ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chikkaballapur News: 36 ಗಂಟೆಗಳ ನೆಕ್ಸೋರಾ ಹ್ಯಾಕಥಾನ್ ನಲ್ಲಿ ನಾಗಾರ್ಜುನ ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ

ನೆಕ್ಸೋರಾ ಹ್ಯಾಕಥಾನ್: ನಾಗಾರ್ಜುನ ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ

ಎರಡು ದಿನಗಳ ಕಾಲ ನಡೆದ ಟೆಕ್ ಸ್ಪರ್ಧೆಯಲ್ಲಿ ಸುಮಾರು 70 ತಂಡಗಳು ಭಾಗವಹಿಸಿ ದ್ದವು. 70 ತಂಡಗಳ ಪೈಕಿ ನಾಗಾರ್ಜುನ ಕಾಲೇಜಿನ ಸಿ ಎಸ್ ಇ ವಿಭಾಗದ ತಂಡವು ಸತತ 36 ಗಂಟೆಗಳ ಕಾಲ ಸತತ ಪ್ರಯತ್ನ ನಡೆಸಿ ಜಯ ಸಾಧಿಸಿದೆ. ಡಾ.ಬಾಬಾ ಫಕ್ರುದ್ದೀನ್ ಅಲಿ ತಂಡಕ್ಕೆ ಮಾರ್ಗದರ್ಶನ ನೀಡಿದ್ದರು.

Gauribidanur News: ಅದ್ದೂರಿ ಅಂಬೇಡ್ಕರ್ ಜಯಂತಿಗೆ ನಿರ್ಧರಿಸಿದ ರವಿ ನಾರಾಯಣ ರೆಡ್ಡಿ ಗುಂಪು

ಅದ್ದೂರಿ ಅಂಬೇಡ್ಕರ್ ಜಯಂತಿಗೆ ನಿರ್ಧಾರ

ತಾಲೂಕು ಘಟಕದ ಅಧ್ಯಕ್ಷರನ್ನು ಒಳಗೊಂಡ ಸಂಸದ ಡಾ.ಕೆ.ಸುಧಾಕರ್ ಬೆಂಬಲಿತ ಗುಂಪು ಇತ್ತೀಚಿಗೆ ಸರಳವಾಗಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಿತ್ತು, ಆದರೆ ಅವರಿಗಿಂತ ನಾವು ಅದ್ಧೂರಿಯಾಗಿ ಅಂಬೇಡ್ಕರ್ ಜಯಂತಿ ಆಚರಿಸಿ ಸಡ್ಡು ಹೊಡೆಯ ಬೇಕು ಎಂದು ಬಿಜೆಪಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಎನ್.ಎಂ.ರವಿನಾರಾಯಣ ರೆಡ್ಡಿ ಬೆಂಬಲಿತರ ಗುಂಪು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಏ.30ರಿಂದ ಮೇ.13ರ ತನಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ: 5,353 ನೋಂದಣಿ

30ರಿಂದ ಮೇ.13ರ ತನಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ

ಏ.30ರಿಂದ ಮೇ 13 ರವರೆಗೆ ನಡೆಯುವ ದ್ವಿತೀಯ ಪಿಯುಸಿಯ ಪರೀಕ್ಷೆ-2ಗಾಗಿ ಜಿಲ್ಲೆಯಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ಶಿಡ್ಲಘಟ್ಟ ಮತ್ತು ಚಿಂತಾಮಣಿ ನಗರಗಳಲ್ಲಿ ತಲಾ 1 ರಂತೆ ಒಟ್ಟು 5 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ-2ನ್ನು ಬರೆಯಲು ಜಿಲ್ಲೆಯಲ್ಲಿ ಒಟ್ಟು 5353 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ.

Women's Reservation Bill: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ಪಕ್ಷದ ವಿರುದ್ಧ ಗುಡಿಬಂಡೆಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ಸಮಾನ ಅವಕಾಶ ನೀಡುವ ಉದ್ದೇಶದಿಂದ ಈ ಕ್ರಾಂತಿಕಾರಿ ಮಸೂದೆಯನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಆದರೆ ಇದನ್ನು ವಿರೋಧಿ ಸುವ ಮೂಲಕ ವಿರೋಧ ಪಕ್ಷಗಳು ಮಹಿಳೆಯರ ಪ್ರಗತಿಗೆ ಅಡ್ಡಿಪಡಿಸುತ್ತಿವೆ. ಆದರೆ ಚುನಾವಣೆ ಗಳಲ್ಲಿ ಮಾತ್ರ ತಾವು ಮಹಿಳೆಯರ ಪರ ಕೆಲಸ ಮಾಡುತ್ತೇವೆ.

ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಯ ಮಹಿಳಾ ಉದ್ಯೋಗಿ ನಿಗೂಢ ಸಾವು; ಕೊಳೆತ ಸ್ಥಿತಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಯ ಮಹಿಳಾ ಉದ್ಯೋಗಿ ನಿಗೂಢ ಸಾವು

Bengaluru Woman Death Case: ಬೆಂಗಳೂರು ನಗರದ ಆಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆ ಮೂಲತಃ ಜಾರ್ಖಂಡ್‌ನ ಧನಬಾದ್ ಸಮೀಪದ ಹಿರಾಪುರ ನಿವಾಸಿ ಎಂದು ತಿಳಿದುಬಂದಿದೆ. ಮನೆಯಿಂದ ಭಾರಿ ದುರ್ನಾತ ಬರುತ್ತಿದ್ದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಮಹಿಳೆ ಸಾವು ಪ್ರಕರಣ ಬೆಳಕಿಗೆ ಬಂದಿದೆ.

KAS officers Promotion: ಶೇ.33ರಷ್ಟು ಕೆಎಎಸ್‌ ಅಧಿಕಾರಿಗಳಿಗೆ ಪದೋನ್ನತಿ ಶೀಘ್ರ: ಸಿಎಂ ಸಿದ್ದರಾಮಯ್ಯ ಭರವಸೆ

ಶೇ.33ರಷ್ಟು ಕೆಎಎಸ್‌ ಅಧಿಕಾರಿಗಳ ಪದೋನ್ನತಿ ಶೀಘ್ರ: ಸಿಎಂ ಭರವಸೆ

CM Siddaramaiah: ಸರ್ಕಾರ ರೂಪಿಸುವ ನೀತಿಗಳು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವಲ್ಲಿ ಅಧಿಕಾರಿಗಳ ಪಾತ್ರ ಹಿರಿದು. ಜನಸೇವೆಗೆ ದೊರಕಿರುವ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ತೃಪ್ತಿದಾಯಕವಾಗಿ ಕೆಲಸ ಮಾಡಿರುವುದಕ್ಕಿಂತ ದೊಡ್ಡ ಪ್ರಮಾಣಪತ್ರ ಇನ್ನೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Hassan News: ಅಮ್ಮನ ಜತೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಹಾಸನದಲ್ಲಿ ಟೆಕ್ಕಿ ಯುವತಿ ಸಾವು

ಅಮ್ಮನ ಜತೆ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಟೆಕ್ಕಿ ಯುವತಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಟೆಕ್ಕಿ ಯುವತಿ ಬ್ರೈನ್‌ ಸ್ಟ್ರೋಕ್‌ನಿಂದ ಮೃತಪಟ್ಟಿದ್ದಾರೆ. ತಾಯಿಯ ಜತೆ ನಗುತ್ತಾ ಮಾತನಾಡುತ್ತಿದಾಗ ಏಕಾಏಕಿ ಕುಸಿದು ಬಿದ್ದಿದ್ದ ಯುವತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿದ್ದಾರೆ.

Minister Ramalinga Reddy: ಬಿಜೆಪಿ ನಾಯಕರಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ: ಸಾರಿಗೆ ಸಚಿವ ವಾಗ್ದಾಳಿ

ಮಹಿಳಾ ಮೀಸಲಾತಿ ಕುರಿತು ಬಿಜೆಪಿ ವಿರುದ್ಧ ಸಾರಿಗೆ ಸಚಿವ ವಾಗ್ದಾಳಿ

2023ರಲ್ಲಿಯೇ ಪಾರ್ಲಿಮೆಂಟ್ ಮತ್ತು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಎಲ್ಲಾ ಪಕ್ಷಗಳು ಒಮ್ಮತದ ಅನುಮೋದನೆ ನೀಡಿವೆ. ಹೀಗಿದ್ದರೂ, ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆಯ ನೆಪವೊಡ್ಡಿ ಇದನ್ನು ಜಾರಿಗೊಳಿಸುವುದನ್ನು ಮುಂದೂಡುತ್ತಿರು ವುದು ಸರಿಯಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದರು.

Chinthamani News: ನಾರಿ ಶಕ್ತಿ ಪ್ರದರ್ಶನ: ಮೀಸಲಾತಿ ಕಸಿದುಕೊಂಡ ಕಾಂಗ್ರೆಸ್ ವಿರುದ್ಧ ಚಿಂತಾಮಣಿಯಲ್ಲಿ ಬಿಜೆಪಿ ಪ್ರತಿಭಟನಾ ರ‍್ಯಾಲಿ

ಮೀಸಲಾತಿ ಕಸಿದುಕೊಂಡ ಕಾಂಗ್ರೆಸ್ ವಿರುದ್ಧ ಪ್ರತಿಭಟನಾ ರ‍್ಯಾಲಿ

ದಶಕಗಳ ಕಾಲ ಮಹಿಳಾ ಮೀಸಲಾತಿಯನ್ನು ಮೂಲೆ ಗುಂಪು ಮಾಡಿದ್ದ ಕಾಂಗ್ರೆಸ್,ಈಗ ಕೇಂದ್ರ ಸರ್ಕಾರ ಅದನ್ನು ಜಾರಿಗೆ ತರುತ್ತಿದ್ದರೂ ತಾಂತ್ರಿಕ ಅಡೆತಡೆಗಳನ್ನು ಒಡ್ಡುವ ಮೂಲಕ ಮಹಿಳೆಯರಿಗೆ ಸಿಗಬೇಕಾದ ನ್ಯಾಯಯುತ ಹಕ್ಕನ್ನು ವಿಳಂಬ ಮಾಡುತ್ತಿದೆ ಎಂದು ಬಿಜೆಪಿ ಎಂ ಎಲ್ ಸಿ ಭಾರತೀ ಶೆಟ್ಟಿ ಮತ್ತು ಬಿಜೆಪಿ ಮುಖಂಡ ವೇಣುಗೋಪಾಲ್ (ಗೋಪಿ) ಆಕ್ರೋಶ ವ್ಯಕ್ತಪಡಿಸಿದರು.

ಏ.30 ರಿಂದ ಮೇ 5ರವರೆಗೆ ಹೊಸಪೇಟೆಯಲ್ಲಿ ಶ್ರೀ ಕಾಳಿಕಾದೇವಿ ದೇವಸ್ಥಾನದ ನೂತನ ಗರ್ಭಗುಡಿ ಆಲಯ ಸಮರ್ಪಣೆ, ವಿವಿಧ ಧಾರ್ಮಿಕ ಕಾರ್ಯಕ್ರಮ

ಹೊಸಪೇಟೆಯಲ್ಲಿ ಏ.30 ರಿಂದ ಶ್ರೀ ಕಾಳಿಕಾದೇವಿ ದೇವಸ್ಥಾನ ಪ್ರತಿಷ್ಠಾಪನೆ

Vijayanagara News: ಹೊಸಪೇಟೆ ತಾಲೂಕು ವಿಶ್ವಕರ್ಮ ಸಮಾಜದಿಂದ ಏ.30 ರಿಂದ ಮೇ 5 ರವರೆಗೆ ಹೊಸಪೇಟೆ ನಗರದ ಬಳ್ಳಾರಿ ರಸ್ತೆಯಲ್ಲಿರುವ ಕಂಚುಗಾರಪೇಟೆಯಲ್ಲಿರುವ ನೂತನ ಗರ್ಭಗುಡಿ ಆಲಯ ಸಮರ್ಪಣೆ ಹಾಗೂ ಶ್ರೀ ಕಾಳಿಕಾದೇವಿ ಕಮಟೇಶ್ವರ ದೇವರ ಹಾಗೂ ಪರಿವಾರ ದೇವರ ಅಷ್ಟಬಂಧ ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವ ಹಾಗೂ ನವಚಂಡಿಕಾ ಯಾಗ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಜಿಲ್ಲಾಧ್ಯಕ್ಷ ಕೆ.ವಿ. ಪತ್ತಾರ್ ಹಾಗೂ ವಿ. ಶಂಕರಾಚಾರ್ಯ ತಿಳಿಸಿದ್ದಾರೆ.

MLC Bharathi Shetty: ತಾಲೂಕು ದಂಡಾಧಿಕಾರಿಗಳ ವಿರುದ್ಧ ಎಂಎಲ್ಸಿ ಭಾರತಿ ಶೆಟ್ಟಿ ಕೆಂಡಾಮಂಡಲ

ತಾಲೂಕು ದಂಡಾಧಿಕಾರಿಗಳ ವಿರುದ್ಧ ಎಂಎಲ್ಸಿ ಭಾರತಿ ಶೆಟ್ಟಿ ಕೆಂಡಾಮಂಡಲ

ಚಿಂತಾಮಣಿಯ ತಾಲೂಕು ಕಚೇರಿ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿ ಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾರತಿ ಶೆಟ್ಟಿ ಅವರು ಪಾಲ್ಗೊಂಡಿದ್ದರು.ಈ ವೇಳೆ ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಲು ತಾಲೂಕು ದಂಡಾಧಿಕಾರಿಗಳು ಸ್ಥಳಕ್ಕೆ ಬಾರದಿರುವುದು ಭಾರತಿ ಶೆಟ್ಟಿ ಆಕ್ರೋಶಕ್ಕೆ ಕಾರಣವಾಯಿತು.

Gauribidanur News: ಆರ್ಯ ವೈಶ್ಯ ಸಮುದಾಯ ವಹಿವಾಟಿನ ಜೊತೆಗೆ ಸೇವಾ ಕಾಯಗಳಿಗೂ ಒತ್ತು: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡರು

ವಹಿವಾಟು ಜೊತೆಗೆ ಸೇವಾ ಕಾಯಗಳಿಗೂ ಆರ್ಯ ವೈಶ್ಯ ಸಮುದಾಯ ಒತ್ತು

ಆರ್ಯ ವೈಶ್ಯ ಸಮಮುದಾಯದ ಅಭಿವೃದ್ಧಿಗೆ ನನ್ನ ಸಹಕಾರ ನೀಡುವುದಾಗಿ ತಿಳಿಸಿದ ಅವರು ಆರ್ಯ ವೈಶ್ಯ ಸಮುದಾಯ ಅತ್ಯಂತ ಪ್ರಭಾವಶಾಲಿ ಸಮುದಾಯ, ಬಹುತೇಕರು ವ್ಯಾಪಾರ ವಹಿವಾಟು ಮಾಡಿಕೊಂಡು ಬದುಕನ್ನು ಕಟ್ಟಿಕೊಂಡಿದ್ದಾರೆ. ತಾಲೂಕಿನ ರಾಜಕಾರಣವನ್ನು ಬದಲಿಸುವಷ್ಷು ಪ್ರಭಾವ ಹೊಂದಿರುವ ಇವರು ತಮ್ಮ ದುಡಿಮೆಯಲ್ಲಿನ ಒಂದು ಪಾಲನ್ನು ಧಾರ್ಮಿಕ ಕಾರ್ಯಗಳಿಗೆ ಹಾಗೂ ಸಮಾಜಮುಖಿ ಕೆಲಸ ಕಾರ್ಯಗಳಿಗೆ ನೀಡುತ್ತಿದ್ದಾರೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಂಶುಪಾಲರ ಸಂಘದ ಸಭೆ : ಅಧ್ಯಕ್ಷರಾಗಿ ಸುಮಿತ್ರಾ ಪಾಟೀಲ್ ಆಯ್ಕೆ

ಅಧ್ಯಕ್ಷರಾಗಿ ಸುಮಿತ್ರಾ ಪಾಟೀಲ್ ಆಯ್ಕೆ

ನಗರದ ಗೋಲ್ಡನ್ ಗ್ಲೀಮ್ಸ್ ಕಾಲೇಜಿನಲ್ಲಿ ನಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಂಶುಪಾಲರ ಸಭೆಯಲ್ಲಿ ನೂತನವಾಗಿ ಪ್ರಾಂಶುಪಾಲರ ಸಂಘವು ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ಸುಮಿತ್ರಾ ಪಾಟೀಲ್ ನೇಮಕವಾಗಿದ್ದಾರೆ. ನಗರದ ಗೋಲ್ಡ್ನ್ ಗ್ಲೀಮ್ಸ್ ಕಾಲೇಜಿನಲ್ಲಿ ನಡೆದ ಪ್ರಾಂಶುಪಾಲರ ಸಭೆಯಲ್ಲಿ ಗಂಗರಾಜ್ ಡಿ.ಜಿ. ಚಂದ್ರಪ್ಪ ಸಿ.ಕೆ. ನಾರಾಯಣ ಸ್ವಾಮಿ.ಎಂ., ಟಿ.ಆರ್.ನಾಗರಾಜ್, ನಿರ್ಮಲಾ, ವಿಜಯಶ್ರೀ, ಭಾಗ್ಯಮ್ಮ ಜಿ. ಇತರರು ಸೇರಿ ನೂತನ ಸಂಘದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಬೆಂಗಳೂರು ಗೂಗಲ್ ಕ್ಯಾಂಪಸ್‌ನಲ್ಲಿ ಮೊಮ್ಮಗನ ಜತೆ ಕಾಲ ಕಳೆದ ಅಜ್ಜ; ಹೃದಯಸ್ಪರ್ಶಿ ವಿಡಿಯೊ ಇಲ್ಲಿದೆ

ಗೂಗಲ್ ಕ್ಯಾಂಪಸ್‌ನಲ್ಲಿ ತಾತನೊಂದಿಗೆ ಸಮಯ ಕಳೆದ ಮೊಮ್ಮಗ

Viral Video: ಪೋಷಕರಿಗೆ ತಮ್ಮ ಮಕ್ಕಳಿಗೆ ಉತ್ತಮ ಕಂಪನಿಯ ಉದ್ಯೋಗ ಸಿಗಬೇಕು ಎನ್ನುವ ಕನಸು, ಆಸೆ ಇರುತ್ತದೆ. ಅದರಲ್ಲೂ ಹೆಚ್ಚು ಪ್ಯಾಕೇಜ್ ಇರುವ ಕೆಲಸ ಸಿಕ್ಕಾಗ ಅದೊಂದು ದೊಡ್ಡ ಯಶಸ್ಸು ಎಂದೇ ಹೇಳಬಹುದು. ಆದರೆ ಕೆಲಸ ಎಂದಾಗ ಉತ್ತಮ ವೇತನ ಮಾತ್ರ ಮುಖ್ಯ ಅಲ್ಲ ಎಂಬುವುದನ್ನು ಇಲ್ಲೊಬ್ಬ ಬೆಂಗಳೂರಿನ ಯುವಕ ತೋರಿಸಿಕೊಟ್ಟಿದ್ದಾನೆ. ಯಶಸ್ಸು ಎಂದರೆ ಕೇವಲ ದೊಡ್ಡ ಮೊತ್ತದ ಸಂಬಳ ಮಾತ್ರವಲ್ಲ ನಮ್ಮ ಆತ್ಮೀಯರಲ್ಲಿ ಕಾಣಿಸುವ ಖುಷಿ ಕೂಡ ದೊಡ್ಡ ಸಾಧನೆ, ಯಶಸ್ಸು ಎಂದು ತೋರಿಸಿಕೊಟ್ಟಿದ್ದಾನೆ.

Mangaluru cooker Blast Case: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಅಪರಾಧಿ ಮೊಹಮ್ಮದ್ ಶಾರೀಕ್​ಗೆ 10 ವರ್ಷ ಜೈಲು ಶಿಕ್ಷೆ

ಕುಕ್ಕರ್ ಬಾಂಬ್ ಸ್ಫೋಟ; ಅಪರಾಧಿ ಮೊಹಮ್ಮದ್ ಶಾರೀಕ್​ಗೆ 10 ವರ್ಷ ಜೈಲು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿರುವ ಎನ್‌ಐಎ ವಿಶೇಷ ನ್ಯಾಯಾಲಯವು, ಆರೋಪಿ ವಿರುದ್ಧದ ಸಾಕ್ಷ್ಯಗಳನ್ನು ಪುರಸ್ಕರಿಸಿದೆ. ಮೊಹಮ್ಮದ್ ಶಾರೀಕ್ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 94 ಸಾವಿರ ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳಕ್ಕೆ ಕಾರಣವೇನು? ಅರಣ್ಯಾಧಿಕಾರಿ ಬಿಚ್ಚಿಟ್ರು ಬೆಚ್ಚಿ ಬೀಳಿಸುವ ಅಂಕಿ-ಅಂಶ

ಅರಣ್ಯ ನಾಶದಿಂದ ಬೆಂಗಳೂರಿನ ತಾಪಮಾನ ಹೆಚ್ಚಳ

ಬೆಂಗಳೂರಿನ ತಾಪಮಾನ ಹೆಚ್ಚಾಗಲು ಅರಣ್ಯ ನಾಶವೇ ಕಾರಣ ಎಂದು ಭಾರತೀಯ ಅರಣ್ಯ ಅಧಿಕಾರಿಯೊಬ್ಬರು ಸಾಮಾಜಿಕ ಮಾಧ್ಯಮದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಹಂಚಿಕೊಂಡಿರುವ ಪೋಸ್ಟ್ ಭಾರಿ ವೈರಲ್ ಆಗಿದ್ದು, ಅನೇಕರು ಅವರನ್ನು ಬೆಂಬಲಿಸಿ, ದಿನೇ ದಿನೇ ಹೆಚ್ಚುತ್ತಿರುವ ತಾಪಮಾನದ ಕುರಿತು ಕಾಮೆಂಟ್ ಕೂಡ ಮಾಡಿದ್ದಾರೆ.

ಪೋಷಕರ ಬೇಜವಾಬ್ದಾರಿಯ ಪರಮಾವಧಿ: ಒಂದೇ ಸ್ಕೂಟರ್‌ನಲ್ಲಿ 6 ಮಕ್ಕಳ ಪ್ರಯಾಣ

ಒಂದೇ ಸ್ಕೂಟರ್‌ನಲ್ಲಿ 6 ಮಕ್ಕಳ ಪ್ರಯಾಣ: ವಿಡಿಯೊ ನೋಡಿ ನೆಟ್ಟಿಗರು ಕಿಡಿಕಿಡಿ

Viral Video: ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲಿಸಲು ಎಷ್ಟೇ ಕ್ರಮ ಕೈಗೊಂಡರೂ ಹಲವಾರು ಇದನ್ನು ಗಾಳಿಗೆ ತೂರಿ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಒಂದೇ ಸ್ಕೂಟರ್ ನಲ್ಲಿ ಆರು ಮಕ್ಕಳು ಪ್ರಯಾಣ ಮಾಡಿದ್ದಾರೆ. ಈ ಆಘಾತಕಾರಿ ದೃಶ್ಯವು ಬೆಳಿಗ್ಗೆ 10:45 ರ ಸುಮಾರಿಗೆ ಪಾದರಾಯನಪುರ ಮುಖ್ಯ ರಸ್ತೆಯಲ್ಲಿ ಗೋರಿಪಾಳ್ಯ ಬಳಿ, ಟೋಟಲ್ ಎಂಜಿನಿಯರ್ ಆಟೋ ಗ್ಯಾಸ್ ಎದುರು ಸಂಭವಿಸಿದೆ. ಇದರ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ..

ಮಂಗಳೂರು, ಮೈಸೂರು ಸೇರಿ 100 ನಗರಗಳಲ್ಲಿ 'ಅಮೆಜಾನ್ ನೌ ಕ್ವಿಕ್‌ ಕಾಮರ್ಸ್‌ ಆರಂಭ'; ಕಂಪನಿಯಿಂದ ₹2,800 ಕೋಟಿ ಹೂಡಿಕೆ

100 ನಗರಗಳಲ್ಲಿ 'ಅಮೆಜಾನ್ ನೌ ಕ್ವಿಕ್‌ಕಾಮರ್ಸ್‌ ಆರಂಭ'

ತನ್ನ ಕಾರ್ಯಾಚರಣಾ ಜಾಲವನ್ನು ಬಲಪಡಿಸಲು ಅಮೆಜಾನ್ ಬರೋಬ್ಬರಿ 2,800 ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಈ ಬೃಹತ್ ಮೊತ್ತವನ್ನು ಕೇವಲ ವ್ಯಾಪಾರ ವಿಸ್ತರಣೆಗೆ ಮಾತ್ರವಲ್ಲದೆ, ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಸುರಕ್ಷತೆ, ಆರೋಗ್ಯ ಮತ್ತು ಆರ್ಥಿಕ ಯೋಗಕ್ಷೇಮಕ್ಕೂ ವಿನಿಯೋಗಿಸಲು ಅಮೆಜಾನ್ ನಿರ್ಧರಿಸಿದೆ.

PM Narendra Modi: ಮದುವೆಗೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

ರಾಯಚೂರಿನ ಯುವಕನ ಮದುವೆಗೆ ಪ್ರಧಾನಿ ಮೋದಿಯಿಂದ ಶುಭಾಶಯ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್ ಅವರು ಪ್ರಧಾನಿ ಮೋದಿಗೆ ಮದುವೆ ಆಹ್ವಾನ ಪತ್ರಿಕೆ ಕಳುಹಿಸಿದ್ದರು. ಈಗ ಪ್ರಧಾನಿ ಕಚೇರಿಯಿಂದ ನವ ದಂಪತಿಗೆ ಶುಭಾಶಯ ಪತ್ರ ಬಂದಿದೆ. ಈ ಬಗ್ಗೆ ಯುವಕನ ಕುಟುಂಬ ಸಂತಸ ವ್ಯಕ್ತಪಡಿಸಿದೆ.

Panchamasali Mutt: ಪಂಚಮಸಾಲಿ ಮಠದ ಲೆಕ್ಕ ಕೊಡುವ ಸಮಾವೇಶದಲ್ಲಿ ಭಾರಿ ಹೈಡ್ರಾಮಾ; ಟ್ರಸ್ಟಿಗಳು, ವಚನಾನಂದ ಶ್ರೀಗಳ ಬೆಂಬಲಿಗರ ನಡುವೆ ತಳ್ಳಾಟ-ನೂಕಾಟ!

ಪಂಚಮಸಾಲಿ ಮಠದ ಲೆಕ್ಕ ಕೊಡುವ ಸಮಾವೇಶದಲ್ಲಿ ಭಾರಿ ಹೈಡ್ರಾಮಾ!

ಹರಿಹರ ಪಂಚ ಮಠದ ದೇಣಿಗೆ ಹಾಗೂ ಅನುದಾನ ಬಳಕೆಯಲ್ಲಿ ಅವ್ಯವಹಾರ ನಡೆದಿದೆ. ಹೀಗಾಗಿ ಹಣದ ಲೆಕ್ಕ ನೀಡಬೇಕು ಎಂದು ವಚನಾನಂದ ಸ್ವಾಮೀಜಿ ಹಾಗೂ ಭಕ್ತರು, ಲೆಕ್ಕ ಕೊಡಿ ಅಭಿಯಾನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 2008ರಿಂದ 2026ರವರೆಗೆ ಮಠದ ಆರ್ಥಿಕ ವ್ಯವಹಾರಗಳ ಲೆಕ್ಕವನ್ನು ಟ್ರಸ್ಟಿಗಳು ನೀಡಿದ್ದಾರೆ. ಈ ವೇಳೆ ಟ್ರಸ್ಟಿಗಳು ಹಾಗೂ ಸ್ವಾಮೀಜಿ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ.

Karnataka CM Row: ಮೇ 15ರೊಳಗೆ ಡಿಸಿಎಂ ಡಿಕೆಶಿಗೆ ಹೈಕಮಾಂಡ್‌ನಿಂದ ಬರ್ತ್‌ಡೇ ಗಿಫ್ಟ್: ಶಾಸಕ ರಂಗನಾಥ್

ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್‌ನಿಂದ ಬರ್ತ್‌ಡೇ ಗಿಫ್ಟ್: ಶಾಸಕ ರಂಗನಾಥ್

ಕಾಂಗ್ರೆಸ್‌ ಪಕ್ಷಕ್ಕಾಗಿ ಶ್ರಮಿಸಿರುವ ಡಿ.ಕೆ.ಶಿವಕುಮಾರ್‌ ಅವರಿಗೆ ಒಳ್ಳೆಯ ಸ್ಥಾನ ಸಿಗಬೇಕು ಎಂಬುವುದು ನಮ್ಮ ಆಸೆಯಾಗಿದೆ. ಅವರ ಹುಟ್ಟುಹಬ್ಬಕ್ಕೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ ಎಂದು ಹೇಳುವ ಮೂಲಕ ಸಿಎಂ ಸ್ಥಾನ ಬದಲಾವಣೆಯ ವದಂತಿಗಳಿಗೆ ಕುಣಿಗಲ್‌ ಶಾಸಕ ರಂಗನಾಥ್‌ ಅವರು ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ.

UGCET exam: ವಿದ್ಯಾರ್ಥಿಗಳೇ ಗಮನಿಸಿ, ಯುಜಿಸಿಇಟಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಭಾರೀ ಬದಲಾವಣೆ

ವಿದ್ಯಾರ್ಥಿಗಳೇ ಗಮನಿಸಿ, ಯುಜಿಸಿಇಟಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಹೊರಡಿಸಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ಈ ಮೊದಲು ಏಪ್ರಿಲ್ 29, 2026 ರಂದು ನಡೆಸಲು ಉದ್ದೇಶಿಸಿದ್ದ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಈಗ ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ, ಈ ಪರೀಕ್ಷೆಯು ಈಗ ಮೇ 10, 2026 ರಂದು ನಡೆಯಲಿದೆ.

ಮೆಡ್‌ ಟ್ರಾನಿಕ್‌ ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ 'ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್' ವ್ಯವಸ್ಥೆ ಬಿಡುಗಡೆ

'ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್' ವ್ಯವಸ್ಥೆ ಬಿಡುಗಡೆ

ಚಲನೆಗೆ ಸಂಬಂಧಿಸಿದ ಸವಾಲುಗಳು ಹೆಚ್ಚಾಗಿ ಗೋಚರಿಸುತ್ತವೆಯಾದರೂ, ಈ ಸ್ಥಿತಿಯು ಸಂವಹನ, ನಿದ್ರೆ ಮತ್ತು ಒಟ್ಟಾರೆ ಯೋಗಕ್ಷೇಮ ಸೇರಿದಂತೆ ದೈನಂದಿನ ಜೀವನದ ಇತರ ಅಂಶ ಗಳ ಮೇಲೂ ಪ್ರಭಾವ ಬೀರಬಹುದು. ಇಂದು, ರೋಗವು ವಿಕಸನಗೊಂಡಂತೆ ರೋಗ ಲಕ್ಷಣ ಗಳನ್ನು ನಿರ್ವಹಿಸಲು ವಿವಿಧ ಚಿಕಿತ್ಸಾ ವಿಧಾನಗಳು ಸಹಾಯ ಮಾಡುತ್ತವೆ.

ಯೆಜ್ಡಿ ಮತ್ತು ಬಿಎಸ್‌ಎ ಎರಡು ಹೊಸ ಸ್ಕ್ರ್ಯಾಂಬ್ಲರ್ ಬೈಕ್‌ಗಳ ಬಿಡುಗಡೆ

ಯೆಜ್ಡಿ ಮತ್ತು ಬಿಎಸ್‌ಎ ಎರಡು ಹೊಸ ಸ್ಕ್ರ್ಯಾಂಬ್ಲರ್ ಬೈಕ್‌ಗಳ ಬಿಡುಗಡೆ

ಬಿಎಸ್‌ಎ ಸ್ಕ್ರ್ಯಾಂಬ್ಲರ್ 650 ಭಾರತದಲ್ಲಿ ಈ ವಿಭಾಗದಲ್ಲಿನ ಏಕೈಕ 650ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್ ಹೊಂದಿದ್ದು, 45 ಬಿಹೆಚ್‌ಪಿ ಮತ್ತು 55 ಎನ್‌ಎಂ ಟಾರ್ಕ್ ಉತ್ಪಾದಿ ಸುತ್ತದೆ. ಗೋಲ್ಡ್ ಸ್ಟಾರ್ ಕ್ಯಾಟಲಿನಾ ಮತ್ತು ಎ10 ಸ್ಪಿಟ್‌ಫೈರ್ ಮಾದರಿಗಳಿಂದ ಪ್ರೇರಿತ ವಾದ ವಿನ್ಯಾಸವು ಇದಕ್ಕೆ ವಿಶಿಷ್ಟ ಗುರುತನ್ನು ನೀಡುತ್ತದೆ. ಇದರ ಪ್ರಾರಂಭಿಕ ಬೆಲೆ ರೂ. 3,24,950.

Loading...