ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chinthamani News: ಜು.11ರಂದು ಬೆಂಗಳೂರಿಗೆ ಚಿಂತಾಮಣಿಯಿಂದ ಬಸ್ ವ್ಯವಸ್ಥೆ; ಸರ್ಕಾರಿ ನೌಕರರಿಗೆ ಆರ್. ಅಶೋಕ್ ಕುಮಾರ್ ಕರೆ

'ನಮ್ಮ ಅಭಿಮಾನದ ಅಭಿನಂದನೆ' ಕಾರ್ಯಕ್ರಮ ಯಶಸ್ವಿಗೊಳಿಸಿ

ಜು.11ರಂದು ಬೆಳಗ್ಗೆ 7 ಗಂಟೆಗೆ ಚಿಂತಾಮಣಿ ನಗರದ ಸರ್ಕಾರಿ ಭವನದ ಮುಂಭಾಗದಿಂದ ಬೆಂಗಳೂರಿಗೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕಿನ ಎಲ್ಲಾ ಸರ್ಕಾರಿ ನೌಕರರು, ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಈ ಸೌಲಭ್ಯವನ್ನು ಬಳಸಿ ಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗುಡಿಬಂಡೆಯಲ್ಲಿ ವಿಶೇಷ ಮೊಹರಂ ಆಚರಣೆ: ಭಾವೈಕ್ಯದ ಸಂದೇಶ ಸಾರಿದ ಮೆರವಣಿಗೆ

ಗುಡಿಬಂಡೆಯಲ್ಲಿ ವಿಶೇಷ ಮೊಹರಂ ಆಚರಣೆ

ಮೆರವಣಿಗೆಗೆ ಮುನ್ನ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಮೌಲಾನಾಗಳು ಹಸನ್-ಹುಸೇನ್ ಅವರ ತ್ಯಾಗ, ಮಹತ್ವ ಹಾಗೂ ಮೊಹರಂ ಆಚರಣೆಯ ಧಾರ್ಮಿಕ ಹಿನ್ನೆಲೆಯ ಕುರಿತು ಉಪನ್ಯಾಸ ನೀಡಿದರು. ಬಳಿಕ ಜಾಮಿಯಾ ಮಸೀದಿ ಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.

ರಾಜ್ಯದಲ್ಲಿ ಮತ್ತೊಂದು ಲವ್‌ ಜಿಹಾದ್‌? ಹಿಂದೂ ಯುವತಿಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ ನವಾಜ್‌

ಹಿಂದೂ ಯುವತಿಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ನವಾಜ್‌

Love Jihad: ಬೆಂಗಳೂರಿನಲ್ಲಿ ಲವ್‌ ಜಿಹಾದ್‌ ಹೋಲುವ ಪ್ರಕರಣವೊಂದು ನಡೆದಿದೆ. ಬೆಂಗಳೂರಿನ ವರ್ತೂರು ಮುಖ್ಯ ರಸ್ತೆ ಬಳಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

SIR: ಎಸ್‌ಐಆರ್ ಚುನಾವಣಾ ಆಯೋಗದ ನಿಯಮಿತ ಪ್ರಕ್ರಿಯೆ; ಸಹಕಾರ ನೀಡಬೇಕು: ದತ್ತಾತ್ರಿ

ಇದು ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಸಂಚು ಅಲ್ಲ

ಮತದಾರರ ಪಟ್ಟಿಯನ್ನು ಶುದ್ಧೀ ಕರಿಸಿ, ಅನರ್ಹ ಹಾಗೂ ನಕಲಿ ಮತದಾರರ ಹೆಸರನ್ನು ತೆಗೆದುಹಾಕಿ ಅರ್ಹ ಮತದಾರರ ಹೆಸರನ್ನು ಖಚಿತಪಡಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಕಾಲಕಾಲಕ್ಕೆ ಈ ಪ್ರಕ್ರಿಯೆಯನ್ನು ಕೈಗೊಳ್ಳುತ್ತದೆ. ಜನರು ಯಾವುದೇ ಗೊಂದಲಕ್ಕೆ ಒಳಗಾಗದೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಚುನಾವಣಾ ಆಯೋಗಕ್ಕೆ ಸಂಪೂರ್ಣ ಸಹಕಾರ ನೀಡಬೇಕು

Protest: ಮಾರುಕಟ್ಟೆಯಲ್ಲಿ ಗಲಾಟೆ: ಹಮಾಲಿ ಕಾರ್ಮಿಕರ ಮೇಲೆ ಟೊಮೆಟೊ ಲಾರಿ ಡ್ರೈವರ್ ದೌರ್ಜನ್ಯ, ವ್ಯಾಪಾರಿಗಳ ಆಕ್ರೋಶ.

ಹಮಾಲಿ ಕಾರ್ಮಿಕರ ಮೇಲೆ ಟೊಮೆಟೊ ಲಾರಿ ಡ್ರೈವರ್ ದೌರ್ಜನ್ಯ

ಗೇಟ್ ನಂ 1 ಮತ್ತು 2 ರಲ್ಲಿ ಅಕ್ಕಿ ಮತ್ತಿತರ ಧವಸಧಾನ್ಯಗಳು ವ್ಯಾಪಾರಿಗಳೇ ಹೆಚ್ಚಾಗಿದ್ದಾರೆ.ಅಕ್ಕಿ ತರುವ ಲಾರಿಗಳು 2-3 ದಿನ ರಸ್ತೆಯಲ್ಲೇ ನಿಲ್ಲಬೇಕಾಗಿರುವುದು ಸಮಸ್ಯೆ ಆಗಿದೆ. ರಸ್ತೆಯಲ್ಲೇ ವಾಹನಗಳು ನಿಂತಿರುತ್ತವೆ,ಬಾಕ್ಸ್ ಗಳನ್ನು ರಸ್ತೆಯಲ್ಲೇ ಇಟ್ಟುಕೊಂಡಿರುತ್ತಾರೆ.ಕೇಳಿದರೆ ಗಲಾಟೆ ಮಾಡಲು ಬರುತ್ತಾರೆ. ಎಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಎಂ ಜಿ ರಮೇಶಬಾಬು ದೂರಿದರು.

ಫೈಜರ್‌ನ ‘ಪ್ರಾಜೆಕ್ಟ್ ಆಸ್ಥಾ’ ಮೂಲಕ 10 ಲಕ್ಷಕ್ಕೂ ಅಧಿಕ ರೋಗಿಗಳಿಗೆ ಬೆಂಬಲ

ಫೈಜರ್‌ನ ‘ಪ್ರಾಜೆಕ್ಟ್ ಆಸ್ಥಾ’ ಮೂಲಕ 10 ಲಕ್ಷಕ್ಕೂ ಅಧಿಕ ರೋಗಿಗಳಿಗೆ ಬೆಂಬಲ

ಈ ಉಪಕ್ರಮವು ರೋಗಿಗಳಿಗೆ ಆರೋಗ್ಯ ವ್ಯವಸ್ಥೆಯಲ್ಲಿ ಸೂಕ್ತ ಮಾರ್ಗದರ್ಶನ ಒದಗಿಸುವುದು, ಸರ್ಕಾರಿ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ನೆರವು ನೀಡುವುದು, ಸಮಾಲೋ ಚನಾ ಸೇವೆಗಳನ್ನು ಒದಗಿಸುವುದು ಹಾಗೂ ಚಿಕಿತ್ಸೆಯ ಸಂಪೂರ್ಣ ಅವಧಿಯಲ್ಲಿ ಅವರಿಗೆ ಅಗತ್ಯ ಬೆಂಬಲ ಸೇವೆಗಳ ಸಂಪರ್ಕ ಕಲ್ಪಿಸುವ ಮೂಲಕ ಗುಣಮಟ್ಟದ ಆರೋಗ್ಯ ಸೇವೆಗಳು ಸುಲಭವಾಗಿ ಸಿಗುವಂತೆ ಮಾಡುವತ್ತ ಗಮನಹರಿಸುತ್ತದೆ.

ಐದು ವರ್ಷದ ಮಗುವಿನ ಲಿವರ್ ದಾನದಿಂದ 13 ವರ್ಷದ ಬಾಲಕಿಗೆ ಹೊಸ ಬದುಕು: ಯಶವಂತಪುರದ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಟ್ರಾನ್ಸ್‌ಪ್ಲಾಂಟ್

ಐದು ವರ್ಷದ ಮಗುವಿನ ಲಿವರ್ ದಾನದಿಂದ ಬಾಲಕಿಗೆ ಹೊಸ ಬದುಕು

ಶಿಶುವಾಗಿದ್ದಾಗಲೇ ಕಾಯಿಲೆ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ 2012ರಲ್ಲಿ ಕಸಾಯಿ ಪೋರ್ಟೋ ಎಂಟೆರೋಸ್ಟಮಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೂ ಕಾಲಕ್ರಮೇಣ ಲಿವರ್‌ಗೆ ತೀವ್ರ ಹಾನಿ ಯಾಗಿದ್ದು, ಕಾಮಾಲೆ, ದೈಹಿಕ ಬೆಳವಣಿಗೆ ಕುಂಠಿತ, ಪದೇಪದೆ ಆಸ್ಪತ್ರೆಗೆ ದಾಖಲಾಗುವುದು ಹಾಗೂ ಪೋರ್ಟಲ್ ಹೈಪರ್‌ಟೆನ್ಷನ್‌ನಿಂದ ಜೀರ್ಣಾಂಗದ ರಕ್ತಸ್ರಾವದ ಅಪಾಯ ಎದುರಿಸುತ್ತಿದ್ದರು.

Gudibande News: ನೈಜ ಚುನಾವಣೆಯ ಅನುಭವ ಪಡೆದ ವಿದ್ಯಾರ್ಥಿಗಳು; ಪ್ರಜಾಪ್ರಭುತ್ವ ಮೌಲ್ಯಗಳ ಅರಿವು

ಹಬ್ಬದ ಸಂಭ್ರಮದಲ್ಲಿ ಮಾಚಹಳ್ಳಿ ಶಾಲಾ ಸಂಸತ್ ಚುನಾವಣೆ

ಅಭ್ಯರ್ಥಿಗಳ ಪ್ರಚಾರ, ಪರ–ವಿರೋಧ ಪಕ್ಷಗಳ ಆರೋಪ–ಪ್ರತ್ಯಾರೋಪ, ಮತದಾರರ ಓಲೈಕೆ, ಮತಗಟ್ಟೆ ಮುಂದೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಕ್ಕಾಗಿ ಕಾತರದಿಂದ ಕಾಯುತ್ತಿದ್ದ ಅಭ್ಯರ್ಥಿಗಳ ಸಂಭ್ರಮ ಸಾಮಾನ್ಯ ಚುನಾವಣೆಯನ್ನೇ ನೆನಪಿಸು ವಂತಿತ್ತು. ಮತದಾನಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞೆ ಸ್ವೀಕರಿಸಿ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿದರು.

ಎಚ್ಎಂಟಿ ಜಾಗದ ವಿಚಾರದಲ್ಲಿ ಈಶ್ವರ ಖಂಡ್ರೆ-ಎಚ್.ಡಿ. ಕುಮಾರಸ್ವಾಮಿ ವಾಕ್ಸಮರ; ರಾಜ್ಯ ಸರ್ಕಾರಕ್ಕೆ ಹಕ್ಕಿಲ್ಲ ಎಂದ ಎಚ್‌ಡಿಕೆ

ಎಚ್ಎಂಟಿ ಜಾಗದ ಮೇಲೆ ರಾಜ್ಯ ಸರ್ಕಾರಕ್ಕೆ ಹಕ್ಕಿಲ್ಲ: ಎಚ್.ಡಿ. ಕುಮಾರಸ್ವಾಮಿ

HD Kumaraswamy vs Eshwara Khandre: ಎಚ್ಎಂಟಿ ಜಾಗದ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಅದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು ನಮ್ಮ ಬಳಿ ಇವೆ. ಯಾವುದೇ ಕಾರಣಕ್ಕೂ ಎಚ್‌ಎಂಟಿ ಭೂಮಿಯನ್ನು ಮುಟ್ಟಲು ಆಗುವುದಿಲ್ಲ. ನ್ಯಾಯಾಲಯದ ತಡೆಯಾಜ್ಞೆ ಕೂಡ ನೀಡಿದೆ. ಇಷ್ಟೆಲ್ಲ ಮಾತನಾಡುವ ಈಶ್ವರ್ ಖಂಡ್ರೆ ಅರಣ್ಯ ಸಚಿವರಾಗಿದ್ದಾಗ ಎರಡು ವರ್ಷಗಳಿಂದ ಎಲ್ಲೆಲ್ಲಿ ಭೂಮಿ ಉಳಿಸಿದ್ದಾರೆ? ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕಾಡುಗೋಡಿ ವೆನ್ನೆಲ್ಲಾ ಹತ್ಯೆ; ಕರುಳ ಕುಡಿಯನ್ನೇ ಕೊಂದ ಪ್ರಿಯಕರನಿಗೆ ನೆರವಾದ ಪಾಪಿ ತಾಯಿ ಪ್ರಿಯಾಂಕಾಗೆ ಜಾಮೀನು

ವೆನ್ನೆಲ್ಲಾ ಕೊಲೆ ಆರೋಪಿ ತಾಯಿ ಪ್ರಿಯಾಂಕಾಗೆ ಜಾಮೀನು

Vennella Case: ಬೆಂಗಳೂರು ಕಾಡುಗೋಡಿಯ 5 ವರ್ಷದ ಬಾಲಕಿ ವೆನ್ನೆಲ್ಲಾ ಕೊಲೆ ಪ್ರಕರಣದ ಆರೋಪಿ, ತಾಯಿ ಪ್ರಿಯಾಂಕಾಗೆ ಜಾಮೀನು ಸಿಕ್ಕಿದೆ. ಪ್ರಿಯಾಂಕಾ ಪರ ವಕೀಲ ಪ್ರಸನ್ನ ವಾದ ಮಂಡಿಸಿ ಕೊಲೆಯಲ್ಲಿ ಪ್ರಿಯಾಂಕಾ ನೇರವಾಗಿ ಭಾಗಿಯಾಗಿಲ್ಲ ಎಂದು ಹೇಳಿದ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಬನಶಂಕರಿ ಸ್ಕೈವಾಕ್ ಯೋಜನೆ ತಕ್ಷಣ ಜಾರಿಗೊಳಿಸಲು ಸಚಿವ ಕೃಷ್ಣ ಬೈರೇಗೌಡಗೆ ಸಂಸದ ತೇಜಸ್ವಿ ಸೂರ್ಯ ಪತ್ರ

ಬನಶಂಕರಿ ಸ್ಕೈವಾಕ್ ಯೋಜನೆ ಜಾರಿಗೊಳಿಸಲು ತೇಜಸ್ವಿ ಸೂರ್ಯ ಪಟ್ಟು

Banashankari Skywalk: ಬಹುಬೇಡಿಕೆಯ ಬೆಂಗಳೂರಿನ ಬನಶಂಕರಿ ಸ್ಕೈವಾಕ್‌ ಯೋಜನೆಯನ್ನು ಜಾರುಗೊಳಿಸಬೇಕೆಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದಿದ್ದಾರೆ. ಒಂದು ಸರಳ ಸ್ಕೈವಾಕ್ ನಿರ್ಮಾಣಕ್ಕೂ ಇಷ್ಟು ವರ್ಷ ಬೇಕೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ: ಸಿಎಂ ಡಿ.ಕೆ. ಶಿವಕುಮಾರ್‌ ಆದೇಶ

ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ 1 ಕೋಟಿ ರೂ:ಸಿಎಂ

CM DK Shivakumar: ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ʼʼನನ್ನನ್ನು ಕ್ಷಮಿಸಿʼʼ: ಶಿಕ್ಷಕಿ ಬೈದಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು; ಡೆತ್‌ನೋಟ್‌ನಲ್ಲಿ ಏನಿದೆ?

ಶಿಕ್ಷಕಿ ಬೈದಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

Self Harming: ಶಿಕ್ಷಕಿ ಬೈದರು, ಅವಮಾನ ಮಾಡಿದರೆಂಬ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಈ ಹೃದಯಸ್ಪರ್ಶಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಮಧುಶ್ರೀ ಎಂದು ಗುರುತಿಸಲಾಗಿದೆ.

ಜುಲೈ 12 ರ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಯಾರಿಗೆಲ್ಲ ಸಿಗಲಿದೆ ಸ್ಥಾನ?

ಜು.12 ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

Karnataka Cabinet Expansion: ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ದೆಹಲಿಗೆ ಹಿಂದಿರುಗಿದ ನಂತರವೇ ಕರ್ನಾಟಕ ಸಚಿವ ಸಂಪುಟದ ವಿಸ್ತರಣೆ ಮತ್ತು ಪುನರ್ರಚನೆ ಮುಂದುವರಿಯುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಸೇರಿಸಬೇಕಾದ ಏಳರಿಂದ ಎಂಟು ಶಾಸಕರ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ ಎನ್ನಲಾಗಿದೆ.

Bengaluru Road Rage: ʼʼನಮ್ಮಲ್ಲಿರುವ ಚಿನ್ನ ತೆಗೆದುಕೊಂಡು ಬಿಟ್ಟುಬಿಡಿʼʼ: ಮಡಿಲಲ್ಲಿ 10 ತಿಂಗಳ ಮಗುವನ್ನಿಟ್ಟುಕೊಂಡು  ಮಹಿಳೆ ಬೇಡಿಕೊಂಡರೂ ದಾಳಿ ನಡೆಸಿದ ದುಷ್ಕರ್ಮಿಗಳು

ಮಹಿಳೆ ಕೈ ಮುಗಿದು ಬೇಡಿಕೊಂಡರೂ ದಾಳಿ ನಡೆಸಿದ ದುಷ್ಕರ್ಮಿಗಳು

Bengaluru-Mysuru Expressway: ಜುಲೈ 5ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದ ರೋಡ್‌ ರೇಜ್‌ಗೆ ಸಂಬಂಧಿಸಿದ ಇನ್ನಷ್ಟು ಆಘಾತಕಾರಿ ವಿವರಗಳು ಹೊರ ಬಿದ್ದಿವೆ. ಕಾರ್‌ನಲ್ಲಿದ್ದ ಪತ್ನಿ ಕೈ ಮುಗಿದು ಬೇಡಿಕೊಂಡರೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ಸಾಗರ್‌ ಹೇಳಿದ್ದಾರೆ.

ಭಾರತದಲ್ಲಿ ವಾಟ್ಸಾಪ್ ಉದ್ಯಮ ಶೃಂಗಸಭೆ ಆಯೋಜನೆ: ವ್ಯಾಪಾರಸ್ಥರ ನೆರವಿಗಾಗಿ ಮೆಟಾ ಬಿಸಿನೆಸ್ ಏಜೆಂಟ್ ಎಐ ತಂತ್ರಜ್ಞಾನ ಬಿಡುಗಡೆ

ವ್ಯಾಪಾರಸ್ಥರ ನೆರವಿಗಾಗಿ ಮೆಟಾ ಬಿಸಿನೆಸ್ ಏಜೆಂಟ್ ಎಐ ತಂತ್ರಜ್ಞಾನ ಬಿಡುಗಡೆ

ಮೆಟಾ ಸಂಸ್ಥೆಯ ಪ್ರಕಾರ, ಈ ಹೊಸ ಮೆಟಾ ಬಿಸಿನೆಸ್ ಏಜೆಂಟ್ ತಂತ್ರಜ್ಞಾನವು ಪ್ರತಿಯೊಬ್ಬ ಗ್ರಾಹಕ ನಿಗೆ ಪ್ರತಿ ಕ್ಷಣದಲ್ಲೂ ತಕ್ಷಣವೇ ಸ್ಪಂದಿಸುವಂತೆ ವ್ಯವಹಾರಗಳನ್ನು ಸಜ್ಜುಗೊಳಿಸುತ್ತದೆ. ಇದು ಕಂಪನಿ ಯೊಂದರ ಹಿಂದೆ ಒಂದು ಬೃಹತ್ ಅಥವಾ ಅನಂತ ಉದ್ಯೋಗಿಗಳ ತಂಡವೇ ಕೆಲಸ ಮಾಡುತ್ತಿರು ವಂತಹ ಅನುಭವ ನೀಡುತ್ತದೆ

ಆಡಳಿತದ ನಿರ್ಲಕ್ಷ್ಯಕ್ಕೆ ಕುಸಿದ ಕುಮದ್ವತಿ ನದಿ ದಂಡೆ

ಆಡಳಿತದ ನಿರ್ಲಕ್ಷ್ಯಕ್ಕೆ ಕುಸಿದ ಕುಮದ್ವತಿ ನದಿ ದಂಡೆ

ಇತಿಹಾಸವನ್ನು ಅಳಿಸಿ ಹಾಕುವುದು ಸುಲಭ. ಆದರೆ ಅದನ್ನು ಮತ್ತೆ ಕಟ್ಟುವುದು ಅಸಾಧ್ಯ. ರಟ್ಟಿಹಳ್ಳಿ ಯ ಹೃದಯ ಭಾಗದಲ್ಲಿ ಹರಿಯುವ ಕುಮದ್ವತಿ ನದಿ ಇದಕ್ಕೆ ಜೀವಂತ ಸಾಕ್ಷಿ. ಶತಮಾನಗಳ ಇತಿಹಾಸ ಹೊತ್ತ ಕದಂಬೇಶ್ವರ ದೇವಾಲಯದ ಪಕ್ಕದಲ್ಲಿರುವ ಕಲ್ಲಿನ ಮೆಟ್ಟಿಲುಗಳು ಕುಸಿದು ಬೀಳುತ್ತಿದ್ದು, ಈ ಪ್ರದೇಶದ ಪರಂಪರೆ ನಿಧಾನವಾಗಿ ಕಣ್ಮರೆಯಾಗುತ್ತಿದೆ.

ಯಲ್ಲಾಪುರದ ಅರಬೈಲ್‌ ಘಾಟ್‌ನಲ್ಲಿ ಭೀಕರ ಅಪಘಾತ; ಏಳು ಮಂದಿ ದುರ್ಮರಣ

ಯಲ್ಲಾಪುರದ ಅರಬೈಲ್‌ ಘಾಟ್‌ನಲ್ಲಿ ಭೀಕರ ಅಪಘಾತ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗ್ಗೆಯೇ ಕೆಟ್ಟು ನಿಂತ ಮೆಟ್ರೋ; ಹಸಿರು ಮಾರ್ಗದಲ್ಲಿ ಸಂಚಾರ ವ್ಯತ್ಯಯ

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚಾರ ವ್ಯತ್ಯಯ

Bengaluru Metro Green Line: ಗುರುವಾರ ಬೆಳಗ್ಗೆ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ. ಹಸಿರು ಮಾರ್ಗ ಮೆಟ್ರೋ ಸೇವೆಯಲ್ಲಿ ಪ್ರಸ್ತುತ ವಿಳಂಬ ಉಂಟಾಗಿದೆ ಎಂದು BMRCL ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಡ್ಯ ನಗರ ಸಾರಿಗೆ ಇಲ್ಲದೇ ಜನತೆ ಹೈರಾಣ !

ಮಂಡ್ಯ ನಗರ ಸಾರಿಗೆ ಇಲ್ಲದೇ ಜನತೆ ಹೈರಾಣ !

ನಗರದಲ್ಲಿನ ಬಡ ಕಾಲೇಜು ವಿದ್ಯಾರ್ಥಿಗಳು, ನಾಗರೀಕರು, ವೃದ್ಧರು ಖಾಸಗಿ ವ್ಯವಸ್ಥೆಯನ್ನೇ ಅವಲಂಬಿ ಸುವಂತೆ ಪರಿಸ್ಥಿತಿ ನಿರ್ಮಿಸಲಾಗಿದೆ. ಇದಕ್ಕೆ ನಗರದಲ್ಲಿದ್ದ “ಮಿಡಿ ಬಸ್" ವ್ಯವಸ್ಥೆಯನ್ನು ಸ್ಥಗಿತ ಗೊಳಿಸಿರುವುದೇ ಕಾರಣ. ಕೋವಿಡ್ ಸಂದರ್ಭಕ್ಕೂ ಮೊದಲು ನಗರದ ಬಡವಾಸಿಗಳಿಗೆ ಅನುಕೂಲ ವಾಗುವಂತೆ ಸಾಮಾನ್ಯ ಗಾತ್ರಕ್ಕಿಂತ ಸಣ್ಣ ಗಾತ್ರದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಹೊಸ ನೀರು ಇಲ್ಲದೆ ಭೀಮೆ ನಿಶ್ಚಲ !

ಹೊಸ ನೀರು ಇಲ್ಲದೆ ಭೀಮೆ ನಿಶ್ಚಲ !

ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಬಳಿ ಇರುವ ಭೀಮಾ ಏತ ನೀರಾವರಿ ಯೋಜನೆಯ ಬ್ಯಾರೇಜ್‌ನಲ್ಲಿ ನೀರಿನ ಮಟ್ಟ ಆತಂಕಕಾರಿ ಹಂತಕ್ಕೆ ಕುಸಿದಿದೆ. 3.199 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಬ್ಯಾರೇಜ್‌ನಲ್ಲಿ ಪ್ರಸ್ತುತ ಕೇವಲ 0.270 ಟಿಎಂಸಿ ನೀರು ಮಾತ್ರ ಉಳಿದಿದ್ದು, ಜಲಾಶಯವು ಶೇ.8.53ರಷ್ಟು ಮಾತ್ರ ಭರ್ತಿಯಾಗಿದೆ.

Karnataka Weather: ರಾಜ್ಯದ ಏಳು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌; ಗುಡುಗುಸಹಿತ ಮಳೆ ಸಾಧ್ಯತೆ!

7 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌; ಗುಡುಗುಸಹಿತ ಮಳೆ ಸಾಧ್ಯತೆ!

Weather Report: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ನೀಡಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

Chinthamani News: ಚಿಂತಾಮಣಿ ಡಿಸಿಸಿ ಬ್ಯಾಂಕ್‌ನಲ್ಲಿ 11 ಕೋಟಿ ರೂ.ಅವ್ಯವಹಾರ: ಸಿಐಡಿ ಅಧಿಕಾರಿಗಳ ದಿಢೀರ್ ದಾಳಿ!

ಚಿಂತಾಮಣಿ ಡಿಸಿಸಿ ಬ್ಯಾಂಕ್‌ನಲ್ಲಿ 11 ಕೋಟಿ ರೂ.ಅವ್ಯವಹಾರ

ದೂರಿನ ಬೆನ್ನಲ್ಲೇ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಡಿವೈಎಸ್ಪಿ ಹಾಗೂ ಸಿಬ್ಬಂದಿ ಚಿಂತಾಮಣಿ ಡಿಸಿಸಿ ಬ್ಯಾಂಕ್‌ಗೆ ಆಗಮಿಸಿ,ದೂರುದಾರ ಪ್ರತಾಪ್ ಕುಮಾರ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ಮಹಜರು ಪ್ರಕ್ರಿಯೆ ನಡೆಸಿದರು.ತದನಂತರ ಆರೋಪ ಕೇಳಿಬಂದಿರುವ ವಿವಿಧ ವಿಎಸ್‌ಎಸ್‌ಎನ್ ಸೊಸೈಟಿಗಳ ಕಾರ್ಯದರ್ಶಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು

ಬೆಂಗಳೂರಿನಲ್ಲಿ ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು!

ಬೆಂಗಳೂರಿನಲ್ಲಿ ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು!

Nelamangala News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರದಲ್ಲಿ ಘಟನೆ ನಡೆದಿದೆ. ಅಪಘಾತದ ಬಳಿಕ ಶಾಲಾ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕನ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

Loading...