ಛಲವಾದಿ ನಾರಾಯಣಸ್ವಾಮಿಯನ್ನು ನಾಯಿಗೆ ಹೋಲಿಸಿದ ಶಾಸಕ ಅಶೋಕ್ ರೈ
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿರುವ ಛಲವಾದಿ ಟಿ. ನಾರಾಯಣಸ್ವಾಮಿಯವರನ್ನು ನಿಂದಿಸಿದ್ದಾರೆ. ಛಲವಾದಿ ಸಮುದಾಯವನ್ನು ನಿಂದಿಸಿ, ಸಮುದಾಯಗಳ ನಡುವೆ ದ್ವೇಷ ಭಾವನೆ ಬರುವ ರೀತಿ ಮಾತನಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಬಿಜೆಪಿ ಎಸ್ಸಿ ಮೋರ್ಚಾ ಆಗ್ರಹಿಸಿದೆ.