ಗುಲಾಬಿ ಹೂ ಕೊಟ್ಟು ಹೆಲ್ಮೆಟ್ ಜಾಗೃತಿ ಮೂಡಿಸಿದ ಪೊಲೀಸರು
ಈ ಬೈಕ್ ರ್ಯಾಲಿಯು ಪೆರೇಸಂದ್ರ ಪೊಲೀಸ್ ಠಾಣೆಯಿಂದ ಆರಂಭವಾಯಿತು. ಅಲ್ಲಿಂದ ಮಂಡಿಕಲ್ಲು ಸೇರಿದಂತೆ ವಿವಿಧ ಗ್ರಾಮಗಳ ಮೂಲಕ ಸಂಚರಿಸಿ ಅಂತಿಮವಾಗಿ ಗುಡಿಬಂಡೆ ಪಟ್ಟಣದ ಮುಖ್ಯರಸ್ತೆ ಯಲ್ಲಿ ಮೆರವಣಿಗೆಯ ಮೂಲಕ ಅಂತ್ಯಗೊಂಡಿತು. ರಸ್ತೆಯುದ್ದಕ್ಕೂ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಘೋಷಣೆಗಳನ್ನು ಕೂಗಲಾಯಿತು