ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Janivara Row: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣದ ವಿಚಾರಣೆಗೆ ತನಿಖಾ ತಂಡ ರಚನೆ

ಜನಿವಾರ ತೆಗೆಸಿದ ಪ್ರಕರಣದ ವಿಚಾರಣೆಗೆ ತನಿಖಾ ತಂಡ ರಚನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣದ ತನಿಖೆಗಾಗಿ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು. ಶೈಕ್ಷಣಿಕ ಸಾಧನೆ, ಶಿಸ್ತು ಮತ್ತು ಪರಿಶ್ರಮದ ಸಮನ್ವಯಕ್ಕೆ ಪ್ರತೀಕ ವಾಗಿರುವ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು, ಈ ಸಾಲಿನ ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ ದಾಖಲಿಸಿ ಮತ್ತೊಮ್ಮೆ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ.

Chikkaballapur News: ಶಾಸಕರ ವಿರುದ್ಧ ಮಾತನಾಡುವವರಿಗೆ ಕಠಿಣ ಕ್ರಮವಾಗಲಿ: ನಾಗಭೂಷಣ್ ಒತ್ತಾಯ

ಶಾಸಕರ ವಿರುದ್ಧ ಮಾತನಾಡುವವರಿಗೆ ಕಠಿಣ ಕ್ರಮವಾಗಲಿ

ನಾನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಆಯ್ಕೆಯಾದ ಸಂದರ್ಭದಲ್ಲಿ ನಡೆದ ಮೊದಲ ಸಭೆಯಲ್ಲಿ ಭರಣಿ ವೆಂಕಟೇಶ್ ಭಾಗಿಯಾಗಿದ್ದರು. ಆಗಲೇ ಟಿಎಪಿಸಿಎಂಎಸ್ ಚುನಾವಣೆ ಬಂದಿತ್ತು. ಅವುಲ ರೆಡ್ಡಿ ಕೂಡ ಇದ್ದರು. ಚುನಾವಣೆಗೆ ಎಷ್ಟು ಖರ್ಚಾಗಬಹುದು ಎಂದು ಕೇಳಿದವರು, ಅದೇ ಮೊದಲು ಅದೇ ಕೊನೆ ಅವರು ಈ ಕಡೆ ಬರಲೇಯಿಲ್ಲ. ಆವುಲರೆಡ್ಡಿ ಕೂಡ ಬರಲಿಲ್ಲ. ಈಗ ನೋಡಿದರೆ ಯಾವ ಅಭ್ಯರ್ಥಿ ಯನ್ನು ಗೆಲ್ಲಿಸಲಿಲ್ಲ, ಎಂಎಲ್‌ಎ ಇಂದಾಗಿ ಸೋತರು ಎಂದು ಮಾತನಾಡುತ್ತಾರೆ

Students honored: ಎಸ್.ಎಸ್.ಎಲ್.ಸಿ ಫಲಿತಾಂಶ : ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಎಸ್.ಎಸ್.ಎಲ್.ಸಿ ಫಲಿತಾಂಶ : ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ತಾಲೂಕಿನ ಮಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ  ಸತತ ಎರಡನೇ ವರ್ಷವೂ ಶೇ.100ರಷ್ಟು ಫಲಿತಾಂಶದ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ 14 ವಿದ್ಯಾರ್ಥಿ ಗಳಲ್ಲಿ ಒಬ್ಬ ವಿದ್ಯಾರ್ಥಿನಿ ಅತ್ಯುನ್ನತ ದರ್ಜೆಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ದರ್ಜೆ ಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

Tumkur News: ಶೌಚಾಲಯದಲ್ಲಿ ಸಿರಿಂಜ್ ಪತ್ತೆ; ತುಮಕೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಡೋಪಿಂಗ್‌ ಶಂಕೆ

ಸಿರಿಂಜ್ ಪತ್ತೆ; ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಡೋಪಿಂಗ್‌ ಶಂಕೆ

National Junior Athletics in Tumkur: ತುಮಕೂರಿನ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಜೂನಿಯರ್ ಅಂಡರ್-20 ಅಥ್ಲೆಟಿಕ್ಸ್ ಫೆಡರೇಶನ್ ಕ್ರೀಡಾಕೂಟ ಆಯೋಜಿಸಲಾಗಿದೆ.ಕ್ರೀಡಾಂಗಣದ ಶೌಚಾಲಯದಲ್ಲಿ ಬಳಸಿದ ಸ್ಥಿತಿಯಲ್ಲಿ ಸಿರಿಂಜ್ ಹಾಗೂ ಸೂಜಿಗಳು ಪತ್ತೆಯಾಗಿರುವುದರಿಂದ ಡೋಪಿಂಗ್ ಶಂಕೆ ವ್ಯಕ್ತವಾಗಿದೆ.

CHIMUL: ನೂತನ ಒಕ್ಕೂಟ ಚಿಮುಲ್ ಪ್ರಸ್ತುತ 70 ಕೋಟಿ ಲಾಭದಲ್ಲಿದೆ : ಚಿಮುಲ್ ಅಧ್ಯಕ್ಷ ಮಂಜುನಾಥರೆಡ್ಡಿ ಹರ್ಷ

ನೂತನ ಒಕ್ಕೂಟ ಚಿಮುಲ್ ಪ್ರಸ್ತುತ 70 ಕೋಟಿ ಲಾಭದಲ್ಲಿದೆ

ಕೋಲಾರದಿಂದ ಒಕ್ಕೂಟ ಬೇರ್ಪಟ್ಟಾಗ ಹಾಳಾಗುತ್ತದೆ ಎಂದವರು ಕೂಡ ಇದ್ದಾರೆ. ನಮ್ಮ ಒಕ್ಕೂಟ ದಲ್ಲಿ 60/70 ಕೋಟಿ ಹಣ ಇದೆ.ಉಸ್ತುವಾರಿ ಸಚಿವರಾದಿಯಾಗಿ ಎಲ್ಲರೂ ಇದರ ಬೆಳವಣಿಗೆಗೆ ಶ್ರಮಿಸು ತ್ತಿದ್ದಾರೆ. ಇಡೀ ರಾಜ್ಯದಲ್ಲಿಯೇ 36.90 ಪೈಸೆ ರೈತರ ಖಾತೆಗೆ ಜಮಾ ಮಾಡುತ್ತಿರುವ ಏಕೈಕ ಒಕ್ಕೂಟ ನಮ್ಮದು. ನಮ್ಮನ್ನು ನೋಡಿ ಕೋಲಾರ ಸೇರಿ ಉಳಿದ ಒಕ್ಕೂಟಗಳು ಬೆಲೆ ಏರಿಸಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಸಿ; ಕೇಂದ್ರ ರಕ್ಷಣಾ ಸಚಿವರಿಗೆ ಡಿ.ಕೆ.ಶಿವಕುಮಾರ್‌ ಮನವಿ

ಬೆಂಗಳೂರಿನಲ್ಲಿ ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಕೆಗೆ ಡಿಕೆಶಿ ಮನವಿ

DK Shivakumar: ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿದ್ದು, ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.

ಡಾ.ರಾಜ್ ಕುಮಾರ್ ರವರ ಸರಳ ಜೀವನ ಶೈಲಿ, ಮೌಲ್ಯಗಳನ್ನು ಎಲ್ಲರೂ ಪಾಲಿಸಬೇಕು: ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್*

ಡಾ.ರಾಜ್ ರವರ ಸರಳ ಜೀವನ ಶೈಲಿ, ಮೌಲ್ಯಗಳನ್ನು ಎಲ್ಲರೂ ಪಾಲಿಸಬೇಕು

ಡಾ. ರಾಜಕುಮಾರ್ ಅವರು ನಟಿಸಿದ ಚಿತ್ರ ಕಥೆಗಳು ಸಾಮಾಜಿಕ ಸಮಸ್ಯೆಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಸಂದೇಶಗಳುನ್ನು ನೀಡುವ ರೀತಿಯಲ್ಲಿ ಮೂಡಿ ಬರುತ್ತಿದ್ದವು. ಅಭಿನಯ ವನ್ನೇ ತಮ್ಮ ಜೀವನದ ಉಸಿರಾಗಿಸಿಕೊಂಡಿದ್ದ ಅವರು ಯಾವುದೇ ರೀತಿಯ ಪಾತ್ರ ನೀಡಿ ದರೂ ಸಹ ನೋಡುಗರಿಗೆ ಮನಮುಟ್ಟುವ ಹಾಗೆ ತಲುಪಿಸುವ ಕಲೆ ಅವರಲ್ಲಿತ್ತು

Internal Reservation: ಒಳಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರ; ಎಲ್ಲಾ ಸಮುದಾಯಗಳಿಗೂ ಸಮಾನ ನ್ಯಾಯ ಎಂದ ಸಿಎಂ

ಒಳಮೀಸಲಾತಿಯಿಂದ ಎಲ್ಲಾ ಸಮುದಾಯಗಳಿಗೂ ಸಮಾನ ನ್ಯಾಯ: ಸಿಎಂ

ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗದಿಪಡಿಸಿ ಪರಿಶಿಷ್ಟ ಜಾತಿಗೆ ಶೇ.15 ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ನಿರ್ಧಾರದಿಂದ ಎಲ್ಲ ಸಮುದಾಯಗಳಿಗೂ ಸಮಾನ ನ್ಯಾಯ ಸಿಗಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿಂಚೋಳಿಯಲ್ಲಿ ಭೀಕರ ಸರಣಿ ಅಪಘಾತ; ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ಬಸ್‌ ಪಲ್ಟಿ, 10 ಮಂದಿಗೆ ಗಂಭೀರ ಗಾಯ

ಚಿಂಚೋಳಿಯಲ್ಲಿ ಭೀಕರ ಸರಣಿ ಅಪಘಾತ; 10 ಜನರಿಗೆ ಗಾಯ

Chincholi Road Accident: ಚಿಂಚೋಳಿ ತಾಲೂಕಿನ ಬೀದರ್-ಮಹಬೂಬ್ ನಗರ ರಾಷ್ಟ್ರೀಯ ಹೆದ್ದಾರಿಯ ಪೋಲಕಪಳ್ಳಿ ತಾಂಡಾ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್, ಸಿಮೆಂಟ್ ಟ್ಯಾಂಕರ್ ಹಾಗೂ ಟಂ ಟಂ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹತ್ತು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.

ಸಾಯಿ ಪ್ರೇಮ ಫೌಂಡೇಶನ್ ಟ್ರಸ್ಟಿಗಳಿಗೆ ಫಿಜಿ ಸರ್ಕಾರದ ರಾಷ್ಟ್ರೀಯ ಪ್ರಶಸ್ತಿ

ಶ್ರೀ ಮಧುಸೂದನ ಸಾಯಿ ಸೇವಾ ಮಿಷನ್‌ನ ಮಾನವೀಯ ಕಾರ್ಯಗಳಿಗೆ ಶ್ಲಾಘನೆ

ವಿಶ್ವದ 100ಕ್ಕೂ ಹೆಚ್ಚು ದೇಶಗಳಲ್ಲಿ ಪೌಷ್ಠಿಕತೆ, ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಉಚಿತ ವಾಗಿ ನೀಡುತ್ತಿರುವ ಈ ಮಿಷನ್ ಕಾರ್ಯ ಶ್ಲಾಘನೀಯವೆಂದು ಅವರು ಹೇಳಿದರು. 2025ರ ಗ್ಲೋಬಲ್ ಕಲ್ಚರಲ್ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ್ದುದನ್ನೂ, ಕರ್ನಾಟಕದ ಮುದ್ದೇನಹಳ್ಳಿ ಯಲ್ಲಿರುವ ಸಂಸ್ಥೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅನುಭವವನ್ನೂ ಅವರು ಸ್ಮರಿಸಿದರು. ಫಿಜಿ ಹಾಗೂ ಪೆಸಿಫಿಕ್ ಪ್ರದೇಶ ದಲ್ಲಿ ಇಂತಹ ಸೇವೆಗಳನ್ನು ವಿಸ್ತರಿಸಲು ತಮ್ಮ ಬೆಂಬಲ ಮುಂದುವರಿಯಲಿದೆ

National Panchayat Raj Day: ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ, ಉತ್ತಮ ಸಾಧನೆ ತೋರಿದ ಗ್ರಾ.ಪಂ.ಗಳ ಅಧಿಕಾರಿ ಸಿಬ್ಬಂದಿಗೆ ಸನ್ಮಾನ

ಗ್ರಾಮ ಪಂಚಾಯ್ತಿಗಳ ಅಧಿಕಾರಿ ಸಿಬ್ಬಂದಿಗೆ ಸನ್ಮಾನ

ಲಕ್ಷಾಂತರ ಸ್ವಾತಂತ್ರ‍್ಯ ಹೋರಾಟಗಾರರ ಬಲಿದಾನದಿಂದ ನಾವು ಮುಕ್ತವಾಗಿ ಸ್ವಾತಂತ್ರ‍್ಯದ ಜೀವನ ವನ್ನು ಸಾಗಿಸುತ್ತಿದ್ದೇವೆ, “ಮುಕ್ತವಾದ ಅವಕಾಶಗಳು ಎಲ್ಲರಿಗೂ ಸಿಗಬೇಕು ಎಂಬುದು ಬಲಿದಾನಿಗಳ ಆಶಯವಾಗಿತ್ತು”. ಆ ನಿಟ್ಟಿನಲ್ಲಿ ಪಂಚಾಯತ್ ರಾಜ್ ಕಾಯ್ದೆ(Panchayat Raj Act)ಯಡಿ ಅನುಷ್ಠಾನ ವಾಗುತ್ತಿರುವ ಕೆಲಸಗಳು ಮೌಲ್ಯಯುತವಾಗಿವೆ.

IISC: ಜ್ಞಾನಾಧಾರಿತ ತಂತ್ರಜ್ಞಾನವು ಜ್ಞಾನದ ಸೃಷ್ಟಿ ಮತ್ತು ಹುಡುಕಾಟದ ಮಹಾಮನೆಯಾಗಬೇಕಿದೆ: ಐಐಎಸ್ಸಿ ಸೀನಿಯರ್ ಪ್ರೊ.ನರಹರಿ ಅಭಿಮತ

ಜ್ಞಾನಾಧಾರಿತ ತಂತ್ರಜ್ಞಾನವು ಜ್ಞಾನದ ಸೃಷ್ಟಿಯ ಮಹಾಮನೆಯಾಗಬೇಕಿದೆ

ಎ.ಐ.ತಂತ್ರಜ್ಞಾನದಿಂದಾಗಿ ಸಮಾಜಕ್ಕೆ ಜನಸಮುದಾಯಗಳಿಗೆ ಸಾಕಷ್ಟು ಅನುಕೂಲವಾಗಿ ಅವಕಾಶ ಗಳು ಹೆಚ್ಚಾಗಲಿವೆ. ಇಂತಹ ಸೂಕ್ಷ್ಮ ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಐಇಇಇ(IEEE) ಅಂತರಾಷ್ಟ್ರೀಯ ವಿಚಾರ ಸಂಕಿರಣಗಳು ನೆರವಾಗಲಿವೆ. ಇದನ್ನು ಬಳಸಿಕೊಳ್ಳುವ ಕೆಲಸ ಆಗಬೇಕಿದೆ. ದೇಶವಿದೇಶಗಳ 13ಕ್ಕೂ ಹೆಚ್ಚು ದೇಶ ಗಳ 365ಕ್ಕೂ ಹೆಚ್ಚು ಸಂಶೋಧನಾರ್ಥಿಗಳು ಭಾಗಿಯಾಗುತ್ತಿರುವುದೇ ಸಂತೋಷ

Janivara Row: ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ವಶಕ್ಕೆ

ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಮೂವರು ಸಿಬ್ಬಂದಿ ವಶಕ್ಕೆ

KCET 2026: ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪದಲ್ಲಿ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಇದೀಗ ಪರೀಕ್ಷಾ ಕೇಂದ್ರದ ಇನ್‌ಚಾರ್ಜ್ ಸುಧಾಕರ್, ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Cabinet meeting: ಹೊಸ ಒಳ ಮೀಸಲಾತಿ ಅನ್ವಯ 56,432 ಹುದ್ದೆಗಳ ನೇಮಕಾತಿಗೆ ತುರ್ತು ಕ್ರಮ: ಸಿಎಂ ಘೋಷಣೆ

ಹೊಸ ಒಳ ಮೀಸಲಾತಿ ಅನ್ವಯ 56,432 ಹುದ್ದೆಗಳ ನೇಮಕಾತಿ: ಸಿಎಂ

Govt Job Recruitment: ಎಡಗೈ 5.25, ಬಲಗೈ 5.25 ಹಾಗೂ ಇತರೆ ವರ್ಗದವರಿಗೆ 4.5 ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ 56,432 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Internal Reservation: ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ; ಯಾವ ಸಮುದಾಯಗಳಿಗೆ ಎಷ್ಟು?

ಸಚಿವ ಸಂಪುಟ ಸಭೆ; ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ಸರ್ಕಾರ

Cabinet Meeting: ಏಪ್ರಿಲ್ 16ರಂದು ನಡೆದಿದ್ದ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಗೊಂದಲವನ್ನು ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ವೈಜ್ಞಾನಿಕವಾಗಿ ದತ್ತಾಂಶ ವಿಶ್ಲೇಷಿಸಿ, ಅಂತಿಮವಾಗಿ ಒಳಮೀಸಲು ಹಂಚಿಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Janivara Row: ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಜನಿವಾರ ತೆಗೆಸಿದ್ದ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಸಿಇಟಿ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆದ ಘಟನೆ ಬಗ್ಗೆ ವರದಿ ಪಡೆದು ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್‌ ತಿಳಿಸಿದ್ದರು. ಇನ್ನು ಈ ಕುರಿತು ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿತ್ತು. ಹೀಗಾಗಿ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

Karnataka SSLC Result: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ತುಮಕೂರು ಜಿಲ್ಲೆಯಲ್ಲಿ ತಿಪಟೂರು ತಾಲೂಕು ಪ್ರಥಮ ಸ್ಥಾನ

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ತಿಪಟೂರು ತಾಲೂಕು ಜಿಲ್ಲೆಗೆ ಪ್ರಥಮ

Karnataka SSLC Result: 2025-26ನೇ ಸಾಲಿನಲ್ಲಿ ತಾಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ತಿಪಟೂರು ತಾಲೂಕಿನಲ್ಲಿ ಒಟ್ಟು 2251 ಮಕ್ಕಳು ಪರೀಕ್ಷೆಯನ್ನು ಬರೆದಿದ್ದು 2190 ವಿದ್ಯಾರ್ಥಿಗಳು ಉತ್ತಿರ್ಣರಾಗಿರುತ್ತಾರೆ. 61 ವಿದ್ಯಾರ್ಥಿಗಳು ಅನುತ್ತಿರ್ಣರಾಗಿದ್ದಾರೆ. ತಾಲೂಕಿನ ಒಟ್ಟು ಫಲಿತಾಂಶ 97.29% ಬಂದಿದ್ದು ಈ ಬಾರಿ ನಮ್ಮ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ ತಿಳಿಸಿದ್ದಾರೆ.

Karnataka CET Exam 2026: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ಸಚಿವ ಎಂ.ಸಿ.ಸುಧಾಕರ್‌

ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಎಂದ ಸಚಿವ

Janivara Row: ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಪ್ರತಿಕ್ರಿಯಿಸಿದ್ದಾರೆ. ಈ ವಿಷಯ ಇನ್ನೂ ಕೆಇಎ ಗಮನಕ್ಕೆ ಬಂದಿಲ್ಲ. ಆ ರೀತಿ ಏನಾದರೂ ಸಂಭವಿಸಿದ್ದರೆ ವರದಿ ಕೇಳಿ, ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

SSLC Result in Yadgir : ಎಸ್‌ʼಎಸ್‌ʼಎಲ್‌ʼಸಿ ಫಲಿತಾಂಶ: ತಪ್ಪಿದ ಕೊನೆಯ ಸ್ಥಾನ

ಎಸ್‌ʼಎಸ್‌ʼಎಲ್‌ʼಸಿ ಫಲಿತಾಂಶ: ತಪ್ಪಿದ ಕೊನೆಯ ಸ್ಥಾನ

ಪರೀಕ್ಷಾ ಫಲಿತಾಂಶಗಳಲ್ಲಿ ಸದಾ ಕೊನೆಯ ಸ್ಥಾನ ಪಡೆಯುತ್ತಾ ಟೀಕೆಗಳಿಗೆ ಆಹಾರವಾಗುತ್ತಿದ್ದ ಯಾದಗಿರಿ ಜಿಲ್ಲೆ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಯಾದಗಿರಿ ಜಿಲ್ಲೆಯು ಕಳೆದ ಎರಡು ವರ್ಷಗಳಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬದಲಾವಣೆ ಕಾಣುತ್ತಲಿದ್ದು, ಈ ವರ್ಷ 91.89 ಪ್ರತಿಶತ ಪಡೆದು 31 ಸ್ಥಾನದಲ್ಲಿ ಯಾದಗಿರಿ ಸ್ಥಾನ ಪಡೆದಿದೆ.

Govt Job aspirants protest: ಖಾಲಿ ಹುದ್ದೆಗಳ ಭರ್ತಿ ಮಾಡದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ; ಸರ್ಕಾರಕ್ಕೆ ರಾಜ್ಯ ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ

ಖಾಲಿ ಹುದ್ದೆಗಳ ಭರ್ತಿ ಮಾಡದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ

ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸ್ಪಷ್ಟ ಹಾಗೂ ತಕ್ಷಣದ ನಿರ್ಧಾರ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಂಟಾಗುವ ಯಾವುದೇ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗುತ್ತದೆ. ನಮ್ಮ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ತಿಳಿಸಿದೆ.

Kalyana Karnataka: ಕಲ್ಯಾಣ ಕರ್ನಾಟಕದ ಫಲಿತಾಂಶ 19.9% ಏರಿಕೆ

ಕಲ್ಯಾಣ ಕರ್ನಾಟಕದ ಫಲಿತಾಂಶ 19.9% ಏರಿಕೆ

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪೈಕಿ ರಾಯಚೂರು ಶೇ.94.4ರಷ್ಟು ಫಲಿತಾಂಶದೊಂದಿಗೆ ಮುಂಚೂಣಿಯಲ್ಲಿದೆ. ಯಾದಗಿರಿ ಜಿಲ್ಲೆಯು ಕಳೆದ ಬಾರಿಗಿಂತ ಶೇ.29.8ರಷ್ಟು ಹೆಚ್ಚಿನ ಪ್ರಗತಿ ತೋರಿದೆ. ಆದರೆ, ಕಲಬುರಗಿ ಜಿಲ್ಲೆಯು ಶೇ. 85.1ರಷ್ಟು ಫಲಿತಾಂಶ ಪಡೆದಿದ್ದು, ಕಳೆದ ವರ್ಷಕ್ಕಿಂತ ಶೇ.28.2 ರಷ್ಟು ಸುಧಾರಣೆ ಕಂಡಿದ್ದರೂ ಸಹ ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಇನ್ನೂ ಕೆಳಮಟ್ಟದಲ್ಲೇ ಉಳಿದುಕೊಂಡಿದೆ.

Fraud Case: ಯುವತಿಗೆ ಮಗು ನೀಡಿ ಮೋಸ; ಪುತ್ತೂರು ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಮಹತ್ವದ ಆದೇಶ

ಯುವತಿಗೆ ಮಗು ನೀಡಿ ಮೋಸ; ಪುತ್ತೂರು ಪ್ರಕರಣದಲ್ಲಿ ಹೈಕೋರ್ಟ್‌ ಮಹತ್ವದ ಆದೇಶ

ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಆಕೆಯನ್ನು ಆರೋಪಿ ಮದುವೆಯಾಗುವುದೇ ಉತ್ತಮ. ಯುವತಿ ಮತ್ತು ಮಗುವನ್ನು ಅನಾಥ ಆಗಿಸುವುದು ಸರಿಯಲ್ಲ. ತಂದೆ ಆಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿಯ ಕರ್ತವ್ಯ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.ಇದೀಗ ಜೀವನಾಂಶ ಆದೇಶ ಕೂಡ ನೀಡಿದೆ.

"ವಿಶ್ವ ಭೂಮಿ ದಿನ" "ನಮ್ಮ ಶಕ್ತಿ - ನಮ್ಮ ಗ್ರಹ "

"ವಿಶ್ವ ಭೂಮಿ ದಿನ" "ನಮ್ಮ ಶಕ್ತಿ - ನಮ್ಮ ಗ್ರಹ "

"ವಿಶ್ವಭೂಮಿ ದಿನಾಚರಣೆ" ಅಂಗವಾಗಿ "ನಮ್ಮ ಶಕ್ತಿ - ನಮ್ಮ ಗ್ರಹ", ಎಂಬ ವಿಷಯ ಆಧಾರಿತ, ಭೂಮಿ ಸಂರಕ್ಷಣೆ ಅಭಿಯಾನ ಜನಜಾಗೃತಿ ಕಾರ್ಯಕ್ರಮವನ್ನು ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬಾಲ ಭವನ ಸೊಸೈಟಿ ಕಬ್ಬನ್ ಪಾರ್ಕ್ ಬೆಂಗಳೂರು, ರವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದರು.

Loading...