ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Chitradurga Bus Accident: ಸ್ಲೀಪರ್‌ ಬಸ್‌ ಬೆಂಕಿಗಾಹುತಿ: 17 ಪ್ರಯಾಣಿಕರು ಸಜೀವ ದಹನ, ನಡೆದದ್ದೇನು?

ಸ್ಲೀಪರ್‌ ಬಸ್‌ ಬೆಂಕಿಗಾಹುತಿ: 17 ಪ್ರಯಾಣಿಕರು ಸಜೀವ ದಹನ, ನಡೆದದ್ದೇನು?

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್​ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್​ ಕೋಚ್​​ ಬಸ್​​​ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

bus accident: ಹಿರಿಯೂರು ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್‌ಗೆ ಬೆಂಕಿ, 10 ಮಂದಿ ಸಜೀವ ದಹನ

ಹಿರಿಯೂರು ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್‌ಗೆ ಬೆಂಕಿ, 10 ಮಂದಿ ಸಜೀವ ದಹನ

ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತುಕೊಂಡು 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ 9 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಇಂದಿನಿಂದ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

ಇಂದಿನಿಂದ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

2nd Ayurveda World Summit: ಡಿಸೆಂಬರ್‌ 25ರಿಂದ ನಾಲ್ಕು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಐತಿಹಾಸಿಕ ಆಯುರ್ವೇದ ವಿಶ್ವ ಸಮ್ಮೇಳನ ನಡೆಯಲಿದೆ. ದಕ್ಷಿಣ ಭಾರತದ ಏಳು ರಾಜ್ಯಗಳನ್ನು ಸಂಚರಿಸಿ ಬಂದಿರುವ ಧನ್ವಂತರಿ ಜ್ಯೋತಿಯನ್ನು ಬೆಳಗುವುದರ ಮೂಲಕ ಐತಿಹಾಸಿಕ ವಿಶ್ವ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ.

Karnataka Weather: ಬೀದರ್‌, ಕಲಬುರಗಿಯಲ್ಲಿ ಬೀಸಲಿದೆ ಮೈ ಕೊರೆವ ಶೀತ ಗಾಳಿ; ಯೆಲ್ಲೋ ಅಲರ್ಟ್‌ ಘೋಷಣೆ

ಬೀದರ್‌, ಕಲಬುರಗಿಯಲ್ಲಿ ಶೀತ ಗಾಳಿಯ ಎಚ್ಚರಿಕೆ

ಕರ್ನಾಟಕ ಹವಾಮಾನ ವರದಿ: ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಶೀತ ಅಲೆಯು ಮೇಲುಗೈ ಸಾಧಿಸಲಿದ್ದು, ಇದು ಮುಂದಿನ ಒಂದು ವಾರ ಕಾಲ ಹೀಗೆಯೇ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ರಾಜ್ಯದ ಉತ್ತರ ಒಳನಾಡಿನ ಬೀದರ್‌ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ.

Sirsi News: ಡಿ.25ರಂದು ನಿಸರ್ಗಮನೆ ಡಾ. ವೆಂಕಟರಮಣ ಹೆಗಡೆ ಅವರಿಗೆ ಗೌರವ ಸಮ್ಮಾನ

ಡಿ.25ರಂದು ಡಾ. ವೆಂಕಟರಮಣ ಹೆಗಡೆ ಅವರಿಗೆ ಗೌರವ ಸಮ್ಮಾನ

ಡಾ. ವೆಂಕಟರಮಣ ಹೆಗಡೆ ಅವರು ನಿಸರ್ಗ ಚಿಕಿತ್ಸೆ ಪದವಿ ಪಡೆದು ಹುಟ್ಟೂರಿನಲ್ಲೇ ಚಿಕಿತ್ಸಾ ಕೇಂದ್ರ ಆರಂಭಿಸಿ ಈ ಚಿಕಿತ್ಸಾ ವಿಧಾನದ ಮೂಲಕ ದೇಶದ ಗಮನ ಸೆಳೆಯುತ್ತಿದ್ದಾರೆ. ನಿತ್ಯ ವಿವಿಧ ಪತ್ರಿಕೆ ಗಳಲ್ಲಿ ಆರೋಗ್ಯ ಜಾಗೃತಿ ಅಂಕಣ ಕೂಡ ಬರೆಯುತ್ತಿದ್ದಾರೆ. ಅನೇಕ ಕೃತಿಗಳನ್ನು ರಚಿಸಿ ಲಕ್ಷಾಂತರ ಓದುಗರನ್ನು ತಲುಪಿದ್ದಾರೆ.

Chikkanayakanahalli News: ಪೂರ್ವಜರ ಮಾದರಿಯ ಸಾವಯವ ಕೃಷಿಗೆ ಶಾಸಕ ಸಿ.ಬಿ.ಸುರೇಶಬಾಬು ಕರೆ

ಪೂರ್ವಜರ ಮಾದರಿಯ ಸಾವಯವ ಕೃಷಿಗೆ ಶಾಸಕ ಸಿ.ಬಿ.ಸುರೇಶಬಾಬು ಕರೆ

ರೈತ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ. ಅಂತಹ ರೈತರಿಗೆ ಅಗತ್ಯವಾದ ನೀರು ಮತ್ತು ವಿದ್ಯುತ್ ಸೌಲಭ್ಯ ನೀಡಿದರೆ ಅವರು ಸ್ವಾವಲಂಬಿಯಾಗಿ ಗೌರವಯುತ ಬದುಕು ನಡೆಸುತ್ತಾರೆ. ಇಂದಿನ ರೈತರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಕೇವಲ ಇಳುವರಿ ಹೆಚ್ಚಿಸಿಕೊಳ್ಳಲು ರಾಸಾಯನಿಕ ಬಳಸಿ ಮಣ್ಣಿನ ಫಲವತ್ತತೆ ಹಾಳು ಮಾಡುತ್ತಿದ್ದೇವೆ.

ಸ್ಯಾನ್ಸನ್ ಗ್ರೂಪ್‌ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗ: ಎಚ್‌.ಡಿ. ಕುಮಾರಸ್ವಾಮಿಗೆ ಎಂ.ಬಿ. ಪಾಟೀಲ್‌ ಪತ್ರ

ಮಂಡ್ಯದಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕ: ಎಂಬಿಪಿ

MB Patil: ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್‌ಗೆ ತನ್ನ ಘಟಕ ಸ್ಥಾಪಿಸಲು ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್‌ 26ರಂದು ಕರೆಂಟ್‌ ಇರಲ್ಲ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್‌ 26ರಂದು ವಿದ್ಯುತ್‌ ವ್ಯತ್ಯಯ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರ ಲೇಔಟ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿಸೆಂಬರ್‌ 26ರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನದಿ ಜೋಡಣೆ ಯೋಜನೆ; ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಬೇಕು: ಡಿ.ಕೆ. ಶಿವಕುಮಾರ್

ಭೀಮಾ ನದಿ ಪ್ರದೇಶಕ್ಕೆ ಹೆಚ್ಚುವರಿ 5 ಟಿಎಂಸಿ ನೀರು ಒದಗಿಸಿ: ಡಿಕೆಶಿ

DK Shivakumar: ʼʼನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯನ್ನು ರಚಿಸಲಾಗಿದ್ದು, ಎಲ್ಲ ರಾಜ್ಯಗಳು ಅದರ ಸದಸ್ಯರಾಗಿವೆ. ಮಂಗಳವಾರ ಇದರ 24ನೇ ಸಭೆ ನಡೆದಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಗೋದಾವರಿ ಹಾಗೂ ಕಾವೇರಿ, ಬೇಡ್ತಿ ಮತ್ತು ವರದಾ ನದಿ ಜೋಡಣೆ ಬಗ್ಗೆ ಚರ್ಚೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸಿಎಂ ಬದಲಾವಣೆ ವಿಚಾರದಲ್ಲಿ ಮೌನ ಮುರಿದ ಡಿಸಿಎಂ ಡಿ.ಕೆ. ಶಿವಕುಮಾರ್‌; ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೇಳಿದ್ದೇನು?

ಸಿಎಂ ಬದಲಾವಣೆ ವಿಚಾರದಲ್ಲಿ ಮೌನ ಮುರಿದ ಡಿಕೆಶಿ

DK Shivakumar: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಅವರ ಬದಲು ಡಿ.ಕೆ. ಶಿವಕುಮಾರ್‌ ಅವರಿಗೆ ಪಟ್ಟ ಕಟ್ಟಲಾಗುತ್ತಿದೆ ಎನ್ನುವ ಗುಸುಗುಸು ಕೇಳಿ ಬಂದಿದೆ. ಈ ಬಗ್ಗೆ ಇದೀಗ ಸ್ವತಃ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದು, ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ ಬಳಿ ಪ್ರೇಮ ನಿವೇದನೆ; ನಿರಾಕರಿಸಿದ್ದಕ್ಕೆ ನಡುರಸ್ತೆಯಲ್ಲೇ ಹಲ್ಲೆ: ಬೆಂಗಳೂರಿನಲ್ಲೊಂದು ಭೀಕರ ಕೃತ್ಯ

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ನಡುರಸ್ತೆಯಲ್ಲೇ ಹಲ್ಲೆ

Pressure for relationship: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಯುವತಿಯ ಬಳಿ ಪ್ರೀತಿಸುವಂತೆ ಒತ್ತಡ ಹಾಕಿದ್ದು, ಆಕೆ ನಿರಾಕರಿಸಿದ ಕಾರಣ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪಾಪಿ ಯುವತಿಯ ತಲೆ ಮತ್ತು ಬೆನ್ನಿಗೆ ಪದೇ ಪದೆ ಹೊಡೆದು ರಸ್ತೆಯ ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ.

4 ಪಟ್ಟಣ ಪಂಚಾಯತ್‌ಗಳಲ್ಲಿ ಬಿಜೆಪಿಗೆ ಜಯಭೇರಿ; ವಿಜಯೇಂದ್ರ ಅಭಿನಂದನೆ

4 ಪ.ಪಂ. ಬಿಜೆಪಿ ಜಯಭೇರಿ; ವಿಜೇತ ಅಭ್ಯರ್ಥಿಗಳಿಗೆ ಬಿವೈವಿ ಅಭಿನಂದನೆ

Pattana Panchayats Election: ರಾಜ್ಯದ ಒಟ್ಟು 4 ಪಟ್ಟಣ ಪಂಚಾಯಿತಿಗಳಲ್ಲಿ ಬಿಜೆಪಿ ಪಕ್ಷವು ಜಯಭೇರಿ ಬಾರಿಸಿದ್ದು, ವಿಜೇತ ಅಭ್ಯರ್ಥಿಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅಭಿನಂದಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ಬೆಂಗಳೂರಿನ ದಾನಿಯಿಂದ 30 ಕೋಟಿ ರೂ. ಮೌಲ್ಯದ ಚಿನ್ನದ ಕಲಾಕೃತಿ ದಾನ

ಅಯೋಧ್ಯೆಗೆ ಬೆಂಗಳೂರಿನ ದಾನಿಯಿಂದ 30 ಕೋಟಿ ರೂ.ನ ಚಿನ್ನದ ಕಲಾಕೃತಿ ದಾನ

Ayodhya Sri Ram Temple: ಚಿನ್ನದ ಎಲೆಯ ಹಾಳೆಗಳಿಂದ ಲೇಪಿತವಾಗಿರುವ, ಮಾಣಿಕ್ಯ, ಪಚ್ಚೆ, ಹವಳ, ಮುತ್ತು ಹಾಗೂ ವಜ್ರಗಳಿಂದ ಅಲಂಕರಿಸಲಾದ ಅಪರೂಪದ ಶ್ರೀರಾಮನ ಕಲಾಕೃತಿ ಅಯೋಧ್ಯೆ ಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಸಜ್ಜಾಗಿದೆ. ಈ ವಿಶಿಷ್ಟ ಕಲಾಕೃತಿಯನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ, ಹವ್ಯಾಸಿ ಕಲಾವಿದೆ ಜಯಶ್ರೀ ಫಣೀಶ್ ತಮ್ಮ ಕೈಯ್ಯಾರೆ ನಿರ್ಮಿಸಿದ್ದಾರೆ.

ಕೊರಗ ಕುಟುಂಬಗಳಿಗೆ ನೂರು ಸೂರು !

ಕೊರಗ ಕುಟುಂಬಗಳಿಗೆ ನೂರು ಸೂರು !

ಕೊಡುಗೈ ದಾನಿ, ಬಡವರ ಬಂಧು ಡಾ.ಹಾಲಾಡಿ ಶ್ರೀನಿವಾಸ ಶೆಟ್ಟರ ಅಬ್ಬರದ ಭಾಷಣಗಳಿಲ್ಲ, ರಾಜಕೀಯದ ಬಣ್ಣದ ಮಾತುಗಳಿಲ್ಲ. ಹರಿಯುವ ನದಿ ಹೇಗೆ ದಡದ ಗಿಡಮರಗಳನ್ನು ಪೋಷಿಸು ತ್ತದೆಯೋ, ಹಾಗೆಯೇ ಶೆಟ್ಟರ ಸೇವೆ ಸದ್ದಿಲ್ಲದೆ ಸಮಾಜದ ಕಟ್ಟಕಡೆಯ ಮನುಷ್ಯನನ್ನು ತಲುಪುತ್ತಿದೆ.

POCSO Case: ಚಾಕೊಲೇಟ್‌ ನೀಡಿ ದೌರ್ಜನ್ಯ ಎಸಗಿದ ವಾಹನ ಚಾಲಕ, 10 ತರಗತಿ ಬಾಲಕಿಗೆ ಹೆರಿಗೆ

ಚಾಕೊಲೇಟ್‌ ನೀಡಿ ದೌರ್ಜನ್ಯ ಎಸಗಿದ ವಾಹನ ಚಾಲಕ, 10 ತರಗತಿ ಬಾಲಕಿಗೆ ಹೆರಿಗೆ

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

Menstrual Leave: ಕೆಎಸ್‌ಆರ್‌ಟಿಸಿ ಮಹಿಳಾ ನೌಕರರಿಗೆ ಸಿಹಿ ಸುದ್ದಿ: ಋತುಚಕ್ರ ರಜೆ ಜನವರಿ 1ರಿಂದ ಜಾರಿ

ಕೆಎಸ್‌ಆರ್‌ಟಿಸಿ ಮಹಿಳಾ ನೌಕರರಿಗೆ ಋತುಚಕ್ರ ರಜೆ ಜನವರಿ 1ರಿಂದ ಜಾರಿ

ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ (Menstrual Leave) ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಲಾಗಿದೆ. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ . ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.

Road Accident: ನಿಯಂತ್ರಣ ತಪ್ಪಿ ಕಾರು ಪಲ್ಟಿ, ಒಂದೇ ಕುಟುಂಬದ ಮೂವರು ಸಾವು

ನಿಯಂತ್ರಣ ತಪ್ಪಿ ಕಾರು ಪಲ್ಟಿ, ಒಂದೇ ಕುಟುಂಬದ ಮೂವರು ಸಾವು

ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Gudibande News: ಸರಕಾರಗಳಿಂದ ರೈತರ ಬದುಕನ್ನು ಹಸನು ಮಾಡುವ ಕೆಲಸ ನಡೆಯಬೇಕಿದೆ : ಮಂಜುನಾಥ್

ಸರಕಾರಗಳಿಂದ ರೈತರ ಬದುಕನ್ನು ಹಸನು ಮಾಡುವ ಕೆಲಸ ನಡೆಯಬೇಕಿದೆ

ಇಂದು ರೈತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಒಬ್ಬ ರೈತ ಏನೇನೆ ಸಮಸ್ಯೆ ಬಂದರೂ ಕೃಷಿಯನ್ನು ಮಾತ್ರ ಬಿಡುವುದಿಲ್ಲ. ಲಾಭ ಬರಲಿ, ನಷ್ಟ ಬರಲಿ ಕೃಷಿ ಚಟುವಟಿಕೆಯನ್ನು ಮಾತ್ರ ಬಿಡುವುದಿಲ್ಲ. ಇಂದು ರೈತ ತುಂಬಾ ಸಂಕಷ್ಟದಲ್ಲಿದ್ದಾನೆ. ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆತನು ಬೆಳೆ ಚೆನ್ನಾಗಿ ಬಂದರೇ ಬೆಲೆ ಸಿಗುವುದಿಲ್ಲ,

MLA B.N. Ravikumar: 3ನೇ ವರ್ಷದ ಕ್ರೈಸ್ತ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಬಿಎನ್ ರವಿಕುಮಾರ್ ಚಾಲನೆ

3ನೇ ವರ್ಷದ ಕ್ರೈಸ್ತ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಬಿಎನ್ ರವಿಕುಮಾರ್ ಚಾಲನೆ

ಎಲ್ಲಾ ಜಾತಿ ಜನಾಂಗದಲ್ಲಿಯೂ, ಬಡವರು, ಹಿಂದುಳಿದವರು ಬದುಕಿಗಾಗಿ ನಿತ್ಯವೂ ಹಗಲಿರುಳು ಕಷ್ಟಪಡುತ್ತಿರುವವರು ಇನ್ನೂ ಇದ್ದಾರೆ. ಅವರೆಲ್ಲರಿಗೂ ಕ್ರೈಸ್ತ ಜಯಂತಿಯ ಶುಭಾಶಯಗಳನ್ನು ತಿಳಿಸುತ್ತಾ 1979-80 ರಲ್ಲಿ ಸುಮಾರು 2 ವರ್ಷಗಳ ಕಾಲ ಪ್ರತಿ ಶುಕ್ರವಾರ ಚರ್ಚ್ನಲ್ಲಿ ನಾನು ಕೂಡ ಪ್ರಾರ್ಥನೆ ಮಾಡಿರುವುದಾಗಿ ತಿಳಿಸಿದರು.

Bagepally News: ಕರವೇಯಿಂದ ರಾಜ್ಯೋತ್ಸವ ಆಚರಣೆ

Bagepally News: ಕರವೇಯಿಂದ ರಾಜ್ಯೋತ್ಸವ ಆಚರಣೆ

ಗುಡಿಬಂಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಎಂ. ನಯಾಜ್ ಅಹಮದ್ ಮಾತನಾಡಿ, ಕಾಸರಗೋಡು, ಬೆಳಗಾವಿ ಸೇರಿದಂತೆ ಗಡಿ ಹಾಗೂ ಬೆಂಗಳೂರು ನಗರ ಪ್ರದೇಶ ದಲ್ಲಿ ಕರವೇ ಹೋರಾಟದಿಂದ ಕನ್ನಡ ಭಾಷೆ ಉಳಿದಿದೆ. ಕರವೇ ಹೋರಾಟದಿಂದ ಕಾವೇರಿ ನದಿ ನೀರು ಹಂಚಿಕೆ, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ ಎಂದರು.

Bagepally News: 6 ಕೋಟಿ ಸರಕಾರಿ ಭೂಮಿ ವಶಪಡಿಸಿಕೊಂಡ ತಾಲೂಕು ಆಡಳಿತ

6೬ ಕೋಟಿ ಸರಕಾರಿ ಭೂಮಿ ವಶಪಡಿಸಿಕೊಂಡ ತಾಲೂಕು ಆಡಳಿತ

ಬಾಗೇಪಲ್ಲಿ ಪಾತಪಾಳ್ಯ ರಾಜ್ಯ ಹೆದ್ದಾರಿಗೆ ಹೊಂದಿಕೊಂಡು 11 ಎಕರೆ ಸರ್ಕಾರಿ ಜಮೀನು ಇದ್ದು, ಸದರಿ ಸರ್ಕಾರಿ ಜಮೀನಿನ ವಿಸ್ತೀರ್ಣದಲ್ಲಿ ಚಿಕ್ಕತಿಮ್ಮನಹಳ್ಳಿಯ ನಂಜುಂಡಪ್ಪ ಎಂಬವರಿಗೆ 2 ಎಕರೆ, ರ‍್ರಪ್ಪ ಎಂಬವರಿಗೆ 3 ಎಕರೆ ಜಮೀನು ಮಂಜೂರು ಆಗಿದ್ದು, ಉಳಿಕೆ 6 ಎಕರೆ ಜಮೀನು ಸರ್ಕಾರಿ ಬೀಳು ಎಂದು ಕಂದಾಯ ಇಲಾಖೆ ಮೂಲ ದಾಖಲೆ ಸೇರಿದಂತೆ ಪಹಣಿ ಮತ್ತು ಮುಟೇಷನ್‌ನಲ್ಲಿ ನಮೂದಾಗಿರುತ್ತದೆ.

ಬೆಂಗಳೂರಿನಲ್ಲಿ ಪತ್ನಿಯನ್ನು ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

ಪತ್ನಿಯನ್ನು ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

Bengaluru shootout case: ಬೆಂಗಳೂರಿನಲ್ಲಿ ನೆಲೆಸಿದ್ದ ತಮಿಳುನಾಡಿನ ಸೇಲಂ ಮೂಲದ ದಂಪತಿ, ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ನಲ್ಲಿ ವಿಚಾರಣೆ ಮುಗಿದ ಬಳಿಕ ಬಸವೇಶ್ವರ ನಗರದ ಹೋಟೆಲ್‌ ಬಳಿ ಇಬ್ಬರಿಗೂ ಜಗಳ ನಡೆದಿದ್ದು, ಈ ವೇಳೆ ಗನ್‌ನಿಂದ ಶೂಟ್‌ ಮಾಡಿ ಪತ್ನಿಯನ್ನು ಗಂಡ ಕೊಲೆ ಮಾಡಿದ್ದಾನೆ.

ಸೃಷ್ಟಿ ಮಣಿಪಾಲ್ ವಿದ್ಯಾರ್ಥಿಗಳಿಂದ ಭವಿಷ್ಯದ ಮರುಕಲ್ಪನೆ: ಕಲೆ ಮತ್ತು ವಿನ್ಯಾಸದ ಮೂಲಕ 'ಹೊಸ ಲೋಕ' ಅನಾವರಣಗೊಳಿಸಿದ ನಾಲ್ಕು ದಿನಗಳ ಪ್ರದರ್ಶನ

ಸೃಷ್ಟಿ ಮಣಿಪಾಲ್ ವಿದ್ಯಾರ್ಥಿಗಳಿಂದ ಭವಿಷ್ಯದ ಮರುಕಲ್ಪನೆ

‘ಪ್ರೊಲೋಗ್: ಮೇಕ್ ನ್ಯೂ ವರ್ಲ್ಡ್ಸ್’ - ಸಾಧ್ಯತೆಗಳ ಸಂಭ್ರಮ: ವೆಂಕಟಪ್ಪ ಆರ್ಟ್ ಗ್ಯಾಲರಿಯಲ್ಲಿ ಡಿ.20 ಮತ್ತು 21 ರಂದು ಪದವಿಪೂರ್ವ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ‘ಪ್ರೊಲೋಗ್: ಮೇಕ್ ನ್ಯೂ ವರ್ಲ್ಡ್ಸ್’ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಸಂಸ್ಥೆಯ 11 ವಿಭಿನ್ನ ಕೋರ್ಸ್‌ಗಳ ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡಿದ್ದರು.

ವಂಡರ್ಲಾದಲ್ಲಿ ಜನವರಿ 4 ರವರೆಗೆ 16 ದಿನಗಳ ಅತ್ಯಂತ ವಿಶೇಷ ಸಂಭ್ರಮಾಚರಣೆ

ವಂಡರ್ಲಾದಲ್ಲಿ ಜನವರಿ 4 ರವರೆಗೆ 16 ದಿನಗಳ ಅತ್ಯಂತ ವಿಶೇಷ ಸಂಭ್ರಮಾಚರಣೆ

ವಂಡರ್ಲಾದ ಎಲ್ಲ ಸ್ಥಳಗಳಲ್ಲಿ ವಿಶೇಷ ಕ್ರಿಸ್‌ಮಸ್ ಟ್ರೀ ಲೈಟಿಂಗ್ ಸಹಿತವಾದ ಉತ್ಸವಗಳು ಪ್ರಾರಂಭ ವಾಗಿವೆ. ಬೆಂಗಳೂರಿನ ವಂಡರ್ಲಾದ ವೇವ್ ಪೂಲ್‌ನಲ್ಲಿ ಅತಿಥಿಗಳು ಡಿಜೆ ನೈಟ್ಸ್, ಹೈ-ಎನರ್ಜಿ ಬ್ಯಾಂಡ್ ಶೋಗಳು ಮತ್ತು ಆಕರ್ಷಕ ಜುಂಬಾ ಸೇರಿದಂತೆ ವೈವಿಧ್ಯಮಯ ಮನರಂಜನೆಯನ್ನು ಹೊಂದಬಹುದು.

Loading...