ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Actor Darshan: ಮಂಡ್ಯದಲ್ಲಿ ಸುಮಲತಾ ವಿರುದ್ಧ ದರ್ಶನ್‌ ಸ್ಪರ್ಧೆ: ಜ್ಯೋತಿಷಿ ಪ್ರಶಾಂತ್ ಕಿಣಿ ಸ್ಫೋಟಕ ಭವಿಷ್ಯ

ಮಂಡ್ಯದಲ್ಲಿ ಸುಮಲತಾ ವಿರುದ್ಧ ದರ್ಶನ್‌ ಸ್ಪರ್ಧೆ: ಜ್ಯೋತಿಷಿ ಸ್ಫೋಟಕ ಭವಿಷ್ಯ

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿಸೇರಿದ್ದಾಗ ಸ್ಫೋಟಕ ಭವಿಷ್ಯ ನುಡಿದಿದ್ದ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು, ಸದ್ಯ ದರ್ಶನ್‌ ರಾಜಕೀಯ ಜೀವನದ ಬಗ್ಗೆ ಮತ್ತೆ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ದರ್ಶನ್‌ ಜೈಲು ಸೇರಿದ್ದಾಗಲೂ ಇವರು ಜ್ಯೋತಿಷಿ ಭವಿಷ್ಯ ನುಡಿದು ಸುದ್ದಿಯಾಗಿದ್ದರು.

Bangalore News: ಅಂಗಾಂಗ ದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ

ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಲಿ

ಅಂಗಾಂಗ ದಾನ ಮಾನವೀಯತೆಯ ಪರಮೋಚ್ಛ ಕಾರ್ಯಗಳಲ್ಲಿ ಒಂದು. ನಾವೆಲ್ಲರೂ ಈ ಶ್ರೇಷ್ಟ ಕಾರ್ಯವನ್ನು ಬೆಂಬಲಿಸಬೇಕು” ಎಂದ ಅವರು ಜೀವ ರಕ್ಷಕ ಅಂಗಾಂಗ ಕಸಿಗೆ ಅನುವು ಮಾಡಿಕೊಡುವ ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಪಾತ್ರ ಹಾಗೂ ವೈದ್ಯರು, ದಾನಿಗಳ ತ್ಯಾಗವನ್ನು ಶ್ಲಾಘಿಸಿದರು. ಕಿಡ್ನಿ ಸಂಬಂಧಿ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸುವುದು

Chikkaballapur News: ಹೆರಿಗೆಯಾದ 9 ದಿನದ ನಂತರ ಸಾವು- ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ

ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದ ಬಾಣಂತಿ ಸಾವು

ಮಾ.4ರಂದು ಸಿಸೇರಿಯನ್ ಮೂಲಕ ವೈದ್ಯೆ ಡಾ.ರೇಣುಕಾ ಹೆರಿಗೆ ಮಾಡಿಸಿದ್ದರು. ಹೆರಿಯಾದ ಒಂದು ವಾರದ ಕಾಲ ಅನುಶ್ರೀ ಆರೋಗ್ಯವಾಗಿದ್ದಳು. ಇನ್ನೇನು ತಾಯಿ ಮಗುವನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಆದರೆ ಬುಧವಾರ ಅನುಶ್ರೀ ಆರೋಗ್ಯದಲ್ಲಿ ಏರುಪೇರಾಗಿದೆ, ವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಇಹಲೋಕ ತ್ಯಜಿಸಿ ದ್ದಾರೆ.

Greater Bengaluru: ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ಅಂಗೀಕಾರ

Greater Bengaluru: ಉಭಯ ಸದನಗಳಲ್ಲಿ ಅಂಗೀಕಾರ ರೂಪದಲ್ಲಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಸಣ್ಣ ತಿದ್ದುಪಡಿ ತರಲಾಗಿದೆ. ಇದನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಡಿಸಿದ್ದು, ಅಂಗೀಕಾರ ಪಡೆಯಲಾಗಿದೆ.

Koratagere Protest: ಕಲ್ಲುಗಣಿಗಾರಿಕೆ ವಿರುದ್ಧ ರೈತರ ಆಕ್ರೋಶ; ಕೊರಟಗೆರೆ ಮಿನಿ ವಿಧಾನಸೌಧಕ್ಕೆ ಮುತ್ತಿಗೆ

ಕೊರಟಗೆರೆಯಲ್ಲಿ ಕಲ್ಲುಗಣಿಗಾರಿಕೆ ವಿರುದ್ಧ ರೈತರ ಆಕ್ರೋಶ

Koratagere Protest: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಕಸಬಾ ಹೋಬಳಿ ವಡ್ಡಗೆರೆ ಗ್ರಾಪಂಯ ಚೀಲಗಾನಹಳ್ಳಿ ಗ್ರಾಮದ ಸಮೀಪ ಕಲ್ಲುಗಣಿಗಾರಿಕೆ ಮತ್ತು ಜಲ್ಲಿಕ್ರಷರ್ ನಡೆಸಲು ಮುಂದಾಗಿರುವುದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೊರಟಗೆರೆ ತಾಲೂಕು ಕಚೇರಿಗೆ ಮುತ್ತಿಗೆಹಾಕಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಅಹೋಬಲ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವಕ್ಕೆ ಖ್ಯಾತ ನಟ ಅರ್ಜುನ್ ಸರ್ಜಾ, ಧ್ರುವ ಸರ್ಜಾ ಚಾಲನೆ

ಅಹೋಬಲ ಲಕ್ಷ್ಮೀ ನರಸಿಂಹಸ್ವಾಮಿ ರಥೋತ್ಸವಕ್ಕೆ ಚಾಲನೆ

Ahobala Lakshmi Narasimhaswamy rathotsava: ಮಧುಗಿರಿ ತಾಲೂಕಿನ ಬಡವನಹಳ್ಳಿ ಹೋಬಳಿಯ ಜಕ್ಕೇನಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ರಥೋತ್ಸವಕ್ಕೆ ಬಹು ಭಾಷೆ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ಚಾಲನೆ ನೀಡಿದರು. ಬಳಿಕ ನರಸಿಂಹ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Assault Case: ಪಾವಗಡದಲ್ಲಿ ಕ್ಷುಲ್ಲಕ ವಿಚಾರಕ್ಕೆ ಬಸ್ ಕಂಡಕ್ಟರ್‌ ಮೇಲೆ ಪ್ರಯಾಣಿಕರ ಹಲ್ಲೆ!

ಕ್ಷುಲ್ಲಕ ವಿಚಾರಕ್ಕೆ ಬಸ್ ಕಂಡಕ್ಟರ್‌ ಮೇಲೆ ಪ್ರಯಾಣಿಕರ ಹಲ್ಲೆ!

Assault Case: ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ನಿರ್ವಾಹಕ ಹಾಗೂ ಪ್ರಯಾಣಿಕರ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

DK Shivakumar: ಗ್ಯಾರಂಟಿ ವಿರೋಧಿಸಿದ ಬಿಜೆಪಿಯವರೇ ಗ್ಯಾರಂಟಿ ನೀಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್

ಗ್ಯಾರಂಟಿ ವಿರೋಧಿಸಿದ ಬಿಜೆಪಿಯವರೇ ಗ್ಯಾರಂಟಿ ನೀಡುತ್ತಿದ್ದಾರೆ: ಡಿಕೆಶಿ

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತ ಅನುಷ್ಠಾನಕ್ಕೆ ಬಜೆಟ್‌ನಲ್ಲಿ ನಮ್ಮ ಸರ್ಕಾರ ಬದ್ದತೆ ತೋರಿಸಿದೆ. ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇನೆ. ಬಿಜೆಪಿಯ ಸದಸ್ಯರು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಯೋಜನೆಗೆ ಅಧಿಸೂಚನೆ ಹೊರಡಿಸಿದರೆ ಎಲ್ಲರೂ ಸೇರಿ ಯೋಜನೆ ಪೂರ್ಣಗೊಳಿಸಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ತುಂಗಭದ್ರಾ ಅಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸೂಕ್ತ ಕ್ರಮ: ಡಿ.ಕೆ.ಶಿವಕುಮಾರ್

ತುಂಗಭದ್ರಾ ಡ್ಯಾಂ ನೀರು ಸದ್ಬಳಕೆಗೆ ಸೂಕ್ತ ಕ್ರಮ: ಡಿಕೆಶಿ

DK Shivakumar: ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಕಾರಣಕ್ಕೆ ಸುಮಾರು 25 ರಿಂದ 30 ಟಿಎಂಸಿ ನೀರು ನಮಗೆ ಸಿಗದೆ ವ್ಯರ್ಥವಾಗುತ್ತಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಸುಮಾರು 15 ಸಾವಿರ ಎಕರೆ ಭೂಮಿ ಬೇಕಾಗಿದೆ. ಈ ಬಗ್ಗೆ ಈಗಾಗಲೇ ತಾಂತ್ರಿಕ ವರದಿಗಳನ್ನು ತಯಾರಿಸಲಾಗಿದೆ. ಈ ಬಗ್ಗೆ ಡಿಪಿಆರ್ ಕೂಡ ತಯಾರಾಗಿದೆ. ಇದನ್ನು ತುಂಗಭದ್ರಾ ಬೋರ್ಡ್ ಹಾಗೂ ಆಂಧ್ರ, ತೆಲಂಗಾಣ ರಾಜ್ಯಗಳಿಗೂ ಕಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Karnataka Weather: ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ತಾಪಮಾನದಲ್ಲಿ ಭಾರಿ ಹೆಚ್ಚಳ!

ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ತಾಪಮಾನದಲ್ಲಿ ಭಾರಿ ಹೆಚ್ಚಳ!

Karnataka Weather: ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕಲಬುರಗಿಯಲ್ಲಿ ಬುಧವಾರ ಅತೀ ಹೆಚ್ಚು ಉಷ್ಣಾಂಶ 39.1 ಡಿ.ಸೆ ದಾಖಲಾಗಿದೆ. ಅದೇ ರೀತಿ ವಿಜಯಪುರ ಮತ್ತು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅತೀ ಕಡಿಮೆ ಉಷ್ಣಾಂಶ 18.0 ಡಿ.ಸೆ. ದಾಖಲಾಗಿದೆ.

Bangalore Palace Land Bill: ಬೆಂಗಳೂರು ಅರಮನೆ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ; ಗೆಜೆಟ್‌ ಅಧಿಸೂಚನೆ ಪ್ರಕಟ

ಬೆಂಗಳೂರು ಅರಮನೆ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Bangalore Palace Land Bill: ಬೆಂಗಳೂರು ಅರಮನೆ ಮೈದಾನದ ಟಿಡಿಆರ್‌ಗಾಗಿ ನಿಗದಿಯಾಗಿರುವ ಮೌಲ್ಯ ದುಬಾರಿ ಎಂಬ ಕಾರಣಕ್ಕೆ ರಾಜ್ಯಸರ್ಕಾರ ಬೆಂಗಳೂರು ಅರಮನೆ ಭೂ ಬಳಕೆ ಮತ್ತು ನಿಯಂತ್ರಣ ವಿಧೇಯಕ 2025 ಅನ್ನು ಸದನದಲ್ಲಿ ಮಂಡಿಸಿ, ಅಂಗೀಕಾರ ಪಡೆದಿದೆ. ಈ ಕಾಯ್ದೆ ಪ್ರಕಾರ ಯಾವುದೇ ಮೂಲ ಸೌಕರ್ಯ ಯೋಜನೆಗೆ ಬೆಂಗಳೂರು ಅರಮನೆಯ ಭೂಮಿ ಬಳಸಲು ಸರ್ಕಾರ ಅಧಿಕಾರ ಹೊಂದಿರಲಿದೆ.

DK Shivakumar: ಬೆಂಗಳೂರು ನಾಗರಿಕರಿಗೆ ಗುಡ್‌ನ್ಯೂಸ್!‌ ಟ್ರಾಫಿಕ್‌ ಸಮಸ್ಯೆಗೆ ಬ್ರೇಕ್‌ ಹಾಕೋಕೆ ಸರ್ಕಾರ ಮಾಸ್ಟರ್‌ ಪ್ಲ್ಯಾನ್‌

ಟ್ರಾಫಿಕ್‌ ಸಮಸ್ಯೆಗೆ ಬ್ರೇಕ್‌ ಹಾಕೋಕೆ ಸರ್ಕಾರ ಮಾಸ್ಟರ್‌ ಪ್ಲ್ಯಾನ್‌

DK Shivakumar: ರಾಜ್ಯ ಸರ್ಕಾರವು ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Shivamogga News: ವಿಶ್ವ ಕಿಡ್ನಿ ದಿನ: ಎನ್‌ಯು ಆಸ್ಪತ್ರೆಗೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಎಂದು ಮರುನಾಮಕರಣ

ಎನ್‌ಯು ಆಸ್ಪತ್ರೆಗೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಎಂದು ಮರುನಾಮಕರಣ

Shivamogga News: ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಜಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಅಸೋಸಿಯೇಟ್ ಮೆಡಿಕಲ್ ಡೈರೆಕ್ಟರ್ ಅಂಡ್ ಟ್ರಾನ್ಸ್ ಪ್ಲಾಂಟ್ ಫಿಸಿಷಿಯನ್ ಡಾ. ಪ್ರವೀಣ್ ಮಾಳವದೆ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Narayana Narayana Movie: ರಿಲೀಸ್‌ಗೆ ರೆಡಿಯಾಗಿದೆ 'ನಾರಾಯಣ ನಾರಾಯಣ' ಸಿನಿಮಾ

ರಿಲೀಸ್‌ಗೆ ರೆಡಿಯಾಗಿದೆ 'ನಾರಾಯಣ ನಾರಾಯಣ' ಸಿನಿಮಾ

Narayana Narayana Movie: ಕಾಮಿಡಿ ನಟ, ಮಜಾ ಟಾಕಿಸ್ ಖ್ಯಾತಿಯ ಪವನ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ, ನಿರ್ದೇಶಕ ಶ್ರೀಕಾಂತ್ ನಿರ್ದೇಶನದ 'ನಾರಾಯಣ ನಾರಾಯಣ' ಸಿನಿಮಾದ ಎರಡು ಹಾಡುಗಳು ಮತ್ತು ಟ್ರೈಲರ್ ಅನ್ನು ರಿಲೀಸ್ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Golden star Ganesh: ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ಹೊಸ ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ನಾಯಕ

ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ಹೊಸ ಚಿತ್ರಕ್ಕೆ ಗಣೇಶ್ ಹೀರೋ

Golden star Ganesh: ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರದ ನಾಯಕರಾಗಿ, ತಮ್ಮ ಅಮೋಘ ನಟನೆಯಿಂದ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಟಿಸುತ್ತಿದ್ದಾರೆ. ತೆಲುಗಿನ ʼಹನುಮಾನ್ʼ ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Mobile phone theft: ಪೊಲೀಸ್‌ ಠಾಣೆಯಲ್ಲೇ ಮೊಬೈಲ್‌ ಎಗರಿಸಿದ ಐನಾತಿ ಕಳ್ಳ!

ಪೊಲೀಸ್‌ ಠಾಣೆಯಲ್ಲೇ ಮೊಬೈಲ್‌ ಎಗರಿಸಿದ ಐನಾತಿ ಕಳ್ಳ!

Mobile phone theft: ಗದಗ ಶಹರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಖದೀಮನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೋಟೆಲ್ ಒಂದರಲ್ಲಿ ನಡೆದಿದ್ದ ಗಲಾಟೆ ವಿಷಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ಹೋಗಿದ್ದಾಗ, ಕಳ್ಳ ಮಹಿಳಾ ಸಿಬ್ಬಂದಿ ಎದುರಲ್ಲೇ ಮೊಬೈಲ್‌ ಕದ್ದು ಪರಾರಿಯಾಗಿದ್ದಾನೆ.

Ranya Rao: ರನ್ಯಾ ರಾವ್‌ ಪ್ರಕರಣಕ್ಕೆ ಇಡಿ, ಸಿಬಿಐ ಎಂಟ್ರಿ; ಇಡಿ ದಾಳಿ, ಸಿಬಿಐ ಎಫ್‌ಐಆರ್

ರನ್ಯಾ ರಾವ್‌ ಪ್ರಕರಣಕ್ಕೆ ‌ಕೇಂದ್ರ ಎಂಟ್ರಿ; ಇಡಿ ದಾಳಿ, ಸಿಬಿಐ ಎಫ್‌ಐಆರ್

ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಹಿಂದೆ ರನ್ಯಾ ರಾವ್‌ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು. ನಂತರ ಸಿಐಡಿಗೆ ನೀಡಿದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿದೆ. ಈ ನಡುವೆ ಇಸಿಐಆರ್ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬೆಂಗಳೂರಿನ ಹಲವೆಡೆ ದಾಳಿ ನಡೆಸಿ, ತನಿಖೆ ಮಾಡುತ್ತಿದ್ದಾರೆ.

ಗಡಿಭಾಗದ ಅಮಾಯಕ ಮರಾಠಿಗರಿಗೆ, ಕನ್ನಡ ಭಾಷಿಕರಿಗೆ ಕಿರಿಕ್

ಮರಾಠಿಯಲ್ಲೇ ದಾಖಲೆಗಾಗಿ ಕ್ಯಾತೆ

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆ ಅತ್ಯಂತ ಸೂಕ್ಷ್ಮ ಪ್ರದೇಶ. ಭಾಷೆ ವಿಷಯದಲ್ಲಿ ಹೊತ್ತಿಕೊಳ್ಳುವ ಸಣ್ಣ ಕಿಡಿಯೂ ಇಲ್ಲಿ ಎರಡು ರಾಜ್ಯಗಳ ಸ್ವಾಸ್ಥ್ಯ ಹಾಳು ಮಾಡುತ್ತವೆ. ಅನೇಕ ಬಾರಿ ಎಂಇಎಸ್ ಹಾಗೂ ಶಿವಸೇನೆ ಮಾಡುವ ಅವಾಂತರ ಹಾಗೂ ಪುಂಡಾಟಕ್ಕೆ ಅಮಾಯಕ ಮರಾಠಿ ಹಾಗೂ ಕನ್ನಡ ಭಾಷಿಕರು ತೊಂದರೆಗೆ ಒಳಗಾಗುತ್ತಾರೆ. ಈ ಮಧ್ಯೆ ಅಧಿಕಾರಿಗಳ ದ್ವಂದ್ವ ನಿರ್ಧಾ ರಕ್ಕೆ ಮತ್ತೊಮ್ಮೆ ಬೆಳಗಾವಿ ಹೊತ್ತಿ ಉರಿಯುವಂತಾಗಿದೆ.

MLA Ravi Ganiga: ನಟಿ ರಶ್ಮಿಕಾ ಮಂದಣ್ಣಗೆ ಬೆದರಿಕೆ ಆರೋಪ; ಶಾಸಕ ರವಿ ಗಣಿಗ ವಿರುದ್ಧ ದೂರು

ನಟಿ ರಶ್ಮಿಕಾ ಮಂದಣ್ಣಗೆ ಬೆದರಿಕೆ ಆರೋಪ; ಶಾಸಕ ರವಿ ಗಣಿಗ ವಿರುದ್ಧ ದೂರು

MLA Ravi Ganiga: ರಶ್ಮಿಕಾ ಮಂದಣ್ಣಗೆ ಬೆದರಿಕೆ ಹಾಕಿದ್ದಾರೆ ಎಂದು ರವಿ ಗಣಿಗ ವಿರುದ್ಧ ಮಹಿಳಾ ಆಯೋಗಕ್ಕೆ ಕೊಡವ ಸಂಘಟನೆಯಿಂದ ಪತ್ರ ಬರೆಯಲಾಗಿದೆ. ರಶ್ಮಿಕಾ ಅವರನ್ನು ಬೆದರಿಸುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ. ಹಾಗಾಗಿ ಶಾಸಕನ ವಿರುದ್ಧ ಸುಮೊಟೊ ಕೇಸ್ ದಾಖಲಿಸಬೇಕು ಎಂದು ಮನವಿ ಮಾಡಲಾಗಿದೆ.

Actress Soundarya: ಸೌಂದರ್ಯ ಸಾವಿನ ಹಿಂದೆ ಕೊಲೆ ಸಂಚು? ಬಹಿರಂಗ ಪತ್ರ ಬರೆದ ನಟಿಯ ಪತಿ ರಘು

ಸೌಂದರ್ಯ ಸಾವಿನ ಹಿಂದೆ ಕೊಲೆ ಸಂಚು? ಬಹಿರಂಗ ಪತ್ರ ಬರೆದ ನಟಿಯ ಪತಿ ರಘು

ಸೌಂದರ್ಯ ಸಾವು ಆಕಸ್ಮಿಕ ಅಲ್ಲ, ಅದು ಹತ್ಯೆ. ಅದಕ್ಕೆ ನಟ ಮೋಹನ್ ಬಾಬು ಕಾರಣ ಎಂದು ಇತ್ತೀಚೆಗೆ ಖಮ್ಮಂ ಮೂಲದ ಚಿಟ್ಟಿಬಾಬು ಎಂಬವರು ದೂರು ನೀಡಿದ್ದಾರೆ. ಆಂಧ್ರದ ಶಂಶಾಬಾದ್ ಬಳಿಯ ಜಾಲಪಲ್ಲಿಯಲ್ಲಿ ಸೌಂದರ್ಯ ಒಡೆತನದ 6 ಎಕರೆ ಗೆಸ್ಟ್‌ಹೌಸ್ ಇತ್ತು. ಅದರ ಮೇಲೆ ನಟ ಮೋಹನ್ ಬಾಬು ಕಣ್ಣು ಹಾಕಿದ್ದರು. ಅದನ್ನು ನೀಡಲು ಸೌಂದರ್ಯ ಸಹೋದರ ಅಮರನಾಥ್ ಒಪ್ಪಲಿಲ್ಲ. ಹಾಗಾಗಿ ಸಂಚು ನಡೆಸಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.

CM Siddaramaiah: 40% ಕಮಿಷನ್‌ ಆರೋಪದ ಕುರಿತು ವಿಚಾರಣಾ ಆಯೋಗ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ

40% ಕಮಿಷನ್‌ ಆರೋಪದ ಕುರಿತು ವಿಚಾರಣಾ ಆಯೋಗ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ

ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇ.40ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘ ದೂರು ಸಲ್ಲಿಸಿತ್ತು. ಇದಲ್ಲದೆ, ಪ್ಯಾಕೇಜ್ ಪದ್ದತಿ ಕೈ ಬಿಡುವುದು, ಎಸ್‌.ಆರ್ ದರಪಟ್ಟಿ ನಿಗದಿ, ಸ್ಟಾರ್ ರೇಟ್‌ ಪದ್ದತಿ ಜಾರಿ, ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆಆರ್‌ಐಡಿಎಲ್‌ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿತ್ತು.

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌; ಚಿನ್ನದ ದರದಲ್ಲಿ ಇಂದು ಕೂಡ ಏರಿಕೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಗುರುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 55 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 60 ರೂ. ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,120 ರೂ. ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 8,858 ರೂ. ಆಗಿದೆ.

CM Siddaramaiah: ಮುಂದಿನ ವರ್ಷವೂ ನಾನೇ ಸಿಎಂ, ನಂತರ ಐದು ವರ್ಷವೂ ನಾನೇ: ಸಿದ್ದರಾಮಯ್ಯ

ಮುಂದಿನ ವರ್ಷವೂ ನಾನೇ ಸಿಎಂ, ನಂತರ ಐದು ವರ್ಷವೂ ನಾನೇ: ಸಿದ್ದರಾಮಯ್ಯ

ಮುಖ್ಯಮಂತ್ರಿ ಪದವಿಯಲ್ಲಿ ಬದಲಾವಣೆಯ ಕುರಿತು ಆಗೀಗ ಏಳುತ್ತಿರುವ ಊಹಾಪೋಹಗಳಿಗೆ ಸೂಕ್ತ ಉತ್ತರ ನೀಡುವ ಸದವಕಾಶಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬಳಸಿಕೊಳ್ಳುತ್ತಿದ್ದು, ನಿನ್ನೆ ಕೂಡ ಸದನದಲ್ಲಿ ವಿಪಕ್ಷ ನಾಯಕರ ಮಾತಿಗೆ ಉತ್ತರ ನೀಡುತ್ತ ಇದನ್ನು ಸ್ಪಷ್ಟಪಡಿಸಿದ್ದಾರೆ.

Road Accident: ಬೆಂಗಳೂರಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ, ನಾಲ್ವರಿಗೆ ಗಂಭೀರ ಗಾಯ

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ, ನಾಲ್ವರಿಗೆ ಗಂಭೀರ ಗಾಯ

ಅತಿ ವೇಗವಾಗಿ ಕಾರು ಚಾಲನೆ ಮಾಡಿ ನಿಯಂತ್ರಣ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅತಿ ವೇಗವಾಗಿ ಕಾರು ಚಾಲನೆ ಮಾಡಿ ನಿಯಂತ್ರಣ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.