ಮಹಾಲಕ್ಷ್ಮಿ ಹಬ್ಬದ ದಿನವೇ ತಾಯಿ–ಮಗನ ದಾರುಣ ಅಂತ್ಯ
ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಮೂಲದ ನಾಗಮಣಿ (35) ಹಾಗೂ ಅವರ ಪುತ್ರ ಗಗನ್ (14) ಮೃತರು. ಹಬ್ಬದ ಹಿನ್ನೆಲೆಯಲ್ಲಿ ಮನೆಯಲ್ಲಿ ಪೂಜೆ ಹಾಗೂ ಆಚರಣೆಗೆ ಅಗತ್ಯವಾದ ಸಾಮಗ್ರಿಗಳನ್ನು ಖರೀದಿಸಲು ನಗರಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಂಬೇಡ್ಕರ್ ವೃತ್ತದ ಬಳಿ ತಾಯಿ–ಮಗ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಬಸ್ ಅವರ ಮೇಲೆ ಹರಿದಿದೆ. ಘಟನೆಯಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ ಎನ್ನಲಾಗಿದೆ