ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Road Accident: ಆಂಧ್ರದಲ್ಲಿ ಅಪಘಾತ, ತಿರುಪತಿಗೆ ಹೊರಟಿದ್ದ ಕರ್ನಾಟಕದ ಐವರು ದುರ್ಮರಣ

ಆಂಧ್ರದಲ್ಲಿ ಅಪಘಾತ, ತಿರುಪತಿಗೆ ಹೊರಟಿದ್ದ ಕರ್ನಾಟಕದ ಐವರು ದುರ್ಮರಣ

ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರ ಸಂಪೂರ್ಣ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ.

Assault Case: ಖಮೇನಿ ಹತ್ಯೆ ಕುರಿತು ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹಲ್ಲೆ

ಖಮೇನಿ ಹತ್ಯೆ ಕುರಿತು ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹಲ್ಲೆ

ವ್ಯಾಪಾರ ಮಾಡುತ್ತಿದ್ದ ವೇಳೆ ಚಂದ್ರಶೇಖರ್‌ಗೆ ಯುವಕರು ಬಂದು ಹಲ್ಲೆ ನಡೆಸಿದ್ದಾರೆ. ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಕೂಡ ಚಂದ್ರಶೇಖರಗೆ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಭಯಭೀತನಾಗಿ ಚಂದ್ರಶೇಖರ, ಈ ಯುವಕರಿಂದ ಜೀವ ಭಯವಿದೆ ಎಂದು ತಡರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದು, ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

Doctors strike: ಆರೋಗ್ಯ ಸಚಿವರ ಸಂಧಾನ ವಿಫಲ, ಮಾರ್ಚ್ 11ರಂದು ವೈದ್ಯರ ಮುಷ್ಕರ ಖಚಿತ

ಆರೋಗ್ಯ ಸಚಿವರ ಸಂಧಾನ ವಿಫಲ, ಮಾರ್ಚ್ 11ರಂದು ವೈದ್ಯರ ಮುಷ್ಕರ ಖಚಿತ

ಸೋಮವಾರದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು, ಅಧಿಕಾರಿ ನೌಕರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು.ಆದರೆ ಸಚಿವರು ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವ ಸ್ಪಷ್ಟವಾದಂತ ಭರವಸೆಯನ್ನು ನೀಡಿಲ್ಲ ಎಂದು ವೈದ್ಯರ ಸಂಘಟನೆ ಹೇಳಿದೆ.

Golden treasure: ಬೆಂಗಳೂರಿನ ಪುರಾತನ ದೇವಾಲಯದ ಬಳಿ ನಿಧಿಗಾಗಿ ಅಗೆದ ಕಿಡಿಗೇಡಿಗಳು

ಬೆಂಗಳೂರಿನ ಪುರಾತನ ದೇವಾಲಯದ ಬಳಿ ನಿಧಿಗಾಗಿ ಅಗೆದ ಕಿಡಿಗೇಡಿಗಳು

ಬೆಂಗಳೂರಿನ HSR ಲೇಔಟ್ ಠಾಣೆ ವ್ಯಾಪ್ತಿಯ ಎಳ್ಳುಕುಂಟೆ ಬಳಿ ಹಲವು ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನ ಇದೆ. ಇಲ್ಲಿ ಪ್ರತಿ ವರ್ಷ ಬಸವೇಶ್ವರ ಜಾತ್ರೆ ಮಹೋತ್ಸವ ಮಾಡುತ್ತಾರೆ. ದೇವಸ್ಥಾನಕ್ಕೆ ಅಟ್ಯಾಚ್ ಆಗಿರುವ ಅಪಾರ್ಟ್ಮೆಂಟ್ ಕೆಳಗಡೆ ನಿಧಿ ಅಡಗಿದೆ ಎನ್ನುವ ಗಾಳಿಸುದ್ದಿ ಇದೀಗ ನಿಧಿಚೋರರಲ್ಲಿ ಸಂಚಲನ ಮೂಡಿಸಿದೆ.

Murder Case: ಊಟಕ್ಕಾಗಿ ಹೋಟೆಲ್‌ಗೆ ಹೋದ ಯುವಕನ ಕೊಲೆ, ಆಕಸ್ಮಿಕವಾಗಿ ಕಾಲು ತುಳಿದದ್ದೇ ಕಾರಣ!

ಹೋಟೆಲ್‌ನಲ್ಲಿ ಆಕಸ್ಮಿಕವಾಗಿ ಕಾಲು ತುಳಿದ ಯುವಕನ ಕೊಲೆ

ಮನೆ ಸಮೀಪದ ಹೋಟೆಲ್‌ಗೆ ರಾತ್ರಿ ದೋಸೆ ತಿನ್ನಲು ಶಶಿ ಅವರು ಹೋಗಿದ್ದರು. ಅದೇ ವೇಳೆ ಮಂಜುನಾಥ ಸಹ ಹೋಟೆಲ್‌ಗೆ ಹೋಗಿದ್ದ. ದೋಸೆ ತಿನ್ನುವಾಗ ಆಕಸ್ಮಿಕವಾಗಿ ಮಂಜುನಾಥ್ ಕಾಲನ್ನು ಶಶಿ ತುಳಿದಿದ್ದಾನೆ. ಈ ವಿಚಾರಕ್ಕೆ ಜಗಳವಾಗಿ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಡ್ಯಾಗರ್‌ನಿಂದ ಶಶಿಗೆ ಇರಿಯಲಾಗಿದೆ.

Gauribidanur News: ತಾಲೂಕು ಆಡಳಿತ ವತಿಯಿಂದ ಸದ್ಗುರು ಕೈವಾರ ಶ್ರೀಯೋಗಿ ನಾರೇಯಣ ಯತೀಂದ್ರರ ಜಯಂತೋತ್ಸವ

ಸದ್ಗುರು ಕೈವಾರ ಶ್ರೀಯೋಗಿ ನಾರೇಯಣ ಯತೀಂದ್ರರ ಜಯಂತೋತ್ಸವ

ಯತೀಂದ್ರರ ತತ್ವ ಸಿದ್ಧಾಂತವನ್ನು ಕೇವಲ ಜಯಂತಿಗೆ ಸೀಮಿತವಾಗದೆ , ನಾವುಗಳು ಪ್ರತಿ ದಿನ ಅವರ ಆಧ್ಯಾತ್ಮಿಕ  ಜೀವನದ ಆದರ್ಶಗಳನ್ನು ಪಾಲಿಸಬೇಕು. ಅದೇ ರೀತಿಯಾಗಿ ಮಾ.14ರಂದು ಕೈವಾರ ತಾತಯ್ಯನವರ 300ನೇ ಜಯಂತೋತ್ಸವವನ್ನು ಸಮಾಜದ ಎಲ್ಲಾ ಸಮುದಾಯ ದವರು ಒಗ್ಗೂಡಿ ಪಟ್ಟಣದಲ್ಲಿ ವಿಜೃಂಭಣೆಯಿಂದ ಆಚರಿಸಲು ಕರೆ ನೀಡಿದರು.

ಮಾ.8 ರಂದು ಬಲಿಜ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಮಾ.8 ರಂದು ಬಲಿಜ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲ್ಲೂಕಿನ ಬಲಿಜ ಸಮುದಾಯದ ಎಸ್.ಎಸ್.ಎಲ್.ಸಿ.ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 2024-25ನೇ ಸಾಲಿನಲ್ಲಿ ಶೇಕಡಾ 60% ರಷ್ಟು ಅಂಕಗಳನ್ನು ಗಳಿಸಿದವರಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ. ನಮ್ಮ ಸಮುದಾಯದ ಮಕ್ಕಳು ಹಾಗೂ ಪೋಷಕರು ದಿನಾಂಕ ಮಾ.7ರ ಶನಿವಾರದ ಒಳಗೆ ಬಲಿಜ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ

ವಿಕಲಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ: 100 ವಿಕಲಚೇತನರಿಗೆ ಪದವಿ ಪ್ರದಾನ

ವಿಕಲಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ

ದೈಹಿಕ ವೈಖಲ್ಯ ಇರುವವರಲ್ಲೂ ಕೌಶಲ್ಯವಿರುತ್ತದೆ ಅವರಿಗೆ ಸೂಕ್ತ ತರಬೇತಿ ನೀಡಿದರೆ, ತಮ್ಮ ಸ್ವಪ್ರಯತ್ನದಿಂದಲೇ ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು, ಇದಕ್ಕೆ ಅವರಿಗೂ ಸೂಕ್ತ ಕೌಶಲ್ಯ ತರಬೇತಿ ನೀಡುವುದು ಅನಿವಾರ್ಯ, ಹೀಗಾಗಿ ಕೌಶಲ್ಯ ಮಂಡಳಿಯ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಆಸಕ್ತ ವಿಕಲಚೇತರಿಗೆ ಎಫ್‌& ಬಿ ಸರ್ವಿಸಸ್‌, ಹಾಸ್ಪೆಟಾಲಿಸಿ ಆಪರೇಷನ್ಸ್‌, ಕಸ್ಟಮರ್‌ ಸರ್ವಿಸ್‌, ಸಾಫ್ಟ್‌ ಸ್ಕಿಲ್ಸ್‌ ಸೇರಿದಂತೆ ಹಲವು ರೀತಿಯ ತರಬೇತಿ ನೀಡಲಾಗುತ್ತಿದೆ.

Chikkaballapur News: ಸಮಾಜದಲ್ಲಿ ಗುರುಗಳಿಗೆ ಗೌರವದ ಸ್ಥಾನವಿದೆ, ಜವಾಬ್ದಾರಿಯರಿತು ಕರ್ತವ್ಯ ನಿರತರಾಗಿ: ಡಾ.ಬಿ.ಕೆ.ರವಿ ಅಭಿಮತ

ಸಮಾಜದಲ್ಲಿ ಗುರುಗಳಿಗೆ ಗೌರವದ ಸ್ಥಾನವಿದೆ

ವಾಣಿಜ್ಯ ಮತ್ತು ವ್ಯವಹಾರಿಕ ವಿಭಾಗ ಸೇರಿದಂತೆ ಉಳಿದೆಲ್ಲಾ  ವಿಭಾಗಗಳಲ್ಲಿ ಈ ರೀತಿಯ ಪುನರ್ಮನನ ತರಬೇತಿ ಕಾರ್ಯಾಗಾರಗಳನ್ನು ಏರ್ಪಡಿಸಿದಾಗ ಮಾತ್ರವೇ ಪರಿಣಾಮಕಾರಿ ಯಾಗಿ ವಿದ್ಯಾರ್ಥಿಗಳಿಗೆ ಬೋಧಿಸಲು ಸಾಧ್ಯವಾಗಲಿದೆ. ಬೋಧಕರು ಕೂಡ ನಿರಂತರ ವಿದ್ಯಾರ್ಥಿಗಳಾದಾಗ ಮಾತ್ರವೇ ಬೋಧನೆಯಲ್ಲಿ ಹೊಸತನ್ನು ಶೋಧಿಸಲು ಅನುಕೂಲ ಎಂದರು.

ನಾನು ಸ್ಟ್ರೀಟ್ ಫೈಟರ್, ಹೋರಾಟ ಮಾಡೋದೇಗೆ ಗೊತ್ತಿದೆ; ಕೆಪಿಸಿಸಿ ಅಧ್ಯಕ್ಷ ಸ್ಥಾನ ನನಗೆ 6 ವರ್ಷ ಸಾಕು ಎಂದ ಡಿಕೆಶಿ

ನಾನು ಸ್ಟ್ರೀಟ್ ಫೈಟರ್, ಹೋರಾಟ ಮಾಡೋದೇಗೆ ಗೊತ್ತಿದೆ: ಡಿಕೆಶಿ

DK Shivakumar: ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಪರಮೇಶ್ವರ್ ಅವರ ದಾಖಲೆ ಮುರಿಯುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ʼಹೊಸ ರಕ್ತ ಬರಬೇಕು. ಹೊಸ ಆಲೋಚನೆ ಬರಬೇಕು. ನಾವೆಲ್ಲಾ ಮೊದಲ ಬಾರಿ ಶಾಸಕರಾದಾಗಲೇ ಮಂತ್ರಿಯಾದವರು. ನಾನು ಪರಮೇಶ್ವರ್ ಅವರು, ಎಚ್.ಕೆ ಪಾಟೀಲ್, ರಾಮಲಿಂಗಾ ರೆಡ್ಡಿ, ಎಲ್ಲರೂ ಮಂತ್ರಿಯಾದವರೇ. ನಾವೀಗ ಹಿರಿಯ ನಾಗರಿಕರಾಗಿದ್ದೇವೆ. ಹೊಸಬರು ಬರಲಿʼ ಎಂದು ಹೇಳಿದ್ದಾರೆ.

Nandi Hills: ವಿಶ್ವವಿಖ್ಯಾತ ನಂದಿ ಬೆಟ್ಟದಲ್ಲಿ ಬೆಂಕಿಯ ಅನಾಹುತ

Nandi Hills: ವಿಶ್ವವಿಖ್ಯಾತ ನಂದಿ ಬೆಟ್ಟದಲ್ಲಿ ಬೆಂಕಿಯ ಅನಾಹುತ

ಬೆಟ್ಟದ ಮಧ್ಯ ಭಾಗದಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಕ್ಷಣಕ್ಕೂ ವ್ಯಾಪಿಸಿ, ಸುಲ್ತಾನ್ ಪೇಟೆ ಭಾಗದ ಕಡೆಗೆ ಕೆನ್ನಾಲಿಗೆ ಚಾಚಿದ ದೃಶ್ಯಗಳು ದೂರದಿಂದಲೇ ಗೋಚರಿಸಿವೆ ಎಂಬುದು ದಾರಿ ಹೋಕರ ಮಾಹಿತಿಯಾಗಿದ್ದು ಬೆಂಕಿಯ ಜ್ವಾಲೆಗಳು ಎತ್ತರಕ್ಕೆ ಏರಿ ದಟ್ಟ ಹೊಗೆ ಆಕಾಶ ಮುಟ್ಟಿದಂತಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.

ಅದ್ಧೂರಿಯಾಗಿ ನೆರವೇರಿದ ಐತಿಹಾಸಿಕ ಕುರುಗೋಡು ದೊಡ್ಡ ಬಸವೇಶ್ವರ ರಥೋತ್ಸವ

ಅದ್ಧೂರಿಯಾಗಿ ನಡೆದ ಕುರುಗೋಡು ದೊಡ್ಡ ಬಸವೇಶ್ವರ ರಥೋತ್ಸವ

Kurugodu News: ಬಳ್ಳಾರಿ ಜಿಲ್ಲೆಯ ಐತಿಹಾಸಿಕ ಕುರುಗೋಡು ದೊಡ್ಡ ಬಸವೇಶ್ವರ ರಥೋತ್ಸವವು ಮಂಗಳವಾರ ಮಧ್ಯಾಹ್ನ‌ 1 ಗಂಟೆ 40 ನಿಮಿಷಕ್ಕೆ ಭಕ್ತಿ ಭಾವದಿಂದ ಜರುಗಿತು. ರಥೋತ್ಸವವು ಜಾತ್ರೆಯೂ ಗ್ರಹಣದ ಹಿನ್ನೆಲೆ ಸಮಯಕ್ಕೂ ಮುನ್ನವೇ ನೆರವೇರಿತು

ದಾವಣಗೆರೆಯಲ್ಲಿ ಉದ್ಯಮಿ ದಂಪತಿ, ಇಬ್ಬರು ಯುವತಿಯರಿಂದ ಜೈನ ಸನ್ಯಾಸ ದೀಕ್ಷೆ ಸ್ವೀಕಾರ

ದಾವಣಗೆರೆಯಲ್ಲಿ ನಾಲ್ವರಿಂದ ಜೈನ ಸನ್ಯಾಸ ದೀಕ್ಷೆ ಸ್ವೀಕಾರ

ದಾವಣಗೆರೆಯಲ್ಲಿ ಕೋಟ್ಯಂತರ ರೂಪಾಯಿಯ ಹಣ-ಆಸ್ತಿ ದಾನ ಮಾಡಿ ದಂಪತಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಈ ದಂಪತಿಯ ಇಬ್ಬರು ಪುತ್ರರು ಕೂಡ ಮೂರು ವರ್ಷಗಳ ಹಿಂದೆಯೇ ಸನ್ಯಾಸತ್ವ ಸ್ವೀಕರಿಸಿದ್ದರು. ಇನ್ನು ಇದೇ ವೇಳೆ ಇಬ್ಬರು ಯುವತಿಯರು ಕೂಡ ಲೌಕಿಕ ಜೀವನ ತೊರೆದು ಸನ್ಯಾಸ ಜೀವನ ಆಯ್ಕೆ ಮಾಡಿಕೊಂಡಿದ್ದಾರೆ.

ಕುಟುಂಬವನ್ನು ಬೀದಿಗೆ ತಂದಿದ್ದಾರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ: ಶೃಂಗೇರಿ ಶಾಸಕ ರಾಜೇಗೌಡ ಕಣ್ಣೀರು

ನನ್ನ ಕುಟುಂಬವನ್ನು ಬೀದಿಗೆ ತಂದಿದ್ದಾರೆ: ಶಾಸಕ ರಾಜೇಗೌಡ ಕಣ್ಣೀರು

ಶೃಂಗೇರಿ ಕ್ಷೇತ್ರದ ರೈತರ ಕಾರ್ಮಿಕರ ಮತ್ತು ನೆಲವಾಸಿಗಳ ಸಮಸ್ಯೆ ಕುರಿತು ಚರ್ಚಿಸಲು ಆಯೋಜಿಸಿದ್ದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿದ್ದು, ಈ ವೇಳೆ ನಮ್ಮ ಕುಟುಂಬಕ್ಕೆ ವಿನಾಕಾರಣ ತೊಂದರೆ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಜೀವರಾಜ್‌ ವಿರುದ್ಧ ಆರೋಪಿಸಿದ್ದಾರೆ.

Appke EV Scooter Scam: ಬೆಂಗಳೂರಿನಲ್ಲಿ ಇವಿ ಸ್ಕೂಟರ್ ಶೋ ರೂಮ್‌ನಿಂದ 35 ಕೋಟಿ ರೂ. ವಂಚನೆ; ಗ್ರಾಹಕರ ಹೆಸರಲ್ಲಿ 35,000 ಬೆಲೆಯ ವಾಹನಕ್ಕೆ 1.50 ಲಕ್ಷ ಲೋನ್‌!

ಬೆಂಗಳೂರಿನಲ್ಲಿ ಇವಿ ಸ್ಕೂಟರ್ ಹೆಸರಲ್ಲಿ 35 ಕೋಟಿ ರೂ. ವಂಚನೆ

ಇವಿ ಸ್ಕೂಟರ್ ನೀಡುವ ನೆಪದಲ್ಲಿ ಗ್ರಾಹಕರಿಂದ ಆಧಾರ್, ಪಾನ್ ಕಾರ್ಡ್ ಪಡೆದ ಶೋರೂಂ ಮಾಲೀಕರು, ಗ್ರಾಹಕರಿಗೆ ತಿಳಿಯದಂತೆ ಕೊಟಕ್ ಮಹೀಂದ್ರಾ ಬ್ಯಾಂಕ್ ಮೂಲಕ ಲೋನ್ ಮಾಡಿಸಿದ್ದಾರೆ. ಕೇವಲ 35,000 ರೂ. ಬೆಲೆಬಾಳುವ ಸಾಧಾರಣ ಇವಿ ಸ್ಕೂಟರ್‌ಗೆ 1.50 ಲಕ್ಷ ರೂಪಾಯಿ ಲೋನ್ ಮಾಡಿಸಿ ಬ್ಯಾಂಕ್‌ನಿಂದ ಹಣ ಪಡೆದುಕೊಳ್ಳಲಾಗಿದೆ. ಇದರಿಂದ ಗ್ರಾಹಕರು ಸಂಕಷ್ಟಕ್ಕೀಡಾಗಿದ್ದಾರೆ.

Phone Tapping: ಫೋನ್‌ ಕದ್ದಾಲಿಕೆ ನನ್ನ ಗುಣವಲ್ಲ, ಅದೇನಿದ್ದರೂ ಕಾಂಗ್ರೆಸ್ ಪಕ್ಷದ್ದೇ ಆವಿಷ್ಕಾರ; ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಕದ್ದಾಲಿಕೆ ನನ್ನ ಗುಣವಲ್ಲ, ಅದು ಕಾಂಗ್ರೆಸ್‌ನ ಆವಿಷ್ಕಾರ ಎಂದ ಎಚ್‌ಡಿಕೆ

ನಿಮ್ಮ ಪಕ್ಷದಲ್ಲಿನ ಕುರ್ಚಿ ಕಾಳಗದ ಮುಂದುವರಿದ ಭಾಗವೇ ಫೋನ್ ಕದ್ದಾಲಿಕೆ ಎನ್ನುವ ಅನುಮಾನ ಪ್ರತಿಪಕ್ಷಗಳದ್ದು ಮತ್ತು ಮಾಧ್ಯಮಗಳದ್ದು. ಪ್ರಶ್ನಿಸುವ ಜಾಗದಲ್ಲಿ ಪ್ರತಿಪಕ್ಷಗಳಿವೆ, ಉತ್ತರಿಸಿ. ವಿಷಯಾಂತರ ಬಿಟ್ಟು ಸತ್ಯ ಹೇಳಿ. ಸತ್ಯ ನಿಮ್ಮನೆ ದೇವ್ರು ಅಲ್ಲವೇ? ಸತ್ಯಮೇವ ಜಯತೇ ನಿಮ್ಮ ಸಿದ್ಧಸ್ಲೋಗನ್! ಕಥೆ ಕಟ್ಟಿ ಕಾಲಹರಣ ಮಾಡುತ್ತಿರೇಕೆ? ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Haveri News: ಕಜ್ಜರಿ ಪ್ಲಾಟ್ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ; ಸಮಸ್ಯೆ ಪರಿಹರಿಸಲು ಗ್ರಾಮಸ್ಥರ ಆಗ್ರಹ

ಕಜ್ಜರಿ ಪ್ಲಾಟ್ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ; ಗ್ರಾಮಸ್ಥರ ಪರದಾಟ

Haveri News: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸಮೀಪದ ಕಜ್ಜರಿ ಪ್ಲಾಟ್ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ತೀವ್ರವಾಗುತ್ತಿದ್ದು, ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ಗ್ರಾಮಸ್ಥರ ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕೈವಾರ ತಾತಯ್ಯ ಬರೆದಿರುವ 'ಕಾಲಜ್ಞಾನ' ಇಂದಿಗೂ ಪ್ರಸ್ತುತ: ಕೆ.ವಿ. ಪ್ರಭಾಕರ್

ಕೈವಾರ ತಾತಯ್ಯ ಬರೆದಿರುವ 'ಕಾಲಜ್ಞಾನ' ಇಂದಿಗೂ ಪ್ರಸ್ತುತ: ಕೆವಿಪಿ

KV Prabhakar: ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ ಅವರು, ಅಧ್ಯಾತ್ಮ‌ ಅಂದರೆ ಚರ್ಮಶುದ್ಧಿ ಅಲ್ಲ, ಅಂತರಂಗದ ಶುದ್ದಿ ಎಂದು ಬದುಕಿ‌ ತೋರಿಸಿದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದ್ದಾರೆ.

Kalaburagi News: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಅಪರಿಚಿತರಿಂದ ಬಾಂಬ್ ಬೆದರಿಕೆ ಸಂದೇಶ

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

Kalaburagi News: ಕಲಬುರಗಿ ಡಿಸ್ಟ್ರಿಕ್ಟ್ ಕೋರ್ಟ್ ಆಫೀಸ್ ಇ-ಮೇಲ್‌ಗೆ ಬಂದ ಸಂದೇಶದಲ್ಲಿ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಉಲ್ಲೇಖಿಸಲಾಗಿತ್ತು. ಈ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ತಕ್ಷಣವೇ ಎಚ್ಚೆತ್ತುಕೊಂಡು ಭದ್ರತಾ ಕ್ರಮಗಳನ್ನು ಕೈಗೊಂಡರು. ಈ ಕುರಿತ ವಿವರ ಇಲ್ಲಿದೆ.

Bangalore Tunnel Road: ಸಂಚಾರ ದಟ್ಟಣೆ ಮುಕ್ತಿಗೆ ಬೆಂಗಳೂರಿನಲ್ಲಿ ಶೀಘ್ರವೇ ಮತ್ತೊಂದು ಸುರಂಗ ಮಾರ್ಗ

ಸಂಚಾರ ದಟ್ಟಣೆ ಮುಕ್ತಿಗೆ ಬೆಂಗಳೂರಿನಲ್ಲಿ ಶೀಘ್ರವೇ ಮತ್ತೊಂದು ಸುರಂಗ ಮಾರ್ಗ

ಗೊರಗುಂಟೆಪಾಳ್ಯ ಜಂಕ್ಷನ್ ವಾಯುವ್ಯ ಬೆಂಗಳೂರಿನ ಪ್ರಮುಖ ಸಂಚಾರ ಕೇಂದ್ರವಾಗಿದ್ದು, ತುಮಕೂರು ರಸ್ತೆ, ಹೊರ ವರ್ತುಲ ರಸ್ತೆ ಹಾಗೂ ಸುತ್ತಮುತ್ತಲಿನ ಕೈಗಾರಿಕಾ ಮತ್ತು ವಸತಿ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಪೀಕ್ ಅವಧಿಯಲ್ಲಿ ಇಲ್ಲಿ ಸಂಚಾರ ನಿಧಾನಗೊಳ್ಳುವುದು, ಸಿಗ್ನಲ್‌ಗಳಲ್ಲಿ ದೀರ್ಘ ಸಾಲುಗಳು ನಿರ್ಮಾಣವಾಗುವುದು ಸಾಮಾನ್ಯ ದೃಶ್ಯವಾಗಿದೆ.

ಪೋಕ್ಸೊ ಕೇಸ್; ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮಾ.6ಕ್ಕೆ ಮುಂದೂಡಿಕೆ

ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mallikarjun Mutya Case: ಮಲ್ಲಿಕಾರ್ಜುನ ಮುತ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಸರಕಾರದ ಪರ ವಕೀಲರದಿಂದ ಆಕ್ಷೇಪಣೆ ಹಿನ್ನೆಲೆಯಲ್ಲಿ ಮಾರ್ಚ್ 6ಕ್ಕೆ ವಿಚಾರಣೆಯನ್ನು ಯಾದಗಿರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಮಂಗಳವಾರ ಮುಂದೂಡಿದೆ.

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್‌ ಪತ್ತೆ; ಕೇರಳ ಮೂಲದ ಇಬ್ಬರ ಬಂಧನ

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್‌ ಪತ್ತೆ

Drugs seized in Bengaluru: ಬೆಂಗಳೂರು ಹೊರವಲಯದ ಬಾಗಲೂರಿನ ಪ್ರೆಸ್ಟೀಜ್‌ ಫೈನ್‌ ಬೇಕರಿ ಪಾರ್ಕ್‌ನ ಫ್ಲ್ಯಾಟ್‌ವೊಂದರಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್‌ ಅನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದು, ಕೇರಳ ಮೂಲದ ಇಬ್ಬರನ್ನು ಬಂಧಿಸಿದ್ದಾರೆ.

ವಿದ್ಯುತ್‌ ಸಂಬಂಧಿತ ದೂರುಗಳಿಗೆ 1912 ಅಥವಾ ವಾಟ್ಸ್‌ಆ್ಯಪ್‌ ಸಹಾಯವಾಣಿ ಬಳಸಿ: ಬೆಸ್ಕಾಂ

ವಿದ್ಯುತ್‌ ಸಂಬಂಧಿತ ದೂರುಗಳಿಗೆ ಬೆಸ್ಕಾಂ ವಾಟ್ಸ್‌ಆ್ಯಪ್‌ ಸಹಾಯವಾಣಿ ಬಳಸಿ

Bescom Helpline: ವಿದ್ಯುತ್‌ ಪೂರೈಕೆ ಸೇರಿದಂತೆ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಸ್ಕಾಂ ತಿಳಿಸಿದೆ.

DK Shivakumar: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಮಾರ್ಚ್ 10ರಂದು ಡಿಸಿಎಂ ಡಿಕೆ ಶಿವಕುಮಾರ್‌ ಡಿನ್ನರ್ ಪಾರ್ಟಿ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಮಾ‌ರ್ಚ್ 10ರಂದು ಡಿಸಿಎಂ ಡಿನ್ನರ್ ಪಾರ್ಟಿ

ಸಿಎಂ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಹ್ವಾನ ನೀಡಿದ್ದಾರೆ. ಈ ಡಿನ್ನರ್ ಪಾರ್ಟಿ ಆಯೋಜನೆ ಮೂಲಕ ಶಾಸಕರಲ್ಲಿ ವಿಶ್ವಾಸ ಹಚ್ಚಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್‌ ನಾಯಕರು ಕೂಡ ಈ ಪಾರ್ಟಿಗೆ ಬರುವ ಸಾಧ್ಯತೆ ಇದೆ.

Loading...