ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಭಾರೀ ಮಳೆಗೆ ಮೆಕ್ಕೆಜೋಳ ಶೇ, 40 ಇಳುವರಿ ಕುಸಿತ

ಭಾರೀ ಮಳೆಗೆ ಮೆಕ್ಕೆಜೋಳ ಶೇ, 40 ಇಳುವರಿ ಕುಸಿತ

ಹೆಚ್ಚು ಮೆಕ್ಕೆಜೋಳ ಬೆಳೆಯುವ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆದಿದ್ದ ರೈತರು ಈ ಬಾರಿ ಒಳ್ಳೆಯ ಫಸಲಿನ ನಿರೀಕ್ಷೆಯಲ್ಲಿಉತ್ತಮ ಆದಾಯ ಬರುತ್ತದೆ, ಸಾಲ-ಸೋಲ ತೀರಿಸಿಕೊಂಡು ನೆಮ್ಮಂದಿಯಿಂದಿರಬಹುದು ಎಂಬ ಕನಸು ಇಟ್ಟು ಕೊಂಡಿದ್ದರು. ಆದರೆ ಮಳೆಯ ಕಣ್ಣಾಮುಚ್ಚಾಲೆ ಆಟಕ್ಕೆ ಈ ಬಾರಿಯೂ ಮೆಕ್ಕೆಜೋಳ ಬೆಳೆದಿದ್ದ ರೈತರು ಇಳುವರಿ ಕುಸಿತದಿಂದ ನಷ್ಟ ಅನುಭವಿಸುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ.

Shidlaghatta News: ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ಸಾವಿರಾರು ವರ್ಷಗಳ ಇತಿಹಾಸವಿರುವ ನಗರದ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಪ್ರಾರಂಭದಿಂದಲೂ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಿತು. ಅಯೋಧ್ಯಾನಗರ ಶಿವಾಚಾರ ವೈಶ್ಯನಗರ್ಥ ಮಂಡಳಿ ವತಿಯಿಂದ ಸೋಮವಾರ ಕಡೆಯ ಕಾರ್ತಿಕ ಮಾಸದ ಪ್ರಯುಕ್ತ ಲಕ್ಷ ದೀಪೋತ್ಸವ ನಡೆಯಿತು.

Gudibande News: ಕಡೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

Gudibande News: ಕಡೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

ನಮ್ಮ ಗ್ರಾಮದಲ್ಲಿ ರುವ ಹಾಲು ಉತ್ಪಾದಕರ ಸಂಘ ತಾಲ್ಲೂಕಿನಲ್ಲಿ ಒಂದು ಮಾದರಿಯಾಗ ಬೇಕು. ನಿಟ್ಟಿನಲ್ಲಿ ನಾವೆಲ್ಲರೂ ಸಂಘದ ಬೆಳವಣಿಗೆಗೆ ಶ್ರಮಿಸಿ, ಸಂಘವನ್ನು ಬಲಿಷ್ಠ ಗೊಳಿಸಲು ಎಲ್ಲಾ ಪ್ರತಿನಿಧಿಗಳು ತಮ್ಮ ವೈಯಕ್ತಿಕ ಪ್ರತಿಷ್ಠೆಗಳನ್ನು ಬದಿಗಿಟ್ಟು ಕೆಲಸ ಮಾಡಬೇಕು. ಸಂಘದ ಕಟ್ಟಡ ನಿರ್ಮಾಣಕ್ಕೆ ಶಾಸಕರು  ನಾಲ್ಕು ಲಕ್ಷ ಅನುದಾನ ನೀಡಿದ್ದಾರೆ.

MLA S.N.Subbareddy: ತಾಲ್ಲೂಕಿಗೆ ಹೆಬ್ಬಾಳ-ನಾಗವಾರ ಹೆಚ್.ಎನ್. ವ್ಯಾಲಿಯಿಂದ 24 ಕೆರೆಗಳಿಗೆ ನೀರು, ನೀರಾವರಿ ಸಚಿವರಿಂದ ಉದ್ಘಾಟನೆ

ಕಾರ್ಯಕ್ರಮದ ಸಿದ್ಧತೆ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪರಿಶೀಲನೆ

ತಾಲ್ಲೂಕಿಗೆ ಹೆಬ್ಬಾಳ-ನಾಗವಾರ ವ್ಯಾಲಿ ಯಿಂದ ಕೆರೆಗಳಿಗೆ ನೀರು ಹರಿಸಬೇಕು, ಇಲ್ಲವಾದರೆ ರಾಜೀನಾಮೆ ನೀಡಲು ಸಿದ್ಧ ಎಂದು ಅಂದಿನ ಕುಮಾರಸ್ವಾಮಿ ಸರ್ಕಾರದ ಮೇಲೆ ಒತ್ತಡ ಹಾಕಿದ್ದೆ. ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ₹83 ಕೋಟಿ ಬಿಡುಗಡೆ ಮಾಡಿದ್ದರು

Bagapally Crime: ಆಹಾರಕ್ಕೆ ಬೆರೆಸಲು ವಿಷಕಾರಿ ದತ್ತೂರ ಬೀಜದ ಪುಡಿ ನೀಡಿದ್ದ ‘ಮಾಂತ್ರಿಕ’ ಅರೆಸ್ಟ್

ಐಸಿಯು ನಲ್ಲಿ ಮೂವರ ಚೇತರಿಕೆ, ೪ ಜನ ಸಾಮಾನ್ಯ ವಾರ್ಡಿಗೆ ಶಿಫ್ಟ್

ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದ ಒಂದೇ ಕುಟುಂಬದ ೮ ಜನರನ್ನು ಸಾಮೂಹಿಕವಾಗಿ ಕೊಲೆ ಮಾಡುವ ಉದ್ದೇಶದಿಂದ ಪಾಪಿರೆಡ್ಡಿ ಎಂಬಾತ ನೀಡಿದ್ದ ವಿಷವನ್ನು ನೀರು ಕುಡಿಯುವ ನೆಪದಲ್ಲಿ ಅಡುಗೆ ಮನೆಗೆ ಪ್ರವೇಶ ಮಾಡಿದ್ದ ಚೌಡರೆಡ್ಡಿ ಎಂಬಾತ ಆಹಾರ ದಲ್ಲಿ(ಸಾಂಬಾರಿಗೆ) ವಿಷವನ್ನು ಬೆರೆಸಿದ್ದ

Sri Madhusudan Sai: ಧ್ವನಿ ಇಲ್ಲದವರಿಗೆ ಮಾಧ್ಯಮಗಳು ಧ್ವನಿಯಾಗಿ ಮುಖ್ಯ ವಾಹಿನಿಗೆ ತರಬೇಕು: ಮಧುಸೂದನ ಸಾಯಿ

ಧ್ವನಿ ಇಲ್ಲದವರಿಗೆ ಮಾಧ್ಯಮಗಳು ಧ್ವನಿಯಾಗಲಿ: ಮಧುಸೂದನ ಸಾಯಿ

Sathya Sai Grama: ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಮಹೋತ್ಸವ' ದ 94ನೇ ದಿನವಾದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಆಶೀರ್ವಚನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಉತ್ತಮ ಸುದ್ದಿಗಳ ಕೊರತೆ ಕಾಣಿಸುತ್ತಿದೆ. ಮಾಧ್ಯಮಗಳು ಸತ್ಯ ಹೇಳಬೇಕು ಎನ್ನುವುದರಲ್ಲಿ ಯಾವುದೇ ಆಕ್ಷೇಪವಿಲ್ಲ. ಆದರೆ ಜಗತ್ತಿನಲ್ಲಿ ಸಿಹಿ ಸತ್ಯಗಳೂ ಸಾಕಷ್ಟು ಇವೆ. ಅದರ ಕಡೆಯೂ ಮಾಧ್ಯಮಗಳು ಗಮನ ಕೊಡಬೇಕು ಎಂದು ತಿಳಿಸಿದ್ದಾರೆ.

Bengaluru Power Cut: ನ.18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ನ.18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

BESCOM: ಆಡುಗೋಡಿ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ನ.18ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Parvathi Siddaramaiah: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು

CM Siddaramaiah's Wife Parvathi: ಶ್ವಾಸಕೋಶದ ಸಮಸ್ಯೆ ಹಿನ್ನೆಲೆಯಲ್ಲಿ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಪಾರ್ವತಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

Tumkur News: ಜ್ಞಾನ ವೃದ್ಧಿ, ವ್ಯಕ್ತಿತ್ವ ರೂಪಿಸಿಕೊಳ್ಳಲು ಓದುವ ಹವ್ಯಾಸ ಸಹಕಾರಿ: ಡಾ. ಶಿವಶಂಕರ ಕಾಡದೇವರಮಠ

ಜ್ಞಾನ ವೃದ್ಧಿ, ವ್ಯಕ್ತಿತ್ವ ರೂಪಿಸಿಕೊಳ್ಳಲು ಓದುವ ಹವ್ಯಾಸ ಸಹಕಾರಿ

ಪುಸ್ತಕ ಓದುವ ಆಂದೋಲನವಾಗಿ ‘ಓದು ಕರ್ನಾಟಕʼ ಎಂಬ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಡಿಸೆಂಬರ್ 18ರಂದು ತುಮಕೂರಿನಲ್ಲಿ ಉದ್ಘಾಟನೆಯಾಗಲಿದೆ. ನಗರದ ಎಲ್ಲಾ 35 ವಾರ್ಡ್‌ಗಳಲ್ಲಿ 35 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ ಶಾಲೆ ಮಕ್ಕಳಲ್ಲಿ ಪುಸ್ತಕ ಓದುವ ಸಂಸ್ಕೃತಿ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ. ಶಿವಶಂಕರ ಕಾಡದೇವರಮಠ ತಿಳಿಸಿದ್ದಾರೆ.

CM Siddaramaiah Meets PM Modi: ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ರಾಯಚೂರಿನಲ್ಲಿ ಏಮ್ಸ್, ಕಬ್ಬು ದರ ಹೆಚ್ಚಳಕ್ಕೆ ಮನವಿ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; 5 ಅಂಶಗಳ ಮನವಿ

CM Siddaramaiah visit to Delhi: ಬಿಹಾರ ಚುನಾವಣೆ ಬಳಿಕ ದೆಹಲಿಗೆ ತೆರಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಸೋಮವಾರ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರನ್ನು ಭೇಟಿಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಹಲವು ಮಹತ್ವದ ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.

Karnataka Weather: ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು; ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

MB Patil: ಫ.ಗು.ಹಳಕಟ್ಟಿ ಆರಂಭಿಸಿದ್ದ 'ಶಿವಾನುಭವ' ಪತ್ರಿಕೆ ಸದ್ಯದಲ್ಲೇ ಪುನಾರಂಭ: ಎಂ‌.ಬಿ. ಪಾಟೀಲ್‌

'ಶಿವಾನುಭವ' ಪತ್ರಿಕೆ ಸದ್ಯದಲ್ಲೇ ಪುನಾರಂಭ: ಎಂ‌.ಬಿ. ಪಾಟೀಲ್‌

Ramanashree Award Ceremony: ಉತ್ತರ ಕರ್ನಾಟಕದ ಸಾಧಕರಾದ ಫ.ಗು.ಹಳಕಟ್ಟಿ, ಸರ್ ಸಿದ್ದಪ್ಪ ಕಂಬಳಿ, ಲಿಂಗರಾಜ ದೇಸಾಯಿ, ಬಂತನಾಳದ ಪೂಜ್ಯರು, ಶ್ರೀ ಸಿದ್ಧೇಶ್ವರ ಸ್ವಾಮೀಜಿ ಮುಂತಾದವರ ಬಗ್ಗೆ ಕೂಡ ನಮ್ಮಲ್ಲಿ ಪುಸ್ತಕಗಳು ಪ್ರಕಟವಾಗಬೇಕು. ಹಾಗೆಯೇ ಬೆಂಗಳೂರು ಭಾಗದ ಸರ್ ಪುಟ್ಟಣ್ಣ ಚೆಟ್ಟಿ ಅಂಥವರ ಬಗ್ಗೆಯೂ ತಿಳಿಯಬೇಕು. ಈ ಮೂಲಕ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎನ್ನುವ ಭೇದ ಅಳಿಯಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

Bengaluru Digital Arrest: ಬೆಂಗಳೂರಿನಲ್ಲಿ ಮತ್ತೊಂದು ಡಿಜಿಟಲ್‌ ಅರೆಸ್ಟ್‌; ಮಹಿಳಾ ಟೆಕ್ಕಿಗೆ ಬರೋಬ್ಬರಿ 31.83 ಕೋಟಿ ರೂ. ವಂಚನೆ!

ಡಿಜಿಟಲ್‌ ಅರೆಸ್ಟ್‌; ಮಹಿಳಾ ಟೆಕ್ಕಿಗೆ ಬರೋಬ್ಬರಿ 31.83 ಕೋಟಿ ರೂ. ವಂಚನೆ!

Cyber Crime in Bengaluru: ನಿಮಗೆ ಬಂದಿರುವ ಕೊರಿಯರ್‌ನಲ್ಲಿ ಮಾದಕ ವಸ್ತುಗಳು ಇವೆ ಎಂದು ಬೆದರಿಸಿ, ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬೆಂಗಳೂರಿನ ಮಹಿಳಾ ಟೆಕ್ಕಿಗೆ ವಂಚನೆ ಎಸಗಲಾಗಿದೆ. ಹಣ ಕಳೆದುಕೊಂಡ ಮಹಿಳೆ ನೀಡಿದ ದೂರಿನ ಅನ್ವರ ಬೆಂಗಳೂರಿನ ಸೈಬರ್ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Chitralahari Movie: ಕೆ.ಆರ್. ಸುರೇಶ್ ನಿರ್ದೇಶನದ ‘ಚಿತ್ರಲಹರಿ’ ಚಿತ್ರದ ಟೀಸರ್, ಸಾಂಗ್‌ ಬಿಡುಗಡೆ

‘ಚಿತ್ರಲಹರಿ’ ಚಿತ್ರದ ಟೀಸರ್, ಸಾಂಗ್‌ ರಿಲೀಸ್‌

Sandalwood News: ಕೆ.ಆರ್. ಸುರೇಶ್ ನಿರ್ದೇಶನದ ʼಚಿತ್ರಲಹರಿʼ ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿವೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಟೀಸರ್ ಅನ್ನು ಬಿಡುಗಡೆ ಮಾಡಿದರು. ಹಿರಿಯ ನಿರ್ದೇಶಕ ಪುರುಷೋತ್ತಮ್ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ಈ ಕುರಿತ ವಿವರ ಇಲ್ಲಿದೆ.

ಕರ್ನಾಟಕದಲ್ಲಿ 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ – 2023 ರಲ್ಲಿ ರಾಜ್ಯದಲ್ಲಿ 8,929 ಪ್ರಕರಣಗಳು ದಾಖಲು

2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ

ರಾಜ್ಯದ ಅಪರಾಧ ಪ್ರವೃತ್ತಿ ತೀವ್ರವಾಗಿ ಹೆಚ್ಚಳವಾಗಿದೆ ಎಂದು ಕಂಡುಬಂದಿದೆ; 2020 ಮತ್ತು 2023 ರ ನಡುವೆ ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣವು ಸುಮಾರು ಶೇ. 63 ರಷ್ಟು ಹೆಚ್ಚಾ ಗಿದೆ. 2020 ರಲ್ಲಿ ಸ್ವಲ್ಪ ಇಳಿಕೆಯಾದ ನಂತರ ಪ್ರಕರಣಗಳ ಸಂಖ್ಯೆ ಸ್ಥಿರವಾಗಿ ಏರಿಕೆಯಾಗಿದ್ದು, 2023 ರಲ್ಲಿ ಐದು ವರ್ಷಗಳ ಅವಧಿಯಲ್ಲಿ ಅತ್ಯಧಿಕ ಪ್ರಮಾಣವನ್ನು ತಲುಪಿದೆ.

Bengaluru Crime news: ಜನ್ಮದಿನವೇ ಕೇಕ್‌ ಆಸೆ ತೋರಿಸಿ ಬಾಲಕಿಯ ಮೇಲೆರಗಿದ ಪಾಪಿ; ಅತ್ಯಾಚಾರಿಯ ಬಂಧನ

ಜನ್ಮದಿನವೇ ಕೇಕ್‌ ಆಸೆ ತೋರಿಸಿ ಬಾಲಕಿಯ ಮೇಲೆರಗಿದ ಪಾಪಿ; ಅತ್ಯಾಚಾರಿಯ ಬಂಧನ

15 ವರ್ಷದ ಬಾಲಕಿಯನ್ನು ಜನ್ಮದಿನದ ಕೇಕ್‌ ಕತ್ತರಿಸುವುದಾಗಿ ಪುಸಲಾಯಿಸಿ ರಾಶಿ ಲೇಔಟ್‌ಗೆ ಕರೆದೊಯ್ದು ಅತ್ಯಾಚಾರ (Physical Abuse) ಎಸಗಿದ್ದಾನೆ. ಅತ್ಯಾಚಾರ ಎಸಗಿದ ಬಳಿಕ ಕಾಮುಕ ಎಸ್ಕೇಪ್ ಆಗಿದ್ದಾನೆ. 9ನೇ ತರಗತಿ ವಿದ್ಯಾರ್ಥಿನಿ ಹೆತ್ತವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಸಂಬಂಧ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಸ್ಪರ್ಶ್‌ ಯಶವಂತಪುರ ವೈದ್ಯರಿಂದ ಅಪರೂಪದ ಪೂರ್ವಭಾವಿ ಕಿಡ್ನಿ ಕಸಿ: 14 ವರ್ಷದ ಯೆಮೆನ್ ಬಾಲಕನಿಗೆ ಮರು ಜೀವ

ಅಪರೂಪದ ಪೂರ್ವಭಾವಿ ಕಿಡ್ನಿ ಕಸಿ

ಸ್ಪರ್ಶ್‌ ಆಸ್ಪತ್ರೆಗೆ ಬಾಲಕನನ್ನು ಚಿಕಿತ್ಸೆಗೆಂದು ಕರೆ ತಂದ ಸಂದರ್ಭದಲ್ಲಿ ಆತನ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರವಾಗಿತ್ತು. ವೈದ್ಯರಿಗೆ ಈತನಿಗೆ ಚಿಕಿತ್ಸೆ ನೀಡುವುದೇ ಬಹುದೊಡ್ಡ ಸವಾಲಾ ಗಿತ್ತು. ಮೂತ್ರ ಪಿಂಡ ಕಸಿ ಹೊರತಾಗಿ ಅನ್ಯ ಮಾರ್ಗಗಳಿರಲಿಲ್ಲ. ಇಂಗ್ಲಿಷ್‌ ಭಾಷೆಯನ್ನೂ ಅರಿಯದ ಈ ಯೆಮೆನಿ ಕುಟುಂಬಕ್ಕೆ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಡು ವುದೂ ಕೂಡಾ ಅತ್ಯಂತ ದೊಡ್ಡ ಸವಾಲಾಗಿತ್ತು

Fake Nandini Ghee: ನಂದಿನಿ ತುಪ್ಪದಲ್ಲಿ ಕಲಬೆರಕೆ: ದೊಡ್ಡ ಜಾಲ ಬಯಲು, ನಾಲ್ವರ ಬಂಧನ

ನಂದಿನಿ ತುಪ್ಪದಲ್ಲಿ ಕಲಬೆರಕೆ: ದೊಡ್ಡ ಜಾಲ ಬಯಲು, ನಾಲ್ವರ ಬಂಧನ

fake nandini products: ನಂದಿನಿ ತುಪ್ಪದಲ್ಲಿ ಕಳಪೆ ಸಾಮಗ್ರಿಗಳನ್ನು ಕಲಬೆರಕೆ ಮಾಡಿ ತಮಿಳುನಾಡಿಗೆ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಒಂದು ಲೀಟರ್ ಮೂಲ ತುಪ್ಪದಿಂದ ಮೂರು ಲೀಟರ್ ಕಲಬೆರಕೆ ತುಪ್ಪವನ್ನು ಉತ್ಪಾದಿಸುತ್ತಿದ್ದರು. ಬಂಧಿತ ವ್ಯಕ್ತಿಗಳನ್ನು ಕೆಎಂಎಫ್ ವಿತರಕ ಮಹೇಂದ್ರ, ಅವರ ಮಗ ದೀಪಕ್, ತಮಿಳುನಾಡಿನಿಂದ ಕಲಬೆರಕೆ ತುಪ್ಪ ಸಾಗಿಸುತ್ತಿದ್ದ ಮುನಿರಾಜು ಮತ್ತು ಚಾಲಕ ಅಭಿ ಅರಸು ಎಂದು ಗುರುತಿಸಲಾಗಿದೆ.

Koppala News: ಹಣ ಮರಳಿ ಕೊಡುತ್ತೇವೆಂದು ಕರೆಸಿಕೊಂಡು ಹೋಂ ಗಾರ್ಡ್‌ ಮೇಲೆ ನಾಲ್ವರಿಂದ ಅತ್ಯಾಚಾರ

ಹಣ ಮರಳಿ ಕೊಡುತ್ತೇವೆಂದು ಕರೆಸಿ ಹೋಂ ಗಾರ್ಡ್‌ ಮೇಲೆ ನಾಲ್ವರಿಂದ ಅತ್ಯಾಚಾರ

Koppala News: ಸಂತ್ರಸ್ತೆ ಪೊಲೀಸರಿಗೆ ನೀಡಿದ ಮಾಹಿತಿ ಪ್ರಕಾರ, ಆರೋಪಿ ಆಕೆಯನ್ನು ಬೈಕ್‌ನಲ್ಲಿ ಕರೆದೊಯ್ದು ಮದ್ಲೂರ ಗ್ರಾಮದ ಬಳಿ ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಇನ್ನು ಮೂವರು ಸೇರಿಕೊಂಡಿದ್ದಾರೆ. ಅವರು ಮಹಿಳೆಗೆ ಜ್ಯೂಸ್ ಎಂದು ಹೇಳಿ ಬಲವಂತವಾಗಿ ಮದ್ಯ ಕುಡಿಸಿದ್ದಾರೆ. ನಂತರ ನಾಲ್ವರು ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಕುಷ್ಟಗಿ ಮತ್ತು ಮದ್ಲೂರ ಸೀಮೆಯಲ್ಲಿ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Gold price today on 17th November 2025: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and Silver Rate: ಕಳೆದ ಕೆಲವು ದಿನಗಳಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡು ಬಂದಿದ್ದು, 11,455 ರೂ. ಗೆ ತಲುಪಿದೆ.

PM Kisan Yojana: ರೈತರಿಗೆ ಸಿಹಿ ಸುದ್ದಿ, ಇನ್ನೆರಡು ದಿನದಲ್ಲಿ ಪಿಎಂ ಕಿಸಾನ್‌ ಯೋಜನೆ ಹಣ ಬಿಡುಗಡೆ

ಸಿಹಿ ಸುದ್ದಿ, ಇನ್ನೆರಡು ದಿನದಲ್ಲಿ ಪಿಎಂ ಕಿಸಾನ್‌ ಯೋಜನೆ ಹಣ ಬಿಡುಗಡೆ

ಕೇಂದ್ರ ಸರ್ಕಾರದ ಈ ಮಹತ್ವದ ಯೋಜನೆಯನ್ನು ಫೆಬ್ರವರಿ 24, 2019 ರಂದು ಪ್ರಾರಂಭಿಸಲಾಯಿತು. ಈ ಯೋಜನೆಯ (PM Kisan Yojana) ಅಡಿಯಲ್ಲಿ ಇಲ್ಲಿಯವರೆಗೆ ದೇಶದ 11 ಕೋಟಿಗೂ ಅಧಿಕ ರೈತ ಕುಟುಂಬಗಳಿಗೆ 20 ಕಂತುಗಳಲ್ಲಿ ಒಟ್ಟು 3.70 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ.

Basavanagudi Kadalekai Parishe: ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಇಂದು ಚಾಲನೆ, ಐದು ದಿನಗಳ ಸಂಭ್ರಮ

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಇಂದು ಚಾಲನೆ, 5 ದಿನ ಸಂಭ್ರಮ

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ (Kadalekayi parishe) ಸೋಮವಾರ (ನ.17) ಆರಂಭವಾಗಲಿದೆ. ಆದರೆ ಈ ವಾರಾಂತ್ಯದ ಎರಡು ದಿನಗಳ ಹಿಂದಿನಿಂದಲೇ ಬಸವನಗುಡಿ ರಸ್ತೆ ಹಾಗೂ ಅದರ ಆಸುಪಾಸಿನ ಪ್ರದೇಶಗಳಲ್ಲಿ ಕಡಲೆಕಾಯಿ ಸ್ಟಾಲ್‌ಗಳು, ಅಂಗಡಿ ಮಳಿಗೆಗಳು ಜನಜಂಗುಳಿಯನ್ನು ಆಕರ್ಷಿಸುತ್ತಿವೆ. ಈ ಬಾರಿ ಐದು ದಿನಗಳಿಗೆ ಪರಿಷೆಯನ್ನು ವಿಸ್ತರಿಸಲಾಗಿದ್ದು, ಬಸವನಗುಡಿ (Basavanagudi) ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.

Sabarimala Temple: ಬಾಗಿಲು ತೆರೆದ ಶಬರಿಮಲೆ ಶ್ರೀ ಅಯ್ಯಪ್ಪ ಗರ್ಭಗುಡಿ, ಮಂಡಲ- ಮಕರವಿಳಕ್ಕು ಉತ್ಸವ ಆರಂಭ

ಶಬರಿಮಲೆ ಸನ್ನಿಧಾನದಲ್ಲಿ ಮಂಡಲ- ಮಕರವಿಳಕ್ಕು ಉತ್ಸವ ಆರಂಭ

ಪವಿತ್ರ ಶ್ರೀ ಶಬರಿಮಲೆ ದೇವಾಲಯದಲ್ಲಿ ಮಂಡಲ- ಮಕರವಿಳಕ್ಕು (Mandala- Makaravilakku) ಯಾತ್ರೆ ನಿನ್ನೆ ಅರಂಭವಾಗಿದೆ. ಈ ಋತುವಿಗಾಗಿ ತಿರುವಾಂಕೂರು ದೇವಸ್ವಂ ಮಂಡಳಿ ಮತ್ತು ಕೇರಳ ರಾಜ್ಯ ಸರ್ಕಾರವು ಸನ್ನಿಧಾನ, ಪಂಬಾದಾದ್ಯಂತ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದೆ. ಎರಡು ತಿಂಗಳ ಕಾಲ ನಡೆಯುವ ಈ ವಾರ್ಷಿಕ ತೀರ್ಥಯಾತ್ರೆ ಜನವರಿ 20, 2026 ರವರೆಗೆ ಮುಂದುವರಿಯುತ್ತದೆ. ಶಬರಿಮಲೆ ಅಯ್ಯಪ್ಪ ಸನ್ನಿಧಾನ ಪ್ರಪಂಚದಾದ್ಯಂತದ ಭಕ್ತರನ್ನು ಆಕರ್ಷಿಸುತ್ತಿದ್ದು, ಮೊದಲ ದಿನವೇ ಹೆಚ್ಚಿನ ಸಂಖ್ಯೆಯ ಭಕ್ತರು ಪವಿತ್ರ ಬೆಟ್ಟದ ದೇವಾಲಯಕ್ಕೆ ಆಗಮಿಸಿದ್ದರು.

Karnataka government: ಹಾವು , ನಾಯಿ ಕಚ್ಚಿದರೆ ಮೊದಲು ಚಿಕಿತ್ಸೆ ಕೊಡಿ, ನಂತರ ಶುಲ್ಕ ಕೇಳಿ: ಆಸ್ಪತ್ರೆಗಳಿಗೆ ಸರಕಾರ ಆದೇಶ

ಹಾವು, ನಾಯಿ ಕಡಿತಕ್ಕೆ ಮೊದಲು ಚಿಕಿತ್ಸೆ, ನಂತರ ಶುಲ್ಕ: ಸರಕಾರ ಆದೇಶ

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್‌ಗಳ ಕಡ್ಡಾಯ ಸಂಗ್ರಹ ಹೊಂದಿರಬೇಕು. ನಾಯಿ, ಹಾವು ಸೇರಿದಂತೆ ಇತರೆ ಪ್ರಾಣಿಗಳು ಕಚ್ಚಿದವರಿಗೆ (Snake bite) ಉಚಿತ ಪ್ರಾಥಮಿಕ ತಪಾಸಣೆ ಹಾಗೂ ಪ್ರಥಮ ಚಿಕಿತ್ಸೆ ಕಡ್ಡಾಯ ನೀಡಬೇಕು. ಯಾವುದೇ ಆಸ್ಪತ್ರೆ ಮುಂಗಡ ಹಣ ಕೇಳದೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಬೇಕು ಎಂಬುದಾಗಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Loading...