ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
MLA S. N. Subbareddy: ನಾಡಪ್ರಭು ಕೆಂಪೇಗೌಡರು ಆಡಳಿತ ಕೌಶಲ್ಯ, ಸಾಮಾಜಿಕ ಸಾಮರಸ್ಯ , ಭವಿಷ್ಯದ ದೃಷ್ಟಿಕೋನದಲ್ಲಿ ಇಡೀ ಜಗತ್ತಿಗೆ ಮಾದರಿ:-ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

ಕೆಂಪೇಗೌಡರ ದೂರದೃಷ್ಟಿತ್ವದಿಂದ ಬೆಂಗಳೂರು ಕೋಟ್ಯಾಂತರ ಜನರ ನೆಲೆ

ಎಲ್ಲ ಸಮುದಾಯಗಳಿಗೂ ಅನುಕೂಲವಾಗುವ 13 ಪೇಟೆಗಳಾದ ಬಳೇಪೇಟೆ,ತಿಗಳರ ಪೇಟೆ,ಕಾಟನ್ ಪೇಟೆ ಸೇರಿದಂತೆ ವಿವಿಧ ಪೇಟೆಗಳನ್ನು ಸ್ಥಾಪಿಸಿ,ವಾಣಿಜ್ಯ ವಹಿವಾಟುಗಳಿಗೆ ಅನುಕೂಲ ಮಾಡಿ ಕೊಟ್ಟಿ ದ್ದಾರೆ. ಕೆಂಪೇಗೌಡರ 108 ಅಡಿ ಪುತ್ಥಳಿಯನ್ನು ದೇವನಹಳ್ಳಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಸ್ಥಾಪಿಸುವ ಮೂಲಕ ರಾಜ್ಯ ಸರಕಾರ ವಿಶ್ವಮಾನ್ಯತೆ ನೀಡಿದೆ.

MLA SN Subbareddy: ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ

ಗೋಡೆ ನಿರ್ಮಾಣಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ

ಪಟ್ಟಣದ ಒಂದೇ ವಾರ್ಡಿನ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಆವರಣದಲ್ಲಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ಕಾಂಪೌಂಡ್ ಗೋಡೆ ಹಾಗೂ ಅದರ ಮೇಲೆ ಭದ್ರತಾ ಗ್ರಿಲ್ ಹಾಕಿ ನಿರ್ಮಾಣ ಮಾಡಲು 62 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು

MLA Puttaswamy Gowda: ಕೆಂಪೇಗೌಡ ನಿರ್ಮಾಣದ ಬೆಂಗಳೂರು ತೆರಿಗೆಯಲ್ಲಿ ಪ್ರಥಮ ಸ್ಥಾನದಲ್ಲಿದೆ : ಶಾಸಕ ಪುಟ್ಟಸ್ವಾಮಿಗೌಡ ಬಣ್ಣನೆ

ಕೆಂಪೇಗೌಡ ನಿರ್ಮಾಣದ ಬೆಂಗಳೂರು ತೆರಿಗೆಯಲ್ಲಿ ಪ್ರಥಮ ಸ್ಥಾನದಲ್ಲಿದೆ

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯಿಂದ ನಿರ್ಮಾಣವಾದ ಬೆಂಗಳೂರು ಇಂದು ವಿಶ್ವ ದಲ್ಲಿಯೇ ಬೃಹತ್ ಆರ್ಥಿಕ ಶಕ್ತಿಯಾಗಿ ಬೆಳೆದು ನಿಂತಿದೆ ಎಂದ ಅವರು ಶತಮಾನಗಳ ಹಿಂದೆಯೇ ಕೆಂಪೇಗೌಡರು ಬೆಂಗಳೂರನ್ನು ಸುಸಜ್ಜಿತವಾಗಿ ನಿರ್ಮಿಸಿ ಎಲ್ಲಾ ಜಾತಿ ಜನಾಂಗದವರಿಗೂ ಪ್ರಾತಿನಿಧ್ಯವನ್ನು ನೀಡಿದ್ದರು

Nadaprabhu Kempegowda: ಕೆಂಪೇಗೌಡರ ಕೀರ್ತಿಯನ್ನು ಮೀರಿ ಮೋದಿಯ 11 ವರ್ಷದ ಆಡಳಿತವಿದೆ: ಸೀಕಲ್ ರಾಮಚಂದ್ರಗೌಡ ಅಭಿಮತ

ಕೆಂಪೇಗೌಡರ ಕೀರ್ತಿಯನ್ನು ಮೀರಿ ಮೋದಿಯ 11 ವರ್ಷದ ಆಡಳಿತವಿದೆ

ಇದೇ ಮೊದಲ ಬಾರಿಗೆ ಬಿಜೆಪಿ ಕಚೇರಿಯಲ್ಲಿ ಕೆಂಪೇಗೌಡ ಜಯಂತಿ ಆಚರಿಸುತ್ತಿದ್ದೇವೆ. ದೂರಾ ಲೋಚನೆಯಲ್ಲಿ ಕಟ್ಟಿದ ಬೆಂಗಳೂರು ವಿಶ್ವದಲ್ಲಿ ಹೆಸರಾಗಿದೆ. ಜಯಂತಿ ಆಚರಣೆ ಮೂಲಕ ಮುಂದಿನ ಪೀಳಿಗೆಗೆ ನಾವು ಅವರ ಸಂದೇಶವನ್ನು ನೀಡಬೇಕು. ಬಿಜೆಪಿ ನಾಯಕರಿಗೆ ಜವಾಬ್ದಾರಿ ಇರಬೇಕು. 11 ವರ್ಷಗಳಲ್ಲಿ ಮೋದಿಜೀ ದೇಶಕ್ಕೆ ನೀಡಿರುವ ಕೊಡುಗೆ ಕೆಂಪೇಗೌಡರ ಇತಿಹಾಸ ವನ್ನು ಮೀರಿದೆ.

HD Kumaraswamy: ರೈತರ ಜತೆ ಸೌಜನ್ಯದಿಂದ ವರ್ತಿಸಿ: ಬ್ಯಾಂಕ್‌ಗಳಿಗೆ ಎಚ್.ಡಿ.ಕುಮಾರಸ್ವಾಮಿ ಸೂಚನೆ

ಬ್ಯಾಂಕ್‌ಗಳು ರೈತರ ಜತೆ ಸೌಜನ್ಯದಿಂದ ವರ್ತಿಸಬೇಕು: ಎಚ್.ಡಿ.ಕುಮಾರಸ್ವಾಮಿ

HD Kumaraswamy: ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಜಾಸ್ತಿ ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.

Basavaraj Bommai: 2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ: ಬಸವರಾಜ ಬೊಮ್ಮಾಯಿ ಭವಿಷ್ಯ

2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ: ಬೊಮ್ಮಾಯಿ ಭವಿಷ್ಯ

Basavaraj Bommai: ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮುಂಚೆಯೇ 2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kempegowda Jayanthi: ಬೆಂಗಳೂರು ವಿಭಜನೆ ತಡೆಗೆ ಸಂಘಟಿತ ಪ್ರಯತ್ನವಾಗಬೇಕು: ಪ್ರಲ್ಹಾದ್‌ ಜೋಶಿ

ಬೆಂಗಳೂರು ವಿಭಜನೆ ತಡೆಗೆ ಸಂಘಟಿತ ಪ್ರಯತ್ನವಾಗಬೇಕು: ಪ್ರಲ್ಹಾದ್‌ ಜೋಶಿ

Pralhad Joshi: ಮಹಾನಗರಗಳನ್ನು ವಿಭಜಿಸಿದ ಎಲ್ಲೆಡೆಯೂ ಅದು ಯಶಸ್ವಿಯಾಗಿಲ್ಲ. ಇದು ಗೊತ್ತಿದ್ದರೂ ರಾಜ್ಯ ಸರ್ಕಾರ ಬೃಹತ್‌ ಬೆಂಗಳೂರನ್ನು ನಾಲ್ಕು ಭಾಗಗಳನ್ನಾಗಿ ವಿಭಜಿಸಲು ಹೊರಟಿದೆ. ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ನಾವಿದನ್ನು ಪ್ರಾಮಾಣಿಕವಾಗಿ ತಡೆಯುವ ಪ್ರಯತ್ನ ಮಾಡಲೇಬೇಕಿದೆ ಎಂದು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

Rangitaranga Movie: ‘ರಂಗಿತರಂಗ’ ಮತ್ತೆ ತೆರೆಗೆ; ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

‘ರಂಗಿತರಂಗ’' ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

Rangitaranga Movie: ಎಚ್.ಕೆ. ಪ್ರಕಾಶ್ ನಿರ್ಮಾಣದ, ಅನೂಪ್ ಭಂಡಾರಿ ನಿರ್ದೇಶನದ ಬ್ಲಾಕ್‌ಬಸ್ಟರ್ ಚಲನಚಿತ್ರ 'ರಂಗಿತರಂಗ', ಈಗ ಹತ್ತು ವರ್ಷಗಳ ನಂತರ ಮತ್ತೆ ತೆರೆಗೆ ಬರಲು ಸಜ್ಜಾಗಿದೆ. ಇದೇ ಜುಲೈ 4 ರಂದು 'ರಂಗಿತರಂಗ' ಚಿತ್ರವನ್ನು ಮರು-ಬಿಡುಗಡೆಯಾಗುತ್ತಿದೆ.

HD Kumaraswamy: ʼಪಂಚ ಗ್ಯಾರಂಟಿʼ ಎಂಬ ಅಗ್ಗದ ಕಾರ್ಯಕ್ರಮಗಳಿಗೆ ಜನ ಮಾರು ಹೋದರು: ಎಚ್‌.ಡಿ.ಕುಮಾರಸ್ವಾಮಿ ಬೇಸರ

ʼಪಂಚ ಗ್ಯಾರಂಟಿʼ ಎಂಬ ಅಗ್ಗದ ಕಾರ್ಯಕ್ರಮಗಳಿಗೆ ಜನರು ಮಾರು ಹೋದರು: ಎಚ್‌ಡಿಕೆ

HD Kumaraswamy: ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಕೊಡುವುದಕ್ಕೆ ಜನರ ಮೇಲೆ ಅಪಾರ ಪ್ರಮಾಣದಲ್ಲಿ ತೆರಿಗೆ ವಿಧಿಸುತ್ತಿದೆ. ಈ ರೀತಿ ತೆರಿಗೆ ಹಾಕುವುದೇ ಆಗಿದ್ದರೆ ನಾನೇ ಅಧಿಕಾರದಲ್ಲಿ ಇದ್ದಿದ್ದರೆ ತಿಂಗಳಿಗೆ ಐದು ಸಾವಿರ ರೂಪಾಯಿ ಕೊಡುತ್ತಿದ್ದೆ. ನಿಮ್ಮ ಹಣ ನಿಮಗೆ ಕೊಡುವುದಕ್ಕೆ ಸರ್ಕಾರ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

Bengaluru Power Cut: ಜೂ.29, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ

ಜೂ.29,30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ 66/11 ಕೆವಿ ನೆಲಗೆದರನಹಳ್ಳಿ, 66/11 ಕೆವಿ ಕಟ್ಟಿಗೆಹಳ್ಳಿ, 220/66/11 ಕೆವಿ ಎಸ್.ಆರ್.ಎಸ್. ಪೀಣ್ಯ ಉಪಕೇಂದ್ರ ಮತ್ತು 66/11 ಕೆ.ವಿ ‘ಎʼ ಸ್ಟೇಷನ್ ವ್ಯಾಪ್ತಿಯ ಹಲವೆಡೆ ಜೂ.29 ರಂದು ಭಾನುವಾರ ಬೆಳಗ್ಗೆ10 ಗಂಟೆಯಿಂದ ಸಂಜೆ 5.30ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Kempegowda Jayanthi: ಬೆಂಗಳೂರಿನಲ್ಲಿ 60 ಸಾವಿರ ಪ್ರೇಕ್ಷಕರ ಸಾಮರ್ಥ್ಯದ ನೂತನ ಸ್ಟೇಡಿಯಂ ನಿರ್ಮಾಣಕ್ಕೆ 50 ಎಕರೆ ಜಾಗ ಗುರುತು: ಡಿ.ಕೆ.ಶಿವಕುಮಾರ್‌

ಬೆಂಗಳೂರಿನಲ್ಲಿ 60 ಸಾವಿರ ಪ್ರೇಕ್ಷಕರ ಸಾಮರ್ಥ್ಯದ ನೂತನ ಸ್ಟೇಡಿಯಂ ನಿರ್ಮಾಣ

Kempegowda Jayanthi: ಬೆಂಗಳೂರಿನಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ತಿಳಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸುಮಾರು 1 ಲಕ್ಷ ಕೋಟಿ ಮೊತ್ತದ ಯೋಜನೆಗಳಿಗೆ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

Nandini Milk Booth: ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಹಾಲಿನ ಮಳಿಗೆ ತೆರೆಯಲು ಮಂಜೂರಾತಿ ನೀಡಿ; ಬಿಎಂಆರ್‌ಸಿಎಲ್‌ಗೆ ಡಿ.ಕೆ.ಸುರೇಶ್‌ ಮನವಿ

ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಹಾಲಿನ ಮಳಿಗೆ ತೆರೆಯಲು ಮಂಜೂರಾತಿ ನೀಡಿ

DK Suresh: ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ವರ್ ರಾವ್ ಅವರನ್ನು ಭೇಟಿ ಮಾಡಿ, ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಜಾಲ ವಿಸ್ತರಿಸಲು ಸಹಕಾರ ನೀಡುವಂತೆ ಕೋರಿದ್ದೇನೆ ಎಂದು ಬಮುಲ್‌ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್‌ ತಿಳಿಸಿದ್ದಾರೆ.

Electric shock: ಒಣಗಲು ಹಾಕಿದ್ದ ಬಟ್ಟೆ ತೆಗೆಯಲು ಹೋದಾಗ ವಿದ್ಯುತ್‌ ತಗುಲಿ ದಂಪತಿ ದಾರುಣ ಸಾವು

ಸೊರಬದಲ್ಲಿ ವಿದ್ಯುತ್‌ ತಗುಲಿ ದಂಪತಿ ದುರ್ಮರಣ

Shivamogga News: ಶಿವಮೊಗ್ಗ ಜಿಲ್ಲೆಯ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ಅವಘಡ ನಡೆದಿದೆ. ದಂಪತಿಗೆ ವಿದ್ಯುತ್ ತಗುಲಿದ್ದನ್ನು ಗಮನಿಸಿದ ಪಕ್ಕದ ಮನೆ ವ್ಯಕ್ತಿ ರಕ್ಷಿಸಲು ಮುಂದಾದಾಗ ಅವರಿಗೂ ವಿದ್ಯುತ್ ಶಾಕ್ ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ದಂಪತಿ ಕೊನೆಯುಸಿರೆಳೆದಿದ್ದಾರೆ.

Police Recruitment: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಶೇ.15.64 ಹುದ್ದೆಗಳು ಶೀಘ್ರದಲ್ಲೇ ಭರ್ತಿ: ಸಿಎಂ ಸಿದ್ದರಾಮಯ್ಯ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಶೇ.15.64 ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ

Police Recruitment: ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಅಗತ್ಯ ಎಲ್ಲಾ ಕ್ರಮ ಕೈಗೊಳ್ಳಬೇಕು. ಡ್ರಗ್ಸ್ ಮಾರುವವರ ಅಂಗಡಿ, ವ್ಯಾಪಾರದ ಲೈಸೆನ್ಸ್ ರದ್ದುಗೊಳಿಸುವ ಅಗತ್ಯ ಬಿದ್ದರೆ ಮಾಡಿ. ಪ್ರಚೋದನೆ, ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕೇಸು ಕಡ್ಡಾಯವಾಗಿ ದಾಖಲಿಸಿ ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

CM Siddaramaiah: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ ಎಂದ ಸಿಎಂ

ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರ ಇದೆ ಎಂದ ಸಿಎಂ

CM Siddaramaiah: ಕಾಲ್ತುಳಿತ ಘಟನೆ ನಡೆದ ದಿನ‌ ಮಧ್ಯಾಹ್ನ 3:50 ಕ್ಕೆ ಸಾವುಗಳು ಸಂಭವಿಸಿದ್ದವು. ಆದರೂ ಸರಿಯಾದ ಮಾಹಿತಿ ಕೊಟ್ಟಿರಲಿಲ್ಲ. ಇದು ತಪ್ಪಲ್ಲವಾ? ನಾನು 1983 ರಿಂದ ಶಾಸಕನಾಗಿ ಸಿಎಂ ಆಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಇಂಥ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನಾನು ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ ? ಎಂದು ಪೊಲೀಸ್‌ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

2025ರ ಪರಿಸರ ಮಾಸ ಯಶಸ್ವಿಯಾಗಿ ಪೂರ್ಣಗೊಳಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್

‘ಸುಸ್ಥಿರ ಸಂಪನ್ಮೂಲ ನಿರ್ವಹಣಾ ಅಭಿಯಾನ’

ಹಸಿರು ಸಾರಿಗೆ ವ್ಯವಸ್ಥೆಗೆ ಪರಿವರ್ತನೆ ಹೊಂದುವುದು, ಸಂಪನ್ಮೂಲ ಪ್ರಧಾನ ವಿಧಾನವನ್ನು ಅಳವಡಿಸಿಕೊಳ್ಳುವುದು, ಪಾಲುದಾರರಲ್ಲಿ ಪರಿಸರ ಜಾಗೃತಿಯನ್ನು ಉಂಟು ಮಾಡುವುದು, ಈ ಮೂಲಕ ಸುಸ್ಥಿರ ಜೀವನ ಪಾಲಿಸುವಂತೆ ಮಾಡುವುದು ಮತ್ತು ಪರಿಸರದ ಮೇಲೆ ಸಕಾರಾತ್ಮಕ ಪರಿಣಾಮ ಉಂಟು ಮಾಡಲು ನಿರ್ಧಾರ

Karnataka Rains: ಯೆಲ್ಲೋ ಅಲರ್ಟ್‌ ಮುಂದುವರಿಕೆ; ನಾಳೆಯೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

ನಾಳೆಯೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

ಅಪೊಲೊ ಕ್ಯಾನ್ಸರ್ ಸೆಂಟರ್ಸ್‌ ನಿಂದ 'ಕ್ಯಾನ್ವಿನ್' ಆರಂಭ ಕ್ಯಾನ್ಸರ್ ಪ್ರಯಾಣದಲ್ಲಿ ಎಲ್ಲರನ್ನೂ ಒಟ್ಟುಗೂಡಿಸುವ ಒಂದು ಬೆಂಬಲ ಗುಂಪು

ಅಪೊಲೊ ಕ್ಯಾನ್ಸರ್ ಸೆಂಟರ್ಸ್‌ ನಿಂದ 'ಕ್ಯಾನ್ವಿನ್' ಆರಂಭ

``ಅಪೊಲೊ ಕ್ಯಾನ್ಸರ್ ಕೇಂದ್ರಗಳಲ್ಲಿ, ಗುಣಪಡಿಸುವುದು ಚಿಕಿತ್ಸೆಯನ್ನು ಮೀರಿದೆ ಎಂದು ನಾವು ಯಾವಾಗಲೂ ನಂಬಿದ್ದೇವೆ. 'ಕ್ಯಾನ್ವಿನ್' ನೊಂದಿಗೆ, ಧೈರ್ಯವನ್ನು ಹಂಚಿಕೊಳ್ಳುವ, ಧ್ವನಿಗಳನ್ನು ಕೇಳುವ ಮತ್ತು ಸಕಾರಾತ್ಮಕ ಕಥೆಗಳು ಔಷಧಕ್ಕೆ ಬೆಂಬಲವಾಗುವ ಸಮುದಾಯವನ್ನು ನಾವು ರಚಿಸು ತ್ತಿದ್ದೇವೆ. ಇದು ಬ್ರ್ಯಾಂಡ್ ಅಜ್ಞೇಯತಾವಾದಿ ವೇದಿಕೆಯಾಗಿದೆ, ಅಂದರೆ ಇದು ಎಲ್ಲಾ ಕ್ಯಾನ್ಸರ್ ರೋಗಿ ಗಳು, ಆರೈಕೆದಾರರು, ಆಂಕೊಲಾಜಿಸ್ಟ್ಗಳು ಮತ್ತು ಪ್ರೇಕ್ಷಕರಿಗೆ ಮುಕ್ತವಾಗಿದೆ"

ದಸ್ ಸ್ಪೋಕ್ ಇಂಡಿಯಾ ಇಂಕ್ 2025' ವರದಿ ಬಿಡುಗಡೆ ಮಾಡಿದ ಗಿವ್ ಗ್ರ್ಯಾಂಟ್ಸ್‌

ಗಿವ್ ಗ್ರ್ಯಾಂಟ್ಸ್‌ ನಿಂದ ದಸ್ ಸ್ಪೋಕ್ ಇಂಡಿಯಾ ಇಂಕ್ 2025' ವರದಿ ಬಿಡುಗಡೆ

ಸಮೀಕ್ಷೆಯಲ್ಲಿ ಭಾಗವಹಿಸಿದ್ದ ʼಸಿಎಸ್‌ಆರ್” ಪ್ರಮುಖರು ಒಟ್ಟಾಗಿ ವಾರ್ಷಿಕವಾಗಿ ₹ 6,800 ಕೋಟಿಗೂ ಹೆಚ್ಚಿನ ಮೊತ್ತದ ʼಸಿಎಸ್‌ಆರ್‌ʼ ನಿಧಿಗಳನ್ನು ನಿರ್ವಹಿಸುತ್ತಾರೆ. ಈ ʼಸಿಎಸ್‌ಆರ್‌ʼ ನಿರ್ವಹಿಸುವವರ ಒಳ ನೋಟಗಳನ್ನು ಸೂಕ್ಷ್ಮ ದತ್ತಾಂಶದೊಂದಿಗೆ ಸಂಯೋಜಿಸುವ ಮೂಲಕ, ʼದಸ್ ಸ್ಪೋಕ್ ಇಂಡಿಯಾ ಇಂಕ್ 2025ʼ ವರದಿಯು ʼ ಸಿಎಸ್‌ಆರ್ʼ ಪಾಲಿಸಬೇಕಾದ ನಿಯಮ ದಿಂದ ವ್ಯವಸ್ಥಿತ ಬದಲಾವಣೆ ಕಂಡಿದೆ

Prajwal Revanna Case: ಅತ್ಯಾಚಾರ ಪ್ರಕರಣ; ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಜು.2ಕ್ಕೆ ಮುಂದೂಡಿಕೆ

ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಜು.2ಕ್ಕೆ ಮುಂದೂಡಿದ ಹೈಕೋರ್ಟ್‌

Prajwal Revanna Case: ಕೈದಿಗಳು ಮೊದಲು ವಿಚಾರಣಾಧೀನ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಬೇಕು. ಆದರೆ, ಪ್ರಜ್ವಲ್ ರೇವಣ್ಣ ನೇರವಾಗಿ ಹೈಕೋರ್ಟ್‌ಗೆ ಬಂದಿದ್ದಾರೆ. ಇಂತಹ ಅರ್ಜಿ ಪರಿಗಣಿಸಬಾರದು ಎಂದು ಎಸ್‌ಪಿಪಿ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಿದ್ದಾರೆ. ವಾದ ಆಲಿಸಿದ ಕೋರ್ಟ್‌, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

Nadaprabhu Kempegowda International Award: ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಯ ಗರಿಮೆ ಮುಡಿಗೇರಿಸಿಕೊಂಡ ಬೆಂಗಳೂರು ವಿಮಾನ ನಿಲ್ದಾಣ

ಅಂತಾರಾಷ್ಟ್ರೀಯ ಪ್ರಶಸ್ತಿಯ ಗರಿಮೆ ಮುಡಿಗೇರಿಸಿಕೊಂಡ KIA

ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ ರಾಜ್ಯದ ದೃಷ್ಟಿಕೋನದಲ್ಲಿ ಆಳವಾಗಿ ಬೇರೂರಿರುವ ಸಂಸ್ಥೆ ಯಾಗಿ, ಜನರನ್ನು ಸಂಪರ್ಕಿಸುವ, ಆರ್ಥಿಕ ಪ್ರಗತಿಯನ್ನು ಉತ್ತೇಜಿಸುವ ಮತ್ತು ನಮ್ಮ ರೋಮಾಂಚಕ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ದ್ವಾರವನ್ನು ನಿರ್ಮಿಸುವ ಮೂಲಕ ಕರ್ನಾಟಕದ ಆಕಾಂಕ್ಷೆಗಳಿಗೆ ಕೊಡುಗೆ ನೀಡುವಲ್ಲಿ ನಾವು ಬಹಳ ಹೆಮ್ಮೆಪಡುತ್ತೇವೆ.

Yadgir News: ನೀರು ಕುಡಿಯಲು ಹೋಗಿ ಭೀಮಾ ನದಿಯಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು!

ನೀರು ಕುಡಿಯಲು ಹೋಗಿ ಭೀಮಾ ನದಿಯಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು

Yadgir News: ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರ್ ಗ್ರಾಮದಲ್ಲಿ ಘಟನೆ ನಡೆದಿದೆ. ಜಾನುವಾರು ಮೇಯಿಸುವ ವೇಳೆ ನದಿಯಲ್ಲಿ ನೀರು ಕುಡಿಯಲು ಯುವಕರು ಹೋಗಿದ್ದಾಗ ಅವಘಡ ನಡೆದಿದೆ. ಸ್ಥಳದಲ್ಲಿ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Dyson: ಶೇ.75ರಷ್ಟು ಜನ ಸ್ವಚ್ಛತೆಗೆ 1 ಗಂಟೆಗೂ ಹೆಚ್ಚು ಸಮಯ ನೀಡುತ್ತಿದ್ದಾರೆ: ಡೈಸನ್ ಗ್ಲೋಬಲ್ ವೆಟ್ ಕ್ಲೀನಿಂಗ್ ಅಧ್ಯಯನ

ಶೇ.75ರಷ್ಟು ಜನ ಸ್ವಚ್ಛತೆಗೆ 1 ಗಂಟೆಗೂ ಹೆಚ್ಚು ಸಮಯ ನೀಡುತ್ತಿದ್ದಾರೆ

Dyson: ಡೈಸನ್ ಒದ್ದೆ ನೆಲವನ್ನು ಸ್ವಚ್ಛಗೊಳಿಸುವ ಸ್ವಚ್ಛತೆಯ ಮೊದಲ ಡೈಸನ್ ವಾಷ್ ಜಿ1 ಬಿಡುಗಡೆ ಮಾಡಿದೆ. ಒದ್ದೆ ಹಾಗೂ ಒಣ ಕಸವನ್ನು ಒಂದೇ ಸಲಕ್ಕೆ ಹೀರಿಕೊಳ್ಳುವಂತೆ ರೂಪಿಸಿರುವ ಡೈಸನ್ ವಾಷ್ ಜಿ1 ಕಠಿಣ ಕಲೆಗಳು ಮತ್ತು ಕೂದಲು ಕೂಡ ಸಂಗ್ರಹಿಸುವಂತೆ ಹೈಡ್ರೇಷನ್ ಹೀರಿಕೊಳ್ಳುವಿಕೆ ಮತ್ತು ಹೊರತೆಗೆಯುವ ತಂತ್ರಜ್ಞಾನಗಳನ್ನು ಹೊಂದಿದೆ.

Just Married Movie: ‘ಜಸ್ಟ್ ಮ್ಯಾರೀಡ್’ ಚಿತ್ರದ ‘ಕರುಣಾಕರ’ ಪಾತ್ರದಲ್ಲಿ ಖ್ಯಾತ ನಟ ಅಚ್ಯುತ್ ಕುಮಾರ್

‘ಜಸ್ಟ್ ಮ್ಯಾರೀಡ್’ ಚಿತ್ರದ ‘ಕರುಣಾಕರ’ ಪಾತ್ರದಲ್ಲಿ ನಟ ಅಚ್ಯುತ್ ಕುಮಾರ್

Just Married Movie: ಸಿ.ಆರ್.ಬಾಬಿ ಅವರು ಮೊದಲ ಬಾರಿಗೆ ನಿರ್ದೇಶಿಸಿರುವ, ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ʼಜಸ್ಟ್ ಮ್ಯಾರೀಡ್ʼ ಚಿತ್ರದ ಪ್ರಮುಖ ಪಾತ್ರದಲ್ಲಿ ಅಚ್ಯುತ್ ಕುಮಾರ್ ಅವರು ಅಭಿನಯಿಸಿದ್ದಾರೆ. ಇವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.