ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Sadhana Sourabha: ವಿಶ್ವೇಶ್ವರ ಭಟ್ಟರಿಗೆ ಹುಟ್ಟೂರಿನಲ್ಲಿ ʼರಾಷ್ಟ್ರೀಯ ಸೌರಭ ಸಮ್ಮಾನ್‌ ಪ್ರಶಸ್ತಿʼ ಪ್ರದಾನ

ವಿಶ್ವೇಶ್ವರ ಭಟ್ಟರಿಗೆ ʼರಾಷ್ಟ್ರೀಯ ಸೌರಭ ಸಮ್ಮಾನ್‌ ಪ್ರಶಸ್ತಿʼ ಪ್ರದಾನ

Vishweshwar Bhat: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹವ್ಯಕ ಸಭಾಮಂಟಪದಲ್ಲಿ ʼಸಾಧನಾ ಸೌರಭ; ಸಾಂಸ್ಕೃತಿಕ ಅನುಸಂಧಾನ ಮತ್ತು ರಾಷ್ಟ್ರೀಯ ಸೌರಭ ಸಮ್ಮಾನ್‌ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಭಾನುವಾರ ಆಯೋಜಿಸಲಾಗಿತ್ತು. ಈ ವೇಳೆ ವಿಶ್ವವಾಣಿ ಪ್ರಧಾನ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರಿಗೆ ʼರಾಷ್ಟ್ರೀಯ ಸೌರಭ ಸಮ್ಮಾನ್‌ ಪ್ರಶಸ್ತಿʼಯನ್ನು ಪ್ರದಾನ ಮಾಡಲಾಗಿದೆ.

Belagavi shootout: ಬೆಳಗಾವಿಯ ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ; ಪುತ್ರಿ ಅಪಾಯದಿಂದ ಪಾರು

ಬೆಳಗಾವಿಯ ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ್​ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ಮಧ್ಯೆ ರಾತ್ರಿ ಕಿಡಿಗೇಡಿಗಳು ಫೈರಿಂಗ್​ ಮಾಡಿದ್ದು, ಬೆಳಗಾವಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಏಪ್ರಿಲ್‌ 27ರಂದು ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ, ಸ್ಮರಣ ಸಂಚಿಕೆ ಬಿಡುಗಡೆ

ಏ. 27ಕ್ಕೆ ಕೆಎಎಸ್ ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ

KAS Officers Association: ಜನಸೇವೆಯಲ್ಲಿ ಅವಿರತವಾಗಿ ತೊಡಗಿರುವ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಕಟ್ಟಡವು ಸುಮಾರು 20 ವರ್ಷಗಳ ಹಿಂದೆ ನಿರ್ಮಿಸಲಾದ ಕಟ್ಟಡವನ್ನು ಪ್ರಸ್ತುತ ನವೀಕರಿಸಿ ಉದ್ಘಾಟಿಸಲಾಗುತ್ತಿದೆ. ಏಪ್ರಿಲ್ 27 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇನ್ ಫೆಂಟ್ರಿ ರಸ್ತೆಯ ಕೆಎಎಸ್ ಅಧಿಕಾರಿಗಳ ಸಂಘದ ಕಾರ್ಯಾಲಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ʼʼಐಸ್‌ ಕ್ರೀಂ ಬೇಕ ಅಣ್ಣ?ʼʼ:  ಸುಡುವ ಬಿಸಿಲಿನಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೆ ಐಸ್‌ ಕ್ರೀಂ ವಿತರಿಸಿದ ಬೆಂಗಳೂರಿನ ಯುವಕ

ರಸ್ತೆಬದಿಯ ಕಾರ್ಮಿಕರಿಗೆ ಐಸ್‌ ಕ್ರೀಂ ವಿತರಿಸಿದ ಬೆಂಗಳೂರಿನ ಯುವಕ

Viral Video: ಬೆಂಗಳೂರಿನ ಕಂಟೆಂಟ್ ಕ್ರಿಯೇಟರ್ ಹಾಗೂ ಬೈಕ್ ರೈಡರ್ ಒಬ್ಬರು ರಸ್ತೆ ಬದಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಐಸ್ ಕ್ರೀಂ ವಿತರಿಸುವ ಮೂಲಕ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಂಗಳೂರಿನಲ್ಲಿ ಕಂಡುಬಂದ ಈ ಹೃದಯಸ್ಪರ್ಶಿ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

Haveri News: ಹಾವೇರಿಯಲ್ಲಿ ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಇಬ್ರಾಹಿಂ ವಿರುದ್ಧ ಲವ್‌ ಜಿಹಾದ್‌ ಆರೋಪ

ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಲವ್‌ ಜಿಹಾದ್‌ ಆರೋಪ

Haveri love jihad case: ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ಯುವತಿ ನಾಪತ್ತೆಯಾಗಿದ್ದಾಳೆ. ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ಕಾಣೆಯಾಗಿದ್ದರಿಂದ ಪೋಷಕರು ಕಂಗಾಲಾಗಿದ್ದಾರೆ. ಆದರೆ, ಯವತಿಯು ಮುಸ್ಲಿಂ ಯುವಕನ ಜತೆ ಪರಾರಿಯಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇದು ಲವ್‌ ಜಿಹಾದ್‌ ಎಂದು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಬೆಂಗಳೂರಿನ ಆತ್ಮ' ಶಿಲ್ಪ ಅನಾವರಣ, ಟರ್ಮಿನಲ್-2ರ ಸೌಂದರ್ಯಕ್ಕೆ ಹೊಸ ಮೆರುಗು

ಟರ್ಮಿನಲ್-2ರ ಸೌಂದರ್ಯಕ್ಕೆ ಹೊಸ ಮೆರುಗು

ಬಯೊಕಾನ್ ಫೌಂಡೇಷನ್ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್‌) ಸಹಯೋಗದಲ್ಲಿ ಈ ಕಲಾಕೃತಿಯನ್ನು ಟರ್ಮಿನಲ್-2ರ ಮುಂಭಾಗ ದಲ್ಲಿ ಸ್ಥಾಪಿಸಲಾಗಿದೆ. ಸ್ಪೇನ್‌ನ ಖ್ಯಾತ ಕಲಾಕಾರ ಜೌಮೆ ಪ್ಲೆನ್ಸಾ ಅವರ ಕಲ್ಪನೆಯಲ್ಲಿ ಮೂಡಿ ಬಂದಿರುವ ಈ ಶಿಲ್ಪವು ಪ್ರಯಾಣಿಕರ ಕಣ್ಮನ ಸೆಳೆಯುತ್ತಿದೆ.

Kodagu News: ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌;  ಹೈಕೋರ್ಟ್​​ ಆದೇಶ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌

ತೀವ್ರ ಕುತೂಹಲ ಕರಳಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಗೆ ಅಂತಿಮವಾಗಿ ದಿನಾಂಕ ನಿಗದಿಯಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇ 2 ರಂದು ಮರು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಐಡಿಎಸ್‌ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ.

ಸಾಂಬಾರ್‌ ಮಾಡಿಲ್ಲ ಎಂದು ಅಪ್ಪ ಬೈದಿದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗಳು!

ಸಾಂಬಾರ್‌ ಮಾಡಿಲ್ಲ ಎಂದು ಅಪ್ಪ ಬೈದಿದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗಳು!

ಸಾಂಬಾರ್ ಮಾಡಿಲ್ಲ ಎಂದು ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಮೃತ ಯುವತಿ. ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಘಟನೆ ನಡೆದಿದೆ. ಸದ್ಯ ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

ಬೆಂಗಳೂರಿನ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ಬಿಎಂಟಿಸಿ ಮತ್ತು ಮೆಟ್ರೋಗೆ ಇನ್ಮುಂದೆ ಒಂದೇ ಸ್ಮಾರ್ಟ್ ಕಾರ್ಡ್

ಬಿಎಂಟಿಸಿ ಮತ್ತು ಮೆಟ್ರೋಗೆ ಇನ್ಮುಂದೆ ಒಂದೇ ಸ್ಮಾರ್ಟ್ ಕಾರ್ಡ್

ಬೆಂಗಳೂರು ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆ ಜಾರಿಯಾಗಲಿದೆ. ಬಿಎಂಟಿಸಿ ಹಾಗೂ ಮೆಟ್ರೋದಲ್ಲಿ ಪ್ರಯಾಣಿಸುವವರು ಎರಡೆರಡು ಕಾರ್ಡ್‌ಗಳನ್ನಿಟ್ಟುಕೊಳ್ಳಬೇಕಿತ್ತು. ಆದರೆ ಇನ್ನು ಮುಂದೆ ಈ ಕಿರಿಕಿರಿ ನಿವಾರಣೆಯಾಗಲಿದೆ. ಇನ್ನು ಮುಂದೆ ಸರ್ಕಾರ ಸ್ಮಾರ್ಟ್‌ ಕಾರ್ಡ್‌ ಪರಿಚಯಿಸಲಿದೆ.

Karnataka Weather: ರಾಜ್ಯಾದ್ಯಂತ ಹೆಚ್ಚಿದ ತಾಪಮಾನ; ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಸಾಧ್ಯತೆ

ಇಂದು ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇನ್ನೂ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ.

ಹಿರಿಯ ನಾಗರೀಕರಿಗೆ ಕಾನೂನು ಅರಿವು ನೆರವು ನೀಡಲು ಸದಾ ಸಿದ್ಧ: ಬಿ.ಶಿಲ್ಪ ಹೇಳಿಕೆ

ಹಿರಿಯ ನಾಗರೀಕರಿಗೆ ಕಾನೂನು ಅರಿವು ನೆರವು ನೀಡಲು ಸದಾ ಸಿದ್ಧ

ಹಿರಿಯ ನಾಗರೀಕರನ್ನು ಗೌರವಿಸುವ ಸಂಸ್ಕೃತಿ ಹೊಂದಿರುವ ಭಾರತದೇಶದಲ್ಲಿ ನಾವಿದ್ದೇವೆ ಎಂಬುದೇ ಹೆಮ್ಮೆಯ ಸಂಗತಿ. ಇಳಿಸಂಜೆಯಲ್ಲಿರುವ ನೀವು ಈ ಅವಧಿಯಲ್ಲಿ ದೈಹಿಕ ಆರೋಗ್ಯ ದ ಜತೆಗೆ ಮಾನಸಿಕ ಆರೋಗ್ಯವನ್ನು ಕೂಡ ತಪ್ಪದೆ ಕಾಪಾಡಿಕೊಳ್ಳಲು ಗಮನ ಕೊಡಬೇಕು ಎಂದು ಮನವಿ ಮಾಡಿದ ಅವರು ಜಿಲ್ಲಾ ನಿವೃತ್ತ ನೌಕರರ ಸಂಘ ಮತ್ತು ಹಿರಿಯ ನಾಗರೀಕರ ಸಂಘದ ಜೊತೆಗೂಡಿ ಶೀಘ್ರವೇ ವೈದ್ಯಕೀಯ ತಪಾಸಣಾ ಶಿಬಿರ ಆಯೋಜನೆ ಮಾಡೋಣ

ನೀರಿನ ಕೊರತೆ ನೀಗಿಸಲು ಸಮಸ್ಯಾತ್ಮಕ ಹೋಬಳಿಗೆ ಜಿಲ್ಲಾ ಮಟ್ಟದ ಅಧಿಕಾರಿ ನೇಮಕ: ಜಿ ಪ್ರಭು

ನೀರಿನ ಕೊರತೆ ನೀಗಿಸಲು ಜಿಲ್ಲಾ ಮಟ್ಟದ ಅಧಿಕಾರಿ ನೇಮಕ

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ, ಜಾನುವಾರುಗಳ ಮೇವಿನ ಸ್ಥಿತಿಗತಿ, ಕೃಷಿ ಚಟುವಟಿಕೆಗಳ ಸಿದ್ಧತೆಗಳಿಗೆ ಸಂಬಂಧಿಸಿದಂತೆ ನಿಗಾ ಹಾಗೂ ಪರಿಶೀಲನೆ ಮಾಡಲು ಜಿಲ್ಲೆಯ 8 ತಾಲ್ಲೂಕುಗಳಲ್ಲಿನ ಎಲ್ಲಾ 26 ಹೋಬಳಿಗಳಿಗೆ  ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ

Law Student Hospitalized: ಕೆಎಸ್‌ಆರ್‌ಟಿಸಿ ಬಸ್ ಹರಿದು ಕಾನೂನು ವಿದ್ಯಾರ್ಥಿನಿ ಆಸ್ಪತ್ರೆ ಪಾಲು: ವಿದ್ಯಾರ್ಥಿಗಳಿಂದ ಬಾರೀ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಬಸ್ ಹರಿದು ಕಾನೂನು ವಿದ್ಯಾರ್ಥಿನಿ ಆಸ್ಪತ್ರೆ ಪಾಲು

ಕೆಎಸ್‌ಆರ್‌ಟಿಸಿ ಬಸ್ ಹರಿದು ನಾಲ್ಕನೇ ಸೆಮಿಸ್ಟರ್ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ಕೂಡಲೇ ಬಸ್ ಆಕೆಯ ಕಾಲಿನ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸು ವಂತಾದ ಘಟನೆ ಎಸ್‌ಜೆಸಿಐಟಿ ಕಾಲೇಜು ಮುಂಭಾಗ ನಡೆದಿದೆ.

Soumya Reddy: ಬಿಜೆಪಿ ಹುನ್ನಾರದಿಂದಾಗಿ ನಾರೀ ವಂದನಾ ಮಸೂದೆಗೆ ಸೋಲಾಗಿದೆ ಕಾಂಗ್ರೆಸ್‌ನಿಂದಲ್ಲ: ಸೌಮ್ಯ ರೆಡ್ಡಿ ಹೇಳಿಕೆ

ಬಿಜೆಪಿ ಹುನ್ನಾರದಿಂದಾಗಿ ನಾರೀ ವಂದನಾ ಮಸೂದೆಗೆ ಸೋಲು

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಈ 13 ವರ್ಷಗಳಲ್ಲಿ ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿಸುವುದು, ಇಲ್ಲಸಲ್ಲದ ಆರೋಪಗಳನ್ನು ಮಾಡಿ ಜನರ ಮನಸ್ಸಿನಲ್ಲಿ ವಿಷತುಂಬುವ ಕೆಲಸ ಮಾಡಲಾಗುತ್ತಿದೆ.ಕಾಂಗ್ರೆಸ್ ಎಂದೂ ಕೂಡ ಮಹಿಳಾ ಮೀಸಲಾತಿ ವಿರೋದಿ ಅಲ್ಲವೇ ಅಲ್ಲ,ಇದು ಜನತೆಗೆ ಗೊತ್ತಿದೆ. ಬಿಜೆಪಿ ಹೇಳಿಕೆ ಹಾಸ್ಯಾಸ್ಪದದಿಂದ ಕೂಡಿದೆ

ಒಳ ಮೀಸಲು ಜಾರಿ ನಮ್ಮ ದಶಕಗಳ ಹೋರಾಟಕ್ಕೆ ಸಿಕ್ಕ ಪ್ರತಿಫಲ: ಡಾ.ನರಸಿಂಹಪ್ಪ ಕಾಳೇನಹಳ್ಳಿ

ಒಳ ಮೀಸಲು ಜಾರಿ ನಮ್ಮ ದಶಕಗಳ ಹೋರಾಟಕ್ಕೆ ಸಿಕ್ಕ ಪ್ರತಿಫಲ: ಡಾ.ನರಸಿಂಹಪ್ಪ

Madhugiri News: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಗುಂಡಗಲ್ಲು ಗ್ರಾಮದಲ್ಲಿ ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಹಾಗೂ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರಗತಿಪರ ಚಿಂತಕ ಡಾ.ನರಸಿಂಹಪ್ಪ ಕಾಳೇನಹಳ್ಳಿ ಮಾತನಾಡಿದ್ದಾರೆ.

ಮೀಸಲಾತಿ ವಿರೋಧಿಸಿ 'ಮಹಿಳಾ ಪರ' ಎಂದು ಬೊಗಳೆ ಬಿಡುತ್ತಿದೆ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ ವಾಗ್ದಾಳಿ

ಮೀಸಲಾತಿ ವಿರೋಧಿಸಿ 'ಮಹಿಳಾ ಪರ' ಎಂದು ಬೊಗಳೆ ಬಿಡುತ್ತಿದೆ ಕಾಂಗ್ರೆಸ್: ಜೋಶಿ

ಜವಾಹರಲಾಲ್ ನೆಹರು ಎಸ್ಸಿ, ಎಸ್ಟಿ ಮೀಸಲಾತಿ, ರಾಜೀವ ಗಾಂಧಿ ಒಬಿಸಿ ಮೀಸಲಾತಿ ವಿರೋಧಿಸಿದ್ದರೆ, ಇದೀಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಹಿಳಾ ಮೀಸಲಾತಿಯನ್ನು ಧಿಕ್ಕರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹದ್‌ ಜೋಶಿ ಆರೋಪಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಎಲ್ಲರೆದುರೇ ಯುವಕ-ಯುವತಿಯ ರೊಮ್ಯಾನ್ಸ್; ಮಣಿಪಾಲದಲ್ಲಿ ಕಂಡುಬಂದ ದೃಶ್ಯಕ್ಕೆ ನೆಟ್ಟಿಗರು ಕಿಡಿಕಿಡಿ

ಸಾರ್ವಜನಿಕ ಸ್ಥಳದಲ್ಲೇ ಯುವಕ-ಯುವತಿಯ ರೊಮ್ಯಾನ್ಸ್: ವಿಡಿಯೊ ವೈರಲ್‌

Viral Video: ಕೆಲ ಯುವಕ-ಯುವತಿಯರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಬಸ್ಸಿನಲ್ಲಿ ಪ್ರೇಮಿಗಳು ಮೈಮರೆತು ಚುಂಬಿಸುವುದು, ರೈಲಿನಲ್ಲಿ ಪರಸ್ವರ ಅಪ್ಪಿಕೊಳ್ಳುವುದು ಹೀಗೆ ನಾನಾ ವಿಡಿಯೊಗಳು ವೈರಲ್ ಆಗುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ ಉಡುಪಿಯ ಮಣಿಪಾಲದಲ್ಲಿ ಯುವ ಜೋಡಿಯೊಂದು ಸಾರ್ವಜನಿಕವಾಗಿಯೇ ರೊಮ್ಯಾನ್ಸ್‌ ಮಾಡಿದೆ.

‘ಸ್ಕೋರ್–2026’: ಕಾರ್ಡಿಯೊಥೊರಾಸಿಕ್ ಯುವ ಶಸ್ತ್ರವೈದ್ಯರಿಗೆ ಜಾಗತಿಕ ತಜ್ಞರ ಮಾರ್ಗದರ್ಶನ

‘ಸ್ಕೋರ್–2026’: ಹೃದಯ ಶಸ್ತ್ರವೈದ್ಯರಿಗೆ ಎರಡು ದಿನಗಳ ವಿಶೇಷ ತರಬೇತಿ

ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ (Sathya Sai Grama) ಭಾರತದ ಮೊದಲ ಉಚಿತ ಗ್ರಾಮೀಣ ವೈದ್ಯಕೀಯ ಕಾಲೇಜಿನಲ್ಲಿ ಜಾಗತಿಕ ಕಾರ್ಡಿಯೊಥೊರಾಸಿಕ್ ತಜ್ಞರು ಒಂದೇ ವೇದಿಕೆಯಲ್ಲಿ ಸೇರಿ, ಮುಂದಿನ ತಲೆಮಾರಿನ ಹೃದಯ ಶಸ್ತ್ರವೈದ್ಯರಿಗೆ ಎರಡು ದಿನಗಳ ವಿಶೇಷ ತರಬೇತಿ ನೀಡುವ ‘ಸ್ಕೋರ್–2026’ ಕಾರ್ಯಕ್ರಮ ಶನಿವಾರ ಆರಂಭವಾಯಿತು.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 'ಬೆಂಗಳೂರಿನ ಆತ್ಮ' ಕಲಾತ್ಮಕ ಶಿಲ್ಪ ಅನಾವರಣ; ಟರ್ಮಿನಲ್-2ರ ಸೌಂದರ್ಯಕ್ಕೆ ಹೊಸ ಮೆರುಗು

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 'ಬೆಂಗಳೂರಿನ ಆತ್ಮ' ಕಲಾತ್ಮಕ ಶಿಲ್ಪ ಅನಾವರಣ

Kempegowda International Airport: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಬೆಂಗಳೂರಿನ ಆತ್ಮ' ಹೆಸರಿನ ಸುಂದರ ಹಾಗೂ ಬೃಹತ್ ಕಲಾತ್ಮಕ ಶಿಲ್ಪವನ್ನು ಲೋಕಾರ್ಪಣೆ ಮಾಡಲಾಗಿದೆ. ಬಯೊಕಾನ್ ಫೌಂಡೇಷನ್ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್‌) ಸಹಯೋಗದಲ್ಲಿ ಈ ಕಲಾಕೃತಿಯನ್ನು ಟರ್ಮಿನಲ್-2ರ ಮುಂಭಾಗದಲ್ಲಿ ಸ್ಥಾಪಿಸಲಾಗಿದೆ.

Farmers Protest: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ; ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ; ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ

Tiptur News: ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೋಸಿ ಹೋದ ಹಾಲ್ಕುರಿಕೆ ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು, ಹಾಲ್ಕುರಿಕೆ ಪವರ್ ಸ್ಟೇಷನ್‌ಗೆ ಮುತ್ತಿಗೆ ಹಾಕಿದ್ದು, ಕಳೆದ ಎರಡು ತಿಂಗಳಿನಿಂದ ಸಮರ್ಪಕ ವಿದ್ಯುತ್‌ ನೀಡದೆ ರೈತರ ಬೆಳೆಗಳ ಜತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Actor Chetan Ahimsa: ಡಾ. ರಾಜ್‌ಕುಮಾರ್‌ ಅಭಿಮಾನಿಗಳಿಂದ ಮುತ್ತಿಗೆ; ಕ್ಷಮೆಯಾಚಿಸಿದ ನಟ ಚೇತನ್‌

ಡಾ. ರಾಜ್‌ಕುಮಾರ್‌ ಸಮಾಧಿ ಕುರಿತ ಹೇಳಿಕೆಗೆ ನಟ ಚೇತನ್‌ ಕ್ಷಮೆಯಾಚನೆ

Dr. Rajkumar's memorial: ವರನಟ ಡಾ.ರಾಜ್​ಕುಮಾರ್ ಅವರ ಸಮಾಧಿಗೆ ಸರ್ಕಾರ ಜಾಗ ನೀಡಿರವ ನಿರ್ಧಾರವನ್ನು ನಟ ಚೇತನ್ ಅಹಿಂಸಾ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ರಾಜ್​ಕುಮಾರ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಇಂದು ರಾಜ್‌ಕುಮಾರ್‌ ಅವರ ಅಭಿಮಾನಿಗಳು ಮನೆಗೆ ಮುತ್ತಿಗೆ ಹಾಕಿ, ಆಕ್ರೋಶ ಹೊರಹಾಕಿದ್ದರಿಂದ ನಟ ಚೇತನ್‌ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

Gubbi News: ಸಂವಿಧಾನದ ಮೂಲಕ ನ್ಯಾಯ ಒದಗಿಸಿಕೊಟ್ಟ ಮಹಾನ್ ನಾಯಕ ಡಾ.ಬಿ.ಆರ್.ಅಂಬೇಡ್ಕರ್*

ಸಂವಿಧಾನದ ಮೂಲಕ ನ್ಯಾಯ ಒದಗಿಸಿಕೊಟ್ಟ ನಾಯಕ ಡಾ.ಅಂಬೇಡ್ಕರ್*

ಬೆಸ್ಕಾಂ ಎಸ್ಓ ಎಂಎನ್ ಕೋಟೆ ಜಯರಾಮ್ ಮಾತನಾಡಿ ಅಂಬೇಡ್ಕರ್ ಪಟ್ಟಂತ ಶ್ರಮ ಇವತ್ತು ದಲಿತರು ಸ್ವಾಭಿಮಾನಿಗಳಾಗಿ ಬದುಕಲು ದಾರಿದೀಪವಾಗಿದೆ. ಅವರ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದರು. ಗ್ರಾಪಂ ಮಾಜಿ ಉಪಾಧ್ಯಕ್ಷ ದಿಲೀಪ್ ಮಾತನಾಡಿ ಎಲ್ಲಾ ವರ್ಗದ ಜನರಿಗೆ ಸಂವಿ ಧಾನದ ಮೂಲಕ ನ್ಯಾಯ ಒದಗಿಸಿಕೊಟ್ಟ ಮಹಾನ್ ನಾಯಕ ಡಾ. ಬಿ ಆರ್ ಅಂಬೇಡ್ಕರ್ ಎಂದು ತಿಳಿಸಿದರು.

ಎಂಟಿಆರ್‌ ಸಂಸ್ಥೆಯ ವಾರ್ಷಿಕ ಸಾಂಸ್ಕೃತಿಕ ಮತ್ತು ಆಹಾರ ಹಬ್ಬ ಎಂಟಿಆರ್ ಕರುನಾಡು ಸ್ವಾದ 2026 ಅದ್ದೂರಿ ಆರಂಭ

ಎಂಟಿಆರ್ ಕರುನಾಡು ಸ್ವಾದ 2026 ಅದ್ದೂರಿ ಆರಂಭ

ಪಾಕವಿಧಾನದ ಹಿಂದಿನ ಕಥೆ ಎಂಬ ವಿಷಯದ ಸುತ್ತ ಈ ಬಾರಿಯ ಕರುನಾಡು ಸ್ವಾದ ಆಹಾರ ಮೇಳ ಆಯೋಜಿತವಾಗಿದೆ. ಈ ವರ್ಷದ ಎಂಟಿಆರ್ ಕರುನಾಡು ಸ್ವಾದವು ಕರ್ನಾಟಕದ ಸ್ಥಳೀಯ ಪದಾರ್ಥ ಗಳ ಮಹತ್ವವನ್ನು ಎತ್ತಿ ತೋರಿಸಲಿದೆ. ಉದ್ಘಾಟನಾ ದಿನದ ರಾತ್ರಿಯಂದು ಕರ್ನಾಟಕದ ಪ್ರಮುಖ ಆರು ಪ್ರದೇಶಗಳಾದ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಹಳೇ ಮೈಸೂರು ಪ್ರಾಂತ್ಯಗಳ ವೈವಿಧ್ಯಮಯ ಆಹಾರ ಪದ್ಧತಿಯನ್ನು ಪ್ರದರ್ಶಿಸ ಲಾಯಿತು.

Loading...