ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೋಮ-ಹವನ; ಅಹಿತಕರ ಘಟನೆ ನಡೆಯದಿರಲೆಂದು ಕೆಎಸ್‌ಸಿಎ ಪೂಜೆ

ದೇವರ ಮೊರೆ ಹೋದ ಕೆಎಸ್‌ಸಿಎ; ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೋಮ-ಹವನ

Chinnaswamy Stadium: ಆರ್‌ಸಿಬಿ ತಂಡ ಐಪಿಎಲ್ ಚೊಚ್ಚಲ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಜೂನ್ 4ರಂದು ನಡೆದ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಇದಾದ ನಂತರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಬ್ರೇಕ್‌ ಬಿದ್ದಿತ್ತು. ಆದರೆ, ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿರುವ ಹಿನ್ನೆಲೆಯಲ್ಲಿ ಕೆಎಸ್‌ಸಿಎ ನೂತನ ಪದಾಧಿಕಾರಿಗಳು ವಿಶೇಷ ಪೂಜೆ ಮಾಡಿಸಿದ್ದಾರೆ.

Chinnaswamy Stadium: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಪಂದ್ಯ ನಡೆಸುವ ಕುರಿತು ಪರಿಶೀಲನೆಗೆ ಸಮಿತಿ ರಚನೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಸುವ ಬಗ್ಗೆ ಪರಿಶೀಲನೆಗೆ ಸಮಿತಿ

ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಜಿಬಿಎ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳಿರುವ ಸಮಿತಿ ರಚಿಸಲಾಗಿದ್ದು, ಈ ಸಮಿತಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

Pravasi Prapancha: ಕುಂದಾಪುರ ಎಜುಕೇಷನ್ ಸೊಸೈಟಿಗೆ ಬಂಗಾರದ ಸಿಂಗಾರ

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕುಂದಾಪುರ ಎಜುಕೇಷನ್ ಸೊಸೈಟಿ

ಕಳೆದ 5 ದಶಕಗಳಿಂದ ಕುಂದಾಪುರ ಮತ್ತು ಬೈಂದೂರು ಅಷ್ಟೇ ಅಲ್ಲದೇ, ಸುತ್ತಮುತ್ತಲಿನ ಮೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ಕುಂದಾಪುರ ಎಜುಕೇಷನ್ ಸೊಸೈಟಿ ಈಗ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ. ಈ ವಿದ್ಯಾ ಸಂಸ್ಥೆಯ ವಿಶೇಷತೆಗಳೇನು ಎನ್ನುವ ವಿವರ ಇಲ್ಲಿದೆ.

ಪಿವಿ ಸಿಂಧು ಮತ್ತು ವಿಕ್ರಾಂತ್ ಮಾಸ್ಸಿ ಅಭಿನಯದ ಹೊಚ್ಚ ಹೊಸ ‘ವೇರ್ ಯುವರ್ ಸ್ಟೋರಿ’ ಜಾಹೀರಾತು ಅಭಿಯಾನ ಬಿಡುಗಡೆ ಮಾಡಿದ ಟೈಟಾನ್

ಜಾಹೀರಾತು ಅಭಿಯಾನ ಬಿಡುಗಡೆ ಮಾಡಿದ ಟೈಟಾನ್

ಟೈಟಾನ್ ಸಂಸ್ಥೆಯು ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಟ ವಿಕ್ರಾಂತ್ ಮಾಸ್ಸಿ ಅಭಿನಯಿಸಿರುವ ‘ವೇರ್ ಯುವರ್ ಸ್ಟೋರಿ’ ಎಂಬ ಜಾಹೀರಾತು ಅಭಿಯಾನವನ್ನು ಬಿಡುಗಡೆ ಮಾಡಿದೆ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಹೇಳಲಿಕ್ಕೆ ಒಂದು ಕಥೆ ಇರುತ್ತದೆ. ಆ ಕಥೆ ಅವರು ಯಾರು ಎಂಬುದರಿಂದ, ಅವರು ಹೊಂದಿರುವ ನಂಬಿಕೆಗಳಿಂದ ಮತ್ತು ಅವರು ಮಾಡುವ ಆಯ್ಕೆಗಳಿಂದ ಹುಟ್ಟಿಕೊಳ್ಳುತ್ತದೆ. ಅದು ಅವರ ಸತ್ಯ ಮತ್ತು ಅವರ ನಿಜ ವ್ಯಕ್ತಿತ್ವ, ಆ ವ್ಯಕ್ತಿತ್ವವೇ ಅವರ ಸ್ಟೈಲ್ ಅನ್ನು ರೂಪಿಸುತ್ತದೆ.

ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ಮಸಾಲೆ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ಮಸಾಲೆ ದೋಸೆ ಸವಿದ ಸಿಎಂ

ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರಿನ ಮೈಲಾರಿ ಹೋಟೆಲ್‌ನ ದೋಸೆ ಅಚ್ಚುಮೆಚ್ಚು. ನಗರಕ್ಕೆ ಭೇಟಿ ನೀಡಿದಾಗ ಸಾಮಾನ್ಯವಾಗಿ ಅವರು ಈ ಹೋಟೆಲ್‌ಗೆ ತೆರಳಿ ಉಪಾಹಾರ ಸೇವಿಸುತ್ತಾರೆ. ಇಂದು ಕೂಡ ಅಧಿಕಾರಿಗಳು, ಶಾಸಕರ ಜತೆ ತೆರಳಿ ಸಿಎಂ ಅವರು ಇಡ್ಲಿ, ಮಸಾಲೆ ದೋಸೆ ಸೇವಿಸಿದ್ದಾರೆ.

CM Siddaramaiah: ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು: ಸಿಎಂ ಸಿದ್ದರಾಮಯ್ಯ

ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು: ಸಿಎಂ ಸಿದ್ದರಾಮಯ್ಯ

ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿಗಳು (CM Siddaramaiah) ಪುನರುಚ್ಚರಿಸಿದರು. ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

Bomb Threat: ಆಲೂರು, ಸರಗೂರು ತಾಲೂಕು ಕಚೇರಿಗಳಿಗೆ ಬಾಂಬ್‌ ಬೆದರಿಕೆ

ಆಲೂರು, ಸರಗೂರು ತಾಲೂಕು ಕಚೇರಿಗಳಿಗೆ ಬಾಂಬ್‌ ಬೆದರಿಕೆ

ಆಲೂರು ಹಾಗೂ ಸರಗೂರು ತಾಲೂಕು ಕಚೇರಿಗಳಿಗೆ ಬಾಂಬ್‌ ಬೆದರಿಕೆಯನ್ನು ಅನಾಮಧೇಯ ವ್ಯಕ್ತಿ ಇಮೇಲ್‌ ಮೂಲಕ ಹಾಕಿದ್ದಾನೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆಯೂ ರಾಜ್ಯದಲ್ಲಿ ಹಲವು ಕಡೆ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಪರಿಶೀಲನೆಯ ಬಳಿಕ ಹುಸಿ ಬಾಂಬ್‌ ಬೆದರಿಕೆ ಎಂದು ತಿಳಿದುಬಂದಿತ್ತು.

ಭೀಮ ಗೋಲ್ಡ್ ಪೈವೇಟ್ ಲಿಮಿಟೆಡ್ ಘೋಷಿಸುತ್ತದೆ 'ಭೀಮ ಬ್ರಿಲಿಯನ್ ಡೈಮಂಡ್ ಜ್ಯುವೆಲ್ಲರಿ ಫೆಸ್ಟಿವಲ್'

ಭೀಮ ಬ್ರಿಲಿಯನ್ ಡೈಮಂಡ್ ಜ್ಯುವೆಲ್ಲರಿ ಫೆಸ್ಟಿವಲ್

ಭೀಮದಲ್ಲಿ ವರ್ಷಕ್ಕೆ ಎರಡು ಬಾರಿ ಜೂನ್ ಮತ್ತು ಡಿಸೆಂಬರ್ ತಿಂಗಳಲ್ಲಿ ನಡೆಯುವ ಈ ಡೈಮಂಡ್ ಅಭಿಯಾನ ಸಂಸ್ಥೆಯ ಪ್ರಮುಖ ತಂತ್ರಾತ್ಮಕ ಚಟುವಟಿಕೆಯಾಗಿದ್ದು, ಡಿಸೆಂಬರ್ ತಿಂಗಳಲ್ಲಿ ಡೈಮಂಡ್ ಆಭರಣಗಳ ಮೇಲಿನ ಎನ್‌ಆರ್‌ಐ ಗ್ರಾಹಕರ ಹೆಚ್ಚಿದ ಆಸಕ್ತಿಯನ್ನು ಪರಿಣಾಮಕಾರಿಯಾಗಿ ಬಳಸಿ ಕೊಳ್ಳಲು ರೂಪಿಸಲಾಗಿದೆ.

Food Poison: ಹಾವೇರಿ: ಹಾಸ್ಟೆಲ್ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ

Food Poison: ಹಾವೇರಿ: ಹಾಸ್ಟೆಲ್ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್ ಗೆ ಅನ್ನಪೂರ್ಣೇಶ್ವರಿ ಖಾಸಗಿ ಮೆಸ್ ನಿಂದ ಆಹಾರ ಸರಬರಾಜು ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದ್ದು ಕಳಪೆ ಆಹಾರ ಪದಾರ್ಥಗಳು ನೀಡಲಾಗಿತ್ತು ಎಂದು ಮೆಸ್ ಮಾಲೀಕರು ತಪ್ಪನ್ನು ಒಪ್ಪಿಕೊಂಡು ವೈದ್ಯಕೀಯ ವೆಚ್ಚ ನಾವೇ ಬರಿಸುತ್ತೇವೆ. ನಮ್ಮಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹೊಸ ಎಕ್ಸ್‌ ಪೀ ತೆರೆಯುವ ಮೂಲಕ ರಿಟೇಲ್ ಮತ್ತು ಸರ್ವೀಸ್ ನೆಟ್‌ವರ್ಕ್ ಬಲಪಡಿಸಿಕೊಂಡ Ultraviolette

ರಿಟೇಲ್ ಮತ್ತು ಸರ್ವೀಸ್ ನೆಟ್‌ವರ್ಕ್ ಬಲಪಡಿಸಿಕೊಂಡ Ultraviolette

ಎಕ್ಸ್‌ ಪೀರಿಯೆನ್ಸ್ ಸೆಂಟರ್‌ನಲ್ಲಿ ಕಂಪನಿಯ ಪರ್ಫಾರ್ಮೆನ್ಸ್ ಮೋಟಾರ್‌ಸೈಕಲ್‌ಗಳಾದ X-47 ಮತ್ತು F77 ಗಳು ಪ್ರದರ್ಶಿಸಲ್ಪಡುತ್ತವೆ. ಈ ಉತ್ಪನ್ನಗಳು 40.2 ಎಚ್ ಪಿ ಪವರ್ ಮತ್ತು 100 ಎನ್ ಎಂ ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ಯದ ಪವರ್‌ಟ್ರೇನ್‌ ಹೊಂದಿದ್ದು, ಅದ್ಭುತ ಎಲೆಕ್ಟ್ರಿಕ್ ಕಾರ್ಯಕ್ಷಮತೆ ಒದಗಿಸುತ್ತವೆ.

Balehonnur News: ಯುವ ಪೀಳಿಗೆಯನ್ನು ಮರಳಿ ಕಾಫಿ ಕೖಷಿಯತ್ತ ಕರೆ ತನ್ನಿ, ಜೆನ್ ಜೀ ಪೀಳಿಗೆಗೆ ತಕ್ಕಂತೆ ಮಾರುಕಟ್ಟೆ ರೂಪಿಸಿ: ಕಾಫಿ ತಜ್ಞರ ಕರೆ

ಯುವ ಪೀಳಿಗೆಯನ್ನು ಮರಳಿ ಕಾಫಿ ಕೖಷಿಯತ್ತ ಕರೆ ತನ್ನಿ

ಆರ್ಥಿಕತೆಯ ಬಲದೊಂದಿಗೆ ಕಾಫಿ ಕ್ಷೇತ್ರಕ್ಕೆ ಆಧುನಿಕ ರೀತಿಯ ತಂತ್ರಜ್ಞಾವದ ಪರಿಚಯ ಹೆಚ್ಚಾಗ ಬೇಕಾಗಿದೆ. ಸುಸ್ಥಿರ ಮಾರುಕಟ್ಟೆಯತ್ತ ಬೆಲೆಗಾರರ ಚಿತ್ತ ಹೆಚ್ಚಾಗಬೇಕಾಗಿದೆ ಎಂದು ನುಡಿದ ಚಂಗಪ್ಪ, ಜೆನ್ ಜೀ ಕಾಲಘಟ್ಟದಲ್ಲಿರುವ ಈ ದಿನಗಳಲ್ಲಿ ಪರಿಸರ ಸ್ನೇಹಿ ಕಾಫಿಯನ್ನು ಹಚ್ಚು ಪ್ರಚುರಪಡಿಸಬೇಕು. ಜೆನ್ ಜೀ ಪೀಳಿಗೆಯ ಮನಸ್ಥಿತಿಗೆ ತಕ್ಕಂತೆ ಕಾಫಿಯನ್ನು ಮಾರುಟ್ಟೆಗೆ ಬಿಡುಗಡೆಗೊಳಿಸಬೇಕಾಗಿದೆ

Karnataka Politics: ರಾಜ್ಯ ಕಾಂಗ್ರೆಸ್ ಗೊಂದಲಕ್ಕೆ ನಾವಲ್ಲ ಕಾರಣ, ನೀವೇ ಪರಿಹರಿಸಿಕೊಳ್ಳಿ: ಕೈಚೆಲ್ಲಿದ ಮಲ್ಲಿಕಾರ್ಜುನ ಖರ್ಗೆ

ರಾಜ್ಯ ಕಾಂಗ್ರೆಸ್ ಗೊಂದಲ ಅವರೇ ಪರಿಹರಿಸಿಕೊಳ್ಳಲಿ: ಕೈಚೆಲ್ಲಿದ ಖರ್ಗೆ

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನುಡಿದಿದ್ದಾರೆ.

Freezing cold: ಕೊರೆಯುವ ಚಳಿಗೆ ಕಲ್ಯಾಣದ ಜನರು ತತ್ತರ

Freezing cold: ಕೊರೆಯುವ ಚಳಿಗೆ ಕಲ್ಯಾಣದ ಜನರು ತತ್ತರ

ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಬೆಳಗ್ಗೆಯೇ ದಟ್ಟ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ದಾರಿಯನ್ನೇ ಕಾಣದೆ ಪರದಾಡು ವಂತಾಗಿದೆ. ರಸ್ತೆಗಳಲ್ಲಿ ಸಂಚಾರ ವಿರಳವಾಗಿದ್ದು, ಬೆಳಗ್ಗೆ ಹೊತ್ತು ಜನ ಸಂಚಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ವಿಪರೀತ ಚಳಿಯಿಂದಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ವೃದ್ಧರ ಸ್ಥಿತಿ ದಯನೀಯ ವಾಗಿದ್ದು, ಶೀತ ಸಂಬಂಧಿತ ಕಾಯಿಲೆಗಳ ಭೀತಿ ಆವರಿಸಿದೆ.

Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ, ಅನ್ಯಧರ್ಮೀಯರಿಗೆ ಆಹ್ವಾನಕ್ಕೆ ವಿರೋಧ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ, ಅನ್ಯಮತೀಯರಿಗೆ ಆಮಂತ್ರಣಕ್ಕೆ ವಿರೋಧ

Kukke Subrahmanya Temple: ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದು ಸರಿಯಲ್ಲ. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರಿಗೆ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಆಹ್ವಾನ ನೀಡೋದು ಖಂಡನೀಯ ಎಂದು ಆಕ್ರೋಶ ಕೇಳಿಬಂದಿದೆ.

Karnataka Weather: ರಾಜ್ಯದಲ್ಲಿ ಶೀತಗಾಳಿ, ವಿಜಯಪುರದಲ್ಲಿ 6.90 ಡಿಗ್ರಿಗಿಳಿದ ತಾಪಮಾನ

ರಾಜ್ಯದಲ್ಲಿ ಶೀತಗಾಳಿ, ವಿಜಯಪುರದಲ್ಲಿ 6.90 ಡಿಗ್ರಿಗಿಳಿದ ತಾಪಮಾನ

ಶೀತಗಾಳಿಯ ಪ್ರಭಾವದಿಂದ ವಿಜಯಪುರ ಜಿಲ್ಲೆಯಲ್ಲಿ ತಾಪಮಾನ ಅತ್ಯಂತ ಕನಿಷ್ಠಕ್ಕಿಳಿದು ದಾಖಲೆ ಮಾಡಿದೆ. ನಿನ್ನೆ ರಾತ್ರಿ ಇಲ್ಲಿನ ತಾಪಮಾನ 6.9 ಡಿಗ್ರಿಗೆ ಇಳಿದಿದೆ. ಬೆಂಗಳೂರಿನಲ್ಲಿ ರಾತ್ರಿ ಸತತ 14 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಇಳಿಯುತ್ತಿದೆ. ಉತ್ತರ ಕರ್ನಾಟಕದ ಜಿಲ್ಲೆಗಳು ಚಳಿಯಿಂದ ಥರಥರ ನಡುಗುತ್ತಿವೆ. ದೇಹವನ್ನು ಬೆಚ್ಚಗೆ ಕಾಪಾಡಿಕೊಳ್ಳಲು ನಿವಾಸಿಗಳಿಗೆ ಸೂಚಿಸಲಾಗಿದೆ.

Tumkur News: ಕಾರ್ಯ ಒತ್ತಡ ನಡುವೆ ಖಾಸಗಿ ಬದುಕಿಗೂ ಆದ್ಯತೆ ನೀಡಿ

ಕಾರ್ಯ ಒತ್ತಡ ನಡುವೆ ಖಾಸಗಿ ಬದುಕಿಗೂ ಆದ್ಯತೆ ನೀಡಿ

ಸಾಮಾಜಿಕ ಕಳಕಳಿ ಹೊಂದಿರುದ ದಿನಪತ್ರಿಕೆಗಳನ್ನು ರೂಪಿಸುವ ಹೊಣೆ ಹೊತ್ತಿ ರುವ ಸಂಪಾದಕರು ಕಾರ್ಯ ಒತ್ತಡದ ನಡುವೆಯೂ ತಮ್ಮ ಕುಟುಂಬಕ್ಕಾಗಿ ಸಮಯ ಮೀಸ ಲಿಟ್ಟು ಅವರೊಂದಿಗೆ ಬೆರೆತು ಕುಟುಂಬದ ಕಲ್ಯಾಣಕ್ಕೆ ಪ್ರಯತ್ನಿಸಬೇಕು ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ(Pradesh Congress Committee Vice President Muralidhar Halappa) ಹೇಳಿದರು

Siddalinga Swamiji: ಹಳೆಯ ವಿದ್ಯಾರ್ಥಿಗಳೇ ಮಠದ  ನಿಧಿ: ಸಿದ್ಧಲಿಂಗ ಸ್ವಾಮೀಜಿ

ಹಳೆಯ ವಿದ್ಯಾರ್ಥಿಗಳೇ ಮಠದ ನಿಧಿ: ಸಿದ್ಧಲಿಂಗ ಸ್ವಾಮೀಜಿ

ಶ್ರೀಮಠದ ಬೆಳವಣಿಗೆಯ ಪ್ರತಿ ಹಂತದಲ್ಲು ಶ್ರೀಗಳ ಶ್ರಮ ಇದೆ. ಮಠದ ಮಕ್ಕಳ ಶ್ರೇಯೋಭಿವೃದ್ಧಿ ಗಾಗಿ ಅವರ ಜೀವನವನ್ನೇ ಸಮರ್ಪಿಸಿಕೊಂಡಿದ್ದರು. ಶಿವಕುಮಾರ ಶ್ರೀಗಳ ಮೇಲಿನ ಭಕ್ತಿ, ಶ್ರದ್ಧೆ, ಅಭಿಮಾನ, ಪ್ರೀತಿಯಿಂದ ಹಳೆಯ ವಿದ್ಯಾರ್ಥಿಗಳು ಈ ಸಮಾವೇಶಕ್ಕೆ ನಾಡಿನೆಲ್ಲಡೆಯಿಂದ ಆಗಮಿಸಿದ್ದಾರೆ. ಇದೊಂದು ಕೃತಜ್ಞತಾ ಸಭೆ ಅಂದರೆ ತಪ್ಪಾಗಲಾರದು

Ramadurga News: ಚಂದರಗಿ ಕ್ರೀಡಾ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ, ಪಾಲಕರ ದಿನಾಚರಣೆ

ಚಂದರಗಿ ಕ್ರೀಡಾ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ, ಪಾಲಕರ ದಿನಾಚರಣೆ

ಮಾಹಿತಿಯನ್ನು ಮಕ್ಕಳ ಮನದಲ್ಲಿ ತುಂಬುವುದು ಶಿಕ್ಷಣದ ಕೆಲಸವಲ್ಲ. ಮಕ್ಕಳಿಗೆ ಜೀವನದ ಅರಿವು ಮೂಡಿಸಿ, ಕ್ರೀಯಾಶೀಲರನ್ನಾಗಿ ಮಾಡುವುದು ನಿಜವಾದ ಶಿಕ್ಷಣ ಎಂದು ಅರಿತುಕೊಳ್ಳಬೇಕು. ಅಭ್ಯಾ ಸದ ಜೊತೆಗೆ ವಿದ್ಯಾರ್ಥಿಗಳು ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಕ್ರೀಡಾಪಟು ವಾಗಬೇಕು. ಶಿಕ್ಷಕ ಹಾಗೂ ಪಾಲಕರು ತಮ್ಮ ಮಕ್ಕಳ ಅಂತರಾಳದ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು

Spying Case: ಪಾಕ್‌ ಪರ ಬೇಹುಗಾರಿಕೆ, ಉಡುಪಿಯಲ್ಲಿ ಮೂರನೇ ವ್ಯಕ್ತಿ ಬಂಧನ

ಪಾಕ್‌ ಪರ ಬೇಹುಗಾರಿಕೆ, ಉಡುಪಿಯಲ್ಲಿ ಮೂರನೇ ವ್ಯಕ್ತಿ ಬಂಧನ

ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶದ ರೋಹಿತ್‌ ಮತ್ತು ಸಂತ್ರಿ ಎಂಬವರು ಇಲ್ಲಿಗೆ ದುರಸ್ತಿಗೆ ಬರುತ್ತಿದ್ದ ಭಾರತೀಯ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ ಮತ್ತಿತರ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಇದೀಗ ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು (Spying case) ಪೊಲೀಸರು ಭಾನುವಾರ ಬಂಧಿಸಿದ್ದಾರೆ.

MLA Byrathi Basavaraj: ರೌಡಿ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜುಗೆ ಲುಕ್‌ಔಟ್‌ ನೋಟಿಸ್‌ ಸಾಧ್ಯತೆ

ರೌಡಿ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜುಗೆ ಲುಕ್‌ಔಟ್‌ ನೋಟಿಸ್‌?

ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾಕ್ಕೆ ತೆರಳಿದ್ದು, ಅಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ 3 ತಂಡಗಳು ಅವರಿಗಾಗಿ 2-3 ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ. ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ.

Murder Case: ಧಾರವಾಡದಲ್ಲಿ ಮರ್ಯಾದೆಗೇಡು ಹತ್ಯೆ: ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳ ಥಳಿಸಿ ಕೊಂದ ತಂದೆ

ದಲಿತ ಯುವಕನ ಪ್ರೀತಿಸಿ ಮದುವೆಯಾಗಿ ತಂದೆಯಿಂದಲೇ ಹತ್ಯೆಯಾದ ಮಗಳು

ಯುವತಿ ಲಿಂಗಾಯತ ಸಮಾಜದವಳಾಗಿದ್ದರೆ ಯುವಕ ವಿವೇಕಾನಂದ ದಲಿತ ಸಮುದಾಯಕ್ಕೆ ಸೇರಿದ್ದ. ಹೀಗಾಗಿ ಯುವತಿ ಮನೆಯವರು ಮದುವೆಗೆ ವಿರೋಧ ಮಾಡಿದ್ದರು. ವಿವೇಕಾನಂದ ಆಕೆ ಜೊತೆ ಕಳೆದ ಜೂನ್ 19 ರಂದು ಹುಬ್ಬಳ್ಳಿಯಲ್ಲಿ ರಿಜಿಸ್ಟರ್ ವಿವಾಹವಾಗಿದ್ದ. ಯುವತಿ ಗರ್ಭಿಣಿಯಾಗಿದ್ದಳು. ಎರಡೂ ಕುಟುಂಬಗಳ ನಡುವೆ ಪೊಲೀಸರು ರಾಜಿ ಸಂಧಾನ ಮಾಡಿಸಿದ್ದರು. ಇದೀಗ ತಂದೆಯೇ ಮಗಳ ಕೊಲೆ ಮಾಡಿದ್ದಾನೆ.

Bagepally News: ಪೋಲಿಯೋ ಹನಿ ಪಡೆಯದ ಯಾವ ಮಗುವೂ ಸುರಕ್ಷಿತವಲ್ಲ: ಕೆ.ಟಿ.ವೀರಾಂಜನೇಯಲು

ಪೋಲಿಯೋ ಹನಿ ಪಡೆಯದ ಯಾವ ಮಗುವೂ ಸುರಕ್ಷಿತವಲ್ಲ

ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯ ವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಹನಿಯನ್ನು ತಪ್ಪದೇ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಪಾರು ಮಾಡಿ. ಪೋಲಿಯೋ ಹನಿ ಪಡೆಯದ ಯಾವ ಮಗುವೂ ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು

Bagepally News: ಪೋಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು: ಮಣಿಕಂಠ ಪ್ರಿಂಟರ್ಸ್ ನ ಮಾಲೀಕರಾದ ಬಿ.ಜಿ. ಶ್ರೀನಿವಾಸ ಜಿನ್ನಿ

ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು

ಪ್ರತಿಯೊಬ್ಬ ಮಕ್ಕಳಲ್ಲಿಯೂ ಒಂದೊಂದು ರೀತಿಯ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರ್ತಿಸಿ ಪ್ರೋತ್ಸ ಹಿಸುವ ಕೆಲಸವನ್ನು ಪೋಷಕರು ಮಾಡಬೇಕು. ಅಡಗಿರುವ ಪ್ರತಿಭೆಗಳನ್ನು ಹೊರಗೆ ತರಲು ಇಂತಹ ವೇದಿಕೆಗಳು ಬಹಳ ಅನುಕೂಲಕರವಾಗಿವೆ. ಇಂದಿನಿಂದ ಪ್ರತೀ ಭಾನುವಾರ ಚಿಣ್ಣರ ಕಲಾ ಉತ್ಸವ ಕಾರ್ಯಕ್ರಮ ನಡೆಯಲಿದೆ.

Bengaluru Power Cut: ಡಿ.23ರಿಂದ ಜ.11ವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ

ಡಿ.23ರಿಂದ ಜ.11ವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರಿನ 220/66/11ಕೆ.ವಿ ಇ.ಪಿ.ಐ.ಪಿ ಸ್ಟೇಷನ್‌ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -3 ರ ರಿಟ್ರೋಫಿಲ್ಲಿಂಗ್ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಹಿನ್ನೆಲೆಯಲ್ಲಿ ಡಿಸೆಂಬರ್‌ 23ರಂದು ಬೆಳಗ್ಗೆ 10 ಗಂಟೆಯಿಂದ ಜನವರಿ 11ರಂದು ಸಂಜೆ 5 ಗಂಟೆಯವರೆಗೆ ಹಲವು ಸ್ಥಳಗಳಲ್ಲಿ ಮಧ್ಯಂತರ ವಿದ್ಯುತ್‌ ವ್ಯತ್ಯಯವಾಗಲಿದೆ.

Loading...