುಲಾಸೆ

ಅಕ್ರಮ ಗಣಿಗಾರಿಕೆ ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಶಾಸಕ ಜನಾರ್ದನ ರೆಡ್ಡಿ ಸೇರಿ ಇತರ ಆರೋಪಿಗಳನ್ನು ಪ್ರಕರಣದಿಂದ ಕೈಬಿಟ್ಟು ಮಹತ್ವದ ಆದೇಶ ಹೊರಡಿಸಿದೆ.

ಇದು ಅಪರೂಪದ ಗಜ ಪ್ರೇಮ ಪ್ರಸಂಗ; ಉತ್ತರಾಖಂಡದಲ್ಲಿ ಕಾಡಾನೆಗಳೊಂದಿಗೆ ʼಓಡಿ ಹೋದʼ ಕರ್ನಾಟಕದ ಸಾಕಾನೆಗಳು!

ಉತ್ತರಾಖಂಡದಲ್ಲಿ ಕಾಡಾನೆಗಳೊಂದಿಗೆ ಪರಾರಿಯಾದ ಸಾಕಾನೆಗಳು!

Kumki Elephants: ಕರ್ನಾಟಕದಿಂದ ಉತ್ತರಾಖಂಡಕ್ಕೆ ಹಸ್ತಾಂತರಿಸಲಾಗಿದ್ದ 2 ಕುಮ್ಕಿ ಹೆಣ್ಣಾನೆಗಳು ಕಾಡಾನೆ ಹಿಂದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ಉತ್ತರಾಖಂಡದ ಜಿಮ್‌ ಕಾರ್ಬೆಟ್‌ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ವಿದ್ಯಾಮಾನ ಜರುಗಿದೆ. ಕಾಡು ಗಸ್ತು ತಿರುಗುವ ಉದ್ದೇಶದಿಂದ ಇಲ್ಲಿಗೆ ಕರ್ನಾಟಕದಿಂದ 2 ಹೆಣ್ಣಾನೆಗಳನ್ನು ಕರೆತರಲಾಗಿತ್ತು. ಇದೀಗ ಇವು ʼಓಡಿ ಹೋಗಿದ್ದುʼ ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಯುತ್ತಿದೆ.

ಜೂನ್ 3ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ. ವೇಣುಗೋಪಾಲ್ ಘೋಷಣೆ

ಜೂನ್ 3ಕ್ಕೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ: ಕೆ.ಸಿ. ವೇಣುಗೋಪಾಲ್

Karnataka New CM Oath: ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಜೂನ್ 3ರಂದು ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

SSLC Exam 2 Results 2026: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಶೇ.62 ವಿದ್ಯಾರ್ಥಿಗಳು ಪಾಸ್‌

SLC Exam 2 Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

ರಾಜ್ಯದಾದ್ಯಂತ ಎಸ್‌ಎಸ್ಎಲ್‌ಸಿ ಪರೀಕ್ಷೆ- 2ನ್ನು ಮೇ 18ರಿಂದ 25ರವರೆಗೆ ಒಟ್ಟು 358 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದ್ದು, ರಿಸಲ್ಟ್‌ ವೀಕ್ಷಿಸುವುದು ಹೇಗೆ?, ವೆಬ್‌ಸೈಟ್‌ ಲಿಂಕ್‌ ಕುರಿತ ಮಾಹಿತಿ ಇಲ್ಲಿ ನೀಡಲಾಗಿದೆ.

Karnataka New CM: ಸರ್ಕಾರ ರಚಿಸಲು ಡಿ.ಕೆ.ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ; ಜೂನ್‌ 3ಕ್ಕೆ ನೂತನ ಸಿಎಂ ಪ್ರಮಾಣ ವಚನ

ಸರ್ಕಾರ ರಚಿಸಲು ಡಿ.ಕೆ.ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ;

ಬೆಂಗಳೂರಿನ ವಿಧಾನಸೌಧದಲ್ಲಿ ಶನಿವಾರ ನಡೆದ ಸಿಎಲ್‌ಪಿ ಸಭೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿತ್ತು. ಇದಾದ ಬಳಿಕ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ರಚನೆಗೆ ಗವರ್ನರ್‌ ಆಹ್ವಾನಿಸಿದ್ದಾರೆ.

Tiptur Rain: ಕೊಬ್ಬರಿ ನಾಡಿನಲ್ಲಿ ಬಿರುಗಾಳಿ ಸಹಿತ ವರುಣಾರ್ಭಟ; ಧರೆಗೆ ಉರುಳಿದ ನೂರಾರು ಕಲ್ಪವೃಕ್ಷ, ಶೆಡ್‌ ಶೀಟ್‌ ಬಿದ್ದು ಬಾಲಕನಿಗೆ ಗಂಭೀರ ಗಾಯ

ಕೊಬ್ಬರಿ ನಾಡಿನಲ್ಲಿ ವರುಣಾರ್ಭಟ; ಧರೆಗೆ ಉರುಳಿದ ನೂರಾರು ಕಲ್ಪವೃಕ್ಷ

Tiptur News: ತಿಪಟೂರಿನಲ್ಲಿ ಶುಕ್ರವಾರ ರಾತ್ರಿ ಬಿರುಗಾಳಿ ಸಮೇತ ಸುರಿದ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ತೆಂಗಿನಕಾಯಿ ಫ್ಯಾಕ್ಟರಿ ಕಾರ್ಮಿಕರಿಗೆಂದು ನಿರ್ಮಿಸಿದ್ದ ಶೆಡ್ಡುಗಳ ಮೇಲ್ಚಾವಣಿ ಹಾರಿ ಹೋಗಿವೆ. ಹುಳಿಯಾರು ಮುಖ್ಯ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಬಿರುಗಾಳಿಯ ಅರ್ಭಟಕ್ಕೆ 500ಕ್ಕೂ ಹೆಚ್ಚು ತೆಂಗಿನ ಮರಗಳು ಬಿದ್ದು ಹೋಗಿವೆ, 3000ಕ್ಕೂ ಹೆಚ್ಚು ಬಾಳೆ ಗಿಡಗಳು ಸೇರಿದಂತೆ ವಿವಿಧ ಬಗೆಯ ಹಣ್ಣಿನ ಗಿಡಗಳು ನೆಲಕಚ್ಚಿವೆ.

Karnataka New CM: ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿ.ಕೆ.ಶಿವಕುಮಾರ್‌; ಜೂನ್‌ 3ಕ್ಕೆ ನೂತನ ಸಿಎಂ ಆಗಿ ಪದಗ್ರಹಣ

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ

ಲೋಕಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಡಿ.ಕೆ.ಶಿವಕುಮಾರ್‌ ಅವರು ಭೇಟಿಯಾಗಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಈ ವೇಳೆ ಹಿರಿಯ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ, ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಕೆ.ಸಿ.ವೇಣುಗೋಪಾಲ್‌ ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಆಡಳಿತ ನೆನೆದು ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಪೋಸ್ಟ್

ಸಿದ್ದರಾಮಯ್ಯ ಆಡಳಿತ ನೆನೆದು ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಪೋಸ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಮತ್ತು ವ್ಯಕ್ತಿತ್ವ ನೆನೆದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಸ್ಥಾನಗಳು ಬದಲಾಗಬಹುದು, ಆದರೆ ಜನಮನದಲ್ಲಿ ಶಾಶ್ವತವಾಗಿ ಉಳಿಯುವ ನಾಯಕನಿಗೆ ವಿದಾಯ ಇರುವುದಿಲ್ಲ ಎಂದಿದ್ದಾರೆ.

Karnataka New CM: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಅಧಿಕೃತ ಆಯ್ಕೆ; ಬುಧವಾರ ಸಂಜೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್‌ ಅವರು ಸಿದ್ದರಾಮಯ್ಯ ಸೇರಿ ಹಿರಿಯ ನಾಯಕರ ಜತೆ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಬುಧವಾರ ಸಂಜೆ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸ್ವಗ್ರಾಮ ಹನುಮಂತನಹಳ್ಳಿಯಲ್ಲಿ ನೆರವೇರಿದ ಮಾಜಿ ಸಚಿವ ವೆಂಕಟರಮಣಪ್ಪ ಅಂತ್ಯಕ್ರಿಯೆ; ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ದರ್ಶನ

ಸ್ವಗ್ರಾಮದಲ್ಲಿ ನೆರವೇರಿದ ಮಾಜಿ ಸಚಿವ ವೆಂಕಟರಮಣಪ್ಪ ಅಂತ್ಯಕ್ರಿಯೆ

Former Minister Venkataramanappa: ಪಾವಗಡ ತಾಲೂಕಿನ ಹನುಮಂತನಹಳ್ಳಿಯ ತೋಟದಲ್ಲಿ ಸಕಲ ಸರ್ಕಾರಿ ಗೌರಗಳೊಂದಿಗೆ ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುಖಂಡ ವೆಂಕಟರಮಣಪ್ಪ ಅವರ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ ರಾಜಕೀಯ ಗಣ್ಯರು, ಸಾರ್ವಜನಿಕರು, ಅಭಿಮಾನಿಗಳು ಸೇರಿ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.

ರುದ್ರಪ್ಪ ಲಮಾಣಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಶ್ರೀ ಸೇವಾಲಾಲ್ ಲಂಬಾಣಿ ಸಂಘ ಒತ್ತಾಯ

ರುದ್ರಪ್ಪ ಲಮಾಣಿಗೆ ಡಿಸಿಎಂ ಸ್ಥಾನ ನೀಡಿ; ಬಿ.ಟಿ. ಕುಮಾರ್ ಒತ್ತಾಯ

ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಮುಂಬರುವ ಸಂಪುಟ ಪುನಾರಚನೆಯಲ್ಲಿ ಉಪಮುಖ್ಯಮಂತ್ರಿ ಅಥವಾ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಮತ್ತು ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸಮಾಜದ ಪಕ್ಷದ ಮುಖಂಡರುಗಳಿಗೆ ಪ್ರಾತಿನಿಧ್ಯ ನೀಡಬೇಕು ಎಂದು ತಾ.ಶ್ರೀ ಸೇವಾಲಾಲ್ ಲಂಬಾಣಿ ಸಂಘ ಮನವಿ ಮಾಡಿದೆ.

ಯಾರಿಗೂ ಬಗ್ಗದ ʼಬಂಡೆʼ ಡಿ.ಕೆ. ಶಿವಕುಮಾರ್‌ಗೆ ಕೊನೆಗೂ ಒಲಿದ ಮುಖ್ಯಮಂತ್ರಿ ಪಟ್ಟ; ಕಾಂಗ್ರೆಸ್‌ ನಾಯಕನ ರಾಜಕೀಯ ಜರ್ನಿ ಹೇಗಿತ್ತು?

ಡಿ.ಕೆ. ಶಿವಕುಮಾರ್‌ ರಾಜಕೀಯ ಜರ್ನಿ ಹೇಗಿತ್ತು?

D.K. Shivakumar: ʼಟ್ರಬಲ್ ಶೂಟರ್ʼ ಖ್ಯಾತಿಯ ಡಿ.ಕೆ. ಶಿವಕುಮಾರ್‌ ಇದೀಗ ಉಪಮುಖ್ಯಮಂತ್ರಿಯಿಂದ ಮುಖ್ಯಮಂತ್ರಿಯಾಗಿದ್ದಾರೆ. ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬರಲು ಮಹತ್ವದ ಕೊಡುಗೆ ನೀಡಿದ ಅವರಿಗೆ ಸಿಎಂ ಪಟ್ಟ ಲಭಿಸಿದೆ. ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಪ್ರವೇಶ ಹೇಗಿತ್ತು? ವಿಪಕ್ಷಗಳ, ಪಕ್ಷದೊಳಗಿನ ಸವಾಲು ಮೆಟ್ಟಿ ಮುಖ್ಯಮಂತ್ರಿಯಾಗಿದ್ದು ಹೇಗೆ? ಅವರ ರಾಜಕೀಯ ಹೋರಾಟ ಹೇಗಿತ್ತು? ಇಲ್ಲಿದೆ ವಿವರ.

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಜೂನ್ 3ರಂದೇ ಏಕೆ? ಇದರ ಹಿಂದಿರುವ ಲೆಕ್ಕಾಚಾರವೇನು?

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಜೂನ್ 3ರಂದೇ ಏಕೆ?

DKS Taking Oath: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಸಂಜೆ 4:10ಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಗುರುವಾರ (ಮೇ 28) ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕದ ಬಗ್ಗೆ ತೀವ್ರ ಊಹಾಪೋಹಗಳು ಕೇಳಿಬರುತ್ತಿವೆ.

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ; ಅದೃಷ್ಟವಶಾತ್‌ ತಪ್ಪಿದ ಅನಾಹುತ

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ

Chitrakoota Kaushalya School: ಇನ್ನೂ ಶೈಕ್ಷಣಿಕ ವರ್ಷ ಆರಂಭವಾಗದ ಕಾರಣ ಹೆಚ್ಚಿನ ಮಕ್ಕಳು ಶಾಲೆಗೆ ಆಗಮಿಸಿರಲಿಲ್ಲ. ಬೆಂಕಿ ಹೊತ್ತಿದ ಬಳಿಕ ಅಲ್ಲಿದ್ದ ಕೆಲ ಸಿಬ್ಬಂದಿಗಳು ಹೊರಗೆ ಬಂದಿದ್ದು, ಇದರಿಂದಾಗಿ ಅದೃಷ್ಟವಶಾತ್‌ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಮಾದರಿ: ರಾಜೀನಾಮೆ ಬಳಿಕ ರಾಹುಲ್ ಗಾಂಧಿ ಶ್ಲಾಘನೆ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅವರನ್ನು ಹೊಗಳಿದ ರಾಹುಲ್ ಗಾಂಧಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ.

Gold Price Today On 30th May 2026: ವೀಕೆಂಡ್‌ ಶಾಪಿಂಗ್‌ ಮಾಡುವವರಿಗೆ ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಭರ್ಜರಿ ಇಳಿಕೆ

ಚಿನ್ನ ಕೊಳ್ಳಲು ಇದು ಸಕಾಲ; ಭರ್ಜರಿ ಬೆಲೆ ಇಳಿಕೆ

Gold Silver Price Today: ಶನಿವಾರ ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,395 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,704 ರುಪಾಯಿ ಕಂಡು ಬಂದಿದೆ.

Ankola Bus Accident: ಅಂಕೋಲಾ ಬಳಿ ಸೀಬರ್ಡ್ ಬಸ್ ಪಲ್ಟಿಯಾಗಿ ಓರ್ವ ಸಾವು; 21 ಪ್ರಯಾಣಿಕರಿಗೆ ಗಾಯ

ಅಂಕೋಲಾ ಬಳಿ ಸೀಬರ್ಡ್ ಬಸ್ ಪಲ್ಟಿಯಾಗಿ ಓರ್ವ ಸಾವು

ಬಳ್ಳಾರಿಯಿಂದ ಗೋವಾ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸೀಬರ್ಡ್ ಬಸ್, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು ಬಳಿ ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್; ಜೂನ್ 3ರಂದು ಪ್ರಮಾಣ ವಚನ?

ಜೂನ್ 3ರಂದು ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ?

DK Shivakumar: ಕರ್ನಾಟಕದ ರಾಜಕೀಯ ಬೆಳವಣಿಗೆಗಳ ನಡುವೆಯೇ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳು ಬಲಗೊಂಡಿವೆ. ಸಿಎಲ್‌ಪಿ ಸಭೆಗೆ ಮುನ್ನವೇ ಅವರು ರಾಜ್ಯಪಾಲರನ್ನು ಭೇಟಿ ಮಾಡುವ ನಿರೀಕ್ಷೆಯಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಪ್ರಕ್ರಿಯೆ ಆರಂಭವಾಗಲಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಭವ್ಯ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಭದ್ರತೆಯನ್ನೂ ಹೆಚ್ಚಿಸಲಾಗಿದೆ.

5,000 ಕೋಟಿ ರೂ. ಎಲ್ಲಿ ಹೋಗಿದೆ ಎಂದು ಹೇಳುವಿರಾ? ಸಿದ್ದರಾಮಯ್ಯಗೆ ಸುರೇಶ್​​ ಕುಮಾರ್ ಬಹಿರಂಗ ಪತ್ರ

ಸಿದ್ದರಾಮಯ್ಯ ಅವರಿಗೆ ಸುರೇಶ್​​ ಕುಮಾರ್ ಬಹಿರಂಗ ಪತ್ರ

ಗೃಹಲಕ್ಷ್ಮಿ ಯೋಜನೆಗೆ ಮೀಸಲಿರಿಸಿದ್ದ 5,000 ಕೋಟಿ ರೂ. ಎಲ್ಲಿದೆ ಮಾನ್ಯ ಸಿದ್ದರಾಮಯ್ಯನವರೇ? ಎಂದು ಬಿಜೆಪಿ ನಾಯಕ ಸುರೇಶ ಕುಮಾರ್ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೇಲೆ ಸುರೇಶ್ ಕುಮಾರ್ ಅವರು ಬರೆದಿರುವ ಈ ಪತ್ರ ಸಾಮಾಜಿಕ ವೈರಲ್ ಆಗಿದೆ.

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ

ತಂತ್ರಜ್ಞಾನ ಮತ್ತು 'ಕೃತಕ ಬುದ್ಧಿಮತ್ತೆ' (ಎಐ) ಬಳಕೆಯಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತಲೂ ವೇಗವಾಗಿ ಮುನ್ನುಗ್ಗುತ್ತಿದೆ. 'ICRIER-ಪ್ರೊಸಸ್ ಸೆಂಟರ್' ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಇಂಡಿಯಾಸ್ ಡಿಜಿಟಲ್ ಎಕಾನಮಿ’ (ಸೈಡ್‌ 2026) ವರದಿಯು, ಭಾರತದ ಈ ಅದ್ಭುತ ಡಿಜಿಟಲ್ ಕ್ರಾಂತಿಯನ್ನು ಜಗತ್ತಿಗೆ ಪರಿಚಯಿಸಿದೆ.

Chikkaballapur News: ಕೆ.ಹೆಚ್.ಮುನಿಯಪ್ಪರನ್ನು ಉಪಮುಖ್ಯಮಂತ್ರಿ ಮಾಡಿ : ಮಾದಾರ ಮಹಾಸಭಾ ಆಗ್ರಹ

ಕೆ.ಹೆಚ್.ಮುನಿಯಪ್ಪರನ್ನು ಉಪಮುಖ್ಯಮಂತ್ರಿ ಮಾಡಿ

ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಾದಿಗ ಸಮುದಾಯವು 101 ಪರಿಶಿಷ್ಟ ಜಾತಿಗಳಲ್ಲೇ ಅತ್ಯಂತ ಶೋಷಣೆಗೆ ಒಳಗಾದ ಎಲ್ಲಾ ಅವಕಾಶಗಳಿಂದ ಸಮುದಾಯವಾಗಿದೆ. ಹಿಂದೆ ಬಿಜೆಪಿ ಸರಕಾರದಲ್ಲಿ ನಮ್ಮ ಸಮುದಾಯದ ಗೋವಿಂದ ಕಾರಜೋಳ ಅವರನ್ನು ಉಪಮುಖ್ಯಮಂತ್ರಿ ಮಾಡಿ ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡಲಾಗಿತ್ತು.

Loading...