ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

IPL 2026

2028 ರಿಂದ ಮಾರ್ಚ್‌ ಮೊದಲ ವಾರದಿಂದಲೇ ಐಪಿಎಲ್‌ ಟೂರ್ನಿ ಆರಂಭ, ದ್ವಿಪಕ್ಷೀಯ ಸರಣಿಗಳಿಗೆ ಕತ್ತರಿ?

2028ರಿಂದ ಮಾರ್ಚ್‌ ಮೊದಲ ವಾರದಿಂದಲೇ ಐಪಿಎಲ್‌ ಆರಂಭ?

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪಂದ್ಯಗಳ ಸಂಖ್ಯೆಯನ್ನು 74 ರಿಂದ 94ಕ್ಕೆ ಏರಿಸಬೇಕೆಂಬ ಪ್ರಕ್ರಿಯೆಯ ಬಗ್ಗೆ ಸದ್ಯ ಬಿಸಿಸಿಐನಲ್ಲಿ ಸದ್ಯ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಬಿಸಿಸಿಐ ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿವೆ. ಇದರ ಪ್ರಕಾರ, 2028ರ ಐಪಿಎಲ್‌ ಟೂರ್ನಿಯನ್ನು ಮಾರ್ಚ್‌ ಮೊದಲ ವಾರದಲ್ಲಿಯೇ ಆರಂಭಿಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ.

ಭುಜದ ಶಸ್ತ್ರ ಚಿಕಿತ್ಸೆಯ ಯಶಸ್ಸಿನ ಬಳಿಕ ಫ್ಯಾನ್ಸ್‌ಗೆ ಸಂದೇಶ ರವಾನಿಸಿದ ರಿಯಾನ್‌ ಪರಾಗ್‌!

ಭುಜದ ಶಸ್ತ್ರ ಚಿಕಿತ್ಸೆಗೆ ಒಳಗಾದ ರಿಯಾನ್‌ ಪರಾಗ್‌!

ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕ ರಿಯಾನ್‌ ಪರಾಗ್‌ ಅವರ ಭುಜದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಮುಗಿಸಿದೆ. ಈ ವಿಷಯವನ್ನು ಆರ್‌ಆರ್‌ ನಾಯಕ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಹಾಕುವ ಮೂಲಕ ಹಂಚಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ದೇಶಿ ಆವೃತ್ತಿಯ ಆರಂಭಿಕ ಕೆಲ ಪಂದ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಭಾರತ ಟಿ20  ತಂಡದಲ್ಲಿ ಭುವನೇಶ್ವರ್‌ ಕುಮಾರ್‌ಗೆ ಚಾನ್ಸ್‌ ನೀಡದ ಬಗ್ಗೆ ಆಕಾಶ್‌ ಚೋಪ್ರಾ ಪ್ರತಿಕ್ರಿಯೆ!

ಭಾರತ ತಂಡದಲ್ಲಿ ಭುವನೇಶ್ವರ್‌ಗೆ ಸ್ಥಾನ ನೀಡದ ಬಗ್ಗೆ ಚೋಪ್ರಾ ಪ್ರತಿಕ್ರಿಯೆ!

ಭಾರತದ ಮಾಜಿ ಆರಂಭಿಕ ಬ್ಯಾಟರ್ ಹಾಗೂ ಕ್ರಿಕೆಟ್ ವಿಶ್ಲೇಷಕ ಆಕಾಶ ಚೋಪ್ರಾ, ಭುವನೇಶ್ವರ್‌ ಕುಮಾರ್‌ ಅವರ ಟಿ20ಐ ತಂಡದಲ್ಲಿನ ಅನುಪಸ್ಥಿತಿಗೆ ಪ್ರತಿಕ್ರಿಯೆ ನೀಡಿದ್ದು, ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ ಬಹುತೇಕ ಅಂತ್ಯಗೊಂಡಂತೆಯೇ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆರ್‌ಸಿಬಿ ಪರ ಭುವನೇಶ್ವರ್‌ ಕುಮಾರ್‌ ಅವರು ಉತ್ತಮ ಬೌಲಿಂಗ್‌ ಪ್ರದರ್ಶನವನ್ನು ತೋರುವ ಮೂಲಕ ಎರಡನೇ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ ಎನಿಸಿಕೊಂಡಿದ್ದರು.

ಟಿ20 ಕ್ರಿಕೆಟ್‌ ಅನ್ನು ಸ್ಪರ್ಧಾತ್ಮಕವಾಗಿರಿಸಲು ಮೂರು ನಿಯಮಗಳ ಸಲಹೆ ನೀಡಿದ ಗ್ರೇಗ್‌ ಚಾಪೆಲ್‌!

ಟಿ20 ಕ್ರಿಕೆಟ್‌ಗೆ 3 ನಿಯಮಗಳ ಸಲಹೆ ನೀಡಿದ ಗ್ರೇಗ್‌ ಚಾಪೆಲ್‌!

ಪ್ರಸ್ತುತ ಟಿ20 ಕ್ರಿಕೆಟ್ ನಿರ್ಣಾಯಕ ಹಂತದತ್ತ ಸಾಗುತ್ತಿದೆ ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಗ್ರೇಗ್‌ ಚಾಪೆಲ್‌ ಎಚ್ಚರಿಕೆ ನೀಡಿದ್ದಾರೆ. ಟಿ20 ಸ್ವರೂಪದ ಆಟ ಇದೀಗ ಅತಿಯಾಗಿ ಬ್ಯಾಟರ್‌ಗಳ ಪರ ವಾಲಿರುವುದರಿಂದ ಬ್ಯಾಟ್ ಮತ್ತು ಬಾಲ್ ನಡುವಿನ ಸಮತೋಲನ ಹದಗೆಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಟಿ20 ಕ್ರಿಕೆಟ್‌ನಲ್ಲಿ ಮೂರು ಬದಲಾವಣೆಯನ್ನು ಅವರು ಸೂಚಿಸಿದ್ದಾರೆ.

ಶುಭಮನ್‌ ಗಿಲ್‌, ಕೆಎಲ್‌ ರಾಹುಲ್‌ ಅಲ್ಲವೇ ಅಲ್ಲ! ಭಾರತದ ಬೆಸ್ಟ್‌ ಟೆಸ್ಟ್‌ ಬ್ಯಾಟ್ಸ್‌ಮನ್‌ ಹೆಸರಿಸಿದ ಆರ್‌ ಅಶ್ವಿನ್‌

ಭಾರತದ ಬೆಸ್ಟ್‌ ಟೆಸ್ಟ್‌ ಬ್ಯಾಟರ್‌ ಆರಿಸಿದ ಆರ್‌ ಅಶ್ವಿನ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಹೊರತಾಗಿಯೂ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟಸ್ಟ್‌ ಪಂದ್ಯದಲ್ಲಿ ರಿಷಭ್‌ ಪಂತ್‌ 81 ರನ್‌ ಗಳಿಸಿದರು. ಆ ಮೂಲಕ ತಮ್ಮ ರೆಡ್‌ ಬಾಲ್‌ ಕ್ರಿಕೆಟ್‌ನಲ್ಲಿ ತಮ್ಮ ಫಾರ್ಮ್‌ ಅನ್ನು ಮುಂದುವರಿಸಿದ್ದಾರೆ. ಹಾಗಾಗಿ ಸ್ಪಿನ್‌ ದಿಗ್ಗಜ ರವಿಚಂದ್ರನ್‌ ಅಶ್ವಿನ್‌ ಗುಣಗಾನ ಮಾಡಿದ್ದಾರೆ.

ʻಆರ್‌ಸಿಬಿಗೆ ಸೇರ್ಪಡೆಯಾಗಲು ನನಗೆ ಇಷ್ಟವಿರಲಿಲ್ಲʼ:‌ ಹಳೆಯ ದಿನಗಳನ್ನು ಮೆಲುಕು ಹಾಕಿದ ರಜತ್‌ ಪಾಟಿದಾರ್!

ನಿಜವಾಗಲೂ ಆರ್‌ಸಿಬಿಗೆ ಸೇರಲು ಇಷ್ಟವಿರಲಿಲ್ಲ: ರಜತ್‌ ಪಾಟಿದಾರ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಸತತ ಎರಡನೇ ಪ್ರಶಸ್ತಿ ಗೆದ್ದುಕೊಟ್ಟು 10 ದಿನಗಳ ಬಳಿಕ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಅಚ್ಚರಿ ಹೇಳಿಕೆ ನೀಡಿದ್ದಾರೆ. ಅವರು 2022ರ ಐಪಿಎಲ್‌ ಟೂರ್ನಿಯಲ್ಲಿ ಆರ್‌ಸಿಬಿಗೆ ಸೇರಲು ಇಷ್ಟವಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ.

ವೈಭವ್‌ ಸೂರ್ಯವಂಶಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಕ್ಸಸ್‌ ಆಗುವುದು ಅನುಮಾನ ಎಂದ ಎಬಿ ಡಿ ವಿಲಿಯರ್ಸ್‌!

ವೈಭವ್‌ ಸೂರ್ಯವಂಶಿ ಟೆಸ್ಟ್‌ನಲ್ಲಿ ಸಕ್ಸಸ್‌ ಆಗುವುದು ಅನುಮಾನ: ಎಬಿಡಿ!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಮಿಂಚಿನ ಬ್ಯಾಟಿಂಗ್‌ ಮೂಲಕ 776 ರನ್‌ಗಳನ್ನು ಸಿಡಿಸಿ ಆರೆಂಜ್‌ ಕ್ಯಾಪ್‌ ಮುಡಿಗೇರಿಸಿಕೊಂಡಿದ್ದ ರಾಜಸ್ಥಾನ್‌ ರಾಯಲ್ಸ್‌ ತಂಡದ ಆರಂಭಿಕ ವೈಭವ್‌ ಸೂರ್ಯವಂಶಿ ಅವರ ಬಗ್ಗೆ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್‌ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ 15ನೇ ವಯಸ್ಸಿನ ಆಟಗಾರ ಟೆಸ್ಟ್‌ ಭವಿಷ್ಯದ ಬಗ್ಗೆ ಎಬಿಡಿ ಮಾತನಾಡಿದ್ದಾರೆ.

IPL 2027: ಚೆನ್ನೈ ಸೂಪರ್‌ ಕಿಂಗ್ಸ್‌ನಲ್ಲಿ ಎಂಎಸ್‌ ಧೋನಿ ಸ್ಥಾನವನ್ನು ತುಂಬಬಲ್ಲ ಮೂವರು ಆಟಗಾರರು!

ಸಿಎಸ್‌ಕೆಯಲ್ಲಿ ಎಂಎಸ್‌ಡಿ ಸ್ಥಾನವನ್ನು ತುಂಬಬಲ್ಲ ಮೂವರು ಆಟಗಾರರು!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಮಾಜಿ ನಾಯಕ ಎಂಎಸ್‌ ಧೋನಿ ಒಂದೇ ಒಂದು ಪ೦ದ್ಯವನ್ನು ಕೂಡ ಆಡಲಿಲ್ಲ. ಅವರು ಗಾಯಗಳ ಸಮಸ್ಯೆಯಿಂದ ಸೀಸನ್‌ ಪೂರ್ತಿ ಬೆಂಚ್‌ನಲ್ಲಿಯೇ ಕಾಲ ಕಳೆಯಬೇಕಾಯಿತು. ಇದೀಗ ಅವರು 2027ರ ಟೂರ್ನಿಯಲ್ಲಿ ಆಡುವುದು ಕೂಡ ಅನುಮಾನ ಎಂದು ಹೇಳಲಾಗುತ್ತಿದೆ.

ಐಪಿಎಲ್‌ ಫೈನಲ್‌ ಬಳಿಕ ಭೀಕರ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರಾಗಿದ್ದ ಮೈಕಲ್‌ ಕ್ಲಾರ್ಕ್‌!

ಐಪಿಎಲ್‌ ಫೈನಲ್‌ ಬಳಿಕ ಅಪಘಾತ, ಪ್ರಾಣಾಪಾಯದಿಂದ ಕ್ಲಾರ್ಕ್‌ ಪಾರು!

2026ರ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದ ಬಳಿಕ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದ ವೇಳೆ ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕಲ್‌ ಕ್ಲಾರ್ಕ್‌ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಕ್ಲಾರ್ಕ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅವರ ದೇಹದ ಕೆಲ ಭಾಗಗಳಲ್ಲಿ ಮೂಗೇಟುಗಳಾಗಿವೆ. ಈ ಬಗ್ಗೆ ಸ್ವತಃ ಆಸೀಸ್‌ ಮಾಜಿ ನಾಯಕ ಬಹಿರಂಗಪಡಿಸಿದ್ದಾರೆ.

IPL 2026: ʻನಾನು ಈ ರೀತಿಯ ನೋಡಿರಲಿಲ್ಲʼ-ವೈಭವ್‌ ಸೂರ್ಯವಂಶಿ ಬಗ್ಗೆ ಲಿವಿಂಗ್‌ಸ್ಟೋನ್‌ ದೊಡ್ಡ ಹೇಳಿಕೆ!

ವೈಭವ್‌ ಸೂರ್ಯವಂಶಿ ಬಗ್ಗೆ ಲಿವಿಂಗ್‌ಸ್ಟೋನ್‌ ದೊಡ್ಡ ಹೇಳಿಕೆ!

ಇಂಗ್ಲೆಂಡ್ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಅನ್ನು ಶ್ಲಾಘಿಸಿದ್ದಾರೆ. ಅವರು ತಮ್ಮ ಏಳು ವರ್ಷಗಳ ಐಪಿಎಲ್ ವೃತ್ತಿಜೀವನದಲ್ಲಿ ಇಂತಹ ಬ್ಯಾಟಿಂಗ್ ಅನ್ನು ಎಂದಿಗೂ ನೋಡಿರಲಿಲ್ಲ ಎಂದು ಹೇಳಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ 29 ಎಸೆತಗಳಲ್ಲಿ 97 ರನ್ ಗಳಿಸಿದ್ದರು.

Maharaja Trophy 2026ರ ಹರಾಜಿನಲ್ಲಿ ಮನೀಷ್‌ ಪಾಂಡೆ ಸೇರಿ ಮೂವರು ಸ್ಟಾರ್‌ ಆಟಗಾರರು!

2026ರ ಮಹಾರಾಜ ಟ್ರೋಫಿ ಆಟಗಾರರ ಹರಾಜಿನಲ್ಲಿ ಮೂವರು ಸ್ಟಾರ್‌ಗಳು!

ಬಹುನಿರೀಕ್ಷಿತ 2026ರ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಲೀಗ್‌ ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆಗೆ ಕ್ಷಣಗಣನೆ ಶುರುವಾಗಿದೆ. ಜೂನ್‌ 5ರಂದು ಶುಕ್ರವಾರ ಹರಾಜು ಪ್ರಕ್ರಿಯೆ ನಡೆಯಲಿದ್ದು, ಮನೀಷ್‌ ಪಾಂಡೆ, ಕರುಣ್‌ ನಾಯರ್‌ ಸೇರಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಸ್ಟಾರ್‌ ಆಟಗಾರರ ಹೆಸರುಗಳು ಕೂಡ ಹರಾಜಿನಲ್ಲಿ ಎಲ್ಲರ ಗಮನ ಸೆಳೆಯಲಿದೆ.

IPL 2026ರ ಟೂರ್ನಿಯ ಟಾಪ್‌ 5 ಕ್ಯಾಚ್‌ಗಳನ್ನು ಪಡೆದ ಐವರು ಆಟಗಾರರು!

IPL 2026ರ ಟೂರ್ನಿಯ ಟಾಪ್‌ 5 ಕ್ಯಾಚ್‌ಗಳನ್ನು ಪಡೆದ ಐವರು ಆಟಗಾರರು!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ಅಂತ್ಯವಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು 5 ವಿಕೆಟ್‌ಳಿಂದ ಮಣಿಸುವ ಮೂಲಕ ಸತತ ಎರಡನೇ ಬಾರಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಟೂರ್ನಿಯಲ್ಲಿ ಆರ್‌ಸಿಬಿ ಎದುರಿನ ಪಂದ್ಯದಲ್ಲಿ ಸ್ಟನಿಂಗ್‌ ಕ್ಯಾಚ್‌ ಪಡೆದ ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ಮನೀಷ್‌ ಪಾಂಡ್ಯ, ಕ್ಯಾಚ್‌ ಆಫ್‌ ದಿ ಸೀಸನ್‌ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅಂದ ಹಾಗೆ 2026ರ ಟೂರ್ನಿಯಲ್ಲಿ ಟಾಪ್‌ 5 ಕ್ಯಾಚ್‌ಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ.

IND vs AFG: ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ರೋಹಿತ್‌ ಶರ್ಮಾ ಅನುಮಾನ!

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ರೋಹಿತ್‌ ಶರ್ಮಾ ಅನುಮಾನ!

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಮುಂದಿನ ಏಕದಿನ ಸರಣಿಯಲ್ಲಿ ರೋಹಿತ್‌ ಶರ್ಮಾ ಆಡುವುದು ಅನುಮಾನ ಎಂದು ಹೇಳಲಾಗುತ್ತಿದೆ. ಜೂನ್‌ 13 ರಿಂದ 20ರ ವರೆಗೆ ಈ ಏಕದಿನ ಸರಣಿ ನಡೆಯಲಿದೆ. ಅಂದ ಹಾಗೆ ಇದೀಗ ವಿರಾಟ್‌ ಕೊಹ್ಲಿ ಜೊತೆಗೆ ರೋಹಿತ್‌ ಶರ್ಮಾ ಕೂಡ ಅಲಭ್ಯರಾಗಿದ್ದಾರೆ. ಇದು ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.

ಭಾರತ ಟಿ20ಐ ತಂಡದ ನಾಯಕತ್ವದ ರೇಸ್‌ನಲ್ಲಿ ಮೂವರು ಆಟಗಾರರು, ಜೂ 4ಕ್ಕೆ ಬಿಸಿಸಿಐ ಮೀಟಿಂಗ್‌!

ಭಾರತ ಟಿ20 ತಂಡದ ನಾಯಕತ್ವದ ರೇಸ್‌ನಲ್ಲಿ ಮೂವರು ಆಟಗಾರರು!

ಮುಂಬರುವ ಐರ್ಲೆಂಡ್‌ ಹಾಗೂ ಇಂಗ್ಲೆಂಡ್‌ ವಿರುದ್ಧದ ಟಿ20ಐ ಸರಣಿಯ ಭಾರತ ತಂಡಕ್ಕೆ ನೂತನ ನಾಯಕನನ್ನು ನೇಮಿಸಲು ಬಿಸಿಸಿಐ ಪ್ರಯತ್ನ ನಡೆಸುತ್ತಿದೆ. ಜೂನ್‌ 4 ರಂದು ಬಿಸಿಸಿಐ ಮೀಟಿಂಗ್‌ ಹಮ್ಮಿಕೊಂಡಿದ್ದು, ಅಲ್ಲಿ ನೂತನ ನಾಯಕನನ್ನು ನೇಮಿಸುವ ಸಾಧ್ಯತೆ ಇದೆ. ನಾಯಕತ್ವದ ರೇಸ್‌ನಲ್ಲಿ ಶ್ರೇಯಸ್‌ ಅಯ್ಯರ್‌, ತಿಲಕ್‌ ವರ್ಮಾ ಹಾಗೂ ಇಶಾನ್‌ ಕಿಶನ್‌ ಇದ್ದಾರೆಂದು ವರದಿಯಾಗಿದೆ.

IPL 2026: ಆರ್‌ಸಿಬಿ ಎದುರು ಸೋಲಿನ ಬಳಿಕ ಶುಭಮನ್‌ ಗಿಲ್‌ ಭಾವನಾತ್ಮಕ ಪೋಸ್ಟ್!

ಆರ್‌ಸಿಬಿ ಎದುರು ಸೋಲಿನ ಬಳಿಕ ಶುಭಮನ್‌ ಗಿಲ್‌ ಭಾವನಾತ್ಮಕ ಪೋಸ್ಟ್!

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 31 ರಂದು ನಡೆದಿದ್ದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಫೈನಲ್‌ ಪಂದ್ಯದಲ್ಲಿ ಸೋಲು ಅನುಭವಿಸುವ ಮೂಲಕ ಗುಜರಾತ್‌ ಟೈಟನ್ಸ್‌ ತಂಡದ ಎರಡನೇ ಬಾರಿ ಪ್ರಶಸ್ತಿ ಗೆಲ್ಲುವ ಕನಸು ಭಗ್ನವಾಯಿತು.

2027ರ ಐಪಿಎಲ್‌ ಟೂರ್ನಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್‌ ಕಿಶನ್‌ ನಾಯಕ!

ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್‌ ಕಿಶನ್‌ ಫುಲ್‌ಟೈಮ್‌ ಕ್ಯಾಪ್ಟನ್‌?

IPL 2027: ಆಸ್ಟ್ರೇಲಿಯಾ ನಾಯಕ ಪ್ಯಾಟ್‌ ಕಮಿನ್ಸ್‌ ಅವರು 2027ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಆಡುವುದಿಲ್ಲ ಎಂಬ ಸುಳಿವು ನೀಡಿದ ಬೆನ್ನಲ್ಲೆ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ, ವಿಕೆಟ್‌ ಕೀಪರ್‌ ಇಶಾನ್‌ ಕಿಶನ್‌ಗೆ ಪೂರ್ಣ ಪ್ರಮಾಣದ ನಾಯಕತ್ವ ನೀಡುವ ಸಾಧ್ಯತೆ ಇದೆ.

ಭುವನೇಶ್ವರ್‌ಗೆ ಎರಡನೇ ಸ್ಥಾನ: 2026ರ ಐಪಿಎಲ್‌ ಟೂರ್ನಿಯಲ್ಲಿ ಟಾಪ್‌ 5 ವಿಕೆಟ್‌ ಟೇಕರ್ಸ್!

IPL 2026: ಅತಿ ಹೆಚ್ಚು ವಿಕೆಟ್‌ ಪಡೆದ ಟಾಪ್‌ 5 ಬೌಲರ್‌ಗಳು!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಚಾಂಪಿಯನ್‌ ಆಗಿದೆ. ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ವಿರುದ್ಧ 5 ವಿಕೆಟ್‌ಗಳ ಗೆಲುವು ಪಡೆಯುವ ಮೂಲಕ ಆರ್‌ಸಿಬಿ ಸತತ ಎರಡನೇ ಬಾರಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಅಂದ ಹಾಗೆ ಈ ಟೂರ್ನಿಯಲ್ಲಿ ಬಹುತೇಕ ಬ್ಯಾಟ್ಸ್‌ಮನ್‌ಗಳು ಪ್ರಾಬಲ್ಯ ಸಾಧಿಸಿದ್ದಾರೆ. ಇದರ ಹೊರತಾಗಿಯೂ ಕೆಲ ಬೌಲರ್‌ಗಳು ಟೂರ್ನಿಯಲ್ಲಿ ಮಿಂಚಿದ್ದಾರೆ. ಅಂದ ಹಾಗೆ ಈ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಅಗ್ರ ಐವರು ಬೌಲರ್‌ಗಳನ್ನು ಇಲ್ಲಿ ವಿವರಿಸಲಾಗಿದೆ.

ವೈಭವ್‌ ಸೂರ್ಯವಂಶಿಗೆ ಅಗ್ರ ಸ್ಥಾನ: 2026ರ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಟಾಪ್ 5‌ ಬ್ಯಾಟರ್ಸ್‌!

IPL 2026: ಅತಿ ಹೆಚ್ಚು ರನ್‌ ಗಳಿಸಿದ ಟಾಪ್ 5‌ ಬ್ಯಾಟರ್ಸ್‌!

ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2026ರ ಟೂರ್ನಿಯು ಅಂತ್ಯವಾಗಿದೆ. ರಜತ್‌ ಪಾಟಿದಾರ್‌ ನಾಯಕತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು ಮಣಿಸಿ ಸತತ ಎರಡನೇ ಬಾರಿ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಇದೀಗ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಅಗ್ರ ಐವರು ಬ್ಯಾಟ್ಸ್‌ಮನ್‌ಗಳನ್ನು ಇಲ್ಲಿ ವಿವರಿಸಲಾಗಿದೆ.

IPL 2026: ವೈಭವ್‌ ಸೂರ್ಯವಂಶಿಗೆ ವಿರಾಟ್‌ ಕೊಹ್ಲಿ ನೀಡಿದ್ದ ಸಂದೇಶವನ್ನು ರಿವೀಲ್‌ ಮಾಡಿದ ಆರ್‌ಸಿಬಿ!

ವೈಭವ್‌ಗೆ ಕೊಹ್ಲಿ ನೀಡಿದ್ದ ಸಂದೇಶವನ್ನು ರಿವೀಲ್‌ ಮಾಡಿದ ಆರ್‌ಸಿಬಿ!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದ ಬಳಿಕ ರಾಜಸ್ಥಾನ್‌ ರಾಯಲ್ಸ್‌ ಯುವ ಆರಂಭಿಕ ವೈಭವ್‌ ಸೂರ್ಯವಂಶಿ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ದಿಗ್ಗಜ ವಿರಾಟ್‌ ಕೊಹ್ಲಿ ಅವರ ಸಂಭಾಷಣೆ ಅತ್ಯಂತ ವಿಶೇಷವಾಗಿತ್ತು. ಈ ವೇಳೆ ಯುವ ಬ್ಯಾಟ್ಸ್‌ಮನ್‌ಗೆ ಕೊಹ್ಲಿ ಯಾವ ಸಂದೇಶವನ್ನು ನೀಡಿದ್ದರು ಎಂಬುದನ್ನು ಆರ್‌ಸಿಬಿ ರಿವೀಲ್‌ ಮಾಡಿದೆ.

IPL 2026: ಆರ್‌ಸಿಬಿ ಸಕ್ಸಸ್‌ನಲ್ಲಿ ರಜತ್‌ ಪಾಟಿದಾರ್‌ ಪಾತ್ರವನ್ನು ತಿಳಿಸಿದ ಸಚಿನ್‌ ತೆಂಡೂಲ್ಕರ್‌!

ಆರ್‌ಸಿಬಿ ಸಕ್ಸಸ್‌ನಲ್ಲಿ ರಜತ್‌ ಪಾಟಿದಾರ್‌ ಪಾತ್ರವನ್ನು ವಿವರಿಸಿದ ಸಚಿನ್‌!

IPL 2026: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸಕ್ಸಸ್‌ನಲ್ಲಿ ರಜತ್‌ ಪಾಟಿದಾರ್‌ ಅವರ ಪಾತ್ರವನ್ನು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ವಿವರಿಸಿದ್ದಾರೆ. ಮೇ 31 ರಂದು ಗುಜರಾತ್‌ ಟೈಟನ್ಸ್‌ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್‌ ಗೆಲುವು ಪಡೆಯುವ ಮೂಲಕ ಎರಡನೇ ಬಾರಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

IPL 2026: ಟೂರ್ನಿಯ ಎರಡನೇ ಅವಧಿಯಲ್ಲಿ ಪಂಜಾಬ್‌ ಕಿಂಗ್ಸ್‌ ವೈಫಲ್ಯಕ್ಕೆ ಕಾರಣ ತಿಳಿಸಿದ ಸಚಿನ್‌ ತೆಂಡೂಲ್ಕರ್‌!

ಪಂಜಾಬ್‌ ಕಿಂಗ್ಸ್‌ ವೈಫಲ್ಯಕ್ಕೆ ಕಾರಣ ತಿಳಿಸಿದ ಸಚಿನ್‌ ತೆಂಡೂಲ್ಕರ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಎರಡನೇ ಅವಧಿಯಲ್ಲಿ ಪಂಜಾಬ್‌ ಕಿಂಗ್ಸ್‌ ಸತತ ವೈಫಲ್ಯಕ್ಕೆ ಕಾರಣವೇನೆಂದು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ವಿವರಿಸಿದ್ದಾರೆ. ಮೊದಲ ಅವಧಿಯಲ್ಲಿ ಒಂದೂ ಪಂದ್ಯದಲ್ಲಿ ಸೋಲದ, ಪಂಜಾಬ್‌ ಎರಡನೇ ಅವಧಿಯಲ್ಲಿ ಸತತ ಆರು ಪಂದ್ಯಗಳನ್ನು ಸೋತು ಟೂರ್ನಿಯಿಂದ ಹೊರಬಿದ್ದಿತ್ತು.

ಹರ್ಷ ಭೋಗ್ಲೆ ಕಟ್ಟಿದ 2026ರ ಐಪಿಎಲ್‌ ಪ್ಲೇಯಿಂಗ್‌ XIನಲ್ಲಿ ನಾಲ್ವರು ಆರ್‌ಸಿಬಿ ಸ್ಟಾರ್ಸ್‌!

ತಮ್ಮ ನೆಚ್ಚಿನ 2026ರ ಐಪಿಎಲ್‌ ಪ್ಲೇಯಿಂಗ್‌ XI ಆರಿಸಿದ ಹರ್ಷ ಬೋಗ್ಲೆ!

ಕ್ರಿಕೆಟ್‌ ನಿರೂಪಕ ಹರ್ಷ ಭೋಗ್ಲೆ ಅವರು 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತನ್ನ ನೆಚ್ಚಿನ ಪ್ಲೇಯಿಂಗ್‌ XI ಅನ್ನು ಆರಿಸಿದ್ದಾರೆ. ಇದರಲ್ಲಿ ಚಾಂಪಿಯನ್‌ ಆರ್‌ಸಿಬಿ ತಂಡದಿಂದ ಒಟ್ಟು ನಾಲ್ವರು ಆಟಗಾರರಿಗೆ ಬೋಗ್ಲೆ ಅವಕಾಶ ನೀಡಿದ್ದಾರೆ. ವಿರಾಟ್‌ ಕೊಹ್ಲಿ, ಕೃಣಾಲ್‌ ಪಾಂಡ್ಯ, ರಜತ್‌ ಪಾಟಿದಾರ್‌ ಹಾಗೂ ಭುವನೇಶ್ವರ್‌ ಕುಮಾರ್‌ಗೆ ಅವಕಾಶ ನೀಡಲಾಗಿದೆ.

ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ ವಿದೇಶಿ ಆಟಗಾರರು!

ಅತಿ ಹೆಚ್ಚು ಐಪಿಎಲ್‌ ಟ್ರೋಫಿ ಗೆದ್ದ ವಿದೇಶಿ ಆಟಗಾರರು!

ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2026ರ ಟೂರ್ನಿ ಮುಕ್ತಾಯವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್‌ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸುವ ಮೂಲಕ ಸತತ ಎರಡನೇ ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಟ್ರೋಫಿಯನ್ನು ಗೆದ್ದ ವಿದೇಶಿ ಆಟಗಾರರ ಬಗ್ಗೆ ಇಲ್ಲಿ ವಿವರಿಸಲಾಗಿದೆ.

2026ರ ಐಪಿಎಲ್‌ ಗೆದ್ದ ಬೆನ್ನಲ್ಲೆ ಪತ್ನಿ ಅನುಷ್ಕಾ ಜೊತೆ ಬೃಂದಾವನಕ್ಕೆ ತೆರಳಿದ ವಿರಾಟ್‌ ಕೊಹ್ಲಿ!

2026ರ ಐಪಿಎಲ್‌ ಗೆದ್ದ ಬೆನ್ನಲ್ಲೆ ವಿರಾಟ್‌ ಕೊಹ್ಲಿ ಟೆಂಪಲ್‌ ರನ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಪ್ರಶಸ್ತಿ ಗೆದ್ದುಕೊಟ್ಟ ಬಳಿಕ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟೆಂಪಲ್‌ ರನ್‌ ಶುರು ಮಾಡಿದ್ದಾರೆ. ಅವರು ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ಅವರು ಬೃಂದಾವನದಲ್ಲಿರುವ ರಾಧಾ ಕೇಲಿ ಕುಂಜ್ ಆಶ್ರಮಕ್ಕೆ ಭೇಟಿ ನೀಡಿ ಪ್ರೇಮಾನಂದ ಮಹಾರಾಜ ಗುರೂಜಿ ಅವರ ಆಶಿರ್ವಾದ ಪಡೆದಿದ್ದಾರೆ.

Loading...