ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ನೀಟ್‌ ವಿವಾದದ ಕುರಿತು ಸಂಸತ್‌ನಲ್ಲಿ ಚರ್ಚೆಗೆ ನಾವ್‌ ರೆಡಿ; ವಿಪಕ್ಷಕ್ಕೆ ಕೇಂದ್ರ ಸಚಿವ ಜೋಶಿ ಆಹ್ವಾನ

ನೀಟ್‌ ವಿವಾದದ ಕುರಿತು ಸಂಸತ್‌ನಲ್ಲಿ ಚರ್ಚೆಗೆ ನಾವ್‌ ರೆಡಿ: ಜೋಶಿ

NEET Paper Leak: ಪ್ರಧಾನಿ ಮೋದಿ ಅವರು ಮತ್ತು ಕೇಂದ್ರ ಸರ್ಕಾರ ಯಾವತ್ತೂ ದೇಶದ ವಿದ್ಯಾರ್ಥಿಗಳು, ಯುವಶಕ್ತಿ ಪರವಿದೆ. ಅವರ ಭವಿಷ್ಯದ ಹಿತದೃಷ್ಟಿಯಿಂದ ಅನೇಕಾನೇಕ ಯೋಜನೆಗಳನ್ನು ಕೈಗೊಂಡಿದೆ. ಪರೀಕ್ಷಾ ಅಕ್ರಮ ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಲ್ಲಿ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

N.H. Shivashankara Reddy: ಗ್ರಾಮೀಣ ಭಾಗದ ಸಾವಿರಾರು ಮಕ್ಕಳ ಬದುಕಿಗೆ ಸರ್ಕಾರಿ ಶಾಲೆಗಳು ಭದ್ರ ಬುನಾದಿ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ಅನೇಕ ಗಣ್ಯರು ಸರ್ಕಾರಿ ಶಾಲೆಗಳಲ್ಲಿಯೇ ವಿದ್ಯಾ ಭ್ಯಾಸ ಮಾಡಿದ್ದಾರೆ. ಗ್ರಾಮೀಣ ಭಾಗದ ಸಾವಿರಾರು ಮಕ್ಕಳ ಬದುಕಿಗೆ ಸರ್ಕಾರಿ ಶಾಲೆಗಳು ಭದ್ರ ಬುನಾದಿ ಹಾಕಿವೆ. ದಾನಿಗಳು ನೀಡುತ್ತಿರುವ ನೆರವನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

Chikkaballapur News: ರೈತ ಹುತಾತ್ಮರ ತ್ಯಾಗ ದೇಶದ ಕೃಷಿಗೆ ದಾರಿದೀಪ: ಯಣ್ಣೂರು ಬಿ.ಬಸವರಾಜು

ರೈತ ಹುತಾತ್ಮರ ತ್ಯಾಗ ದೇಶದ ಕೃಷಿಗೆ ದಾರಿದೀಪ

ದೇಶದ ಅನ್ನದಾತನ ಬದುಕು ಇಂದಿಗೂ ಸಂಕಷ್ಟಗಳಿಂದ ಮುಕ್ತವಾಗಿಲ್ಲ. ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೂ, ಬೆಳೆಗಳಿಗೆ ಸಮರ್ಪಕ ಬೆಂಬಲ ಬೆಲೆ ಸಿಗುತ್ತಿಲ್ಲ. ನೀರಾವರಿ, ವಿದ್ಯುತ್, ರಸಗೊಬ್ಬರ, ಬೀಜ ಹಾಗೂ ಮಾರುಕಟ್ಟೆ ಸಮಸ್ಯೆಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲೂ ರೈತರು ದೇಶದ ಆಹಾರ ಭದ್ರತೆಯನ್ನು ಕಾಪಾಡುವ ಮಹತ್ತರ ಹೊಣೆಗಾರಿಕೆ ಯನ್ನು ನಿರ್ವಹಿಸುತ್ತಿದ್ದಾರೆ

Gurupurnime: ಕೈವಾರದಲ್ಲಿ ಗುರುಪೂಜಾ ಸಂಗೀತ ಮಹೋತ್ಸವಕ್ಕೆ ಭರದ ಸಿದ್ಧತೆ

ಕೈವಾರದಲ್ಲಿ ಗುರುಪೂಜಾ ಸಂಗೀತ ಮಹೋತ್ಸವಕ್ಕೆ ಭರದ ಸಿದ್ಧತೆ

ಆಷಾಢ ಮಾಸದ ಹುಣ್ಣಿಮೆಯ ಸಂದರ್ಭದಲ್ಲಿ ಕೈವಾರ ಕ್ಷೇತ್ರವು ಭಕ್ತರಿಂದ ಕಿಕ್ಕಿರಿದು ತುಂಬ ಲಿದ್ದು, ಗುರುಪೂಜೆ ಹಾಗೂ ಸಂಗೀತಾರ್ಚನೆಯ ಮೂಲಕ ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರಿಗೆ ವಿಶೇಷ ಸೇವೆ ಸಲ್ಲಿಸಲಾಗುತ್ತದೆ. ಮಹೋತ್ಸವಕ್ಕೆ ಆಗಮಿಸುವ ಸಾವಿರಾರು ಭಕ್ತರ ಅನುಕೂಲಕ್ಕಾಗಿ ವಿಶಾಲ ಪೆಂಡಾಲ್‌ಗಳನ್ನು ನಿರ್ಮಿಸಲಾಗಿದ್ದು, ದೇವಾಲಯ ಮತ್ತು ಸುತ್ತಮುತ್ತ ಲಿನ ಪ್ರದೇಶವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿದೆ

Chikkaballapur News: ಪತ್ರಿಕೋದ್ಯಮದ ಹಿರಿಯ ಸಾಧಕ ಭವಾನಿ ಲಕ್ಷ್ಮೀನಾರಾಯಣ್‌ಗೆ ಪಿ.ಆರ್.ರಾಮಯ್ಯ ಸ್ಮಾರಕ ದತ್ತಿ ಪ್ರಶಸ್ತಿ

ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಪತ್ರಕರ್ತರಿಗೆ ಸನ್ಮಾನ

ಕನ್ನಡ ಚಿತ್ರರಂಗದ ಅನೇಕ ದಿಗ್ಗಜ ನಟ-ನಟಿಯರ ಅಪರೂಪದ ಭಾವಚಿತ್ರಗಳನ್ನು ಸೆರೆಹಿಡಿದಿರುವ ಅವರು, ವರನಟ ಡಾ. ರಾಜ್‌ಕುಮಾರ್ ಅವರ ಕುಟುಂಬದೊಂದಿಗೂ ಆತ್ಮೀಯ ಒಡನಾಟ ಹೊಂದಿದ್ದರು. ಜಿಲ್ಲೆಯ ಪತ್ರಿಕೋದ್ಯಮ ಹಾಗೂ ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿರುವ ಅವರ ಅಮೂಲ್ಯ ಸೇವೆಯನ್ನು ಗುರುತಿಸಿ ಕೆಯುಡಬ್ಲ್ಯೂಜೆ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿ

Madhugiri News: ಮಧುಗಿರಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಎಂ. ಶಿವಣ್ಣ ಆಯ್ಕೆ

ಮಧುಗಿರಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಎಂ. ಶಿವಣ್ಣ ಆಯ್ಕೆ

Madhugiri News: ಮಧುಗಿರಿ ತಾಲೂಕಿನ ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿವಣ್ಣ, ಉಪಾಧ್ಯಕ್ಷರಾಗಿ ಎಸ್. ಆರ್. ಅಶ್ವತ್ಥನಾರಾಯಾಣ್ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಎಸ್. ರಘುನಾಥರೆಡ್ಡಿ ಹಾಗೂ ಜಿ.ಆರ್. ಗಂಗಾಧರಯ್ಯ ಅವರು ಕರ್ತವ್ಯ ನಿರ್ವಹಿಸಿದ್ದಾರೆ.

Horrific accident on NH 44: ರಾಷ್ಟ್ರೀಯ ಹೆದ್ದಾರಿ–44ರಲ್ಲಿ ಭೀಕರ ಅಪಘಾತ: ಫಾರ್ಚುನರ್ ಕಾರು ಡಿಕ್ಕಿ: ಬೈಕ್ ಸವಾರ ಬಲಿ

ಫಾರ್ಚುನರ್ ಕಾರು ಡಿಕ್ಕಿ: ಬೈಕ್ ಸವಾರ ಬಲಿ

ಮುನಿರಾಜು ಅವರು ತಮ್ಮ ಗ್ರಾಮದಿಂದ ಬೈಕ್‌ನಲ್ಲಿ ಚಿಕ್ಕಬಳ್ಳಾಪುರ ಹೂ ಮಾರುಕಟ್ಟೆಗೆ ಬಂದು ಹೂ ಮಾರಾಟ ಮಾಡಿದ್ದರು. ಬಳಿಕ ನೆರೆಯ ಗುವ್ವಲಕಾನಹಳ್ಳಿಗೆ ಹಸು ಖರೀದಿಸುವ ಸಲುವಾಗಿ ತೆರಳಿ, ವಾಪಸ್ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ–44ರ ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ರಸ್ತೆ ದಾಟಲು ಮುಂದಾಗಿದ್ದರು.

ಒಳಹರಿವು ಹೆಚ್ಚಳ ಹಿನ್ನೆಲೆ: ಕೃಷ್ಣಾ ನದಿ ಪಾತ್ರಕ್ಕೆ ನೀರು ಹರಿವು

ಒಳಹರಿವು ಹೆಚ್ಚಳ ಹಿನ್ನೆಲೆ: ಕೃಷ್ಣಾ ನದಿ ಪಾತ್ರಕ್ಕೆ ನೀರು ಹರಿವು

ಒಳಹರಿವು ಹೆಚ್ಚಳ ಹಿನ್ನಲೆಯಲ್ಲಿ ಈ ವರ್ಷದಲ್ಲಿ‌ ಮೊದಲ ಬಾರಿ ಆಲಮಟ್ಟಿ ಜಲಾಶಯದ 14 ಗೇಟ್‌ಗಳನ್ನು ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಶುಕ್ರವಾರದಿಂದ ಬಿಡಲಾಗುತ್ತಿದೆ. ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕದ ಮೂಲಕ 42,500 ಹಾಗೂ ಗೇಟ್ ಗಳ ಮೂಲಕ 25000 ಕ್ಯೂಸೆಕ್ ಸೇರಿ ಒಟ್ಟಾರೆ 67,500 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ.

ಬೆಂಗಳೂರಿನಲ್ಲಿ ‘ವಾಂತಿ ಗ್ಯಾಂಗ್’ ಕೈಚಳಕ; ಬಸ್‌ಗಳಲ್ಲಿ ಪ್ರಯಾಣಿಕರನ್ನು ಯಾಮಾರಿಸಿ ಪಿಕ್‌ಪಾಕೆಟ್‌ ಮಾಡುತ್ತಿದ್ದ ಇಬ್ಬರು ಅರೆಸ್ಟ್‌

ಬೆಂಗಳೂರಿನಲ್ಲಿ ‘ವಾಂತಿ ಗ್ಯಾಂಗ್’ ಕೈಚಳಕ; ಇಬ್ಬರು ಅರೆಸ್ಟ್‌

ಬಸ್‌ಗಳಲ್ಲಿ ಕಿಟಕಿ ಪಕ್ಕ ಕೂರುವ ಪ್ರಯಾಣಿಕರನ್ನು ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮೊದಲು ಪ್ರಯಾಣಿಕರ ಬಳಿ ತೆರಳಿ, ವಾಂತಿ ಬರುತ್ತಿದೆ, ಸೀಟ್ ಬಿಟ್ಟು ಕೊಡಿ ಎಂದು ನಂಬಿಸುತ್ತಿದ್ದರು. ಆಗ ಪ್ರಯಾಣಿಕರು ಸೀಟ್‌ನಿಂದ ಎದ್ದು ಹೋಗುವಾಗ ಕೈಚಳಕ ತೋರಿ, ಹಣ, ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದರು. ಇದಕ್ಕೆ ಸಂಬಂಧಿಸಿ ಸದ್ಯ ಇಬ್ಬರ ಬಂಧನವಾಗಿದೆ.

Chhattisgarh CM Vishnu Dev Sai: ಸದ್ಗುರುಗಳ ಸೇವೆ ದೇಶಕ್ಕೇ ಮಾದರಿ: ವಿಷ್ಣು ದೇವ್ ಸಾಯಿ: ಅಂತಾರಾಷ್ಟ್ರೀಯ ಮೌಲ್ಯ ಶಿಕ್ಷಣ ಸಮ್ಮೇಳನದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭಾಗಿ

ಸದ್ಗುರುಗಳ ಸೇವೆ ದೇಶಕ್ಕೇ ಮಾದರಿ: ವಿಷ್ಣು ದೇವ್ ಸಾಯಿ

ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಪ್ರೀತಿ, ಕರುಣೆ ಮತ್ತು ಸೇವೆಯ ಪರಂಪರೆಯನ್ನು ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಅತ್ಯಂತ ಯಶಸ್ವಿಯಾಗಿ  ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.  ಭಾರತೀಯ ಗುರು-ಶಿಷ್ಯ ಪರಂಪರೆಯ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸುವ ಮಹತ್ತರ ಕಾರ್ಯವನ್ನು ಅವರು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿಂತಾಮಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೆಜಿಗೂ ಹೆಚ್ಚು ಗಾಂಜಾ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

ಎನ್‌ಎನ್‌ಟಿ ವೃತ್ತದ ಬಳಿ ಗಾಂಜಾ ಮಾರಾಟ ಯತ್ನ

ಬಂಧಿತ ಆರೋಪಿಗಳನ್ನು ಶ್ರೀನಿವಾಸ್ (19 ವರ್ಷ)ಮೂಲತಃ ಬೆಂಗಳೂರು ರೋಜಾ(40 ವರ್ಷ) ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆ ಗಳ ತಡೆಗೆ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ, ಬೆಳಿಗ್ಗೆ ಸುಮಾರು 11:30 ರ ವೇಳೆಗೆ ಬಾತ್ಮೀದಾರರಿಂದ ಖಚಿತ ಮಾಹಿತಿ ದೊರೆತಿತ್ತು.

Chikkaballapur News: ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ದಾಳಿ; 200 ಲೀಟರ್‌ಗೂ ಅಧಿಕ ರಾಸಾಯನಿಕ, ನಕಲಿ ಲೇಬಲ್‌ಗಳು ವಶ

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ಜಾಲ ಭೇದ

ಅಧಿಕಾರಿಗಳ ಮಾಹಿತಿ ಪ್ರಕಾರ, ತಾನೇ ವಿವಿಧ ಕಂಪನಿಗಳ ಲೇಬಲ್‌ಗಳನ್ನು ಮುದ್ರಿಸಿ ಬಾಟಲಿಗಳಿಗೆ ಅಂಟಿಸಿ, ಪ್ಯಾಕಿಂಗ್ ಮಾಡಿ ನೇರವಾಗಿ ರೈತರ ಜಮೀನುಗಳಿಗೆ ತೆರಳಿ ಮಾರಾಟ ನಡೆಸುತ್ತಿದ್ದ. ದಾಳಿ ವೇಳೆ ವಶಪಡಿಸಿಕೊಂಡ ಲೇಬಲ್‌ಗಳಲ್ಲಿ ಜಿಎಸ್‌ಟಿ ಸಂಖ್ಯೆಯೂ ನಕಲಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ

ಸಾರ್ವಜನಿಕ ಶೌಚಾಲಯಗಳ ಶೋಚನೀಯತೆ ತೆರೆದಿಟ್ಟ ಬಿ.ಪ್ಯಾಕ್‌ ಸಮೀಕ್ಷಾ ವರದಿ: ನಗರದಲ್ಲಿ 1 ಸಾವಿರಕ್ಕೂ ಅಧಿಕ ಸಾರ್ವಜನಿಕ ಶೌಚಾಲಯಗಳ ತೆರೆಯಲು ಸಲಹೆ

ನಗರದಲ್ಲಿ 1 ಸಾವಿರಕ್ಕೂ ಅಧಿಕ ಸಾರ್ವಜನಿಕ ಶೌಚಾಲಯಗಳ ತೆರೆಯಲು ಸಲಹೆ

ಬೆಂಗಳೂರು ಇಂದು 1.4 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಜಾಗತಿಕ ನಗರವಾಗಿ ಬೆಳೆಯು ತ್ತಿದ್ದರೂ, ಸಾರ್ವಜನಿಕ ಶೌಚಾಲಯಗಳ ಮೂಲಸೌಕರ್ಯ ಅದಕ್ಕೆ ಅನುಗುಣವಾಗಿ ಅಭಿವೃದ್ಧಿ ಯಾಗಿಲ್ಲ ಎಂಬುದನ್ನು ವರದಿ ಬಹಿರಂಗಪಡಿಸಿದೆ. ನಗರದಲ್ಲಿ 479 ಶೌಚಾಲಯಗಳಿರುವುದು ಜಿಬಿಎ ಅಧಿಕೃತ ದಾಖಲೆಗಳ ಮೂಲಕ ತಿಳಿದು ಬಂದಿದೆ.

ಗದಗದ ಗ್ರಾಮೀಣಾಭಿವೃದ್ಧಿ ವಿವಿ ಹಾಸ್ಟೆಲ್‌ನಲ್ಲಿ MPH ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ!

ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ MPH ವಿದ್ಯಾರ್ಥಿನಿ ಶವ ಪತ್ತೆ!

Gadag Student death: ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದ ವಿದ್ಯಾರ್ಥಿನಿ, ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಬಗ್ಗೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bengaluru metro fare hike: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌; ಟಿಕೆಟ್‌ ದರ ಶೇ.12ರಷ್ಟು ಏರಿಕೆಗೆ ಬಿಎಂಆರ್‌ಸಿಎಲ್ ಪ್ರಸ್ತಾಪ!

ಮೆಟ್ರೋ ಪ್ರಯಾಣಿಕರಿಗೆ ಶಾಕ್‌; ಟಿಕೆಟ್‌ ದರ ಶೇ.12 ಏರಿಕೆಗೆ ಪ್ರಸ್ತಾಪ!

Bengaluru metro fare Hike: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಬಿಎಂಆರ್‌ಸಿಎಲ್‌ನಿಂದ ಸಲ್ಲಿಸಲಾದ ಪರಿಷ್ಕೃತ ವಿಸ್ತೃತ ಯೋಜನಾ ವರದಿಯಲ್ಲಿ ದರ ಏರಿಕೆಯ ಹೊಸ ಲೆಕ್ಕಾಚಾರವನ್ನು ಉಲ್ಲೇಖಿಸಲಾಗಿದೆ. 3 'ಎ' ಹಂತದ ಮಾರ್ಗದ ಕಾಮಗಾರಿಯನ್ನು 2033ಕ್ಕೆ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ.

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು; ‎1,264 ಕೋಟಿ ವೆಚ್ಚಕ್ಕೆ ಅನುಮೋದನೆ

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು

Pralhad Joshi: ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ನಿರ್ಮಾಣದಿಂದ ರೈಲು ಜಾಲ 46 ಕಿ.ಮೀ. ವಿಸ್ತರಣೆಯಾಗಲಿದ್ದು, ಸರಕು ಸಾಗಣೆ ಸಾಮರ್ಥ್ಯವೂ ಹೆಚ್ಚಲಿದೆ. ಇದರಿಂದ ಪ್ರಾದೇಶಿಕ ಸಂಪರ್ಕ ಮತ್ತಷ್ಟು ಬಲಗೊಳ್ಳುವ ಜತೆಗೆ ಸ್ಥಳೀಯವಾಗಿ ಆರ್ಥಿಕ ಬೆಳವಣಿಗೆಗೆ ಸಾಕಾರವಾಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Bengaluru Power Cut: ಜುಲೈ 25, 26ರಂದು ಬೆಂಗಳೂರಿನ ಹಲವೆಡೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ

ಜುಲೈ 25, 26ರಂದು ಬೆಂಗಳೂರಿನ ಹಲವೆಡೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11ಕೆ.ವಿ ಅಬ್ಬಿಗೆರೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜುಲೈ 25ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Fake PhD certificates: ರಾಜ್ಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ನಕಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಿ 249 ಮಂದಿ ಆಯ್ಕೆ; ಕೇಸ್‌ ದಾಖಲಿಸಲು ಸೂಚನೆ

ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿದ 249 ಅತಿಥಿ ಉಪನ್ಯಾಸಕರು!

Guest lecturer recruitment: ಒಟ್ಟು 249 ನಕಲಿ ಪಿಎಚ್‌ಡಿ ಪ್ರಮಾಣಪತ್ರಗಳ ಪೈಕಿ 148 ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಪತ್ತೆಯಾಗಿವೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ 33 ಪ್ರಕರಣಗಳು ವರದಿಯಾಗಿವೆ. ನಕಲಿ ಪ್ರಮಾಣಪತ್ರ ಸಲ್ಲಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

Chikkaballapur News: ಹೆಣ್ಣು ಮಗು ಎಂಬ ಕಾರಣಕ್ಕೆ 13 ದಿನಗಳ ಮಗುವನ್ನು ಸಂಪ್‌ಗೆ ಎಸೆದು ಕೊಂದ ತಂದೆ!

13 ದಿನಗಳ ಹೆಣ್ಣು ಮಗುವನ್ನು ಸಂಪ್‌ಗೆ ಎಸೆದು ಕೊಂದ ತಂದೆ!

Child murder: ಚಿಕ್ಕಬಳ್ಳಾಪುರ ನಗರದ ಶಾಂತಿನಗರ (ನಕ್ಕಲಕುಂಟೆ) ಪ್ರದೇಶದಲ್ಲಿ ಘಟನೆ ನಡೆದಿದೆ. ತಾಯಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಮತ್ತೊಮ್ಮೆ ಹೆಣ್ಣು ಮಗು ಜನಿಸಿದ್ದೇ ಕೃತ್ಯಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಪೆರೋಲ್ ನೀಡಲು ಸಾಧ್ಯವಿಲ್ಲ: ಕಾರಾಗೃಹ ಇಲಾಖೆ ಸ್ಪಷ್ಟನೆ

ಪ್ರಜ್ವಲ್‌ ರೇವಣ್ಣಗೆ ಪೆರೋಲ್ ನೀಡಲು ಸಾಧ್ಯವಿಲ್ಲ: ಕಾರಾಗೃಹ ಇಲಾಖೆ

ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ತಿಥಿಯಲ್ಲಿ ಭಾಗಿಯಾಗಲು ಜೈಲಿನಿಂದ ಪ್ರಜ್ವಲ್‌ ರೇವಣ್ಣನನ್ನು ಕರೆತರುವುದಕ್ಕೆ ಕುಟುಂಬಸ್ಥರು ಯತ್ನಿಸುತ್ತಿದ್ದಾರೆ. ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ಬೆಂಗಳೂರಿನಲ್ಲಿಲ್ಲ, ಕಾಕ್ರೋಚ್‍ಗಳ ಜತೆ ಜಂತರ್‌ ಮಂತರ್‌ನಲ್ಲಿ ಕುಳಿತಿದೆ: ಛಲವಾದಿ ನಾರಾಯಣಸ್ವಾಮಿ

ಸರ್ಕಾರ ಬೆಂಗಳೂರಲ್ಲಿ ಇಲ್ಲದಿರುವುದು ವಿಪರ್ಯಾಸ: ಛಲವಾದಿ ನಾರಾಯಣಸ್ವಾಮಿ

Chalavadi Narayanaswamy: ಬೆಂಗಳೂರಿನ ಜಿ.ಕೆ.ವಿ.ಕೆ.ಯಲ್ಲಿ ನಡೆದ ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸರ್ಕಾರ ಅತಿ ಶೀಘ್ರವಾಗಿ ಧಾವಿಸಿ ಬಂದು ನಿಮ್ಮ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು. ಸರ್ಕಾರ ಬೆಂಗಳೂರಲ್ಲಿ ಇಲ್ಲದಿರುವುದು ವಿಪರ್ಯಾಸ ಎಂದು ಅವರು ಟೀಕಿಸಿದ್ದಾರೆ.

ಜುಲೈ 26ರಂದು ಬೆಂಗಳೂರಿನಲ್ಲಿ ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜು.26ರಂದು ಬೆಂಗಳೂರಿನಲ್ಲಿ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

Bengaluru News: ಬೆಂಗಳೂರು ತುಳುವೆರೆ ಚಾವಡಿಯ 28ನೇ ವರ್ಷದ ʼಪರ್ಬದ ಲೇಸ್ʼ ಕಾರ್ಯಕ್ರಮ ಜುಲೈ 26ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶ್ರೀ ಡಾ. ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಉದ್ಘಾಟಿಸಲಿದ್ದಾರೆ.

ಕಲಬುರಗಿಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಶಾಸಕ, ಮುಖಂಡರು ವಶಕ್ಕೆ

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಶಾಸಕ, ಮುಖಂಡರು ವಶಕ್ಕೆ

Kalaburagi News: ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಬಳಿಕ ಕಾಂಗ್ರೆಸ್ ಕಚೇರಿಯತ್ತ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿ, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಸಾಹಿತ್ಯೋತ್ಸವ– 2026: ವಿದ್ಯಾರಣ್ಯ ಕನ್ನಡ ಕೂಟದಿಂದ  ಶಿಕಾಗೋದಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆ ಸೊಗಡಿನ ಅನಾವರಣ

ವಿದ್ಯಾರಣ್ಯ ಕನ್ನಡ ಕೂಟ ಸಾಹಿತ್ಯೋತ್ಸವ

ವಿದ್ಯಾರಣ್ಯ ಕನ್ನಡ ಕೂಟದ ವತಿಯಿಂದ ಶಿಕಾಗೋದಲ್ಲಿ “ಸಾಹಿತ್ಯೋತ್ಸವ – 2026” ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಇಂಡಿಯಾ ಹಬ್‌ನಲ್ಲಿ ಇತ್ತೀಚೆಗೆ ನಡೆದ ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಯ ಸೊಗಡನ್ನು ಅನಾವರಣಗೊಳಿಸಲಾಗಿದ್ದು, ಅಪಾರ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಯಿತು.

Loading...