ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Bandipur Nagarahole Safari Ban: ಬಂಡಿಪುರ, ನಾಗರಹೊಳೆಯಲ್ಲಿ ಸಫಾರಿ ಅನಿರ್ದಿಷ್ಟಾವಧಿ ಬಂದ್, ಚಾರಣ ಸ್ಥಗಿತ: ಸಚಿವರ ಆದೇಶ

ಬಂಡಿಪುರ, ನಾಗರಹೊಳೆಯಲ್ಲಿ ಸಫಾರಿ ಅನಿರ್ದಿಷ್ಟಾವಧಿ ಬಂದ್, ಚಾರಣ ಸ್ಥಗಿತ

Human- wildlife conflict: ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರೆಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸಚಿವರು ಸ್ಪಷ್ಟ ಸೂಚನೆ ನೀಡಿದ್ದಾರೆ.

Harish Rai death: ಉಡುಪಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್‌ ರಾಯ್‌ ಅಂತ್ಯಕ್ರಿಯೆ

ಉಡುಪಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್‌ ರಾಯ್‌ ಅಂತ್ಯಕ್ರಿಯೆ

Harish Rai funeral: ಉಡುಪಿಯಲ್ಲಿ ಹುಟ್ಟಿ ಬೆಳೆದಿದ್ದ ಹರೀಶ್‌ ರಾಯ್ ಅವರು ಬಳಿಕ ಅಲ್ಲಿಂದ ಮುಂಬಯಿಗೆ ಓಡಿಹೋಗಿದ್ದರು. ನಂತರ ಬೆಂಗಳೂರಿಗೆ ಬಂದು ಕನ್ನಡ ಚಿತ್ರೋದ್ಯಮಕ್ಕೆ ಸೇರಿಕೊಂಡಿದ್ದರು. ಹರೀಶ್‌ ಅವರ ಬಂಧುಬಾಧವರು ಇಲ್ಲಿದ್ದಾರೆ. ನಿನ್ನೆ ರಾತ್ರಿ ಅವರ ಪಾರ್ಥಿವ ಶರೀರವನ್ನು ಉಡುಪಿಗೆ ಕೊಂಡೊಯ್ಯಲಾಗಿತ್ತು. ಇಂದು ಉಡುಪಿಯಲ್ಲಿ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನೆರವೇರಿತು.

Uttara Kannada News: ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರ ಸಾವು

ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರ ಸಾವು

Lift Fall accident: ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು. ಅತಿ ಭಾರವಾದ ಕಾರಣ ಏಕಾಏಕಿ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ. ಅದರಲ್ಲಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Bangalore Traffic:: ಬೆಂಗಳೂರಿನ ಟ್ರಾಫಿಕ್‌ ದಟ್ಟಣೆ ನಿವಾರಣೆಗೆ ʼಕೋಬ್ರಾ ಬೀಟ್‌ʼ, ಏನಿದು?

ಬೆಂಗಳೂರಿನ ಟ್ರಾಫಿಕ್‌ ದಟ್ಟಣೆ ನಿವಾರಣೆಗೆ ʼಕೋಬ್ರಾ ಬೀಟ್‌ʼ, ಏನಿದು?

Bengaluru Traffic Cobra Beat System: ‘ಕೋಬ್ರಾ ಬೀಟ್’ ಸಿಬ್ಬಂದಿ ಗರಿಷ್ಠ ಮಟ್ಟದಲ್ಲಿ ಎರಡು ನಿಯೋಜಿತ ಮಾರ್ಗಗಳಲ್ಲಿ ನಿಯಮಿತವಾಗಿ ಗಸ್ತು ತಿರುಗುತ್ತಾರೆ. ಪುನರಾವರ್ತಿತ ಸಂಚಾರ ದಟ್ಟಣೆಯ ಪಾಯಿಂಟ್‌ಗಳು, ಪಾರ್ಕಿಂಗ್ ಉಲ್ಲಂಘನೆಗಳು ಮತ್ತು ಅಡಚಣೆಗಳನ್ನು ಗುರುತಿಸುತ್ತಾರೆ. ಜತೆಗೆ ತಕ್ಷಣವೇ ಸ್ಪಂದಿಸಿ ಸಮಸ್ಯೆ ಪರಿಹರಿಸಲಿದ್ದಾರೆ. ಆಗಾಗ ಸಂಚಾರ ದಟ್ಟಣೆ ಮತ್ತು ನಿಧಾನಗತಿಯ ಸಂಚಾರ ವರದಿಯಾಗುವ ಕಮರ್ಷಿಯಲ್ ಸ್ಟ್ರೀಟ್‌ನಂತಹ ಪ್ರದೇಶಗಳಲ್ಲಿ ಈ ‘ಕೋಬ್ರಾ’ ಸಿಬ್ಬಂದಿ ಗಸ್ತು ಕಾರ್ಯಾಚಣೆ ನಡೆಸಲಿದ್ದಾರೆ.

Shakti scheme: ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ: ಅಜೀಂ ಪ್ರೇಮ್‌ಜೀ ವಿವಿ ವರದಿ

ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ: ವರದಿ

Shakti scheme in Karnataka: 2023ರ ಜೂನ್ 11ರಂದು ಆರಂಭಿಸಲಾದ ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಸಾರಿಗೆ ವ್ಯವಸ್ಥೆಯಲ್ಲಿ ಪುರುಷರಿಗಿಂತ ಮಹಿಳಾ ಪ್ರಯಾಣಿಕರು ಹೆಚ್ಚುವಂತಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಮಹಿಳೆಯರು ಅದರ ಪ್ರಯೋಜನವನ್ನು ಉತ್ತಮವಾಗಿ ಪಡೆಯುತ್ತಿದ್ದಾರೆ. 2023ರ ಜನವರಿಯಿಂದ 2025ರ ಜನವರಿವರೆಗೆ ಬಿಎಂಟಿಸಿ 2.89 ಕೋಟಿ ಟ್ರಿಪ್‌ಗಳಲ್ಲಿ ಬಸ್ ಸೇವೆ ನೀಡಿದೆ. ಈ ಅವಧಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹಿಂದಿಗಿಂತಲೂ 2.5 ಪಟ್ಟು ಹೆಚ್ಚಾಗಿದೆ.

Vishweshwar Hegde Kageri: ಜನ ಗಣ ಮನ- ವಂದೇ ಮಾತರಂ ಕುರಿತು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ ವಿವಾದ, ಕಾಂಗ್ರೆಸ್ ಟೀಕೆ

ಜನ ಗಣ ಮನ ‌ಕುರಿತು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ, ಕಾಂಗ್ರೆಸ್ ಟೀಕೆ

National anthem: ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಗೀತೆ ಪ್ರೇರಣೆ ನೀಡಿತ್ತು. ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಗಳಿಂದಾಗಿ ವಂದೇ ಮಾತರಂ ಯಾವಾಗಲೂ ನಮಗೆ ಸ್ಫೂರ್ತಿ ನೀಡಿದೆ. ಈ ಗೀತೆ 150 ವರ್ಷ ಹಳೆಯದು. ವಂದೇ ಮಾತರಂ ಎಲ್ಲೆಡೆ ಪಠಿಸಲ್ಪಡಬೇಕು. ಅದು ಎಲ್ಲೆಡೆ ಪ್ರತಿಧ್ವನಿಸಬೇಕು ಎಂದು ಕೂಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

PM Narendra Modi: ಲಕ್ಷ ಭಕ್ತರ ಜತೆಗೆ ಉಡುಪಿಯಲ್ಲಿ ನ.28ರಂದು ಪ್ರಧಾನಿ ನರೇಂದ್ರ ಮೋದಿ ಗೀತಾ ಪಠನ

ಲಕ್ಷ ಭಕ್ತರ ಜತೆಗೆ ಉಡುಪಿಯಲ್ಲಿ ನ.28ರಂದು ಪಿಎಂ ನರೇಂದ್ರ ಮೋದಿ ಗೀತಾ ಪಠನ

Udupi Sri Krishna Math: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ವಿಶ್ವಗೀತಾ ಪರ್ಯಾಯ ಎಂದೇ ಕರೆಯಲ್ಪಡುವ 4ನೇ ಪರ್ಯಾಯೋತ್ಸವ ಆರಂಭದಲ್ಲಿ ಸಂಕಲ್ಪಿಸಿದಂತೆ, ನ. 8ರಿಂದ ಒಂದು ತಿಂಗಳ ಕಾಲ ನಡೆಯುವ ಬೃಹತ್ ಗೀತೋತ್ಸವದ ಆಮಂತ್ರಣ ಪತ್ರವನ್ನು ಬುಧವಾರ ಕನಕ ಮಂಟಪದಲ್ಲಿ ಬಿಡುಗಡೆ ಮಾಡಲಾಯಿತು. ಈ ಗೀತೋತ್ಸವದ ಅಂಗವಾಗಿ ಅಪೂರ್ವವಾದ ಲಕ್ಷಕಂಠ ಗೀತಾ ಪಾರಾಯಣ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿದ್ದಾರೆ.

Karnataka Weather: ಇಂದಿನ ಹವಾಮಾನ; ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗು (Weather forecast) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

Drugs seize: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 52.87 ಕೋಟಿ ರು. ಮೌಲ್ಯದ ಡ್ರಗ್ಸ್ ಪತ್ತೆ, ನಾಲ್ವರ ಸೆರೆ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 53 ಕೋಟಿ ರು. ಡ್ರಗ್ಸ್ ಪತ್ತೆ, ನಾಲ್ವರ ಸೆರೆ

Drugs seize in kempegowda airport: ವಿದೇಶದಿಂದ ಬರುವ ವೇಳೆ ಬ್ಯಾಗ್‌ಗಳಲ್ಲಿ ಹೈಡ್ರೋ ಗಾಂಜಾವನ್ನು ಅಡಗಿಸಿ ತಂದಿದ್ದರು. ಮೇಲ್ನೋಟಕ್ಕೆ ಸಾಮಾನ್ಯ ಬ್ಯಾಗ್‌ನಂತೆ ಕಾಣುತ್ತಿತ್ತು. ಆದರೆ ಪರಿಶೀಲಿಸಿದಾಗ ಗಾಂಜಾ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಥೈಲ್ಯಾಂಡ್ ಸೇರಿ ಕೆಲ ದೇಶಗಳಲ್ಲಿ ಹೈಡ್ರೋ ಗಾಂಜಾವನ್ನು ಡ್ರಗ್ಸ್ ಮಾಫಿಯಾ ಸದಸ್ಯರು ತಯಾರಿಸುತ್ತಾರೆ. ಆನ್‌ಲೈನ್ ಮೂಲಕವೇ ಆ ಗಾಂಜಾವನ್ನು ತರಿಸಿಕೊಳ್ಳುತ್ತಾರೆ. ಇದರ ಬೆಲೆ1 ಕೆಜಿ 1 ಕೋಟಿ ರು. ಇದೆ.

ಶ್ರೀರಾಮ್‌ ಜನರಲ್‌ ಇನ್ಶ್ಯೂರೆನ್ಸ್‌ ನ ಜಿಎಂಪಿ ಶೇ. 28 ಹಾಗೂ ನಿವ್ವಳ ಲಾಭ ಶೇ. 6ರಷ್ಟು ಏರಿಕೆ

ಉತ್ತಮ ಫಲಿತಾಂಶ ದಾಖಲಿಸಿದ ಶ್ರೀರಾಮ್‌ ಜನರಲ್‌ ಇನ್ಶ್ಯೂರೆನ್ಸ್‌

ನಮ್ಮ ಮೊಟಾರ್ ಇನ್ಶ್ಸೂರೆನ್ಸ್‌ ಪೊರ್ಟ್‌ಫೊಲಿಯೊದ ಸುಸ್ಥಿರ ಬೆಳವಣಿಗೆಯು ನಮ್ಮ ಗ್ರಾಹಕರು ಸಂಸ್ಥೆಯ ಮೇಲಿಟ್ಟಿರುವ ಭರವಸೆ, ನಂಬಿಕೆಯನ್ನು ಬಿಂಬಿಸುತ್ತದೆ. ಇದು ನಾವೀ ನ್ಯತೆ, ವಿಶ್ವಾಸಾರ್ಹತೆ ಮತ್ತು ಶ್ರೇಷ್ಠತೆಯನ್ನು ಒತ್ತಿ ಹೇಳುತ್ತದೆ. ಪ್ರತಿ ಪಯಣವನ್ನು ರಕ್ಷಿಸುವ ಮತ್ತು ಸಬಲೀಕರಣಗೊಳಿಸುವತ್ತ ಕಾರ್ಯನಿರ್ವಹಿಸುತ್ತೇವೆ

Bangalore News: ಸಾಹಸಮಯ ಥಂಡರ್ಬೋಲ್ಟ್‌ ಬೈಕ್‌ ಬಿಡುಗಡೆ ಮಾಡಿದ ಕ್ಲಾಸಿಕ್‌ ಲೆಜೆಂಡ್‌ ಸಹಭಾಗಿತ್ವದ ಬಿಎಸ್‌ಎ

ಬೈಕ್‌ ಬಿಡುಗಡೆ ಮಾಡಿದ ಕ್ಲಾಸಿಕ್‌ ಲೆಜೆಂಡ್‌ ಸಹಭಾಗಿತ್ವದ ಬಿಎಸ್‌ಎ

ಹೊಸ BSA ಥಂಡರ್ಬೋಲ್ಟ್ ಮಾರುಕಟ್ಟೆಗೆ ಪರಿಚಯಿಸಿದೆ. 2026 ರ ಮಧ್ಯದಲ್ಲಿ ಮಾರು ಕಟ್ಟೆಗೆ ಬರಲಿರುವ ಬ್ರ್ಯಾಂಡ್‌ನ ನಾಲ್ಕನೇ ಬೈಕ್, ಏಂತಹ ರೋಡ್‌ಗಳಾಗಿದ್ದರೂ ಸುಲಭ ವಾಗಿ ರೈಡ್‌ ಮಾಡುವ ಮಜ ನೀಡಲಿದೆ. ಮಳೆ, ಗಾಳಿ, ಧೂಳುಮಯ ಪ್ರದೇಶಕ್ಕೂ ಹೊಂದಿಕೆಯಾಗು ವಂತೆ ಬೈಕ್‌ನನ್ನು ವಿನ್ಯಾಸಗೊಳಿಸಲಾಗಿದೆ.

‘ಒನ್ ಹೆಲ್ತ್’ ಕಾರ್ಯಕ್ರಮ: ಇಎಸ್ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಜಾಗೃತಿ ವಾಕ್‌ಥಾನ್

ಇಎಸ್ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಜಾಗೃತಿ ವಾಕ್‌ಥಾನ್

ಎಸ್ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ರಾಜಾಜಿನಗರ ಆವರಣ ದಲ್ಲಿ ಸಮುದಾಯ ವೈದ್ಯಕೀಯ ವಿಭಾಗದಿಂದ ಇಂಡಿಯನ್ ಅಸೋಸಿಯೇಶನ್ ಆಫ್ ಪ್ರಿವೆಂಟಿವ್ ಅಂಡ್ ಸೋಶಿಯಲ್ ಮೆಡಿಸಿನ್ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಹಯೋಗದಲ್ಲಿ “ಒನ್ ವರ್ಲ್ಡ್, ಒನ್ ಹೆಲ್ತ್ – ಮಾನವ, ಪ್ರಾಣಿ ಮತ್ತು ಪರಿಸರ ಕ್ಷೇಮಕ್ಕಾಗಿ ಏಕತೆ” ಎಂಬ ವಿಷಯಾಧಾರಿತ ಜಾಗೃತಿ ವಾಕ್‌ಥಾನ್ ಆಯೋಜಿಸಲಾಯಿತು.

ಹೊಸಕೋಟೆಯಲ್ಲಿ 6 ಎಕರೆ ಜಮೀನು ಸ್ವಾಧೀನಕ್ಕೆ ತೆಗೆದುಕೊಂಡ ಸೌಖ್ಯ: ಕೈಗೆಟಕುವ ದರದಲ್ಲಿ ಆಯುಷ್‌ ಆರೋಗ್ಯಸೇವಾ ವಲಯ ಪ್ರವೇಶದ ಘೋಷಣೆ

ಹೊಸಕೋಟೆಯಲ್ಲಿ 6 ಎಕರೆ ಜಮೀನು ಸ್ವಾಧೀನಕ್ಕೆ ತೆಗೆದುಕೊಂಡ ಸೌಖ್ಯ

ಸರ್ವಾಂಗೀಣವಾದ ಆರೋಗ್ಯಸೇವೆಗಳನ್ನು ಒದಗಿಸುವ ವಿಚಾರದಲ್ಲಿ ಜಾಗತಿಕ ಮಟ್ಟ ದಲ್ಲಿ ಹೊಸ ಮಾನದಂಡಗಳನ್ನು ರೂಪಿಸಿಕೊಟ್ಟ ಕಾರಣದಿಂದಾಗಿ ಖ್ಯಾತಿ ಪಡೆದಿರುವ ʼಸೌಖ್ಯʼ, ಬಹಳ ವಿಶಿಷ್ಟವಾದ ಮಾದರಿಯೊಂದನ್ನು ಸೃಷ್ಟಿಸಿದೆ. ಇದು ವೈದ್ಯಕೀಯ ವಿಜ್ಞಾನವನ್ನು ಸಾಂಪ್ರದಾಯಿಕ ಚಿಕಿತ್ಸೆ, ನೈಸರ್ಗಿಕ ಉಪಶಮನ ಕ್ರಮಗಳು ಮತ್ತು ರೋಗತಡೆ ಕ್ರಮಗಳ ಜೊತೆ ಬಹಳ ಸುಲಲಿತವಾಗಿ ಬೆರೆಸುತ್ತದೆ.

CPM: ನ.೧ರಿಂದ ಡಿ.೧೫ ರವರೆಗೆ ರಾಜ್ಯಾದ್ಯಂತ ಸಿಪಿಎಂ ರಾಜಕೀಯ ಪ್ರಚಾರಾಂದೋಲನ : ಎಂ.ಪಿ.ಮುನಿವೆಂಕಟಪ್ಪ

ನ.೧ರಿಂದ ಡಿ.೧೫ ರವರೆಗೆ ರಾಜ್ಯಾದ್ಯಂತ ಸಿಪಿಎಂ ರಾಜಕೀಯ ಪ್ರಚಾರಾಂದೋಲನ

ಅರಣ್ಯ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡಬೇಕು. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ?೩೬ ಸಾವಿರ ಪಿಂಚಣಿ ಜಾರಿಗೊಳಿಸಬೇಕು. ಕಟ್ಟಡ, ಸಾರಿಗೆ ನೌಕರರಿಗೆ ಸೌಲಭ್ಯ ಕಲ್ಪಿಸಬೇಕು. ಶಿಕ್ಷಣದ ಖಾಸಗಿಕರಣ, ವ್ಯಾಪಾರಿಕರಣ ತಡೆಗಟ್ಟಬೇಕು. ಪ್ರತಿ ಜಿಲ್ಲೆಗಳಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತೆರೆದು ಬಡವರಿಗೆ ಉಚಿತ ಚಿಕಿತ್ಸೆ ಕಲ್ಪಿಸ ಬೇಕು

ರಾಜ್ಯ ಮಿನಿ ಒಲಂಪಿಕ್ಸ್ ಜಿಲ್ಲೆಗೆ ಕಂಚಿನ ಪದಕ

ರಾಜ್ಯ ಮಿನಿ ಒಲಂಪಿಕ್ಸ್ ಜಿಲ್ಲೆಗೆ ಕಂಚಿನ ಪದಕ

ಬೆಂಗಳೂರಿನ ಕಂಠೀರವ ಕ್ರೀಡಾಂಗಣ ದಲ್ಲಿ ನಡೆದ ರಾಜ್ಯಮಟ್ಟದ ಮಿನಿ ಒಲಂಪಿಕ್ ಕ್ರೀಡಾ ಕೂಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ೧೦ ಕ್ರೀಡಾಪಟುಗಳು ಭಾಗವಹಿಸಿದ್ದು, ೧೪ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಧೀರಜ್ ಭರ್ಜಿ ಎಸೆತದಲ್ಲಿ ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

MLA Pradeep Eshwar: ಅಹಿಂದ ವರ್ಗದ ಆಶಾಕಿರಣ ಶಾಸಕ ಪ್ರದೀಪ್ ಈಶ್ವರ್ ; ಅಭಿವೃದ್ದಿಯ ಹರಿಕಾರ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್‌ ರೆಡ್ಡಿ

ಅಹಿಂದ ವರ್ಗದ ಆಶಾಕಿರಣ ಶಾಸಕ ಪ್ರದೀಪ್ ಈಶ್ವರ್

ಕ್ಷೇತ್ರದ ಜನತೆಗೆ ಹತ್ತು ಹಲವು ಉಚಿತ ಸೇವೆ ಒದಗಿಸುತ್ತಿರುವ ಶಾಸಕರು ಮಹಿಳೆಯರಿಗೆ ಬಾಗೀನ ನೀಡುವ ಸತ್ಸಂಪ್ರದಾಯವನ್ನು ಕಳೆದ ೩ ವರ್ಷಗಳಿಂದ ಪಾಲಿಸಿಕೊಂಡು ಬಂದಿದ್ದಾರೆ.ತಡವಾದರೂ ಕೂಡ ಕೊಟ್ಟ ಮಾತನ್ನು ಉಳಿಸಿಕೊಂಡು ಸೀರೆ ವಿತರಣೆ ಮಾಡುವ ಮೂಲಕ ನುಡಿದಂತೆ ನಡೆದು ಯುವಕ ಯುವತಿಯರ ಕಣ್ಮಣಿಯಾಗಿರುವ ಪ್ರದೀಪ್ ಈಶ್ವರ್ ಅವರು ನಿಜಾರ್ಥದಲ್ಲಿ ಅಭಿವೃದ್ಧಿಯ ಹರಿಕಾರರಾಗಿದ್ದಾರೆ

Sadhguru Shri Madhusudan Sai: ಸತ್ಯಸಾಯಿ ಸಂಸ್ಥೆಗಳ ವಿದ್ಯಾರ್ಥಿಗಳು ದೇಶದ ವ್ಯವಸ್ಥೆಯ ಭಾಗವಾಗುತ್ತಾರೆ: ಸದ್ಗುರು ಶ್ರೀ ಮಧುಸೂದನ ಸಾಯಿ

ಸತ್ಯಸಾಯಿ ಸಂಸ್ಥೆಗಳ ವಿದ್ಯಾರ್ಥಿಗಳು ದೇಶದ ವ್ಯವಸ್ಥೆಯ ಭಾಗವಾಗುತ್ತಾರೆ

ಜಾಗತಿಕ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿದಿನ ಜಗತ್ತಿನ ವಿವಿಧ ಕ್ಷೇತ್ರಗಳಲ್ಲಿನ ಸಾಧಕರು, ಗಣ್ಯ ರನ್ನು ಗುರುತಿಸಿ  ವೇದಿಕೆಯ ಮೇಲೆ ಕೂರಿಸಿ ಅವರ ಕಥೆಗಳನ್ನು ಕೇಳುತ್ತಿದ್ದೇವೆ. ಇದರಿಂದ ಮುಂದಿನ ಪೀಳಿಗೆ ಸ್ಪೂರ್ತಿಯನ್ನು ಪಡೆಯುತ್ತಿದೆ. ಜೆತೆಗೆ ವಿದ್ಯಾರ್ಥಿಗಳಿಗೆ ಸಮಾಜ, ದೇವರ ಕಡೆಗೆ ಇರಬೇಕಾದ ದೊಡ್ಡ ಕರ್ತವ್ಯಗಳನ್ನು ನೆನಪಿಸುತ್ತದೆ,

Pralhad Joshi: ರಾಜ್ಯ ಸರ್ಕಾರ ಒಂದು ಕ್ಷಣವೂ ತಡಮಾಡದೆ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಲಿ: ಪ್ರಲ್ಹಾದ್‌ ಜೋಶಿ ಆಗ್ರಹ

ರಾಜ್ಯ ಸರ್ಕಾರ ಕ್ಷಣವೂ ತಡಮಾಡದೆ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಲಿ: ಜೋಶಿ

Sugarcane Farmers Protest: ರಾಜ್ಯ ಸರ್ಕಾರ ತಕ್ಷಣವೇ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರನ್ನು ಮಾತುಕತೆಗೆ ಕರೆದು ಚರ್ಚಿಸಿ ತ್ವರಿತವಾಗಿ ಸಮಸ್ಯೆ ಪರಿಹರಿಸಬೇಕೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಒತ್ತಾಯಿಸಿದ್ದಾರೆ. ಅನ್ನದಾತರನ್ನು ರಸ್ತೆ ಮೇಲೆ ಕೂರಿಸುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಸಂಬಂಧಿತ ಸಚಿವರು ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು. ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆ ಈಡೇರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Sugarcane Farmers Protest: ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ

CM Siddaramaiah's letter to PM Narendra Modi: ಉತ್ತರ ಕರ್ನಾಟಕದ, ವಿಶೇಷವಾಗಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತುರ್ತಾಗಿ ಚರ್ಚಿಸಲು ತಾವು ಅವಕಾಶ ನೀಡಬೇಕು ಎಂದು ಪ್ರಧಾನಿಗೆ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಇಂಟರ್‌ನ್ಯಾಷನಲ್ ವರ್ಕ್‌ಪ್ಲೇಸ್ ಗ್ರೂಪ್ ಬೆಂಗಳೂರಿನ ಎಂ.ಎಸ್.ಆರ್ ನಾರ್ತ್ ಟವರ್‌ನಲ್ಲಿ ಹೊಸ ರೀಗಸ್ ಕೇಂದ್ರ ಆರಂಭ

ಎಂ.ಎಸ್.ಆರ್ ನಾರ್ತ್ ಟವರ್‌ನಲ್ಲಿ ಹೊಸ ರೀಗಸ್ ಕೇಂದ್ರ ಆರಂಭ

ಹೊಸ ಕೇಂದ್ರವು IWG ಅವರ ಹೆಜ್ಜೆಗುರುತನ್ನು ಭಾರತದ ಮಂಚೂಣಿ ತಂತ್ರಜ್ಞಾನ ಹಬ್ಸ್ ಗಳನ್ನು ಹೆಚ್ಚಿಸುತ್ತದೆ, ಈ ಮೂಲಕ ಹೆಚ್ಚಿನ ಅನುಕೂಲಕರ, ಸಂಪರ್ಕಿತ ಮತ್ತು ದಕ್ಷತೆ ಯೊಂದಿಗೆ ವ್ಯವಹಾರಗಳ ಕಾರ್ಯಾಚರಣೆ ನಡೆಸುವುದನ್ನು ಚಾಲನೆಗೊಳುಸಲು ಪ್ರೀಮಿಯರ್, ಆನ್-ಡಿಮ್ಯಾಂಡ್ ಕಚೇರಿ ಪರಿಹಾರಗಳನ್ನು ಒದಗಿಸುತ್ತದೆ.

Karnataka Lokayukta: ಆಸ್ತಿ ವಿವರ ಸಲ್ಲಿಸದ ಸಚಿವರು, ಶಾಸಕರ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ

ಆಸ್ತಿ ವಿವರ ಸಲ್ಲಿಸದ ರಾಜ್ಯದ ಸಚಿವರು, ಶಾಸಕರ ಪಟ್ಟಿ ಬಿಡುಗಡೆ

Minister and MLA asset data: ಕರ್ನಾಟಕ ಲೋಕಾಯುಕ್ತ ಕಾಯಿದೆ ಅನ್ವಯ ಶಾಸಕರು, ಸಚಿವರು ಪ್ರತಿ ವರ್ಷ ಆಸ್ತಿ ಮತ್ತು ದಾಯಿತ್ವಗಳ ವಿವರಣಾ ಪಟ್ಟಿಯನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕು. ಆದರೆ, ಹಲವು ಶಾಸಕರು ಆಸ್ತಿ ವಿವರ ಸಲ್ಲಿಸದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪಟ್ಟಿ ಬಿಡುಗಡೆ ಮಾಡಿದೆ.

HD Kumaraswamy: ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಸಿಎಂಗೆ ಪತ್ರ ಬರೆದ ಎಚ್.ಡಿ. ಕುಮಾರಸ್ವಾಮಿ

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಸಿಎಂಗೆ ಪತ್ರ ಬರೆದ ಎಚ್‌ಡಿಕೆ

Mandya News: ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆ ಇದೆ. ನಾನು ಸಂಸದನಾಗಿ ಒಂದೂವರೆ ವರ್ಷ ಆಯಿತು. ಕೈಗಾರಿಕೆಗೆ ಜಾಗ ಕೊಡಿ ಎಂದು ಡಿಸಿ ಅವರಿಗೆ ಪತ್ರ ಬರೆದಿದ್ದೇನೆ. ಪಾಪ.. ಅವರು ಜಾಗ ಹುಡುಕುತ್ತಲೇ ಇದ್ದಾರೆ ಎಂದು ತಿಳಿಸಿದ್ದಾರೆ.

ಎ.ಪಿ.ಎಸ್. ಒಲಿಂಪಿಕ್ಸ್ – 2025 – ಕ್ರೀಡಾಕೂಟಕ್ಕೆ ತೆರೆ

ಎ.ಪಿ.ಎಸ್. ಒಲಿಂಪಿಕ್ಸ್ – 2025 – ಕ್ರೀಡಾಕೂಟಕ್ಕೆ ತೆರೆ

ಟ್ರಸ್ಟಿ ತಂಡವನ್ನು ಸಿ.ಎ. ಡಾ. ವಿಷ್ಣು ಭಾರತ್‌ ಅಲಂಪಲ್ಲಿ (ಟ್ರಸ್ಟ್ ಅಧ್ಯಕ್ಷರು) ನೇತೃತ್ವ ವಹಿಸಿದ್ದ ಅವರು, ಉತ್ತಮ ಕ್ರೀಡಾಪಟುವಾಗಿ ಎಪಿಎಸ್ ಸ್ಥಾಪಕರಾದ ಪ್ರೊ.ಅನಂತಚಾರ್ ಅವರಿಗೆ ಗೌರವ ಸಲ್ಲಿಸಬೇಕು. ಅವರು ಪ್ರಸಿದ್ಧ ಕ್ರೀಡಾಪಟು ಮತ್ತು ದೂರದೃಷ್ಟಿ ನಾಯಕ ರಾಗಿದ್ದು, ಅವರ ಶಾಶ್ವತ ಪರಂಪರೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಪ್ರೇರೇಪಿಸುತ್ತದೆ

Karnataka Weather: ನಾಳೆ ಶಿವಮೊಗ್ಗ, ಕೊಡಗು ಸೇರಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ

ಹವಾಮಾನ ವರದಿ; ನಾಳೆ ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗು (Weather forecast) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

Loading...