ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Car Accident: ಸಾವಿಗೆ ಹೋಗಿ ಬರುತ್ತಿದ್ದ ವ್ಯಕ್ತಿಗೆ ಆಕ್ಸಿಡೆಂಟ್‌, ಪತ್ನಿಯ ಎದುರೇ ಮರಣ

ಸಾವಿಗೆ ಹೋಗಿ ಬರುತ್ತಿದ್ದ ವ್ಯಕ್ತಿಗೆ ಆಕ್ಸಿಡೆಂಟ್‌, ಪತ್ನಿಯ ಎದುರೇ ಮರಣ

ಬೆಂಗಳೂರು- ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ದುರಂತ ಸಂಭವಿಸಿದೆ. ಪಾರ್ಕಿಂಗ್ ಲಾಟ್ ಮೇಲ್ವಿಚಾರಕ ಕಾರು ರಿವರ್ಸ್ ತೆಗೆಯುವಾಗ ಅಲ್ಲೇ ನಿಲ್ಲಿಸಿದ ಬ್ಲಡ್ ಬ್ಯಾಂಕ್ ಬಸ್ ಬಳಿ ಶಾಮ್ ದೊರೆ ನಿಂತಿದ್ದರು. ಕಾರು ಹಾಗೂ ಬಸ್ಸಿನ ನಡುವೆ ಸಿಲುಕಿ ಶ್ಯಾಮ್‌ ಅಪ್ಪಚ್ಚಿಯಾಗಿದ್ದಾರೆ.

ಟಾಟಾ ಮೋಟಾರ್ಸ್ ಬಿಲಿಯನ್‌ ಇ- ಮೊಬಿಲಿಟಿಗೆ ಮೊದಲ ಬ್ಯಾಚ್ ಎಲೆಕ್ಟ್ರಿಕ್ ಪ್ರೈಮಾ E.55S ಅನ್ನು ತಲುಪಿಸುತ್ತದೆ; ಶೂನ್ಯ ಹೊರಸೂಸುವಿಕೆ ಸರಕು ಸಾಗಣೆಯಲ್ಲಿ ಪ್ರಗತಿ

ಟಾಟಾ ಮೋಟಾರ್ಸ್ ಬಿಲಿಯನ್‌ ಇ- ಮೊಬಿಲಿಟಿಗೆ ಮೊದಲ ಬ್ಯಾಚ್

ಇ-ಟ್ರಕ್‌ಗಳನ್ನು ಸ್ವೀಕರಿಸುತ್ತಾ, ಬಿಲಿಯನ್ ಇ & ಚಾರ್ಜ್‌ಝೋನ್‌ನ ಸಂಸ್ಥಾಪಕ ಶ್ರೀ ಕಾರ್ತಿಕೇಯ ಹರಿಯಾನಿ ಮತ್ತು ಬಿಲಿಯನ್ ಇ ಮೊಬಿಲಿಟಿಯ ಸಿಇಒ ಸಂಜೀವ್ ಕುಲಕರ್ಣಿ, "ಬಿಲಿಯನ್ ಎಲೆಕ್ಟ್ರಿಕ್ ಮೊಬಿಲಿಟಿಯಲ್ಲಿ ನಮ್ಮ ಗಮನವು ವಿಶ್ವಾಸಾರ್ಹವಾಗಿ ಮತ್ತು ಅಂತರ-ನಗರ ಮಾರ್ಗ ಗಳಿಗೆ ನೈಜ ಸರಕು ಸಾಗಣೆ ಕಾರ್ಯಾಚರಣೆಗಳಲ್ಲಿ ಪ್ರಮಾಣದಲ್ಲಿ ನಿಯೋಜಿಸಬಹುದಾದ ವಿದ್ಯುತ್ ವಾಣಿಜ್ಯ ವಾಹನ ಪರಿಹಾರಗಳನ್ನು ನಿರ್ಮಿಸುವತ್ತ ಸಾಗುತ್ತಿದೆ.

Hippopotamus: ಪಶುವೈದ್ಯೆ ಸಾವಿಗೆ ಕಾರಣವಾದ ತಾವರೆಕೊಪ್ಪದ ನೀರಾನೆ ಮರಿ ಗರ್ಭದಲ್ಲೇ ಸಾವು!

ಪಶುವೈದ್ಯೆ ಸಾವಿಗೆ ಕಾರಣವಾದ ನೀರಾನೆ ಮರಿ ಗರ್ಭದಲ್ಲೇ ಸಾವು!

ಹಂಸಿನಿ ಹೆಸರಿನ ನೀರಾನೆ ಈ ಹಿಂದೆ ಎರಡು ಬಾರಿ ಮರಿಗಳಿಗೆ ಜನ್ಮ ನೀಡಿತ್ತು. ಆದರೆ ದುರಾದೃಷ್ಟವಶಾತ್ ಎರಡೂ ಬಾರಿ ಮರಿಗಳು ಸಾವನ್ನಪ್ಪಿದ್ದವು. ಈ ಬಾರಿಯಾದರೂ ಮರಿ ಉಳಿಯಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಫಾರಿ ಸಿಬ್ಬಂದಿಗೆ ಈಗ ನಿರಾಸೆಯಾಗಿದೆ.

HD Kumaraswamy: ಒಂದು ಬಾರಿ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದ ಗ್ರಹಣ ಮುಕ್ತಿ: ಎಚ್‌ಡಿ ಕುಮಾರಸ್ವಾಮಿ

ಒಮ್ಮೆ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದ ಗ್ರಹಣ ಮುಕ್ತಿ: ಎಚ್‌ಡಿಕೆ

ಜೆಡಿಎಸ್‌ಗೆ (JDS) 25 ವರ್ಷ ತುಂಬಿದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಬೆಂಗಳೂರಿನ ಕೊಮ್ಮಘಟ್ಟದ ಬಳಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾದರು. ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿ ಪಕ್ಷ ಹಾಲಿ, ಮಾಜಿ, ಶಾಸಕರು, ಸಂಸದರು ಭಾಗಿಯಾಗಿದ್ದರು.

Harassment: ನನಗೆ ಕ್ಯಾನ್ಸರ್‌ ಇದೆ, ನಗ್ನ ಫೋಟೋ ಕಳಿಸು: ಶಿಕ್ಷಕಿಗೆ ಕಾಮುಕನ ಕಿರುಕುಳ!‌

ನನಗೆ ಕ್ಯಾನ್ಸರ್‌ ಇದೆ, ನಗ್ನ ಫೋಟೋ ಕಳಿಸು: ಶಿಕ್ಷಕಿಗೆ ಕಾಮುಕನ ಕಿರುಕುಳ!‌

ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ಬೆಂಗಳೂರಿಗೆ ಬಂದು ದೈಹಿಕ ಸಂಬಂಧದ ಆಸೆಗೆ ಬಿದ್ದು ಮಹಿಳೆಗೆ ಮೊಬೈಲ್‌ ಸಂದೇಶದ ಮೂಲಕ ಕಿರುಕುಳ ನೀಡಿದ ಈ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಬಂಧಿಸಲು ತೆರಳುತ್ತಿದ್ದಂತೆ ಯುವಕ ಮರ್ಮಾಂಗ ಕತ್ತರಿಸಿಕೊಳ್ಳಲು ಯತ್ನಿಸಿದ್ದ.

BMTC Shakti scam: ಪುರುಷ ಪ್ರಯಾಣಿಕರಿಗೆ ಶಕ್ತಿ ಯೋಜನೆ ಟಿಕೆಟ್​​, ಯುಪಿಐ ಸ್ಕ್ಯಾನ್ ಹಗರಣ: ನಾಲ್ವರು ಬಿಎಂಟಿಸಿ ನೌಕರರು ಸಸ್ಪೆಂಡ್​​

ಪುರುಷರಿಗೆ ಶಕ್ತಿ ಟಿಕೆಟ್​​, ಯುಪಿಐ ಸ್ಕ್ಯಾನ್ ಹಗರಣ: 4 ನೌಕರರ ಸಸ್ಪೆಂಡ್​​

ಶಕ್ತಿ ಯೋಜನೆಯ ಫ್ರೀ ಟಿಕೆಟ್ ಮೇಲೆ ಕನ್ನಡದಲ್ಲಿ ಮಾತ್ರ ಉಚಿತ ಪ್ರಯಾಣ ಎಂದು ಪ್ರಿಂಟ್ ಮಾಡಲಾಗಿದೆ. ಹೀಗಾಗಿ ಕನ್ನಡ ಓದಲು ಬಾರದ ಪ್ರಯಾಣಿಕರನ್ನೇ ಟಾರ್ಗೆಟ್​ ಮಾಡಿ ಅವರಿಗೆ ಟಿಕೆಟ್​​ ನೀಡಿ ಹಣ ಪಡೆಯಲಾಗುತ್ತಿತ್ತು. ತನಿಖೆಯಲ್ಲಿ ಕೆಲ ನಿರ್ವಾಹಕರ ಈ ಕಳ್ಳಾಟ ಬಯಲಾಗಿದ್ದು, ಅಕೌಂಟ್​​ನಲ್ಲಿ ಸಾವಿರಾರು ರೂಪಾಯಿ ಹಣವೂ ಪತ್ತೆಯಾಗಿದೆ.

Minority leadership: ಕವಲು ದಾರಿಯಲ್ಲಿ ಅಲ್ಪಸಂಖ್ಯಾತ ನಾಯಕತ್ವ

Minority leadership: ಕವಲು ದಾರಿಯಲ್ಲಿ ಅಲ್ಪಸಂಖ್ಯಾತ ನಾಯಕತ್ವ

ದಾವಣಗೆರೆಯಲ್ಲಿ ಟಿಕೆಟ್ ಕೈ ತಪ್ಪುತ್ತಿದ್ದಂತೆ ಕ್ಷೇತ್ರದಲ್ಲಿದ್ದ 80 ಸಾವಿರಕ್ಕೂ ಹೆಚ್ಚಿನ ಅಲ್ಪಸಂಖ್ಯಾತ ಮತದಾರರಲ್ಲಿ ಬಹುತೇಕ ಮಂದಿ ಆಕ್ರೋಶಗೊಂಡಿದ್ದರು. ಇದನ್ನು ಸಮಾಧಾನಗೊಳಿಸಲು ಸಚಿವ ಜಮೀರ್ ಅವರು ಬರುತ್ತಾರೆ ಎನ್ನುವ ನಿರೀಕ್ಷೆ ಇತ್ತು. ನಂತರ ಪಕ್ಷದ ನಾಯಕರೆ ಸೇರಿದ್ದ ನಾಮ ಪತ್ರ ಸಲ್ಲಿಕೆಗಾದರೂ ಸಿಗುತ್ತಾರೆ ಎನ್ನುವ ಮಾತಿತ್ತು. ಆದರೆ ಎಲ್ಲ ನಿರೀಕ್ಷೆಗಳು ಹುಸಿಯಾಗಿತ್ತು.

Indi News: ಮಕ್ಕಳ ಸರಳ ಕಲಿಕೆಗೆ ದ್ವಿ ಭಾಷಾ ಮಾಧ್ಯಮ ಅಗತ್ಯ

ಮಕ್ಕಳ ಸರಳ ಕಲಿಕೆಗೆ ದ್ವಿ ಭಾಷಾ ಮಾಧ್ಯಮ ಅಗತ್ಯ

ಶನಿವಾರ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಇವರ ಸಹಯೋಗದಲ್ಲಿ ಜರುಗಿದ 1 ರಿಂದ 5ನೇ ವರ್ಗದ ಶಿಕ್ಷಕರ ದ್ವಿ ಭಾಷಾ ತರಬೇತಿಯ 2ನೇ ಹಂತದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

Indi News: ನಿರಂತರ ರಕ್ತದಾನದಿಂದ ಆರೋಗ್ಯ ಉತ್ತಮ

Indi News: ನಿರಂತರ ರಕ್ತದಾನದಿಂದ ಆರೋಗ್ಯ ಉತ್ತಮ

ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಶ್ರೀ ಶಿವಯೋಗೀಶ್ವರ ಜಾತ್ರಾ ಮಹೋತ್ಸವ ನಿಮಿತ್ತ ನಡೆದ 2014ರಲ್ಲಿ ಸಾಲೋಟಗಿಯ ಶಿವಯೋಗೀಶ್ವರ ಮಾಧ್ಯಮಿಕ ಶಾಲೆಯಲ್ಲಿ ಓದಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಗೆಳೆಯರ ಬಳಗ ಮತ್ತು ಶ್ರೀ ಶಿವಯೋಗೀಶ್ವರ ಜಾತ್ರಾ ಸಮಿತಿ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ನೇತ್ರ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ಮಾತನಾಡಿ ದರು.

MLA S.R.Srinivas: ಬೇಸಿಗೆ ನೀರಿನ ಸಮಸ್ಯೆಗೆ ಮೆನ್ನೆಚ್ಚರಿಕೆಗೆ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

ಬೇಸಿಗೆ ನೀರಿನ ಸಮಸ್ಯೆಗೆ ಮೆನ್ನೆಚ್ಚರಿಕೆಗೆ ಕ್ರಮ

ತಾಲ್ಲೂಕಿನ ಚಿಕ್ಕಹಳ್ಳಿ, ವಿರೂಪಾಕ್ಷಪುರ, ಎಂ.ಎನ್.ಕೋಟೆ ಹಾಗೂ ಅಳಿಲುಘಟ್ಟ ಗ್ರಾಮದಲ್ಲಿ ಒಟ್ಟು 5.30 ಕೋಟಿ ರೂಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಅದಲಗೆರೆ ಗೊಲ್ಲರಹಟ್ಟಿ, ಕೊಂಡ್ಲಿ ಕ್ರಾಸ್ ನಲ್ಲಿ ನೀರಿನ ಸಮಸ್ಯೆ ಕಂಡಿತ್ತು. ಶೀಘ್ರ ಕ್ರಮಕ್ಕೆ ಸೂಚಿಸಲಾಯಿತು. ಈ ಬೇಸಿಗೆಯಲ್ಲಿ ನೀರು ವಿದ್ಯುತ್ ಸಮಸ್ಯೆ ತಲೆದೋರುವ ಮುನ್ನ ಎಲ್ಲಾ ರೀತಿಯ ಎಚ್ಚರಿಕೆ ಕ್ರಮಕ್ಕೆ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Hulikal Ghat road: ಗುಡ್ಡ ಕುಸಿತ ಹಿನ್ನೆಲೆ ಹುಲಿಕಲ್‌ ಘಾಟ್‌ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

ಗುಡ್ಡ ಕುಸಿತ ಹಿನ್ನೆಲೆ ಹುಲಿಕಲ್‌ ಘಾಟ್‌ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ

ರಾಜ್ಯ ಹೆದ್ದಾರಿ-52 ರ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್‌ಪಿನ್ ತಿರುವುಗಳಲ್ಲಿ ಈ ಹಿಂದೆ ಮಳೆಯಿಂದಾಗಿ ಭೂಕುಸಿತ ಉಂಟಾಗಿತ್ತು. ರಸ್ತೆಯ ಸುರಕ್ಷತೆಯ ದೃಷ್ಟಿಯಿಂದ ಹಾಗೂ ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Chinthamani News: ಶುದ್ಧ ಕುಡಿಯುವ ನೀರಿಗಾಗಿ ತಾಲೂಕು ಕಚೇರಿ ಮುಂಭಾಗ ವಿನೂತನ ಪ್ರತಿಭಟನೆ!

ಗಂಗಾಜಲದ ಬಿಂದಿಗೆಯೊಂದಿಗೆ ಮೌನ ಪ್ರತಿಭಟನೆ

ಮೂಲಸೌಕರ್ಯಗಳ ಕೊರತೆ ನೀಗಿಸಬೇಕು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳ ಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಯನ್ನು ಸಲ್ಲಿಸಿದರು. ಒಂದು ವೇಳೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಸುಧಾರಣೆ ಯಾಗದಿದ್ದರೆ, ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಭಾಸ್ಕರ್ ಎಚ್ಚರಿಸಿದ್ದಾರೆ.

Chikkaballapur News: ಚಿಮುಲ್ ನಿರ್ದೇಶಕ ಹುಜುಗೂರು ರಾಮಣ್ಣ ವಿರುದ್ಧ, ಭರಣಿ ವೆಂಕಟೇಶ್ ಮೋಹನ್‌ ರೆಡ್ಡಿ ತೀವ್ರ ವಾಗ್ದಾಳಿ

ಜೆಡಿಎಸ್ ಶಾಸಕ ಸಂಸದರ ನಡುವೆ ನಮ್ಮನ್ನು ಎಳೆದು ತಂದರೆ ಗೌರವ ಉಳಿಯುವುದಿಲ್ಲ

ರಾಮಣ್ಣ ಅವರೇ ಯಲುವಹಳ್ಳಿ ರಮೇಶ್ ಅವರ ಬಸ್ಸಿನಲ್ಲಿ ಯರ‍್ಯಾರು ಬಂದು ಇಳಿದರು ಅಂತ ನಿಮಗೆ ಗೊತ್ತಿಲ್ಲವೇ? ನಿಮ್ಮ ಜೆಡಿಎಸ್ ಅಭ್ಯರ್ಥಿಗಳು,  ಮುಖಂಡರೇ ಬಂದು ಇಳಿದರು. ಹಾಗಾದರೆ ನಿಮ್ಮ ಪಕ್ಷದ ಅಸ್ತಿತ್ವ ಎಲ್ಲಿಗೋಯಿತು? ಹಾಗದರೆ ನಿಮ್ಮ ಅಭ್ಯರ್ಥಿಯನ್ನು ವಾಪಸ್ಸು ಪಡೆದು ಒಳಗೊಳಗೇ ಒಳ ಒಪ್ಪಂದ ಮಾಡಿಕೊಂಡಿರೇನು?

Shidlaghatta News: ಬೆನ್ನುಹುರಿ ಅಂಗವಿಕಲರಿಗೆ ವಿಶೇಷ ಕ್ರೀಡಾಕೂಟ – ಆತ್ಮವಿಶ್ವಾಸ ವೃದ್ಧಿಗೆ ಒತ್ತು

ಬೆನ್ನುಹುರಿ ಅಂಗವಿಕಲರಿಗೆ ವಿಶೇಷ ಕ್ರೀಡಾಕೂಟ

ನಗರದ ನೆಹರೂ ಕ್ರೀಡಾಂಗಣದಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದವರಿಗಾಗಿ ನವಜೀವನ ಸೇವಾ ಸಂಘ, ಚಿಕ್ಕಬಳ್ಳಾಪುರ, ಮಾರ್ಗದರ್ಶಿ ವಿಕಲಚೇತನರ ಸ್ವಯಂಸೇವಾ ಸಂಸ್ಥೆ, ಬೆಂಗಳೂರು ಹಾಗೂ ಸ್ಟೇಟ್ ಸಂಸ್ಥೆಯ ಸ್ವಯಂಸೇವಕರ ಸಹಯೋಗದಲ್ಲಿ ವಿಶೇಷ ಕ್ರೀಡಾ ಚಟುವಟಿಕೆ ಆಯೋಜಿಸ ಲಾಯಿತು.

ಬೆಸ್ಟ್ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ : ಕಳೆಗಟ್ಟಿದ ವಿದ್ಯಾರ್ಥಿಗಳ ಕಲರವ

ಬೆಸ್ಟ್ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ

ಬೋಧಕ ವರ್ಗವು ಸದಾ ಕಾಲ ವಿದ್ಯಾರ್ಥಿಗಳ ಪಾಲಿಗೆ ಮಾರ್ಗದರ್ಶಕರೇ ಆಗಿರುತ್ತಾರೆ. ಪ್ರತಿ ತರಗತಿ ಯಲ್ಲಿಯೂ ಬೋಧನೆ ಸಂಧರ್ಭದಲ್ಲಿ ವಿದ್ಯಾರ್ಥಿಗಳತ್ತ ನೋಡುವಾಗ ಕೇವಲ ಗುರುವಾಗಿಯೇ ಅಲ್ಲ, ಬದುಕಿನ ದಾರಿ ತೋರಿಸುವ ಮಾರ್ಗದರ್ಶಕರಾಗಿಯೇ ಮಾತಾಡುತ್ತಾರೆ. ಅವರಿಗೆ ದಾರಿದೀಪವಾಗುತ್ತಾರೆ ಎಂಬ ನಂಬಿಕೆ ನನಗಿದೆ

Koppal Love Jihad case: ಹುಬ್ಬಳ್ಳಿ ಬಳಿಕ ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ; ಮುಸ್ತಫಾ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ಫೋಟೊ, ವಿಡಿಯೊಗಳು!

ಹುಬ್ಬಳ್ಳಿ ಬಳಿಕ ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ; ಮುಸ್ತಫಾ ವಶಕ್ಕೆ

ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಕಳೆದ ಮೂರು ದಿನಗಳ ಹಿಂದೆ ಹಿಂದೂ ಯುವತಿ ಜತೆ ಓಡಾಡುತ್ತಿದ್ದಾ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.

40th State Journalists' Conference: ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

CM Siddaramaiah: ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರಿಯುತ್ತದೆ.‌ ಅದು ಮುಂದುವರಿಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Belagavi Digital arrest: ಬೆಳಗಾವಿ ಉದ್ಯಮಿಯ ಡಿಜಿಟಲ್ ಅರೆಸ್ಟ್ ಪ್ರಕರಣ; 15.45 ಕೋಟಿ ವಂಚಿಸಿದ್ದ ಇಬ್ಬರು ಖದೀಮರು ಅರೆಸ್ಟ್

ಉದ್ಯಮಿಯ ಡಿಜಿಟಲ್ ಅರೆಸ್ಟ್; 15.45 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್

ಉದ್ಯಮಿ ಬಳಿ ಹಂತ ಹಂತವಾಗಿ ಬರೋಬ್ಬರಿ 15.45 ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಯಿಂದ ವಂಚಕರು ವರ್ಗಾಯಿಸಿಕೊಂಡಿದ್ದರು. ಈ ಕುರಿತು ಬೆಳಗಾವಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

MLC Abdul Jabbar: ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಿಪ್ರ ಬೆಳವಣಿಗೆ; ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ದಿಢೀರ್‌ ರಾಜೀನಾಮೆ!

ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ!

Karnataka Congress: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅವರು ಪ್ರಚಾರದಲ್ಲಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಲಾಗಿತ್ತು. ಹೈಕಮಾಂಡ್‌ ಸೂಚನೆ ಹಿನ್ನೆಲೆ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನನಸಾದ ಕನಸು ಎನ್.ಆರ್. ಪುರ ಸೇತುವೆ  ಮಲೆನಾಡಿನ ಸಂಪರ್ಕ ಕ್ರಾಂತಿ

ನನಸಾದ ಕನಸು ಎನ್.ಆರ್. ಪುರ ಸೇತುವೆ ಮಲೆನಾಡಿನ ಸಂಪರ್ಕ ಕ್ರಾಂತಿ

NR Pura Bridge: ಕರ್ನಾಟಕದ ಮಲೆನಾಡಿನ ಹೃದಯಭಾಗದಲ್ಲಿರುವ ನರಸಿಂಹರಾಜಪುರ (ಎನ್.ಆರ್. ಪುರ) ಬಳಿ ಇತ್ತೀಚೆಗೆ ಹೊಸ ಸೇತುವೆ ನಿರ್ಮಾಣ ಮಾಡಲಾಗಿದೆ. ಈ ಪ್ರದೇಶದ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಈ ಸೇತುವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ ಈ ಸೇತುವೆಯ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ಮಾಡಲಾಗಿದ್ದು, ಈಗ ಇದೇ 12ನೆಯ ತಾರೀಕಿಗೆ ಇದರ ಲೋಕಾರ್ಪಣೆ ಆಗುತ್ತಿರುವುದು ವಿಶೇಷ.

Kalaburagi News: ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಕಲಬುರಗಿಯಲ್ಲಿ ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಕಲಬುರಗಿಯಲ್ಲಿ ವ್ಯಕ್ತಿ ಆತ್ಮಹತ್ಯೆ

IPL Betting: ಐಪಿಎಲ್ ಪಂದ್ಯಗಳ ಮೇಲೆ ನಿರಂತರವಾಗಿ ಬೆಟ್ಟಿಂಗ್ ಕಟ್ಟುತ್ತಿದ್ದ ವ್ಯಕ್ತಿ ಭಾರಿ ಪ್ರಮಾಣದ ಹಣ ಕಳೆದುಕೊಂಡಿದ್ದಾರೆ. ಜೂಜಿಗಾಗಿ ಹಲವರಿಂದ ದೊಡ್ಡ ಮೊತ್ತದ ಸಾಲವನ್ನೂ ಮಾಡಿದ್ದರು. ಬೆಟ್ಟಿಂಗ್‌ನಲ್ಲಿ ಹಣ ಕೈಕೊಟ್ಟಿದ್ದರಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸಾಲಗಾರರ ಒತ್ತಡಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅರಣ್ಯ ಇಲಾಖೆ ಕ್ರಮಕ್ಕೆ ಬೇಸರ; ಕೆಡಿಪಿ ಸಭೆಯಲ್ಲಿ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ

ಕೆಡಿಪಿ ಸಭೆಯಲ್ಲಿ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ

ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಗ್ರಾಮದ ಮನೆಗಳು ಬರುತ್ತವೆ ಎಂದು ಜನರ ಮೇಲೆ ಅರಣ್ಯ ಇಲಾಖೆ ಎಫ್‌ಐಆರ್‌ ದಾಖಲು ಮಾಡಿದ ಹಿನ್ನೆಲೆಯಲ್ಲಿ ಭಾವೋದ್ವೇಗಗೊಂಡು ಉಪಸಭಾಪತಿ ರುದ್ರಪ್ಪ ಲಮಾಣಿ ಕಣ್ಣೀರಿಟ್ಟಿದ್ದಾರೆ. ಒಕ್ಕಲೆಬ್ಬಿಸಿದರೆ ಸಾವಿರಾರು ಬಡವರು ಎಲ್ಲಿಗೆ ಹೋಗಬೇಕು‌ ಎಂದು ಅವರು ಪ್ರಶ್ನಿಸಿದ್ದಾರೆ.

Third language: ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್:‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದವರಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್‌

ಎ‌ಸ್ಸೆಸ್ಸೆಲ್ಸಿಯಲ್ಲಿ ಹಿಂದಿಗೆ ಗ್ರೇಡ್:‌ ಪ್ರಶ್ನಿಸಿದವರಿಗೆ ಹೈಕೋರ್ಟ್ ದಂಡ

ಮಾಧ್ಯಮಗಳ ವರದಿ ಆಧರಿಸಿ ಬೆಂಗಳೂರಿನ ಎಚ್‌.ಎನ್‌.ಚಂದನಾ ಮತ್ತು ಎಸ್‌ ವೆಂಕಟೇಶ್‌ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

Vande Bharat Train: ಬೆಂಗಳೂರಿನಿಂದ ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲು

ಬೆಂಗಳೂರಿನಿಂದ ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲು

ಸುಮಾರು 1,136 ಕಿಮೀ ದೂರವನ್ನು ಈ ರೈಲು 23ರಿಂದ 24 ಗಂಟೆಗಳ ಅವಧಿಯಲ್ಲಿ ಸಾಗುತ್ತದೆ. ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯದಿಂದ ಪ್ರಯಾಣ ಸಮಯವು ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದ್ದು, ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ.

Loading...