ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Gubbi News: ಅಭಿನಂದನಾ ಸಮಾರಂಭಕ್ಕೆ ದಲಿತ ಪರ ಸಂಘಟನೆಗಳಿಗೆ ಆಹ್ವಾನ: ಗುಬ್ಬಿ ಬಸವರಾಜ್

ಅಭಿನಂದನಾ ಸಮಾರಂಭಕ್ಕೆ ದಲಿತ ಪರ ಸಂಘಟನೆಗಳಿಗೆ ಆಹ್ವಾನ

ಆದಿ ಜಾಂಬವ ಮಠ ದಿಂದ ಸಚಿವರು ಸಂಸದರು ಹಾಲಿ ಶಾಸಕರು ಮಾಜಿ ಶಾಸಕರು ನಿಗಮ ಮಂಡಳಿ ಅಧ್ಯಕ್ಷರುಗಳಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು. ಜೊತೆಗೆ ದಲಿತ ಜನಾಂಗದ ಏಳಿಗೆಗೆ ಶ್ರೀ ಮಠ ದಿಂದ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದು. ಬಾಗಲಕೋಟೆ ಜಿಲ್ಲೆ ಗುಡ್ಡದ್ದಳ್ಳಿ ತಾಲೂಕು ಹಾನಾಪುರ ಗ್ರಾಮದ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ ಮದ್ರಾಸ್) ಉನ್ನತ ಅಧ್ಯಯನಕ್ಕಾಗಿ ತೆರಳುತ್ತಿರುವ ಕರಿಯಪ್ಪ ಮಾದಾರ ಎಂಬ ವಿದ್ಯಾರ್ಥಿಗೆ ಸನ್ಮಾನಿಸಲಾಗುವುದು

ಬೆಂಗಳೂರಿನಲ್ಲಿ IAS ಅಧಿಕಾರಿ ನಿಗೂಢವಾಗಿ ನಾಪತ್ತೆ; ಫೋನ್‌ ಸ್ವಿಚ್‌ ಆಫ್‌, ತನಿಖೆ ಚುರುಕು

ಬೆಂಗಳೂರಿನಲ್ಲಿ IAS ಅಧಿಕಾರಿ ನಿಗೂಢವಾಗಿ ನಾಪತ್ತೆ

IAS Officer: ಐಎಎಸ್ ಅಧಿಕಾರಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಅಧಿಕಾರಿಯ ಮೊಬೈಲ್ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸ್ವಿಚ್‌ಆಫ್ ಆಗಿರುವುದು ತಿಳಿದು ಬಂದಿದೆ. ಸದ್ಯ ಈ ಕುರಿತು ತನಿಖೆ ನಡೆಯುತ್ತಿದೆ.

ಬೆಳಗಾವಿಯಲ್ಲಿ ಮಳೆ ಅಭಾವ: ಹೈರಾಣಾದ ರೈತ ಸಮುದಾಯ

ಬೆಳಗಾವಿಯಲ್ಲಿ ಮಳೆ ಅಭಾವ: ಹೈರಾಣಾದ ರೈತ ಸಮುದಾಯ

ಮಳೆ ಅಭಾವ ಹಾಗೂ ಹವಾಮಾನ ವೈಪರೀತ್ಯದ ಕಾರಣಕ್ಕಾಗಿ ಬೆಳಗಾವಿ ಜಿಲ್ಲೆಯಾದ್ಯಂತ ರೈತರು ಕಷ್ಟಪಟ್ಟು ಬೆಳೆದ ಬೆಳೆ ಹಾನಿಯಾಗಿದೆ. ಜಿಲ್ಲೆಯ 12 ತಾಲೂಕುಗಳಲ್ಲಿ ಮಳೆ ಅಭಾವ ಉಂಟಾದ ಪರಿಣಾಮವಾಗಿ ಅಂದಾಜು 65 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮಳೆ ಆಧಾರಿತ ಬೆಳೆಗಳು ನೆಲಕಚ್ಚುವ ಸಾಧ್ಯತೆ ಇದ್ದು, ರೈತರನ್ನು ಸಾಲದ ಸುಳಿಯಲ್ಲಿ ಸಿಲುಕುವಂತೆ ಮಾಡಿದೆ.

ಜೀವಾವಧಿ ಶಿಕ್ಷೆಗೆ ಗುರಿಯಾದ 29 ಕೈದಿಗಳ ಬಿಡುಗಡೆಗೆ ಕರ್ನಾಟಕ ಸಚಿವ ಸಂಪುಟ ತೀರ್ಮಾನ

ಜೀವಾವಧಿ ಶಿಕ್ಷೆಗೆ ಗುರಿಯಾದ 29 ಕೈದಿಗಳ ಬಿಡುಗಡೆ

ರಾಜ್ಯದ ಬೇರೆ ಬೇರೆ ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವವರ ಪೈಕಿ ಸನ್ನಡತೆ ಹೊಂದಿರುವ ಅರ್ಹ ಸಜಾಬಂಧಿಗಳ ಪೈಕಿ 29 ಮಂದಿಯ ಅವಧಿಪೂರ್ವ ಬಿಡುಗಡೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಟ್ಟು 45 ಪ್ರಕರಣಗಳ ಪೈಕಿ 28 ಜೀವಾವಧಿ ಶಿಕ್ಷಾ ಬಂಧಿಗಳ ಸನ್ನಡತೆ ಆಧಾರದಡಿ ಅವಧಿಪೂರ್ವ ಬಿಡುಗಡೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ.

ಡ್ರಗ್ ಕಂಟ್ರೋಲ್ ಇಲಾಖೆಯಿಂದ 5 ತನಿಖಾ ತಂಡ ರಚನೆ: ನಕಲಿ ಔಷಧಿ ಜಾಲಕ್ಕೆ ಪಂಚರಾಜ್ಯ ನಂಟು

ನಕಲಿ ಔಷಧಿ ಜಾಲಕ್ಕೆ ಪಂಚರಾಜ್ಯ ನಂಟು

ಪ್ರಕರಣದ ಜಾಲವು ಕರ್ನಾಟಕದ ಹೊರತಾಗಿ ಐದು ರಾಜ್ಯಗಳಿಗೆ ಸಂಪರ್ಕ ಹೊಂದಿರುವ ಸಾಧ್ಯತೆ ಕಂಡುಬಂದಿದ್ದು, ತನಿಖೆ ಮತ್ತಷ್ಟು ವಿಸ್ತರಿಸಲಾಗಿದೆ. ಹಿಮಾಚಲ ಪ್ರದೇಶ, ತೆಲಂಗಾಣ, ದೆಹಲಿ, ಚೆನೈ ಹಾಗೂ ಆಂಧ್ರಪ್ರದೇಶಕ್ಕೆ ಸಂಬಂಧಿಸಿದ ಔಷಧಿ ಕಂಪನಿಗಳು ಮತ್ತು ವಿತರಣೆ ವ್ಯವಸ್ಥೆಯ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ರಾಜ್ಯಗಳಲ್ಲಿರುವ ಸಂಸ್ಥೆಗಳ ಪಾತ್ರವೇನು ಎಂಬು ದನ್ನು ಪರಿಶೀಲಿಸಲಾಗುತ್ತಿದೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು : ಸದನ ʼಕದನʼ

ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು : ಸದನ ʼಕದನʼ

ವಿಪಕ್ಷಗಳ ಹೋರಾಟದ ಮಧ್ಯೆ ಸಚಿವ ನಾಗೇಂದ್ರಗೆ ಮತ್ತೊಂದು ಇಲಾಖೆ ಜವಾಬ್ದಾರಿ ನೀಡಲಾಗಿದೆ. ಶುಕ್ರವಾರ ನಿಗದಿ ಸಮಯಕ್ಕಿಂತ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ತಡವಾಗಿ ಆರಂಭ ವಾದ ಸದನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತಮ್ಮ ತಮ್ಮ ಸ್ಥಾನಗಳಲ್ಲಿ ಎದ್ದು ನಿಂತು ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ದರು. ‘ನಾಗೇಂದ್ರ ಅವರು ರಾಜೀನಾಮೆ ನೀಡಲೇಬೇಕು’ ಎಂದು ಘೊಷಣೆ ಕೂಗಿದರು.

Accident: ಹಬ್ಬದ ಸಾಮಗ್ರಿ ಖರೀದಿಸಲು ಬಂದಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಇಬ್ಬರ ಸಾವು

ಮಹಾಲಕ್ಷ್ಮಿ ಹಬ್ಬದ ದಿನವೇ ತಾಯಿ–ಮಗನ ದಾರುಣ ಅಂತ್ಯ

ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಮೂಲದ ನಾಗಮಣಿ (35) ಹಾಗೂ ಅವರ ಪುತ್ರ ಗಗನ್ (14) ಮೃತರು. ಹಬ್ಬದ ಹಿನ್ನೆಲೆಯಲ್ಲಿ ಮನೆಯಲ್ಲಿ ಪೂಜೆ ಹಾಗೂ ಆಚರಣೆಗೆ ಅಗತ್ಯವಾದ ಸಾಮಗ್ರಿಗಳನ್ನು ಖರೀದಿಸಲು ನಗರಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಂಬೇಡ್ಕರ್ ವೃತ್ತದ ಬಳಿ ತಾಯಿ–ಮಗ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅವರ ಮೇಲೆ ಹರಿದಿದೆ. ಘಟನೆಯಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ ಎನ್ನಲಾಗಿದೆ

ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ ತರಲು ಹೊರಟ ವ್ಯಕ್ತಿ ಹೆಂಡತಿಯ ಕಣ್ಣೆದುರೇ ದುರಂತ ಅಂತ್ಯ

ಟಿಪ್ಪರ್ ಲಾರಿಗಳ ಅಟ್ಟಹಾಸಕ್ಕೆ ಮತ್ತೊಂದು ಬಲಿ

ವೆಂಕಟೇಶ್ (58) ಮೃತ ದುರ್ದೈವಿ. ಪೆರೇಸಂದ್ರದಿಂದ ಚಿಕ್ಕಬಳ್ಳಾಪುರದ ಕಡೆಗೆ ಪತ್ನಿಯೊಂದಿಗೆ ಎಪೆ ಆಟೋದಲ್ಲಿ ಬರುತ್ತಿದ್ದ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತ ದ ತೀವ್ರತೆಗೆ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದು, ಪತ್ನಿಯ ಕಣ್ಣೆದುರೇ ನೋವಿನಿಂದ ನರಳಾಡುತ್ತಿದ್ದರು ಎನ್ನಲಾಗಿದೆ.

Ambedkar Bhavan inauguration: ಆ.22ಕ್ಕೆ ಉದ್ಘಾಟನೆ, ಅತ್ಯಾಧುನಿಕ ಅಂಬೇಡ್ಕರ್ ಭವನ ಲೋಕಾರ್ಪಣೆ, ರಾಜ್ಯದಲ್ಲೇ ಪ್ರಥಮ ಪೇಪರ್‌ಲೆಸ್ ಸಭಾಂಗಣ ಎಂಬ ಹೆಗ್ಗಳಿಕೆ

ರಾಜ್ಯದಲ್ಲೇ ಪ್ರಥಮ ಪೇಪರ್‌ಲೆಸ್ ಸಭಾಂಗಣ ಎಂಬ ಹೆಗ್ಗಳಿಕೆ

ನಗರದ ಹೃದಯಭಾಗದಲ್ಲಿ ಸುಮಾರು 20 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ಹಾಗೂ ವಿನೂತನ ಮಾದರಿ ಯ ಡಾ. ಬಿ.ಆರ್. ಅಂಬೇಡ್ಕರ್ ಭವನ ಆ.22ರಂದು ಲೋಕಾರ್ಪಣೆಗೊಳ್ಳಲಿದ್ದು, ಸಂವಿಧಾನ ಶಿಲ್ಪಿಯ ವಿಚಾರಧಾರೆ, ಶಿಕ್ಷಣ ಹಾಗೂ ವೈಚಾರಿಕ ಚಿಂತನೆಗಳನ್ನು ಜನರಿಗೆ ತಲುಪಿಸುವ ಪ್ರಮುಖ ಕೇಂದ್ರವಾಗಿ ರೂಪುಗೊಂಡಿದೆ.

Yadgir News: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಬಾಲಕಿಗೆ ಲೈಂಗಿಕ ಕಿರುಕುಳ; ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಕೇಸ್‌

ಯಾದಗಿರಿ ಜಿಲ್ಲೆಯ ಸಕ್ರ್ಯ ನಾಯಕ ತಾಂಡಾ ನಿವಾಸಿ ಹಾಗೂ ಭಾಗ್ಯವಂತಿ ಮಠದ ಪೂಜಾರಿ ಅಣ್ಣಪ್ಪ ರೈಟರ್ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Chikkaballapur News: ಆಯುಷ್ ಆಸ್ಪತ್ರೆ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ

ಆಯುಷ್ ಆಸ್ಪತ್ರೆ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ

ಚಿಕ್ಕಬಳ್ಳಾಪುರ ತಾಲ್ಲೂಕಿನ ವರಮಲ್ಲೇನಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಯುಷ್ ಆಸ್ಪತ್ರೆ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮುಂದಿನ ಮೂರು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಕಟ್ಟಡವನ್ನು ಸಾರ್ವಜನಿಕರ ಸೇವೆಗೆ ಸಿದ್ಧಪಡಿಸಬೇಕು ಎಂದು ಅಧಿಕಾರಿ ಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ; ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸತತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ

ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

Shidlaghatta News: ಜನರ ಪ್ರೀತಿ, ವಿಶ್ವಾಸವೇ ಪುಟ್ಟು ಅಂಜಿನಪ್ಪ ಅವರ ಬಲ

ಜನರ ಪ್ರೀತಿ, ವಿಶ್ವಾಸವೇ ಪುಟ್ಟು ಅಂಜಿನಪ್ಪ ಅವರ ಬಲ

ಗೌಡನಹಳ್ಳಿ ಮಂಜುನಾಥ್ ಮಾತನಾಡಿ, ಪುಟ್ಟು ಅಂಜಿನಪ್ಪ ಅವರ ನಾಯಕತ್ವದ ಗುಣ ಹಾಗೂ ಜನರೊಂದಿಗೆ ಬೆರೆಯುವ ರೀತಿ ಉತ್ತಮ ಜನಪ್ರತಿನಿಧಿಯಾಗುವ ಭರವಸೆ ಮೂಡಿಸಿದೆ. 2028ರ ವಿಧಾನ ಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದದೊಂದಿಗೆ ಶಾಸಕರಾಗಿ ಆಯ್ಕೆಯಾಗುವ ವಿಶ್ವಾಸವಿದೆ

Shidlaghatta News: ಎಫ್‌ಎಸ್‌ಟಿಪಿ ಘಟಕದ ಬಾಕಿ ಕಾಮಗಾರಿ ಮೂರು ವಾರದಲ್ಲಿ ಪೂರ್ಣಗೊಳಿಸಲು ಸೂಚನೆ

ಘಟಕದ ಬಾಕಿ ಕಾಮಗಾರಿ ಮೂರು ವಾರದಲ್ಲಿ ಪೂರ್ಣಗೊಳಿಸಲು ಸೂಚನೆ

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ಭಾರತ್ ಮಿಷನ್‌ (ಗ್ರಾಮೀಣ) ಯೋಜನೆಯಡಿ ನಿರ್ಮಿಸಲಾಗಿರುವ ಎಫ್‌ಎಸ್‌ಟಿಪಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಘಟಕದ ಕಾರ್ಯನಿರ್ವಹಣೆ ಹಾಗೂ ಪ್ರಸ್ತುತ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

Gudibande News: ಗುಡಿಬಂಡೆಯಲ್ಲಿ ಪಿಯು ಕಾಲೇಜುಗಳ ಕ್ರೀಡಾಸ್ಪರ್ಧೆಗೆ ಚಾಲನೆ

ಗುಡಿಬಂಡೆಯಲ್ಲಿ ಪಿಯು ಕಾಲೇಜುಗಳ ಕ್ರೀಡಾಸ್ಪರ್ಧೆಗೆ ಚಾಲನೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಎ.ರವೀಂದ್ರ, ವಿದ್ಯಾರ್ಥಿ ಗಳು ಶಿಕ್ಷಣದಷ್ಟೇ ಕ್ರೀಡೆಗೂ ಮಹತ್ವ ನೀಡಬೇಕು. ಕ್ರೀಡೆಯಿಂದ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿ ಕೊಂಡು ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು

Chikkaballapur News: ಪಾಲಿಹೌಸ್‌ಗಳಿಗೆ ಭೇಟಿ ನೀಡಿ ಕೃಷಿ ಯೋಜನೆಗಳ ಪ್ರಗತಿ ಪರಿಶೀಲನೆ

ಪಾಲಿಹೌಸ್‌ಗಳಿಗೆ ಭೇಟಿ ನೀಡಿ ಕೃಷಿ ಯೋಜನೆಗಳ ಪ್ರಗತಿ ಪರಿಶೀಲನೆ

ಗ್ರಾಮಗಳಲ್ಲಿ ನಿರ್ಮಿಸಲಾಗಿರುವ ಪಾಲಿಹೌಸ್‌ಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಬೆಳೆಗಳ ಸ್ಥಿತಿಗತಿ, ಕೃಷಿ ಚಟುವಟಿಕೆಗಳ ಪ್ರಗತಿ ಹಾಗೂ ಯೋಜನೆಗಳಿಂದ ರೈತರಿಗೆ ದೊರೆಯುತ್ತಿರುವ ಪ್ರಯೋಜನಗಳ ಕುರಿತು ಪರಿಶೀಲನೆ ನಡೆಸಿದರು. ಪಾಲಿಹೌಸ್ ಕೃಷಿ ಪದ್ಧತಿ, ಬೆಳೆ ನಿರ್ವಹಣೆ ಹಾಗೂ ಉತ್ಪಾದನೆ ಕುರಿತು ರೈತರಿಂದ ಮಾಹಿತಿ ಪಡೆದುಕೊಂಡರು.

Chikkaballapur News: ಕೃಷಿ ಉತ್ಪಾದಕತೆ ಹೆಚ್ಚಿಸಲು ಧನ-ಧಾನ್ಯ ಯೋಜನೆ ಪರಿಣಾಮಕಾರಿ ಅನುಷ್ಠಾನ ಅಗತ್ಯ

ಕೃಷಿ ಉತ್ಪಾದಕತೆ ಹೆಚ್ಚಿಸಲು ಧನ-ಧಾನ್ಯ ಯೋಜನೆ ಅನುಷ್ಠಾನ ಅಗತ್ಯ

ಚಿಕ್ಕಬಳ್ಳಾಪುರದಲ್ಲಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ಹಿಂದುಳಿದಿರುವ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಕೃಷಿ ಉತ್ಪಾದಕತೆ ಹೆಚ್ಚಿಸುವುದರ ಜೊತೆಗೆ ನೀರಾವರಿ ಸೌಲಭ್ಯ, ನೀರಿನ ಸಂಗ್ರಹಣೆ, ಬೆಳೆ ವೈವಿಧ್ಯೀಕರಣ ಹಾಗೂ ರೈತರಿಗೆ ಕೃಷಿ ಸಾಲದ ಲಭ್ಯತೆ ಯನ್ನು ಸುಧಾರಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ

Chinthamani News: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಿ: ಯು.ನಿಸಾರ್ ಅಹಮದ್

ಕೈವಾರ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜು ವೀಕ್ಷಣೆ

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ನೋಡಿ ಕೊಳ್ಳುವುದರ ಜೊತೆಗೆ, ದ್ವಿತೀಯ ಪಿಯುಸಿ ನಂತರ ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳ ಕುರಿತು ಸೂಕ್ತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ನೀಡಬೇಕು ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರಿಗೆ ಸೂಚಿಸಿದರು

Cabinet Meeting: ಕಾರಾಗೃಹ ಇಲಾಖೆಯ ಆಧುನೀಕರಣಕ್ಕೆ ಮತ್ತಷ್ಟು ವೇಗ; ಅತ್ಯಾಧುನಿಕ ಉಪಕರಣಗಳ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ

ಕಾರಾಗೃಹ ಇಲಾಖೆಗೆ ಅತ್ಯಾಧುನಿಕ ಉಪಕರಣಗಳ ಖರೀದಿ; ಸಂಪುಟ ಒಪ್ಪಿಗೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆದಿದೆ. ಈ ವೇಳೆ ಕಾರಾಗೃಹ ಇಲಾಖೆಯಲ್ಲಿ AI ಕ್ಯಾಮೆರಾ, ಪೋರ್ಟಬಲ್‌ ಜಾಮರ್‌ ಸೇರಿದಂತೆ ಅತ್ಯಾಧುನಿಕ ಉಪಕರಣಗಳ ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ರಾಘವೇಶ್ವರ ಭಾರತೀ ಶ್ರೀ

ಅನ್ನವನ್ನು ದೇವಸ್ವರೂಪವೆಂದು ಭಾವಿಸಿ ಗೌರವಿಸಬೇಕು: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಜೀವನದಲ್ಲಿ ಆರೋಗ್ಯ, ಶಾಂತಿ ಮತ್ತು ಆಧ್ಯಾತ್ಮಿಕ ಬೆಳವಣಿಗೆ ಬೇಕಾದರೆ ಆಹಾರದ ಬಗ್ಗೆ ಜವಾಬ್ದಾರಿ ಇರಬೇಕು, ಜಠರಾಗ್ನಿಯನ್ನು ಕಾಪಾಡಬೇಕು ಮತ್ತು ಅನ್ನವನ್ನು ದೇವಸ್ವರೂಪವೆಂದು ಭಾವಿಸಿ ಗೌರವಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದ್ದಾರೆ.

Bengaluru Power Cut: ಗಮನಿಸಿ; ಆಗಸ್ಟ್‌ 23ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಆಗಸ್ಟ್‌ 23ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Bengaluru Power Cut: ಆರ್.ಎಂ.ವಿ. ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದ ಹಲವೆಡೆ ಆ.23ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

A-Khata: ಅನಧಿಕೃತ ಬಡಾವಣೆಗಳ ನಿವೇಶನ, ಮನೆಗಳಿಗೆ 'ಎ-ಖಾತಾ' ಭಾಗ್ಯ; ಮಹತ್ವದ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಅನಧಿಕೃತ ನಿವೇಶನ, ಮನೆಗಳಿಗೆ 'ಎ-ಖಾತಾ; ಮಸೂದೆಗೆ ವಿಧಾನಸಭೆ ಅಂಗೀಕಾರ

Karnataka Municipalities (Amendment) Bill-2026: ಬಿ-ಖಾತಾದಿಂದಾಗಿ ಸಂಕಷ್ಟದಲ್ಲಿದ್ದ ಲಕ್ಷಾಂತರ ಕುಟುಂಬಗಳ ಅನುಕೂಲಕಕ್ಕಾಗಿ ರಾಜ್ಯ ಸರ್ಕಾರದ ಹೊಸ ಕಾಯ್ದೆಗೆ ಅಂಗೀಕಾರ ಸಿಕ್ಕಿದೆ. ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ ಸಂಪೂರ್ಣ ಮಾಲೀಕತ್ವದ ಹಕ್ಕು ಕಲ್ಪಿಸಿ, ಪಕ್ಕಾ ‘ಎ-ಖಾತಾ’ ನೀಡುವ ಮಹತ್ವದ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

S N Subbareddy: ಶೀಘ್ರದಲ್ಲೇ ಎಲ್ಲಾ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ: ಶಾಸಕ ಸುಬ್ಬಾರೆಡ್ಡಿ

ಶೀಘ್ರದಲ್ಲೇ ಎಲ್ಲಾ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ

ಈಗಾಗಲೇ ನಿವೇಶನ ರಹಿತರ ಪಟ್ಟಿಯನ್ನೂ ಸಿದ್ಧಪಡಿಸಲಾಗಿದ್ದು, ಆದಷ್ಟು ಶೀಘ್ರವಾಗಿ ನಿವೇಶನ ಗಳ ಹಕ್ಕುಪತ್ರಗಳನ್ನು ವಿತರಿಸಲಾಗುವುದು. ಗುಡಿಬಂಡೆ ಮುಖ್ಯ ರಸ್ತೆಯಲ್ಲಿ ನಿವೇಶನ ಕಳೆದು ಕೊಂಡವರಿಗೆ ನಿವೇಶನ ನೀಡಲು ಜಮೀನು ಗುರುತಿಸಲಾಗಿದ್ದು, ನಿವೇಶನ ನೀಡಲು ಸಿದ್ಧತೆ ನಡೆಯುತ್ತಿದೆ. ಮುಂದಿನ ಮೂರು ತಿಂಗಳ ಒಳಗೆ ಎಲ್ಲರಿಗೂ ನಿವೇಶನ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ

Varamahalakshmi Festival: ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನಕ್ಕೆ ಹರಿದುಬಂದ ಭಕ್ತಸಾಗರ

ಗೊರವನಹಳ್ಳಿ ಮಹಾಲಕ್ಷ್ಮಿಯ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

Goravanahalli Mahalakshmi Temple: ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನೂತನ ತೇರು ಈ ಬಾರಿಯ ಹಬ್ಬದ ಪ್ರಮುಖ ಆಕರ್ಷಣೆಯಾಗಿತ್ತು. ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ನೂತನ ತೇರು ನಿರ್ಮಿಸಲಾಗಿದೆ. ತೇರಿನಲ್ಲಿ ಸುಮಾರು 23 ಕೆ.ಜಿ. ತೂಕದ ಬೆಳ್ಳಿಯ ಮಹಾಲಕ್ಷ್ಮಿ ತಾಯಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ವೈಭವದ ಮೆರವಣಿಗೆ ನಡೆಸಲಾಯಿತು.

Loading...