ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Assault Case: ಉಡುಪಿಯಲ್ಲಿ ಕಾಂಗ್ರೆಸ್‌ ಯುವ ಮುಖಂಡನ ಮೇಲೆ ಮಾರಕ ದಾಳಿ

ಉಡುಪಿಯಲ್ಲಿ ಕಾಂಗ್ರೆಸ್‌ ಯುವ ಮುಖಂಡನ ಮೇಲೆ ಮಾರಕ ದಾಳಿ

ಮಣಿಪಾಲದ ಹೋಟೆಲ್‌ ಒಂದರಲ್ಲಿ ಊಟಕ್ಕೆ ತೆರಳಿದ್ದ ವೇಳೆ ಹೋಟೆಲ್‌ನಲ್ಲಿ ಶರತ್ ಕುಂದರ್ ಅವರ ಕೈ ಆರೋಪಿಗಳ ಪೈಕಿ ಒಬ್ಬರ ಕೈಗೆ ತಾಗಿದ ಹಿನ್ನೆಲೆಯಲ್ಲಿ ಮಾತಿನ ವಾಗ್ವಾದ ನಡೆದಿತ್ತು. ಬಳಿಕ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಬಗ್ಗೆ ಮಾತನಾಡಲು ಪಿಪಿಸಿ ಕ್ರಾಸ್ ಬಳಿ ಬರುವಂತೆ ಕರೆಸಿ ಹಲ್ಲೆ ನಡೆಸಿದ್ದಾರೆ. ಜೀವ ಬೆದರಿಕೆ ಹಾಕಲಾಗಿದೆ.

Shakti Scheme: ಬುರ್ಖಾ ಧರಿಸಿದ ಮಹಿಳೆ, ಆಧಾರ್‌ನಲ್ಲಿ ಹೆಸರು ಲಕ್ಷ್ಮಮ್ಮ! ಶಕ್ತಿ ಯೋಜನೆ ದುರ್ಬಳಕೆ, ಸಿಕ್ಕಿಬಿದ್ದ ಮಹಿಳೆ

ಬುರ್ಖಾಧಾರಿ ಮಹಿಳೆ, ಆಧಾರ್‌ನ ಹೆಸರು ಲಕ್ಷ್ಮಮ್ಮ! ಕಂಡಕ್ಟರ್‌ ಕಕ್ಕಾಬಿಕ್ಕಿ

ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಮತ್ತು ಫೋಟೋಗೂ, ಎದುರಿಗೆ ಇರುವ ಮಹಿಳೆಗೂ ಯಾವುದೇ ಸಂಬಂಧವಿಲ್ಲದಿರುವುದನ್ನು ಕಂಡಕ್ಟರ್ ತಕ್ಷಣವೇ ಗುರುತಿಸಿದ್ದಾರೆ. ಕೂಡಲೇ ಮಹಿಳೆಯನ್ನು ಪ್ರಶ್ನಿಸಿದಾಗ ಆಕೆ ತಡವರಿಸಿದ್ದಾರೆ. ಬೇರೊಬ್ಬರ ಆಧಾರ್ ಕಾರ್ಡ್ ತೋರಿಸಿ ಸರ್ಕಾರಿ ಸೌಲಭ್ಯ ಪಡೆಯಲು ಯತ್ನಿಸಿರುವುದು ಈ ಮೂಲಕ ಸಾಬೀತಾಗಿದೆ. ಕಂಡಕ್ಟರ್ ಸಮಯಪ್ರಜ್ಞೆಯಿಂದಾಗಿ ಈ ವಂಚನೆ ಅಲ್ಲಿಯೇ ತಡೆಯಲ್ಪಟ್ಟಿದೆ.

Chamarajanagara: ಮದುವೆ ಮುಹೂರ್ತಕ್ಕೆ ಬರುತ್ತಿದ್ದ ವರನಿಗೇ ಮಹೂರ್ತ ಇಟ್ಟಳಾ ಭಾವಿ ವಧು!

ಮದುವೆ ಮುಹೂರ್ತಕ್ಕೆ ಬರುತ್ತಿದ್ದ ವರನಿಗೇ ಮಹೂರ್ತ ಇಟ್ಟಳಾ ಭಾವಿ ವಧು!

ಚಾಕು ಚುಚ್ಚಿದ ವಧುವಿನ ಮಾಜಿ ಲವರ್ ಅನ್ನು ಪೊಲೀಸರು ಬಂಧಿಸಿ ಸರಿಯಾಗಿ ವಿಚಾರಣೆ ಮಾಡಿದ್ದಾರೆ. ಆಗ ಆರೋಪಿಗಳಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮದುವೆಯಾಗಲಿದ್ದ ವಧುವೇ ಭಾವಿ ಪತಿಗೆ ಮುಹೂರ್ತ ಫಿಕ್ಸ್​ ಮಾಡಿರೋದು ಬಯಲಾಗಿದೆ. ಚಾಕು ಇರಿತ ಪ್ರಕರಣದಲ್ಲಿ ವಧು ನಯನ ಕೈವಾಡ ಬಹಿರಂಗವಾಗಿದೆ. ವಧು ನಯನ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

'Textile' festival: ಬೆಂಗಳೂರಿನಲ್ಲಿ ಫೆ.6 ರಿಂದ ಮೂರು ದಿನ ‘ಜವಳಿ’ ಹಬ್ಬ! ಎಫ್&ಎ ಶೋ ಮತ್ತು ಸಿದ್ಧ ಉಡುಪುಗಳ ಮೇಳಕ್ಕೆ ವೇದಿಕೆ ಸಿದ್ಧ!

ಬೆಂಗಳೂರಿನಲ್ಲಿ ಫೆ.6 ರಿಂದ ಮೂರು ದಿನ ‘ಜವಳಿ’ ಹಬ್ಬ

ಭಾರತ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯ ಪಾಲುದಾರರು, ಉದ್ಯಮಿಗಳು ಇಲ್ಲಿ ನಿಯಮಿತ ವಾಗಿ ಭೇಟಿಯಾಗಿ, ಕಚ್ಚಾ ವಸ್ತುಗಳ ಬಗ್ಗೆ, ಹೊಸ ಟ್ರೇಂಡ್‌ಗಳ ಅನ್ವೇಷಣೆ, ಪಾಲುದಾರಿಕೆಗಳ ಸ್ಥಾಪನೆ ಮತ್ತು ಜಾಗತಿಕ ಫ್ಯಾಷನ್‌ ಉದ್ಯಮದಲ್ಲಿ ಮುಂದೆ ಬರುವ ಅವಕಾಶಗಳನ್ನು ಚರ್ಚಿಸಲು ಹಾಗೂ ಪಡೆಯಲು ಈ ವೇದಿಕೆಯನ್ನು ಬಳಸಿಕೊಳ್ಳುತ್ತಿದ್ದಾರೆ.

Murder Case: ಪಾರ್ಕಿಂಗ್‌ ವಿಚಾರ ಕೊಲೆಯಲ್ಲಿ ಅಂತ್ಯ, ಆಟೋ ನಿಲ್ಲಿಸುವ ಕುರಿತ ತಗಾದೆ ಸ್ನೇಹಿತನ ಜೀವ ತೆಗೆಯಿತು

ಆಟೋ ಪಾರ್ಕಿಂಗ್ ಕುರಿತ ತಗಾದೆ ಸ್ನೇಹಿತನ ಜೀವ ತೆಗೆಯಿತು

2 ದಿನದ ಹಿಂದೆ ಮನೆ ಬಳಿ ಆಟೊ ನಿಲ್ಲಿಸುವ ವಿಚಾರಕ್ಕೆ ಮೂವರ ನಡುವೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ಬೈಕ್‍ನಲ್ಲಿ ಬರುತ್ತಿದ್ದ ವೇಲು ಮತ್ತು ಗುಣನನ್ನು ವಿನೋದ್ ಅಡ್ಡಗಟ್ಟಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರಿಗೂ ಚಾಕು ಇರಿದಿದ್ದ. ಗುಣ ಸಾವನ್ನಪ್ಪಿದ್ದು, ಗಾಯಗೊಂಡ ವೇಲುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Gruhalakshmi scheme: ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ

ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬರುವುದೋ ಎಂದು ಅಧಿಕಾರಿಗಳ ಬಳಿ ಅಲೆದು ಬೇಸತ್ತಿದ್ದೀರಾ? ಇನ್ನು ಮುಂದೆ ಯಾರ ಬಳಿಯೂ ಹೋಗಬೇಕಿಲ್ಲ. ಇದಕ್ಕಾಗಿ ಬಂದಿದೆ ಸಹಾಯವಾಣಿ. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘181’ ಸಂಖ್ಯೆಯ ಸಹಾಯವಾಣಿಯನ್ನು ತೆರೆದಿದ್ದು, ಇದರಡಿ ಇದೇ ಮೊದಲ ಬಾರಿಗೆ ಗೃಹಲಕ್ಷ್ಮಿಯನ್ನೂ ತರಲಾಗಿದೆ.

Bagalakote Crime News: ದಾರುಣ ಘಟನೆ, ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ದಾರುಣ ಘಟನೆ, ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ರೂಪಾ ಹನುಮಂತಗೌಡರ (27) ಎಂಬ ಮಹಿಳೆ ತಮ್ಮ ಮೂರು ಮಕ್ಕಳಾದ ಸಮೃದ್ಧಿ (5), ಪ್ರೀತಮ್ (4) ಮತ್ತು ಸುಕ್ಷಿತ್ (2) ಅವರನ್ನು ಮನೆಯ ಜಂತಿಗೆ ನೇಣು ಹಾಕಿ ಕೊಲೆ ಮಾಡಿದ್ದಾರೆ. ಮಕ್ಕಳ ಪ್ರಾಣ ಹೋದ ನಂತರ ತಾನೂ ಸಾಯಬೇಕೆಂಬ ನಿರ್ಧಾರದಿಂದ ರೂಪಾ ಅವರು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

CJ Roy Death: ಸಿಜೆ ರಾಯ್​​​ ಆತ್ಮಹತ್ಯೆ; ತೆರಿಗೆ ಭಯೋತ್ಪಾದನೆ ನಿಲ್ಲಿಸಲು ಮೋಹನ್ ದಾಸ್ ಪೈ ಮನವಿ

ಸಿಜೆ ರಾಯ್​​​ ಆತ್ಮಹತ್ಯೆ; ತೆರಿಗೆ ಭಯೋತ್ಪಾದನೆ ನಿಲ್ಲಿಸಲು ಪೈ ಮನವಿ

ತೆರಿಗೆ ಭಯೋತ್ಪಾದನೆಯಿಂದ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥರನ್ನ ಕಳೆದುಕೊಂಡಿದ್ದೇವೆ. ತೆರಿಗೆ ಅಧಿಕಾರಿಗಳಿಂದ ಹಲವಾರು ಜನರು ಭಯಭೀತರಾಗಿದ್ದಾರೆ. ನಾಗರಿಕ ಹಕ್ಕುಗಳ ಮೇಲಿನ ದಾಳಿಯಾಗುತ್ತಿದೆ. ದಯವಿಟ್ಟು ತೆರಿಗೆ ಪಾವತಿದಾರರನ್ನು ಈ ರೀತಿಯ ದಾಳಿಗಳು ಮತ್ತು ನಾಗರಿಕ ಹಕ್ಕುಗಳ ಮೇಲಿನ ದಾಳಿಯಿಂದ ರಕ್ಷಿಸುವಂತೆ ಮೋಹನದಾಸ್ ಪೈ ವಿನಂತಿಸಿದ್ದಾರೆ.

Koratagere News: ಕೊರಟಗೆರೆ ಎಸ್ ಎಸ್ ಸರ್ಕಲ್ ನಲ್ಲಿ ರಾಜನ ಪತ್ರಿಮೆಗೆ ಪುಷ್ಪಾರ್ಚನೆ: ಕುರಂಗನನ್ನು ಅನುಸರಿಸಲು ಕರೆ

ಮಾದಿಗರ ಕೆಚ್ಚೆದೆಯ ರಾಜ ಅರಸು ಕುರಂಗರಾಯನ 278ನೇ ಪಟ್ಟಾಭಿಷೇಕೋತ್ಸವ

ದನ ಕಾಯುವ ಚಾಕರಿ ಕೆಲಸ ಮಾಡುವ ನಮ್ಮ ಸಮುದಾಯಕ್ಕೆ ಒಬ್ಬ ರಾಜನಿದ್ದ ಎಂಬುದೇ ಹೆಮ್ಮೆಯ ವಿಚಾರ ಇಂದಿಗೂ ಈ ಸಮುದಾಯ ಗಟ್ಟಿಮುಟ್ಟಾಗಿ ರಾಜರಂತೆಯೇ ಬದುಕುತ್ತಿದ್ದೇವೆ ಸವರ್ಣಿಯರಂತೆ ನಾವು ಯಾರನ್ನು ದೌರ್ಜನ್ಯ ಮಾಡುತ್ತಿಲ್ಲ ಆದರೆ ನಮ್ಮ ಸಮುದಾಯ ದುಡಿದ ಶ್ರಮವನ್ನ ಮೇಲ್ಜಾತಿ ಯವರು ಪಡೆಯುತ್ತಿದ್ದಾರೆ.

Chimul Election: ಬಿಳಿ ತಲೆಯ ಖಾಲಿ ಡಬ್ಬಗಳು ಸೋತಿದ್ದು, ಕೂಲಿ ಪಡೆದ ತೃಪ್ತಿಯಿದೆ: ಭರಣಿ ವೆಂಕಟೇಶ್

ಬಿಳಿ ತಲೆಯ ಖಾಲಿ ಡಬ್ಬಗಳು ಸೋತಿದ್ದು, ಕೂಲಿ ಪಡೆದ ತೃಪ್ತಿಯಿದೆ

ನನ್ನ ಗೆಲುವಿನಲ್ಲಿ ಪಕ್ಷಾತೀತವಾಗಿ ಅನೇಕರು ಶ್ರಮಿಸಿದ್ದಾರೆ. ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ( Former MLA KP Bachegowda) ಆರೋಗ್ಯ ಸರಿಯಿಲ್ಲದಿದ್ದರೂ ಕೂಡ ನನ್ನ ಪರವಾಗಿ ಒಂದು ದಿನ ಬಹಿರಂಗ ಪ್ರಚಾರಕ್ಕೆ ಬಂದಿದ್ದಲ್ಲದೆ ಮನೆಯಲ್ಲಿದ್ದುಕೊಂಡೇ ನನ್ನ ಪರವಾಗಿ ಕೆಲಸ ಮಾಡಿದ್ದಾರೆ. ನುಗಿತಹಳ್ಳಿ ರವಿ 10 ದಿನಗಳ ಕಾಲ ನನ್ನ  ಜತೆಗಿದ್ದು ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ.

Chikkaballapur News: ವಿದ್ಯಾಭ್ಯಾಸದ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಸಮಯ ಪಾಲನೆ, ಶಿಸ್ತು ಮುಖ್ಯ: ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಶಿಧರ್

ವಿದ್ಯಾಭ್ಯಾಸದ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಸಮಯ ಪಾಲನೆ ಶಿಸ್ತು ಮುಖ್ಯ

ವಿದ್ಯಾಭ್ಯಾಸದ ಅವಧಿಯಲ್ಲಿ ಓದಿನತ್ತ ತೋರಿಸುವ ಉದಾಸೀನತೆ ಭವಿಷ್ಯದಲ್ಲಿ ಭಾರೀ ತೊಂದರೆಗಳಿಗೆ ಕಾರಣವಾಗಬಹುದು. ಈ ದಿನಗಳಲ್ಲಿ ಒಂದು ನಿಮಿಷವೂ ಬಹಳ ಅಮೂಲ್ಯ.ಪರೀಕ್ಷೆಗಳಿಗೆ ಪೂರ್ವ ಸಿದ್ಧತೆ ಅತ್ಯಂತ ಅಗತ್ಯ. ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿರುವು ದರಿಂದ ವಿದ್ಯಾರ್ಥಿಗಳು ಇನ್ನಷ್ಟು ಕಷ್ಟಪಟ್ಟು ಓದಬೇಕು ಎಂದು ಸಲಹೆ ನೀಡಿದರು. ಜನ್ಮ ನೀಡಿದ ತಂದೆ-ತಾಯಿ, ವಿದ್ಯೆ ಕಲಿಸಿದ ಗುರುಗಳು ಹಾಗೂ ಕಷ್ಟಕಾಲದಲ್ಲಿ ನೆರವಾದ ಸ್ನೇಹಿತರನ್ನು ಯಾವತ್ತೂ ಮರೆಯಬಾರದು

Beary Koota 2026: ಬ್ಯಾರಿ ಸಮುದಾಯ ತಮ್ಮ ಅಸ್ಮಿತೆ, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು: ಸಿಎಂ ಸಲಹೆ

ಬ್ಯಾರಿ ಸಮುದಾಯ ಅಸ್ಮಿತೆ ಉಳಿಸಿಕೊಂಡು ಹೋಗಬೇಕು: ಸಿಎಂ

ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ. ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Bagepally News: ಹಿಂದೂಗಳು ಸಂಘಟಿತರಾದಾಗ ಅಖಂಡ ಭಾರತ ನಿರ್ಮಾಣ ಸಾಧ್ಯ: ಎಂ.ಅರ್.ಜಯರಾಂ

ಹಿಂದೂಗಳು ಸಂಘಟಿತರಾದಾಗ ಅಖಂಡ ಭಾರತ ನಿರ್ಮಾಣ ಸಾಧ್ಯ

ಜಾಗೃತಿ ಕೊರತೆಯಿಂದ ಹಿಂದೂ ಧರ್ಮದ ರಕ್ಷಣೆಗೆ ಹಿನ್ನಡೆಯಾಗಿದ್ದು, ಪ್ರತಿ ಮನೆಯಲ್ಲಿಯೂ ಹಿಂದೂಗಳು ಸಂಘಟಿತರಾಗಬೇಕು. ಪ್ರತಿ ಗ್ರಾಮ, ಹೃದಯಕ್ಕೂ ಹಿಂದೂಗಳ ಸಂದೇಶ ಸಾರುವ ಮೂಲ ಉದ್ದೇಶದಿಂದ ಹಿಂದೂ ಸಮ್ಮೇಳನದ ಕಾರ್ಯಕ್ರಮ ಆಯೋಜಿಸಿದ್ದು, ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂಬ ಸಂಕಲ್ಪದೊಂದಿಗೆ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಸಂಘಟಿತರಾಗಬೇಕು

Congress into power in Chimul: ಕುಬೇರರ ಚುನಾವಣೆಗೆ ಸವಾಲು ಹಾಕುವಂತೆ ನಡೆದ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ

ಚಿಮುಲ್‌: ಪ್ರಥಮ ಚುನಾವಣೆಯಲ್ಲಿಯೇ ಗೆದ್ದು ಬೀಗಿದ ʼಕೈʼ ಅಭ್ಯರ್ಥಿಗಳು

ಚಿಮುಲ್ ಚುನಾವಣೆಯಲ್ಲಿ ಉಡುಗೊರೆಗಳದ್ದೆ ದೊಡ್ಡ ಸದ್ದು ಮಾಡಿದ್ದು ಸುಳ್ಳಲ್ಲ. ಚುನಾವಣೆ ಪ್ರಕಟ ವಾದ ಬೆನ್ನಲ್ಲೇ ಡೆಲಿಗೇಟ್ಸ್ಗಳ ಮನೆ ಬಾಗಿಲಿಗೆ ಅಭ್ಯರ್ಥಿಗಳು ಎಡತಾಕುತ್ತಿದ್ದ ದೃಶ್ಯಗಳು ಸಾಮಾನ್ಯ ವಾಗಿದ್ದವು. ಸಾಲದ್ದಕ್ಕೆ ದೇವರ ಪ್ರಸಾದ, ಆಣೆ ಪ್ರಮಾಣ, ಹಣ ಉಡುಗೊರೆಗಳ ಭರಾಟೆ ಜೋರಾಗಿತ್ತು.

Union Budget 2026: ವಿಕಸಿತ ಭಾರತದ ಬ್ಲೂಪ್ರಿಂಟ್ ನಮ್ಮ ಬಜೆಟ್‌: ಪ್ರಲ್ಹಾದ್‌ ಜೋಶಿ ಬಣ್ಣನೆ

ವಿಕಸಿತ ಭಾರತದ ಬ್ಲೂಪ್ರಿಂಟ್ ನಮ್ಮ ಬಜೆಟ್‌: ಪ್ರಲ್ಹಾದ್‌ ಜೋಶಿ ಬಣ್ಣನೆ

ಇದು ಭಾರತದ ಬೆಳವಣಿಗೆ ಕೇಂದ್ರಿತ ಬಜೆಟ್ ಆಗಿದೆ. ಕಾರ್ಮಿಕರ ಆಧಾರಿತ ವಸ್ತ್ರೋದ್ಯಮಕ್ಕೆ ವಿಶೇಷ ಒತ್ತು ನೀಡಿದ್ದು, ಖಾದಿ ಗ್ರಾಮೋದ್ಯೋಗ ಮತ್ತು ಕೈಗಾರಿಕೆಗಳಿಗೆ ಹೊಸ ಚೈತನ್ಯ ತುಂಬಲು ʼಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ʼ ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕನಕ ಗುರುಪೀಠ ಜಾತ್ಯತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕನಕ ಗುರುಪೀಠ ಜಾತ್ಯತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

ಬ್ರಹ್ಮಲೀನರಾದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ. ಶಿಕ್ಷಣವಿಲ್ಲದೇ ಪ್ರಗತಿ ಸಾಧ್ಯವಿಲ್ಲ. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಕೊಟ್ಟೂರು ತ್ರಿವಳಿ ಕೊಲೆ ಕೇಸ್‌ಗೆ ಟ್ವಿಸ್ಟ್; ಹಣಕ್ಕಾಗಿ ಮಾವನ ಜತೆ ಸೇರಿ ಸ್ವಂತ ಕುಟುಂಬವನ್ನೇ ಕೊಂದ ಕಿರಾತಕ!

ಕೊಟ್ಟೂರು ತ್ರಿವಳಿ ಹತ್ಯೆ; ಹಣಕ್ಕಾಗಿ ಸ್ವಂತ ಕುಟುಂಬವನ್ನೇ ಕೊಂದ ಕಿರಾತಕ!

Kotturu triple murder case: ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆಗೈದಿದ್ದ ಆರೋಪಿ ಅಕ್ಷಯ್, ತನ್ನ ತಂಗಿಯ ನಡವಳಿಕೆಯಿಂದ ಬೇಸತ್ತು ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದ. ಆದರೆ, ಇದೀಗ ಎಫ್‌ಡಿ ಹಣಕ್ಕಾಗಿ ಸ್ವಂತ ಕುಟುಂಬವನ್ನೇ ಕೊಂದಿದ್ದ ಎಂಬುವುದು ತಿಳಿದುಬಂದಿದೆ.

ವಿಕಸಿತ ಭಾರತದತ್ತ ಇನ್ನೊಂದು ದೃಢ ಹೆಜ್ಜೆ: ಬಜೆಟ್‌ ಬಗ್ಗೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರತಿಕ್ರಿಯೆ

ವಿಕಸಿತ ಭಾರತದತ್ತ ಇನ್ನೊಂದು ದೃಢ ಹೆಜ್ಜೆ: ಕ್ಯಾ. ಗಣೇಶ್ ಕಾರ್ಣಿಕ್

Union Budget 2026: ಜನತೆಯ ಆಶೋತ್ತರಗಳನ್ನು ಸಾಧಿಸಬಲ್ಲ ಯೋಜನೆಗಳು ಮತ್ತು ತುಷ್ಟೀಕರಣದ ಮಾನಸಿಕತೆಯಿಂದ ಹೊರಬಂದು ಜನಸಾಮಾನ್ಯರನ್ನು ಕೇಂದ್ರವಾಗಿರಿಸಿರುವ ಈ ಬಾರಿಯ ಕೇಂದ್ರ ಬಜೆಟ್ ಅಭಿನಂದನೀಯ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ದೇಶದ ಅಭಿವೃದ್ಧಿ, ಸ್ವಾವಲಂಬನೆಗೆ ಈ ಬಾರಿಯ ಬಜೆಟ್ ಪೂರಕ: ವೀರೇಂದ್ರ ಹೆಗ್ಗಡೆ

ದೇಶದ ಅಭಿವೃದ್ಧಿ, ಸ್ವಾವಲಂಬನೆಗೆ ಬಜೆಟ್ ಪೂರಕ: ವೀರೇಂದ್ರ ಹೆಗ್ಗಡೆ

Dr. D Veerendra Heggade: ಕೇಂದ್ರ ಬಜೆಟ್‌ ವಿಶೇಷವಾಗಿ ಗ್ರಾಮೀಣ ಮತ್ತು ಉದಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಬಲಪಡಿಸುವ ಮೂಲಕ, ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ಜೀವನೋಪಾಯವನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ

ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ: ಸಿಎಂ ಕಿಡಿ

ಕೇಂದ್ರ ಬಜೆಟ್ ಬಗ್ಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. 2023-24ರಲ್ಲಿ ಭದ್ರಾ ಯೋಜನೆಗೆ ಘೋಷಿಸಿದ್ದ ₹5,300 ಕೋಟಿ ಅನುದಾನವನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ಮೂರು ಬಜೆಟ್‌ಗಳು ಕಳೆದರೂ ಒಂದು ರುಪಾಯಿ ನೀಡಿಲ್ಲ ಎಂದು ಸಿಎಂ ಟೀಕಿಸಿದ್ದಾರೆ.

MP Dr. K. Sudhakar on Central Budget 2026: ಆರ್ಥಿಕ ಶಿಸ್ತು, ಸಾಮಾಜಿಕ ಸಮಾನತೆ ಮತ್ತು ಅಭಿವೃದ್ಧಿಯ ಸಮತೋಲನದ ಅಪರೂಪದ ಬಜೆಟ್‌

ಸಮತೋಲನದ ಅಪರೂಪದ ಬಜೆಟ್‌

ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡುವುದು, ನಾಗರಿಕರ ನಿರೀಕ್ಷೆಗಳನ್ನು ಪೂರೈಸುವುದು ಮತ್ತು ಎಲ್ಲರಿಗೂ ಸಂಪನ್ಮೂಲ ಸಿಗುವಂತೆ ಮಾಡುವ ಮೂರು ಕರ್ತವ್ಯಗಳನ್ನು ಇಲ್ಲಿ ಹೇಳಲಾಗಿದೆ. ಜವಾಬ್ದಾರಿಯುತ ಮತ್ತು ಸುಧಾರಣೆಯ ಆಡಳಿತದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬದ್ಧತೆಯನ್ನು ಈ ಬಜೆಟ್‌ ಪ್ರದರ್ಶಿಸುತ್ತದೆ

ಬನ್ನೇರುಘಟ್ಟದಲ್ಲಿ ಕ್ರೈಸ್ತ ಸಂಪ್ರದಾಯದಂತೆ ನೆರವೇರಿದ ಸಿ.ಜೆ.ರಾಯ್ ಅಂತ್ಯಕ್ರಿಯೆ

ಕ್ರೈಸ್ತ ಸಂಪ್ರದಾಯದಂತೆ ನೆರವೇರಿದ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

CJ Roy's Funeral: ಉದ್ಯಮಿ ಸಿ.ಜೆ. ರಾಯ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಂಬಂಧಿಕರು, ಆಪ್ತರಿಗೆ ಅವಕಾಶ ಕಲ್ಪಿಸಲಾಗಿತ್ತು. ಇದಾದ ನಂತರ ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ನೂರಾರು ಜನರ ಸಮ್ಮುಖದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು; ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಈ ಬಜೆಟ್‌ ಉತ್ತರ ಎಂದ ಕುಮಾರಸ್ವಾಮಿ

16ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಶೇ 4.13 ತೆರಿಗೆ ಪಾಲು: ಎಚ್‌ಡಿಕೆ

Union Budget 2026: ಈ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರಾಶೆಯೇನೂ ಆಗಿಲ್ಲ. ಹೈದರಾಬಾದ್-ಬೆಂಗಳೂರು, ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ರಾಜ್ಯಕ್ಕೆ ವರದಾನವಾಗಲಿದೆ. ಹೈ ಸ್ಪೀಡ್ ರೈಲುಗಳು ರಾಜ್ಯಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರೈಲು ಸಂಪರ್ಕದಲ್ಲಿ ಹೊಸ ಕ್ರಾಂತಿ ಆಗಲಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲಿಗೆ ಆದ್ಯತೆ ಕೊಡಬೇಕಿತ್ತು: ಎಂ.ಬಿ. ಪಾಟೀಲ್‌

ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲಿಗೆ ಆದ್ಯತೆ ಕೊಡಬೇಕಿತ್ತು: ಎಂ.ಬಿ. ಪಾಟೀಲ್‌

⁠Union Budget 2026: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಘೋಣಿಸಿರುವ 5,600 ಕೋಟಿ ರೂಪಾಯಿ ನೆರವನ್ನು ಬಿಡುಗಡೆ ಮಾಡಬೇಕು ಎನ್ನುವುದು ನಮ್ಮ ಆಗ್ರಹವಾಗಿತ್ತು. ಬಜೆಟ್‌ನಲ್ಲಿ ಇವುಗಳ ಪ್ರಸ್ತಾಪವೇ ಇಲ್ಲ ಎಂದು ಸಚಿವ ಎಂ.ಬಿ. ಪಾಟೀಲ್‌ ಅಸಮಾಧಾನ ಹೊರಹಾಕಿದ್ದಾರೆ.

Loading...