ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Bengaluru Karaga 2025: ಬೆಂಗಳೂರು ಕರಗ; ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ ಸಿಎಂ

ಬೆಂಗಳೂರು ಕರಗ; ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಸಿಎಂ ಭೇಟಿ

Bengaluru Karaga 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಕರಗ ಶಕ್ತ್ಯೋತ್ಸವ ಮಹಾರಥೋತ್ಸವಕ್ಕೆ ಶುಭ ಕೋರಿ ನಮನ ಸಲ್ಲಿಸಿದರು. ಶನಿವಾರ ರಾತ್ರಿ 12:30ಕ್ಕೆ ಬೆಂಗಳೂರು ಕರಗಕ್ಕೆ ಚಾಲನೆ ನೀಡಲಾಗುತ್ತದೆ.

Positive Thinking: ರಿಸಲ್ಟ್ ನೋಡಿ ನಿಮ್ಮ ಮಕ್ಕಳನ್ನು ದಯವಿಟ್ಟು ನೋಯಿಸಬೇಡಿ...

ರಿಸಲ್ಟ್ ನೋಡಿ ನಿಮ್ಮ ಮಕ್ಕಳನ್ನು ದಯವಿಟ್ಟು ನೋಯಿಸಬೇಡಿ

Second PUC Result: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಡಿಮೆ ಅಂಕ ಪಡೆದುಕೊಂಡವರು ಕೊರಗಬೇಕಾಗಿಲ್ಲ. ಅದರಲ್ಲಿಯೂ ಪೋಷಕರು ಮಕ್ಕಳ ಅಂಕಗಳನ್ನು ಮತ್ತೊಬ್ಬರಿಗೆ ಹೋಲಿಸಿ, ಹೀಯಾಳಿಸಿ ಅವರಿಗೆ ನೋವಾಗುವಂತೆ ವರ್ತಿಸಲೇಬಾರದು ಎನ್ನುತ್ತಾರೆ ಕೌನ್ಸಲರ್ ವೀಣಾ ಪ್ರಕಾಶ್. ಅವರು ಪೋಷಕರಿಗೆ ಹೇಳಿದ ಕಿವಿಮಾತು ಇಲ್ಲಿದೆ.

Self Harming: ಬೆಳಗಾವಿಯ ಹಾಸ್ಟೆಲ್‌ನಲ್ಲಿ ಬಿಸಿಎ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಳಗಾವಿಯ ಹಾಸ್ಟೆಲ್‌ನಲ್ಲಿ ಬಿಸಿಎ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Self Harming: ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನಡೆದಿದೆ. ಶಿಲ್ಪಾ ಯರಮಸನಾಳ (20) ಆತ್ಮಹತ್ಯೆ ಮಾಡಿಕೊಂಡ ಯುವತಿ.‌

Congress Protest: ಬಿಜೆಪಿ ಜನಾಕ್ರೋಶ ಯಾತ್ರೆ ವಿರುದ್ಧ ಪ್ರತಿಭಟನೆ; ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಶಿವಮೊಗ್ಗದಲ್ಲಿ ಪ್ರತಿಭಟನೆ; ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Shivamogga News: ಬಿಜೆಪಿ ಜನಾಕ್ರೋಶ ಯಾತ್ರೆ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ನಡೆಲಾಯಿತು. ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಜೀವನದ ಮೇಲೆ ಗದಾಪ್ರಹಾರ ಮಾಡುತ್ತಿರುವ ಬಿಜೆಪಿಗೆ ಜನಾಕ್ರೋಶ ಯಾತ್ರೆ ಮಾಡುವ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ನೈತಿಕತೆ ಇಲ್ಲ ಎಂದು ಕಾಂಗ್ರೆಸ್‌ ಮುಖಂಡ ಹರ್ಷಿತ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

Kadambotsava 2025: ಕದಂಬೋತ್ಸವ-2025; ಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆಗೆ ಚಾಲನೆ

ಕದಂಬೋತ್ಸವ-2025; ಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆಗೆ ಚಾಲನೆ

Kadambotsava 2025: ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ಕದಂಬೋತ್ಸವ- 2025 ರ ಅಂಗವಾಗಿ ಶನಿವಾರ ʼಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆʼ ಯು ಮಧುಕೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡು ಮಯೂರವರ್ಮ ವೇದಿಕೆಯವರೆಗೆ ಸಾಗಿತು. ವಿವಿಧ ಕಲಾಪ್ರಕಾರಗಳನ್ನೊಳಗೊಂಡ ತಂಡಗಳು ಮೆರವಣಿಗೆಗೆ ಭವ್ಯ ಆಕರ್ಷಣೆ ನೀಡಿದವು.

Karnataka Weather: ಮುಂದಿನ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ!

ಮುಂದಿನ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ!

Karnataka Weather: ಕಲಬುರಗಿಯಲ್ಲಿ ಶುಕ್ರವಾರ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ 40.2 ಡಿ.ಸೆ. ದಾಖಲಾಗಿದೆ. ಇನ್ನು ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗಿಲ್ಲ, ಕುಸಿಯುವ ಪ್ರವೃತ್ತಿ ಇದೆ. ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

JDS Protest: ವಿಧಾನಸೌಧ ಮುತ್ತಿಗೆಗೆ ಯತ್ನ; ನಿಖಿಲ್‌ ಕುಮಾರಸ್ವಾಮಿ ಸೇರಿ ಹಲವು ಜೆಡಿಎಸ್‌ ನಾಯಕರು ವಶಕ್ಕೆ

ನಿಖಿಲ್‌ ಕುಮಾರಸ್ವಾಮಿ ಸೇರಿ ಹಲವು ಜೆಡಿಎಸ್‌ ನಾಯಕರು ವಶಕ್ಕೆ

Sakappa Saku Congress Sarkara: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವು ಜೆಡಿಎಸ್‌ ನಾಯಕರು ಪಾಲ್ಗೊಂಡಿದ್ದರು.

45 Movie: ಬಹು ನಿರೀಕ್ಷಿತ ಮಲ್ಟಿಸ್ಟಾರರ್ ʼ45ʼ ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ; ಆ.15ಕ್ಕೆ ಸಿನಿಮಾ ರಿಲೀಸ್‌

ಮಲ್ಟಿಸ್ಟಾರರ್ ʼ45ʼ ಚಿತ್ರ ಆ.15ಕ್ಕೆ ರಿಲೀಸ್‌; ಟೀಸರ್‌ಗೆ ಭಾರಿ ಮೆಚ್ಚುಗೆ

45 Movie: ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ ಪ್ಯಾನ್ ಇಂಡಿಯಾ ʼ45ʼ ಚಿತ್ರದ ಟೀಸರ್‌ಗೆ ಕನ್ನಡಿಗರು ಮಾತ್ರವಲ್ಲದೆ ಎಲ್ಲಾ ಭಾಷೆಗಳ ಕಲಾಭಿಮಾನಿಗಳು ಫಿದಾ ಆಗಿದ್ದಾರೆ. ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಟೀಸರ್‌ನಲ್ಲೇ ಮೋಡಿ ಮಾಡಿರುವ ಈ ಚಿತ್ರ ಆಗಸ್ಟ್ 15 ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Tumkur News: ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಕೆಂಪರಾಜಯ್ಯ ಆಯ್ಕೆ

ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಕೆಂಪರಾಜಯ್ಯ ಆಯ್ಕೆ

Tumkur News: ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2025-27ನೇ ಸಾಲಿಗೆ 2 ವರ್ಷದ ಅವಧಿಗೆ ಎಚ್. ಕೆಂಪರಾಜಯ್ಯ ಎರಡನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ 6 ಮಂದಿ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಕೆಂಪರಾಜಯ್ಯ 514 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Electric Rapid Transit: ಹುಬ್ಬಳ್ಳಿ - ಧಾರವಾಡ ನಡುವೆ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ

ಹು-ಧಾ ನಡುವೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ ಆರಂಭಿಸಲು ಒಪ್ಪಂದ

Electric Rapid Transit: ಹುಬ್ಬಳ್ಳಿ - ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಕುರಿತ ವಿವರ ಇಲ್ಲಿದೆ.

JDS Protest: ನಮ್ಮ ಹೋರಾಟ ನೋಡಿ ಸರ್ಕಾರಕ್ಕೆ ತಳಮಳ; ಯುದ್ಧಕ್ಕೆ ಜೆಡಿಎಸ್ ಸಿದ್ಧ ಎಂದ ನಿಖಿಲ್

ಯುದ್ಧಕ್ಕೆ ಜೆಡಿಎಸ್ ಸಿದ್ಧ ಎಂದ ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಸಾಕಪ್ಪ ಸಾಕು ಎಂಬ ಘೋಷವಾಕ್ಯ ದೊಂದಿಗೆ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ.

JDS Protest: ಕಾಂಗ್ರೆಸ್ ಪುಢಾರಿಗಳು ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ: ಎಚ್.ಡಿ. ಕುಮಾರಸ್ವಾಮಿ ಗುಡುಗು

ಕಾಂಗ್ರೆಸ್‌ನವರು ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ: ಎಚ್‌ಡಿಕೆ

JDS Protest: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ.

JDS Protest: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ಬೆಲೆ ಏರಿಕೆ ಖಂಡಿಸಿ ಬೆಂಗಳೂರಲ್ಲಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

JDS Protest: ಪ್ರತಿಭಟನಾ ಸಭೆ ಮುಕ್ತಾಯವಾದ ನಂತರ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಯಕರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಅಡ್ಡಗಟ್ಟಿದ ಪೊಲೀಸರು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಮುಖಂಡರನ್ನು ವಶಕ್ಕೆ ತೆಗೆದುಕೊಂಡು, ನಂತರ ಬಿಡುಗಡೆ ಮಾಡಿದ್ದಾರೆ.

Tumakuru railway station: ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು ಅಂತಿಮ

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು ಅಂತಿಮ

Tumakuru railway station: ತುಮಕೂರು ರೈಲು ನಿಲ್ದಾಣವನ್ನು ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಲು ಅಗತ್ಯ ಅನುಮೋದನೆ ಮತ್ತು ಅಧಿಸೂಚನೆಯನ್ನು ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಪತ್ರ ಬರೆದಿದೆ.

Krishna Byre Gowda: ಸಾಮಾನ್ಯರಂತೆ ಸಾರಿಗೆ ಬಸ್‌ನಲ್ಲೇ ವಿಜಯಪುರಕ್ಕೆ ಪ್ರಯಾಣಿಸಿದ ಕೃಷ್ಣ ಬೈರೇಗೌಡ; ಸಚಿವರ ಸರಳತೆಗೆ ಭಾರಿ ಮೆಚ್ಚುಗೆ

ಸಾರಿಗೆ ಬಸ್‌ನಲ್ಲೇ ವಿಜಯಪುರಕ್ಕೆ ಪ್ರಯಾಣಿಸಿದ ಸಚಿವ ಕೃಷ್ಣ ಬೈರೇಗೌಡ!

Minister Krishna Byre Gowda: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಾಮಾನ್ಯರಂತೆ ಬೆಂಗಳೂರಿನಿಂದ ವಿಜಯಪುರಕ್ಕೆ ಸಾರಿಗೆ ಬಸ್‌ನಲ್ಲಿ ತೆರಳಿದ್ದು, ಸಚಿವರ ಸರಳತೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಹಿಂದೆ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿ ಸಚಿವರು ಸುದ್ದಿಯಾಗಿದ್ದರು.

Basanagouda Patil Yatnal: ಯತ್ನಾಳ್‌ ಹತ್ಯೆಗೆ ಸಂಚು; ಆಡಿಯೋ ಬೆನ್ನಲ್ಲೇ ಮತ್ತೊಂದು ಸ್ಫೋಟಕ ವಿಡಿಯೋ ವೈರಲ್‌!

ಯತ್ನಾಳ್‌ ಹತ್ಯೆಗೆ ಸಂಚು; ಮತ್ತೊಂದು ಸ್ಫೋಟಕ ವಿಡಿಯೋ ವೈರಲ್‌!

Murder conspiracy: ವಿಜಯಪುರ ನಗರದ ಸೊಹೇಲ್ ಜರ್ತಾರ್ ಎಂಬಾತ ವಿಡಿಯೋ ಮಾಡಿದ್ದು, ಬಿಜಾಪುರ ಫೌಂಡೇಶನ್ ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿದ್ದಾನೆ. ನಮ್ಮ ಪ್ರವಾದಿಯನ್ನು ಟೀಕಿಸಿರುವುದನ್ನು ನಾವು ಸಹಿಸಿಕೊಳ್ಳಬಾರದು. ಎಲ್ಲ ಮುಸ್ಲಿಮರು ಒಗ್ಗಟ್ಟಾಗಬೇಕು. ಧರ್ಮಕ್ಕಾಗಿ ಎಲ್ಲರೂ ಒಂದಾಗಬೇಕು ವಿಡಿಯೋದಲ್ಲಿ ಯುವಕ ಹೇಳಿದ್ದಾನೆ.

School Fees Hike: ಪೋಷಕರಿಗೆ ಮತ್ತೆ ಎದುರಾಯ್ತು ಶಾಕ್; ಖಾಸಗಿ ಶಾಲಾ ಶುಲ್ಕ ಶೇ. 15-20%ರಷ್ಟು ಏರಿಕೆ

ಖಾಸಗಿ ಶಾಲಾ ಶುಲ್ಕ ಶೇ. 15-20%ರಷ್ಟು ಏರಿಕೆ

ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವ ಪೋಷಕರಿಗೆ ಈ ವರ್ಷದಿಂದ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಲಿದೆ. ರಾಜ್ಯದ ಹಲವು ಖಾಸಗಿ ಶಾಲೆಗಳಲ್ಲಿ ಶುಲ್ಕ ಏಕಾಏಕಿ ಹೆಚ್ಚಳ ಮಾಡಲಾಗಿದೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಎಷ್ಟಿದೆ ಗೊತ್ತಾ?

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 25ರೂ. ಏರಿಕೆಯಾಗಿ 8,770 ರೂ. ಮತ್ತು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ.ಏರಿಕೆ ಆಗಿದ್ದು 9,567 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 70,160 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,700 ರೂ. ಮತ್ತು 100 ಗ್ರಾಂಗೆ 8,77,000 ರೂ. ನೀಡಬೇಕಾಗುತ್ತದೆ.

Road Accident: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ಮರಕ್ಕೆ ಬೈಕ್‌ ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು

Road Accident: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಪುರುಷಗಡ್ಡೆಯಲ್ಲಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಶಾಂತ್ ಹಾಗೂ ಬೆಳ್ಮನೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದ್ದು, ಅತಿ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ.

Home Guards: ಹೋಂ ಗಾರ್ಡ್ಸ್‌ಗೆ ಗುಡ್‌ನ್ಯೂಸ್‌; ಬರ್ತ್‌ ಡೇಗೆ ವೇತನ ಸಹಿತ ರಜೆ

ಹೋಂ ಗಾರ್ಡ್ಸ್‌ಗೆ ಗುಡ್‌ನ್ಯೂಸ್‌; ಬರ್ತ್‌ ಡೇಗೆ ವೇತನ ಸಹಿತ ರಜೆ

Home Guards: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕ ದಳ ಸಿಬ್ಬಂದಿಗೆ ಇನ್ನು ಮುಂದೆ ಪೊಲೀಸರ ಮಾದರಿಯಲ್ಲಿ ಅವರ ಹುಟ್ಟುಹಬ್ಬದ ದಿನ ಶುಭಾಶಯ ಪತ್ರ ಹಾಗೂ ವೇತನ ಸಹಿತ ರಜೆ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

Anirudh Ravichander: ಮೇ.31ಕ್ಕೆ ಬೆಂಗಳೂರಿನಲ್ಲಿ ಅನಿರುದ್ಧ್ ರವಿಚಂದರ್ ಸಂಗೀತ ಸಂಜೆ!

ಬೆಂಗಳೂರಿನಲ್ಲಿ ಅನಿರುದ್ಧ್ ಮ್ಯೂಸಿಕ್ ಹಬ್ಬ!

ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ. ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಇದೇ ಹುಕುಂ ಟೂರ್ ಮೊತ್ತ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದೆ. ಅದೂ ಕೂಡ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಮ್ಯೂಸಿಕ್ ಜಾತ್ರೆ ಮಾಡಲು ಅನಿರುದ್ಧ್ ರವಿಚಂದರ್ ರೆಡಿಯಾಗಿದ್ದಾರೆ.

Summer Kids Travel Fashion: ಮಕ್ಕಳ ಸಮ್ಮರ್‌ ಟ್ರಾವೆಲ್‌ ಫ್ಯಾಷನ್‌ಗೆ ಇಲ್ಲಿವೆ ಸಿಂಪಲ್‌ ಟಿಪ್ಸ್‌

ಮಕ್ಕಳ ಸಮ್ಮರ್‌ ಟ್ರಾವೆಲ್‌ ಫ್ಯಾಷನ್‌ಗೆ ಇಲ್ಲಿವೆ ಸಿಂಪಲ್‌ ಟಿಪ್ಸ್‌

Summer Kids Travel Fashion: ಬೇಸಿಗೆ ರಜೆಯಲ್ಲಿ ಟ್ರಾವೆಲ್‌ ಮಾಡುವ ಮಕ್ಕಳ ಫ್ಯಾಷನ್‌ವೇರ್‌ಗಳು ನೋಡಲು ಆಕರ್ಷಕವಾಗಿದ್ದರೆ ಸಾಲದು. ಜತೆಗೆ ಕಂಫರ್ಟಬಲ್‌ ಆಗಿರಬೇಕು ಎನ್ನುತ್ತಾರೆ ಕಿಡ್ಸ್‌ ಸ್ಟೈಲಿಸ್ಟ್‌ ಜೆನ್‌. ಪೋಷಕರು ಈ ಕುರಿತಂತೆ ಯಾವ್ಯಾವ ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ಒಂದಿಷ್ಟು ಸಲಹೆ ನೀಡಿದ್ದಾರೆ.

Model Summer Fashion: ಯುವಕರಿಗೆ ಮಾಡೆಲ್‌ & ನಟ ವಿನಯ್‌ ಸಿಂಧ್ಯಾ ಸಮ್ಮರ್‌ ಫ್ಯಾಷನ್‌ ಟಿಪ್ಸ್‌

ಯುವಕರಿಗೆ ಮಾಡೆಲ್‌ & ನಟ ವಿನಯ್‌ ಸಿಂಧ್ಯಾ ಸಮ್ಮರ್‌ ಫ್ಯಾಷನ್‌ ಟಿಪ್ಸ್‌

Model Summer Fashion: ನಟ ಕಮ್‌ ಮಾಡೆಲ್‌ ವಿನಯ್‌ ಸಿಂಧ್ಯಾ ತಮ್ಮ ಸಮ್ಮರ್‌ ಲೈಫ್‌ಸ್ಟೈಲ್‌ ಹಾಗೂ ಫ್ಯಾಷನ್‌ ಬಗ್ಗೆ ವಿಶ್ವವಾಣಿ ನ್ಯೂಸ್‌ನೊಂದಿಗೆ ಮಾತನಾಡಿರುವುದಲ್ಲದೇ, ಯುವಕರಿಗೆ ಈ ಸೀಸನ್‌ನಲ್ಲಿ ಹೇಗಿರಬೇಕು? ಏನು ಮಾಡಬೇಕು? ಎಂಬುದರ ಬಗ್ಗೆ ಸಿಂಪಲ್‌ ಟಿಪ್ಸ್‌ ನೀಡಿದ್ದಾರೆ.

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ!

ಇಂದು ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆ ಇದೆ.