ಶಾಲೆಯಲ್ಲಿ ಅರ್ಥಪೂರ್ಣ ಅಕ್ಷರಾಭ್ಯಾಸ, ಗುರುವಂದನೆ
ಗುರುಪೂರ್ಣಿಮೆಯನ್ನು ವ್ಯಾಸಪೂರ್ಣಿಮೆ ಎಂದೂ ಕರೆಯಲಾಗುತ್ತದೆ. ಮಹರ್ಷಿವ್ಯಾಸರು ಮಹಾ ಭಾರತ ಸೇರಿದಂತೆ ಅನೇಕ ಅಮೂಲ್ಯ ಗ್ರಂಥಗಳ ಮೂಲಕ ಸಮಾಜಕ್ಕೆ ಜ್ಞಾನ ಮತ್ತು ಮಾರ್ಗದರ್ಶನ ನೀಡಿದ್ದು, ಅವರ ಆದರ್ಶಗಳು ಇಂದಿಗೂ ಎಲ್ಲರಿಗೂ ದಾರಿದೀಪವಾಗಿವೆ. ಇಂತಹ ಪವಿತ್ರ ದಿನದಂದು ಮಕ್ಕಳಿಗೆ ಶಾಸ್ತ್ರೋಕ್ತವಾಗಿ ಅಕ್ಷರಾಭ್ಯಾಸ ಮಾಡಿಸಿರುವುದು ಸಂತಸದ ಸಂಗತಿಯಾಗಿದೆ.