ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Mantralaya Mutt: ಮಂತ್ರಾಲಯದಲ್ಲಿ ಹೈ ಅಲರ್ಟ್;‌ ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

ಮಂತ್ರಾಲಯದಲ್ಲಿ ಹೈ ಅಲರ್ಟ್;‌ ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

Mantralaya Mutt: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ದೇಶಾದ್ಯಂತ ಜನಸಂದಣಿ ಹೆಚ್ಚಾಗಿರುವ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಮಂತ್ರಾಲಯ ಮಠದ ಪ್ರಾಂಗಣ, ಭೋಜನ ಶಾಲೆ, ತುಂಗಭದ್ರಾ ನದಿ ತೀರ, ಬಸ್ ನಿಲ್ದಾಣ, ವ್ಯಾಪಾರದ ಮಳಿಗೆಗಳು, ವಾಹನಗಳಲ್ಲಿ ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್‌ನಿಂದ ತಪಾಸಣೆ ಮಾಡಲಾಗಿದೆ.

Namma Metro: ನಮ್ಮ ಮೆಟ್ರೋದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ. ದಂಡ

ನಮ್ಮ ಮೆಟ್ರೋದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ. ದಂಡ

ನಮ್ಮ ಮೆಟ್ರೋದಲ್ಲಿ ಮಾದಾವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ₹ 500 ದಂಡ ವಿಧಿಸಲಾಗಿದೆ. ಏಪ್ರಿಲ್ 26, 2025ರಂದು ಮೆಟ್ರೋದಲ್ಲಿ ಪ್ರಯಾಣಿಸುವಾಗ ಅವರು ಊಟ ಮಾಡುವ ಮೂಲಕ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದರು.

Viral News: ಉದ್ಯೋಗಾರ್ಥಿಗಳಲ್ಲಿ ಕನ್ನಡ ಬಯಸದ ಬೆಂಗಳೂರು ಕಂಪನಿ, ನೆಟ್ಟಿಗರ ಸಿಟ್ಟು

ಉದ್ಯೋಗಾರ್ಥಿಗಳಲ್ಲಿ ಕನ್ನಡ ಬಯಸದ ಬೆಂಗಳೂರು ಕಂಪನಿ, ನೆಟ್ಟಿಗರ ಸಿಟ್ಟು

ಕನ್ನಡದ ರಾಜಧಾನಿ ನಗರದಲ್ಲಿ ನೆಲೆಗೊಂಡಿರುವ ಸಂಸ್ಥೆಯು ಉದ್ಯೋಗಿಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದು ಸೋಶಿಯಲ್‌ ಮೀಡಿಯಾದಲ್ಲಿ ತೀವ್ರವಾದ (Viral news) ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ. ಅನೇಕ ಬಳಕೆದಾರರು ಕೋಪವನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ನೆಲೆಗೊಂಡಿರುವ ಉದ್ಯೋಗಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Chikkaballapur News: ಶಾಸಕ ಸುಬ್ಬಾರೆಡ್ಡಿ ವಿರುದ್ಧ ರೈತರ ಪ್ರತಿಭಟನೆ

ಶಾಸಕ ಸುಬ್ಬಾರೆಡ್ಡಿ ವಿರುದ್ಧ ರೈತರ ಪ್ರತಿಭಟನೆ

ಶಾಸಕ ಬೆಂಬಲಿಗರ ಒತ್ತಡಕ್ಕೆ ಮಣಿದ ಪಾತಪಾಳ್ಯ ಪೊಲೀಸರು ಕ್ಷಮೆ ಕೋರುವಂತೆ ಡಾ.ಮಧು ಸೀತಪ್ಪಗೆ ದೂರವಾಣಿ ಮೂಲಕ ಸೂಚಿಸುತ್ತಾರೆ, ಕ್ಷಮೆಯಾಚನೆಗೆ ಒಪ್ಪದ ಕಾರಣ ಏ.೨೫ ರಂದು ತಡರಾತ್ರಿ ರಾಜಕೀಯ ಒತ್ತಡಕ್ಕೆ ಮಣಿದ ಪಾತಪಾಳ್ಯ ಠಾಣೆ ಪೊಲೀಸರು ನೀರಾವರಿ ಹೋರಾಟ ಗಾರ ಡಾ.ಮಧುಸೀತಪ್ಪ ಹಾಗೂ ಶಿವಪುರ ರೈತ ಶಾಂತರಾಜು ವಿರುದ್ದ ಅಟ್ರಾಸಿಟಿ ಪ್ರಕರಣ ದಾಖಲಿಸಿ ಕೈತೊಳೆದುಕೊಳ್ಳುತ್ತಾರೆ.

Pradeep Eshwar: ಮಂಚೇನಹಳ್ಳಿಯ ಅಳಲು ಆಲಿಸಿದ ಶಾಸಕ ಪ್ರದೀಪ್ ಈಶ್ವರ್

ಕಾಂಗ್ರೆಸ್ ಪಕ್ಷ ಸದಾ ನೊಂದು ಬೆಂದ ಬಡವರ ಪರವಾದ ಪಕ್ಷ

ನೀವು ಕೆಟ್ಟ ದಾರಿ ಹಿಡಿಯದೇ, ಸಮಾಜದಲ್ಲಿ ಗೌರವಯುತವಾಗಿ, ಸ್ವಾಭಿಮಾನದ ಬದುಕು, ಬದುಕಲು ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿ ದ್ದೀರಿ. ಈ ದೇಶಕ್ಕೆ ನೀವೆಲ್ಲರೂ ಆಸ್ತಿ. ಮಾಲ್​ಗಳಲ್ಲಿ, ಎಸಿ ಮಳಿಗೆಗಳಲ್ಲಿ ಖರೀದಿ ಮಾಡುವುದು ಒಂದು ಕಡೆಯಾದರೆ, ಅದೇ ಗುಣಮಟ್ಟದ ಆಹಾರ, ವಸ್ತುಗಳನ್ನು ಅವರಿಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿಕೊಂಡು ಬರುತ್ತಿದ್ದೀರಿ

DK Shivakumar: ಮಂಗಳಸೂತ್ರ, ಜನಿವಾರ ನಿರ್ಬಂಧ ಕೇಂದ್ರ ಹಿಂಪಡೆಯಲಿ: ಡಿಸಿಎಂ ಡಿಕೆ ಶಿವಕುಮಾರ್

ಮಂಗಳಸೂತ್ರ, ಜನಿವಾರ ನಿರ್ಬಂಧ ಕೇಂದ್ರ ಹಿಂಪಡೆಯಲಿ: ಡಿಸಿಎಂ ಡಿಕೆ ಶಿವಕುಮಾರ್

ರೈಲ್ವೆ ಇಲಾಖೆಯ ಪರೀಕ್ಷೆಗೆ ಸಂಬಂಧಿಸಿ, ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗುತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ ಟಿಎಪಿಸಿಎಂಎಸ್ ಚುನಾವಣೆ ಎನ್ ಡಿ ಎ ಗೆ ಭರ್ಜರಿ ಗೆಲುವು ಮತ್ತೆ ಹಿಡಿತ ಸಾಧಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಟಿಎಪಿಸಿಎಂಎಸ್ ಚುನಾವಣೆ: ಎನ್ ಡಿ ಎ ಗೆ ಭರ್ಜರಿ ಗೆಲುವು

ಮಹಿಳಾ ಮೀಸಲು ಕ್ಷೇತ್ರದಲ್ಲಿ ಸುಜಾತ 1869 ಮತಗಳು ಮತ್ತು ಸುಮಾರು 1557 ಮತಗಳು ಪಡೆದು ಜಯಶೀಲರಾಗಿದ್ದಾರೆ. ಬಿಸಿಎಂ ಎ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್ ನ ಲಕ್ಷ್ಮೀ ನರಸಿಂಹಪ್ಪ 1967 ಮತ ಪಡೆದ ಗೆಲುವು ಸಾಧಿಸಿದ್ದಾರೆ. ಬಿಸಿಎಂ ಬಿ ಮೀಸಲು ಕ್ಷೇತ್ರದಲ್ಲಿ ರಾಕೇಶ್ ಮೋಹನ್ 1971 ಮತಪಡೆದು ಜಯಬೇರಿ ಬಾರಿಸಿದ್ದಾರೆ. ಎಸ್ಟಿ ಮೀಸಲು ಕ್ಷೇತ್ರದಲ್ಲಿ ಆವಲಕೊಂಡರಾಯಪ್ಪ 1980 ಮತಗಳು ಪಡೆದು ಕೊಳ್ಳುವ ಮೂಲಕ ಎರಡನೇ ಬಾರಿ ಎನ್ ಡಿ ಎ ಅಭ್ಯರ್ಥಿಯಾಗಿ ಗೆಲವು ಸಾಧಿಸಿದ್ದಾರೆ

Janivara Row: ರೈಲ್ವೆ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಸದಿರಲು ಸಚಿವ ವಿ. ಸೋಮಣ್ಣ ಸೂಚನೆ

ರೈಲ್ವೆ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಸದಿರಲು ಸಚಿವ ವಿ. ಸೋಮಣ್ಣ ಸೂಚನೆ

ಶಿವಮೊಗ್ಗ, ಧಾರವಾಡ ಮತ್ತು ಬೀದರ್ ಜಿಲ್ಲೆಗಳಲ್ಲಿ ಕರ್ನಾಟಕ ಸಿಇಟಿ ಪರೀಕ್ಷೆಗೆ ಹಾಜರಾದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಕರ್ನಾಟಕದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಸದ್ಯ ಕರ್ನಾಟಕ ಹೈಕೋರ್ಟ್​​​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೂಡ ಸಲ್ಲಿಕೆಯಾಗಿದೆ. ಇಂಥ ಸಂದರ್ಭದಲ್ಲೇ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಯ ಪ್ರವೇಶ ಪತ್ರ ಕೂಡ ವಿವಾದಕ್ಕೆ ಗುರಿಯಾಗಿತ್ತು.

Gold Price Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 62 ರೂ. ಇಳಿಕೆ ಕಂಡಿದ್ದು, 8,940 ರೂ. ಇದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 68ರೂ. ಇಳಿಕೆಯಾಗಿ 9,752 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,520 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,400 ರೂ. ಮತ್ತು 100 ಗ್ರಾಂಗೆ 8,94,000 ರೂ. ನೀಡಬೇಕಾಗುತ್ತದೆ.

ಬೆಂಗಳೂರಿನಲ್ಲಿ ಶ್ರೀ ಅರವಿಂದ ವಾರ್ಷಿಕ ಇತಿಹಾಸ ಪ್ರಬಂಧ ಸ್ಪರ್ಧೆ 2024–25ರ ವಿಜೇತರಿಗೆ ಗೌರವ

ಬೆಂಗಳೂರಿನಲ್ಲಿ ಶ್ರೀ ಅರವಿಂದ ವಾರ್ಷಿಕ ಇತಿಹಾಸ ಪ್ರಬಂಧ ಸ್ಪರ್ಧೆ

ಯುವ ಜನರಲ್ಲಿ ಭಾರತೀಯ ಇತಿಹಾಸವನ್ನು ಜನಪ್ರಿಯಗೊಳಿಸುವ ಗುರಿಯನ್ನು ಹೊಂದಿರುವ ಇಂತಹ ಪ್ರಯತ್ನಗಳನ್ನು ಬೆಂಬಲಿಸುವುದು ಯಾವಾಗಲೂ ಗೌರವವಾಗಿದೆ. ಶ್ರೀ ಅರಬಿಂದೋ ಪ್ರಬಂಧ ಸ್ಪರ್ಧೆಗೆ ದೇಶದ ಮೂಲೆ ಮೂಲೆಗಳಿಂದ ಬರುತ್ತಿರುವ ಅಗಾಧ ಪ್ರತಿಕ್ರಿಯೆಯು, ನಮ್ಮ ನಾಗರಿ ಕತೆಯ ಬೇರುಗಳ ಬಗ್ಗೆ ಯುವ ಭಾರತೀಯರಲ್ಲಿ ಬೆಳೆಯುತ್ತಿರುವ ಕುತೂಹಲ ಮತ್ತು ಹೆಮ್ಮೆಯ ಪ್ರಬಲ ಪ್ರತಿ ಬಿಂಬವಾಗಿದೆ.

RRB Recruitment Exam: ಪರೀಕ್ಷೆಗೆ ʼತಾಳಿ ತೆಗೀರಿʼ ಎಂದ ರೈಲ್ವೆ ಇಲಾಖೆ; ಜನಿವಾರಾನೂ ತೆಗೀಬೇಕಾ?

ಪರೀಕ್ಷೆಗೆ ʼತಾಳಿ ತೆಗೀರಿʼ ಎಂದ ರೈಲ್ವೆ ಇಲಾಖೆ; ಜನಿವಾರಾನೂ ತೆಗೀಬೇಕಾ?

ಸಿಇಟಿ ಪರೀಕ್ಷೆ ಬರೆಯಲು ಜನಿವಾರ ನಿರಾಕರಿಸಿದ ಪ್ರಕರಣ (Janivara Row) ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಮಂಗಳಸೂತ್ರ ಹಾಗೂ ಧರ್ಮದ ಸಂಕೇತಗಳನ್ನು ಧರಿಸದಂತೆ ಸೂಚನೆ ನೀಡಲಾಗಿದೆ.

Om Prakash Murder Case: ಓಂ ಪ್ರಕಾಶ್‌ ಕೊಲೆ ಹಿಂದೆ ಪಿಎಫ್‌ಐ ಕೈವಾಡ? ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ದೂರು

ಓಂ ಪ್ರಕಾಶ್‌ ಕೊಲೆ ಹಿಂದೆ ಪಿಎಫ್‌ಐ? ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ದೂರು

ಪಲ್ಲವಿಯನ್ನು ಅವರ ಹೇಳಿಕೆಯ ಆಧಾರದ ಮೇಲೆ ಮಾತ್ರ ಆರೋಪಿಯನ್ನಾಗಿ ಮಾಡಲಾಗಿದೆ. ಪಿಎಫ್‌ಐ ಸದಸ್ಯರು ಓಂ ಪ್ರಕಾಶ್ ಅವರನ್ನು ಕೊಂದು (Om Prakash Murder Case) ಪೊಲೀಸ್ ಅಧಿಕಾರಿಯ ಪತ್ನಿ ಮತ್ತು ಅವರ ಮಗಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಸಂದೇಶ ಕಳುಹಿಸುವಂತೆ ಕೇಳಿರಬಹುದು ಎಂದು ನನಗೆ ಅನುಮಾನವಿದೆ, ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Assault case: ರಸ್ತೆಯ ಮೇಲೆ ಕಸ ಎಸೆಯಬೇಡಿ ಎಂದ ಪ್ರಾಧ್ಯಾಪಕರ ಮೇಲೆ ಹಲ್ಲೆ, ಮೂವರ ಸೆರೆ

ರಸ್ತೆಯ ಮೇಲೆ ಕಸ ಎಸೆಯಬೇಡಿ ಎಂದ ಪ್ರಾಧ್ಯಾಪಕರ ಮೇಲೆ ಹಲ್ಲೆ, ಮೂವರ ಸೆರೆ

ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.

Janivara row: ಜನಿವಾರ ವಿವಾದ: ರಾಜ್ಯ ಸರ್ಕಾರ, ಕೆಇಎಗೆ ಹೈಕೋರ್ಟ್ ನೋಟಿಸ್, ಮರು ಪರೀಕ್ಷೆಗೆ ಅರ್ಜಿದಾರರ ಆಗ್ರಹ

ಜನಿವಾರ ವಿವಾದ: ರಾಜ್ಯ ಸರ್ಕಾರ, ಕೆಇಎಗೆ ಹೈಕೋರ್ಟ್ ನೋಟಿಸ್

ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ. ಪರೀಕ್ಷೆಗೆ ಹಾಜರಾಗಲು ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಸಿಇಟಿ ಮರು ಪರೀಕ್ಷೆ ನಡೆಸಲು ಅಗತ್ಯ ಆದೇಶಗಳನ್ನು ನೀಡಬೇಕೆಂದೂ ಅರ್ಜಿದಾರರು ನ್ಯಾಯಾಲಯದ ಮುಂದೆ ಮನವಿ ಮಾಡಿದರು.

Murder Case: ಬಾರ್‌ನಲ್ಲಿ ಜೋರಾಗಿ ಮಾತನಾಡಬೇಡಿ ಎಂದದ್ದಕ್ಕೆ ಯುವಕನ ಕೊಲೆ

ಬಾರ್‌ನಲ್ಲಿ ಜೋರಾಗಿ ಮಾತನಾಡಬೇಡಿ ಎಂದದ್ದಕ್ಕೆ ಯುವಕನ ಕೊಲೆ

ಶ್ಯಾನುಬೋಗನಹಳ್ಳಿ ತರಂಗಿಣಿ ಬಾರ್​ನಲ್ಲಿ ಮೃತ ಸುರೇಶ್ ಜೋರಾಗಿ ಮಾತನಾಡಬೇಡಿ, ಸೈಲೆಂಟ್​ ಆಗಿ ಇರಿ ಎಂದಿದ್ದಾರೆ. ಇಷ್ಟಕ್ಕೆ ಸುರೇಶ್ ಅವರ ಮನೆಗೆ ನುಗ್ಗಿದ್ದ ಆರೋಪಿಗಳು, ಆತನ ಹೆಂಡತಿ ಮಕ್ಕಳ ಮುಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬನ್ನೇರುಘಟ್ಟ ಪೊಲೀಸರು ಕೊಲೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

Karnataka Rains: ಇಂದು ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಸಾಧ್ಯತೆ

ಇಂದು ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 23°C ಇರುವ ಸಾಧ್ಯತೆ ಇದೆ.

ಬೆಂಗಳೂರಿನ ನಾಲೆಡ್ಜಿಎಂ ಅಕಾಡೆಮಿಯಿಂದ "ಟ್ರಾನ್ಸೆಂಡೆನ್ಸ್ 2025" ಕಾರ್ಯಕ್ರಮ ಆಚರಣೆ

ನಾಲೆಡ್ಜಿಎಂ ಅಕಾಡೆಮಿಯಿಂದ "ಟ್ರಾನ್ಸೆಂಡೆನ್ಸ್ 2025" ಕಾರ್ಯಕ್ರಮ ಆಚರಣೆ

ಭಾರತೀಯ ಖಗೋಳ ವಿಜ್ಞಾನ ಸಂಸ್ಥೆಯ ಮತ್ತು ಇಂಡಿಯಾ TMT ಕೇಂದ್ರದ ಹಿರಿಯ ವಿಜ್ಞಾನಿಯಾದ ಡಾ.ರಾಮ್ಯಾ ಸೇತುರಾಮ್ ಅವರ ಭಾಷಣವು ವಿದ್ಯಾರ್ಥಿಗಳ ಅನ್ವೇಷಣಾ ಪ್ರಯಾಣಕ್ಕೆ ಪ್ರೇರಣೆ ಯಾಯಿತು. ಅಲ್ಲದೇ ಈ ಹಿರಿಯ ವಿಜ್ಞಾನಿಯು ಭಾರತ ಮಾತ್ರವಲ್ಲದೇ, ಚೀನಾ ಮತ್ತು ಫ್ರಾನ್ಸ್ನಲ್ಲಿ ಕೂಡ ಅವರ ಕಾರ್ಯ ಕ್ಷೇತ್ರವಾದ ಖಗೋಳಶಾಸ್ತ್ರದಲ್ಲಿ ಮಹತ್ವಪೂರ್ಣ ಕೊಡುಗೆಗಳನ್ನು ನೀಡಿದ್ದಾರೆ

Bengaluru News: ನಾರಾಯಣ ಸೇವಾ ಸಂಸ್ಥಾನದಿಂದ ದಕ್ಷಿಣ ಭಾರತದ 700ಕ್ಕೂ ಹೆಚ್ಚು ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ

ದಕ್ಷಿಣ ಭಾರತದ 700 ಕ್ಕೂ ಹೆಚ್ಚು ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ

ದಿವ್ಯಾಂಗರು ಮತ್ತವರ ಕುಟುಂಬಕ್ಕೆ ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾ ಗಿತ್ತು. ನಾರಾಯಣ ಸೇವಾ ಸಂಸ್ಥಾನದ ಬೆಂಗಳೂರು ಉಸ್ತುವಾರಿ ಖುಬಿಲಾಲ್ ಮೆನಾರಿಯಾ, ಮುಂಬೈ ಶಾಖೆ ಮುಖ್ಯಸ್ಥ ಲಲಿತ್ ಲೋಹರ್, ಸಾಮಾಜಿಕ ಕಾರ್ಯಕರ್ತ ರಾಕೇಶ್ ವೈಷ್ಣವ್, ಗಾನವಿ ಮತ್ತು ಮಾಧ್ಯಮ ಸಂಯೋಜಕರಾದ ಚಂದ್ರಶೇಖರಯ್ಯ ಮತ್ತಿತರರು ದಿವ್ಯಾಂಗರಿಗೆ ನೆರವಾದರು.

MP P C Mohan: ದಿವ್ಯಾಂಗರ ಶ್ರೇಯೋಭಿವೃದ್ಧಿಗೆ ಬದ್ಧ : ಸಂಸತ್ತಿನ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಮಿತಿ ಅಧ್ಯಕ್ಷ ಪಿ.ಸಿ. ಮೊಹನ್

ದಿವ್ಯಾಂಗರ ಶ್ರೇಯೋಭಿವೃದ್ಧಿಗೆ ಬದ್ಧ: ಸಂಸದ ಪಿ.ಸಿ. ಮೋಹನ್

ನಾರಾಯಣ ಸೇವಾ ಸಮಿತಿ ಕರ್ನಾಟಕದಲ್ಲೂ ಉತ್ತಮ ಸೇವೆ ಸಲ್ಲಿಸುತ್ತಿದೆ. ಮೂರನೇ ಬಾರಿಗೆ ಅತಿ ದೊಡ್ಡ ಕೃತಕ ಅಂಗಾಂಗ ಜೋಡಣಾ ಶಿಬಿರ ಏರ್ಪಡಿಸಿರುವುದು ಉತ್ತಮ ಬೆಳವಣಿಗೆ. ಈ ಸಂಸ್ಥೆಯವರು ದೇವರಂತೆ ದಿವ್ಯಾಂಗರಿಗೆ ನೆರವಾಗುತ್ತಿದೆ. ಬೇರೆಯವರಿಗಾಗಿ ಕೆಲಸ ಮಾಡುವ ಮೂಲಕ ಉದಾತ್ತ ಕಾರ್ಯದಲ್ಲಿ ನಿರತವಾಗಿದೆ

Chikkanayakanahalli Accident: ಮದ್ಯ ಸಾಗಿಸುತ್ತಿದ್ದ ವಾಹನ ಪಲ್ಟಿ

ಮದ್ಯ ಸಾಗಿಸುತ್ತಿದ್ದ ವಾಹನ ಪಲ್ಟಿ

ಹಂದನಕೆರೆ ಹೋಬಳಿಯ ಗೋಪಾಲಪುರದ ಕೆರೆಕೋಡಿ ಸಮೀಪ ಮದ್ಯ ಸಾಗಿಸುತ್ತಿದ್ದ ವಾಹನ ಮಗುಚಿ ಬಿದ್ದಿದೆ. ಆಯತಪ್ಪಿ ಕೆಳಕ್ಕೆ ಉರುಳಿದ್ದರಿಂದ ವಾಹನದಲ್ಲಿದ್ದ ನೂರಾರು ಮದ್ಯದ ಬಾಕ್ಸ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದನ್ನು ಗಮನಿಸಿದ ಸ್ಥಳಿಯರು ಮದ್ಯದ ಬಾಕ್ಸ್ ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಹಾಸನದಿಂದ ಚಳ್ಳಕೆರೆಗೆ ಮದ್ಯದ ಬಾಕ್ಸ್ ಸಾಗಣೆ ಮಾಡುವ ವೇಳೆ ಈ ಅವಘಡ ಸಂಭವಿಸಿದೆ

Karnataka Rains: ವಿಜಯನಗರ, ರಾಯಚೂರಲ್ಲಿ ಮಳೆ ಆರ್ಭಟ; ಸಿಡಿಲಿಗೆ ಇಬ್ಬರು ವ್ಯಕ್ತಿಗಳು, ಹಸು ಬಲಿ

ರಾಜ್ಯದಲ್ಲಿ ಮಳೆ ಆರ್ಭಟ; ಸಿಡಿಲಿಗೆ ಇಬ್ಬರು ವ್ಯಕ್ತಿಗಳು, ಹಸು ಬಲಿ

Karnataka Rains: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ಸಿಡಿಲು ಬಡಿದು ಕೂಲಿ ಕಾರ್ಮಿಕ ಹಾಗೂ ಆಕಳು ಮೃತಪಟ್ಟಿದೆ. ಅದೇ ರೀತಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಗುಡದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ಪತಿ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮದುವೆಯಾಗಿ ವಂಚಿಸಿದ ಪೊಲೀಸ್; ನ್ಯಾಯಕ್ಕಾಗಿ ಸಖಿ ಕೇಂದ್ರದ ಮೊರೆ ಹೋದ ಮಹಿಳಾ ಸಿಬ್ಬಂದಿ

ಮದುವೆಯಾಗಿ ಮಹಿಳಾ ಸಿಬ್ಬಂದಿಗೆ ವಂಚಿಸಿದ ಪೊಲೀಸ್

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯೊಬ್ಬರು, ಮಹಿಳಾ ಸಿಬ್ಬಂದಿಯನ್ನು ಸುಮಾರು 4-5 ವರ್ಷ ಪ್ರೀತಿಸಿ ಮದುವೆಯಾಗಿದ್ದರು. ಇದೀಗ ಬೇರೊಂದು ಮದುವೆಯಾಗಲು ಹೊರಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ನ್ಯಾಯಕ್ಕಾಗಿ ಮಹಿಳಾ ಸಿಬ್ಬಂದಿ, ಸಖಿ ಕೇಂದ್ರದ ಮೊರೆ ಹೋಗಿದ್ದಾರೆ.

Road accident: ಮದ್ಯ ಸಾಗಿಸುತ್ತಿದ್ದ ವಾಹನ ಪಲ್ಟಿ; ಎಣ್ಣೆ ಬಾಟಲಿಗಾಗಿ ಮುಗಿಬಿದ್ದ ಸ್ಥಳೀಯರು!

ಮದ್ಯ ಸಾಗಿಸುತ್ತಿದ್ದ ವಾಹನ ಪಲ್ಟಿ; ಎಣ್ಣೆ ಬಾಟಲಿಗಾಗಿ ಮುಗಿಬಿದ್ದ ಸ್ಥಳೀಯರು

Road accident: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿಯ ಗೋಪಾಲಪುರದ ಕೆರೆಕೋಡಿ ಸಮೀಪ ಅಪಘಾತ ನಡೆದಿದೆ. ಚಾಲಕನ ನಿಯಂತ್ರಣ ವಾಹನ ಉರುಳಿದಿದ್ದರಿಂದ ನೂರಾರು ಮದ್ಯದ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಹಾಸನದಿಂದ ಚಳ್ಳಕೆರೆಗೆ ಮದ್ಯದ ಬಾಕ್ಸ್ ಸಾಗಣೆ ವೇಳೆ ಅವಘಡ ನಡೆದಿದೆ.

Karnataka weather: ನಾಳೆ ಬೆಂಗಳೂರು ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

ನಾಳೆ ಬೆಂಗಳೂರು, ಕೋಲಾರ ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

Karnataka weather: ಬೀದರ್‌ನಲ್ಲಿ ಶನಿವಾರ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ 40.8 ಡಿ.ಸೆ ದಾಖಲಾಗಿದೆ. ಇನ್ನು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 3 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ನಂತರ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಹೆಚ್ಚಳವಾಗುತ್ತದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.