ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Gubbi News: ರಾಸಾಯನಿಕಯುಕ್ತ ಆಹಾರವೇ ಕ್ಯಾನ್ಸರ್ ಗೆ ಮೂಲ: ಅನುಪಮಾ ಡಿ.

ರಾಸಾಯನಿಕಯುಕ್ತ ಆಹಾರವೇ ಕ್ಯಾನ್ಸರ್ ಗೆ ಮೂಲ

ಹದಿನಾಲ್ಕು, ಹದಿನೈದು ವಯಸ್ಸಿನ ಹೆಣ್ಣುಮಕ್ಕಳು ಗರ್ಭಕಂಠಕ ಕ್ಯಾನ್ಸರ್ ವಿರುದ್ಧ ಲಸಿಕೆಯನ್ನು ಹಾಕಿಸಿಕೊಂಡು ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಬೇಕಾಗುತ್ತದೆ. ಕರೋನಾ ಸಮಯದಲ್ಲಿ ವೈದ್ಯರು ಹೆದರಿ ಚಿಕಿತ್ಸೆ ನೀಡದಿದ್ದರೆ ನಾವುಗಳು ಇನ್ನು ಹೆಚ್ಚು ಸಾವಿನ ಸಂಖ್ಯೆಯನ್ನು ಕಾಣ ಬೇಕಾಗುತ್ತಿತ್ತು.

Gauribidanur News: 65 ಲಕ್ಷ ವೆಚ್ಚದ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಭೂಮಿಪೂಜೆ

65 ಲಕ್ಷ ವೆಚ್ಚದ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಭೂಮಿಪೂಜೆ

ಗ್ರಾಮೀಣ ಪ್ರದೇಶದ ಜನತೆಗೆ ನಗರ ಮಟ್ಟದ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಅವರ ಗ್ರಾಮ ದಲ್ಲಿಯೇ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ. ಅದರ ಭಾಗವಾಗಿಯೇ ಜೀಲಾ ಕುಂಟೆ ಗ್ರಾಮದಲ್ಲಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರ ನಿರ್ಮಾಣವಾಗುತ್ತಿದೆ

ಜಿಲ್ಲೆಗೆ 6449 ಕೋಟಿ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ 753.76 ಕೋಟಿ ಅನುದಾನ ತಂದಿದ್ದೇನೆ: ಸಂಸದ ಡಾ.ಕೆ.ಸುಧಾಕರ್

ಜಿಲ್ಲೆಗೆ 6449 ಕೋ., ಚಿಕ್ಕಬಳ್ಳಾಪುರಕ್ಕೆ 753.76 ಕೋ. ಅನುದಾನ ತಂದಿದ್ದೇನೆ

ತಾವು ಸಂಸದರಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯೋಜನೆ ಗಳಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ ರೂ.6,449 ಕೋಟಿ ಹಾಗೂ ಚಿಕ್ಕಬಳ್ಳಾ ಪುರ ವಿಧಾನಸಭಾ ಕ್ಷೇತ್ರಕ್ಕೆ ರೂ.753.76 ಕೋಟಿ ಅನುದಾನ ತಂದಿರುವುದಾಗಿ ಸಂಸದ ಡಾ.ಕೆ. ಸುಧಾಕರ್(MP Dr K Sudhakar) ತಿಳಿಸಿದರು

MP Dr.K.Sudhakar: ಸಚಿವ ಸ್ಥಾನಕ್ಕೆ ಲಾಬಿ ಮಾಡುವ ಪೈಕಿ ನಾನಲ್ಲ: ಸಂಸದ ಡಾ.ಕೆ.ಸುಧಾಕರ್ ಹೇಳಿಕೆ

ಸಚಿವ ಸ್ಥಾನಕ್ಕೆ ಲಾಬಿ ಮಾಡುವ ಪೈಕಿ ನಾನಲ್ಲ

ನಮ್ಮ ಪ್ರಧಾನ ಮಂತ್ರಿಗಳಿಗೆ ಯಾರು ಕೆಲಸ ಮಾಡುತ್ತಿದ್ದಾರೆ. ಪಾರ್ಲಿಮೆಂಟ್ ಕೆಲಸ ಏನು ಮಾಡು ತ್ತಾರೆ? ಸಮಿತಿಗಳಲ್ಲಿ ಏನು ಕೆಲಸ ಮಾಡುತ್ತಾರೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಅವರಿಗೆ ತಿಳಿದಿದೆ. ಇದನ್ನು ಇಟ್ಟುಕೊಂಡು ಆಯಾ ಸಂದರ್ಭಕ್ಕೆ ತಕ್ಕಂತೆ ಯಾರನ್ನು ತೆಗೆಯಬೇಕು? ಯಾರನ್ನು ಸಚಿವ ರನ್ನು ಮಾಡಬೇಕು ಎಂಬುದು ಅವರಿಗಿರುವ ಪರಮೋಚ್ಛ ಅಧಿಕಾರ ಎಂದರು.

Bike wheeling: ಆಂಬ್ಯುಲೆನ್ಸ್​ಗೆ ದಾರಿ ಬಿಡದೆ ವ್ಹೀಲಿಂಗ್ ಮಾಡಿದ್ದ ಆರು ಮಂದಿ ವಶಕ್ಕೆ; ದ್ವಿಚಕ್ರ ವಾಹನಗಳ ಜಪ್ತಿ

ಆಂಬ್ಯುಲೆನ್ಸ್​ಗೆ ದಾರಿ ಬಿಡದೆ ವ್ಹೀಲಿಂಗ್ ಮಾಡಿದ್ದ ಆರು ಮಂದಿ ವಶಕ್ಕೆ

ಬೆಂಗಳೂರಿನಲ್ಲಿ ಆಂಬ್ಯುಲೆನ್ಸ್ ದಾರಿ ಬಿಡದೇ ಕೆಲವರು ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದರು. ದ್ವಿಚಕ್ರ ವಾಹನ ನೋಂದಣಿ ಸಂಖ್ಯೆ ಆಧರಿಸಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿರುವ ಪೊಲೀಸರು, ವ್ಹೀಲಿಂಗ್ ಮಾಡಿದ್ದ ಮೂರು ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಿಕೊಂಡಿದ್ದಾರೆ.

Chikkaballapur News: 1800 ಶಾಲೆ-ಕಾಲೇಜುಗಳಿಗೆ ವಿಸ್ತರಣೆ; 35 ಸಾವಿರಕ್ಕೂ ಹೆಚ್ಚು ಸಸಿ ನೆಡುವ ಗುರಿ

ಚಿಕ್ಕಬಳ್ಳಾಪುರದಲ್ಲಿ ಈಶ ಔಟ್‌ರೀಚ್ ‘ಹಸಿರು ಶಾಲೆ’ ಯೋಜನೆಗೆ ಚಾಲನೆ

ಕಡಿಮೆ ಮಳೆಯಾಗುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪರಿಸರ ಸಮತೋಲನ ಕಾಪಾಡಲು ಹಾಗೂ ಮಣ್ಣಿನ ಸಂರಕ್ಷಣೆಗೆ ವ್ಯಾಪಕ ಪ್ರಮಾಣದಲ್ಲಿ ಗಿಡಗಳನ್ನು ಬೆಳೆಸುವುದು ಅತ್ಯಗತ್ಯ ಎಂದು ಹೇಳಿದರು. ಪರಿಸರ ಜಾಗೃತಿ ಮೂಡಿಸುವಲ್ಲಿ ಈಶ ಔಟ್‌ರೀಚ್ ಕೈಗೊಂಡಿರುವ ಪ್ರಯತ್ನವನ್ನು ಶ್ಲಾಘಿಸಿದರು

ಕರ್ನಾಟಕದ ಅಡಕೆ ವಾಹನಗಳಿಗಿಲ್ಲ ಮಹಾರಾಷ್ಟ್ರದಲ್ಲಿ ತಡೆ;‌ ಮಹಾ ಸಿಎಂ ಜತೆ ಪ್ರಲ್ಹಾದ್‌ ಜೋಶಿ ಯಶಸ್ವಿ ಮಾತುಕತೆ

ಕರ್ನಾಟಕದ ಅಡಕೆ ವಾಹನಗಳಿಗಿಲ್ಲ ಮಹಾರಾಷ್ಟ್ರದಲ್ಲಿ ತಡೆ

Pralhad Joshi: ಮಹಾರಾಷ್ಟ್ರದಲ್ಲಿ ರಾಜ್ಯದ ಅಡಕೆ ಸರಕುಳ್ಳ ಲಾರಿಗಳನ್ನು ತಡೆಹಿಡಿದಿರುವ ಬಗ್ಗೆ ಅಲ್ಲಿನ ಸಿಎಂ ದೇವೇಂದ್ರ ಫಡ್ನವೀಸ್ ಜತೆ ಚರ್ಚಿಸಿ, ಬಿಡುಗಡೆಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಮನವೊಲಿಸಿದ್ದಾರೆ. ಈ ಮೂಲಕ ಕರ್ನಾಟಕದ ರೈತರ ಮತ್ತು ಅಡಕೆ ವರ್ತಕರ, ಪ್ರಮುಖ ಅಡಕೆ ಸಹಕಾರಿ ಸಂಸ್ಥೆಗಳ ಸಮಸ್ಯೆ ಪರಿಹರಿಸಿದ್ದಾರೆ.

Chikkaballapur News: ಪೈಪ್‌ಲೈನ್ ದುರಸ್ತಿಯಿಂದ ಜು.8ರಿಂದ 13ರವರೆಗೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಜಕ್ಕಲಮಡಗು ಜಲಾಶಯದಲ್ಲಿ ಮೂರು ತಿಂಗಳಿಗಷ್ಟೇ ನೀರು

ಜಲಾಶಯದ ನೀರು ಲಭ್ಯವಾಗದ ಸಂದರ್ಭದಲ್ಲಿ ನಗರವು ತಾತ್ಕಾಲಿಕವಾಗಿ ಕೊಳವೆ ಬಾವಿಗಳ ನೀರನ್ನು ಅವಲಂಬಿಸಬೇಕಾಗುವ ಸಾಧ್ಯತೆ ಇದೆ. ಆದರೆ ಅಂತರ್ಜಲದ ಗುಣಮಟ್ಟ ಕುರಿತು ಈಗಾಗಲೇ ಸಾರ್ವಜನಿಕರಲ್ಲಿ ವಿವಿಧ ಅಭಿಪ್ರಾಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ನೀರಿನ ಸಮರ್ಪಕ ನಿರ್ವಹಣೆ ಜಿಲ್ಲಾಡಳಿತ ಮತ್ತು ನಗರಸಭೆಗೆ ಸವಾಲಾಗುವ ಸಾಧ್ಯತೆಯಿದೆ.

ಹಂಪಿ, ಮೈಸೂರು, ಲಕ್ಕುಂಡಿಯನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರಗಳನ್ನಾಗಿ ಪರಿವರ್ತಿಸಲು ಯೋಜನೆ: ಕೆ.ಜೆ. ಜಾರ್ಜ್

ವಾಯು-ರೈಲು ಸಂಪರ್ಕದೊಂದಿಗೆ ರಾಜ್ಯದ 50 ಪ್ರವಾಸಿ ತಾಣಗಳಿಗೆ ಕಾಯಕಲ್ಪ

Vijayanagara News: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 50 ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಯೋಜನೆಯಡಿ ಕರ್ನಾಟಕದ ಐತಿಹಾಸಿಕ ತಾಣಗಳಾದ ಹಂಪಿ, ಮೈಸೂರು ಮತ್ತು ಲಕ್ಕುಂಡಿ ಕ್ಷೇತ್ರಗಳನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರಗಳನ್ನಾಗಿ ಪರಿವರ್ತಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ತೀವ್ರ ಸಿದ್ಧತೆ ನಡೆಸಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

SIR ತಾತ್ಕಾಲಿಕ ತಡೆಗೆ ಎನ್‌ಡಿಎ ಪಟ್ಟು; ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

SIR ತಾತ್ಕಾಲಿಕ ತಡೆಗೆ ಎನ್‌ಡಿಎ ಪಟ್ಟು; ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

ಕರ್ನಾಟಕದಲ್ಲಿ SIR ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಕಾರ್ಯವಿಧಾನ, ನಿಯಮಗಳನ್ನು ಉಲ್ಲಂಘಿಸಿದ ಎಲ್ಲಾ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷದ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್‌ ಅವರಿಗೆ ರಾಜ್ಯದ ಬಿಜೆಪಿ-ಜೆಡಿಎಸ್‌ ನಾಯಕರು ಮನವಿ ಮಾಡಿದ್ದಾರೆ.

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Karnataka SIR: ಎಸ್ಐಆರ್ ಅಕ್ರಮದ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರಿಗೆ ಎನ್‌ಡಿಎ ದೂರು; ರಾಜ್ಯಕ್ಕೆ ವೀಕ್ಷಕರನ್ನು ಕಳುಹಿಸಿದ ಆಯೋಗ

ಎಸ್ಐಆರ್ ಅಕ್ರಮದ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರಿಗೆ ಎನ್‌ಡಿಎ ದೂರು

Election Commission of India: ಕರ್ನಾಟಕದಲ್ಲಿ ನಡೆಯುತ್ತಿರುವ ಎಚ್‌ಐಆರ್‌ ಅಕ್ರಮಗಳ ಬಗ್ಗೆ ಅತ್ಯಂತ ವಿವರವಾಗಿ ಮುಖ್ಯ ಚುನಾವಣಾ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ಬಗ್ಗೆ ತಕ್ಷಣ ಗಮನಹರಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

MP Dr K Sudhakar: ಗೌರಿಬಿದನೂರಿನ ಅಭಿವೃದ್ಧಿಗೆ ಕೇಂದ್ರದಿಂದ ಸಾವಿರಾರು ಕೋಟಿ ಅನುದಾನ: ಸಂಸದ ಡಾ.ಕೆ.ಸುಧಾಕರ್.

ಗೌರಿಬಿದನೂರಿನ ಅಭಿವೃದ್ಧಿಗೆ ಕೇಂದ್ರದಿಂದ ಸಾವಿರಾರು ಕೋಟಿ ಅನುದಾನ

100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ನಿರ್ಮಾಣಕ್ಕೆ 27 ಕೋಟಿ ರೂ., ಜಲ ಜೀವನ್ ಮಿಷನ್ ಯೋಜನೆ ಯಡಿ 296 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗೆ 102.50 ಕೋಟಿ ರೂ., ಅಮೃತ್–2.0 ಯೋಜನೆ ಯಡಿ ನಗರ ನೀರು ಸರಬರಾಜಿಗೆ 66.60 ಕೋಟಿ ರೂ., ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ 398.48 ಕೋಟಿ ರೂ., ಗೌರಿಬಿದನೂರು ಬೈಪಾಸ್‌ಗೆ 40.68 ಕೋಟಿ ರೂ. ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾರೀ ಅನುದಾನ ಬಿಡುಗಡೆಯಾಗಿದೆ

BESCOM: ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆ ಕಾರ್ಯ: ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್

ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್

BESCOM: ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ ಬಿಲ್‌ಗಳನ್ನು ನೀಡಲಾಗುತ್ತದೆ. ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Bengaluru Power Cut: ಜುಲೈ 9ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಜುಲೈ 9ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: 66/11 ಕೆ.ವಿ ಹೆಣ್ಣೂರು ರೋಡ್‌ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜುಲೈ 9ರಂದು ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Haveri Rain: ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಮಳೆ; ಬರದ ಆತಂಕದಲ್ಲಿದ್ದ ರೈತರ ಮುಖದಲ್ಲಿ ಸಂತಸ

ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಮಳೆ; ರೈತರಲ್ಲಿ ಸಂತಸ

Haveri News: ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್, ಸವಣೂರು, ಶಿಗ್ಗಾಂವಿ, ರಾಣೆಬೆನ್ನೂರು ಹಾಗೂ ಹಿರೇಕೆರೂರು ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿದ್ದು, ಅನ್ನದಾತರಲ್ಲಿ ಸಂತಸ ಮೂಡಿಸಿದೆ.

Mallalli Falls: ರೀಲ್ಸ್‌ಗಾಗಿ ದುಸ್ಸಾಹಸ; ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಪಾಯಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ, Video

ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಪಾಯಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ

ಕೊಡಗಿನ ಮಲ್ಲಳ್ಳಿ ಫಾಲ್ಸ್‌ ನೋಡಲು ಸ್ನೇಹಿತರೊಂದಿಗೆ ಬಂದಿದ್ದ ವಿದ್ಯಾರ್ಥಿಗಳು, ಸುರಕ್ಷತಾ ಬೇಲಿಯನ್ನು ಲೆಕ್ಕಿಸದೆ ಹೊಳೆಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದರು. ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ಅವರನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ.

ವೈರಲ್ 'ದುಬೈ ಚಾಕೊಲೇಟ್'ಗೆ ಈಗ ಫುಲ್‌ ಡಿಮ್ಯಾಂಡ್‌; ಬೆಂಗಳೂರಿಗರ ಚಾಕೊಲೇಟ್ ಕ್ರೇಜ್‌ ಬಿಚ್ಚಿಟ್ಟ ಇನ್‌ಸ್ಟಾಮಾರ್ಟ್‌!

ವೈರಲ್ 'ದುಬೈ ಚಾಕೊಲೇಟ್'ಗೆ ಈಗ ಫುಲ್‌ ಡಿಮ್ಯಾಂಡ್‌!

Instamart: ಜುಲೈ 2025 ರಿಂದ ಜೂನ್ 2026 ರವರೆಗೆ ದೇಶದ 130ಕ್ಕೂ ಹೆಚ್ಚು ನಗರಗಳಲ್ಲಿ ಗ್ರಾಹಕರು ಮಾಡಿರುವ ಆರ್ಡರ್‌ಗಳ ಡೇಟಾವನ್ನು ಇನ್‌ಸ್ಟಾಮಾರ್ಟ್ ವಿಶ್ಲೇಷಿಸಿದ್ದು, ವರದಿಯೊಂದನ್ನು ತಯಾರಿಸಿದೆ. ಇದರಲ್ಲಿ ಹಲವು ಅಚ್ಚರಿಯ ವಿಚಾರಗಳು ಹೊರಬಿದ್ದಿವೆ. ಈ ಬಗ್ಗೆ ಡಿಟೇಲ್ಸ್‌ ಇಲ್ಲಿದೆ.

PM Narendra Modi: ವಿವಾಹ ಜೀವನಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ; ನಮೋ ಪತ್ರ ನೋಡಿ ಚಿಕ್ಕಬಳ್ಳಾಪುರದ ನವದಂಪತಿ ಫುಲ್‌ ಖುಷ್‌!

ಚಿಕ್ಕಬಳ್ಳಾಪುರದ ನವದಂಪತಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ

ಚಿಕ್ಕಬಳ್ಳಾಪುರ ತಾಲೂಕಿನ ನುಗುತಹಳ್ಳಿಯ ಯುವಕ ಮಂಜುನಾಥ್ ಹಾಗೂ ತೋಕಲಘಟ್ಟದ ಯುವತಿ ವಿದ್ಯಾಶ್ರೀ ಅವರ ವಿವಾಹವು ಕಳೆದ ಮೇ 13 ರಂದು ಚಿಕ್ಕಬಳ್ಳಾಪುರದ ಕಂದವಾರ ಬಾಗಿಲಿನ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಜೋಡಿಯು ತಮ್ಮ ಮದುವೆಯ ಲಗ್ನ ಪತ್ರಿಕೆಯನ್ನು ಪೋಸ್ಟ್ ಮೂಲಕ ಕಳುಹಿಸಿ ಆಮಂತ್ರಿಸಿತ್ತು.

Bengaluru Murder: ಬಾರ್‌ನಲ್ಲಿ ಜಸ್ಟ್ ಗುರಾಯಿಸಿದ್ದಕ್ಕೆ ಚಾಕು ಇರಿದು ಯುವಕನ ಬರ್ಬರ ಹತ್ಯೆ!

ಜಸ್ಟ್ ಗುರಾಯಿಸಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!

ಬಾರ್‌ನಲ್ಲಿ ಗುರಾಯಿಸಿ ನೋಡಿದ್ದಾನೆ ಎಂಬ ಕಾರಣಕ್ಕೆ ಅಪರಿಚಿತ ವ್ಯಕ್ತಿಗಳು ಗಲಾಟೆ ಆರಂಭಿಸಿ, ಹಲ್ಲೆ ಮಾಡಿದ್ದಾರೆ. ಇದರಿಂದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ರೋಡ್‌ ರೇಜ್‌; ರಸ್ತೆ ಮಧ್ಯೆಯೇ ಕಾರ್ ಅಡ್ಡಗಟ್ಟಿ ಕುಟುಂಬದ ಮೇಲೆ ಅಪರಿಚಿತರಿಂದ ಹಲ್ಲೆ

ಬೆಂಗಳೂ ಕಾರಿನಲ್ಲಿ ಅಡ್ಡಗಟ್ಟಿ ಹಲ್ಲೆ ಎಸಗಿದ ದುಷ್ಕರ್ಮಿಗಳು: ವಿಡಿಯೊ ವೈರಲ್

Viral Video: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ಮೇಲೆ ಅಪರಿಚಿತ ಪುರುಷರ ಗುಂಪೊಂದು ಹಲ್ಲೆ ಎಸಗಿರುವ ಘಟನೆಯೊಂದು ನಡೆದಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಈ ಭೀಕರ ಕೃತ್ಯ ನಡೆದಿದೆ‌. ಹಿಂದೆ ಚಲಿಸುತ್ತಿದ್ದ ವಾಹನದ ಡ್ಯಾಶ್‌ಕ್ಯಾಮ್‌ನಲ್ಲಿ ಈ ಘಟನೆ ಸೆರೆಯಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನನಗೆ ಬದುಕು ಸಾಕಾಗಿದೆ; ಪ್ರಿಯಕರನಿಗೆ ಕೊನೆಯ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ; ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

Bengaluru Student Suicide: ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನಲ್ಲಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಇದಕ್ಕೆ ಪೋಷಕರು ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಕಲಬುರಗಿಯನ್ನ ಬರಪೀಡಿತ ಜಿಲ್ಲೆಯೆಂದು ಘೋಷಿಸಲು ಸಿಎಂಗೆ ಬಿಜೆಪಿ ನಿಯೋಗ ಮನವಿ

ಕೃಷಿ ಸಾಲ ಮನ್ನಾ, ಎಕರೆಗೆ 50 ಸಾವಿರ ಪರಿಹಾರಕ್ಕೆ ಆಗ್ರಹ

ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ. ಬಿ.ಜಿ ಪಾಟೀಲ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು, ಜಿಲ್ಲೆಯ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು.

KKCCI: ಕಲ್ಯಾಣ ಕರ್ನಾಟಕದ ಸಮಗ್ರ ಪ್ರಗತಿಗೆ ವಿಶೇಷ ‘ಬೆಳವಣಿಗೆ ಮಿಷನ್’ ಆರಂಭಿಸಿ: ಸಿಎಂಗೆ ಕೆಕೆಸಿಸಿಐ ಮನವಿ

ಕಲ್ಯಾಣ ಕರ್ನಾಟಕದ ಸಮಗ್ರ ಪ್ರಗತಿಗೆ ವಿಶೇಷ ‘ಬೆಳವಣಿಗೆ ಮಿಷನ್’ ಆರಂಭಿಸಿ

ಕಲ್ಯಾಣ ಕರ್ನಾಟಕ ಪ್ರವಾಸ ನಿಮಿತ್ತ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Chief Minister D K Shivkumar) ಅವರಿಗೆ ಮಂಗಳವಾರ ನಗರದ ಐವಾನ್-ಏ-ಶಾಹಿ ಅತಿಥಿ ಗೃಹದಲ್ಲಿ ಕೆಕೆಸಿಸಿಐ ಅಧ್ಯಕ್ಷ ಶರಣು ಪಪ್ಪಾ ಹಾಗೂ ಗೌರವ ಕಾರ್ಯದರ್ಶಿ ಶಿವರಾಜ್ ಇಂಗಿನಶೆಟ್ಟಿ ಅವರು, 18 ಪ್ರಮುಖ ಬೇಡಿಕೆಗಳನ್ನೊಳಗೊಂಡ ಜ್ಞಾಪನಾ ಪತ್ರವನ್ನು ಸಲ್ಲಿಸಿದರು

Loading...