ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Chikkaballapur News: ಹೋರಾಟಗಾರರ ಬಂಧನ: ಸಂಯುಕ್ತ ಹೋರಾಟ ಸಮಿತಿ ಖಂಡನೆ, ಪ್ರತಿಭಟನೆ

ಹೋರಾಟಗಾರರ ಬಂಧನ: ಸಂಯುಕ್ತ ಹೋರಾಟ ಸಮಿತಿ ಖಂಡನೆ, ಪ್ರತಿಭಟನೆ

ಬಲವಂತದ ಭೂ ಸ್ವಾಧೀನ ವಿರೋಧಿಸಿ ‘ದೇವನಹಳ್ಳಿ ಚಲೋ’ ಹಮ್ಮಿಕೊಂಡಿದ್ದ ರೈತರು, ಹೋರಾಟ ಗಾರರ ಬಂಧನ ಖಂಡಿಸಿ ಜೊತೆಗೆ ರೈತರನ್ನು ಅಮಾನುಷವಾಗಿ ವರ್ತಿಸಿದ ಡಿಎಸ್‌ಪಿ ಸಜೀತ್ ವಿರುದ್ದ ಕ್ರಮ ಕೈಗೊಳ್ಳಬೇಕು. ಅವರನ್ನು ಅಮಾನತು ಮಾಡಿ, ಇಲಾಖಾ ತನಿಖೆಗೆ ಆದೇಶಿಸ ಬೇಕು ಎಂದು ಸಂಯುಕ್ತ ಹೋರಾಟ ಆಗ್ರಹಿಸಿದೆ

ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದರೆ ವರ್ಗಾವಣೆ; ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ

ಸರಿಯಾಗಿ ಕರ್ತವ್ಯ ನಿರ್ವಹಿಸಿ: ಸಿಎಂ ಸೂಚನೆ

CM Siddaramaiah: ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಸೂಚನೆ ನೀಡಿದ್ದಾರೆ.

MLA S N Subbareddy: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಚಳಿ ಬಿಡಿಸಿದ ಶಾಸಕ

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಚಳಿ ಬಿಡಿಸಿದ ಶಾಸಕ

ಇಂತಹ ಹೋಪ್‌ಲೆಸ್ ಟೀಚರ್ಸ ಗಳಿಂದ ಏನು ಉಪಯೋಗ, ಇವರ ಮೇಲೆ ಹಿಡಿತವಿಲ್ಲದ ನಿಮ್ಮಿಂ ದಲೂ ಶಿಕ್ಷಣ ಇಲಾಖೆಗೆ ಉಪಯೋಗವಿಲ್ಲ ಎಂದು ಬಿಇಓ ವಿರುದ್ದ ಕಿಡಿಕಾರಿದರು. ಇದಕ್ಕೆ ಪ್ರಕ್ರಿಯಿಸಿದ ಬಿಇಓ ವೆಂಕಟೇಶಪ್ಪ ಇಂತಹ ಶಿಕ್ಷಕರಿಗೆ ನೋಟೀಸ್ ನೀಡಿದ್ದೇನೆ ಎಂದು ಸಮಜಾಯಿಷಿ ನೀಡಿದಾಗ ನೀವು ನೀಡುವ ನೋಟೀಸ್ ಬೊಂಡ ಕಟ್ಟಿಕೊಳ್ಳಕ್ಕೆ ಹಾಕುತ್ತಾರೆ.

ಗಾಳಿ–ಮಳೆಗೆ ಅನಾಹುತ ಸಾಧ್ಯತೆ: ಅಪಾಯಕಾರಿ ಸ್ಥಿತಿಯ ಮರಗಳ ತೆರವಿಗೆ ಆಗ್ರಹ

ಅಪಾಯಕಾರಿ ಸ್ಥಿತಿಯ ಮರಗಳ ತೆರವಿಗೆ ಆಗ್ರಹ

ಹಿಂದೆಲ್ಲ ರಸ್ತೆ ಕಡೆಗೆ ವಾಲಿದ ಮರಗಳನ್ನು ಅರಣ್ಯ ಇಲಾಖೆ ತೆರವುಗೊಳಿಸುತ್ತಿತ್ತು. ಆದರೆ ಕಳೆದ ಒಂದೆರಡು ವರ್ಷಗಳಿಂದ ತೆರವು ಕಾರ್ಯ ಸರಿಯಾಗಿ ನಡೆಯುತ್ತಿಲ್ಲ. ರಸ್ತೆಯ ನಿರ್ವಹಣೆ ಮಾಡಲು ಇಲಾಖೆ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದ ಸಣ್ಣಪುಟ್ಟ ಗಿಡಗಳನ್ನು ಮಾತ್ರ ಕಟಾವು ಮಾಡಲಾಗಿದೆ. ರಸ್ತೆಯ ಮೇಲೆ ಬೀಳುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಿಲ್ಲ

Chikkaballapur News: ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಬೃಹತ್ ಜಾಥ

ಮಾದಕವಸ್ತುಗಳ ಸೇವನೆ ಹಾಗೂ ಮಾರಾಟ ಶಿಕ್ಷಾರ್ಹ ಅಪರಾಧ:ಡಿ ವೈ ಎಸ್ ಪಿ

ಜೂ.26 ರಂದು ಅಂತರರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನವಾಗಿದೆ. ಯುವಶಕ್ತಿ ಮುಂದಿನ ದೇಶ ಕಟ್ಟುವ ಶಕ್ತಿಯಾಗುತ್ತದೆ. ಹೀಗಾಗಿ ಯುವಜನತೆ ಮಾದಕವಸ್ತುಗಳ ಚಟಕ್ಕೆ ಜಾರಬಾರದು. ಇತ್ತೀಚೆಗೆ ನಗರ ಹಾಗೂ ತಾಲ್ಲೂಕಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಪ್ರಕರಣಗಳು ವರದಿಯಾಗಿವೆ.

Crime News: ಬಾರ್‌ನಲ್ಲಿ ವ್ಯಕ್ತಿಯ ಕೊಲೆ

ಬಾರ್‌ನಲ್ಲಿ ವ್ಯಕ್ತಿಯ ಕೊಲೆ

ತಾಲೂಕಿನ ಕುಡುಮಲ ಕುಂಟೆಯ ಕರ್ನಾಟಕ ಗಡಿ ಭಾಗದಲ್ಲಿ ಕುಡಿದ ಮತ್ತಿನಲ್ಲಿ ಬಾರ್‌ನಲ್ಲಿ ಗಲಾಟೆ ಮಾಡಿಕೊಂಡು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಂದ್ರ ಗಡಿಯ ಕುಡುಮ ಲಕುಂಟೆ ಗ್ರಾಮದ ಗಂಗೋತ್ರಿ ಬಾರ್‌ನಲ್ಲಿ ಈ ಕೊಲೆ ನಡೆದಿದೆ. ಹಿಂದೂಪುರ ಮಂಡಲ ತೂಮಕುಂಟೆ ಗ್ರಾಮದ ರವಿಚಂದ್ರ (೪೫) ಕೊಲೆಯಾದ ವ್ಯಕ್ತಿಯಾಗಿದ್ದು, ಇದೇ ಹಿಂದೂಪುರ ಬಾಪೂಜಿ ನಗರದ ಅಶೋಕ್(೩೦) ಕೊಲೆ ಆರೋಪಿಯಾಗಿದ್ದಾನೆ.

ಅಪರೂಪದ ಯಕೃತ್ತು ಕಸಿ ಮೂಲಕ ಗಂಭೀರ ಸ್ಥಿತಿಯ ರೋಗಿಯನ್ನು ಉಳಿಸಿದ ವೈದ್ಯರು

ಯಕೃತ್ತು ಕಸಿ ಮೂಲಕ ರೋಗಿಯನ್ನು ಉಳಿಸಿದ ವೈದ್ಯರು

ಗಂಭೀರ ಸ್ಥಿತಿಯಲ್ಲಿದ್ದ ರೋಗಿಗೆ ಬಹು ಅಂಗಾಂಗ ವೈಫಲ್ಯವಿತ್ತು, ರಕ್ತದೊತ್ತಡವನ್ನು ಬೆಂಬಲಿಸಲು ಡಯಾಲಿಸಿಸ್ ಮತ್ತು ಔಷಧಿಗಳ ಅಗತ್ಯವಿತ್ತು. ಇಂತಹ ತೀವ್ರ ಅಸ್ವಸ್ಥ ರೋಗಿಗೆ ಯಶಸ್ವೀ ಯಕೃತ್ತು ಕಸಿ ನಡೆಸುವುದು ಮತ್ತು ಅವರನ್ನು 14 ದಿನಗಳಲ್ಲಿ ಮನೆಗೆ ಕಳುಹಿಸುವುದು ಅತ್ಯಂತ ಅಪರೂಪ. ಇದು ತಂಡದ ಕೌಶಲ್ಯವನ್ನು ಮಾತ್ರವಲ್ಲದೆ ಜೀವಂತ ದಾನಿ ಕಸಿ ಮತ್ತು ಸಮಗ್ರ ಆರೈಕೆಯ ಶಕ್ತಿಯನ್ನು ಸಹ ಪ್ರತಿಬಿಂಬಿಸುತ್ತದೆ

Vishnuvardhan: ಡಾ.ವಿಷ್ಣುವರ್ಧನ್ 75ನೇ ಜನ್ಮದಿನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ

ವಿಷ್ಣುವರ್ಧನ್‌ 75ನೇ ಜನ್ಮದಿನೋತ್ಸವದ ಅದ್ದೂರಿ ತಯಾರಿ

ಸ್ಯಾಂಡಲ್‌ವುಡ್‌ ನಟ ದಿ.ಡಾ.ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು 'ಯಜಮಾನರ ಅಮೃತ ಮಹೋತ್ಸವ'ವೆಂದು ಆಚರಿಸಲು ಡಾ.ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ.ಈ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಚಿತ್ರರಂಗದ ಅನೇಕ‌ ಗಣ್ಯರು ಭಾಗಿಯಾಗಲಿದ್ದಾರೆ.

ರಾಜ್ಯ ಸರ್ಕಾರದಿಂದ ಪ್ರತಿ ವ್ಯಕ್ತಿಯ ಮೇಲೆ 1 ಲಕ್ಷ ರೂ. ಹೆಚ್ಚುವರಿ ಸಾಲದ ಹೊರೆ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಸರ್ಕಾರದ ಬಳಿ ಶ್ವೇತ ಪತ್ರ ಇಲ್ಲ, ಬ್ಲ್ಯಾಕ್ ಪೇಪರ್ ಇದೆ: ಬೊಮ್ಮಾಯಿ

Basavaraj Bommai: ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸತ್ಯ ಹೇಳಿದ್ದಾರೆ. ಸುಳ್ಳನ್ನು ಎಷ್ಟು ದಿನ ಅಂತ ಮರೆಮಾಚಲು ಆಗುತ್ತದೆ? ಸತ್ಯ ಹೊರಬರಲೇ ಬೇಕು, ಪರಮೇಶ್ವರ ಬಾಯಲ್ಲಿ ಬಂದರೆ ಶಿವನ ಬಾಯಲ್ಲಿ ಬಂದ ಹಾಗೆ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ಹೇಳಿದ್ದಾರೆ.

ಮೊದಲ ಮನೆ ಖರೀದಿಸಲು ಆಲೋಚಿಸುತ್ತಿರುವ ಮಹಿಳೆಯರಿಗೆ ಕೆಲವು ಸಲಹೆಗಳು

ಮೊದಲ ಮನೆ ಖರೀದಿಸಲು ಆಲೋಚಿಸುತ್ತಿರುವ ಮಹಿಳೆಯರಿಗೆ ಕೆಲವು ಸಲಹೆಗಳು

ನೀವು ನಿಮಗೆ ಸೂಕ್ತವಾಗುವ ಮನೆಯ ಹುಡುಕಾಟ ಪ್ರಾರಂಭಿಸುವ ಮೊದಲು ನಿಮಗೆ ನಿಮ್ಮ ಜೀವನಕ್ಕೆ ಬೇಕಾಗುವ ಬಜೆಟ್ ಕುರಿತು ಸ್ಪಷ್ಟತೆ ಇರಬೇಕು. ಅಷ್ಟು ಸ್ಪಷ್ಟತೆ ಸಿಕ್ಕ ಬಳಿಕ ಆರ್ಥಿಕ ಸಿದ್ಧತೆ, ಪ್ರಸ್ತುತ ಇರುವ ಆದಾಯ ಮತ್ತು ಆದಾಯ ಸ್ಥಿರತೆ ಹಾಗೂ ಒಟ್ಟಾರೆ ಮರುಪಾವತಿ ಸಾಮರ್ಥ್ಯ ಇತ್ಯಾದಿ ಕುರಿತು ಸ್ಪಷ್ಟತೆ ಪಡೆಯಬೇಕು.

ಜೂ.27ರಿಂದ 29ರವರಗೆ ಪೋಟೋ ಟುಡೇ ವಸ್ತು ಪ್ರದರ್ಶನ

ಜೂ.27ರಿಂದ 29ರವರಗೆ ಪೋಟೋ ಟುಡೇ ವಸ್ತು ಪ್ರದರ್ಶನ

ಕ್ಯಾಮರಗಳ ಮಹತ್ವ ಮತ್ತು ಅದನ್ನು ಬಳಕೆ ಮಾಡುವ ಕುರಿತು ಕ್ಯಾಮರ ಹೊಸ ತಂತ್ರಜ್ಞಾನದ ಕುರಿತು ಮಾಹಿತಿ ನೀಡಲಾಗುವುದು. 250ಕ್ಕೂ ಮಳಿಗೆಗಳನ್ನು ತೆರೆಯಲಾಗುತ್ತದೆ. ಸಾರ್ವಜನಿಕರು ಮತ್ತು ವಿಡಿಯೋ ಮತ್ತು ಕ್ಯಾಮರ ಬಳಕೆದಾರರು ಮತ್ತು ವಿಡಿಯೊ, ಕ್ಯಾಮರದಲ್ಲಿ ಉದ್ಯಮದಲ್ಲಿ ಇರುವ ಮತ್ತು ವಿಡಿಯೊಗ್ರಾಫರ್, ಪೋಟೋಗ್ರಾಫರ್ ಗಳು ಇದರ ಅವಕಾಶ ಪಡೆಯಬಹುದು

Bengaluru News: ಇ.ಎಸ್.ಐ ಆಸ್ಪತ್ರೆ ಆವರಣದಲ್ಲಿ ವಿಶ್ವ ತೊನ್ನುರೋಗ ದಿನದ ಅಂಗವಾಗಿ ಜನ ಜಾಗೃತಿ

ಇ.ಎಸ್.ಐ ಆಸ್ಪತ್ರೆ ಆವರಣದಲ್ಲಿ ವಿಶ್ವ ತೊನ್ನುರೋಗ ದಿನದ ಅಂಗವಾಗಿ ಜನ ಜಾಗೃತಿ

ವಿಶ್ವ ತೊನ್ನು ರೋಗ ದಿನದ ಅಂಗವಾಗಿ ರಾಜಾಜಿನಗರ ಇ ಎಸ್ ಐ ಸಿ ಆಸ್ಪತ್ರೆಯ ಆವರಣದಲ್ಲಿ ಜನ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ವೈದ್ಯಕೀಯ ವಿದ್ಯಾರ್ಥಿಗಳಿಂದ ತೊನ್ನು ರೋಗದ ಬಗ್ಗೆ ಕಿರು ನಾಟಕ ಪ್ರದರ್ಶಿಸಿದರು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ರೋಗಿಗಳು, ವಿದ್ಯಾರ್ಥಿಗಳು, ಭಾಗವಹಿಸಿದ್ದರು.

KV Prabhakar:  ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ: ಕೆ.ವಿ.ಪ್ರಭಾಕರ್

ಪತ್ರಕರ್ತರಿಗೆ ಮಗುವಿನ ಮನಸ್ಸು ಮುಖ್ಯ: ಕೆ.ವಿ.ಪ್ರಭಾಕರ್

ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿ ಮಗು ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

DK Shivakumar:ವಿಶ್ವದಲ್ಲೇ ಅತಿ ಎತ್ತರದ ಮೇಲ್ಗಾಲುವೆ ಗುಬ್ಬಿಯಲ್ಲಿ ನಿರ್ಮಾಣ; ಡಿಕೆಶಿ ಮೆಚ್ಚುಗೆ

ಎತ್ತಿನಹೊಳೆ ಯೋಜನೆಯ ಬೃಹತ್ ಮೇಲ್ಗಾಲುವೆ ಪರಿಶೀಲಿಸಿದ ಡಿಕೆಶಿ

ಎತ್ತಿನಹೊಳೆ ಯೋಜನೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಬಳಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಬೃಹತ್ ಮೇಲ್ಗಾಲುವೆ ಕಾಮಗಾರಿಯನ್ನು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ವೀಕ್ಷಿಸಿದರು. ವಿಶ್ವದಲ್ಲೇ ಅತಿ ಎತ್ತರ (40 ಮೀಟರ್) ಏಷ್ಯಾದಲ್ಲೇ ಅತಿ ಉದ್ದದ (10.47 ಕಿ. ಮೀ.) ಮೇಲ್ಗಾಲುವೆ ಇದಾಗಿದೆ.

ಕಿಡ್ನಿ ಕಸಿಗಾಗಿ ದೇಶದಲ್ಲೇ ಮೊದಲ ರೊಬೋಟ್‌ ನೆರವಿನ “ಟ್ರೀಟ್‌ ಟೆಕ್ನಾಲಜಿ” ಪರಿಚಯ

ಕಿಡ್ನಿ ಕಸಿಗಾಗಿ ಮೊದಲ ರೊಬೋಟ್‌ ನೆರವಿನ “ಟ್ರೀಟ್‌ ಟೆಕ್ನಾಲಜಿ” ಪರಿಚಯ

ಟ್ರೀಟ್‌ ಎಂಬ ನೂತನ ಟೆಕ್ನಾಲಜಿ ಕಿಡ್ನಿ ಕಸಿಯನ್ನು ಅತ್ಯಂತ ಸುಲಭಗೊಳಿಸಿದೆ. ರೋಬೋಟ್-ಸಂಯೋಜಿತ ಮೂತ್ರಪಿಂಡದ ಕಸಿ ನಡೆಸುವ ಈ ಅತ್ಯಾಧುನಿಕ ಉಪಕ್ರಮವು ಏಕಕಾಲದಲ್ಲೇ ದಾನಿ ಮತ್ತು ಸ್ವೀಕರಿಸುವವರಿಗೆ ಎರಡು ರೋಬಾಟ್‌ ನೆರವಿನಿಂದ ಕಿಡ್ನಿ ತೆಗೆದು , ಕಿಡ್ನಿ ಕಸಿ ಮಾಡುವ ಶಸ್ತ್ರಚಿಕಿತ್ಸೆಯನ್ನು ನಿಖರವಾಗಿ ನಡೆಸಲಿದ್ದು, ಸಂಪೂರ್ಣ ಯಶಸ್ಸು ನೀಡಲಿದೆ. ಈ ವಿನೂತನ ಪ್ರಯತ್ನದಿಂದ ಚೇತರಿಕೆಯ ಸಮಯವೂ ಕಡಿಮೆ ಆಗಲಿದ್ದು, ಶಸ್ತ್ರಚಿಕಿತ್ಸೆ ಅತ್ಯಂತ ನಿಖರವಾಗಿರಲಿದೆ

Nikhil Kumaraswamy: ರಾಮನಗರದಿಂದಲೇ ಸ್ಪರ್ಧಿಸುತ್ತೇನೆ: ನಿಖಿಲ್ ಕುಮಾರಸ್ವಾಮಿ ಘೋಷಣೆ

ರಾಮನಗರದಿಂದಲೇ ಸ್ಪರ್ಧಿಸುತ್ತೇನೆ: ನಿಖಿಲ್ ಕುಮಾರಸ್ವಾಮಿ

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಆರನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಚುನಾವಣೆಗೆ ನಿಲ್ಲುವ ಸಂದರ್ಭ ಬಂದರೆ ರಾಮನಗರದಲ್ಲಿಯೇ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Vijaykumar Chandaragi: ವರದಿಗಾರ ವಿಜಯಕುಮಾರ್ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ

ವಿಜಯಕುಮಾರ್ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ

ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಉದಯವಾಣಿಯ ಬೆಂಗಳೂರಿನ ವರದಿಗಾರ ವಿಜಯಕುಮಾರ್ ಚಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜು. 5ರಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Anti-Drug Day: "ಮಾದಕ ವಸ್ತುಗಳಿಂದ ದೂರವಿರಿ ನಿಮ್ಮ ಜೀವನ ಕಾಪಾಡಿಕೊಳ್ಳಿ" ; ಶಿರಸಿಯಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಮಾದಕ ವಸ್ತುಗಳ ಕುರಿತು ಜಾಗೃತಿ;ಶಿರಸಿಯಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಇಂದಿನ ಯುವ ಜನತೆ ಯಾವುದೇ ದುಶ್ಚಟಕ್ಕೆ ಒಳಗಾಗದೆ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತೆ ಕೆ.ವಿ.ಕಾವ್ಯಾರಾಣಿ ಹೇಳಿದರು. ಅವರು ಗುರುವಾರ ನಗರದ ರಂಗಧಾಮದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ಶಿರಸಿ ಉಪವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ, ಮಾತನಾಡಿದರು.

Kannada Sahitya Parishat: ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ

ಕಸಾಪ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ

Kannada Sahitya Parishat: ಲೇಖಕ, ಕನ್ನಡ ಹೋರಾಟಗಾರ, ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರೂ ಕೂಡ ಆಗಿರುವ ನೇ. ಭ ರಾಮಲಿಂಗ ಶೆಟ್ಟಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Karnataka High Court: ಸಚಿವ ಡಿ.ಸುಧಾಕರ್ ವಿರುದ್ಧ ದಾಖಲಾಗಿದ್ದ ಎಸ್‌ಸಿ- ಎಸ್‌ಟಿ ದೌರ್ಜನ್ಯ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಸಚಿವ ಡಿ.ಸುಧಾಕರ್ ವಿರುದ್ಧ ದಾಖಲಾಗಿದ್ದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಪರಿಶಿಷ್ಟ ಕುಟುಂಬದ ಜಮೀನು ಕಬಳಿಸಿ, ಅವರ ಮೇಲೆ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ (Karnataka High court) ಬುಧವಾರ ರದ್ದುಪಡಿಸಿ ಆದೇಶಿಸಿದೆ.

Murder Case: ಅಡುಗೆ ವಿಚಾರಕ್ಕೆ ತಗಾದೆ ತೆಗೆದು ತುರಿಮಣೆಯಿಂದ ಪತ್ನಿಯನ್ನು ಕೊಂದ ಪತಿ

ಅಡುಗೆ ವಿಚಾರಕ್ಕೆ ತಗಾದೆ ತೆಗೆದು ತುರಿಮಣೆಯಿಂದ ಪತ್ನಿಯನ್ನು ಕೊಂದ ಪತಿ

Murder Case: ತಿಮ್ಮಮ್ಮ(65) ಹತ್ಯೆಯಾದ ಮಹಿಳೆ. ರಂಗಯ್ಯ ಕೊಲೆ ಮಾಡಿದ ಆರೋಪಿ. ಹತ್ಯೆಯ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ ಸಿಐಡಿ ರಿಲೀಫ್‌

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ ಸಿಐಡಿ ರಿಲೀಫ್‌

ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಸೂರಜ್ ರೇವಣ್ಣ (Suraj Revanna Case) ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್​​ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.

Drug mafia: ಬೆಂಗಳೂರಿನಲ್ಲಿ ಗಾಂಜಾಮಿಶ್ರಿತ ಜೆಲ್ಲಿ ಚಾಕೊಲೇಟ್‌ ಪತ್ತೆ, ಗ್ಯಾಂಗ್‌ನ ಇಬ್ಬರ ಬಂಧನ

ಬೆಂಗಳೂರಿನಲ್ಲಿ ಗಾಂಜಾಮಿಶ್ರಿತ ಜೆಲ್ಲಿ ಚಾಕೊಲೇಟ್‌ ಪತ್ತೆ, ಇಬ್ಬರ ಬಂಧನ

Drug mafia: ಗಾಂಜಾದ ಭಟ್ಟಿ ಇಳಿಸಿರುವ ರಸವನ್ನೇ ಜೆಲ್ಲಿ ಚಾಕೊಲೇಟ್ ಜೊತೆ ಬೆರೆಸುತ್ತಿರುವುದು ಪತ್ತೆ ಆಗಿದೆ. ಒಂದು ಪ್ಯಾಕ್​ ಜೆಲ್ಲಿ ಗಾಂಜಾಗೆ ಬರೋಬ್ಬರಿ 6 ಸಾವಿರ ರೂ. ಇದೆ. ಈ ಜೆಲ್ಲಿ ಬಾಯಿಗೆ ಇಟ್ಟಾಗ ಕರಗುತ್ತದೆ ಹಾಗೂ ಮತ್ತು ತರಿಸುತ್ತದಂತೆ. ಗಾಂಜಾ ಸೊಪ್ಪು, ಹ್ಯಾಶ್ ಆಯಿಕ್​​ಗಿಂತ ಈ ಜೆಲ್ಲಿ ಗಾಂಜಾ ಕಿಕ್ಕು ಹೆಚ್ಚು ಎನ್ನಲಾಗುತ್ತಿದೆ.

Shiradi Ghat: ಶಿರಾಡಿ ಘಾಟಿಯಲ್ಲಿ ಭೂಕುಸಿತದಿಂದ ರಸ್ತೆ ಬಂದ್, ಬೆಂಗಳೂರು- ಮಂಗಳೂರು ಪ್ರಯಾಣಕ್ಕೆ ಬದಲಿ ಮಾರ್ಗ

ಶಿರಾಡಿ ಘಾಟಿಯಲ್ಲಿ ಭೂಕುಸಿತದಿಂದ ರಸ್ತೆ ಬಂದ್, ಬದಲಿ ಮಾರ್ಗ ಸೂಚನೆ

Shiradi Ghat: ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ​​​​ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.