ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chinthamani News: ಚಿಂತಾಮಣಿ ಡಿಸಿಸಿ ಬ್ಯಾಂಕ್‌ನಲ್ಲಿ 11 ಕೋಟಿ ರೂ.ಅವ್ಯವಹಾರ: ಸಿಐಡಿ ಅಧಿಕಾರಿಗಳ ದಿಢೀರ್ ದಾಳಿ!

ಚಿಂತಾಮಣಿ ಡಿಸಿಸಿ ಬ್ಯಾಂಕ್‌ನಲ್ಲಿ 11 ಕೋಟಿ ರೂ.ಅವ್ಯವಹಾರ

ದೂರಿನ ಬೆನ್ನಲ್ಲೇ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಡಿವೈಎಸ್ಪಿ ಹಾಗೂ ಸಿಬ್ಬಂದಿ ಚಿಂತಾಮಣಿ ಡಿಸಿಸಿ ಬ್ಯಾಂಕ್‌ಗೆ ಆಗಮಿಸಿ,ದೂರುದಾರ ಪ್ರತಾಪ್ ಕುಮಾರ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ಮಹಜರು ಪ್ರಕ್ರಿಯೆ ನಡೆಸಿದರು.ತದನಂತರ ಆರೋಪ ಕೇಳಿಬಂದಿರುವ ವಿವಿಧ ವಿಎಸ್‌ಎಸ್‌ಎನ್ ಸೊಸೈಟಿಗಳ ಕಾರ್ಯದರ್ಶಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು

ಬೆಂಗಳೂರಿನಲ್ಲಿ ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು!

ಬೆಂಗಳೂರಿನಲ್ಲಿ ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು!

Nelamangala News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರದಲ್ಲಿ ಘಟನೆ ನಡೆದಿದೆ. ಅಪಘಾತದ ಬಳಿಕ ಶಾಲಾ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕನ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಉಗ್ರ ಸಂಘಟನೆಗಳ ಜತೆ ನಂಟು; ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿ

ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿ

ದೇಶದ ಭದ್ರತೆಗೆ ಧಕ್ಕೆ ತರಲು ಹೊಂಚು ಹಾಕಿದ್ದ ಉಗ್ರರ ಜಾಲವನ್ನು ಮಟ್ಟಹಾಕಲು ರಾಷ್ಟ್ರೀಯ ತನಿಖಾ ಸಂಸ್ಥೆ, ಇಂದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ. ಬಳ್ಳಾರಿಯ ಕೌಲ್ ಬಜಾರ್ ನಿವಾಸಿಯಾದ ಅಬ್ದುಲ್ ಸಲಾಂ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ.

Chikkaballapur News: ರೈತರ ಭೂಮಿ ವಿವಾದ: ಜು.13ಕ್ಕೆ ತಹಶೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ: ಕೆ.ಸಿ.ರಾಜಾಕಾಂತ್

ಜು.13ಕ್ಕೆ ತಹಶೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ

1972–73ರಲ್ಲಿ ಕಂದಾಯ ಇಲಾಖೆಯೇ ಸರ್ವೆ ನಂಬರ್ 67ರಲ್ಲಿ ಸಿಂಗಾಟಿಕದಿರೇನಹಳ್ಳಿ,ಕಣಿವೆ ನಾರಾ ಯಣಪುರ, ಸುದ್ದಹಳ್ಳಿಯ ಪ್ರತಿಫಲಾನುಭವಿಗೆ 2 ರಿಂದ 3 ಎಕರೆ ಭೂ ಮಂಜೂರಾತಿ ಮಾಡಿ ಇವರ ಹೆಸರಿಗೆ ಖಾತೆ ಪಹಣಿ ಸೇರಿ ಎಲ್ಲಾ ದಾಖಲೆಗಳನ್ನು ವಿತರಣೆ ಮಾಡಿದೆ.ಇದರಲ್ಲಿ ಬೆಳೆ ಬೆಳದುಕೊಂಡು ಸ್ವಾಧೀನದಲ್ಲಿರುತ್ತಾರೆ.

CM DK Shivakumar: ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಡಿ.ಕೆ. ಶಿವಕುಮಾರ್

CM DK Shivakumar: ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಆತ್ಮತೃಪ್ತಿಯ ದುಡಿಮೆಯ ಹಣದಿಂದ ಸಮಾಜ ಸೇವೆ ಮಾಡಿದರೆ ಭಗವಂತನಿಗೆ ಅರ್ಪಣೆ : ವಕೀಲ ಮಟಮಪ್ಪ ಅಭಿಮತ

ಆತ್ಮತೃಪ್ತಿಯ ದುಡಿಮೆಯ ಹಣದಿಂದ ಸಮಾಜ ಸೇವೆ ಮಾಡಿದರೆ ಭಗವಂತನಿಗೆ ಅರ್ಪಣೆ

"ಮಕ್ಕಳು ತಮ್ಮ ಬೇರುಗಳನ್ನು ಮರೆಯಬಾರದು. ತಂದೆ-ತಾಯಿಯ ಮಾತಿಗೆ ಗೌರವ ನೀಡಿ, ಗುರುಗಳ ಮಾರ್ಗದರ್ಶನವನ್ನು ತಪ್ಪದೆ ಅನುಸರಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್ ಹೇಳಿದಂತೆ ತಲೆ ಬಗ್ಗಿಸಿ ಓದಿದರೆ, ಭವಿಷ್ಯದಲ್ಲಿ ತಲೆಯೆತ್ತಿ ನಡೆಯಬಹುದು. ಕಷ್ಟಗಳಿಗೆ ಹೆದರದೆ ಗುರಿಯತ್ತ ದೃಷ್ಟಿನೆಟ್ಟರೆ ಯಶಸ್ಸು ನಿಮ್ಮದಾಗುತ್ತದೆ. ಪುಸ್ತಕಗಳಿಗೆ ಮಾಡುವ ವೆಚ್ಚ ಎಂದಿಗೂ ವ್ಯರ್ಥ ವಾಗುವುದಿಲ್ಲ. ಪುಸ್ತಕದ ಜ್ಞಾನವೇ ಉತ್ತಮ ಸಮಾಜ ಮತ್ತು ಭವ್ಯ ಭಾರತದ ನಿರ್ಮಾಣಕ್ಕೆ ಅಡಿಪಾಯ"

Chikkaballapur News: ನಮ್ಮದು ನುಡಿದಂತೆ ನಡೆದ ಸರಕಾರ: ಜಿಲ್ಲೆಯಲ್ಲಿ 7845 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ : ಯಲುವಳ್ಳಿ ಎನ್.ರಮೇಶ್

ನಮ್ಮದು ನುಡಿದಂತೆ ನಡೆದ ಸರಕಾರ

ವಿದ್ಯಾರ್ಥಿ (ಪುರುಷ)ಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಉಚಿತ ಬಸ್ ಪಾಸ್ ಯೋಜನೆ ಯನ್ನೂ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿದೆ.ಗAಡು ಮಕ್ಕಳ ಶಿಕ್ಷಣ ಪ್ರಗತಿಗಾಗಿ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 7845 ವಿದ್ಯಾರ್ಥಿಗಳಿಗೆ ಇದುವರೆಗೆ ಉಚಿತ ಬಸ್ ಪಾಸ್ ಗಳನ್ನು ಕಳೆದ 15 ದಿನಗಳಲ್ಲಿ ವಿತರಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳಾಗಿ ಪಿ. ತ್ಯಾಗರಾಜ್, ರಾಘವೇಂದ್ರ ಭಟ್ ಸೇರಿ ಮೂವರ ನೇಮಕ

ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ಪಿ. ತ್ಯಾಗರಾಜ್ ಸೇರಿ ಮೂವರ ನೇಮಕ

Media Secretary to Chief Minister: ಪಿ. ತ್ಯಾಗರಾಜ್ ಅವರು ಕರ್ನಾಟಕ ಮಾಧ್ಯಮ ರಂಗದಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ಹಿರಿಯ ಪತ್ರಕರ್ತರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆಗಿದ್ದಾಗ ಅವರ ಮಾಧ್ಯಮ ಸಲಹೆಗಾರರಾಗಿಯೂ ಪಿ. ತ್ಯಾಗರಾಜ್ ಕಾರ್ಯನಿರ್ವಹಿಸಿದ್ದರು. ಇದೀಗ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೇಲೆ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

Gaubidanur News: ವಿದ್ಯಾರ್ಥಿ ಜೀವನದಲ್ಲಿ ಸಮಯದ ಅಪಮೌಲ್ಯ ಸಲ್ಲದು : ಶ್ರೀಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ

ವಿದ್ಯಾರ್ಥಿ ಜೀವನದಲ್ಲಿ ಸಮಯದ ಅಪಮೌಲ್ಯ ಸಲ್ಲದು

ಕೆಎಚ್‌ಪಿ ಫೌಂಡೇಶನ್ ವತಿಯಿಂದ ಕಳೆದ ಆರು ವರ್ಷಗಳಿಂದ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಸುಮಾರು 40 ಲಕ್ಷ ವೆಚ್ಚದಲ್ಲಿ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗಿದ್ದು, ಕುಡಿ ಯುವ ನೀರು, ಶೌಚಾಲಯ ಹಾಗೂ ಆಟದ ಮೈದಾನ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ

Gudibande News: ದಲಿತರ ಭೂಮಿಯಲ್ಲಿ ಸೋಲಾರ್ ಪ್ಲಾಂಟ್ ಅಳವಡಿಕೆ; ಸಂತ್ರಸ್ಥರ ಅನಿರ್ದಿಷ್ಟಾವಧಿ ಮೌನ ಸತ್ಯಾಗ್ರಹ

ದಲಿತರ ಭೂಮಿಯಲ್ಲಿ ಸೋಲಾರ್ ಪ್ಲಾಂಟ್ ಅಳವಡಿಕೆ; ಮೌನ ಸತ್ಯಾಗ್ರಹ

ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರ ವೆಂಕಟೇಶ್ ಮಾತನಾಡಿ, ಗೋಮಾಳ ಹಾಗೂ ಪರಿಶಿಷ್ಟ ಸಮುದಾಯದ ಭೂಮಿಯಲ್ಲಿ ಸೋಲಾರ್ ಪ್ಲಾಂಟ್ ನಿರ್ಮಿಸಿರುವುದರಿಂದ ಹಲವು ರೈತರಿಗೆ ಅನ್ಯಾಯವಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ

ಕುಸಿಯುತ್ತಿವೆ ರಟ್ಟಿಹಳ್ಳಿಯ ಕುಮದ್ವತಿ ನದಿ ದಡದಲ್ಲಿನ ಐತಿಹಾಸಿಕ ಕಲ್ಲಿನ ಮೆಟ್ಟಿಲುಗಳು

ಕುಸಿಯುತ್ತಿವೆ ರಟ್ಟಿಹಳ್ಳಿಯ ಕುಮದ್ವತಿ ನದಿ ದಡದಲ್ಲಿನ ಕಲ್ಲಿನ ಮೆಟ್ಟಿಲುಗಳು

Kumudvathi River: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ ಜೀವನಾಡಿಯಾಗಿರುವ ಕುಮದ್ವತಿ ನದಿ (ಪಾಟಾಣಿಗಿ ಹೊಳೆ) ದಡದಲ್ಲಿನ ಐತಿಹಾಸಿಕ ಕಲ್ಲಿನ ಮೆಟ್ಟಿಲುಗಳು ಕುಸಿದು ಬೀಳುತ್ತಿವೆ. ನಿರ್ವಹಣೆಯ ಕೊರತೆ, ಕಾಲದ ಹೊಡೆತ ಮತ್ತು ನಿರ್ಲಕ್ಷ್ಯದಿಂದ ಮೆಟ್ಟಿಲುಗಳು ಸಂಪೂರ್ಣ ಶಿಥಿಲಗೊಂಡಿವೆ. ಈ ಕುರಿತ ಲೇಖನ ಇಲ್ಲಿದೆ.

Gubbi News: ಎಸ್ಐಆರ್ ಜಾರಿಗೆ ತಂದ ಬಿಜೆಪಿಯಿಂದಲೇ ವಿರೋಧ..! : ಎಸ್.ಆರ್.ಶ್ರೀನಿವಾಸ್

ಎಸ್ಐಆರ್ ಜಾರಿಗೆ ತಂದ ಬಿಜೆಪಿಯಿಂದಲೇ ವಿರೋಧ..!

ಪಶ್ಚಿಮ ಬಂಗಾಳದಲ್ಲಿ ಮಾಡಿದಂತೆ ಬಿಜೆಪಿಗೆ ಬಾರದ ಮತಗಳನ್ನು ಕಿತ್ತು ಹಾಕಲು ನಮ್ಮಲ್ಲಿ ಆಗುತ್ತಿಲ್ಲ ಎಂದು ನೋವು ಪಡುತ್ತಿರುವ ಬಿಜೆಪಿ ಪಕ್ಷದವರು ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣವನ್ನೇ ಮುಂದಿಟ್ಟುಕೊಂಡು ಸಲ್ಲದ ಆರೋಪಕ್ಕೆ ಮುಂದಾಗಿದೆ. ಕಾಂಗ್ರೆಸ್ ಕಾರ್ಯ ಕರ್ತರು ಎಲ್ಲೆಡೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ಅವರ ಪಕ್ಷದ ಬಿಎಲ್ಎ 2 ಕೆಲಸ ಮಾಡಬೇಕಿದೆ

Gudibande News: ಜನಪದ ಸಂಸ್ಕೃತಿ ಹಾಗೂ ಕಲೆಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ರಂಗಭೂಮಿ ಹಿರಿಯ ಕಲಾವಿದ ಪ್ರಭಾಕರ್ ರಾವ್

ಜನಪದ ಸಂಸ್ಕೃತಿ ಹಾಗೂ ಕಲೆಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾ

ಇತ್ತೀಚಿನ ದಿನಗಳಲ್ಲಿ ಯುವಜನತೆ ಪಾಶ್ಚಾತ್ಯ ಸಂಸ್ಕೃತಿಯತ್ತ ಹೆಚ್ಚು ಆಕರ್ಷಿತರಾಗುತ್ತಿರುವ ಹಿನ್ನೆಲೆ ಯಲ್ಲಿ ನಮ್ಮ ದೇಶೀಯ ಕಲೆ, ಸಂಸ್ಕೃತಿ, ಕ್ರೀಡೆ ಹಾಗೂ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಅಗತ್ಯ ವಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಲೆಗಳು ಕೇವಲ ಮನರಂಜನೆಗೆ ಸೀಮಿತವಾಗದೇ, ಸಮಾಜ ದಲ್ಲಿ ಸಾಮರಸ್ಯ, ಸೌಹಾರ್ದತೆ ಹಾಗೂ ಮಾನಸಿಕ ನೆಮ್ಮದಿಯನ್ನು ಬೆಳೆಸುವ ಶಕ್ತಿಯನ್ನು ಹೊಂದಿವೆ

Gauribidanur News: ಶ್ರೀಶಾರದಾ ದೇವಿ ದೇವಸ್ಥಾನದಲ್ಲಿ ವಿಮಾನ ಗೋಪುರ ಕಲಶ ಸ್ಥಾಪನೆ ಹಾಗೂ ಮಹಾಕುಂಭಾಭಿಷೇಕದಲ್ಲಿ ಶ್ರೀವಿಧುಶೇಖರ ಭಾರತಿ ಮಹಾಸ್ವಾಮಿ ಭಾಗಿ

ಮಹಾಕುಂಭಾಭಿಷೇಕದಲ್ಲಿ ಶ್ರೀವಿಧುಶೇಖರ ಭಾರತಿ ಮಹಾಸ್ವಾಮಿ ಭಾಗಿ

ಬುಧವಾರದಂದು ಮೂಲ ಮಂತ್ರ ಹೋಮ, ಶಾಂತಿ ಪ್ರಾಯಶ್ಚಿತ ಹೋಮ, ಸಿಂಹ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ಶೃಂಗೇರಿ ಶಾರದಾ ಮಠದ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀಯ ಸನ್ನಿದಾನಂಗಳವರ ಅಮೃತ ಹಸದಿಂದ ಶ್ರೀ ಮಹಾಗಣಪತಿ, ಶ್ರೀ ಶಾರದಾ ದೇವಿ, ಶ್ರೀ ಚಂದ್ರ ಮೌಳೇಶ್ವರ ಸ್ವಾಮಿಗೆ ಬ್ರಹ್ಮಕುಂಭಾಭಿಷೇಕ, ಮಹಾಪೂಜೆ ಶಿಖರ ಕುಂಭಾಭಿಷೇಕ ನೆರವೇರಿಸಿದರು

ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ನಕಲಿ ಡಿಎಸ್‌ಪಿ ಹೆಡೆಮುರಿ ಕಟ್ಟಿದ ವಿಜಯಪುರ ಖಾಕಿ

ನಕಲಿ ಡಿಎಸ್‌ಪಿ ಹೆಡೆಮುರಿ ಕಟ್ಟಿದ ವಿಜಯಪುರ ಖಾಕಿ

Vijayapura News: ತಾನು ಡಿಎಸ್‌ಪಿ ಎಂದು ನಂಬಿಸಿ, ಉದ್ಯೋಗ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಕರ್ನಾಟಕದಾದ್ಯಂತ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪಿದ ಸ್ಯಾಮ್‌ಸಂಗ್ ಆರ್ & ಡಿ ಇನ್‌ಸ್ಟಿಟ್ಯೂಟ್ ಇಂಡಿಯಾ–ಬೆಂಗಳೂರು ನೋಟ್‌ಬುಕ್ ವಿತರಣಾ ಅಭಿಯಾನ

2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪಿದ ನೋಟ್‌ಬುಕ್ ವಿತರಣಾ ಅಭಿಯಾನ

2015ರಿಂದ ಆರಂಭಗೊಂಡ ಈ ಅಭಿಯಾನವು ಇಂದು ಕರ್ನಾಟಕದಾದ್ಯಂತ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪಿದೆ. ಇದುವರೆಗೆ ಸುಮಾರು 15 ಲಕ್ಷ ನೋಟ್‌ಬುಕ್‌ಗಳನ್ನು ವಿತರಿಸಲಾಗಿದ್ದು, ಈ ವರ್ಷದ ಅಭಿಯಾನದಡಿ ಕೋಲಾರ ಜಿಲ್ಲೆಯ 195 ಸರ್ಕಾರಿ ಶಾಲೆಗಳ 7,620 ವಿದ್ಯಾರ್ಥಿಗಳಿಗೆ 42,819 ನೋಟ್‌ಬುಕ್‌ಗಳನ್ನು ವಿತರಿಸಲಾಗಿದೆ.

Tumkur Accident: ಲಾರಿ ಹರಿದರೂ ಪವಾಡಸದೃಶ ರೀತಿಯಲ್ಲಿ ವಿದ್ಯಾರ್ಥಿನಿ ಪಾರು; ಇಲ್ಲಿದೆ ಎದೆ ಝಲ್ ಎನಿಸೋ Video!

ಲಾರಿ ಹರಿದರೂ ಪವಾಡಸದೃಶ ರೀತಿಯಲ್ಲಿ ಪಾರಾದ ವಿದ್ಯಾರ್ಥಿನಿ; Video

ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಭೀಕರ ನಡೆದಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ತಿಪಟೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದು,ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Kalaburagi News: ಕರ್ತವ್ಯದ ವೇಳೆಯೇ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಕಾನ್‌ಸ್ಟೇಬಲ್‌ ಆತ್ಮಹತ್ಯೆ!

ರೈಫಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡು ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಕಲಬುರಗಿ ನಗರದ ಜಗತ್ ವೃತ್ತದ ಬಳಿ ಪೊಲೀಸ್ ವಾಹನದಲ್ಲೇ ಕಾನ್‌ಸ್ಟೇಬಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಕಲಬುರಗಿ ಸಿಎಆರ್ ವಿಭಾಗದಲ್ಲಿ ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಧುಸೂದನ್ ನಾಯಕ್ ಸಮೀಕ್ಷಾ ವರದಿ ಅಧಿವೇಶನದಲ್ಲಿ ಮಂಡಿಸಿ: ವಿ. ಸುನಿಲ್ ಕುಮಾರ್ ಆಗ್ರಹ

ಮಧುಸೂದನ್ ನಾಯಕ್ ಸಮೀಕ್ಷಾ ವರದಿ ಮಂಡಿಸಲು ಬಿಜೆಪಿ ಆಗ್ರಹ

V Sunil Kumar: ರೂ. 450 ಕೋಟಿಗೂ ಹೆಚ್ಚು ಜನರ ತೆರಿಗೆ ಹಣವನ್ನು ವೆಚ್ಚ ಮಾಡಿ ನಡೆಸಲಾದ ಸಮೀಕ್ಷೆಯ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ. ಅಧಿವೇಶನದಲ್ಲಿ ಅದಕ್ಕಾಗಿ ಪ್ರತ್ಯೇಕ ಸಮಯ ನಿಗದಿಪಡಿಸಬೇಕು. ವರದಿಯಲ್ಲಿ ಏನಿದೆ ಎಂದು ತಿಳಿಯಲು ನಾವು ಬಯಸಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

MLC Election: ಜನರ ಸಮಸ್ಯೆಗಳಿಗೆ ಸ್ಪಂದಿಸುವ ಯೋಗ್ಯ ವ್ಯಕ್ತಿ ವಿಧಾನ ಪರಿಷತ್‌ಗೆ ಬರಬೇಕು: ಬಿ.ವೈ. ವಿಜಯೇಂದ್ರ

ಯೋಗ್ಯ ವ್ಯಕ್ತಿ ವಿಧಾನ ಪರಿಷತ್‌ಗೆ ಬರಬೇಕು: ಬಿ.ವೈ. ವಿಜಯೇಂದ್ರ

BY Vijayendra: ವಿಧಾನಸೌಧವು ಪ್ರಜಾಪ್ರಭುತ್ವದ ದೇಗುಲ ಎಂದು ನಂಬಿದ್ದೇವೆ. ನಾಡಿನ ಆಗುಹೋಗು, ಜ್ವಲಂತ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಚರ್ಚೆ ಆಗಲು ಯೋಗ್ಯ ವ್ಯಕ್ತಿಗಳು ಆಯ್ಕೆಯಾಗಿ ಬರಬೇಕು ಎಂಬ ಅಪೇಕ್ಷೆ ಜನಸಾಮಾನ್ಯರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Karnataka SIR: ಎಸ್‌ಐಆರ್‌ ಬಗ್ಗೆ ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು

ಎಸ್‌ಐಆರ್‌ ಬಗ್ಗೆ ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಬಿಜೆಪಿ ದೂರು

ಎಸ್‌ಐಆರ್‌ ಕುರಿತು ಕಾಂಗ್ರೆಸ್‌ನ ಸುಳ್ಳು ಮಾಹಿತಿಯು ನಾಗರಿಕರ ಮನಸ್ಸಿನಲ್ಲಿ ಆತಂಕದ ಭಾವನೆಯನ್ನು ಮೂಡಿಸುತ್ತಿದೆ ಮತ್ತು ಚುನಾವಣಾ ಅಧಿಕಾರಿಗಳು ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವಾಗ ಅವರಲ್ಲಿ ಅಭದ್ರತೆಯ ಭಾವನೆಯನ್ನು ಉಂಟುಮಾಡಬಹುದು. ಹೀಗಾಗಿ ಸುಳ್ಳು ಮಾಹಿತಿ ಹರಡುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಬಿಜೆಪಿ ತಿಳಿಸಿದೆ.

Indi MLA Yashwant Rayagouda Patil Interview: ಹ್ಯಾಟ್ರಿಕ್‌ ಗೆಲುವಿನ ಅಭಿವೃದ್ಧಿ ಪವರ್‌ ಸಚಿವ ಸ್ಥಾನದ ವಿಶ್ವಾಸ

ಹ್ಯಾಟ್ರಿಕ್‌ ಗೆಲುವಿನ ಅಭಿವೃದ್ಧಿ ಪವರ್‌ ಸಚಿವ ಸ್ಥಾನದ ವಿಶ್ವಾಸ

ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕ ಹಾಗೂ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಇಂಡಿ ಶಾಸಕ ಯಶವಂತ್ ರಾಯಗೌಡ ಪಾಟೀಲ್, ವಿಜಯಪುರ ಜಿಲ್ಲೆಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕ

ಚನ್ನಪಟ್ಟಣ ತಹಶೀಲ್ದಾರ್ ಮೇಲೆ  ಹಲ್ಲೆ ಮಾಡಿ ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲ್ಯಾಕ್‌‌ಮೇಲ್; ರೌಡಿಶೀಟರ್ ಬಂಧನ, ಇನ್ನಿಬ್ಬರಿಗಾಗಿ ಶೋಧ

ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ; 10 ಲಕ್ಷ ರೂ.ಗೆ ಬ್ಲಾಕ್‌ಮೇಲ್

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಪ್ರಜ್ಞೆ ತಪ್ಪಿಸಿ, ವಿವಸ್ತ್ರಗೊಳಿಸಿ ಹಲ್ಲೆಗೈದು, ವಿಡಿಯೋ ಚಿತ್ರೀಕರಿಸಿಕೊಂಡು 10 ಲಕ್ಷ ರೂ.ಗೆ ಬ್ಲಾಕ್‌ಮೇಲ್‌ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಮೂಲದ ರೌಡಿಶೀಟರ್ ಅನುಷ್, ಶೋಭರಾಜ್ ಮತ್ತು ನವೀನ್ ಎಂಬುವರು ಈ ಕೃತ್ಯ ಎಸಗಿದ್ದಾರೆ.

ಮಕ್ಕಳಿಗೆ ಹೊಡೆದು ಪಾಠ ಕಲಿಸುವಂತಿಲ್ಲ; ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿ ವಿರುದ್ಧದ ವಿಚಾರಣೆಗೆ ತಡೆಗೆ ಹೈಕೋರ್ಟ್ ನಕಾರ!

ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿ ವಿರುದ್ಧದ ವಿಚಾರಣೆಗೆ ತಡೆಗೆ ಹೈಕೋರ್ಟ್ ನಕಾರ

Karnataka High Court: ಯುಕೆಜಿ ವಿದ್ಯಾರ್ಥಿನಿಗೆ ಬೆತ್ತದಿಂದ ಹೊಡೆದ ಪ್ರಕರಣವೊಂದರಲ್ಲಿ ಶಿಕ್ಷಕಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಅಲ್ಲದೆ, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ ಮೌಖಿಕವಾಗಿ ಹೇಳಿದೆ.

Loading...