ಕರ್ನಾಟಕ ಬಜೆಟ್​ ವಿದೇಶ ಪುನೀತ್​ @ 50 ಫ್ಯಾಷನ್​ ಧಾರ್ಮಿಕ ಕ್ರೈಂ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Chakravarthy Sulibele: ಅನ್ಯ ಧರ್ಮೀಯರನ್ನು ಮದುವೆಯಾಗಲು ಕರೆ ಕೊಟ್ಟಿದ್ದ ಸೂಲಿಬೆಲೆ ವಿರುದ್ಧ ಎಫ್‌ಐಆರ್‌

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು

Chakravarthy Sulibele: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪ್ರಚೋದನಕಾರಿ ಭಾಷಣ ಮಾಡಿ,‌ ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ನೀಡಿದ ದೂರಿನ‌ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

CM Siddaramaiah: ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು ನಿರ್ಮಲಾ ಸೀತಾರಾಮನ್ ಬಳಿ 3 ಬಾರಿ ಮನವಿ ಮಾಡಿದ್ದೆವು, ಆದ್ರೂ ನ್ಯಾಯ ಸಿಗಲಿಲ್ಲ: ಸಿಎಂ

ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು ಮನವಿ ಮಾಡಿದ್ರೂ ನ್ಯಾಯ ಸಿಗಲಿಲ್ಲ: ಸಿಎಂ

CM Siddaramaiah: ನಿರ್ಮಲಾ ಸೀತಾರಾಮನ್ ಅವರನ್ನು ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು, ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಒದಗಿಸಿ ಎಂದು ಮೂರು ಬಾರಿ ಭೇಟಿಯಾಗಿ ಮನವಿ ಮಾಡಿದ್ದರೂ, ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಘೋಷಿಸಿದ್ದರೂ ಒಂದು ರೂಪಾಯಿ ಬರಲಿಲ್ಲ. ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Power Star Fashion: ಹೀಗಿತ್ತು ನಮ್ಮ ನಿಮ್ಮೆಲ್ಲರ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸ್ಟೈಲಿಂಗ್!

ಹೀಗಿತ್ತು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸ್ಟೈಲಿಂಗ್!

Power Star Fashion: ನಮ್ಮ ನಿಮ್ಮೆಲ್ಲರ ನೆನಪಿನಾಳದಲ್ಲಿ ಉಳಿದಿರುವ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಒಂದೊಂದು ಸಿನಿಮಾ ಲುಕ್ & ಸ್ಟೈಲಿಂಗ್ ಸಾಕಷ್ಟು ಅಭಿಮಾನಿಗಳನ್ನು ಗಳಿಸಿತ್ತು, ಮಾದರಿಯಾಗಿತ್ತು. ಸಾಕಷ್ಟು ಬಾರಿ ಟ್ರೆಂಡ್ ಕೂಡ ಸೆಟ್ ಮಾಡಿತ್ತು. ಅವರ ಹುಟ್ಟಿದ ದಿನದ ಹಿನ್ನೆಲೆಯಲ್ಲಿ ಅಪ್ಪು ಅವರ ಫ್ಯಾಷನ್ & ಸ್ಟೈಲ್ ಸ್ಟೇಟ್‌ಮೆಂಟ್ಸ್ ಕುರಿತ ಹಳೆಯ ಸಂದರ್ಶನದ ಸಾರಾಂಶವನ್ನು ಇಲ್ಲಿ ಪ್ರಸ್ತುತಪಡಿಸಲಾಗಿದೆ. ಈ ಮೂಲಕ ಅವರಿಗೆ ವಿಶ್ವವಾಣಿ ನ್ಯೂಸ್‌ನ ಫ್ಯಾಷನ್ ಲೋಕ ನಮನ ಸಲ್ಲಿಸಿದೆ.

Karnataka Weather: ನಾಳೆ ಮೈಸೂರು, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

ನಾಳೆ ಮೈಸೂರು, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟ ಆಕಾಶವಿರಲಿದೆ. ಮಧ್ಯಾಹ್ನ/ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WCD Karnataka Recruitment 2025: ಅಂಗನವಾಡಿಯಲ್ಲಿದೆ ಬರೋಬ್ಬರಿ 2,500 ಹುದ್ದೆ; ಪರೀಕ್ಷೆ ಇಲ್ಲ, ನೇರ ನೇಮಕಾತಿ

ಅಂಗನವಾಡಿಯಲ್ಲಿದೆ ಬರೋಬ್ಬರಿ 2,500 ಹುದ್ದೆ

Job Guide: ಕರ್ನಾಟಕದಲ್ಲೇ ಉತ್ತಮ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ರಾಜ್ಯಾದ್ಯಂತ ಖಾಲಿ ಇರುವ ಬರೋಬ್ಬರಿ 2,500 ಅಂಗನವಾಡಿ ವರ್ಕರ್‌ ಮತ್ತು ಹೆಲ್ಪರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏ. 4.

CM Siddaramaiah: 36 ಸಾವಿರ ಕೋಟಿ ಬಾಕಿ ಬಿಲ್‌ಗಳು ಬಿಜೆಪಿಯ ಬಳುವಳಿ: ಸಿಎಂ ಸಿದ್ದರಾಮಯ್ಯ

36 ಸಾವಿರ ಕೋಟಿ ಬಾಕಿ ಬಿಲ್‌ಗಳು ಬಿಜೆಪಿಯ ಬಳುವಳಿ: ಸಿಎಂ ಸಿದ್ದರಾಮಯ್ಯ

CM Siddaramaiah: ಬಿಜೆಪಿ ಅಧಿಕಾರದಲ್ಲಿದ್ದಾಗ ಕ್ಯಾಪಿಟಲ್ ಹೂಡಿಕೆಗಳಿಗೆ 2,70,695 ಕೋಟಿ ಕಾಮಗಾರಿಗಳನ್ನು ಅನುದಾನ ಒದಗಿಸದೇ ತೆಗೆದುಕೊಂಡಿರಿ. ಮುಖ್ಯಮಂತ್ರಿಗಳ ವಿಶೇಷ ಅನುದಾನದ ಮೂಲಕ 1,66,426 ಕೋಟಿ ನೀಡಲಾಗಿದೆ. 36 ಸಾವಿರ ಕೋಟಿ ಬಾಕಿ ಬಿಲ್‌ಗಳು ನಿಮ್ಮ ಬಳುವಳಿ. ನಿಮ್ಮಿಂದ ನಾವು ಕಷ್ಟಪಡುವ ಸಂದರ್ಭ ಒದಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

Puneeth Rajkumar Birthday: ಪುನೀತ್ ಹುಟ್ಟುಹಬ್ಬದ ಹಿನ್ನೆಲೆ ಹಿರಿಯ ನಾಗರಿಕರಿಗೆ ವಾಕರ್ ವಿತರಿಸಿದ ನಟ ವಿನೋದ್ ರಾಜ್

ಪುನೀತ್ ಹುಟ್ಟುಹಬ್ಬ; ಹಿರಿಯ ನಾಗರಿಕರಿಗೆ ವಾಕರ್ ವಿತರಿಸಿದ ನಟ ವಿನೋದ್ ರಾಜ್

Puneeth Rajkumar Birthday: ನೆಲಮಂಗಲದ ಮಂಚೇನಹಳ್ಳಿ ಗ್ರಾಮದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಯುವಕರ ಸಂಘದಿಂದ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬವನ್ನು ಸೋಮವಾರ ಆಚರಣೆ‌ ಮಾಡಲಾಗಿತ್ತು. ಈ ವೇಳೆ ವಿನೋದ್ ರಾಜ್ ಅವರು, ಹಿರಿಯ ನಾಗರಿಕರಿಗೆ ವಾಕರ್‌ಗಳನ್ನು ವಿತರಿಸಿದ್ದಾರೆ.

Lakshmi Hebbalkar: ಮತೀಯ ಶಕ್ತಿಗಳ ಮೇಲೆ ನಿಗಾ ವಹಿಸಿ: ಯುವ ಕಾಂಗ್ರೆಸ್‌ ಕಾರ್ಯಕರ್ತರಿಗೆ ಲಕ್ಷ್ಮೀ ಹೆಬ್ಬಾಳಕರ್‌ ಕರೆ

ಮತೀಯ ಶಕ್ತಿಗಳ ಮೇಲೆ ನಿಗಾ ವಹಿಸಿ: ಲಕ್ಷ್ಮೀ ಹೆಬ್ಬಾಳಕರ್‌ ಕರೆ

Lakshmi Hebbalkar: ಬಿಜೆಪಿ, ಆರ್‌ಎಸ್‌ಎಸ್‌, ಎಬಿವಿಪಿ ಇವೆಲ್ಲದರ ಬಗ್ಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಅತ್ಯಂತ ನಿಗಾ ವಹಿಸಬೇಕಿದೆ. ನಗರ, ಹಳ್ಳಿಗಳೆನ್ನದೆ ಎಲ್ಲ ಕಡೆಗಳಲ್ಲೂ ಬಹಳ ಸೂಕ್ಷ್ಮವಾಗಿ ಮತೀಯ ಶಕ್ತಿಗಳ ಮೇಲೆ ಕಣ್ಣು ಇಡಬೇಕಾಗಿದೆ. ಹೆಚ್ಚು ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷದ ಕಾರ್ಯಕ್ರಮಗಳು, ಯೋಜನೆಗಳನ್ನು ಯುವ ಕಾಂಗ್ರೆಸ್‌ ಕಾರ್ಯಕರ್ತರು ಜನತೆಗೆ ತಿಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.

Car Accident: ವಿಜಯಪುರದಲ್ಲಿ ಭೀಕರ ಅಪಘಾತ; ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ದುರ್ಮರಣ

ವಿಜಯಪುರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ದುರ್ಮರಣ

Car Accident: ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಘಟನೆ ನಡೆದಿದೆ. ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ತೆರಳುತ್ತಿದ್ದಾಗ ಸ್ವಿಫ್ಟ್ ಡಿಸೈರ್ ಕಾರು ಅಪಘಾತಕ್ಕೀಡಾಗಿದೆ. ಕಾರು ಮರಕ್ಕೆ ಡಿಕ್ಕಿಯಾದ ಹಿನ್ನೆಲೆ ಗಂಭೀರವಾಗಿ ಗಾಯಗೊಂಡ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Dr Bro: ಡಾ.ಬ್ರೋ ವಿರುದ್ಧ ಆಟೋ, ಕ್ಯಾಬ್‌ ಚಾಲಕರ ಆಕ್ರೋಶ; ಕಾರಣವೇನು?

ಡಾ.ಬ್ರೋ ವಿರುದ್ಧ ಆಟೋ, ಕ್ಯಾಬ್‌ ಚಾಲಕರ ಆಕ್ರೋಶ; ಕಾರಣವೇನು?

Dr Bro: ʼನಮ್ಮ ಯಾತ್ರಿʼ ಅಪ್ಲಿಕೇಶನ್‌ ಬಗ್ಗೆ ವಿಡಿಯೊವೊಂದನ್ನು ಡಾ.ಬ್ರೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಕಮಿಷನ್‌ ಇಲ್ಲ, ಕೇವಲ ಸರಳವಾದ ವೇದಿಕೆ ಎಂದು ತಿಳಿಸಿದ್ದಾರೆ. ಹೀಗಾಗಿ ಡಾ. ಬ್ರೋ ವಿರುದ್ಧ ಆಟೋ ಹಾಗೂ ಕ್ಯಾಬ್‌ ಚಾಲಕರು ಆಕ್ರೋಶ ಹೊರಹಾಕುತ್ತಿದ್ದಾರೆ.

Puneeth Rajkumar: ಪುನೀತ್‌ @50: ಕನ್ನಡದ ಪವರ್‌ ಸ್ಟಾರ್‌ ನಟಿಸಿದ ಟಾಪ್‌ 10 ಮೂವಿಗಳು ಯಾವುದು ಗೊತ್ತಾ?

ಅಪ್ಪು ನಟಿಸಿದ ಅತ್ಯುತ್ತಮ ಸಿನೆಮಾಗಳಿವು.

ಮಾರ್ಚ್ 17, ಕನ್ನಡದ ಸೂಪರ್‌ಸ್ಟಾರ್ ಆಗಿರುವ ಪವರ್‌ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 50ನೇ ಜನ್ಮದಿನ. ಅವರು 2021ರಲ್ಲಿ ಹಠಾತ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಅವರ ಅಕಾಲಿಕ ಮರಣವು ರಾಷ್ಟ್ರದಾದ್ಯಂತ ಆಘಾತದ ಅಲೆಗಳನ್ನು ಎಬ್ಬಿಸಿತ್ತು.. ಅವರ ಜನ್ಮ ದಿನದಂದು, ಅವರು ನಟಿಸಿದ ಟಾಪ್‌ 10 ಮೂವಿಗಳ ಬಗ್ಗೆ ಸಣ್ಣ ಪರಿಚಯ ಇಲ್ಲಿದೆ ನೋಡಿ.

CM Siddaramaiah: ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ: ಸಾಲ ಮಾತ್ರ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ನಮಗೆ ಕೊಟ್ಟಿದ್ದು ಅನುದಾನವಲ್ಲ, ಸಾಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಗರು ಸುಳ್ಳು ಹೇಳುತ್ತಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನಮಗೆ ನ್ಯಾಯವಾಗಿ ಸಲ್ಲಬೇಕಾದ ಅನುದಾನವನ್ನು ನೀಡಿಲ್ಲ. ಬದಲಾಗಿ ಬಡ್ಡಿರಹಿತ ಸಾಲವನ್ನು ಮಾತ್ರ ನೀಡಿದೆ ಎಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಕುರಿತ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.

Puneeth Rajkumar: ಪುನೀತ್ ರಾಜ್‌ಕುಮಾರ್ ಅವರನ್ನು 'ಕರ್ನಾಟಕದ ಪವರ್ ಸ್ಟಾರ್' ಎಂದು ಏಕೆ ಕರೆಯುತ್ತಾರೆ ಗೊತ್ತಾ?

ಪುನೀತ್‌ಗೆ 'ಪವರ್ ಸ್ಟಾರ್' ಬಿರುದು ಕೊಟ್ಟಿದ್ದು ಯಾರು ಗೊತ್ತಾ?

ಪುನೀತ್‌ ನಮ್ಮನಗಲಿ ಮೂರೂವರೆ ವರ್ಷಗಳು ಕಳೆದರೂ, ಅವರ ಸಿನಿಮಾಗಳು(cinema) ಇಂದಿಗೂ ಕನ್ನಡಿಗರ ಮನದಲ್ಲಿ ಹಚ್ಚಹಸುರಾಗಿ ಉಳಿದಿವೆ. ಅವರ ನಟನೆ ಮಾತ್ರವಲ್ಲದೆ ವೈಯಕ್ತಿಕ ಜೀವನದಲ್ಲಿಯೂ ಅವರು ತೋರಿದ ಸರಳತೆ, ಪರೋಪಕಾರ, ಸಾಮಾಜಿಕ ಕಳಕಳಿಯಿಂದಾಗಿ ಅಭಿಮಾನಿಗಳು ಅವರನ್ನು ʼಪವರ್‌ ಸ್ಟಾರ್‌ʼ(Power Star) ಎಂದು ಕರೆಯುತ್ತಾರೆ... ಹಾಗಾದ್ರೆ ಅಪ್ಪುವನ್ನು ಯಾಕೆ ಪವರ್ ಸ್ಟಾರ್ ಅಂತ ಕರೆಯುವುದೇಗೆ ಯಾಕೆ...? ಇಲ್ಲಿದೆ ಉತ್ತರ

CM Siddaramaiah: ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ ಬಿಜೆಪಿ: ಸಿಎಂ ಸಿದ್ದರಾಮಯ್ಯ ಟೀಕೆ

ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ ಬಿಜೆಪಿ: ಸಿಎಂ ಸಿದ್ದರಾಮಯ್ಯ ಟೀಕೆ

ಸರ್ಕಾರದ ಸಚಿವರುಗಳು, ಅಧಿಕಾರಿಗಳು ನನ್ನಲ್ಲಿಗೆ ಬಂದು ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ ಎಂದು ಬಿಜೆಪಿಯವರಿಗೆ ನೇರ ಪ್ರಶ್ನೆ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಗ್ಯಾರಂಟಿಗಳನ್ನು ಟೀಕಿಸಿ, ನಮ್ಮ ಗ್ಯಾರಂಟಿಗಳನ್ನೇ ಕದ್ದು "ಮೋದಿ ಗ್ಯಾರಂಟಿ" ಎಂದು ಹೆಸರು ಬದಲಾಯಿಸಿ ಬಿಜೆಪಿ ಘೋಷಿಸಿದೆ ಎಂದು ವಿವರಿಸಿದರಲ್ಲದೆ, ಈ ವೇಳೆ "ಮೋದಿ ಗ್ಯಾರಂಟಿ" ಜಾಹೀರಾತು ಪ್ರದರ್ಶಿಸಿದರು.

CM Siddaramaiah: ಸರ್ಕಾರದ ವಾಸ್ತವ ಕಾರ್ಯಕ್ರಮಗಳಿಗೆ ರಾಜ್ಯಪಾಲರ ಶ್ಲಾಘನೆ: ಸಿಎಂ ಸಿದ್ದರಾಮಯ್ಯ

ಸರ್ಕಾರದ ವಾಸ್ತವ ಕಾರ್ಯಕ್ರಮಗಳಿಗೆ ರಾಜ್ಯಪಾಲರ ಶ್ಲಾಘನೆ: ಸಿಎಂ ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರ ನೀಡಿದರು. ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಶ್ಲಾಘಿಸಿದ್ದಾರೆ ಎಂದರು.

Kyasanur Forest Disease: ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕ್ಕಮಗಳೂರಲ್ಲಿ ಮಹಿಳೆ ಸಾವು

ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕ್ಕಮಗಳೂರಲ್ಲಿ ಮಹಿಳೆ ಸಾವು

ಮೃತ ಕಮಲಾ ಅವರು ಚಿಕ್ಕಮಗಳೂರಿನ ಎನ್‌ಆರ್ ಪುರದ ಮೇಲ್ಪಾಲ್ ಗ್ರಾಮದಲ್ಲಿನ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಕಮಲಾ ಅವರನ್ನು ಮಂಗನಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ ಅದು ದೃಢಪಟ್ಟಿತ್ತು.

Puneeth Rajkumar: ನಗುವಿನ ಒಡೆಯ ಅಪ್ಪು ಬಗ್ಗೆ ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವು

ರಾಜಕುಮಾರನ ಬಗ್ಗೆ ನೀವರಿಯದ ಇಂಟ್ರೆಸ್ಟಿಂಗ್ ಸಂಗತಿಗಳಿವು

ಇಂದು ಪುನೀತ್ ಜನ್ಮದಿನ. ಅವರ ಅನುಪಸ್ಥಿತಿಯ ನಡುವೆಯೂ ಹಲವು ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಪುನೀತ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರ ಬಗೆಗಿನ ಇನ್ನಷ್ಟು ಇಂಟ್ರಸ್ಟಿಂಗ್ ಫ್ಯಾಕ್ಟ್ಸ್ ಇಲ್ಲಿವೆ ಓದಿ.

Gold Price Today: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಮುಖ; ರೇಟ್‌ ಇಲ್ಲಿ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಸೋಮವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಇಳಿಕೆ ಆಗಿ 8,210 ರೂ. ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಇಳಿಕೆಯಾಗಿ 8,956 ರೂ.ಗೆ ತಲುಪಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನ 65,680 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 82,100 ರೂ. ಮತ್ತು 100 ಗ್ರಾಂಗೆ 8,21,000 ರೂ. ನೀಡಬೇಕಾಗುತ್ತದೆ.

Jaggesh Birthday: ಇಂದು ಜಗ್ಗೇಶ್ ಜನ್ಮದಿನ, ಪ್ರಧಾನಿ ಮೋದಿಯಿಂದ ಹಾರೈಕೆ ಪತ್ರ

ಇಂದು ಜಗ್ಗೇಶ್ ಜನ್ಮದಿನ, ಪ್ರಧಾನಿ ಮೋದಿಯಿಂದ ಹಾರೈಕೆ ಪತ್ರ

ನವರಸ ನಾಯಕ, ರಾಜ್ಯಸಭೆ ಸದಸ್ಯ ಜಗ್ಗೇಶ್‌ ಇಂದು ತಮ್ಮ 62ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಬಂದ ಶುಭ ಹಾರೈಕೆಯ ಪತ್ರವನ್ನು ಅವರು ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡು ಹಿಗ್ಗು ವ್ಯಕ್ತಪಡಿಸಿದ್ದಾರೆ.

Fake currecy: ಬೃಹತ್ ಖೋಟಾ ನೋಟು ಜಾಲ ಬಯಲು, ಕಾನ್‌ಸ್ಟೇಬಲ್ ಸೇರಿ ನಾಲ್ವರು ಆರೆಸ್ಟ್

ಬೃಹತ್ ಖೋಟಾ ನೋಟು ಜಾಲ ಬಯಲು, ಕಾನ್‌ಸ್ಟೇಬಲ್ ಸೇರಿ ನಾಲ್ವರು ಆರೆಸ್ಟ್

ರಾಯಚೂರಿನ ಗುಪ್ತ ಸ್ಥಳದಲ್ಲಿ ಖೋಟಾನೋಟು ತಯಾರಿ ನಡೆಸಲಾಗುತ್ತಿದ್ದು, ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದಾಳಿಯ ವೇಳೆ ಖೋಟಾನೋಟು ತಯಾರಿಸಲು ಬಳಸಲಾಗುವ ಯಂತ್ರಗಳು, ಇಂಕ್‌, ಮುದ್ರಿಸಿದ ನೋಟುಗಳು ಇತ್ಯಾದಿಗಳನ್ನು ವಶಪಡಿಸಿಕೊಂಡಿದ್ದಾರೆ. ನಾಲ್ವರನ್ನು ಬಂಧಿಸಲಾಗಿದೆ.

Food Poison: ಹೋಳಿ ಹಬ್ಬದ ಪಾರ್ಟಿಯಲ್ಲಿ ಕಲುಷಿತ ಆಹಾರ ಸೇವನೆ, ವಿದ್ಯಾರ್ಥಿ ಸಾವು, 6 ಮಂದಿ ಮೇಲೆ ಎಫ್‌ಐಆರ್

ಹೋಳಿ ಪಾರ್ಟಿಯಲ್ಲಿ ವಿಷಾಹಾರ, ವಿದ್ಯಾರ್ಥಿ ಸಾವು, 6 ಮಂದಿ ಮೇಲೆ ಎಫ್‌ಐಆರ್

ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.‌ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ಚಸ್ಥಗೊಂಡಿದ್ದರು.

Puneeth Rajkumar birthday: ಇಂದು ಪುನೀತ್‌ 50ನೇ ಜನ್ಮದಿನ, ಧ್ರುವ 369 ಸಿನಿಮಾ ಟೀಸರ್‌ ರಿಲೀಸ್‌

ಇಂದು ಪುನೀತ್‌ 50ನೇ ಜನ್ಮದಿನ, ಧ್ರುವ 369 ಸಿನಿಮಾ ಟೀಸರ್‌ ರಿಲೀಸ್‌

ಇಂದು ಪುನೀತ್‌ ರಾಜ್‌ಕುಮಾರ್‌ ಅವರ 50ನೇ ಜನ್ಮದಿನವನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದು, ಮರಳಿ ಬಿಡುಗಡೆಯಾಗಿರುವ ಅವರ ʼಅಪ್ಪುʼ ಸಿನಿಮಾವನ್ನು ನೋಡಿ ಸಂಭ್ರಮಿಸುತ್ತಿದ್ದಾರೆ. ಜೊತೆಗೆ ರಾಜ್-‌ ಪುನೀತ್‌ ಪ್ರತಿಸೃಷ್ಟಿಯ 369 ಸಿನಿಮಾದ ಟೀಸರ್‌ ಕೂಡ ರಿಲೀಸ್‌ ಆಗಿದೆ.

Viral Video: ಲಾಲ್‌ಬಾಗ್‌ನಲ್ಲಿ ಹೋಳಿ ಸಂದರ್ಭ ನೇಪಾಳಿ ಗುಂಪುಗಳ ಘರ್ಷಣೆ

ಲಾಲ್‌ಬಾಗ್‌ನಲ್ಲಿ ಹೋಳಿ ಸಂದರ್ಭ ನೇಪಾಳಿ ಗುಂಪುಗಳ ಘರ್ಷಣೆ

ನೇಪಾಳಿ ಯುವಕರು ದೊಣ್ಣೆಗಳಿಂದ ಹೊಡೆದಾಡಿಕೊಳ್ಳುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಾಲ್‌ಬಾಗ್ ಉದ್ಯಾನದಲ್ಲಿ ಶುಕ್ರವಾರ ಸಂಜೆ ಹೋಳಿ ಆಚರಣೆ ನಡೆದಿತ್ತು. ಈ ವೇಳೆ ನೇಪಾಳಿ ಮೂಲದವರ ಎರಡು ಗುಂಪುಗಳು ಹಿಂಸಾತ್ಮಕವಾಗಿ ಘರ್ಷಣೆ ನಡೆಸಿದರು.

Murder Case: ಸ್ನೇಹಿತರಿಂದಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಸ್ನೇಹಿತರಿಂದಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಕೊಲೆಯಾದ ರೇವಣಸಿದ್ದ ಫೈನಾನ್ಸ್ ನಡೆಸುತ್ತಿದ್ದ. ಸಂಜೆ ಆರು ಗಂಟೆ ಸುಮಾರಿಗೆ ಎಂದಿನಂತೆ ಮನೆಯಿಂದ ಆಚೆ ಹೋಗಿದ್ದಾನೆ. ಪ್ರತಿನಿತ್ಯ ಹತ್ತು, ಹನ್ನೊಂದು ಗಂಟೆ ಸುಮಾರಿಗೆ ಮನೆಗೆ ವಾಪಸ್ ಬರ್ತಿದ್ದ. ಆದರೆ ನಿನ್ನೆ ರಾತ್ರಿ ಹನ್ನೆರೆಡು ಗಂಟೆ ಕಳೆದರೂ ಕೂಡ ವಾಪಸ್‌ ಬಂದಿರಲಿಲ್ಲ.