ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಬಿರಿಯಾನಿ ತಿನ್ನಲು ಹೋಗ್ತಿದ್ದ ವಿದ್ಯಾರ್ಥಿಗೆ ಚಾಕು ಇರಿದು ಬೈಕ್‌ ಕಳ್ಳತನ!

ಬಿರಿಯಾನಿ ತಿನ್ನಲು ಹೋಗಿದ್ದ ವಿದ್ಯಾರ್ಥಿಗೆ ಚಾಕು ಇರಿದು ಬೈಕ್‌ ಕಳ್ಳತನ

ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿದು, ಬೈಕ್‌ ಕಸಿದುಕೊಂಡು ಪರಾರಿಯಾದ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಬಂಜಾರ ಲೇಔಟ್‌ನಲ್ಲಿ ನಡೆದಿದೆ. ಬಿಬಿಎ ಓದುತ್ತಾ ಫ್ಲಿಪ್​ ಕಾರ್ಟ್​​ನಲ್ಲಿ ಕೆಲಸ ಮಾಡುತ್ತಿದ್ದ ಧೀರಜ್ ಮೇಲೆ ಹಲ್ಲೆ ನಡೆದಿದೆ.

ಸ್ವಚ್ಛತೆಯಿಲ್ಲದಿದ್ದರೂ ಶುಲ್ಕವಂತೂ ಕೊಡಲೇಬೇಕು

ಸ್ವಚ್ಛತೆಯಿಲ್ಲದಿದ್ದರೂ ಶುಲ್ಕವಂತೂ ಕೊಡಲೇಬೇಕು

ನಗರದಲ್ಲಿರುವ ಅನೇಕ ಭಾಗದಲ್ಲಿ ಉಚಿತ ಸಾರ್ವಜನಿಕ ಶೌಚಾಲಯ ಎಂಬ ಬರಹವಿದ್ದರೂ, ಕೆಳಭಾಗ ದಲ್ಲಿ ಪೇ ಅಂಡ್ ಯೂಸ್, ನೀಟ್ ಅಂಡ್ ಕ್ಲೀನ್ ಎಂಬ ಸ್ಟಿಕರ್ ಅಂಟಿಸಿ ಮೂತ್ರ ವಿಸರ್ಜನೆಗೆ 5 ರು. ಹಾಗೂ ಮಲ ವಿಸರ್ಜನೆಗೆ 10 ರು. ಶುಲ್ಕ ವಿಧಿಸಲಾಗುತ್ತಿದೆ. ಇದರಿಂದ ಬಡವರು, ದಿನಗೂಲಿ ಕಾರ್ಮಿಕ ರು ಹಾಗೂ ಸಾಮಾನ್ಯ ಜನರು ಪ್ರತಿ ಸಲ ಶುಲ್ಕವನ್ನು ಕೊಟ್ಟು ಹೋಗಬೇಕಾದ ಪರಿಸ್ಥಿತಿ ಬಂದಿದೆ. ಅನೇಕ ಸಮಯದಲ್ಲಿ ಐದು ರುಪಾಯಿ ಕೊಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಹಲವರು ರಸ್ತೆಬದಿ ಯಲ್ಲಿಯೇ ಮಾಡುತ್ತಿದ್ದಾರೆ

ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ

ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ

ಬೆಂಗಳೂರು ಮತ್ತು ಮುಂಬೈ (Banglore- Mumbai) ನಡುವೆ ಹೊಸ ಎಕ್ಸ್‌ಪ್ರೆಸ್‌ ರೈಲು ಆರಂಭಗೊಂಡಿದ್ದು, ಇದಕ್ಕೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಮೇ 23 ರಿಂದ ರೈಲು ಸಂಖ್ಯೆ 16553 ಎಸ್ಎಂವಿಟಿ ಬೆಂಗಳೂರು – ಮುಂಬೈ ಲೋಕಮಾನ್ಯ ತಿಲಕ್ ಟರ್ಮಿನಸ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ಸಂಚಾರ ಆರಂಭಿಸಲಿದೆ.

ರಾಜ್ಯಾದ್ಯಂತ ವರುಣನ ಆರ್ಭಟ; ಭಾರೀ ಮಳೆಗೆ 2 ಸಾವು, ಅಪಾರ ಹಾನಿ

ರಾಜ್ಯಾದ್ಯಂತ ವರುಣನ ಆರ್ಭಟ

Rain Alert: ಭಾನುವಾರ ರಾಜ್ಯದಲ್ಲಿ ವರುಣ ಆರ್ಭಟಿಸಿದ್ದಾನೆ. ಮಳೆಯಿಂದಾಗಿ ಹಲವು ಕಡೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Kollur Accident: ಕೊಲ್ಲೂರು ಬಳಿ ಮೀನು ಸಾಗಣೆ ವಾಹನ-ಜೀಪ್ ಡಿಕ್ಕಿ; ಕೇರಳ ಮೂಲದ ಇಬ್ಬರು ಪ್ರವಾಸಿಗರ ಸಾವು

ಕೊಲ್ಲೂರು ಬಳಿ ಭೀಕರ ಅಪಘಾತ; ಕೇರಳ ಮೂಲದ ಇಬ್ಬರ ಸಾವು

Udupi News: ಉಡುಪಿ ಜಿಲ್ಲೆ ಕೊಲ್ಲೂರಿನ ಕೊಡಚಾದ್ರಿಯ ದಳಿ ಎಂಬಲ್ಲಿ ಭೀಕರ ಅಪಘಾತ ನಡೆದಿದೆ. ಮೀನು ಸಾಗಾಟದ ವಾಹನ ಹಾಗೂ ಜೀಪ್ ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಎಷ್ಟು ತೆರಿಗೆ ಹೇರಿಕೆ ಮಾಡಿದ್ದೀರಿ?; ರಾಜ್ಯ ಸರ್ಕಾರದ ವಿರುದ್ಧ ಎಚ್‍.ಡಿ. ಕುಮಾರಸ್ವಾಮಿ ಕಿಡಿ

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಎಷ್ಟು ತೆರಿಗೆ ಹೇರಿಕೆ ಮಾಡಿದ್ದೀರಿ?

ಕಳೆದ ಮೂರು ವರ್ಷಗಳಲ್ಲಿ ಮದ್ಯ, ಬಸ್‌, ವಿದ್ಯುತ್ ಸೇರಿ ಅನೇಕ ಬಾಬತ್ತುಗಳ ಮೇಲೆ ನಿರಂತರವಾಗಿ ತೆರಿಗೆವಿಧಿಸಿ ಬೆಲೆ ಏರಿಕೆ ಮಾಡಲಾಗಿದೆ. ಒಂದೆಡೆ ಗ್ಯಾರಂಟಿಗಳನ್ನು ಕೊಡುತ್ತೇವೆ ಎಂದು ಜನರ ಮೂಗಿಗೆ ತುಪ್ಪ ಸವದುತ್ತಿರುವ ಸರ್ಕಾರವು ಮತ್ತೊಮ್ಮೆ ಅದಕ್ಕೂ ಮೀರಿ ಬೆಲೆ ಏರಿಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Gubbi News: ಪ್ರಸ್ತುತ ದಿನಮಾನದಲ್ಲಿ ದೈಹಿಕ ಆರೋಗ್ಯ ಮುಖ್ಯ: ಜಿ.ಪ್ರಸನ್ನಕುಮಾರ್

ಪ್ರಸ್ತುತ ದಿನಮಾನದಲ್ಲಿ ದೈಹಿಕ ಆರೋಗ್ಯ ಮುಖ್ಯ: ಜಿ.ಪ್ರಸನ್ನಕುಮಾರ್

ಕ್ರೀಡಾ ಜಗತ್ತಿನಲ್ಲಿ ಬೆಳೆದ ಸಾವಿರಾರು ಮಂದಿ ಬದುಕು ಕಂಡುಕೊಂಡಿದ್ದಾರೆ. ನಗರ ಪ್ರದೇಶದಲ್ಲಿ ಮಕ್ಕಳನ್ನು ಕೈಹಿಡಿದು ನಡೆಸುವ ದೃಶ್ಯ ನೋಡುತ್ತೇವೆ. ಶಾಲೆ ಅಷ್ಟೇ ನೋಡುವ ಮಕ್ಕಳು ಇನ್ನಿತರ ಚಟುವಟಿಕೆ ಬಗ್ಗೆ ತೊಡಗದೆ ಚಿಕ್ಕ ವಯಸ್ಸಿನಲ್ಲೇ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಈ ನಿಟ್ಟಿನಲ್ಲಿ ಮಕ್ಕಳನ್ನು ಆಟದಲ್ಲಿ ತೊಡಗಿಸಬೇಕು. ಮೈದಾನದಲ್ಲಿ ಬೆವರು ಹರಿಸಿ ಆಟ ಆಡಿದ್ದಲ್ಲಿ ದೈಹಿಕ ಆರೋಗ್ಯ ಪ್ರಾಪ್ತಿಯಾಗುತ್ತದೆ. ನಂತರ ಮಾನಸಿಕ ಆರೋಗ್ಯ ಕೂಡ ಉತ್ತಮಗೊಳ್ಳುತ್ತದೆ

Self Harming: ಮಕ್ಕಳ ಕೊರಗು: ಗೃಹಿಣಿ ಆತ್ಮಹತ್ಯೆ

Self Harming: ಮಕ್ಕಳ ಕೊರಗು: ಗೃಹಿಣಿ ಆತ್ಮಹತ್ಯೆ

ಮದುವೆಯಾಗಿ 4 ವರ್ಷಗಳಾದರೂ ದಂಪತಿಗಳಿಗೆ ಮಕ್ಕಳಾಗಿರಲಿಲ್ಲ. ಗಂಡ-ಹೆಂಡತಿ ನಡುವೆ ಈ ವಿಷಯ ಮತ್ತು ಬೇರೆ ಮನೆ ಮಾಡುವ ವಿಚಾರದಲ್ಲಿ ವೈಮನಸ್ಸು ಮೂಡಿದ್ದು, ತಾಲ್ಲೂಕಿನ ಮಂಚನ ಬಲೆಯ ಅಜ್ಜಿಯ ಮನೆಗೆ ಬಂದಿದ್ದಳು. ಈ ವೇಳೆ ಮನ ನೊಂದು ರುಚಿತಾ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಯುವತಿ ನಿಗೂಢ ನಾಪತ್ತೆ; ಅಪಹರಣದ ಶಂಕೆ, ಇಬ್ಬರ ಮೇಲೆ ಅನುಮಾನ

ಯುವತಿ ನಿಗೂಢ ನಾಪತ್ತೆ; ಅಪಹರಣದ ಶಂಕೆ, ಇಬ್ಬರ ಮೇಲೆ ಅನುಮಾನ

ಮಗಳ ನಾಪತ್ತೆಯ ಹಿಂದೆ ಫಾಜಿಲ್ ಮತ್ತು ಜಾರಾ ಎಂಬುವವರ ಕೈವಾಡ ಇರಬಹುದು ಎಂದು ಪೋಷಕರು ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರ ಮೊಬೈಲ್ ಸಂಖ್ಯೆ ಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಗಳನ್ನು ಹುಡುಕುವಲ್ಲಿ ನಿರತರಾಗಿದ್ದರಿಂದ ಪೊಲೀಸ್ ಠಾಣೆಗೆ ದೂರು ನೀಡಲು ತಡವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

ಚಿಂತಾಮಣಿಯಲ್ಲಿ ನಕಲಿ 'ಫಿನೋಲೆಕ್ಸ್' ಕೇಬಲ್ ಜಾಲ ಪತ್ತೆ: ಪ್ರಖ್ಯಾತ ಕಂಪನಿ ಮ್ಯಾನೇಜರ್‌ನಿಂದಲೇ ದೂರು, ಪೊಲೀಸ್ ದಾಳಿ

ಚಿಂತಾಮಣಿಯಲ್ಲಿ ನಕಲಿ'ಫಿನೋಲೆಕ್ಸ್'ಕೇಬಲ್ ಜಾಲ ಪತ್ತೆ

ಚಿಂತಾಮಣಿ ನಗರದಲ್ಲಿ ನಡೆಸಿದ ಮಾರುಕಟ್ಟೆ ಸಮೀಕ್ಷೆಯ ವೇಳೆ,ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪವಿರುವ 'ಭರತ್ ಇಂಜಿನಿಯರಿಂಗ್ ವರ್ಕ್ಸ್ ಎಂಬ ಮಳಿಗೆಯಲ್ಲಿ ಫಿನೋಲೆಕ್ಸ್ ಬ್ರ‍್ಯಾಂಡ್ ಹೆಸರಿನ ನಕಲಿ ಸಬ್‌ಮರ್ಸಿಬಲ್ ಎಲೆಕ್ಟ್ರಿಕಲ್ ಕೇಬಲ್‌ಗಳನ್ನು ಉದ್ದೇಶಪೂರ್ವಕವಾಗಿ ಮಾರಾಟ ಮತ್ತು ವಿತರಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

Shidlaghatta News: ಜನರ ವಿಶ್ವಾಸವೇ ನನ್ನ ರಾಜಕೀಯ ಶಕ್ತಿ: ಪುಟ್ಟು ಆಂಜಿನಪ್ಪ

ಜನರ ವಿಶ್ವಾಸವೇ ನನ್ನ ರಾಜಕೀಯ ಶಕ್ತಿ: ಪುಟ್ಟು ಆಂಜಿನಪ್ಪ

ಶಿಡ್ಲಘಟ್ಟ ಕ್ಷೇತ್ರವನ್ನು ನಾಲ್ಕು ದಶಕಗಳ ಕಾಲ ಪ್ರತಿನಿಧಿಸಿ ಸಚಿವರಾಗಿ ಹಾಗೂ ಶಾಸಕರಾಗಿ ಜನಸೇವೆ ಸಲ್ಲಿಸಿರುವ ವಿ. ಮುನಿಯಪ್ಪ ಅವರ ಸೇವೆಯನ್ನು ಸ್ಮರಿಸಿದರು. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನರ ನಡುವೆ ಬರಲಿ. ಅವರ ಅನುಭವ ಹಾಗೂ ಮಾರ್ಗದರ್ಶನ ಪಕ್ಷಕ್ಕೂ ಕ್ಷೇತ್ರದ ಅಭಿವೃದ್ಧಿಗೂ ಅಗತ್ಯವಾಗಿದೆ

ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ಹುರುಳಿಕಾಯಿ ಮತ್ತು ಸೌತೆಕಾಯಿಗೆ ದೊರೆತ ಉತ್ತಮ ಬೆಲೆ

ರೈತರ ಮೊಗದಲ್ಲಿ ಮಂದಹಾಸ: ಹುರುಳಿಕಾಯಿ, ಸೌತೆಕಾಯಿಗೆ ದೊರೆತ ಉತ್ತಮ ಬೆಲೆ

ಚಿಕ್ಕಬಳ್ಳಾಪುರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಕಳೆದ ಎರಡು ವಾರದಿಂದ 10 ಕೆ.ಜಿ ಬೀನ್ಸ್ ಒಂದು ಸಾವಿರದಿಂದ 1300 ರೂಗೆ ಜಿಗಿದಿದೆ ಮತ್ತು ಸೌತೆಕಾಯಿ ಸಹ ಒಂದು ಮೂಟೆ 600 ರಿಂದ 800 ರೂ ವರೆಗೆ ಖರೀದಿ ಆಗಿರುವುದು ರೈತರಿಗೆ ಸ್ವಲ್ಪ ಸಂತೋಷವಾಗಿದೆ.ಇನ್ನೂ ಅನೇಕ ತರಕಾರಿಗಳಿಗೆ ರೇಟ್ ನುಗ್ಗೆಕಾಯಿ ಕೆ.ಜಿಗೆ 60, ಕ್ಯಾರೆಟ್ 40, ಟೊಮೆಟೋ 50 ರೂ ಹೀಗೆ ಸ್ವಲ್ಪ ಮಟ್ಟಿಗೆ ಎಲ್ಲಾ ತರಕಾರಿ ಗಳ ಬೆಲೆ ಏರುಗತಿಯಲ್ಲಿರುವುದು ರೈತರಿಗೆ ಖುಷಿ ತಂದಿದೆ.

ಪೌರಾಯುಕ್ತರ ವಿರುದ್ಧ ಮಾಜಿ ನಗರಸಭಾ ಸದಸ್ಯ ಮೊಹಮ್ಮದ್ ಶಫೀಕ್ ಆಕ್ರೋಶ: ಸತ್ಯಾಂಶ ಮರೆಮಾಚಬೇಡಿ

ಪೌರಾಯುಕ್ತರ ವಿರುದ್ಧ ಮಾಜಿ ನಗರಸಭಾ ಸದಸ್ಯ ಮೊಹಮ್ಮದ್ ಶಫೀಕ್ ಆಕ್ರೋಶ

ಚಿಂತಾಮಣಿ ನಗರದ ಅವರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಅಧಿಕಾರಿ ಗಳು ಸತ್ಯಾಂಶ ಮರೆ ಮಾಚದೆ ಸಾರ್ವಜನಿಕರ ಮುಂದೆ ವಾಸ್ತವಾಂಶ ಇಡಬೇಕು ಎಂದು ಆಗ್ರಹಿಸಿದರು. ನಗರದಲ್ಲಿ ನಡೆದಿರುವ ಹಲವು ಪ್ರಮುಖ ಘಟನೆಗಳನ್ನು ಉಲ್ಲೇಖಿಸಿದ ಅವರು ಅಧಿಕಾರಿಗಳ ಕಾರ್ಯವೈಖರಿಯನ್ನು ಪ್ರಶ್ನಿಸಿದರು.

Scholarship Distribution: ಬಿಲ್ಲವಾಸ್ ಕತಾರ್‌ನಿಂದ 100 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ವಿತರಣೆ

ಬಿಲ್ಲವಾಸ್ ಕತಾರ್‌ನಿಂದ 100 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ವಿತರಣೆ

Billawas Qatar: ಬಿಲ್ಲವಾಸ್ ಕತಾರ್ ವತಿಯಿಂದ ಮಂಗಳೂರಿನ ಕುದ್ರೋಳಿಯ ಶ್ರೀ ವಿಶ್ವನಾಥ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಹ 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಗಣ್ಯರು, ಸಮುದಾಯದ ಮುಖಂಡರು, ಪೋಷಕರು ಮತ್ತು ವಿದ್ಯಾರ್ಥಿಗಳ ಸ್ಫೂರ್ತಿದಾಯಕ ಸಹಭಾಗಿತ್ವದೊಂದಿಗೆ ಸಭೆಯು ಎಲ್ಲರ ಗಮನ ಸೆಳೆಯಿತು.

Viprotsava 2026: ಮಂಡ್ಯದಲ್ಲಿ ಅದ್ಧೂರಿಯಾಗಿ ನೆರವೇರಿದ ವಿಪ್ರೋತ್ಸವ-2026

ಮಂಡ್ಯದಲ್ಲಿ ಅದ್ಧೂರಿಯಾಗಿ ನೆರವೇರಿದ ವಿಪ್ರೋತ್ಸವ-2026

ಮಂಡ್ಯ ಜಿಲ್ಲಾ ಗಾಯತ್ರಿ ಸಭಾ ಭವನದಲ್ಲಿ “ವಿಪ್ರೋತ್ಸವ-2026” ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ನಡೆದ ಸಾಂಸ್ಕೃತಿಕ ಭರತನಾಟ್ಯ, ಭಜನೆ ಹಾಗೂ ಹಾಸ್ಯ ಕಾರ್ಯಕ್ರಮಗಳು ಸಭಿಕರ ಮನಗೆದ್ದವು. ಕಲಾವಿದರು ತಮ್ಮ ಅದ್ಭುತ ಪ್ರದರ್ಶನಗಳ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಲಕ್ಷಗಟ್ಟಲೆ ಆದಾಯ ತರುವ ಕಾರ್ಪೊರೇಟ್ ಉದ್ಯೋಗ ತ್ಯಜಿಸಿ ನೂರಾರು ಬೀದಿನಾಯಿಗಳಿಗೆ ಆಶ್ರಯದಾತನಾದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ನೂರಾರು ಬೀದಿ ನಾಯಿಗಳಿಗೆ ಆಸರೆಯಾದ ಬೆಂಗಳೂರಿನ ಎಂಜಿನಿಯರ್

Viral News: ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಬೆಂಗಳೂರಿನ ಯುವಕ ಈಗ ನೂರಾರು ಬೀದಿ ನಾಯಿಗಳಿಗೆ ಆಶ್ರಯದಾತರಾಗಿದ್ದಾರೆ. ಇದೀಗ ಅವರ ವೃತ್ತಿ ತೊರೆದು ದೊಡ್ಡಬಳ್ಳಾಪುರದ ತೋಟದಲ್ಲಿ ನೂರಾರು ನಾಯಿಗಳ ಜತೆ ವಾಸಿಸುತ್ತಿದ್ದಾರೆ. ಇಲ್ಲಿರುವ ಫಾರ್ಮ್ ಹೌಸ್‌ ಅನ್ನು ನಾಯಿಗಳ ಅನುಕೂಲಕಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಅವು ಮುಕ್ತವಾಗಿ ಓಡಬಹುದಾದ ದೊಡ್ಡ ತೆರೆದ ಮೈದಾನಗಳು, ಈಜಲು ಕೊಳಗಳಿವೆ. ಅಲ್ಲದೆ ಬೀದಿ ನಾಯಿಗಳ ಸುರಕ್ಷತೆಗಾಗಿ ಬೇಲಿಗಳನ್ನು ಅಳವಡಿಸಲಾಗಿದೆ.

ವಿವಿಧ ಮಹಾನಗರ ಪಾಲಿಕೆಗಳಲ್ಲಿ ಅನ್ಯ ಇಲಾಖೆ ಅಧಿಕಾರಿಗಳು ಮಾತೃ ಇಲಾಖೆಗೆ ವಾಪಸ್: ಲೋಕೋಪಯೋಗಿ ಇಲಾಖೆಯಲ್ಲೂ ಜಾರಿಗೆ ಆಗ್ರಹ

ಪಾಲಿಕೆಗಳಲ್ಲಿ ಅನ್ಯ ಇಲಾಖೆ ಅಧಿಕಾರಿಗಳು ಮಾತೃ ಇಲಾಖೆಗೆ ವಾಪಸ್

ಲೋಕೋಪಯೋಗಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಅನ್ಯ ಇಲಾಖೆಗಳ ಅಧಿಕಾರಿಗಳು ನಿಯೋ ಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವುದರಿಂದ ಇಲಾಖೆಯ ಮೂಲ ಸಿಬ್ಬಂದಿಗೆ ಪದೋನ್ನತಿ, ವರ್ಗಾವಣೆ ಹಾಗೂ ಆಡಳಿತಾತ್ಮಕ ಅವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ಅಸಮಾಧಾನ ವ್ಯಾಪಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಾಲೆಯಲ್ಲಿ ಹಾಜರಾತಿ ವೇಳೆ ‘yes sir’ ಬದಲು ʼಜೈ ಶ್ರೀರಾಮ್ʼ ಅಂತ ಹೇಳಿ: ವಿದ್ಯಾರ್ಥಿಗಳಿಗೆ ಶಾಸಕ ಯತ್ನಾಳ್ ಕರೆ

ಹಾಜರಾತಿ ವೇಳೆ ‘yes sir’ ಬದಲು ʼಜೈ ಶ್ರೀರಾಮ್ʼ ಅಂತ ಹೇಳಿ: ಯತ್ನಾಳ್

ಜೂನ್‌ನಲ್ಲಿ ಶಾಲೆಗಳು ಆರಂಭವಾದ ಬಳಿಕ ಪ್ರತಿಯೊಬ್ಬರಿಗೂ ಕೇಸರಿ ಶಾಲು ವಿತರಣೆ ಮಾಡುತ್ತೇನೆ. ಕೇಸರಿ ಶಾಲು ಧರಿಸುವುದಕ್ಕೆ ನಿಷೇಧ ಹೇರಲು ಕಾಂಗ್ರೆಸ್‌ನವರಿಗೆ ಅಧಿಕಾರ ಕೊಟ್ಟವರು ಯಾರು? ಕೇಸರಿ ಶಾಲು ಹಾಕಲು ನಮಗೆ ಹಕ್ಕಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯತ್ನಾಳ್‌ ಕಿಡಿಕಾರಿದ್ದಾರೆ.

ಆರ್ಟ್‌ ಆಫ್‌ ಗಿವಿಂಗ್‌: ಶೇರ್‌ ಟು ಶೈನ್‌ ಈ ಬಾರಿಯ ಘೋಷವಾಕ್ಯ, ಸಾಧಕರಿಗೆ ಸನ್ಮಾನ, ಹಲವು ಕಾರ್ಯಕ್ರಮ

ಆರ್ಟ್‌ ಆಫ್‌ ಗಿವಿಂಗ್‌: ಶೇರ್‌ ಟು ಶೈನ್‌ ಈ ಬಾರಿಯ ಘೋಷವಾಕ್ಯ

ಒಡಿಶಾ ಭುವನೇಶ್ವರದ ಕಳಿಂಗಾ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಸ್ಡ್ರೀಯಲ್‌ ಟೆಕ್ನಾಲಜಿ, ಕಳಿಂಗಾ ಇನ್ಸ್‌ಟಿಟ್ಯೂಟ್‌ ಆಫ್‌ ಸೋಶಿಯಲ್‌ ಸೈನ್ಸ್ ಸ್‌ ನ ಸಂಸ್ಥಾಪಕರು ಹಾಗೂ ಸಂಸತ್ತಿನ ಮಾಜಿ ಸದಸ್ಯರಾದ ಡಾ.ಅಚ್ಯುತ ಸಮಂತಾ ಅವರು ಆರಂಭಿಸಿದ ಆರ್ಟ್‌ ಆಫ್‌ ಗಿವಿಂಗ್‌ನ ವಾರ್ಷಿಕೋ ತ್ಸವ ಕಳೆದ 13 ವರ್ಷಗಳಿಂದ ನಗರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

Bangalore News: ವಿದ್ಯಾರ್ಥಿಗಳನ್ನು ಸಾಮರ ಇಂಟರ್ ಇಸ್ಲಾಮಿಕ್ ನ್ಯಾಷನಲ್ ಶಾಲೆಗೆ ಸೇರ್ಪಡೆ ಮಾಡದಂತೆ ಶಾಲೆ ಮುಂಭಾಗ ನೋಟೀಸ್ ಅಂಟಿಸಿದ ಶಾಲಾ ಶಿಕ್ಷಣ ಇಲಾಖೆ

ವಿದ್ಯಾರ್ಥಿಗಳನ್ನು ಶಾಲೆಗೆ ಸೇರ್ಪಡೆ ಮಾಡದಂತೆ ಶಾಲೆ ಮುಂಭಾಗ ನೋಟೀಸ್

ಸಾಮರ್ ಇಂಟರ್ನ್ಯಾಷನಲ್ ಇಸ್ಲಾಮಿಕ್ ಶಾಲೆಯ 1 ರಿಂದ 10ನೆಯ ತರಗತಿಗಳ ಮಾನ್ಯತೆಯನ್ನು ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಸೆಕ್ಷನ್-39 ರಂತೆ ಹಿಂಪಡೆದು ಸೆಕ್ಷನ್-34 ರಂತೆ ನೋಂದಣಿಯನ್ನು ರದ್ದುಪಡಿಸಿದೆ. ಈ ಕಾರಣದಿಂದ ಸದರಿ ಶಾಲೆಯನ್ನು ಇಲಾಖೆಯು ಮುಚ್ಚಿಸಿದ್ದು ಮಕ್ಕಳನ್ನು 2026-27ರ ಸಾಲಿಗೆ ದಾಖಲು ಮಾಡಬಾರದು ಎಂದು ಸ್ಪಷ್ಟವಾಗಿ ಹೇಳಿದೆ.

Liquor price hike: ರಾಜ್ಯದಲ್ಲಿ ನೂತನ ಅಬಕಾರಿ ಸುಂಕ ನೀತಿ ಜಾರಿ; ಕೆಲ ಬ್ರ್ಯಾಂಡ್‌ಗಳ ಮದ್ಯದ ದರ ಭಾರಿ ಹೆಚ್ಚಳ!

ನೂತನ ಅಬಕಾರಿ ಸುಂಕ ನೀತಿ ಜಾರಿ; ಮದ್ಯದ ದರ ಭಾರಿ ಏರಿಕೆ

ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ AIB ಆಧಾರಿತ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಪರಿಷ್ಕೃತ ದರಗಳಲ್ಲಿ ಜನಪ್ರಿಯ ಇಂಡಿಯನ್ ಮೇಡ್ ಲಿಕರ್ ಬ್ರ್ಯಾಂಡ್‌ಗಳು ಮತ್ತು ಬಿಯರ್ ಬ್ರ್ಯಾಂಡ್‌ಗಳ ದರಗಳನ್ನು ಒಳಗೊಂಡಿದ್ದು, ಅವುಗಳ ಪ್ಯಾಕ್ ಗಾತ್ರ, ಮದ್ಯಾಂಶದ ಪ್ರಮಾಣ ಮತ್ತು ಸ್ಲ್ಯಾಬ್ ವ್ಯವಸ್ಥೆಯ ಆಧಾರದ ಮೇಲೆ ದರಗಳು ಬದಲಾಗಲಿವೆ.

Kodagu News: ಕೊಡಗಿನ ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ; ಉದ್ಘಾಟನೆಗೆ ತಮಿಳುನಾಡಿನಿಂದ ಬಂದಿದ್ದ 40ಕ್ಕೂ ಹೆಚ್ಚು ಮಂದಿ ವಶಕ್ಕೆ

ಕೊಡಗಿನ ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ; 40 ಮಂದಿ ವಶಕ್ಕೆ

ಕೊಡಗು ಜಿಲ್ಲೆಯ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನರಿಂದ ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಉದ್ಘಾಟನೆ ಕಾರ್ಯಕ್ರಮಕ್ಕೆ ತಮಿಳುನಾಡಿನಿಂದ ಜನರನ್ನು ಕರೆಸಲಾಗಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ, 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಬಕ್ರೀದ್ ಹಬ್ಬದ ಹಿನ್ನೆಲೆ ಅನಧಿಕೃತ ಕುರಿ ಮತ್ತು ಮೇಕೆ ಮಾರುಕಟ್ಟೆ ಶೆಡ್ ತೆರವು

ಬಕ್ರೀದ್ ಹಬ್ಬದ ಹಿನ್ನೆಲೆ ಅನಧಿಕೃತ ಕುರಿ, ಮೇಕೆ ಮಾರುಕಟ್ಟೆ ಶೆಡ್ ತೆರವು

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರ ಪಾಲಿಕೆಯ ವಿವಿಧ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಕುರಿ ಮತ್ತು ಮೇಕೆ ಮಾರುಕಟ್ಟೆ ಶೆಡ್ ಗಳ ವಿರುದ್ಧ ಬೆಂಗಳೂರು ಉತ್ತರ ನಗರ ಪಾಲಿಕೆ ವತಿಯಿಂದ ಇಂದು ಜಂಟಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Gudibande News: ಶ್ರೀ ಗಂಗಾ ಭಗೀರಥ ತಾಯಿ ಪುರ್ನಪ್ರತಿಷ್ಟಾಪನಾ ಮಹೋತ್ಸವ ವೈಭವ; ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ವಿಶೇಷ ಪೂಜೆ

ಶ್ರೀ ಗಂಗಾ ಭಗೀರಥ ತಾಯಿ ಪುರ್ನಪ್ರತಿಷ್ಟಾಪನಾ ಮಹೋತ್ಸವ ವೈಭವ

ದೇವಸ್ಥಾನದ ಆವರಣದಲ್ಲಿ ಮೂರು ದಿನಗಳ ಕಾಲ ವಿವಿಧ ವೈದಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿತ್ತು. ವೇದಮೂರ್ತಿಗಳ ನೇತೃತ್ವದಲ್ಲಿ ಗಣಪತಿ ಪೂಜೆ, ಗಂಗೆ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ ಹಾಗೂ ವಾಸ್ತು ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳನ್ನು ವೇದಮಂತ್ರಗಳ ಘೋಷದೊಂದಿಗೆ ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.

Loading...