ಸುಪ್ರೀಂ ಕೋರ್ಟ್ನಲ್ಲಿ ಇಂದು ಹನಿಟ್ರ್ಯಾಪ್ ಕೇಸ್ ವಿಚಾರಣೆ
ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು ಹಾಗೂ ಸಿಬಿಐ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗೆ ಮನವಿ ಸಲ್ಲಿಸಲಾಗಿದೆ. ಬಿನಯ್ ಕುಮಾರ್ ಸಿಂಗ್ ಎಂಬವರ ಪರವಾಗಿ ವಕೀಲ ಬರುಣ್ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಸುಪ್ರೀಂ ಕೋರ್ಟ್ನ ನ್ಯಾ. ವಿಕ್ರಂನಾಥ್, ನ್ಯಾ. ಸಂಜಯ್ ಕರೋಲ್, ನ್ಯಾ. ಸಂದೀಪ್ ಮೆಹ್ತಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.