ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Chikkaballapur News: ವಿದ್ಯಾರ್ಥಿಗಳ ಬದುಕಿಗೆ ದಾರಿ ತೋರುವ ಗುರುಗಳು ಸದಾ ಅಭಿನಂದನೆಗೆ ಅರ್ಹರಾಗಿರುತ್ತಾರೆ : ಉಪನ್ಯಾಸಕ ಅರಿಕೆರೆ ಎಂ. ಮುನಿರಾಜು ಅಭಿಮತ

ಬಾಳಿಗೆ ಬೆಳಕಾಗುವ ಶಿಕ್ಷಕರು ಸಮಾಜದಿಂದ ಸದಾ ಅಭಿನಂದನೆಗೆ ಅರ್ಹರು

ಉತ್ತಮ ಶಿಕ್ಷಕರು ಯುವ ಸಮೂಹದ ಮೂಲಕ ಆರೋಗ್ಯವಂತ ಸಮಾಜ ಕಟ್ಟಲು ಅಡಿಪಾಯ ಹಾಕು ತ್ತಾರೆ. ಬೋಧನೆಗಿಂತ ಬದುಕು ಕಟ್ಟಲು ಮುಂದಾಗುತ್ತಾರೆ. ಹೀಗಾಗಿ ಇಂತಹ ಶಿಕ್ಷಕರನ್ನು ವಿದ್ಯಾರ್ಥಿಗಳು ಸದಾ ಗೌರವಿಸುತ್ತಾರೆ.ಶಿಕ್ಷಕರ ದಿನಾಚರಣೆಯನ್ನು ಯಾಂತ್ರಿಕವಾಗಿ ಆಚರಿಸುವುದಕ್ಕಿಂತ ಅರ್ಥ ಪೂರ್ಣವಾಗಿ ಆಚರಿಸಿದರೆ ಮಾತ್ರ ಕಾರ್ಯಕ್ರಮಕ್ಕೆ ಬೆಲೆ ಬರಲಿದೆ

Chikkaballapur News: ಸಂಕಷ್ಟಕ್ಕೆ ಹಿಮ್ಮೆಟ್ಟದೆ ಒಗ್ಗೂಡಿ ಶ್ರಮಿಸೋಣ : ಮಧ್ಯಪ್ರಾಚ್ಯದ ಸಂಕಟಕ್ಕೆ ಮಿಡಿದ ಸದ್ಗುರು ಶ್ರೀ ಮಧುಸೂದನ ಸಾಯಿ

'ಒಂದು ಜಗತ್ತು ಒಂದು ಕುಟುಂಬ ಮಾನವೀಯ ಪುರಸ್ಕಾರ'

ಮಧ್ಯಪ್ರಾಚ್ಯದ ಅನೇಕ ದೇಶಗಳಲ್ಲಿ ಜನರಿಗೆ ಜೀವನವು ಸುಲಭವಾಗಿಲ್ಲ. ನಾಳೆ ನೋಡುತ್ತೇವೆಯೇ ಎನ್ನುವುದೇ ಅವರಿಗೆ ಪ್ರಶ್ನೆ. ಮುಂದಿನ ಊಟ, ಔಷಧಿ ಸಿಗುತ್ತದೆಯೇ ಎಂಬುದರ ಖಾತರಿ ಇರುವು ದಿಲ್ಲ. ಮತ್ತೆ ಮಕ್ಕಳು ಶಾಲೆಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗಳಿಗೆ ಉತ್ತರವೇ ಸಿಗದ ಪರಿಸ್ಥಿತಿಯಲ್ಲಿ ಅಲ್ಲಿ ಬದುಕು ಸಾಗುತ್ತಿದೆ

Chikkaballapur News: ಮಕ್ಕಳ ಭವಿಷ್ಯ ರೂಪಿಸುವ ಪ್ರಯತ್ನ ವ್ಯರ್ಥವಲ್ಲ: ಸಾಯಿ ಶ್ಯೂರ್ ಬೆಂಬಲಿಸುವ ಸರ್ಕಾರದ ನಿರ್ಧಾರಕ್ಕೆ ಸದ್ಗುರು ಶ್ರೀ ಮಧುಸೂದನ ಸಾಯಿ ಶ್ಲಾಘನೆ

ಮಕ್ಕಳ ಭವಿಷ್ಯ ರೂಪಿಸುವ ಪ್ರಯತ್ನ ವ್ಯರ್ಥವಲ್ಲ

'ಸಾಯಿ ಶ್ಯೂರ್ ಪೋಷಕಾಂಶ ಮಿಶ್ರಣ ಪುಡಿಯ ಉತ್ಪಾದನೆ ಮತ್ತು ಸಾಗಣೆ ವೆಚ್ಚದ ಕಾಲು ಭಾಗವನ್ನು ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ. ಈ ಯೋಜನೆ ಆರಂಭವಾಗಿ ೧೦ ವರ್ಷಗಳಾದ ನಂತರ ನಡೆದಿರುವ ಬೆಳವಣಿಗೆ ಇದು. ಸರ್ಕಾರದ ಈ ಉಪಕ್ರಮಕ್ಕಾಗಿ ವೇದಿಕೆಯ ಮೇಲಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಸೇರಿ ಹಲವರನ್ನು ಅಭಿನಂದಿಸಬೇಕಿದೆ'

CM Siddaramaiah: ಕೃಷ್ಣೆಗೆ ಆರನೇ ಬಾರಿ ಬಾಗಿನ ಅರ್ಪಿಸಿದ ಸಿದ್ಧರಾಮಯ್ಯ

ಕೃಷ್ಣೆಗೆ ಆರನೇ ಬಾರಿ ಬಾಗಿನ ಅರ್ಪಿಸಿದ ಸಿದ್ಧರಾಮಯ್ಯ

ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಕಾರ್ಯದರ್ಶಿ ಕೆ.ಬಿ. ಕುಲಕರ್ಣಿ, ಕೆಬಿಜೆಎನ್ಎಲ್ ಎಂಡಿ ಕೆ.ಪಿ. ಮೋಹನರಾಜ್, ಸಿಇ ಡಿ. ಬಸವರಾಜ, ಬೆಳಗಾವಿ ಪ್ರಾದೇಶಿಕ ಆಯುಕ್ತೆ ಜಾನಕಿ, ಜಿಲ್ಲಾಧಿಕಾರಿಗಳಾದ ಕೆ. ಆನಂದ, ಸಂಗಪ್ಪ, ಸಿಇಓ ರಿಷಿ ಆನಂದ ಮತ್ತಿತರರು ಇದ್ದರು. ಬಾಗಿನ ಕಾರ್ಯಕ್ರಮದಲ್ಲಿ ಅವಳಿ ಜಿಲ್ಲೆಯ ಶಾಸಕರು, ಸಂಸದರ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕಲಾಗಿತ್ತು.

Chikkanayakanahalli News: ಮನೆ ಬಾಗಿಲಿಗೆ-ಮನೆ ಮಗ ಯಶಸ್ಸಿಗೆ ಅಧಿಕಾರಿಗಳು ಶ್ರಮಿಸಲಿ

ಮನೆ ಬಾಗಿಲಿಗೆ-ಮನೆ ಮಗ ಯಶಸ್ಸಿಗೆ ಅಧಿಕಾರಿಗಳು ಶ್ರಮಿಸಲಿ

ಕಸ ವಿಲೇವಾರಿ ಮಾಡುವ ಸಲುವಾಗಿ ತಂದ ಟಾಟಾ ಎಸಿ ವಾಹನ ಮತ್ತು ತಳ್ಳುವ ಗಾಡಿಗಳು ಬಳಕೆ ಯಾಗದೆ ನಿಂತಲ್ಲೇ ತುಕ್ಕು ಹಿಡಿದು ಹಾಳಾಗಿ ಹೋಗಿದೆ. ರಿಪೇರಿ ಮಾಡಿಸಿ ಇಲ್ಲವೆ ಅನುಪ ಯುಕ್ತ ವಸ್ತು ಗಳನ್ನು ಹರಾಜು ಹಾಕಿ ಎಂದು ಸಲಹೆ ಕೇಳಿಬಂದಿತು. ಸಿದ್ದರಾಮಯ್ಯ ಎಂಬ ವ್ಯಕ್ತಿ ರಸ್ತೆ ಜಾಗವನ್ನು ಒತ್ತುವರಿ ಮಾಡಿ ಶೆಡ್ ನಿರ್ಮಿಸಿದ್ದಾರೆ.

ಯರಗಟ್ಟಿ ಕ್ಷೇತ್ರಕ್ಕೆ ಶಾಸಕ ವಿಶ್ವಾಸ ವೈದ್ಯ, ಸವದತ್ತಿ ಕ್ಷೇತ್ರಕ್ಕೆ ವಿರೂಪಾಕ್ಷ ಮಾಮನಿ ಫೈನಲ್

ಯರಗಟ್ಟಿ ಕ್ಷೇತ್ರಕ್ಕೆ ಶಾಸಕ ವಿಶ್ವಾಸ, ಸವದತ್ತಿ ಕ್ಷೇತ್ರಕ್ಕೆ ಮಾಮನಿ ಫೈನಲ್

ಯರಗಟ್ಟಿಯ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಯರಗಟ್ಟಿ ಭಾಗದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿಯವರು ವೈದ್ಯ ಮತ್ತು ಅಜೀತ ದೇಸಾಯಿ ಬಣಗಳ ಮಧ್ಯ ನಡೆಯುತ್ತಿದ್ದ ಜಿದ್ದಾ ಜಿದ್ದಿನ ಹೋರಾಟಕ್ಕೆ ಬ್ರೆಕ್ ಹಾಕಿದ್ದು, ವಿಶ್ವಾಸ ವೈದ್ಯ ಅವರು ನಮ್ಮಗುಂಪಿನ ಅಭ್ಯರ್ಥಿಯಾಗಿದ್ದು, ಇದಕ್ಕೆ ಅಜೀತ ದೇಸಾಯಿಯವರು ಸಂಪೂರ್ಣ ಸಹಮತ ಸೂಚಿಸಿದ್ದಾರೆ

ಕಾನೂನು ಬಾಹಿರವಾಗಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಜಾಗ; ಹೋರಾಟದ ಎಚ್ಚರಿಕೆ ನೀಡಿದ ಜಿ.ಎಸ್. ಬಸವರಾಜು

ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಕಾನೂನು ಬಾಹಿರವಾಗಿ ಜಾಗ ನೀಡಿದ ಆರೋಪ

Tumkur News: ತುಮಕೂರು ನಗರದ ಮರಳೂರು ಗ್ರಾಮದ ಸರ್ವೆ ನಂಬರ್ 87/1 ಮತ್ತು 87/2ರಲ್ಲಿ ಒಟ್ಟು 4 ಎಕೆರೆ ಜಮೀನಿನಲ್ಲಿ ಸಾರ್ವಜನಿಕ ಉದ್ದೇಶಕ್ಕೆ ಮೀಸಲಾಗಿದ್ದ ನಗರಪಾಲಿಕೆಯ ಎರಡು ಎಕರೆ ಜಮೀನನ್ನು ರಾಜ್ಯ ಸರ್ಕಾರ ಕಾನೂನು ಬಾಹೀರವಾಗಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಂಜೂರು ಮಾಡಿದೆ. ಪೋಡಿ, ಸ್ಕೆಚ್ ಆಗದ ಜಮೀನನ್ನು ನಿಯಮ ಉಲ್ಲಂಘಿಸಿ ಮಂಜೂರಾತಿ ಪತ್ರವನ್ನು ನೋಂದಣಿ ಮಾಡಲಾಗಿದೆ ಎಂದು ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಅಧ್ಯಕ್ಷ ಜಿ.ಎಸ್.ಬಸವರಾಜು ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆ; ಲೋಕಸಭಾ ತನಿಖಾ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ಗಣಪತಿ ಭಟ್ ನೇಮಕ

ಲೋಕಸಭಾ ತನಿಖಾ ಸಮಿತಿಗೆ ಗಣಪತಿ ಭಟ್ ನೇಮಕ

Justice Yashwant Varma: ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ಧದ ಆರೋಪಗಳ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತ್ರಿಸದಸ್ಯ ಸಮಿತಿಯನ್ನು ಘೋಷಿಸಿದ್ದಾರೆ. ನಿವೃತ್ತ ಐಆರ್‌ಎಸ್‌ ಅಧಿಕಾರಿ ಗಣಪತಿ ಭಟ್ ತನಿಖಾ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

Siddaraju swamiji: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ?; ಪಾಲನಹಳ್ಳಿ ಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ!

ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ?; ಸಿದ್ದರಾಜು ಸ್ವಾಮೀಜಿ ಸ್ಫೋಟಕ ಭವಿಷ್ಯ!

Karnataka Politics: ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ರಾಜಕೀಯ ಕ್ರಾಂತಿ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ಮಾಗಡಿ ತಾಲೂಕಿನ ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Isha Gramotsavam: ನಾಳೆ ಈಶ ಗ್ರಾಮೋತ್ಸವದ ವಿಭಾಗೀಯ ಪಂದ್ಯಗಳು; ಸದ್ಗುರು, ರಾಬಿನ್ ಉತ್ತಪ್ಪ, ಶ್ರೀನಿಧಿ ಶೆಟ್ಟಿ ಭಾಗಿ

ನಾಳೆ ಈಶ ಗ್ರಾಮೋತ್ಸವದ ವಿಭಾಗೀಯ ಪಂದ್ಯಗಳು

ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವವಾದ ಈಶ ಗ್ರಾಮೋತ್ಸವದ ವಿಭಾಗೀಯ ಪಂದ್ಯಗಳನ್ನು ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಸೆಪ್ಟೆಂಬರ್ 7 ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ಆಯೋಜಿಸಲಾಗಿದೆ. ಸದ್ಗುರು ಜತೆಗೆ ವಿಶೇಷ ಅತಿಥಿಗಳಾಗಿ ಮಾಜಿ ಭಾರತೀಯ ಕ್ರಿಕೆಟಿಗ ರಾಬಿನ್ ಉತ್ತಪ್ಪ ಮತ್ತು ಜನಪ್ರಿಯ ನಟಿ ಶ್ರೀನಿಧಿ ಶೆಟ್ಟಿ ಭಾಗವಹಿಸಲಿದ್ದಾರೆ.

Maha Panchayat conference: ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ನ.14ಕ್ಕೆ ಮಹಾ ಪಂಚಾಯತ್ ಸಮ್ಮೇಳನ

ನವೆಂಬರ್ 14ಕ್ಕೆ ಮಹಾ ಪಂಚಾಯತ್ ಸಮ್ಮೇಳನ

Gandhi Bharata centenary: ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26, 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನೆಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

Bengaluru Rains: ಸಿಲಿಕಾನ್‌ ಸಿಟಿಯ ಹಲವೆಡೆ ಅಬ್ಬರಿಸಿದ ವರುಣ; ನಾಳೆ ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

ಸಿಲಿಕಾನ್‌ ಸಿಟಿಯ ಹಲವೆಡೆ ಅಬ್ಬರಿಸಿದ ವರುಣ

Weather News: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Self Harming: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

Mandya News: ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯಲ್ಲಿ ಘಟನೆ ನಡೆದಿದೆ. ಯುವತಿಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಹೇಳಿದ್ದರು. ಇದರಿಂದ ಮನನೊಂದ ಯುವತಿ, ಕಚೇರಿಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಉತ್ತರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ಬ್ರಾಹ್ಮಣ ಮಹಾಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ

Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ನೇಮಕ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಿತು. ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ವೇತಾ ಶ್ರೀವತ್ಸ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ಅಶಾಕುಮಾರಿ ಎ.ಜಿ. ಅವರನ್ನು ನೇಮಕ ಮಾಡಲಾಯಿತು.

Madhugiri News: ಕೊಡಿಗೇನಹಳ್ಳಿಯಲ್ಲಿ ಈದ್ ಮಿಲಾದ್ ಸಂಭ್ರಮ

Madhugiri News: ಕೊಡಿಗೇನಹಳ್ಳಿಯಲ್ಲಿ ಈದ್ ಮಿಲಾದ್ ಸಂಭ್ರಮ

ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ ಅಹಲೇ ಸುನ್ನತುಲ್ ಜಮಾತ್ ಜಾಮಿಯಾ ಮಸೀದಿ ಕಮಿಟಿ ವತಿಯಿಂದ ಜಶ್ನೆ ಈದ್ ಮಿಲಾದ್ ಉನ್ ನಬಿ ಸ್ವ.ಅ.ರವರ ಹಬ್ಬವನ್ನು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಸಡಗರದಿಂದ ಅಲ್ಲಾಹುನ ನಾಮ ಜಪ ಮಾಡುತ್ತಾ ಸಾಗಿದರು.

Mysuru Dasara 2025: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್​ಗೆ ಆಹ್ವಾನ; ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ದಸರಾ ಉದ್ಘಾಟಕರ ಆಯ್ಕೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

Pratap Simha: ಸಾಹಿತಿ ಬಾನು ಮುಷ್ತಾಕ್‌ ಅವರಿಗೆ ಇತ್ತೀಚಗೆ ಸರ್ಕಾರದ ಪರ ಜಿಲ್ಲಾಡಳಿತದಿಂದ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್​ರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಕೋರ್ಟ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

Water crisis: ಬಾಗಲಕೋಟೆಯ ಗುಡೂರ ಎಸ್.ಸಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಟ; ಗ್ರಾಪಂ ಕಚೇರಿಗೆ ಜನರ ಮುತ್ತಿಗೆ

ಬಾಗಲಕೋಟೆಯ ಗುಡೂರ ಎಸ್.ಸಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಟ

Bagalkot News: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರ (ಎಸ್.ಸಿ) ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಹದಿನೈದು ದಿನ ಕಳೆದರೂ ಶುದ್ಧ ಕುಡಿಯುವ ನೀರು ಬಂದಿಲ್ಲ. ಬಂದ ನೀರು ಕೂಡ ಕಲುಷಿತಗೊಂಡಿರುವುದರಿಂದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

SIIMA 2025: ಸೈಮಾ ಪ್ರಶಸ್ತಿ ಪ್ರಕಟ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ, ಇಲ್ಲಿದೆ ವಿಜೇತರ ಪಟ್ಟಿ

ಸೈಮಾ ಪ್ರಶಸ್ತಿ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ

Kiccha Sudeep: ದುಬೈಯಲ್ಲಿ ಶುಕ್ರವಾರ ರಾತ್ರಿ ಸೈಮಾ 2025 ಸಮಾರಂಭ ಆಯೋಜಿಸಲಾಗಿತ್ತು. 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು. ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ.

Sasikanth senthil: ಧರ್ಮಸ್ಥಳ ಪ್ರಕರಣ; ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್‌ ದಾಖಲಿಸಿದ ಸೆಂಥಿಲ್‌

ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್‌ ದಾಖಲಿಸಿದ ಸೆಂಥಿಲ್‌

Dharmasthala Case: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಸಂಸದ ಸಸಿಕಾಂತ್ ಸಿಂಥೆಲ್ ಆಗಮಿಸಿ, ಶಾಸಕ ಜರ್ನಾದನ ರೆಡ್ಡಿ ವಿರುದ್ಧ ಖಾಸಗಿ ದೂರು ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿಗೆ ತಲೆ ಬುರುಡೆ ತೆಗೆದುಕೊಂಡು ಹೋಗಿದ್ದೇನೆ ಎನ್ನುತ್ತಾರೆ. ಬಹುಶಃ ಅದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ಗೊತ್ತಿರಬೇಕು ಎಂದು ಕಿಡಿಕಾರಿದ್ದಾರೆ.

Vijayapura crime news: ಭೀಮಾ ತೀರದ ಗ್ರಾಮ ಪಂಚಾಯತ್‌ ಅಧ್ಯಕ್ಷನ ಕೊಲೆ, ಚಡಚಣ ಪಿಎಸ್‌ಐ ಅಮಾನತು

ಭೀಮಾ ತೀರದ ಗ್ರಾಮ ಪಂಚಾಯತ್‌ ಅಧ್ಯಕ್ಷನ ಕೊಲೆ, ಚಡಚಣ ಪಿಎಸ್‌ಐ ಅಮಾನತು

Murder Case: ಸೆ.3ರ ಬೆಳಗ್ಗೆ ದೇವರನಿಂಬರಗಿ ಗ್ರಾಮದಲ್ಲಿ ಗುಂಡಿಕ್ಕಿ ಭೀಮನಗೌಡ ಹತ್ಯೆ ಮಾಡಲಾಗಿತ್ತು. ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೆಳಗ್ಗೆ ಕಟಿಂಗ್ ಶಾಪ್‌ಗೆ ಬಂದಿದ್ದ ಭೀಮನಗೌಡನ ಮೇಲೆ ನಾಲ್ವರು ಆರೋಪಿಗಳು ಅಮಾನುಷವಾಗಿ ಎರಗಿದ್ದರು.

Dharmasthala Case: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಕೇರಳದ ಕಮ್ಯುನಿಸ್ಟ್‌ ಸಂಸದನ ಹೆಸರು!

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಕೇರಳದ ಕಮ್ಯುನಿಸ್ಟ್‌ ಸಂಸದನ ಹೆಸರು!

Kerala MP: ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ಕೇರಳದ ರಾಜ್ಯಸಭಾ ಸದಸ್ಯ, ಕಮ್ಯುನಿಸ್ಟ್‌ ಸಂಸದ ಸಂದೋಷ್‌ ಕುಮಾರ್ ಬಳಿ ತೆರಳಿ ಅವರ ಮುಂದೆ ವಿಚಾರ ಪ್ರಸ್ತಾಪಿಸಿದ್ದರು ಎಂಬ ಸ್ಫೋಟಕ ಮಾಹಿತಿ ಎಸ್​​ಐಟಿ ತನಿಖೆ ವೇಳೆ ತಿಳಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.

Gold Rate Today: ಚಿನ್ನದ ದರದಲ್ಲಿ ಭಾರೀ ಏರಿಕೆ; ಇಂದಿನ ರೇಟ್‌ ಎಷ್ಟಿದೆ ಗೊತ್ತಾ?

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 6th Sep 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80ರೂ. ಏರಿಕೆ ಕಂಡಿದ್ದು, 9,945 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 87ರೂ. ಏರಿಕೆಯಾಗಿ 10,849 ರೂ.ಗೆ ತಲುಪಿದೆ.

Physical Abuse: ಮದುವೆಯಾಗುವುದಾಗಿ ನಂಬಿಸಿ ವಕೀಲೆಗೆ ಅತ್ಯಾಚಾರ, ಕಾನ್‌ಸ್ಟೇಬಲ್‌ ಸೆರೆ

ಮದುವೆಯಾಗುವುದಾಗಿ ನಂಬಿಸಿ ವಕೀಲೆಗೆ ಅತ್ಯಾಚಾರ, ಕಾನ್‌ಸ್ಟೇಬಲ್‌ ಸೆರೆ

ಮಂಗಳೂರಿನ ಪಾಂಡೇಶ್ವರ SAF ನಲ್ಲಿದ್ದ ಪಿಸಿ ಸಿದ್ದೇಗೌಡ, ವಿಜಯಪುರ ಜಿಲ್ಲೆಯ ಬಬಲೇಶ್ವರ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಸಿದ್ದೇಗೌಡ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದ ನಿವಾಸಿ. ಹುಬ್ಬಳ್ಳಿಯಲ್ಲಿ ನಡೆದ ಮದುವೆಯೊಂದರಲ್ಲಿ ಸಿದ್ದೇಗೌಡನಿಗೆ ಯುವತಿಯ ಪರಿಚಯವಾಗಿದೆ.

CM Siddaramaiah: ಬಸವಣ್ಣನವರಂತೆ ಸಮಾನತೆಗಾಗಿ ಹೋರಾಡಿದ ಪ್ರವಾದಿ ಮಹಮ್ಮದರು: ಸಿಎಂ ಸಿದ್ದರಾಮಯ್ಯ

ಬಸವಣ್ಣನವರಂತೆ ಸಮಾನತೆಗೆ ಹೋರಾಡಿದ ಪ್ರವಾದಿ ಮಹಮ್ಮದರು: ಸಿಎಂ ಸಿದ್ದರಾಮಯ್ಯ

Prophet Muhammad: ಪ್ರವಾದಿಯವರ ಬೋಧನೆಗಳು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದವು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದು ಹೇಳಿದರು.

Loading...