ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

IndiGo flight cancellations: ಬೆಂಗಳೂರಿನಿಂದ ಇಂದು ಮಧ್ಯರಾತ್ರಿವರೆಗೆ ಮುಂಬೈ, ದೆಹಲಿಗೆ ಇಂಡಿಗೋ ವಿಮಾನಗಳ ಹಾರಾಟ ರದ್ದು!

ಇಂದು ಮಧ್ಯರಾತ್ರಿವರೆಗೆ ಮುಂಬೈ, ದೆಹಲಿಗೆ ಇಂಡಿಗೋ ವಿಮಾನ ಹಾರಾಟ ರದ್ದು!

ಇಂಡಿಗೋ ವಿಮಾನಗಳ ಸೇವೆ ವ್ಯತ್ಯಯದ ಬಗ್ಗೆ ಪ್ರಯಾಣಿಕರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ (ಬಿಐಎಎಲ್‌) ಮಾಹಿತಿ ಹಂಚಿಕೊಂಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಾವ ಯಾವ ನಗರಗಳಿಗೆ ಇಂಡಿಗೋ ವಿಮಾನಗಳು ರದ್ದುಗೊಂಡಿವೆ ಎಂಬ ಕುರಿತು ಮಾಹಿತಿ ನೀಡಿದೆ.

ವಾಚ್ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡುವೆ, ಇಲ್ಲದಿದ್ದರೆ ಅವರು ಕೊಡ್ತಾರಾ?; ಛಲವಾದಿ ನಾರಾಯಣಸ್ವಾಮಿಗೆ ಡಿಕೆಶಿ ಸವಾಲ್

ವಾಚ್ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡುವೆ: ಡಿಕೆಶಿ

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಇನ್ನೂ ಅನುಭವವಿಲ್ಲ. ಯಾವುದಾದರೂ ವಿಚಾರದ ಬಗ್ಗೆ ಮಾತನಾಡಬೇಕಾದರೆ ಕನಿಷ್ಠ ಪರಿಜ್ಞಾನ ಇರಬೇಕು. ಬರೀ ಪ್ರಚಾರಕ್ಕೆ ಮಾತನಾಡುವುದಲ್ಲ. ಅವರಿಗಿಂತ ಹೆಚ್ಚು ಜವಾಬ್ದಾರಿಯಿಂದ ನಾನು ವರ್ತಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

63 Percent Corruption: ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಶೇ.63 ಭ್ರಷ್ಟಾಚಾರ ಹೇಳಿಕೆಗೆ ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ಸ್ಪಷ್ಟನೆ

ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಉಪ ಲೋಕಾಯುಕ್ತ ವೀರಪ್ಪ ಸ್ಪಷ್ಟನೆ

Upalokayukta Justice B Veerappa: ಶೇ. 63ರಷ್ಟು ಭ್ರಷ್ಟಾಚಾರ ಕುರಿತ ಹೇಳಿಕೆಗೆ ನ್ಯಾಯಮೂರ್ತಿ ವೀರಪ್ಪ ಅವರು ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ನಿರ್ದಿಷ್ಟ ಸರ್ಕಾರ ಅಥವಾ ಅವಧಿಯನ್ನು ಉಲ್ಲೇಖಿಸಿಲ್ಲ. ಅಲ್ಲದೇ ನಾನು ಯಾವ ಸರ್ಕಾರವನ್ನೂ ಗಮನದಲ್ಲಿಟ್ಟುಕೊಂಡು ಹೇಳಿಲ್ಲ. ಇಂಡಿಯಾ ಕರಪ್ಷನ್ ಸರ್ವೆಯಲ್ಲಿ ಇದ್ದ ಮಾಹಿತಿಯನ್ನು ಮಾತ್ರ ಹೇಳಿದ್ದೇನೆ ಎಂದು ತಿಳಿಸಿದ್ಧಾರೆ.

Karnataka TET: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌; ಟಿಇಟಿ ಪರೀಕ್ಷೆಯಿಂದ ವಿನಾಯಿತಿ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌; ಟಿಇಟಿ ಪರೀಕ್ಷೆಯಿಂದ ವಿನಾಯಿತಿ

1ರಿಂದ 5ನೇ ತರಗತಿವರೆಗೆ ಬೋಧನೆ ಮಾಡುವ ಶಿಕ್ಷಕರು ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ್ದರೆ ಅಂಥವರಿಗೆ ಟಿಇಟಿ ಕಡ್ಡಾಯ ಎಂಬ ಷರತ್ತನ್ನು ಸಡಿಲಗೊಳಿಸಲಾಗುವುದು. ಅಂತಹ ಶಿಕ್ಷಕರಿಗೆ ಬೋಧನೆಗೆ ಅವಕಾಶ ಮಾಡಿಕೊಡಲು 2025ರ ಅ.16ರಂದು ಹೊರಡಿಸಲಾದ ಕರಡು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.

Health Minister Dinesh Gundu Rao: “ಸ್ವಸ್ಥ ಮೈಸೂರು” ಅಭಿಯಾನದ ಒಪ್ಪಂದಕ್ಕೆ ಸಹಿ ಹಾಕಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

“ಸ್ವಸ್ಥ ಮೈಸೂರು” ಅಭಿಯಾನದ ಒಪ್ಪಂದಕ್ಕೆ ಸಚಿವ ಗುಂಡೂರಾವ್‌ ಸಹಿ

ಆರೋಗ್ಯ ಇಲಾಖೆಯು ಈಗಾಗಲೇ ರಾಜ್ಯಾದ್ಯಂತ "ಗೃಹ ಆರೋಗ್ಯ" ಜಾರಿ ಮಾಡಿದ್ದು, 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಮಧುಮೇಹ, ಅಧಿಕ ರಕ್ತದೊತ್ತಡ, ಕೆಲವು ಕ್ಯಾನ್ಸರ್‌ ಸೇರಿದಂತೆ 14 ಅಸಾಂಕ್ರ ಮಿಕ ರೋಗಿಗಳ ತಪಾಸಣೆ ನಡೆಸಿ, ಉಚಿತ ಔಷಧ ನೀಡುವ ಕೆಲಸ ಮಾಡಲಾಗುತ್ತಿದೆ, ಈಗಾಗಲೇ 1 ಕೋಟಿ ಜನರ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಹೇಳಿದರು

ವಿಶೇಷ ಚೇತನರು ಸುಲಭವಾಗಿ ವಿಮಾನ ಏರಲು “ಮೊಬಿಲಿಟಿ ಅಸಿಸ್ಟ್‌”  ಪರಿಚಯಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

“ಮೊಬಿಲಿಟಿ ಅಸಿಸ್ಟ್‌” ಪರಿಚಯಿಸಿದ KIA

ಡಚೆನ್ ಸ್ನಾಯು ಕ್ಷೀಣತೆ ಹೊಂದಿದ್ದ ಹಾಗೂ ವಿದ್ಯುತ್ ವೀಲ್‌ಚೇರ್ ಬಳಸುತ್ತಿದ್ದ ಆದರ್ಶ್, ವಿಮಾನ ನಿಲ್ದಾಣಗಳಲ್ಲಿ ಸೂಕ್ತ ರೀತಿಯಲ್ಲಿ ಇಳಿಯಲು ಹಾಗೂ ತಾನು ತಲುಪಬೇಕಾದ ಸ್ಥಳಕ್ಕೆ ತೆರಳಲು ಸಾಧ್ಯವಾಗದೇ ದೈಹಿಕ ಅಸ್ವಸ್ಥತೆ ಮತ್ತು ಭಾವನಾತ್ಮಕ ಒತ್ತಡ ಅನುಭವಿಸಿದ್ದರು. ಇವರ ಈ ವೈಯಕ್ತಿಕ ಅನುಭವವೇ ಇತರರಿಗೆ ನೆರವಾಗಲು ಸ್ಫೂರ್ತಿಯಾಯಿತು.

Murder Case: ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

Doddaballapuara news: ಯುವತಿಯೊಬ್ಬಳನ್ನು ಈತ ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಈ ಮೊದಲು ಗಲಾಟೆ ಸಹ ಆಗಿತ್ತು. ಕೆಲವರು ನಿನ್ನನ್ನು ನೋಡಿಕೊಳ್ಳುವುದಾಗಿ ಈತನಿಗೆ ಧಮಕಿ ಹಾಕಿದ್ದರು. ಬಳಿಕ ಇಬ್ಬರೂ ಬೇರೆ ಬೇರೆಯಾಗಿದ್ದರು. ಇತ್ತೀಚೆಗೆ ಮತ್ತೆ ಇಬ್ಬರೂ ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಸಂಶಯ ಇದೆ ಎಂದು ಮೃತ ಯುವಕನ ಚಿಕ್ಕಮ್ಮ ಅನಿತಾ ಅನುಮಾನ ವ್ಯಕ್ತಪಡಿಸಿದ್ದಾರೆ.

ಪಶುಪಾಲನಾ ಭವಿಷ್ಯ ಮತ್ತು ಮಣ್ಣಿನ ಆರೋಗ್ಯ: ಪಶುಪಾಲನಾ ಹಕ್ಕುಗಳ ಸುರಕ್ಷಿತ ಗೊಳಿಸುವುದು ಮಣ್ಣಿನ ಭದ್ರತೆಯ ನಿರ್ಣಾಯಕ ಅಂಶವಾಗಿದೆಯೇಕೆ

ಪಶುಪಾಲನಾ ಭವಿಷ್ಯ ಮತ್ತು ಮಣ್ಣಿನ ಆರೋಗ್ಯ

ಡೆಕ್ಕನ್ ಪ್ರಸ್ಥಭೂಮಿಯು ಹಲವಾರು ಅಲೆಮಾರಿ ಮತ್ತು ಅರೆ-ಅಲೆಮಾರಿ ಪಶುಪಾಲನಾ ಸಮುದಾಯ ಗಳಿಗೆ ನೆಲೆಯಾಗಿದೆ, ಉದಾಹರಣೆಗೆ ಕುರುಬ, ಕುರುಮ, ಧಂಗರ್ ಮತ್ತು ಇತರ ದಲಿತ ಪಶುಪಾಲನಾ ಗುಂಪುಗಳು, ಇವರು ಕುರಿ, ಮೇಕೆ ಮತ್ತು ದನಗಳ ಮಿಶ್ರ ಹಿಂಡುಗಳನ್ನು ದೀರ್ಘ ಕಾಲದಿಂದ ನಿರ್ವಹಿಸು ತ್ತಿದ್ದಾರೆ.

Digital Arrest: ಬ್ಯಾಂಕ್‌ ಮ್ಯಾನೇಜರ್‌ ಸಮಯಪ್ರಜ್ಞೆಯಿಂದ ತಪ್ಪಿದ ಡಿಜಿಟಲ್‌ ಆರೆಸ್ಟ್‌, ವೃದ್ಧ ದಂಪತಿಯ 84 ಲಕ್ಷ ರೂ. ಬಚಾವ್

ಬ್ಯಾಂಕ್‌ ಮ್ಯಾನೇಜರ್‌ ಸಮಯಪ್ರಜ್ಞೆಯಿಂದ ತಪ್ಪಿದ ಡಿಜಿಟಲ್‌ ಆರೆಸ್ಟ್‌‌

ಮುಲ್ಕಿಯ ದಾಮಸಕಟ್ಟೆ ನಿವಾಸಿಗಳಾದ ಬೆನಡಿಕ್ಟ್‌ ಫರ್ನಾಂಡಿಸ್ (84) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71) ಅವರಿಗೆ ಡಿಸೆಂಬರ್ 1ರಂದು ಸೈಬರ್‌ ಕ್ರಿಮಿನಲ್‌ಗಳು (Cyber crime) ಉತ್ತರ ಪ್ರದೇಶದ ಸಿಐಡಿ ಪೊಲೀಸ್ ಎಂಬ ಸೋಗಿನಲ್ಲಿ ಮೊಬೈಲ್ ಫೋನ್- ವಾಟ್ಸ್ಯಾಪ್​ ಮೂಲಕ ಸಂಪರ್ಕಿಸಿದ್ದರು. ವೃದ್ಧ ದಂಪತಿಗಳು 6 ಕೋಟಿ ಮೋಸ ಮಾಡಿರುವುದಾಗಿ, ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಆರೆಸ್ಟ್​​ಗೆ ಒಳಪಡಿಸಿದ್ದರು.

IndiGo Flights Cancellations:‌ ನಾಲ್ಕನೇ ದಿನಕ್ಕೆ ಮುಂದುವರಿದ ಇಂಡಿಗೋ ವಿಮಾನ ರದ್ದತಿ, 550ಕ್ಕೂ ಹೆಚ್ಚು ಫ್ಲೈಟ್‌ ಕ್ಯಾನ್ಸಲ್

4ನೇ ದಿನಕ್ಕೆ ಮುಂದುವರಿದ ಇಂಡಿಗೋ ಗೊಂದಲ, 550 ಫ್ಲೈಟ್‌ ಕ್ಯಾನ್ಸಲ್

IndiGo Flights Cancellations:‌ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಕೆಲವು ಸೇವೆಗಳು ವ್ಯತ್ಯಯಗೊಂಡಿವೆ. ದೆಹಲಿ, ಬೆಂಗಳೂರು, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ಇಂದು 200 ಕ್ಕೂ ಹೆಚ್ಚು ಇಂಡಿಗೋ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Actor Darshan: 82 ಲಕ್ಷ ರೂ. ಹಣದ ದಾಖಲೆ ತೋರಿಸದ ದರ್ಶನ್‌, ಕೃಷಿಯಿಂದ ಬಂತು ಎಂದ ದಾಸ

82 ಲಕ್ಷ ರೂ. ಹಣದ ದಾಖಲೆ ತೋರಿಸದ ದರ್ಶನ್‌, ಕೃಷಿಯಿಂದ ಬಂತು ಎಂದ ದಾಸ

Renuka swamy murder case: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ 82 ಲಕ್ಷ ರೂ. ನಗದು ಹಣ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ದರ್ಶನ್ ಹೇಳಿಕೆ ಪಡೆಯಲಾಗಿದೆ. ಐಟಿ ಅಧಿಕಾರಿಗಳ ಮುಂದೆ A2 ಆರೋಪಿ ದರ್ಶನ್‌ ಹಾಗೂ ಪತ್ನಿ ವಿಜಯಲಕ್ಷ್ಮಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಕೃಷಿ ಮತ್ತು ಪಶು ಸಂಗೋಪನೆಯಿಂದ ಹಣ ಬಂದಿದ್ದಾಗಿ ದರ್ಶನ್ ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ದರ್ಶನ್, ವಿಜಯಲಕ್ಷ್ಮಿ, ಪ್ರಧೋಷ್, ನಿಖಿಲ್ ಹಾಗೂ ಕೇಶವಮೂರ್ತಿ ಮನೆಯಲ್ಲಿ 82 ಲಕ್ಷ ರೂಪಾಯಿ ಹಣ ಸಿಕ್ಕಿತ್ತು.

Love jihad: ಶ್ರದ್ಧಾ ಥರ ಕತ್ತರಿಸಿ ಹಾಕುವೆ ಎಂದು ಯುವತಿಗೆ ಬೆದರಿಕೆ; ಲೈಂಗಿಕ ದೌರ್ಜನ್ಯ, ಬ್ಲ್ಯಾಕ್‌ಮೇಲ್‌

ಶ್ರದ್ಧಾ ಥರ ಕತ್ತರಿಸಿ ಹಾಕುವೆ ಎಂದು ಯುವತಿಗೆ ಬೆದರಿಕೆ; ಲೈಂಗಿಕ ದೌರ್ಜನ್ಯ

Physical Abuse: ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಉಸ್ಮಾನ್, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಲಕ್ಷಾಂತರ ರೂಪಾಯಿ ಹಣ ಮತ್ತು ಚಿನ್ನಾಭರಣ ದೋಚಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೈಹಿಕ ಮತ್ತು ಮಾನಸಿಕ ನೋವಿಗೊಳಗಾದ ಯುವತಿ 9 ತಿಂಗಳ ಹಿಂದೆಯೇ ಪೊಲೀಸರ ಮೊರೆ ಹೋಗಿದ್ದು, ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ತಿಳಿದು ಬಂದಿದೆ.

Namma Metro purple line: ನಮ್ಮ ಮೆಟ್ರೋ ನೇರಳೆ ಲೈನಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ಮೆಟ್ರೋ ಸಂಚಾರ ಸ್ಥಗಿತ

ನಮ್ಮ ಮೆಟ್ರೋ ಮುಂದೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ಮೆಟ್ರೋ ಸಂಚಾರ ಸ್ಥಗಿತ

ನೇರಳೆ ಮಾರ್ಗದ ಮೆಟ್ರೋ ರೈಲುಗಳು (Namma Metr Purple line) ಪ್ರಸ್ತುತ ಮೈಸೂರು ರಸ್ತೆ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ಮೈಸೂರು ರಸ್ತೆ ಮತ್ತು ಚಲಘಟ್ಟ ನಡುವಿನ ಸೇವೆಗಳು ಕೆಂಗೇರಿ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಯತ್ನದ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಬಿಎಂಆರ್​ಸಿಎಲ್ ಎಕ್ಸ್​ ಸಂದೇಶದ ಮೂಲಕ ತಿಳಿಸಿದೆ.

ಪ್ರತಿಭಟನೆಗೆ 50 ಸಂಘಟನೆಗಳು ಸಜ್ಜು: ಕಟ್ಟೆಚ್ಚರ

ಪ್ರತಿಭಟನೆಗೆ 50 ಸಂಘಟನೆಗಳು ಸಜ್ಜು: ಕಟ್ಟೆಚ್ಚರ

ಅಧಿವೇಶನ ಸಂದರ್ಭದಲ್ಲಿ ರೈತರ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವ ದಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಇನ್ನೂ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ರಾಜ್ಯ ರೈತ ಸಂಘ ಹೋರಾಟಕ್ಕೆ ಕರೆ ನೀಡಿದೆ. ಅಷ್ಟೇ ಅಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ಜನ ಪ್ರತಿಭಟನೆಗೆ ಆಗಮಿಸು ತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಈ ಬಾರಿ ೬ ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋ ಜನೆ ಮಾಡಲಾಗುತ್ತಿದೆ.

HD Kumaraswami: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್: ಎಚ್‌ಡಿಕೆ ವಿರುದ್ಧದ ಸಮನ್ಸ್​ಗೆ ಹೈಕೋರ್ಟ್ ತಡೆ

ನೀತಿ ಸಂಹಿತೆ ಉಲ್ಲಂಘನೆ: ಎಚ್‌ಡಿಕೆ ವಿರುದ್ಧದ ಸಮನ್ಸ್​ಗೆ ಹೈಕೋರ್ಟ್ ತಡೆ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಪರ ವಕೀಲರು, ಚುನಾವಣೆಯಲ್ಲಿ ಪ್ರತಿಸ್ಪರ್ಧಿಯ ಹೆಸರನ್ನು ಅರ್ಜಿದಾರರು ತಮ್ಮ ಹೇಳಿಕೆಯಲ್ಲಿ ಎಲ್ಲೂ ಉಲ್ಲೇಖಿಸಿಲ್ಲ. ಆದರೂ ಕೋರ್ಟ್, ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿಗೊಳಿಸಿದೆ. ಹಾಗಾಗಿ ಸಮನ್ಸ್​ಗೆ ತಡೆ ನೀಡಬೇಕು ಎಂದು ಕೋರಿದರು. ವಾದ ಆಲಿಸಿದ ಕರ್ನಾಟಕ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ.

WCD Recruitment 2025: 544 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ

ಶಿವಮೊಗ್ಗ ಜಿಲ್ಲೆಯಲ್ಲಿದೆ ಉದ್ಯೋಗಾವಕಾಶ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 544 ಅಂಗನವಾಡಿ ಹುದ್ದೆಗಳು ಖಾಲಿ ಇದ್ದು, ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ

Haveri News: ಮತ್ತೆ ಭುಗಿಲೆದ್ದ ಬುರ್ಖಾ ವಿವಾದ, ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು

ಮತ್ತೆ ಭುಗಿಲೆದ್ದ ಬುರ್ಖಾ ವಿವಾದ, ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು

Haveri news: ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಕೆಲ ವಿದ್ಯಾರ್ಥಿನಿಯರು ಬುರ್ಕಾ ಧರಿಸಿ ಬಂದಿದ್ದರು. ಇದರಿಂದ ಆಕ್ರೋಶಗೊಂಡ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದರು. ಇದು ಕಾಲೇಜಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವಿನ ಚರ್ಚೆಗೆ ಕಾರಣವಾಯಿತು.

Indi News: ಇನ್ನೊಬ್ಬರಿಗೆ ನೋವಾಗದಂತೆ ಬದುಕಿ: ಮುತ್ತಪ್ಪ ಪೋತೆ ಕಿವಿ ಮಾತು

Indi News: ಇನ್ನೊಬ್ಬರಿಗೆ ನೋವಾಗದಂತೆ ಬದುಕಿ: ಮುತ್ತಪ್ಪ ಪೋತೆ ಕಿವಿ ಮಾತು

ಡಾ.ಬಿ.ಆರ್ ಅಂಬೇಡ್ಕರವರು ನಡೆದಾಡಿದ ಈ ಪುಣ್ಯಭೂಮಿ ಯಲ್ಲಿ ಒಳ್ಳೆತನದಿಂದ ಇರಬೇಕು. ಇಂಡಿ ಗಡಿ ಭಾಗದಲ್ಲಿ ಶರಣರು, ಸಂತ- ಮಹಾಂತರು, ಸಾಹಿತಿ ಗಳು ಬುದ್ದೀಜೀವಿಗಳು ಈ ಭಾಗದ ಜನರಿಗೆ ಸಂಸ್ಕಾರ ನೀಡಿದ್ದಾರೆ. ನಾನು ಯಾವುದೇ ವ್ಯಕ್ತಿ, ರಾಜ ಕಾರಣಕ್ಕೆ ಸೀಮಿತನಾಗಿ ಮಾತನಾಡುತ್ತಿಲ್ಲ

Gubbi News: ಪದಗ್ರಹಣ ಸಮಾರಂಭದಲ್ಲಿ ತಾಲ್ಲೂಕು ಬಿಜೆಪಿ ಸಾರಥ್ಯ ವಹಿಸಿದ ಬಲರಾಮಣ್ಣ

ಪಕ್ಷದ ಬಾವುಟ ಪಡೆದು ಅಧಿಕಾರ ವಹಿಸಿಕೊಂಡ ಬಲರಾಮಣ್ಣ

ಪ್ರಮುಖ ಜವಾಬ್ದಾರಿ ನೂತನ ಅಧ್ಯಕ್ಷರ ಹೆಗಲ ಮೇಲಿದೆ. ಅಡಕೆ ವ್ಯವಹಾರ ಜೊತೆ ಪಕ್ಷ ಸಂಘಟನೆ ನಡೆಸಿ ಮುಂದಿನ ಏಪ್ರಿಲ್ ತಿಂಗಳಿನಲ್ಲಿ ಬರುವ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಈ ಡಿಸೆಂಬರ್ ಮಾಹೆಯಲ್ಲಿ ವಿವಿಧ ಮೋರ್ಚಾಗಳಿಗೆ ಕೆಲಸ ಮಾಡುವ ಕಾರ್ಯಕರ್ತರನ್ನು ನೇಮಿಸಲು ಸನ್ನದ್ದರಾಗುವಂತೆ ಸೂಚಿಸಿದರು.

Chikkaballapur News: ಸಾಧು ಮಠದಲ್ಲಿ ದತ್ತಾತ್ರೇಯ ಜಯಂತಿ ಸಂಭ್ರಮ : 66ನೇ ವರ್ಷದ ಪೂಜೆಗೆ ಹರಿದು ಬಂದ ಭಕ್ತಸಮೂಹ

ಸಾಧು ಮಠದಲ್ಲಿ ದತ್ತಾತ್ರೇಯ ಜಯಂತಿ ಸಂಭ್ರಮ

೪೦ ವರ್ಷಗಳಿಂದ ಈ ಟ್ರಸ್ಟ್ನಲ್ಲಿದ್ದೇನೆ. ಭಗವಂತನ ಕಾರ್ಯಕ್ರಮಗಳಿಗೆ ಎಂದೂ ಕೂಡ ಹಿನ್ನಡೆ ಆದದ್ದೇ ಇಲ್ಲ.ಒಂದು ವಾರದ ಕಾಲ ನಡೆಯುವ ಧಾರ್ಮಿಕ ಆಚರಣೆ, ಉಪನ್ಯಾಸ, ಪೂಜೆ ಸತ್ಸಂಗ ಪ್ರಸಾದ ವಿನಿಯೋಗದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿಯಾಗುವ ಮೂಲಕ ಕಾರ್ಯಕ್ರಮ ಯಶಸ್ವಿ ಯಾಗಿ ನಡೆಯಲು ಕಾರಣಕರ್ತರಾಗಿದ್ದಾರೆ. ಇವರೆಲ್ಲರಿಗೂ ಟ್ರಸ್ಟ್ನ ವತಿಯಿಂದ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ

MP Dr.K.Sudhakar: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸಂಸತ್ತಿನಲ್ಲಿ ದನಿ ಎತ್ತಿದ ಸಂಸದ ಡಾ.ಕೆ.ಸುಧಾಕರ್

ಸಂಸತ್ತಿನಲ್ಲಿ ದನಿ ಎತ್ತಿದ ಸಂಸದ ಡಾ.ಕೆ.ಸುಧಾಕರ್

ಮಕ್ಕಳು ಮತ್ತು ತಾಯಂದಿರ ಆರೈಕೆ ಹಾಗೂ ಪೋಷಣೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗಬೇಕಾದ ಗೌರವ, ಸಾಮಾಜಿಕ ಭದ್ರತೆ ಮತ್ತು ನ್ಯಾಯಯುತ ವೇತನದ ಅಗತ್ಯವನ್ನು ಸದನದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದೇನೆ

Chikkaballapur News: ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮ ಪಡಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ

ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮ ಪಡಿಸಲು ಕ್ರಮ ವಹಿಸಿ

ಯಾವುದೇ ವಿದ್ಯಾರ್ಥಿ ಮೂಲತಃ ದಡ್ಡನಾಗಿರುವುದಿಲ್ಲ ಅಥವಾ ಕಲಿಯಲು ಸಾಧ್ಯವೆ ಇಲ್ಲ ಎನ್ನುವ ವಿದ್ಯಾರ್ಥಿಗಳು ಇರುವುದಿಲ್ಲ. ಅವರ ಸುತ್ತಮುತ್ತಲಿನ ಪರಿಸರ, ಕೌಟುಂಬಿಕ ಪರಿಸ್ಥಿತಿಗಳಿಂದ ವಿದ್ಯಾರ್ಥಿ ಗಳ ಗಮನ ಬೇರೆ ಕಡೆ ಇರುತ್ತದೆ. ಆದ್ದರಿಂದ ಮೊದಲಿಗೆ ವಿದ್ಯಾರ್ಥಿಯು ಶಾಲೆಗೆ ಕಡ್ಡಾಯವಾಗಿ ಹಾಜರಾಗುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು. ಅವರ ಗಮನವನ್ನು ಪೂರ್ಣವಾಗಿ ಅಭ್ಯಾಸದ ಕಡೆಗೆ ತೊಡಗಿಸಲು ಗಮನ ಹರಿಸಬೇಕು.

ರಾಜ್ಯ ಸರ್ಕಾರವನ್ನು ಟೀಕಿಸಲು ಹೋಗಿ ತಗ್ಲಾಕೊಂಡ್ರ ಆರ್‌. ಅಶೋಕ್‌? ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಆರ್. ಅಶೋಕ್‌ರ ಮತಿಗೇಡಿತನಕ್ಕೆ ಏನೆನ್ನಬೇಕು?; ಸಿಎಂ ಸಿದ್ದರಾಮಯ್ಯ

CM Siddaramaiah: ವಿಪಕ್ಷ ನಾಯಕ ಆರ್. ಅಶೋಕ್ ಇಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪುರಾಣ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ಬ್ರಹ್ಮರಥೋತ್ಸವ: ಕೂದಲೆಳೆ ಅಂತರದಲ್ಲಿ ಧರಾಘಾತದಿಂದ ಪಾರಾದ ತೇರು

ಪುರಾಣ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ಬ್ರಹ್ಮರಥೋತ್ಸವ

ರಥೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣಗಳಿಂದ ಸಿಂಗರಿಸಿದಂತೆ ರಥವನ್ನು ಕೂಡ ವಿಜಯಧ್ವಜಗಳು, ತೋಮಾಲೆ ಹಾಗೂ ಬಗೆಬಗೆಯ ಹೂವುಗಳಿಂದ ಅಲಂಕರಿಸಲಾಗಿದ್ದು, ಅಲಂಕೃತ ತೇರಿನ ಮಂಟಪದಲ್ಲಿ ರಂಗನಾಥಸ್ವಾಮಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು, ಭಕ್ತರ ಜಯಘೋಷದ ನಡುವೆ ದೇವಾಲಯದ ಹೊರಭಾಗದಲ್ಲಿ ತೇರನ್ನು ಪ್ರದಕ್ಷಿಣೋ ಪಾದಿಯಲ್ಲಿ ಮೆರವಣಿಗೆ ಮಾಡಲಾಯಿತು.

Loading...