ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಭಯೋತ್ಪಾದಕ ಸಂಘಟನೆಗೆ ಯುವಕರ ನೇಮಕಾತಿ; ಅಪರಾಧಿ ಹಮ್ರಾಜ್ ವರ್ಶಿದ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ

ಉಗ್ರ ಸಂಘಟನೆಗೆ ನೇಮಕಾತಿ; ಹಮ್ರಾಜ್ ವರ್ಶಿದ್ ಶೇಖ್‌ಗೆ 7 ವರ್ಷ ಜೈಲು

ಮಹಾರಾಷ್ಟ್ರದ ಹಮ್ರಾಜ್ ವರ್ಶಿದ್ ಶೇಖ್ ಆನ್‌ಲೈನ್ ಮೂಲಕ ಯುವಕರನ್ನು ಸೆಳೆದು ಭಯೋತ್ಪಾದಕ ಸಂಘಟನೆಗೆ ನೇಮಕ ಮಾಡುತ್ತಿದ್ದ. ನಿಷೇಧಿತ ತಾಲಿಬಾನ್ ಮತ್ತು ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ ಭಯೋತ್ಪಾದಕ ಸಂಘಟನೆಗೆ ಯುವಕರನ್ನು ನೇಮಿಸಲು ಯತ್ನಿಸಿರುವುದು ಎನ್‌ಐಎ ತನಿಖೆಯಲ್ಲಿ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್‌ ಈತನಿಗೆ ಶಿಕ್ಷೆ ಪ್ರಕಟಿಸಿದೆ.

Karnataka Sangha Qatar:‌ ಕರ್ನಾಟಕ ಸಂಘ ಕತಾರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ಕರ್ನಾಟಕ ಸಂಘ ಕತಾರ್‌ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಆಯ್ಕೆ

Subramanya Hebbagelu: ಸುಬ್ರಮಣ್ಯ ಹೆಬ್ಬಾಗಿಲು ಅವರು ಈ ಹಿಂದೆ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಉಪಾಧ್ಯಕ್ಷರಾಗಿ, ಭಾರತೀಯ ಕ್ರೀಡಾ ಕೇಂದ್ರದ (ISC) ಸಲಹಾ ಮಂಡಳಿ ಸದಸ್ಯರಾಗಿ ಹಾಗೂ ಭಾರತೀಯ ಸಮುದಾಯ ಹಿತಚಿಂತಕ ವೇದಿಕೆಯ (ICBF) ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಕರ್ನಾಟಕ ಸಂಘ ಕತಾರ್‌ ಸಂಘದ 15ನೇ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಮೆರಿಕದಿಂದ 7 ಜೀವಂತ ಗುಂಡುಗಳ ಪಿಸ್ತೂಲ್‌ ಮ್ಯಾಗ್‌ಜೈನ್‌ ತಂದ ವ್ಯಕ್ತಿ ಅರೆಸ್ಟ್‌

ಅಮೆರಿಕದಿಂದ 7 ಜೀವಂತ ಗುಂಡುಗಳ ಪಿಸ್ತೂಲ್‌ ಮ್ಯಾಗ್‌ಜೈನ್‌ ತಂದವನ ಬಂಧನ

ಪರವಾನಗಿ ಇಲ್ಲದೆ ಅಕ್ರಮವಾಗಿ ಏಳು ಜೀವಂತ ಗುಂಡುಗಳನ್ನು ಹೊಂದಿದ್ದ ಆರೋಪದ ಮೇಲೆ ಅಮೆರಿಕ ಮೂಲದ ಅನಿವಾಸಿ ಭಾರತೀಯನೊಬ್ಬನನ್ನು ಬೆಂಗಳೂರಿನ ಜೆ.ಸಿ. ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅಮೆರಿಕದ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಅರ್ಮಾನ್ ಮುತಾಹರ್ (34) ಎಂದು ಗುರುತಿಸಲಾಗಿದೆ.

ಮೂರು ದಿನಗಳ ಸಾಹಿತ್ಯ,  ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಡಲ್ಲಾಸ್

ಡಲ್ಲಾಸಿನಲ್ಲಿ ಕನ್ನಡ ಸಾಹಿತ್ಯ ರಂಗದ ಸಮ್ಮೇಳನ

ಎರಡು ವರ್ಷಗಳಿಗೊಮ್ಮೆ ನಡೆಯುವ ಕನ್ನಡ ಸಾಹಿತ್ಯ ರಂಗದ ಸಮ್ಮೇಳನವನ್ನು ಈ ಬಾರಿ ಡಲ್ಲಾಸ್ ನಲ್ಲಿ ಆಯೋಜಿಸಲಾಗಿತ್ತು. ಮೂರು ದಿನಗಳ ಸಾಹಿತ್ಯ, ಸಾಂಸ್ಕೃತಿಕ ವೈಭವದಲ್ಲಿ ನೂರಾರು ಮಂದಿ ಪಾಲ್ಗೊಂಡು ಸಂಭ್ರಮಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ಚಿತ್ರ ನಿರ್ದೇಶಕ, ಲೇಖಕ ಹಾಗೂ ಚಿಂತಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತುಂಬಿದರು.

MLA S.N.Subbareddy: 10 ಕೋಟಿ ವೆಚ್ಚದಲ್ಲಿ ಗುಡಿಬಂಡೆ-ರಾಮಪಟ್ಟಣ ರಸ್ತೆ ಅಭಿವೃದ್ದಿ: ಶಾಸಕ ಸುಬ್ಬಾರೆಡ್ಡಿ

10 ಕೋಟಿ ವೆಚ್ಚದಲ್ಲಿ ಗುಡಿಬಂಡೆ-ರಾಮಪಟ್ಟಣ ರಸ್ತೆ ಅಭಿವೃದ್ದಿ

ಆದಷ್ಟು ಶೀಘ್ರವಾಗಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆ ದಾರರಿಗೆ ಸೂಚನೆ ನೀಡಿದ್ದೇನೆ. ಇನ್ನೂ ಈ ರಸ್ತೆ ಕಾಮಗಾರಿ ತುಂಬಾ ತಡವಾಗುತ್ತಿದೆ ಎಂಬ ದೂರಿಗೆ ಪ್ರತಿಕ್ರಿಯೆ ನೀಡಿದ ಶಾಸಕರು, ಇರಾನ್ – ಇಸ್ರೇಲ್ ಯುದ್ದದ ಕಾರಣದಿಂದ ಡಾಂಬರು ಸೇರಿದಂತೆ ಹಲವು ವಸ್ತುಗಳ ಬೆಲೆ ಜಾಸ್ತಿಯಾಗಿದೆ. ಆದ್ದರಿಂದ ತಡವಾಗುತ್ತಿದೆ. ಆದಷ್ಟು ಶೀಘ್ರವಾಗಿ ಕೆಲಸ ಮುಗಿಸಲು ತಿಳಿಸುತ್ತೇನೆ

ಮಾನವನ ಉನ್ನತಿಗೆ ಶಿಕ್ಷಣವೇ ಪ್ರಮುಖ ಶಕ್ತಿ: ಸಿದ್ದರಾಜು ಸ್ವಾಮೀಜಿಗಳು

ಮಾನವನ ಉನ್ನತಿಗೆ ಶಿಕ್ಷಣವೇ ಪ್ರಮುಖ ಶಕ್ತಿ: ಸಿದ್ದರಾಜು ಸ್ವಾಮೀಜಿಗಳು

ನಮ್ಮ ಬದುಕಿನಲ್ಲಿ ಜ್ಞಾನ ಮತ್ತು ವಿದ್ಯೆಗಿಂತ ಮಿಗಿಲಾದದ್ದು ಯಾವುದೂ ಇಲ್ಲ. ರಾಮಾಯಣ, ಮಹಾಭಾರತ ಗಳಂತಹ ಮಹಾಕಾವ್ಯಗಳು ನಮಗೆ ಜೀವನದ ಮೌಲ್ಯಗಳನ್ನು ಕಲಿಸಿಕೊಟ್ಟಿವೆ. ಅಂತಹ ಮಹಾನ್ ಗ್ರಂಥಗಳ ಆಶಯ ಮತ್ತು ಶಕ್ತಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಜ್ಞಾನ ವೆಂಬ ಅಂಧಕಾರವನ್ನು ದೂರವಾಗಿಸಿ ಜ್ಞಾನದ ಬೆಳಕನ್ನು ಪಸರಿಸುವ ಶಕ್ತಿ ಕೇವಲ ಶಿಕ್ಷಣಕ್ಕೆ ಮಾತ್ರ ಇದೆ

ಸಾಲದ ಹಣ ವಾಪಸ್‌ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ; MLC ವಿಶ್ವನಾಥ್‌ ವಿರುದ್ಧ FIR

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ; MLC ವಿಶ್ವನಾಥ್‌ ವಿರುದ್ಧ FIR

ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್‌ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆನ್‌ಲೈನ್‌ ಮೆಡಿಸಿನ್‌ಗೆ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್‌ ಶಾಪ್‌ ಬಂದ್‌, ಕರ್ನಾಟಕದಲ್ಲಿ ಔಷಧ ಸಿಗುತ್ತಾ?

ಆನ್‌ಲೈನ್‌ ಮೆಡಿಸಿನ್‌ಗೆ ವಿರೋಧಿಸಿ ದೇಶಾದ್ಯಂತ ಮೆಡಿಕಲ್‌ ಶಾಪ್‌ ಬಂದ್‌

ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್ ಆಗಲಿವೆ. ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಮಾರ್ತಾಂಡನನ್ನು ಕೊಂದ ಕಂಜನ್ ಆನೆಗೆ ದಸರಾದಿಂದ ಶಾಶ್ವತ ನಿಷೇಧ

ಮಾರ್ತಾಂಡನನ್ನು ಕೊಂದ ಕಂಜನ್ ಆನೆಗೆ ದಸರಾದಿಂದ ಶಾಶ್ವತ ನಿಷೇಧ

ದುಬಾರೆ ಆನೆ ಶಿಬಿರದಲ್ಲಿ ಮಾರ್ತಾಂಡ ಆನೆ ಸಾವಿಗೆ ಕಾರಣವಾದ ಕಂಜನ್ ಆನೆಯನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಿಂದ ಶಾಶ್ವತವಾಗಿ ನಿಷೇಧಿಸಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಕಟ್ಟುನಿಟ್ಟಿನ ಆದೇಶದ ಮೇರೆಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಮಳೆ ಅನಾಹುತ; ವಾಟರ್ ಪಾರ್ಕ್ ಗೋಡೆ ಕುಸಿತ, 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ವಾಟರ್ ಪಾರ್ಕ್ ಗೋಡೆ ಕುಸಿತ, 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Heavy Rain: ರಾಜ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೀದರ್ (Bidar) ತಾಲೂಕಿನ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್‌ನ ಗೋಡೆ ಕುಸಿದು ಬಿದ್ದು ಅನಾಹುತ ಸಂಭವಿಸಿದೆ.

Shidlaghatta News: ದೇವೇಗೌಡರ 94ನೇ ಜನ್ಮದಿನದಲ್ಲಿ ವಿದ್ಯಾರ್ಥಿಗಳಿಗೆ ಲಕ್ಷಾಂತರ ರೂ. ಬಹುಮಾನ ನೀಡಿದ ಜನಪರ ಶಾಸಕ

ದೇವೇಗೌಡರ ಮಾರ್ಗದರ್ಶನ ದೇಶಕ್ಕೆ ಅಗತ್ಯ : ರಾಜ್ಯಸಭೆಗೆ ಮತ್ತೆ ಆಯ್ಕೆ ಮಾಡಿ

ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (Former Prime Minister HD Deve Gowda) ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿ ಕಳುಹಿಸುವ ಅಗತ್ಯವಿದೆ. ಅವರ ಅಪಾರ ಅನುಭವ ಮತ್ತು ಮಾರ್ಗದರ್ಶನ ದೇಶಕ್ಕೆ ಇನ್ನಷ್ಟು ಅವಶ್ಯಕವಾಗಿದೆ ಎಂದು ಶಾಸಕ ಬಿ.ಎನ್ ರವಿಕುಮಾರ್ (MLA B.N.Ravikumar) ಅಭಿಪ್ರಾಯಪಟ್ಟರು.

ಟ್ರಾನ್ಸ್‌ಫಾರ್ಮರ್ ವಿದ್ಯುತ್ ಸ್ಪರ್ಶ: ಹಸು ಸಾವು, ಗೌರಮ್ಮ ಅಪಾಯದಿಂದ ಪಾರು

ಟ್ರಾನ್ಸ್‌ಫಾರ್ಮರ್ ವಿದ್ಯುತ್ ಸ್ಪರ್ಶ: ಹಸು ಸಾವು, ಗೌರಮ್ಮ ಅಪಾಯದಿಂದ ಪಾರು

ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ ಟ್ರಾನ್ಸ್‌ಫಾರ್ಮರ್‌ನ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಹಸು ಸಾವಿ ಗೀಡಾದ ದುರ್ಘಟನೆ ನಡೆದಿದೆ. ಗ್ರಾಮದ ಗೌರಮ್ಮ ಹಾಗೂ ಮುನಿರಾಜು ಅವರಿಗೆ ಸೇರಿದ ಹಸುವನ್ನು ಬೆಳಗಿನ ಜಾವ ಎಂದಿನಂತೆ ಡೇರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

Shidlaghatta News: ರಸ್ತೆ ಗುಂಡಿಗಳ ನಡುವೆ ಸಂಚಾರ – ರಾಜೀವ್ ಗಾಂಧಿ ಲೇಔಟ್ ನಿವಾಸಿಗಳ ಸಂಕಷ್ಟ

ರಸ್ತೆ ಗುಂಡಿಗಳ ನಡುವೆ ಸಂಚಾರ – ರಾಜೀವ್ ಗಾಂಧಿ ಲೇಔಟ್ ನಿವಾಸಿಗಳ ಸಂಕಷ್ಟ

ಕಳೆದ 20 ರಿಂದ 25 ದಿನಗಳಿಂದ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದರೂ ರಸ್ತೆ ದುರಸ್ತಿ ಕಾರ್ಯ ಮಾತ್ರ ಪೂರ್ಣಗೊಂಡಿಲ್ಲ. ಪರಿಣಾಮ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರಿಗೆ ದೊಡ್ಡ ತೊಂದರೆಯಾಗಿದೆ. ಕೆಲವೆಡೆ ವಾಹನಗಳು ಗುಂಡಿಗಳಲ್ಲಿ ಸಿಲುಕಿ ಕೊಳ್ಳುತ್ತಿರುವ ಘಟನೆಗಳು ಕೂಡ ನಡೆಯುತ್ತಿವೆ.

Application Invited: ಗುಡಿಬಂಡೆ: 2026-27ನೇ ಸಾಲಿನ ಸರ್ಕಾರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸರ್ಕಾರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಗ್ರಾಮೀಣ ಹಾಗೂ ದೂರದ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಶಾಲೆಯಿಂದ 5 ಕಿ.ಮೀ ಗಿಂತ ಹೆಚ್ಚು ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಶೇಕಡಾ 90 ರಷ್ಟು ಸೀಟು ಗಳನ್ನು ಹಾಗೂ 5 ಕಿ.ಮೀ ಗಿಂತ ಕಡಿಮೆ ದೂರವಿರುವ ವಿದ್ಯಾರ್ಥಿಗಳಿಗೆ ಶೇಕಡಾ 10 ರಷ್ಟು ಸೀಟು ಗಳನ್ನು ನೀಡಲಾಗುತ್ತದೆ.

MLA KH.Puttaswamygowda: ಮುದುಗಾನಕುಂಟೆ ಗಂಗಮ್ಮನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳಿಗೆ ಮೂಲ ಸೌಲಭ್ಯ: ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರು ಭರವಸೆ

ಮುದುಗಾನಕುಂಟೆ ಗಂಗಮ್ಮನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳಿಗೆ ಮೂಲ ಸೌಲಭ್ಯ

ಮುದುಗಾನಕುಂಟೆ ಕ್ಷೇತ್ರದ ಗಂಗಮ್ಮ ತಾಯಿಯ ದರ್ಶನಕ್ಕಾಗಿ ಪ್ರತಿ ಸೋಮವಾರ ಸಾವಿರಾರು ಭಕ್ತರು ಆಗಮಿಸಿ, ತಮ್ಮ ಇಷ್ಟಾರ್ಥಗಳನ್ನು ನೆರೆವೇರಿಸುವಂತೆ ಗಂಗಮ್ಮ ತಾಯಿಗೆ ಅರಿಕೆ ಹೊತ್ತು ಪೂಜೆ ಸಲ್ಲಿಸುತ್ತಾರೆ,ಅದರಲ್ಲೂ ವಿಶೇಷವಾಗಿ ಶ್ರೀಕ್ಷೇತ್ರಕ್ಕೆ ಬರುವ ಮಹಿಳಾ ಯಾತ್ರಿಕರಿಗಾಗಿ ಸ್ನಾನದ ಗೃಹಗಳ ಸಂಕೀರ್ಣವನ್ನು ನಿರ್ಮಿಸಲು ಸುಮಾರು ಅರವತ್ತು ಲಕ್ಷ ರೂಪಾಯಿಗಳ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಗಿತ್ತು.

Gudibande News: ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಕರವೇಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಕೆ

ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ

ಮನವಿ ಸಲ್ಲಿಕೆಗೂ ಮುನ್ನ ಪಟ್ಟಣದ ಹೊರವಲಯದ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆ ನಡೆಸಿದ ಹೋರಾಟಗಾರರು, ಪ್ರತ್ಯೇಕ ಕ್ಷೇತ್ರದ ಪರವಾಗಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Shivam Associates Scam: ಬಹುಕೋಟಿ ವಂಚನೆ ಆರೋಪ; ಶಿವಾನಂದ ನೀಲಣ್ಣವರ್‌ ವಿರುದ್ಧ ಕಾಗವಾಡದಲ್ಲಿ ಕೇಸ್‌ ದಾಖಲು

ಶಿವಾನಂದ ನೀಲಣ್ಣವರ್‌ ವಿರುದ್ಧ ಕಾಗವಾಡದಲ್ಲಿ ಕೇಸ್‌ ದಾಖಲು

ಶಿವಂ ಅಸೋಸಿಯೇಟ್ಸ್‌ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಮೊದಲ ಖಾಸಗಿ ದೂರು ದಾಖಲಾಗಿದೆ. ಶೇ.36 ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ ತನ್ನಿಂದ 5 ಲಕ್ಷ ಹಣ ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿದ್ದಾರೆ ಎಂದು ದೂರುದಾರ ಆರೋಪಿಸಿದ್ದಾರೆ.

ಜೂ.12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ

ಜೂ.12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

ಜೂನ್.12ರಂದು ಜಿಲ್ಲಾ ಕೇಂದ್ರದಲ್ಲಿ “ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ” ಆಚರಿಸುವ ಸಂಬಂಧ ರೂಪುರೇಷೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಮಂಗಳವಾರ ಜಿಲ್ಲಾಧಿಕಾರಿ ಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ “ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Chikkaballapur News: ಸರ್ಕಾರಿ ಶಾಲೆಗೇ ಮಕ್ಕಳನ್ನು ದಾಖಲಿಸಿ, ಉತ್ತಮ ಭವಿಷ್ಯ ಕಲ್ಪಿಸಿ: ಉಪನಿರ್ದೇಶಕ ರಮೇಶ್.ವಿ ಮನವಿ

ಸರ್ಕಾರಿ ಶಾಲೆಗೇ ಮಕ್ಕಳನ್ನು ದಾಖಲಿಸಿ, ಉತ್ತಮ ಭವಿಷ್ಯ ಕಲ್ಪಿಸಿ

ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳಿಗೆ ಶಾಲಾರಂಭದಲ್ಲಿಯೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲು ಸೂಚನೆ ನೀಡಲಾಗಿದೆ.ಇದರ ಜತೆಗೆ ಜಿಲ್ಲೆಯ ಸರ್ಕಾರಿ ಶಾಲೆಗಳ ಎಲ್ಲಾ ಅರ್ಹ ವಿದ್ಯಾರ್ಥಿ ಗಳಿಗೆ ಪ್ರತಿ ವರ್ಷ ವಿದ್ಯಾರ್ಥಿವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ. ಈ ಎಲ್ಲಾ ಸೌಲಭ್ಯ ಸರಕಾರಿ ಶಾಲೆಯ ಮಕ್ಕಳು ಬಳಸಿಕೊಳ್ಳಿ ಎಂದರು.

Chikkaballapur News: ಕೋರ್ಟಿನ ಮೂಲಕ ನ್ಯಾಯ ಪಡೆದ ಶಿಕ್ಷಕರಿಗೆ ನೇಮಕಾತಿ ಪತ್ರ ವಿತರಿಸಿದ ಡಿಡಿಪಿಐ

ದಾಖಲಾತಿ ಪರಿಶೀಲನೆ ಮೂಲಕ ಕೌನ್ಸೆಲಿಂಗ್ ನಂತರ ಶಾಲೆಯ ಆಯ್ಕೆ ಪೂರ್ಣ

ಮಂಗಳವಾರ ನಡೆದ ದಾಖಲಾತಿ ಪರಿಶೀಲನೆಯಲ್ಲಿ ಲವಲವಿಕೆಯಿಂದ ಭಾಗಿಯಾದ 10 ಮಂದಿ ಪದವೀಧರ ಶಿಕ್ಷಕಿಯರು ಸರಾಸರಿ 3 ವರ್ಷಗಳ ಸುಧೀರ್ಘ ಕಾನೂನು ಸಂಘರ್ಷದ ವನವಾಸದಿಂದ ಹೊರ ಬಂದು ಸುಪ್ರಿಂಕೋಟ್ ಮೂಲಕ ತಮ್ಮ ಬದುಕಿಗೆ ಬೇಕಾದ ಬೆಳಕನ್ನು ಪಡೆದುಕೊಂಡಿದ್ದು ಎಲ್ಲರಿಗೂ ಮಾದರಿಯಂತಿದೆ.

Transport workers Strike: ಹೈಕೋರ್ಟ್‌ ಆದೇಶದ ಹಿನ್ನೆಲೆ ಸಾರಿಗೆ ಮುಷ್ಕರ ವಾಪಸ್‌; ನಾಳೆ ಎಂದಿನಂತೆ ಬಸ್‌ಗಳ ಸಂಚಾರ

ನಾಳಿನ ಸಾರಿಗೆ ಮುಷ್ಕರ ವಾಪಸ್‌; ಎಂದಿನಂತೆ ಬಸ್‌ಗಳ ಸಂಚಾರ

ಮುಷ್ಕರ ಬಿಟ್ಟು ಸರ್ಕಾರದೊಂದಿಗೆ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಾರಿಗೆ ನೌಕರರ ಸಂಘಟನೆಗಳಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಇನ್ನು ಹೈಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ ಕೆಎಸ್‌ಆರ್‌ಟಿಸಿ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ತಿಳಿಸಿದ್ದಾರೆ.

Congress Sadhana Samavesha: 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಕೆಶಿ

DK Shivakumar: ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ. ಇಡೀ ದೇಶಕ್ಕೆ ಒಂದು ಮಾದರಿ ಸರ್ಕಾರವನ್ನು ಕೊಟ್ಟಿದೆ, ಅದನ್ನು ಉಳಿಸಿಕೊಂಡು ಹೋಗುತ್ತೇವೆ. ನಿಮ್ಮ ಆಶೀರ್ವಾದ ಸದಾ ಇರಲಿ ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಹೇಳಿದ್ದಾರೆ.

3 ವರ್ಷಗಳಲ್ಲಿ ತಮ್ಮ ಸಾಧನೆ ಇಂಥದ್ದೆಂದು ಕಾಂಗ್ರೆಸ್ ಮುಖಂಡರು ಹೇಳಲಿ: ಸಿ.ಟಿ. ರವಿ ಸವಾಲು

3 ವರ್ಷಗಳಲ್ಲಿ ತಮ್ಮ ಸಾಧನೆ ಇಂಥದ್ದೆಂದು ಕಾಂಗ್ರೆಸ್ ಮುಖಂಡರು ಹೇಳಲಿ

CT Ravi: ಕರ್ನಾಟಕ ರಾಜ್ಯದ ಸಮಗ್ರ ಸಾಲ 10 ಲಕ್ಷ ಕೋಟಿ ರೂಪಾಯಿ. ಸಾಲ ಮಾಡದೇ ಗ್ಯಾರಂಟಿ ಯೋಜನೆ ಕೊಡುವ ಸ್ಥಿತಿಯಲ್ಲಿ ಇಲ್ಲ. ಸಾಧನೆ ಯಾವುದು? ಹೆಮ್ಮೆ ಪಟ್ಟುಕೊಳ್ಳುವ ಸಾಧನೆ ಏನಿದೆ ಎಂದು ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.

Fuel Supply: ಕರ್ನಾಟಕದಲ್ಲಿ ಯಾವುದೇ ನಿರ್ಬಂಧಗಳಿಲ್ಲದೆ ಇಂಧನ ಪೂರೈಕೆ ಮುಂದುವರಿಕೆ; ತೈಲ ಕಂಪನಿಗಳಿಂದ ಭರವಸೆ

ಕರ್ನಾಟಕದಲ್ಲಿ ಯಾವುದೇ ನಿರ್ಬಂಧಗಳಿಲ್ಲದೆ ಇಂಧನ ಪೂರೈಕೆ ಮುಂದುವರಿಕೆ

ಎಲ್ಲಾ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಇಂಧನ ವಿತರಣಾ ಕಾರ್ಯಾಚರಣೆಗಳು ಸುಗಮವಾಗಿ ಮುಂದುವರಿದಿದ್ದು, ನಿಗದಿತ ಸುರಕ್ಷತೆ ಮತ್ತು ಕಾರ್ಯಾಚರಣೆಯ ಮಾನದಂಡಗಳಿಗೆ ಅನುಗುಣವಾಗಿ ಯಾವುದೇ ನಿರ್ಬಂಧಗಳಿಲ್ಲದೆ ಪೂರೈಕೆಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದೆ ಎಂದು ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕರಾದ ಸಿದ್ಧಾರ್ಥ್ ಅಗರ್ವಾಲ್ ತಿಳಿಸಿದ್ದಾರೆ.

Loading...