ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Bengaluru News: ಇ.ಎಸ್.ಐ ಆಸ್ಪತ್ರೆ ಆವರಣದಲ್ಲಿ ವಿಶ್ವ ತೊನ್ನುರೋಗ ದಿನದ ಅಂಗವಾಗಿ ಜನ ಜಾಗೃತಿ

ಇ.ಎಸ್.ಐ ಆಸ್ಪತ್ರೆ ಆವರಣದಲ್ಲಿ ವಿಶ್ವ ತೊನ್ನುರೋಗ ದಿನದ ಅಂಗವಾಗಿ ಜನ ಜಾಗೃತಿ

ವಿಶ್ವ ತೊನ್ನು ರೋಗ ದಿನದ ಅಂಗವಾಗಿ ರಾಜಾಜಿನಗರ ಇ ಎಸ್ ಐ ಸಿ ಆಸ್ಪತ್ರೆಯ ಆವರಣದಲ್ಲಿ ಜನ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ವೈದ್ಯಕೀಯ ವಿದ್ಯಾರ್ಥಿಗಳಿಂದ ತೊನ್ನು ರೋಗದ ಬಗ್ಗೆ ಕಿರು ನಾಟಕ ಪ್ರದರ್ಶಿಸಿದರು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ರೋಗಿಗಳು, ವಿದ್ಯಾರ್ಥಿಗಳು, ಭಾಗವಹಿಸಿದ್ದರು.

KV Prabhakar:  ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ: ಕೆ.ವಿ.ಪ್ರಭಾಕರ್

ಪತ್ರಕರ್ತರಿಗೆ ಮಗುವಿನ ಮನಸ್ಸು ಮುಖ್ಯ: ಕೆ.ವಿ.ಪ್ರಭಾಕರ್

ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿ ಮಗು ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

DK Shivakumar:ವಿಶ್ವದಲ್ಲೇ ಅತಿ ಎತ್ತರದ ಮೇಲ್ಗಾಲುವೆ ಗುಬ್ಬಿಯಲ್ಲಿ ನಿರ್ಮಾಣ; ಡಿಕೆಶಿ ಮೆಚ್ಚುಗೆ

ಎತ್ತಿನಹೊಳೆ ಯೋಜನೆಯ ಬೃಹತ್ ಮೇಲ್ಗಾಲುವೆ ಪರಿಶೀಲಿಸಿದ ಡಿಕೆಶಿ

ಎತ್ತಿನಹೊಳೆ ಯೋಜನೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಬಳಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಬೃಹತ್ ಮೇಲ್ಗಾಲುವೆ ಕಾಮಗಾರಿಯನ್ನು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ವೀಕ್ಷಿಸಿದರು. ವಿಶ್ವದಲ್ಲೇ ಅತಿ ಎತ್ತರ (40 ಮೀಟರ್) ಏಷ್ಯಾದಲ್ಲೇ ಅತಿ ಉದ್ದದ (10.47 ಕಿ. ಮೀ.) ಮೇಲ್ಗಾಲುವೆ ಇದಾಗಿದೆ.

ಕಿಡ್ನಿ ಕಸಿಗಾಗಿ ದೇಶದಲ್ಲೇ ಮೊದಲ ರೊಬೋಟ್‌ ನೆರವಿನ “ಟ್ರೀಟ್‌ ಟೆಕ್ನಾಲಜಿ” ಪರಿಚಯ

ಕಿಡ್ನಿ ಕಸಿಗಾಗಿ ಮೊದಲ ರೊಬೋಟ್‌ ನೆರವಿನ “ಟ್ರೀಟ್‌ ಟೆಕ್ನಾಲಜಿ” ಪರಿಚಯ

ಟ್ರೀಟ್‌ ಎಂಬ ನೂತನ ಟೆಕ್ನಾಲಜಿ ಕಿಡ್ನಿ ಕಸಿಯನ್ನು ಅತ್ಯಂತ ಸುಲಭಗೊಳಿಸಿದೆ. ರೋಬೋಟ್-ಸಂಯೋಜಿತ ಮೂತ್ರಪಿಂಡದ ಕಸಿ ನಡೆಸುವ ಈ ಅತ್ಯಾಧುನಿಕ ಉಪಕ್ರಮವು ಏಕಕಾಲದಲ್ಲೇ ದಾನಿ ಮತ್ತು ಸ್ವೀಕರಿಸುವವರಿಗೆ ಎರಡು ರೋಬಾಟ್‌ ನೆರವಿನಿಂದ ಕಿಡ್ನಿ ತೆಗೆದು , ಕಿಡ್ನಿ ಕಸಿ ಮಾಡುವ ಶಸ್ತ್ರಚಿಕಿತ್ಸೆಯನ್ನು ನಿಖರವಾಗಿ ನಡೆಸಲಿದ್ದು, ಸಂಪೂರ್ಣ ಯಶಸ್ಸು ನೀಡಲಿದೆ. ಈ ವಿನೂತನ ಪ್ರಯತ್ನದಿಂದ ಚೇತರಿಕೆಯ ಸಮಯವೂ ಕಡಿಮೆ ಆಗಲಿದ್ದು, ಶಸ್ತ್ರಚಿಕಿತ್ಸೆ ಅತ್ಯಂತ ನಿಖರವಾಗಿರಲಿದೆ

Nikhil Kumaraswamy: ರಾಮನಗರದಿಂದಲೇ ಸ್ಪರ್ಧಿಸುತ್ತೇನೆ: ನಿಖಿಲ್ ಕುಮಾರಸ್ವಾಮಿ ಘೋಷಣೆ

ರಾಮನಗರದಿಂದಲೇ ಸ್ಪರ್ಧಿಸುತ್ತೇನೆ: ನಿಖಿಲ್ ಕುಮಾರಸ್ವಾಮಿ

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಆರನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಚುನಾವಣೆಗೆ ನಿಲ್ಲುವ ಸಂದರ್ಭ ಬಂದರೆ ರಾಮನಗರದಲ್ಲಿಯೇ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Vijaykumar Chandaragi: ವರದಿಗಾರ ವಿಜಯಕುಮಾರ್ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ

ವಿಜಯಕುಮಾರ್ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ

ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಉದಯವಾಣಿಯ ಬೆಂಗಳೂರಿನ ವರದಿಗಾರ ವಿಜಯಕುಮಾರ್ ಚಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜು. 5ರಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Anti-Drug Day: "ಮಾದಕ ವಸ್ತುಗಳಿಂದ ದೂರವಿರಿ ನಿಮ್ಮ ಜೀವನ ಕಾಪಾಡಿಕೊಳ್ಳಿ" ; ಶಿರಸಿಯಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಮಾದಕ ವಸ್ತುಗಳ ಕುರಿತು ಜಾಗೃತಿ;ಶಿರಸಿಯಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಇಂದಿನ ಯುವ ಜನತೆ ಯಾವುದೇ ದುಶ್ಚಟಕ್ಕೆ ಒಳಗಾಗದೆ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತೆ ಕೆ.ವಿ.ಕಾವ್ಯಾರಾಣಿ ಹೇಳಿದರು. ಅವರು ಗುರುವಾರ ನಗರದ ರಂಗಧಾಮದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ಶಿರಸಿ ಉಪವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ, ಮಾತನಾಡಿದರು.

Kannada Sahitya Parishat: ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ

ಕಸಾಪ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ

Kannada Sahitya Parishat: ಲೇಖಕ, ಕನ್ನಡ ಹೋರಾಟಗಾರ, ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರೂ ಕೂಡ ಆಗಿರುವ ನೇ. ಭ ರಾಮಲಿಂಗ ಶೆಟ್ಟಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Karnataka High Court: ಸಚಿವ ಡಿ.ಸುಧಾಕರ್ ವಿರುದ್ಧ ದಾಖಲಾಗಿದ್ದ ಎಸ್‌ಸಿ- ಎಸ್‌ಟಿ ದೌರ್ಜನ್ಯ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಸಚಿವ ಡಿ.ಸುಧಾಕರ್ ವಿರುದ್ಧ ದಾಖಲಾಗಿದ್ದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಪರಿಶಿಷ್ಟ ಕುಟುಂಬದ ಜಮೀನು ಕಬಳಿಸಿ, ಅವರ ಮೇಲೆ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ (Karnataka High court) ಬುಧವಾರ ರದ್ದುಪಡಿಸಿ ಆದೇಶಿಸಿದೆ.

Murder Case: ಅಡುಗೆ ವಿಚಾರಕ್ಕೆ ತಗಾದೆ ತೆಗೆದು ತುರಿಮಣೆಯಿಂದ ಪತ್ನಿಯನ್ನು ಕೊಂದ ಪತಿ

ಅಡುಗೆ ವಿಚಾರಕ್ಕೆ ತಗಾದೆ ತೆಗೆದು ತುರಿಮಣೆಯಿಂದ ಪತ್ನಿಯನ್ನು ಕೊಂದ ಪತಿ

Murder Case: ತಿಮ್ಮಮ್ಮ(65) ಹತ್ಯೆಯಾದ ಮಹಿಳೆ. ರಂಗಯ್ಯ ಕೊಲೆ ಮಾಡಿದ ಆರೋಪಿ. ಹತ್ಯೆಯ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ ಸಿಐಡಿ ರಿಲೀಫ್‌

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ ಸಿಐಡಿ ರಿಲೀಫ್‌

ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಸೂರಜ್ ರೇವಣ್ಣ (Suraj Revanna Case) ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್​​ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.

Drug mafia: ಬೆಂಗಳೂರಿನಲ್ಲಿ ಗಾಂಜಾಮಿಶ್ರಿತ ಜೆಲ್ಲಿ ಚಾಕೊಲೇಟ್‌ ಪತ್ತೆ, ಗ್ಯಾಂಗ್‌ನ ಇಬ್ಬರ ಬಂಧನ

ಬೆಂಗಳೂರಿನಲ್ಲಿ ಗಾಂಜಾಮಿಶ್ರಿತ ಜೆಲ್ಲಿ ಚಾಕೊಲೇಟ್‌ ಪತ್ತೆ, ಇಬ್ಬರ ಬಂಧನ

Drug mafia: ಗಾಂಜಾದ ಭಟ್ಟಿ ಇಳಿಸಿರುವ ರಸವನ್ನೇ ಜೆಲ್ಲಿ ಚಾಕೊಲೇಟ್ ಜೊತೆ ಬೆರೆಸುತ್ತಿರುವುದು ಪತ್ತೆ ಆಗಿದೆ. ಒಂದು ಪ್ಯಾಕ್​ ಜೆಲ್ಲಿ ಗಾಂಜಾಗೆ ಬರೋಬ್ಬರಿ 6 ಸಾವಿರ ರೂ. ಇದೆ. ಈ ಜೆಲ್ಲಿ ಬಾಯಿಗೆ ಇಟ್ಟಾಗ ಕರಗುತ್ತದೆ ಹಾಗೂ ಮತ್ತು ತರಿಸುತ್ತದಂತೆ. ಗಾಂಜಾ ಸೊಪ್ಪು, ಹ್ಯಾಶ್ ಆಯಿಕ್​​ಗಿಂತ ಈ ಜೆಲ್ಲಿ ಗಾಂಜಾ ಕಿಕ್ಕು ಹೆಚ್ಚು ಎನ್ನಲಾಗುತ್ತಿದೆ.

Shiradi Ghat: ಶಿರಾಡಿ ಘಾಟಿಯಲ್ಲಿ ಭೂಕುಸಿತದಿಂದ ರಸ್ತೆ ಬಂದ್, ಬೆಂಗಳೂರು- ಮಂಗಳೂರು ಪ್ರಯಾಣಕ್ಕೆ ಬದಲಿ ಮಾರ್ಗ

ಶಿರಾಡಿ ಘಾಟಿಯಲ್ಲಿ ಭೂಕುಸಿತದಿಂದ ರಸ್ತೆ ಬಂದ್, ಬದಲಿ ಮಾರ್ಗ ಸೂಚನೆ

Shiradi Ghat: ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ​​​​ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

Namma Metro: ಇನ್ನು ಮುಂದೆ ನಮ್ಮ ಮೆಟ್ರೋ ಟಿಕೆಟ್ ಈ ಐದು ಆ್ಯಪ್‌ಗಳಲ್ಲೂ ಲಭ್ಯ

ಇನ್ನು ಮುಂದೆ ನಮ್ಮ ಮೆಟ್ರೋ ಟಿಕೆಟ್ ಈ ಐದು ಆ್ಯಪ್‌ಗಳಲ್ಲೂ ಲಭ್ಯ

Namma Metro: ಪ್ರಸ್ತುತ ವಾಟ್ಸ್​ಆ್ಯಪ್​ ಚಾಟ್ ಬಾಟ್ ಹಾಗೂ ಪೇಟಿಎಂನಲ್ಲಿ ಮಾತ್ರ ಮೆಟ್ರೋ ಟಿಕೆಟ್ ಖರೀದಿಗೆ ಅವಕಾಶವಿತ್ತು. ರ್ಯಾಪಿಡೋ ಹಾಗೂ ನಮ್ಮ ಯಾತ್ರಿ ಆ್ಯಪ್​​ಗಳಲ್ಲಿ ಮೆಟ್ರೋ ಟಿಕೆಟ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಟಿಕೆಟ್​ಗಾಗಿ ಪ್ರಯಾಣಿಕರು ಮೆಟ್ರೋ ನಿಲ್ದಾಣಗಳಲ್ಲಿ ಸರದಿ ನಿಲ್ಲುವುದನ್ನು ತಪ್ಪಿಸಲು ಬಿಎಂಆರ್​​ಸಿಎಲ್ ಈ ಕ್ರಮ ಕೈಗೊಂಡಿದೆ.

Electricity Bill: ಕನಿಷ್ಠ ವಿದ್ಯುತ್‌ ಬಳಕೆ ಮೇಲೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್‌ ಆದೇಶ

ಕನಿಷ್ಠ ವಿದ್ಯುತ್‌ ಬಳಕೆ ಮೇಲೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್‌ ಆದೇಶ

ಕರ್ನಾಟಕ ವಿದ್ಯುತ್ (ಬಳಕೆಯ ಮೇಲಿನ ತೆರಿಗೆ)​ ಕಾಯ್ದೆ 1959ರ ಸೆಕ್ಷನ್​ 3 (1) ಗೆ 2003ರಲ್ಲಿ ಮತ್ತು 2004ರಲ್ಲಿ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದ್ದು, ವಿದ್ಯುತ್​ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸಿದೆ. ಈ ತಿದ್ದುಪಡಿಯು ನಿಯಮದ ವಿರುದ್ಧವಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಮೆಸಸ್​ ಸೋನಾ ಸಿಂಥೆಟೆಕ್ ಕಂಪನಿ ಅರ್ಜಿ ಸಲ್ಲಿಸಿದ್ದವು.

Kannada Language: ಎಲ್ಲಾ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ರಾಜ್ಯ ಸರಕಾರ ಮಹತ್ವದ ಆದೇಶ

ಎಲ್ಲಾ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ರಾಜ್ಯ ಸರಕಾರ ಮಹತ್ವದ ಆದೇಶ

Kannada Language: ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಆದೇಶಿಸಲಾಗಿದೆ.

Karnataka Weather: ಆರೆಂಜ್‌ ಅಲರ್ಟ್; ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

ಆರೆಂಜ್‌ ಅಲರ್ಟ್; ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

Karnataka Weather: ಜೂನ್‌ 26ರಂದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಅದೇ ರೀತಿ ಜೂನ್‌ 27 ಮತ್ತು 28ರಂದು ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Chikkaballapur News: ಭೂ ಸ್ವಾಧೀನ ಕೈ ಬಿಡಬೇಕು ಎಂದು ಆಗ್ರಹಿಸಿ ದೇವನಹಳ್ಳಿ ಚಲೋ ಹೊರಟ ಕೆಪಿಆರ್‌ಎಸ್ ಸದಸ್ಯರು

ಭೂ ಸ್ವಾಧೀನ ಕೈ ಬಿಡಬೇಕು ಎಂದು ಆಗ್ರಹ

೨೦೨೨ರ ಜನವರಿಯಲ್ಲಿ ಆಗಿನ ಬಿಜೆಪಿ ಸರ್ಕಾರ, ಚನ್ನರಾಯಪಟ್ಟಣದ ೧೩ ಗ್ರಾಮಗಳ ೧೭೭೭ ಎಕರೆ ಭೂಮಿಯನ್ನು ಕಂಪನಿಗಳಿಗೆ ಮಾರಲು ಅಧಿಸೂಚನೆ ಹೊರಡಿಸಿತ್ತು. ಈ ಭೂಮಿಯಲ್ಲಿ ೮೦೦ ಕುಟುಂಬಗಳು ವಾಸಿಸುತ್ತಿದ್ದು, ಬಹುತೇಕರು ಕೃಷಿ, ಹೈನುಗಾರಿಕೆ, ಕೋಳಿಸಾಕಣೆಯನ್ನೇ ಜೀವನಾಧಾರ ವಾಗಿಸಿಕೊಂಡಿದ್ದಾರೆ. ಈ ಭೂಮಿಯಲ್ಲಿ ಅವರ ಪೂರ್ವಿಕರ ಸಮಾಧಿಗಳಿದ್ದು, ತೋಟಗಳನ್ನು ಬೆಳೆಸಿ, ನೀರಾವರಿ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಜನಪ್ರತಿನಿಧಿಯಾಗಿ ನನ್ನ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ: ಶಾಸಕ ಪ್ರದೀಪ್ ಈಶ್ವರ್

ಜನಪ್ರತಿನಿಧಿಯಾಗಿ ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ

ಜನರಿಂದ ಆಯ್ಕೆಯಾಗಿರುವ ಎಂಎಲ್‌ಎ ಜನಸಾಮಾನ್ಯರನ್ನು ಸಂಪರ್ಕಿಸಿ ಅವರಿಗೆ ಬೇಕಾದ ಮೂಲ ಸೌಕರ್ಯಗಳನ್ನು ಅವರಿದ್ದಲ್ಲಿಗೇ ತೆರಳಿ, ಅಹವಾಲು ಆಲಿಸಿ ಸೌಕರ್ಯ ಕಲ್ಪಿಸು ವುದೇ ಒಬ್ಬ ಜನಪ್ರತಿನಿಧಿಯ ಮುಖ್ಯ ಕೆಲಸ. ಈ ನಿಟ್ಟಿನಲ್ಲಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಕುಗ್ರಾಮಗಳಲ್ಲಿ ಕೂಡ ಜನ ಸಾಮಾನ್ಯರಿಗೆ ಎಲ್ಲ ರೀತಿಯ ಸೌಲಭ್ಯಗಳು ಮರೀಚಿಕೆ ಯಾಗಿವೆ.

ನೀರಜ್ ಚೋಪ್ರಾ ಕ್ಲಾಸಿಕ್ 2025 ರ ಅಧಿಕೃತ ಆತಿಥ್ಯ ಪಾಲುದಾರರಾಗಿ ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್‌ ನೊಂದಿಗೆ ರಾಡಿಸನ್ ಹೋಟೆಲ್ ಗ್ರೂಪ್ ಸಹಯೋಗ ಘೋಷಣೆ

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್‌ ನೊಂದಿಗೆ ರಾಡಿಸನ್ ಹೋಟೆಲ್ ಗ್ರೂಪ್ ಸಹಯೋಗ

ರಾಡಿಸನ್ ಹೋಟೆಲ್, ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ವಿಶೇಷ ವಸತಿ ಹಾಗೂ ಆತಿಥ್ಯ ಒದಗಿಸಲಿದೆ. ಕ್ರೀಡಾಕೂಟಕ್ಕೆ ಮುಂಚಿತವಾಗಿ ವಿಶ್ರಾಂತಿ, ಚೇತರಿಕೆ ಮತ್ತು ಸಿದ್ಧತೆಗೆ ಅಗತ್ಯ ವ್ಯವಸ್ಥೆ ಮಾಡಿಕೊಡಲಿದೆ. ಕ್ರೀಡಾ ಆತಿಥ್ಯ ಮತ್ತು ಕ್ರೀಡಾಪಟು-ಕೇಂದ್ರಿತ ಮೂಲಸೌಕರ್ಯದಲ್ಲಿ ತನ್ನ ಪರಿಣತಿಯನ್ನು ಬಳಸಿಕೊಂಡು ಎಲ್ಲಾ ಸವಲತ್ತುಗಳನ್ನು ಆಟಗಾರರಿಗೆ ನೀಡಲಿದೆ

Self Harming: ಬೆಂಗಳೂರಲ್ಲಿ ಘೋರ ಘಟನೆ; ಪುತ್ರ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ

ಪುತ್ರ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ

Self Harming: ಸೊಸೆ ಜತೆ ಹೊಂದಾಣಿಕೆಯಾಗದ ಕಾರಣ ಬೇರೆ ಮನೆ ಮಾಡಿಕೊಡುವಂತೆ ಮಗನಿಗೆ ತಂದೆ, ತಾಯಿ ಕೇಳಿದ್ದರು. ಆದರೆ, ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ನೊಂದ ವೃದ್ಧ ದಂಪತಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆ ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Pralhad Joshi: ಬಾಹ್ಯಾಕಾಶಕ್ಕೆ ಪಸರಿಸಿತು ವಿದ್ಯಾಕಾಶಿ ವಿಜ್ಞಾನ ಸ್ಫೂರ್ತಿ: ಪ್ರಲ್ಹಾದ್‌ ಜೋಶಿ ಸಂತಸ

ಬಾಹ್ಯಾಕಾಶಕ್ಕೆ ಪಸರಿಸಿತು ವಿದ್ಯಾಕಾಶಿ ವಿಜ್ಞಾನ ಸ್ಫೂರ್ತಿ: ಜೋಶಿ

Pralhad Joshi: ಸುದೀರ್ಘ 41 ವರ್ಷಗಳ ಬಳಿಕ ಬಾಹ್ಯಾಕಾಶಕ್ಕೆ ಭಾರತೀಯ ಗಗನಯಾನಿ ತೆರಳುತ್ತಿರುವುದು ಭಾರತೀಯರೆಲ್ಲರಿಗೂ ಹೆಮ್ಮೆಯ ಸಂಗತಿ. ಅಂತೆಯೇ ಇದರಲ್ಲಿ ಐಐಟಿ ಧಾರವಾಡ ಮತ್ತು ಯುಎಎಸ್ ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಸಹಯೋಗ ಇರುವುದು ಧಾರವಾಡಕ್ಕೆ ಹೆಮ್ಮೆಯ ಗರಿ ಮೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Bandi Devara Utsava: ದಸರಾದಂತೆ ʼಬಂಡಿದೇವರ ಉತ್ಸವʼ ಅತ್ಯಂತ ಸಂಭ್ರಮದಿಂದ ಆಚರಿಸಬೇಕು: ಜಯರಾಮ್‌ ರಾಯಪುರ

ಬಂಡಿದೇವರ ಉತ್ಸವ ಅತ್ಯಂತ ಸಂಭ್ರಮದಿಂದ ಆಚರಿಸಬೇಕು

Bandi Devara Utsava: ನಾಡಪ್ರಭು ಕೆಂಪೇಗೌಡರು ತಮ್ಮ ಜನಾಂಗದವರಿಗಾಗಿ ಬಂಡಿದೇವರ ಉತ್ಸವವನ್ನು ಆಚರಿಸುತ್ತಿದ್ದರು. ಹಾಗೆಯೇ ಯಲಹಂಕ ಭಾಗದವರಿಗೆ ಸಂಬಂಧಪಟ್ಟಂತೆ ಉಯ್ಯಾಲೆ ಉತ್ಸವವನ್ನು ಆಚರಿಸುತ್ತಿದ್ದರು. ಆದರೆ ಈ ಆಚರಣೆಗಳು, ವಿಚಾರಗಳು ಇಂದಿನ ಜನರಿಗೆ ಗೊತ್ತಿಲ್ಲ. ಮತ್ತೆ ಆ ಆಚರಣೆಗಳು ನಡೆಯಬೇಕು. ನಮ್ಮ ಬೇರು ಇನ್ನಷ್ಟು ಗಟ್ಟಿಯಾಗಬೇಕು, ಜಾತ್ಯತೀತ, ಸಾಂಸ್ಕೃತಿಕ ಆಚರಣೆಗಳು ಜನರನ್ನು ಬೆಸೆಯಬೇಕು ಎಂದು ಹಿರಿಯ ಐಆರ್‌ಎಸ್ ಅಧಿಕಾರಿ ಹಾಗೂ ಸಮಿತಿಯ ಗೌರವಾಧ್ಯಕ್ಷ ಜಯರಾಮ್‌ ರಾಯಪುರ ತಿಳಿಸಿದ್ದಾರೆ.

Mango Procurement: ಮಾವು ಖರೀದಿಗೆ ರಾಜ್ಯ ಸರ್ಕಾರ ಅನುಮತಿ; ಎಕರೆಗೆ 20 ಕ್ವಿಂಟಲ್‌ ಮಿತಿ

ಮಾವು ಖರೀದಿಗೆ ರಾಜ್ಯ ಸರ್ಕಾರ ಅನುಮತಿ; ಎಕರೆಗೆ 20 ಕ್ವಿಂಟಲ್‌ ಮಿತಿ

Mango Procurement: ಕೇಂದ್ರ ಸರ್ಕಾರವು ಕರ್ನಾಟಕದ ರೈತರಿಂದ 2.5 ಲಕ್ಷ ಟನ್ ಪ್ರಮಾಣದ ಮಾವು ಖರೀದಿಸಲು ಪ್ರತಿ ಕ್ವಿಂಟಲ್‌ಗೆ MIP (ಮಾರುಕಟ್ಟೆ ಮಧ್ಯಪ್ರವೇಶ ದರ) 1,616 ರೂ. ನಿಗದಿಪಡಿಸಿ ಅನುಮೋದನೆ ನೀಡಿತ್ತು. ಹೀಗಾಗಿ ಯೋಜನೆ ಅನುಷ್ಠಾನ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸಹಕಾರ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.