ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Gudibande News: ಗುಡಿಬಂಡೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

ಗುಡಿಬಂಡೆಯಲ್ಲಿ ಕ.ಸಾಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

ಕನ್ನಡಿಗರ ವಿಶಾಲ ಮನೋಭಾವದ ನಡುವೆಯೂ ನಮ್ಮ ಭಾಷೆಯ ಅಸ್ಮಿತೆಯನ್ನು ಮರೆಯಬಾರದು. ಇಂದಿನ ದಿನಗಳಲ್ಲಿ ಪರಭಾಷೆಗಳನ್ನು ಕಲಿಯುವುದು ಅನಿವಾರ್ಯವಿರಬಹುದು, ಆದರೆ ಮಾತೃಭಾಷೆ ಯನ್ನು ಮರೆಯುವುದು ಸರಿಯಲ್ಲ. ಕನ್ನಡದಲ್ಲಿರುವ ಆಪ್ತತೆ ಬೇರೆಲ್ಲೂ ಸಿಗದು. 'ಮಮ್ಮಿ-ಡ್ಯಾಡಿ' ಸಂಸ್ಕೃತಿಯ ವ್ಯಾಮೋಹ ಬಿಟ್ಟು ಅಪ್ಪ-ಅಮ್ಮ ಎಂದು ಕರೆಯುವ ಮೂಲಕ ಸಂಸ್ಕೃತಿಯನ್ನು ಉಳಿಸಬೇಕು

Shidlaghatta News: 112 ವರ್ಷಗಳ ಐತಿಹಾಸಿಕ ಪಯಣ: ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನ ಆಚರಣೆ

ಕನ್ನಡದ ಬೆಳವಣಿಗೆಗೆ ಸಮೂಹ ಪ್ರಯತ್ನ ಅಗತ್ಯ: ಕೊಡಿ ರಂಗಪ್ಪ

ಕಸಾಪ ತಾಲೂಕು ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ ಮಾತನಾಡಿ, ಸ್ವಾತಂತ್ರ್ಯಾನಂತರ ಮೈಸೂರು ಆಡಳಿತವನ್ನು ಬಲಪಡಿಸಲು ರಾಜರು ಹಾಗೂ ಜನಪ್ರತಿನಿಧಿಗಳು ಒಟ್ಟಾಗಿ ಕಾರ್ಯ ನಿರ್ವಹಿಸಿದ ಪರಿಣಾಮವಾಗಿ ನೀರಾವರಿ ಸೌಲಭ್ಯಗಳು, ಅಣೆಕಟ್ಟುಗಳು ಹಾಗೂ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳು ಸ್ಥಾಪನೆಯಾದವು ಎಂದು ಹೇಳಿದರು.

Shidlaghatta News: ಶ್ರೀರಾಮ ಶೋಭಾಯಾತ್ರೆಗೆ ಭರ್ಜರಿ ಸಿದ್ಧತೆ: ಜೂನ್ 7ರಂದು ಆಯೋಜನೆ

ಶ್ರೀರಾಮ ಶೋಭಾಯಾತ್ರೆಗೆ ಭರ್ಜರಿ ಸಿದ್ಧತೆ: ಜೂನ್ 7ರಂದು ಆಯೋಜನೆ

ಜೂನ್ 7ರಂದು ನಡೆಯಲಿರುವ ಈ ಶೋಭಾಯಾತ್ರೆಯನ್ನು ಅದ್ದೂರಿಯಾಗಿ ನಡೆಸಲು ಸಮಿತಿ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಯಾತ್ರೆ ಸಂಚರಿಸಲಿದೆ. ಧಾರ್ಮಿಕ ಘೋಷಣೆಗಳು ಹಾಗೂ ವಿವಿಧ ಕಲಾತಂಡಗಳ ಪ್ರದರ್ಶನಗಳು ಯಾತ್ರೆಯ ವಿಶೇಷ ಆಕರ್ಷಣೆ ಯಾಗಲಿವೆ

Chikkaballapur News: 112 ವರ್ಷಗಳ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸ್ವಾಭಿಮಾನದ ಪ್ರತೀಕ: ಬಿ.ಎಂ.ಪ್ರಮೀಳ ಅಭಿಮತ

112 ವರ್ಷಗಳ ಇತಿಹಾಸವಿರುವ ಕ.ಸಾ.ಪ ಕನ್ನಡಿಗರ ಸ್ವಾಭಿಮಾನದ ಪ್ರತೀಕ

ಸರ್.ಮಿರ್ಜಾ ಇಸ್ಮಾಯಿಲ್ ಅವರು ಈಗಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಕಛೇರಿ ಇರುವ ಜಾಗ ವನ್ನು ಪರಿಷತ್ತಿಗೆ ನೀಡುವ ಮೂಲಕ ನಾಡಿನ ಹೆಮ್ಮೆಯ ಪರಿಷತ್ತಿನ ಬೆಳವಣಿಗೆಗೆ ಶ್ರಮಿಸಿದರು. 1938 ರಲ್ಲಿ  ಕರ್ನಾಟಕ ಸಾಹಿತ್ಯ ಪರಿಷತ್ತು ಎಂಬ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಹೆಸರಿಸ ಲಾಯಿತು ಎಂದರು.

ನಾಟಕೀಯ ಬೆಳವಣಿಗೆ ಬಳಿಕ ಕೊನೆಗೂ ಶೃಂಗೇರಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಜೀವರಾಜ್; ಜರ್ನಿ ಹೇಗಿತ್ತು?

ಶೃಂಗೇರಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಜೀವರಾಜ್

Sringeri MLA Row: ಶೃಂಗೇರಿ ಶಾಸಕರಾಗಿ ಘೋಷಿಸಲ್ಪಟ್ಟ ಬಿಜೆಪಿಯ ಡಿ.ಎನ್‌. ಜೀವರಾಜ್‌ ವಿಧಾನಸಭೆ ಚುನಾವಣೆ ನಡೆದು ಸುಮಾರು ಎರಡೂವರೆ ವರ್ಷ ಕಳೆದು ಇದೀಗ ಪ್ರಮಾಣ ವಚನ ಸ್ವೀಕರಿಸಿದರು. ಜೀವರಾಜ್ ಬುಧವಾರ (ಮೇ 6) ಶೃಂಗೇರಿ ಶಾರದಾಂಬೆ ಹೆಸರಲ್ಲಿ ವಿಧಾನ ಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Chikkaballapur News: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಧನೆ ಎಂಬುದು ಭವಿಷ್ಯದ ಸೋಪಾನವಾಗಬೇಕು: ಸಂದೀಪ್ ರೆಡ್ಡಿ ಅಭಿಮತ

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಧನೆ ಎಂಬುದು ಭವಿಷ್ಯದ ಸೋಪಾನವಾಗಬೇಕು

ಪ್ರೀತಿಯ ವಿದ್ಯಾರ್ಥಿಗಳೇ ನೀವು ಪಡೆದಿರುವ ಉತ್ತಮ ಅಂಕಗಳೇ ಭವಿಷ್ಯವಲ್ಲ. ವಿದ್ಯೆಯ ಜತೆಗೆ ವಿನಯವನ್ನೂ ಬೆಳೆಸಿಕೊಳ್ಳಿ.ನಮ್ಮ ಜೊತೆಗಿರುವ ಯಾರ ಬಗ್ಗೆಯೂ ಅಸೂಯೆ ಬೇಡ ಗುರು ಹಿರಿಯರ ಬಗ್ಗೆ ಹೆತ್ತ-ತಂದೆ ತಾಯಿ ಬಗ್ಗೆ ವ್ಯಾಸಂಗ ಮಾಡಿದ ಶಾಲೆಯ ಬಗ್ಗೆ ಹೆಮ್ಮೆ ಇರಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿ ಸಂದೀಪ ಬಿ ರೆಡ್ಡಿ ಮನನ ಮಾಡಿದರು.

Chikkaballapur News: ಭಾಷೆ ಸಾಹಿತ್ಯ ಸಂಸ್ಕೃತಿ ಬೆಳವಣಿಗೆಗೆ ಸಾಂಸ್ಥಿಕ ಚೌಕಟ್ಟಿನ ಪ್ರತಿರೂಪ ಕಸಾಪ

ಭಾಷೆ ಸಾಹಿತ್ಯ ಸಂಸ್ಕೃತಿ ಬೆಳವಣಿಗೆಗೆ ಸಾಂಸ್ಥಿಕ ಚೌಕಟ್ಟಿನ ಪ್ರತಿರೂಪ ಕಸಾಪ

ಕರ್ನಾಟಕ ಸಾಹಿತ್ಯ ಪರಿಷತ್ತು ರೂಪುಗೊಳ್ಳಲು ದಿವಾನರಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ, ಸರದಾರ್ ಎಂ.ಕಾಂತರಾಜೇ ಅರಸ್, ಎಚ್.ವಿ.ನಂಜುಂಡಯ್ಯ, ಎಂ.ಶ್ಯಾಮರಾವ್, ಎಂ.ಎಸ್. ಕುಟ್ಟಣ್ಣ, ಎಂ.ಕೆ.ವೆಂಕಟಕೃಷ್ಣಯ್ಯ, ಎಚ್.ಲಿಂಗರಾಜೇ ಅರಸ್, ಕರ್ಪೂರ ಶ್ರೀನಿವಾಸ ರಾವ್, ಬಿ.ಕೃಷ್ಣಪ್ಪ, ಕವಿ ತಿಲಕಶಾಸ್ತ್ರಿ, ಮುದವೀಡು ಕೃಷ್ಣರಾಯರು, ವಾಸುದೇವಾಚಾರ್, ಆಲೂರು ವೆಂಕಟರಾಯರು ಹೀಗೆ ಹಲವರು ಕಾರಣರಾಗಿದ್ದಾರೆ

ಬೆಂಗಳೂರಿನಲ್ಲಿ ಮನೆಯ ಬಾಡಿಗೆ ದರ ಸಿಕ್ಕಾಪಟ್ಟೆ ಏರಿಕೆ; ಅಮೆರಿಕನ್ ಮಹಿಳೆಯಿಂದ ಆಕ್ರೋಶ

ಬೆಂಗಳೂರಿನಲ್ಲಿ ಮನೆಯ ಬಾಡಿಗೆ ದರ ಏರಿಕೆ ಬಗ್ಗೆ ಕಿಡಿಕಾರಿದ ಅಮೆರಿಕನ್ ಮಹಿಳೆ

Viral Video: ಅಮೆರಿಕ ಮೂಲದ ಮಹಿಳೆಯೊಬ್ಬರು ಬೆಂಗಳೂರಿನ‌ ಬಾಡಿಗೆ ದರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆಯೊಂದು ನಡೆದಿದೆ.‌ ಇಲ್ಲಿನ‌ ಬಾಡಿಗೆ ವ್ಯವಸ್ಥೆ ಬಗ್ಗೆ ಅವರು ಅಸಮಾಧಾನ ಹೊರಹಾಕಿದ್ದು ಮುಂದಿನ ದಿನದಲ್ಲಿಈ ದರ ದುಪ್ಪಟ್ಟು ಆಗಬಹುದು ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮೂವರು ಹಿರಿಯ ಐಪಿಎಸ್‌, ನಾಲ್ವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಮೂವರು ಹಿರಿಯ ಐಪಿಎಸ್‌, ನಾಲ್ವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

Karnataka Governmnet: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ನಾಲ್ವರು ಐಎಎಸ್‌ ಮತ್ತು ಮೂವರು ಐಪಿಎಸ್ ಹಿರಿಯ ಅಧಿಕಾರಿಗಳ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಚೇತನ್ ಸಿಂಗ್ ರಾಥೋಡ್, ಸಂದೀಪ್ ಪಾಟೀಲ್, ನಿತೀಶ್‌ ಕೆ., ಮುಹಮ್ಮದ್‌ ಇಕ್ರಾಮುಲ್ಲಾ ಶರೀಫ್‌, ಡಾ. ಚೇತನ್ ಸಿಂಗ್ ರಾಥೋಡ್, ಸಂದೀಪ್ ಪಾಟೀಲ್ ಮತ್ತು ಅನುಪಮ್ ಅಗರ್ವಾಲ್ ವರ್ಗಾವಣೆಗೊಂಡ ಅಧಿಕಾರಿಗಳು.

ಬಿಟ್‌ಡೆಲ್ಟಾ ಇಂಡಿಯಾ ವಿಶ್ವದ ಅತಿದೊಡ್ಡ ಕ್ರಿಪ್ಟೋ ಮಾರುಕಟ್ಟೆಗಾಗಿ ಸಾಂಸ್ಥಿಕ ದರ್ಜೆಯ ವರ್ಚುವಲ್ ಡಿಜಿಟಲ್ ಅಸೆಟ್ (VDA) ಮೂಲಸೌಕರ್ಯ ಪ್ರಾರಂಭ

ಸಾಂಸ್ಥಿಕ ದರ್ಜೆಯ ವರ್ಚುವಲ್ ಡಿಜಿಟಲ್ ಅಸೆಟ್ ಮೂಲಸೌಕರ್ಯ ಪ್ರಾರಂಭ

ಭಾರತವು ಜಾಗತಿಕವಾಗಿ ಅತಿದೊಡ್ಡ ಮತ್ತು ವೇಗವಾಗಿ ಬೆಳೆಯುತ್ತಿರುವ ವರ್ಚುವಲ್ ಡಿಜಿಟಲ್ ಅಸೆಟ್ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲ್ಲಿ ಅಂದಾಜು 11.9 ಕೋಟಿ ನೋಂದಾಯಿತ ಬಳಕೆದಾರ ರಿದ್ದು, ಎರಡನೇ ಮತ್ತು ಮೂರನೇ ಹಂತದ ನಗರಗಳಿಂದ ಹೆಚ್ಚಿನ ಭಾಗವಹಿಸುವಿಕೆ ಕಂಡುಬರುತ್ತಿದೆ. ಮಾರುಕಟ್ಟೆ ವಿಕಸನಗೊಳ್ಳುತ್ತಿದ್ದಂತೆ, ಬಳಕೆದಾರರು ಕೇವಲ ವ್ಯವಹಾರದ ಲಭ್ಯತೆಗಿಂತ ಹೆಚ್ಚಾಗಿ ವೇದಿಕೆಯ ವಿಶ್ವಾಸಾರ್ಹತೆ, ಭದ್ರತೆ ಮತ್ತು ಆಡಳಿತಕ್ಕೆ ಆದ್ಯತೆ ನೀಡುತ್ತಿದ್ದಾರೆ.

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ: ಸಿದ್ದರಾಮಯ್ಯ

CM Siddaramaiah: ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ. ಎಡಗೈಗೆ ಶೇ. 5.25, ಬಲಗೈಗೆ ಶೇ. 5.25 ಹಾಗೂ ಇತರ ಉಪಜಾತಿಗಳಿಗೆ ಶೇ. 4.5ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಲ್ಲಿ ಲವ್‌, ಮ್ಯಾರೇಜ್‌, ದೋಖಾ ಪ್ರಕರಣ; ಗರ್ಭಿಣಿ ಪತ್ನಿಯನ್ನು ಬಿಟ್ಟು ಮತ್ತೊಂದು ಮದುವೆಗೆ ಮುಂದಾದ ಪತಿ

ಗರ್ಭಿಣಿ ಪತ್ನಿಯನ್ನು ಬಿಟ್ಟು ಮತ್ತೊಂದು ಮದುವೆಗೆ ಮುಂದಾದ ಖತರ್ನಾಕ್‌ ಪತಿ

Tumkur News: ಗರ್ಭಿಣಿ ಪತ್ನಿಯನ್ನು ಬಿಟ್ಟು ಪತಿ ಮತ್ತೊಂದು ಮದುವೆಯಾಗಲು ಹೊರಟು ಸಿಕ್ಕಿಬಿದ್ದಿರುವ ಘಟನ ತಮಕೂರಿನಲ್ಲಿ ನಡೆದಿದೆ. ತುಮಕೂರು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿರುವ ಸಂತ್ರಸ್ತೆ ಜಾತಿ ನಿಂದನೆ, ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಬೆದರಿಕೆಯ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.

IPL 2026: ʻಎಂಎಲ್‌ಎಗಳ ಉಚಿತ ಟಿಕೆಟ್‌ ವ್ಯಾಮೋಹದಿಂದ ಬೆಂಗಳೂರಿಗೆ ಫೈನಲ್‌ ಆತಿಥ್ಯ ತಪ್ಪಿದೆʼ-ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ!

IPL 2026: ಕ್ರೀಡಾಂಗಣ ಅಭಿಮಾನಿಗಳಿಗಾಗಿ, ವಿಐಪಿಗಳಿಗಲ್ಲ: ನಿಖಿಲ್!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದ ಆತಿಥ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಕೈ ತಪ್ಪಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಯುವ ನಾಯಕ ನಿಖಿಲ್‌ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಎಲ್‌ಎಗಳ ಉಚಿತ ಟಿಕೆಟ್‌ ವ್ಯಾಮೋಹದಿಂದ ಬೆಂಗಳೂರಿಗೆ ಫೈನಲ್‌ ಪಂದ್ಯದ ಆತಿಥ್ಯ ಕೈತಪ್ಪಿದೆ ಎಂದು ಆರೋಪ ಮಾಡಿದ್ದಾರೆ.

IPL 2026: ಬೆಂಗಳೂರಿಗೆ ಫೈನಲ್‌ ಪಂದ್ಯದ ಆತಿಥ್ಯ ಕೈ ತಪ್ಪಿದ ಬಗ್ಗೆ ಡಿಕೆ ಶಿವಕುಮಾರ್‌ ಪ್ರತಿಕ್ರಿಯೆ!

ಬೆಂಗಳೂರಿಗೆ ಫೈನಲ್‌ ಆತಿಥ್ಯ ಕೈತಪ್ಪಿದ ಬಗ್ಗೆ ಡಿಕೆಶಿ ಪ್ರತಿಕ್ರಿಯೆ!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದ ಆತಿಥ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಕೈ ತಪ್ಪಿದೆ. ಈ ಬಗ್ಗೆ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಜೆಡಿಎಸ್‌ ಯುವ ನಾಯಕ ನಿಖಿಲ್‌ಕುಮಾರ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯಪುರದಲ್ಲಿ 3 ವರ್ಷದ ಬಾಲಕ ಮೇಲೆ ದಾಳಿ ಮಾಡಿ 30 ಮೀಟರ್‌ ದೂರ ಎಳೆದೊಯ್ದ ಬೀದಿ ನಾಯಿ; ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆ

3 ವರ್ಷದ ಬಾಲಕನನ್ನು 30 ಮೀಟರ್‌ ದೂರ ಎಳೆದೊಯ್ದ ಬೀದಿ ನಾಯಿ

Stray Dog Attacks: ವಿಜಯಪುರದಲ್ಲಿ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಘಟನೆಯ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಬಾಲಕನ ಮೇಲೆ ಬೀದಿ ನಾಯಿ ಆಕ್ರಮಣ ಮಾಡುತ್ತಿರುವುದು ಕಂಡು ಬಂದಿದೆ.

Madhuri Dikshit: ಮಾಧುರಿ ದೀಕ್ಷಿತ್ ಅವರೊಂದಿಗೆ ಎಂಎಸ್‌ಡಿ ಇಂಡಿಯಾದಿಂದ ದೇಶವ್ಯಾಪಿ ಸರ್ವೈಕಲ್ ಕ್ಯಾನ್ಸರ್ ಜಾಗೃತಿ ಅಭಿಯಾನ ಆರಂಭ

ದೇಶವ್ಯಾಪಿ ಸರ್ವೈಕಲ್ ಕ್ಯಾನ್ಸರ್ ಜಾಗೃತಿ ಅಭಿಯಾನ ಆರಂಭ

ಸರ್ವೈಕಲ್ ಕ್ಯಾನ್ಸರ್ ಭಾರತದಲ್ಲಿನ ಮಹಿಳೆಯರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಕ್ಯಾನ್ಸರ್‌ ಗಳಲ್ಲಿ ಒಂದಾಗಿದೆ..ಸಮಯಕ್ಕೆ ಸರಿಯಾಗಿ ವೈದ್ಯರ ಸಲಹೆ ಪಡೆಯುವುದು ಮತ್ತು ಸರಿಯಾದ ನಿರೋಧಾತ್ಮಕ ಕ್ರಮಗಳನ್ನು ಅನುಸರಿಸುವುದರಿಂದ ಈ ರೋಗವನ್ನು ಬಹುಪಾಲು ತಡೆಯಬಹುದು, ಆದರೂ ಭಾರತದಲ್ಲಿ ಪ್ರತಿ ಏಳು ನಿಮಿಷಕ್ಕೊಮ್ಮೆ ಸುಮಾರು ಒಬ್ಬ ಮಹಿಳೆ ಸಾವನ್ನಪ್ಪುತ್ತಾರೆ.

ಉಪ ಚುನಾವಣೆ ವೇಳೆ ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿಯಾಗಿ ಬದಲಾಯಿಸಿದ ಸರ್ಕಾರ: ಬಿ.ವೈ. ವಿಜಯೇಂದ್ರ ವಾಗ್ದಾಳಿ

15 ದಿನ ಬಾಗಲಕೋಟೆಯಲ್ಲಿ ಸಿಎಂ ವಾಸ್ತವ್ಯ ಇದ್ದರೇಕೆ? ವಿಜಯೇಂದ್ರ

BY Vijayendra: ಗೃಹಲಕ್ಷ್ಮಿ ಯೋಜನೆ ಇವತ್ತು ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪ ಅವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು ಒಳ್ಳೆಯ ಯೋಜನೆ ಕೊಟ್ಟಿದ್ದಾರೆ. ಆದರೆ ಗೃಹಲಕ್ಷ್ಮಿ ಇವತ್ತು ಚುನಾವಣಾ ಲಕ್ಷ್ಮಿಯಾಗಿರುವುದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೇ 9ರ ಬಿಎಸ್‍ವೈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಹತ್ವದ ಬದಲಾವಣೆ; ವಿಜಯೇಂದ್ರ ಕೊಟ್ರು ಬಿಗ್‌ ಅಪ್‌ಡೇಟ್‌

ಬಿಎಸ್‍ವೈ ಅಭಿಮಾನೋತ್ಸವ; ಬೆಳಗ್ಗೆ ಬದಲು ಮಧ್ಯಾಹ್ನದ ಬಳಿಕ ಕಾರ್ಯಕ್ರಮ

BSY Abhimanotsava: ಮೇ 9ರಂದು ಬೆಳಗ್ಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೂತನ ಸಿಎಂ ಪ್ರಮಾಣವಚನ ನಡೆಯಲಿದೆ. ಆದ್ದರಿಂದ ಮಾಜಿ ಮುಖ್ಯಮಂತ್ರಿ ಬಿಎಸ್‍ವೈ ಅಭಿಮಾನೋತ್ಸವವು ಬೆಳಗ್ಗೆಯ ಬದಲಾಗಿ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ತಿಂಗಳ ಅಂತರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಪ್ರಧಾನಿ ಮೋದಿ; ಮೇ 10ರಂದು ಬೆಂಗಳೂರಿಗೆ ಭೇಟಿ

ಮೇ 10ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ

Narendra Modi: ಕಳೆದ ತಿಂಗಳು ಮಂಡ್ಯ ಜಿಲ್ಲೆಗೆ ಆಗಮಿಸಿ ಆದಿ ಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರಮೈಕ್ಯ ಮಂದಿರವನ್ನು ಉದ್ಘಾಟಿಸಿದ್ದ ಪ್ರಧಾನಿ ನರೇಂದ್ರ ಮೋದಿ ತಿಂಗಳ ಅಂತರದಲ್ಲಿ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೇ 10ರಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಗಂಭೀರತೆಗೆ ಹೊರಳಿದ ಪಾಲಿಕೆ ವಿಭಜನೆ ವಿವಾದ

ಗಂಭೀರತೆಗೆ ಹೊರಳಿದ ಪಾಲಿಕೆ ವಿಭಜನೆ ವಿವಾದ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆ ವಿಷಯ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೋರಾಟಕ್ಕೂ ಧಾರವಾಡ ಸನ್ನದ್ಧವಾಗುತ್ತಿದೆ. ಬೃಹತ್ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನಾಗಿಸಲು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಏಕಪಕ್ಷಿಯವಾಗಿ ತೆಗೆದುಕೊಂಡ ನಿರ್ಣಯಕ್ಕೆ ತೀವ್ರ ಆಕ್ರೋಶ ಧಾರವಾಡದಲ್ಲಿ ವ್ಯಕ್ತವಾಗುತ್ತಿದೆ. ಅಲ್ಲದೇ ಈಗಾಗಲೇ ಹೋರಾಟದ ರೂಪುರೇಷೆ ಸಹ ಸಿದ್ಧಗೊಳ್ಳುತ್ತಿವೆ.

ಕ್ರಿಮಿನಲ್ ಸಂಚಿನಿಂದ ಶೃಂಗೇರಿಯಲ್ಲಿ ಬಿಜೆಪಿಗೆ ಗೆಲುವು; ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ

ಸಿಎಂ ಬದಲಾವಣೆ ವಿಚಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

CM Siddaramaiah: ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ಅವರು ತಿಳಿಸಿದ್ದಾರೆ.

ಶೃಂಗೇರಿ  ಶಾಸಕರಾಗಿ ಡಿ ಎನ್ ಜೀವರಾಜ್ ಇಂದು ಪ್ರಮಾಣವಚನ

ಶೃಂಗೇರಿ ಶಾಸಕರಾಗಿ ಡಿ ಎನ್ ಜೀವರಾಜ್ ಇಂದು ಪ್ರಮಾಣವಚನ

ಶೃಂಗೇರಿ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾಗಿ ಡಿ ಎನ್ ಜೀವರಾಜ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಲು ಸಭಾಧ್ಯಕ್ಷ ಯುಟಿ ಖಾದರ್ ಸಮಯ ನಿಗದಿಪಡಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರಕ್ಕೆ ಸಂಬಂಧಿಸಿದಂತೆ ಸ್ವೀಕರ್‌ ವಿರುದ್ಧ ಬಿಜೆಪಿ ವಿಳಂಬ ಆರೋಪ ಮಾಡಿತ್ತು.

ಆಟೋಮೊಬೈಲ್‌ ಐಕಾನ್ ಟಾಟಾ ಏಸ್ ಗೆ 21ರ ಸಂಭ್ರಮ

ಆಟೋಮೊಬೈಲ್‌ ಐಕಾನ್ ಟಾಟಾ ಏಸ್ ಗೆ 21ರ ಸಂಭ್ರಮ

ನಗರದೊಳಗಿನ ಸಾಗಣೆ ಮತ್ತು ಕೊನೆಯ ಹಂತದ ಸಾಗಣೆ ಅಗತ್ಯಗಳನ್ನು ಪೂರೈಸಲು ಈ ವಾಹನವು ಸತತವಾಗಿ ವಿಕಸನ ಹೊಂದುತ್ತಾ ಬಂದಿದೆ. ಹೆಚ್ಚಿನ ಹೊರೆ ಹೊರುವ ಸಾಮರ್ಥ್ಯಕ್ಕೆ ತಕ್ಕಂತೆ ಏಸ್ ನ ಪ್ರಸ್ತುತತೆಯನ್ನು ಸಾರುವ ಈ ಏಸ್ ಗೋಲ್ಡ್+ ಎಕ್ಸ್ಎಲ್ ಅನ್ನು ಇಂದಿನ ಉದ್ಯಮಿಗಳಿಗೆ ಹೆಚ್ಚಿನ ದಕ್ಷತೆ, ವಿಶ್ವಾಸಾರ್ಹತೆ ಮತ್ತು ಸೊಗಸಾದ ಮಾಲೀಕತ್ವದ ಅನುಭವ ನೀಡುವಂತೆ ವಿನ್ಯಾಸಗೊಳಿಸ ಲಾಗಿದೆ" ಎಂದು ಹೇಳಿದರು.

ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ಅರೆಸ್ಟ್ ವಾರೆಂಟ್

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ಅರೆಸ್ಟ್ ವಾರೆಂಟ್

ಪೌರಕಾರ್ಮಿಕರ ವಿರುದ್ಧ ಜಾತಿನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿ ಮಾಡಿದೆ. ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿತ್ತು. ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದಾರೆ.

Loading...