ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ

ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ದೆಹಲಿಯಲ್ಲಿ ಸಂಸದರ ಜತೆ ಚರ್ಚೆ: ಡಿ.ಕೆ. ಶಿವಕುಮಾರ್

ನೀರಾವರಿ ಯೋಜನೆಗಳ ಬಗ್ಗೆ ದೆಹಲಿಯಲ್ಲಿ ಸಂಸದರ ಜತೆ ಚರ್ಚೆ: ಡಿಕೆಶಿ

DK Shivakumar: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಎಚ್.ಕೆ. ಪಾಟೀಲ್ ಹಾಗೂ ಎಂ.ಬಿ. ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Railway Exam: ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ, ಕನ್ನಡರಹಿತ ಪರೀಕ್ಷೆ ರದ್ದು

ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ, ಕನ್ನಡರಹಿತ ಪರೀಕ್ಷೆ ರದ್ದು

ರೈಲ್ವೆ ಇಲಾಖೆಯ ಈ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಇರಲಿಲ್ಲ. ಕರವೇ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ, ಈ ಮಹತ್ವದ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ತಾತ್ಕಾಲಿಕವಾಗಿ ಪರಿಸ್ಥಿತಿಯನ್ನು ತಿಳಿಗೊಳಿಸಿದೆ. ಮುಂಬಡ್ತಿ ಪರೀಕ್ಷೆಗೆ ಸಂಬಂಧಿಸಿದ ಮುಂದಿನ ಕ್ರಮಗಳ ಬಗ್ಗೆ ರೈಲ್ವೆ ಇಲಾಖೆ ಇನ್ನಷ್ಟೇ ಸ್ಪಷ್ಟನೆ ನೀಡಬೇಕಿದೆ.

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ; ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ

ಈ ನೂತನ ಘಟಕವು ಸಹಯೋಗದ ಆವಿಷ್ಕಾರ ಕೇಂದ್ರವಾಗಿ (ಕೊಲ್ಯಾಬೊರೇಟಿವ್ ಇನ್ನೋ ವೇಷನ್ ಹಬ್) ಕಾರ್ಯನಿರ್ವಹಿಸಲಿದ್ದು, ಇಲ್ಲಿ ಹೆನ್ಕೆಲ್ ತಜ್ಞರು ಮತ್ತು ಗ್ರಾಹಕರು ಸೇರಿ ಮುಂದಿನ ಪೀಳಿಗೆಯ ಎಲೆಕ್ಟ್ರಾನಿಕ್ಸ್ ಉತ್ಪನ್ನ ಉತ್ಪಾದನೆಗಾಗಿ ಸುಧಾರಿತ ಅದೆಸಿವ್ ಮತ್ತು ಶಾಖ ನಿರ್ವಹಣಾ ಉತ್ಪನ್ನಗಳನ್ನು ಜಂಟಿಯಾಗಿ ಅಭಿವೃದ್ಧಿಪಡಿಸಬಹುದು, ಪರೀಕ್ಷಿಸ ಬಹುದು ಮತ್ತು ಮೌಲ್ಯೀಕರಿಸಬಹುದಾಗಿದೆ.

NEET exam: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್‌ ಕೋಚಿಂಗ್‌

ಗ್ರಾಮೀಣ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್‌ ಕೋಚಿಂಗ್‌

ರಾಜ್ಯದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳು ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರವು ಹಂತ ಹಂತವಾಗಿ ಪರಿಣಾಮಕಾರಿ ಕೋಚಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಭರವಸೆ ನೀಡಿದರು.

ದಾವಣಗೆರೆ ದಕ್ಷಿಣಾಧಿಪತಿ ಸ್ಥಾನಕ್ಕೆ ಭಾರೀ ಪೈಪೋಟಿ

ದಾವಣಗೆರೆ ದಕ್ಷಿಣಾಧಿಪತಿ ಸ್ಥಾನಕ್ಕೆ ಭಾರೀ ಪೈಪೋಟಿ

ಮನೆಯೊಂದು ಮೂರು ಬಾಗಿಲು ಎಂಬಂತಿದ್ದ ಬಿಜೆಪಿ ಸದ್ಯಕ್ಕೆ ಒಗ್ಗಟ್ಟಿನ ಮಂತ್ರ ಜಪಿಸಿದ್ದು, ಕಾಂಗ್ರೆಸ್‌ನಲ್ಲಿ ಟಿಕೆಟ್ ಕಗ್ಗಂಟು ಬಗೆಹರಿದಂತಿಲ್ಲ. ಪ್ರಸ್ತುತ ಚುನಾವಣೆ ರಾಜಕೀಯ ಮುಖಂಡ ರಿಗೆ ಅಸ್ತಿತ್ವದ ಪ್ರಶ್ನೆಯಾಗಿದ್ದು, ಕಾಂಗ್ರೆಸ್‌ನಲ್ಲಿ ಎಸ್‌ಎಸ್ ಕುಟುಂಬ ಅನುಕಂಪದ ಆಧಾರ, ಅಭಿವೃದ್ಧಿ ಕಾರ್ಯ ಮುಂದಿಟ್ಟುಕೊಂಡು ಚುನಾವಣೆ ಬಯಸಿದೆ.

Bus Accident: ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

ಸಿಂಧನೂರು ಬಸ್ ನಿಲ್ದಾಣದಲ್ಲಿ ಸೋಮವಾರ ಅಪಘಾತ ನಡೆದಿದೆ. ಕೆಕೆಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೊಡ್ಡ ಈರಮ್ಮ (38) ಮೃತ ದುರ್ದೈವಿ.

KSRTC Buses: ಯುಗಾದಿ, ರಂಜಾನ್‌ ಹಬ್ಬಗಳ ಹಿನ್ನೆಲೆ, ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌

ಯುಗಾದಿ, ರಂಜಾನ್‌ ಹಬ್ಬಕ್ಕಾಗಿ ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌

ಯುಗಾದಿ ಮತ್ತು ರಂಜಾನ್ ಹಬ್ಬಗಳ ಪ್ರಯುಕ್ತ ರಾಜ್ಯದ ವಿವಿಧೆಡೆಗೆ ಹಾಗೂ ಹೊರರಾಜ್ಯಗಳಿಗೆ ಒಟ್ಟು 2000 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಜ್ಜಾಗಿದೆ. ಪ್ರಯಾಣಿಕರನ್ನು ಉತ್ತೇಜಿಸಲು ಕೆಎಸ್ಆರ್ಟಿಸಿ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ:

LPG Crisis: ಮಂಗಳೂರಿಗೆ ಬಂತು 26 ಸಾವಿರ ಟನ್‌ ಎಲ್‌ಪಿಜಿ ತುಂಬಿದ ಹಡಗು

ಮಂಗಳೂರಿಗೆ ಬಂತು 26 ಸಾವಿರ ಟನ್‌ ಎಲ್‌ಪಿಜಿ ತುಂಬಿದ ಹಡಗು

ಪೆಟ್ರೋಲಿಯಂ ಡೀಲರ್‌ಗಳ ಅಂದಾಜಿನ ಪ್ರಕಾರ, ಈ ಎರಡು ಹಡಗುಗಳಿಂದ ಒಟ್ಟು ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿ ಲಭ್ಯವಾಗಲಿದ್ದು, ಇದು ದೇಶದ ಅವಶ್ಯಕತೆಗೆ ಕೇವಲ 2 ದಿನಗಳ ಮಟ್ಟಿಗೆ ಮಾತ್ರ ಸಾಕಾಗಬಹುದು. ಇದನ್ನೆಲ್ಲ ಮೀರಿ, ಇನ್ನೂ 20ಕ್ಕೂ ಹೆಚ್ಚು ಭಾರತೀಯ ಹಡಗುಗಳು ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿವೆ.

CM Siddaramaiah: 14 ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌

14 ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌

ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್‌, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಭೋಸರಾಜು, ಎಂ. ಬಿ. ಪಾಟೀಲ್, ಮಹದೇವಪ್ಪ ಎಚ್.ಸಿ., ಮುನಿಯಪ್ಪ ಕೆ.ಎಚ್. ರಾಮಲಿಂಗ ರೆಡ್ಡಿ, ಎಸ್.ಎಸ್. ಮಲ್ಲಿಕಾರ್ಜುನ್‌, ಸತೀಶ್ ಜಾರಕಿಹೊಳಿ, ಚಲುವರಾಯ ಸ್ವಾಮಿ, ಈಶ್ವರ ಖಂಡ್ರೆ, ಪ್ರಿಯಾಂಕ್ ಖರ್ಗೆ ಡಿನ್ನರ್‌ನಲ್ಲಿ ಭಾಗಿಯಾಗಿದ್ದರು.

LPG crisis: ಕೆವೈಸಿ ಮಾಡಿಸದಿದ್ರೆ ಎಲ್‌ಪಿಜಿ ಸಿಲಿಂಡರ್‌ ಸಿಗಲ್ಲ!

ಕೆವೈಸಿ ಮಾಡಿಸದಿದ್ರೆ ಎಲ್‌ಪಿಜಿ ಸಿಲಿಂಡರ್‌ ಸಿಗಲ್ಲ!

ಮಾರ್ಚ್ 15ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಅಥವಾ ಕೆವೈಸಿ (KYC) ಮಾಡಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಗ್ರಾಹಕರಿಗೆ ಮಾತ್ರ ಇನ್ನು ಮುಂದೆ ಎಲ್‌ಪಿಜಿ ಸೇವೆಗಳು ಮತ್ತು ಸಬ್ಸಿಡಿ ಸೌಲಭ್ಯಗಳು ದೊರೆಯಲಿವೆ.

UT Khader: ಸ್ಪೀಕರ್‌ ಸಭಾತ್ಯಾಗ ಪ್ರಕರಣ: 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್, ಸಚಿವರಿಗೂ ಪತ್ರ

8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್, ಸಚಿವರಿಗೂ ಪತ್ರ

ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಅಲ್ಲದೇ ಕರ್ನಾಟಕದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕಾರಣ ಕೇಳಿ ಬರೋಬ್ಬರಿ ಎಂಟು ಇಲಾಖೆಯ ಹಿರಿಯ ಐಎಎಸ್​ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಬೇಡ್ತಿ-ವರದಾ ನದಿ, ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆ ಕೈಬಿಡಿ; ಡಿಸಿಎಂ ಡಿಕೆಶಿಗೆ ಮನವಿ ಸಲ್ಲಿಕೆ

ಬೇಡ್ತಿ-ವರದಾ ನದಿ, ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆ ಕೈಬಿಡಿ

ಬೇಡ್ತಿ- ವರದಾ ನದಿ ಜೋಡಣೆ ಯೋಜನೆ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆ ಕೈಬಿಡುವಂತೆ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ್ ಹೆಗಡೆ ಅಶೀಸರ ನೇತೃತ್ವದ ನಿಯೋಗದಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

MLA Yashwant Rayagouda Patil: ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ: ಯಶವಂತರಾಯಗೌಡರು

ಪ.ಜಾ ಪ.ಪಂಗಡ ತಾಲೂಕಾ ಮಟ್ಟದ ನೌಕರರ ಸಮಾವೇಶ

ನಗರದ ಗುರುಭವನದಲ್ಲಿ ರಾಜ್ಯ ಪ.ಜಾ, ಪ ಪಂಗಡ ಸಮನ್ವಯ ಸಮಿತಿ ಇಂಡಿ ತಾಲೂಕಾ ಶಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ನೌಕರರ ಸಮಾವೇಶಹಾಗೂ ನೂತನವಾಗಿ ಆಯ್ಕೆ ಯಾದ ಪದಾಧಿಕಾರಿಗಳಿಗೆ ಅಭಿನಂದನೆ ಮತ್ತು ನಿವೃತ್ತ ನೌಕರರಿಗೆ ಗೌರವ ಸನ್ಮಾನ ಕಾರ್ಯ ಕ್ರಮದಲ್ಲಿ ಮಾತನಾಡಿದರು.

Indi News: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ

Indi News: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ

ಪರೀಕ್ಷೆ ಸುಸೂತ್ರವಾಗಿ ನಡೆಯಲು ಜಾಗೃತದಳಗಳನ್ನು ರಚಿಸಲಾಗಿದೆ. ಅದರಲ್ಲಿ ಮೂರು ಜಾಗೃತದಳ, ತಹಸೀಲ್ದಾರ ನೇತೃತ್ವದಲ್ಲಿ, ಇಓ ನೇತ್ರತ್ವದಲ್ಲಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಮೂರು ಜಾಗೃತದಳ ಇವೆ. ಅದಲ್ಲದೆ ಪ್ರತಿ ಕೇಂದ್ರಕ್ಕೆ ಒಬ್ಬರು ಸ್ಥಾನಿಕ ಜಾಗೃತ ದಳವಿದ್ದು ಅವರು ಪ್ರತಿದಿನ ಬೇರೆ ಬೇರೆ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವರು.

Gudibande News: ಗುಡಿಬಂಡೆಯಲ್ಲಿ ಸಂಜೀವಿನಿ ಯುಗಾದಿ ಮಾಸಿಕ ಸಂತೆ, ಸಾವಯವ ಉತ್ಪನ್ನಗಳ ಮಾರಾಟ

ಗುಡಿಬಂಡೆಯಲ್ಲಿ ಸಂಜೀವಿನಿ ಯುಗಾದಿ ಮಾಸಿಕ ಸಂತೆ

ಸಾವಯವ ಆಹಾರ ಉತ್ಪನ್ನಗಳು ಹಾಗೂ ಹಬ್ಬಕ್ಕೆ ಬೇಕಾಗುವಂತಹ ಪರಿಸರ ಸ್ನೇಹಿ ವಸ್ತು ಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ವಸ್ತುಗಳನ್ನು ಮಹಿಳಾ ಸ್ವ ಸಹಾಯ ಸಂಘಗಳ ಮಹಿಳೆಯರು ಈ ವಸ್ತುಗಳನ್ನು ತಯಾರಿಸಿದ್ದಾರೆ. ಅವುಗಳನ್ನು ಜನರು ಕೊಳ್ಳುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು

Sirsi News: ಬಾವಿಗೆ ಬಿದ್ದು ಯಮನನ್ನು ಗೆದ್ದು ಬಂದ 2ರ ಬಾಲೆ; ಜೀವದ ಹಂಗು ತೊರೆದು ರಕ್ಷಿಸಿದ ವ್ಯಕ್ತಿ!

ಬಾವಿಗೆ ಬಿದ್ದು ಯಮನನ್ನು ಗೆದ್ದು ಬಂದ 2ರ ಬಾಲೆ

ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯ ಹತ್ತಿರ ಹೋದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಈ ಬಗ್ಗೆ ಹತ್ತಿರದಲ್ಲೇ ವಾಸವಿದ್ದ ವ್ಯಕ್ತಿಗೆ ಮಾಹಿತಿ ನೀಡಿದ್ದು, ಆತ ಜೀವದ ಹಂಗು ತೊರೆದು ಮಗುವನ್ನು ರಕ್ಷಣೆ ಮಾಡಿದ್ದಾರೆ.

Iftar: ಸಮಾಜದಲ್ಲಿ ಉಳ್ಳವರು ತಮ್ಮ ಆದಾಯದ ಒಂದು ಭಾಗವನ್ನು ಬಡವರಿಗೆ ದಾನ ಮಾಡುವ ಮೂಲಕ ಮಾನವೀಯತೆ ಉಳಿಸಬೇಕು: ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

ಉಳ್ಳವರು ಬಡವರಿಗೆ ದಾನ ಮಾಡುವ ಮೂಲಕ ಮಾನವೀಯತೆ ಉಳಿಸಬೇಕು

ರಂಜಾನ್ ಹಬ್ಬದ ಅಂಗವಾಗಿ ಉಪವಾಸವಿರುವ ಮುಸ್ಲಿಂ ಬಾಂಧವರಿಗಾಗಿ ಕೊಡಿಕೊಂಡೆ ರಸ್ತೆಯಲ್ಲಿರುವ ಶಾದಿ ಮಹಲ್ ನಲ್ಲಿ ಏರ್ಪಡಿಸಿದ್ದ ಸಾಮೂಹಿಕ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಹಾಗೂ ಮುಸ್ಲಿಂ ಸಮುದಾಯದವರಿಗೆ ಬಿರಿಯಾನಿ ಬಡಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆ; ರೈತರಿಗೆ ಶೀಘ್ರವೇ ಪರಿಹಾರ ನೀಡುತ್ತೇವೆ ಎಂದ ಡಿ.ಕೆ. ಶಿವಕುಮಾರ್

ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆ; ರೈತರಿಗೆ ಶೀಘ್ರವೇ ಪರಿಹಾರ

DK Shivakumar: ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಬಾಕಿ ಇರುವ ಪರಿಹಾರದ ಬಗ್ಗೆ ಪರಿಶೀಲನೆ ಮಾಡಿ ಶೀಘ್ರವೇ ಪರಿಹಾರವನ್ನು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

Madhugiri News: ಮಧುಗಿರಿಯಲ್ಲಿ ಜಿಲ್ಲಾಧಿಕಾರಿಯಿಂದ ಜನ ಸಂಪರ್ಕ ಸಭೆ; ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಮಧುಗಿರಿಯಲ್ಲಿ ಜಿಲ್ಲಾಧಿಕಾರಿಯಿಂದ ಜನ ಸಂಪರ್ಕ ಸಭೆ

Madhugiri News: ಮಧುಗಿರಿ ತಾಲೂಕು ಕಚೇರಿಯಲ್ಲಿ ಸೋಮವಾರ ತುಮಕೂರು ಜಿಲ್ಲಾಧಿಕಾರಿ ಕೆ. ಶುಭ ಕಲ್ಯಾಣ್, ಜನ ಸಂಪರ್ಕ ಸಭೆ ನಡೆಸಿದರು. ಈ ವೇಳೆ 331 ಅರ್ಜಿಗಳು ಬಂದಿದ್ದು, ಕೆಲವು ಸ್ಥಳದಲ್ಲೇ ಸಮಸ್ಯೆಯನ್ನು ಬಗೆಹರಿಸಿದರು. ಈ ಕುರಿತ ವಿವರ ಇಲ್ಲಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ವ್ಯವಸ್ಥೆಗೆ ತಹಶೀಲ್ದಾರ್ ಗಗನಸಿಂಧು ಸೂಚನೆ

ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ವ್ಯವಸ್ಥೆಗೆ ತಹಶೀಲ್ದಾರ್ ಸೂಚನೆ

ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಆಸನ ವ್ಯವಸ್ಥೆ, ಗಡಿಯಾರ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶಾಂತಿಯುತ ವಾತಾವರಣ ಕಾಪಾಡಲು ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ.

25 ಲಕ್ಷ ಕೊಡು, ಇಲ್ಲವೇ ನನ್ನ ಜತೆ ಮಲಗು; ಗಂಡನ ಬಂಧಿಸಿ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಲೈಂಗಿಕ ಕಿರುಕುಳ!

25 ಲಕ್ಷ ಕೊಡು, ಇಲ್ಲವೇ ನನ್ನ ಜತೆ ಮಲಗು; ಇನ್ಸ್‌ಪೆಕ್ಟರ್‌ ಕಾಮಕಾಂಡ ಬಯಲು

Moodubidire Police Inspector Case: ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಹ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ಗಂಡನ ವಿರುದ್ಧ ಸುಳ್ಳು ಕೇಸ್‌ ಹಾಕಿ, ಬಳಿಕ ತಾನು ಹೇಳಿದಂತೆ ಕೇಳದಿದ್ದರೆ ನಿನ್ನ ಗಂಡ ಬಿಡುಗಡೆಯಾಗಲ್ಲ ಎಂದು ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡಿರುವ ಆರೋಪ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಕೇಳಿಬಂದಿದೆ.

ಮಹಿಳೆಯರು ಎಲ್ಲಾ ರಂಗಗಳಲ್ಲಿ ಪುರುಷನಿಗೆ ಸರಿಸಮನಾಗಿ ಕಾರ್ಯ ನಿರ್ವಹಿಸುತ್ತಿರುವುದು ಸಂತೋಷದ ಸಂಗತಿ : ಜಿಲ್ಲಾಧಿಕಾರಿ ಜಿ.ಪ್ರಭು ಅಭಿಮತ

ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ

ಭಾರತದ ಜನಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರು ಆಡಳಿತ ವರ್ಗದಲ್ಲಿ, ದುಡಿಯುವ ಕ್ಷೇತ್ರದಲ್ಲಿ ಸೇರಿದಂತೆ ಎಲ್ಲಾ ರಂಗಗಳಲ್ಲಿ ಪುರುಷನಿಗೆ ಸರಿ ಸಮಾನವಾಗಿ ತನ್ನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಇಂತಹ ಮಹಿಳಾ ವರ್ಗದ ಬಗ್ಗೆ ಪ್ರತಿಯೊಬ್ಬರಿಗೂ ಗೌರವ ಹಾಗೂ ಅಭಿಮಾನ ಇರಬೇಕು. ಇಲ್ಲವಾದಲ್ಲಿ ಬದುಕಿಗೆ ಅರ್ಥವೇ ಇರುವುದಿಲ್ಲ

ಸ್ವಸಹಾಯ ಸಂಘಗಳ ಸದಸ್ಯರು ತಯಾರಿಸಿದ ಪದಾರ್ಥಗಳನ್ನೇ ಖರೀದಿಸಿ, ಮಹಿಳಾ ಸಂಘಗಳಿಗೆ ಪ್ರೋತ್ಸಾಹ ನೀಡಿ ; ಜಿ. ಪ್ರಭು ಕರೆ

ಸ್ವಸಹಾಯ ಸಂಘಗಳ ಸದಸ್ಯರು ತಯಾರಿಸಿದ ಪದಾರ್ಥಗಳನ್ನೇ ಖರೀದಿಸಿ

ಪ್ರಸ್ತುತ 3 ದಿನ ಮಾಡುತ್ತಿರುವ ಯುಗಾದಿ ಮಾಸಿಕ ಸಂತೆಗಳು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಪ್ರತಿ ಪ್ರಮುಖ ಹಬ್ಬಗಳಲ್ಲೂ ಈ ರೀತಿಯ ಮಾರಾಟ ಮೇಳಗಳನ್ನು ಜಿಲ್ಲೆ ಯಲ್ಲಿ ಆಯೋಜಿಸಲಾಗುವುದು. ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವು ದರಿಂದ ಈ ಮಾಸಿಕ ಸಂತೆ ಯಶಸ್ವಿಯಾಗುತ್ತದೆ. ಜಿಲ್ಲೆಯ ಸರ್ಕಾರಿ ನೌಕರರು, ಉತ್ತಮ ಪ್ರತಿಕ್ರಿಯೆ ತೋರುತ್ತಿದ್ದಾರೆ.

ಸಭಾಧ್ಯಕ್ಷರು ಸದನದಿಂದ ಹೊರನಡೆದಿರುವುದು ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ: ವಿಜಯೇಂದ್ರ

ಸಭಾಧ್ಯಕ್ಷರು ಸದನದಿಂದ ಹೊರನಡೆದಿರುವುದು ಕರಾಳ ಅಧ್ಯಾಯ: ವಿಜಯೇಂದ್ರ

BY Vijayendra: ವಿಧಾನಸಭೆಯ ಸಭಾಧ್ಯಕ್ಷರು ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ಬೇಸತ್ತು ಸದನದಿಂದ ಹೊರನಡೆದಿರುವುದು ರಾಜ್ಯದಲ್ಲಿ ಆಡಳಿತ ಯಂತ್ರ ಎಷ್ಟು ನಿಷ್ಕ್ರಿಯಗೊಂಡಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

Loading...