ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Chikkaballapur News: ಮೇ.5ರ ಜಾತಿಗಣತಿ ವೇಳೆ ಕಾಲಂ 61ಲ್ಲಿ ತಪ್ಪದೆ ಮಾದಿಗ ಎಂದೇ ಬರೆಸಿ : ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿ ಕರೆ

ಮೇ.5ರ ಜಾತಿಗಣತಿ ವೇಳೆ ಕಾಲಂ 61ರಲ್ಲಿ ತಪ್ಪದೆ ಮಾದಿಗ ಎಂದೇ ಬರೆಸಿ

ಒಳಮೀಸಲಾತಿ ವರ್ಗೀಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ನ್ಯಾ.ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟಜಾತಿ/ವರ್ಗದ ಜನಗಣತಿ ಸೋಮವಾರ (ಮೇ.೫)ದಿಂದ ಆರಂಭವಾಗಲಿದೆ. ಈ ವೇಳೆ ಸಮುದಾಯದ ಸುಶಿಕ್ಷಿತರು ಮುಂದೆ ನಿಂತು ತಮ್ಮ ಸಮುದಾಯದ ಹೆಸರನ್ನು ತಪ್ಪಿಲ್ಲದೆ ನಮೂದಿಸಬೇಕು ಎಂದು ಕಿವಿಮಾತು ಹೇಳಿದರು.

Chikkaballapur News: ಮೇ 5 ರಿಂದ 17ರ ತನಕ ನಡೆಯುವ ಜಾತಿಗಣತಿಯಲ್ಲಿ ಛಲವಾದಿ ಸಮುದಾಯ ಹೊಲೆಯ ಎಂದೇ ನಮೂದಿಸಿ : ಕೈವಾರ ಮಂಜುನಾಥ್ ಮನವಿ

ಜಾತಿಗಣತಿಯಲ್ಲಿ ಛಲವಾದಿ ಸಮುದಾಯ ಹೊಲೆಯ ಎಂದೇ ನಮೂದಿಸಿ

ರಾಜ್ಯದ ಪರಿಶಿಷ್ಟಜಾತಿಗಳಲ್ಲಿ ಛಲವಾದಿ ಅಥವಾ ಹೊಲೆಯ ಸಮುದಾಯ ಬಹುಸಂಖ್ಯಾತ ರಾಗಿದ್ದರೂ ಪರಿಶಿಷ್ಟಜಾತಿ ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ಬರೆಸಿರುವ ಕಾರಣ ಛಲವಾದಿ ಸಮುದಾಯದ ನಿಖರವಾದ ಮಾಹಿತಿ ಇಲ್ಲವಾಗಿದೆ. ಇದರಿಂದಾಗಿ ಮಾದಿಗ ಮತ್ತು ಹೊಲೆಯ ಸಮು ದಾಯದ ನಡುವೆ ಜನಸಂಖ್ಯೆಯ ವಿಚಾರದಲ್ಲಿ ನಾವು ಹೆಚ್ಚು ನಾವು ಹೆಚ್ಚು ಎಂಬ ಅಪನಂಬಿಕೆ ಸೃಷ್ಟಿಯಾಗಿದೆ.

Chikkabalapur News: ಜಿಲ್ಲಾ ಉಸ್ತುವಾರಿ ಸಚಿವರು ರೈತರ ಬಗ್ಗೆ ಹಗುರವಾಗಿ ಮಾತನಾಡಿಲ್ಲ : ಭಕ್ತರಹಳ್ಳಿ ಪ್ರತೀಶ್

ಜಂಗಮಕೋಟೆ ಹೋಬಳಿಯಲ್ಲೇ ಕೈಗಾರಿಕೆ ಮಾಡಬೇಕು : ನಾವು ಭೂಮಿ ಕೊಡಲು ಸಿದ್ಧ

ನಮ್ಮ ಮುಂದೆ ಒಂದು ಹೇಳುತ್ತೀರಿ? ರೈತರ ಮುಂದೆ ಹೋಗಿ ಮತ್ತೊಂದು ಹೇಳುತ್ತೀರಿ? ನಿಮ್ಮ ಮಾತಿಗೆ ಬೆಲೆ ನೀಡಿಯೇ ರೈತರೊಂದಿಗೆ ಸಮಾಲೋಚನಾ ಸಭೆ ಏರ್ಪಡಿಸಿ ಪಾರದರ್ಶಕತೆ ಮೆರೆಯಲಾಗಿದೆ. ಹೀಗಿದ್ದೂ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿರು ವುದು ಸರಿಯಲ್ಲ, ಹಸಿರು ಶಾಲು ಹಾಕಿಕೊಂಡವರು ಮಾತ್ರ ರೈತರಲ್ಲ, ಶಾಲು ಹಾಕಿಕೊಳ್ಳದೇ ಇರುವ ರೈತರೂ ಸಾಕಷ್ಟು ಇದ್ದಾರೆ ಎಂದು ಹೇಳಿದ್ದಾರೆ. ಇದರಲ್ಲಿ ಏನೂ ತಪ್ಪಿಲ್ಲ ಎಂದರು

Mangalore News: ಮಂಗಳೂರಿನ 3 ಕಡೆ ಚೂರಿ ಇರಿತ, ಹಲ್ಲೆ ಪ್ರಕರಣ; 7 ಆರೋಪಿಗಳು ಅರೆಸ್ಟ್

ಮಂಗಳೂರು ಚೂರಿ ಇರಿತ, ಹಲ್ಲೆ ಪ್ರಕರಣ; 7 ಆರೋಪಿಗಳ ಬಂಧನ

Mangalore News: ಮಂಗಳೂರಿನಲ್ಲಿ ಸುಹಾಸ್ ಹತ್ಯೆ ದಿನವೇ ಮೂರು ಕಡೆಗಳಲ್ಲಿ ಮೂವರು ಮುಸ್ಲಿಂ ಯುವಕರ ಮೇಲೆ ಚಾಕುವಿನಿಂದ ಹಲ್ಲೆ ನಡೆದಿತ್ತು. ಅಡ್ಯಾರ್, ಕೊಂಚಾಡಿ ಮತ್ತು ತೊಕ್ಕೊಟ್ಟುಗಳಲ್ಲಿ ಘಟನೆಗಳು ನಡೆದಿದ್ದವು. ಈ ಸಂಬಂಧ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

Kalaburagi News: ಕಾಶಿ ಮಾದರಿಯಲ್ಲಿ ದೇವಲ ಗಾಣಗಾಪೂರ ಅಭಿವೃದ್ಧಿ: 200 ಕೋಟಿ ರೂ. ಮೊತ್ತದ ಮಾಸ್ಟರ್ ಪ್ಲ್ಯಾನ್ ಸಿದ್ಧ: ಬಿ.ಫೌಜಿಯಾ ತರನ್ನುಮ್

200 ಕೋಟಿ ರೂ. ಮೊತ್ತದ ಮಾಸ್ಟರ್ ಪ್ಲ್ಯಾನ್ ಸಿದ್ಧ: ಬಿ.ಫೌಜಿಯಾ ತರನ್ನುಮ್

ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಇತ್ತೀಚೆಗೆ ಮಾಧ್ಯಮದಲ್ಲಿ ಸುದ್ದಿಗಳು ಬಿತ್ತರವಾದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿಗಳು, ಪಟ್ಟಣದಲ್ಲಿ ನಾಲ್ಕು ಲೇನ್ ರಸ್ತೆ, ಸಂಗಮ ಮತ್ತು ಅಷ್ಠ ತೀರ್ಥ ಸ್ಥಳಗಳ ಅಭಿವೃದ್ಧಿ, ಒಳಚರಂಡಿ, ಎಸ್.ಟಿ.ಪಿ ಘಟಕ ಸ್ಥಾಪನೆ, ನಾಗರಿಕ ಸೌಲಭ್ಯಗಳು ಸೇರಿದಂತೆ ಒಟ್ಟಾರೆ ದೇವಸ್ಥಾನ ಮತ್ತು ಪಟ್ಟಣದ ಸೌಂದರ್ಯೀಕರಣ ಹೆಚ್ಚಿಸಲು ಮತ್ತು ಭಕ್ತಾದಿಗಳ ಅನುಕೂಲಕ್ಕೆ ತಕ್ಕಂತೆ ಮೂಲಸೌಕರ್ಯ ಕಲ್ಪಿಸುವುದು ಇದರ ಮೂಲ ಉದ್ದೇಶವಾಗಿದೆ

Murder Case: ಮಂಗಳೂರು ಬೆನ್ನಲ್ಲೇ ಗೋಕಾಕ್‌ನಲ್ಲಿ ಯುವಕನ ಭೀಕರ ಹತ್ಯೆ

ಮಂಗಳೂರು ಬೆನ್ನಲ್ಲೇ ಗೋಕಾಕ್‌ನಲ್ಲಿ ಯುವಕನ ಭೀಕರ ಹತ್ಯೆ

Murder Case: ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಹಿಲ್ ಗಾರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಗೋಕಾಕ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

CM Siddaramaiah: 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯ: ಸಿದ್ದರಾಮಯ್ಯ

15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯ: ಸಿದ್ದರಾಮಯ್ಯ

CM Siddaramaiah: ಹದಿನೈದನೇ ಹಣಕಾಸು ಆಯೋಗದಿಂದ ನಮ್ಮ ರಾಜ್ಯಕ್ಕೆ 11495 ಕೋಟಿ ರೂ.ಗಳು ನೀಡದೆ ಅನ್ಯಾಯ ಮಾಡಲಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಎಲ್ಲಾ ದಲಿತ, ಹಿಂದುಳಿದ ಮಠಗಳಿಗೆ ಅನುದಾನ: ಸಿಎಂ ಸಿದ್ದರಾಮಯ್ಯ ಭರವಸೆ

ಎಲ್ಲಾ ದಲಿತ, ಹಿಂದುಳಿದ ಮಠಗಳಿಗೆ ಅನುದಾನ: ಸಿಎಂ ಭರವಸೆ

CM Siddaramaiah: ಹಿಂದುಳಿದ ಹಾಗೂ ದಲಿತ ಮಠಾಧೀಶ್ವರರ ಒಕ್ಕೂಟದ ಸ್ವಾಮೀಜಿಗಳ ನಿಯೋಗವು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಕುರಿತು ಚರ್ಚಿಸಿದರು. ಸ್ವಾಮೀಜಿಗಳ ನಿಯೋಗದ ಬೇಡಿಕೆಯಂತೆ ಎಲ್ಲ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

IPL 2025: ಬೆಂಗಳೂರಲ್ಲಿ ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ಟಿಕೆಟ್‌ ಬ್ಲ್ಯಾಕ್‌ನಲ್ಲಿ ಮಾರಾಟ; ನಾಲ್ವರು ಅರೆಸ್ಟ್‌

ಐಪಿಎಲ್‌ ಟಿಕೆಟ್‌ ಬ್ಲ್ಯಾಕ್‌ನಲ್ಲಿ ಮಾರಾಟ; ನಾಲ್ವರು ಅರೆಸ್ಟ್

IPL 2025: ಆರೋಪಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಿಂತು 1,200 ರೂ. ಬೆಲೆಯ ಟಿಕೆಟ್‌ ಅನ್ನು ಬ್ಲ್ಯಾಕ್‌ನಲ್ಲಿ 10,000 ರೂ.ಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಸಿಸಿಬಿ ವಿಶೇಷ ತಂಡದ ಅಧಿಕಾರಿಗಳು ದಾಳಿ ನಡೆಸಿ ದಂಧೆಕೋರರನ್ನು ಬಂಧಿಸಿದ್ದಾರೆ.

Bengaluru News: ಬೆಂಗಳೂರಲ್ಲಿ ಹಾಡಹಗಲೇ ರಸ್ತೆಯಲ್ಲಿ ನಗ್ನವಾಗಿ ಓಡಾಡಿದ ಯುವತಿ!

ಬೆಂಗಳೂರಲ್ಲಿ ಹಾಡಹಗಲೇ ರಸ್ತೆಯಲ್ಲಿ ನಗ್ನವಾಗಿ ಓಡಾಡಿದ ಯುವತಿ!

Bengaluru News: ಬೆಂಗಳೂರು ನಗರದ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಮೈಮೇಲೆ ಬಟ್ಟೆಯಿಲ್ಲದೇ ಯುವತಿ ಓಡಾಡಿರುವ ಘಟನೆ ನಡೆದಿದೆ. ಎಲ್ಲಿಗೋ ಹೋಗಿ ನಗ್ನವಾಗಿ ಪಿಜಿಗೆ ಮರಳುತ್ತಿರುವುದು ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದಕ್ಕೆ ಸಂಬಂಧಿಸಿ ಲೇಔಟ್ ಪೊಲೀಸ್ ಠಾಣೆಗೆ ಸ್ಥಳೀಯರು ದೂರು ನೀಡಿದ್ದಾರೆ

Chikkanayakanahalli (Tumkur) News: ತಾಲ್ಲೂಕು ಆಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಡಿಸಿ ಆರೋಪ

ತಾಲ್ಲೂಕು ಆಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ

ಕಾರ್ಯಕ್ರಮಗಳನ್ನು ಬೇಕಾಬಿಟ್ಟಿ ಮಾಡುವುದಾದರೆ ಜನ ಪ್ರತಿನಿಧಿಗಳಾದರೂ ಏಕಿರಬೇಕು. ಕೇವಲ ಮುಂಬರುವ ಜಿ.ಪಂ ಮತ್ತು ತಾ.ಪಂ ಚುನಾವಣಾ ತಂತ್ರಕ್ಕೆ ಜನರನ್ನು ಸೇರಿಸಿ ಜಾತ್ರೆ ಮಾಡಿದ್ದಾರೆ. ಮುಂಬರುವ ಸ್ಥಳಿಯ ಸಂಸ್ಥೆಗಳ ಚುನಾವಣೆ ಉದ್ದೇಶದಿಂದ ಜನರನ್ನು ಮರಳು ಮಾಡಲು ಈ ಕಾರ್ಯ ಕ್ರಮ ಮಾಡಿದ್ದಾರೆ

Hospet News: ಮೇ 20ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ; 2 ಲಕ್ಷ ಜನ ಸೇರುವ ನಿರೀಕ್ಷೆ

ಮೇ 20ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ

Hospet News: ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯ ಸರ್ಕಾರದ ಸಾಧನಾ ಸಮಾವೇಶದ ಬೃಹತ್ ವೇದಿಕೆ ಕಾರ್ಯಕ್ರಮ ಜರುಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕರ ಚಾಲನೆ ನೀಡಲಿದ್ದಾರೆ.

Suhas Shetty Murder Case: ಸುಹಾಸ್ ಶೆಟ್ಟಿ ಕೊಲೆಗೆ ಫಾಜಿಲ್ ತಮ್ಮನಿಂದಲೇ ಸುಪಾರಿ; 5 ಲಕ್ಷ ಫಡಿಂಗ್!

ಸುಹಾಸ್ ಶೆಟ್ಟಿ ಕೊಲೆಗೆ ಫಾಜಿಲ್ ತಮ್ಮನಿಂದ 5 ಲಕ್ಷ ಫಡಿಂಗ್!

Suhas Shetty Murder Case: ಫಾಜಿಲ್‌ ಸಹೋದರ ಆದಿಲ್, ಸುಹಾಸ್ ಶೆಟ್ಟಿ ಕೊಲೆಗೆ ಐದು ಲಕ್ಷ ರೂ.ಗಳನ್ನು ಸಫ್ವಾನ್ ತಂಡಕ್ಕೆ ನೀಡವುದಾಗಿ ಹೇಳಿದ್ದ. ಅಲ್ಲದೇ ಮುಂಗಡವಾಗಿ ಮೂರು ಲಕ್ಷ ರೂಪಾಯಿ ನೀಡಿದ್ದ. ಸಫ್ವಾನ್‌ಗೂ ಸುಹಾಸ್‌ನಿಂದ ಕೊಲೆ ಆಗುವ ಆತಂಕ ಇತ್ತು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತಾ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

Pendrive Movie: ಟೀಸರ್‌ನಲ್ಲೇ ಕುತೂಹಲ ಮೂಡಿಸಿದ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ʼಪೆನ್‌ಡ್ರೈವ್ʼ ಚಿತ್ರ

ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ʼಪೆನ್‌ಡ್ರೈವ್ʼ ಚಿತ್ರದ ಟೀಸರ್‌ ರಿಲೀಸ್‌

Pendrive Movie: ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ʼಬಿಗ್ ಬಾಸ್ʼ ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ʼಪೆನ್‌ಡ್ರೈವ್ʼ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಟೀಸರ್ ಬಿಡುಗಡೆ ಮಾಡಿದರು.

Karnataka Rains: ಮುಂದಿನ ಎರಡು ದಿನ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Karnataka Rains: ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾನುವಾರ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Pralhad Joshi: ಜಮೀರ್ ಬಾಂಬ್ ಬೆನ್ನಿಗೆ ಕಟ್ಟಿಕೊಂಡು ಪಾಕ್‌ಗೆ ಹೋಗಬೇಕಿಲ್ಲ.. ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ: ಜೋಶಿ

ಜಮೀರ್ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ: ಜೋಶಿ

Pralhad Joshi: ಪ್ರಧಾನಿ ಮೋದಿ ಅವರು ಅವಕಾಶ ಕೊಟ್ಟರೆ ಪಾಕ್‌ ವಿರುದ್ಧ ಯುದ್ಧಕ್ಕೆ ನಾನು ರೆಡಿʼ ಎಂದಿರುವ ಜಮೀರ್‌ ಅಹ್ಮದ್‌ ದೊಡ್ಡ ತ್ಯಾಗಿ ಎನ್ನುವುದು ಗೊತ್ತಿದೆ. ಅವರಂಥ ಮಹಾನ್‌ ತ್ಯಾಗಿ ಯಾರೂ ಇಲ್ಲ. ನಮ್ಮ ಸೈನ್ಯದ ಮೇಲೆ ನಂಬಿಕೆಯಿಟ್ಟು ಸುಮ್ಮನಿದ್ದರೆ ಸಾಕಷ್ಟೇ ಎಲ್ಲವನ್ನೂ ಸೈನ್ಯವೇ ನಿಭಾಯಿಸುತ್ತದೆ ಎಂದು ಅವರು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

Sonu Nigam: ಕನ್ನಡಿಗರ ಕುರಿತು ವಿವಾದಾತ್ಮಕ ಹೇಳಿಕೆ; ಗಾಯಕ ಸೋನು ನಿಗಮ್‌ ವಿರುದ್ಧ ಎಫ್‌ಐಆರ್‌ ದಾಖಲು

ಗಾಯಕ ಸೋನು ನಿಗಮ್‌ ವಿರುದ್ಧ ಎಫ್‌ಐಆರ್‌ ದಾಖಲು

Sonu Nigam: ಕನ್ನಡಿಗರಿಗೆ ಅವಮಾನ ಮತ್ತು ವಿವಿಧ ಭಾಷೆಯ ಜನರ ನಡುವೆ ದ್ವೇಷ ಹುಟ್ಟಿಸಲು ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರು ನಗರ ಘಟಕದ ಜಿಲ್ಲಾಧ್ಯಕ್ಷ ಧರ್ಮರಾಜ್.ಎ ಶುಕ್ರವಾರ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Pralhad Joshi: ಕೆಪಿಎಸ್‌ಸಿ ದೇಶಕ್ಕೆ ಕಪ್ಪು ಚುಕ್ಕೆಯಾಗಿರುವುದು ಅತ್ಯಂತ ದುರಾದೃಷ್ಟಕರ- ಪ್ರಲ್ಹಾದ್‌ ಜೋಶಿ

ಮಾದರಿ ಸಂಸ್ಥೆಯಾಗಿರಬೇಕಾದ ಕೆಪಿಎಸ್‌ಸಿ ಕಪ್ಪು ಚುಕ್ಕೆಯಾಗಿದೆ- ಜೋಶಿ

Pralhad Joshi: ಕರ್ನಾಟಕ ಲೋಕಸೇವಾ ಆಯೋಗ, 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಶುಕ್ರವಾರವೂ ಅರ್ಜಿ ಸ್ವೀಕರಿಸಿ ತಡರಾತ್ರಿವರೆಗೂ ಹಾಲ್‌ಟಿಕೆಟ್‌ ವಿತರಿಸಿದ್ದು, ಪಾರದರ್ಶಕತೆಗೆ ವಿರುದ್ಧ ನಡೆ ಅನುಸರಿಸಿದೆ. ನೇಮಕಾತಿಯಲ್ಲಿ ಒಂದು ಮಾದರಿ ಸಂಸ್ಥೆಯಾಗಿ ಇರಬೇಕಾದ ಕೆಪಿಎಸ್‌ಸಿ ಕಪ್ಪು ಚುಕ್ಕೆಯಾಗಿದೆ. ರಾಜ್ಯ ಸರ್ಕಾರದ ದುರಾಡಳಿತದಲ್ಲಿ ತನ್ನ ಪಾತ್ರವನ್ನೂ ದೇಶಕ್ಕೆ ಪ್ರದರ್ಶಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Teachers Recruitment: ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್; ಶೀಘ್ರದಲ್ಲೇ 19,000 ಶಿಕ್ಷಕರ ನೇಮಕಾತಿ

ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್; ಶೀಘ್ರದಲ್ಲೇ 19,000 ಶಿಕ್ಷಕರ ನೇಮಕಾತಿ

Teachers Recruitment: ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತಿಳಿಸಿದ್ದಾರೆ.

Suhas Shetty Murder: ಸುಹಾಸ್‌ ಶೆಟ್ಟಿ ಕೊಲೆ 8 ಆರೋಪಿಗಳ ಬಂಧನ, ಕೋಮು ವಿರೋಧಿ ಕಾರ್ಯಪಡೆ ರಚನೆ: ಜಿ ಪರಮೇಶ್ವರ

8 ಆರೋಪಿಗಳ ಬಂಧನ, ಕೋಮು ವಿರೋಧಿ ಕಾರ್ಯಪಡೆ ರಚನೆ: ಜಿ ಪರಮೇಶ್ವರ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 5 ತಂಡಗಳನ್ನು ರಚಿಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಸದ್ಯ ಬಲೆಗೆ 8 ಮಂದಿ ಶಂಕಿತ ಆರೋಪಿಗಳು ಬಿದ್ದಿದ್ದಾರೆ. ಬಂಧಿತ 8 ಮಂದಿಯನ್ನು ಅಬ್ದುಲ್ ಸಫ್ವಾನ್, ನಿಯಾಜ್, ಎಂಡಿ ಮುಜಾಮಿಲ್, ಕಲಂದರ್ ಶಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಮತ್ತು ರಂಜಿತ್ ಎಂದು ಗುರುತಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು.

Sirsi News: ಮೇ 10, 11ರಂದು ಎರಡು ದಿನಗಳ ಕಾಲ 16ನೇ ವರ್ಷದ ಕೃಷಿ ಜಯಂತಿ, ಶ್ರೀ ಲಕ್ಷಿನೃಸಿಂಹ ರಥೋತ್ಸವ

ಎರಡು ದಿನಗಳ ಕಾಲ 16ನೇ ವರ್ಷದ ಕೃಷಿ ಜಯಂತಿ, ಶ್ರೀ ಲಕ್ಷಿನರಸಿಂಹ ರಥೋತ್ಸವ

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಸ್ವರ್ಣ ವಲ್ಲೀ ಕೃಷಿ ಪ್ರತಿಷ್ಠಾನ, ಸೋಂದಾ ಇವರ ಸಹಯೋಗದಲ್ಲಿ 16ನೇ ವರ್ಷದ ಕೃಷಿ ಜಯಂತಿಯನ್ನು ಶ್ರೀ ಲಕ್ಷಿನೃಸಿಂಹ ರಥೋತ್ಸವವನ್ನು ಮೇ 10ಮತ್ತು 11ರಂದು ಎರಡು ದಿನಗಳ ಕಾಲ ನಡೆಸ ಲಾಗುವುದು

Road Accident: ಆಟೋಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವು; ಮೂವರ ಸ್ಥಿತಿ ಗಂಭೀರ

ಆಟೋಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವು

Road Accident: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿಯಲ್ಲಿ ದುರ್ಘಟನೆ ನಡೆದಿದೆ. ಆಟೋಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

G Parameshwara: ಜಿ. ಪರಮೇಶ್ವರ್‌ ಮುಂದಿನ ಸಿಎಂ: ಹಾಗಂದ ಗೊರವಯ್ಯ ಯಾರು?

ಜಿ. ಪರಮೇಶ್ವರ್‌ ಮುಂದಿನ ಸಿಎಂ: ಹಾಗಂದ ಗೊರವಯ್ಯ ಯಾರು?

"ತುಮಕೂರಿನ ಪರಮೇಶ್ವರನು, ಮುಂದೊಂದು ದಿನ ಈ ರಾಜ್ಯ ಪರಮೇಶ್ವರನು (G Parameshwara) ಆಗುವನು" ಎಂದು ಗೊರವಯ್ಯಗಳ ತಂಡ ನುಡಿಯಿತು. ಈ ಸಂದರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್‌ ವಕ್ತಾರ ನಿತೀಶ್‌ ರಾಜ್‌ ಮೌರ್ಯ ಅವರೇ ಗೊರವಯ್ಯಗಳ ತಂಡದ ಜೊತೆ ಸೇರಿ ಈ ನುಡಿಯನ್ನು ಆಡಿದ್ದಾರೆ.

Inner Reservation Survey: ಒಳಮೀಸಲಾತಿ ಸಮೀಕ್ಷೆ : ಪರಿಶಿಷ್ಟ ಜಾತಿ ಬಲಗೈ ಪರಯ ಸಮುದಾಯದ ಜಾತಿ ನೋಂದಣಿಗೆ ಜನ ಜಾಗೃತಿ ಅಭಿಯಾನ

ಜಾತಿ ನೋಂದಣಿಗೆ ಜನ ಜಾಗೃತಿ ಅಭಿಯಾನ

ಪರಿಶಿಷ್ಟ ಜಾತಿಗಳಿಗೆ ಸಂವಿಧಾನಿಕವಾಗಿ ಒಳ ಮೀಸಲಾತಿ ವರ್ಗಿಕರಣ ಮಾಡುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವುದರಿಂದ ಇದೀಗ ನಡೆಯುತ್ತಿರುವ ಸಮೀಕ್ಷೆಗೆ ಸಂವಿಧಾನಿಕ ಮಾನ್ಯತೆ ಇದೆ. ಒಟ್ಟು 101 ಉಪ ಜಾತಿಗಳ ಪೈಕಿ ಬಲಗೈ ಪಂಗಡದ 32 ಉಪ ಜಾತಿಗಳಲ್ಲಿ ಪ್ರಮುಖವಾಗಿ "ಹೊಲಯ", "ಛಲವಾದಿ", "ಮಾಲ" ಮುಂತಾ ದವುಗಳು ಕೇಳಿಬರುತ್ತಿವೆ